Horoscope Today June 11, 2024: ಮಂಗಳವಾರದ ದಿನಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ

2024 ಜೂನ್ 11 ದಿನ ಭವಿಷ್ಯ: ಮಂಗಳವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 11, 2024: ಮಂಗಳವಾರದ ದಿನಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ ಎಂದು ತಿಳಿದುಕೊಳ್ಳಿ
ರಾಶಿ ಭವಿಷ್ಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jun 10, 2024 | 10:55 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಧ್ರುವ, ಕರಣ: ವಣಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ 15:47 ರಿಂದ 17:24ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:18 ರಿಂದ 10:55ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:32 ರಿಂದ 14:10ರ ವರೆಗೆ.

ಮೇಷ ರಾಶಿ :ನಿಮಗೆ ಪ್ರತಿಭೆ, ಸಾಮರ್ಥ್ಯಗಳು ಇವೆ ಎಂದು ನಿಮಗೆ ಅನ್ನಿಸದೇ ಹೋಗಬಹುದು. ಎಲ್ಲವೂ ಏಕಕಾಲಕ್ಕೆ ಪ್ರಕಟವಾಗದು. ಕಾಲಕ್ಕಾಗಿ ತಾಳ್ಮೆಯಿಂದ ಕುಳಿತುಕೊಳ್ಳಬೇಕು. ಭವಿಷ್ಯಕ್ಕೆ ಕೂಡಿಟ್ಟ ಹಣವು ಇಂದು ನಿಮ್ಮ ಸಮಯಕ್ಕೆ ಸರಿಯಾಗಿ ಸಿಗುವುದು. ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಪ್ರೀತಿಯನ್ನು ಕೊಡಿ. ನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸವಾಗಲಿದೆ. ಎಲ್ಲರಿಂದ ಒಂಟಿಯಾಗಿ ಇರಬೇಕಾಗುವುದು. ಇಂದಿನ ಸನ್ನಿವೇಶವನ್ನು ನಿಭಾಯಿಸುವ ಸಾಮರ್ಥ್ಯವು ಕಂಡು ಸಹೋದ್ಯೋಗಿಗಳು ಆಶ್ಚರ್ಯಪಡುವರು. ವಿದ್ಯಾಭ್ಯಾಸವನ್ನು ಮುಗಿಸಿದ ನಿಮಗೆ ಕೆಲಸವೂ ಶೀಘ್ರವಾಗಿ ಸಿಗಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ.

ವೃಷಭ ರಾಶಿ :ಇಂದು ವ್ಯಾವಹಾರಿಕವಾಗಿರುವ ಮನಶ್ಚಾಂಚಲ್ಯ ಅನೇಕ ವಿಧವಾಗಿ ಕಾಡಬಹುದು.‌ ನಿರಂತರ ಶ್ರಮಕ್ಕೆ ಫಲವಿರುತ್ತದೆ. ಕರ್ತವ್ಯದ ದೃಷ್ಟಯಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳನ್ನು ತೆಗೆದುಹಾಕಿ. ಧನಾತ್ಮಕ ಅಂಶಗಳನ್ನು ಹುಡುಕಿ ಮುನ್ನಡೆಯಿರಿ. ದಾರಿ ತಾನಾಗಿಯೇ ತೆರದುಕೊಳ್ಳುವುದು. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಮಾಡಿ, ಆದರೆ ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ. ಕಲಾವಿದರಿಗೆ ತಿಳಿವಳಿಕಯಿಂದ‌ ಕೂಡಿದ ನಿಮ್ಮ ಜೀವನ ಸುಗಮವಾಗಲಿದೆ. ನೀವು ಸಹಾಯ ಮಾಡುತ್ತೀರೆಂಬ ನಂಬಿಕೆಯಿಂದ ಜನರು ನಿಮ್ಮ ಬಳಿ ಕೇಳುವರು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು.

ಮಿಥುನ ರಾಶಿ :ಇಂದು ತಂದೆ ಹಾಗು ತಾಯಿಯರ ಸೇವೆಯನ್ನು ಮಾಡುವ ಅವಕಾಶವು ಸಿಗುವುದು. ಮನೆಯಿಂದ‌ ದೂರ ಹೋಗುವಾಗ, ಕಛೇರಿಗೆ ಹೋಗುವಾಗ ದೇವರಿಗೆ ನಮಸ್ಕರಿಸಿ ಮುನ್ನಡೆಯಿರಿ. ವಿಧಿಯನ್ನು ಹಳಿದು ನಿಮಗೆ ಸಮಾಧಾನವನ್ನು ತಂದುಕೊಳ್ಳುವಿರಿ. ನಿಮ್ಮ ಮಾತುಗಳಿಂದ ಕೆಲವರು ಪ್ರೇರಣೆ ಪಡೆದರೆ, ಕೆಲವರು ನಿಮ್ಮ ಮಾತನ್ನೇ ಆಡಿಕೊಳ್ಳುವರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತಲ್ಲೀನರಾಗಿ ಹೊರ ಜಗತ್ತನ್ನು ಮರೆಯುವರು. ಮನೆ ಮತ್ತು ಉದ್ಯೋಗವೆಂದು ಅಲೆಯುತ್ತಿದ್ದರೆ ಸ್ವಲ್ಪ ದಿನ ವಿರಾಮ ಪಡೆದು ಆಮೇಲೆ ಹೋಗಿ. ಕೆಲಸವು ಚೆನ್ನಾಗಿ, ಉತ್ಸಾಹದಿಂದ ನಡೆಯುವುದು. ನಿಮ್ಮ ವಿರುದ್ಧ ಮಾತನಾಡಿದವರಿಗೆ ಇಂದು ಕಾಲವೇ ಉತ್ತರಿಸುವುದು. ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗವಾಗುವ ಸಾಧ್ಯತೆ ಇದೆ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು.

ಕಟಕ ರಾಶಿ :ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ನೀರೀಕ್ಷಿಸಿದ ವಸ್ತುಗಳು ಕೆಲವು ಸಿಗಲಿವೆ. ಮನಸ್ಸು ಸ್ವಲ್ಪ ಎಲ್ಲವನ್ನೂ ಮರೆತು ಹಗುರಾಗಬಹುದು. ಅನಾರೋಗ್ಯದಿಂದಲೂ ಚೇತರಿಕಯನ್ನು ಕಂಡುಕೊಳ್ಳಬಹುದಾಗಿದೆ. ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಒತ್ತಾಯ ಪೂರ್ವಕವಾಗಿ ನಿಮಗೆ ಇಚ್ಛೆಯಿರುವ ವಿಷಯವನ್ನು ಹೇರಬೇಡಿ. ಆಯ್ಕೆ ಮಾಡಲು ಅವರಿಗೆ ಸ್ವಾತಂತ್ರ್ಯವಿರಲಿ. ಇದರಿಂದ ನಿಮಗೆ ನಿರಾಸೆಯಾಗಲಿದೆ. ಬಹಳ ಬೇಸರಗೊಳ್ಳುವಿರಿ. ಹಣವೂ ನಷ್ಟ ಶ್ರಮವೂ ನಷ್ಟವಾಗಿ ದುಃಖಿಸುವಿರಿ. ಕಳೆದುಕೊಂಡದ್ದನ್ನು ಪಡೆಯಬೇಕು ಎಂಬ ಛಲವು ನಿಮ್ಮಲ್ಲಿ ಇರುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ. ಆಸ್ತಿಯ ವಿಚಾರಕ್ಕೆ ನೆರೆಹೊರೆಯ ನಡುವೆ ಕಲಹವಾದೀತು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಕಿರಿಕಿರಿ ಆಗುವುದು.

ಸಿಂಹ ರಾಶಿ :ನೀವು ಇಂದು ಹೊಸತನವನ್ನು ತೆರೆದ ಮನಸ್ಸಿನಿಂದ ಸ್ವಾಗತಿಸುವಿರಿ. ವಿದೇಶಕ್ಕೆ ಹೋಗಲು ಆಲೋಚನೆ ಮಾಡಿದ್ದರೆ ಹೊರಡಬಹುದು. ಆನಾರೋಗ್ಯದಿಂದ ಮುಕ್ತಿಸಿಗಲಿದೆ. ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ರಾಜಕಾರಣಿಗಳು ಗೆಲ್ಲುವ ತಂತ್ರವನ್ನು ಹೂಡುವರು. ನೂತನ ವಿದ್ಯುತ್ ಉಪಕರಣವನ್ನು ಖರೀದಿಸುವಿರಿ. ವಾಹನವು ರಿಪೇರಿಗೆ ಬರಲಿದೆ. ಹಣವೂ ನಷ್ಟವಾಗುವುದು. ಕಳ್ಳತನದ ಅಪವಾದವನ್ನು ಹೊತ್ತುಕೊಳ್ಳುವಿರಿ. ಸಂಗಾತಿಯ ಬೇಸರವನ್ನು ದೂರ ಮಾಡಲು ಎಲ್ಲಿಯಾದರೂ ದೂರ ಕರೆದುಕೊಂಡು ಹೋಗಿ. ಸುಂದರ ಸ್ಥಳಗಳನ್ನು ನೋಡಿಬನ್ನಿ. ದೈಹಿಕ ಶ್ರಮವು ಇಂದು ಅಧಿಕವಾಗುವುದು. ನಿಮ್ಮ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಲಿದೆ. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು.

ಕನ್ಯಾ ರಾಶಿ :ಇಂದು ನಿಮ್ಮ ಹಳೆಯ ಕಾರ್ಯಗಳನ್ನೇ ನೆನೆದು ಹತಾಶಗೊಳ್ಳಬಹುದು. ನೀವು ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು.‌ ಆಪ್ತರ ಜೊತೆ‌ ಮನಸ್ಸು ಬಿಚ್ಚಿ ಮಾತನಾಡಿ. ಸರ್ಕಾರದ ಕೆಲಸಗಳು ನಿಧಾನವಾಗಲಿದೆ. ಮತ್ತೆ ಮತ್ತೆ ಬರುವ ಸಂಕಷ್ಟಕ್ಕೆ ದೈವಕ್ಕೆ ಮೊರೆ ಹೋಗಬೇಕಾಗುವುದು. ಪ್ರತಿಕೂಲ ವಾತಾವರಣದಲ್ಲಿಯೂ ನಿಮಗೆ ಅನುಕೂಲಕರ ವಾತಾವರಣ ಇರಲಿದೆ. ಸರ್ಕಾರಿ ಉದ್ಯೋಗಿಗಳಿಗೆ ನಿವೃತ್ತಿ ಸಿಗುವ ದಿನ. ಬಹಳ ದಿನಗಳ ಅನಂತರ ದಾಂಪತ್ಯದಲ್ಲಿ ಸಂತೋಷ ಕಾಣಿಸುವುದು. ಖಾಸಗಿ ಉದ್ಯೋಗಿಗಳಿಗೆ ತೊಂದರೆಯಾಗಬಹುದು. ಕುಟುಂಬದಲ್ಲಿ ನಿಮ್ಮನ್ನು ಸರಿಯಾಗಿ ಆದರಿಸದೇ ಇರಬಹುದು. ಸುತ್ತಾಟದಿಂದ ಆಯಾಸವಿದೆ. ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇರಲಿದೆ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಸಣ್ಣ ಉಳಿತಾಯಕ್ಕೆ ಇಂದು ಬೆಲೆಯು ಬಂದಂತಾಗುವುದು. ಜೀವನದ ಲಕ್ಷ್ಯವು ಬೇರೆ ಕಡೆಗೆ ಬದಲಿಸಬಹುದು.

ತುಲಾ ರಾಶಿ :ನಿಮ್ಮ ವಿವಾಹದ ಪ್ರಸ್ತಾಪಗಳು ಬರಬಹುದು. ನೀವು ನಿಮ್ಮ ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ. ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ವಾಹನ ಅಪಘಾತವು ಆಗಬಹುದು, ಜಾಗರೂಕತೆಯಿಂದ ಇರಿ. ಕೃಷಿಕರು ತಾವು ಬೆಳೆದ ಬೆಳೆಯಿಂದ ನಷ್ಟವನ್ನು ಅನುಭವಿಸುವಿರಿ. ನಿಮ್ಮನ್ನು ಹಾದಿ ತಪ್ಪಿಸಲು ಪ್ರಯತ್ನಿಸಿದ ವ್ಯಕ್ತಿಗಳು ನಿಮ್ಮ ಸಾಧನೆಯನ್ನು ಕಂಡು ಕೊರಗಬಹುದು. ನೀವೇ ನಿರ್ಮಿಸಿಕೊಂಡ ಯಶಸ್ಸಿನ ಮೆಟ್ಟಿಲನ್ನು ಅನಾಯಾಸದಿಂದ, ಆನಂದದಿಂದ ಏರುವಿರಿ. ಅಕಾರಣ ಸಿಟ್ಟು ನಿಮ್ಮ ದಿನವನ್ನು ಹಾಳು ಮಾಡುವುದು. ಆದಾಯದ ಗುಟ್ಟನ್ನು ಎಷ್ಟೇ ಒತ್ತಾಯ ಮಾಡಿದರೂ ಹೇಳಲಾರಿರಿ. ಹಿರಿಯರ ಪ್ರೀತಿಯು ನಿಮಗೆ ಖುಷಿಕೊಡುವುದು. ವ್ಯವಹಾರದಲ್ಲಿ ಬರುವ ಸಮಸ್ಯೆಯನ್ನು ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಮಾಡಿ. ನಿರೋದ್ಯೋಗ ಸಮಸ್ಯೆಯು ಕಾಡುವುದು.

ವೃಶ್ಚಿಕ ರಾಶಿ :ಇಂದು ಗೌರವಕ್ಕೆ ಯಾರಿಂದಲಾದರೂ ಚ್ಯುತಿಯಾಗಬಹುದು. ನಡೆ, ನುಡಿಗಳಲ್ಲಿ ಬಹಳ ಜಾಗರೂಕರಾಗಿರಿ. ಧನವು ಕೈಗೆಟುಕದ ದ್ರಾಕ್ಷಿಯಂತೆ ಅನ್ನಿಸಬಹುದು. ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು. ನಿಮಗೆ ಬರಬೇಕಾದ ಹಣದ ಕುರಿತು ಲೆಕ್ಕವಿರಲಿ. ಕೆಲಸದಲ್ಲಿ ಆಲಸ್ಯ ಮಾಡಿ ಬರಬೇಕಾದುದನ್ನು ಕಳೆದುಕೊಳ್ಳುವಿರಿ. ಯೋಗ್ಯರ ಜೊತೆ ನಿಮ್ಮ ಮಾತುಕತೆಗಳು ಇರಲಿ. ಇಲ್ಲದಿದ್ದರೆ ಅಪಮಾನವಾದೀತು. ಯಾವುದನ್ನೇ ಕಳೆದುಕೊಂಡರೂ ಇನ್ನಷ್ಟು ಉತ್ತಮವಾದುದನ್ನು ಪಡೆಯಲು ಸಂಭವಿಸಿರಬಹುದು ಎಂದು ಭಾವಿಸಿ. ಮನಸ್ಸಿನ ನೆಮ್ಮದಿಯು ಕೆಡಬಹುದು. ಆಗದೇ ಇರುವ ಕೆಲಸಕ್ಕೆ ಬೇಸರ ಬೇಡ. ವೃತ್ತಿಯಲ್ಲಿ ಆತಂಕವು ಇರಲಿದೆ. ಪ್ರಾಣಿಗಳಿಂದ ಭಯಗೊಳ್ಳುವ ಸಾಧ್ಯತೆ ಇದೆ. ಎದುರಿನವರ ಇಂಗಿತವನ್ನು ತಿಳಿದುಕೊಳ್ಳದೇ ಏನನ್ನಾದರೂ ಹೇಳುವಿರಿ. ನಿಮ್ಮ ಅನಾರೋಗ್ಯವನ್ನು ಯಾರ ಬಳಿಯೂ ಹೇಳಿಕೊಳ್ಳಲಾರಿರಿ.

ಧನು ರಾಶಿ :ನೀವು ಪ್ರಯಾಣವನ್ನು ಅನಿವಾರ್ಯ ಕಾರಣಕ್ಕೆ ಮಾಡಬೇಕಾಗಬಹುದು. ಅನಿರೀಕ್ಷಿತ ಎದುರಾದ ಖರ್ಚಿನಿಂದಾಗಿ ಸ್ನೇಹಿತರಲ್ಲಿ ಹಣವನ್ನು ಕೇಳುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ನಿಮ್ಮ ಮತ್ತು ಮೇಲಧಿಕಾರಿಗಳ ನಡುವೆ ಮನಸ್ತಾಪ ಉಮನಟಾಗಬಹುದು. ನಿಮ್ಮ ಕಾರ್ಯಕ್ಕೆ ಮೆಚ್ಚುಗೆ ಸಿಗಲಿದೆ. ಇಂದು ಬೇಸರಗೊಳ್ಳುವ ವಿಚಾರಗಳು ಬರಬಹುದು. ಸುಖ ಹಾಗೂ ದುಃಖವನ್ನು ಸಮವಾಗಿ ತೆಗೆದುಕೊಳ್ಳಬೇಕಾದೀತು. ಅತಿಯಾದ ಸೌಖ್ಯವನ್ನು ಪಡೆಯಲು ಹೋಗಿ ಅನಾಹುತವನ್ನು ಮಾಡಿಕೊಳ್ಳಬಹುದು. ಸಣ್ಣ ಸಮಸ್ಯೆಯನ್ನು ದೊಡ್ಡ ಮಾಡಿಕೊಳ್ಳಲಿದ್ದೀರಿ. ಬಂಧುಗಳು ನಿಮ್ಮ ಸಹಾಯಕ್ಕೆ ಬರಬಹುದು. ಯಾರಾದರೂ ನಿಮ್ಮನ್ನು ಚೇಡಿಸಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಧಾರ್ಮಿಕ ಆಚರಣೆಯು ನಿಮ್ಮ ಮನಸ್ಸಿಗೆ ಹಿತವೆನಿಸುವುದು.‌

ಮಕರ ರಾಶಿ :ನೀವು ಹಿರಿಯರ ಜೊತೆ ಗೌರವಯುತವಾಗಿ ವರ್ತಿಸಿ. ಕಾರ್ಯಗಳು ಶೀಘ್ರವಾಗಿ ಫಲಿಸದೇ ಇರುವುದು ನಿಮಗೆ ಬೇಸರ ತಂದೀತು. ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ಹಣಕಾಸಿನ ವಿಚಾರವಾಗಿ ದಾಂಪತ್ಯದಲ್ಲಿ ಸಣ್ಣ ಕಲಹವಾಗಬಹುದು. ಯಾರದೋ ಮಾತಿನ ಆಧಾರದ ಮೇಲೆ ನೀವು ನಿಮ್ಮವರನ್ನು ದ್ವೇಷಿಸಬಹುದು. ಉದ್ಯೋಗದಲ್ಲಿ ಒತ್ತಡವಿದ್ದು ಅದನ್ನು ನಿಭಾಯಿಸುವ ಕ್ರಮವನ್ನು ಕಲಿತುಕೊಳ್ಳಿ. ನಿಮ್ಮ ಕೆಲಸದಲ್ಲಿ ಅಕಸ್ಮಾತ್ ತೊಂದರೆಗಳು ಬರುವುದು. ಎಲ್ಲವನ್ನೂ ಸಮಾನಮನಸ್ಸಿನಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳುವಿರಿ. ಆಪ್ತರ ಜೊತೆ ಒಂದಿಷ್ಟು ಸಮಯವನ್ನು ಕಳೆಯಬಹುದು. ಕುಟುಂಬದಲ್ಲಿ ಭಿನ್ನಮತ ಇರಲಿದೆ‌. ಸಮಾಜದಿಂದ ಸಿಗುವ ಗೌರವವು ನಿಮಗೆ ಬಂಧನದಂತೆ ಅನ್ನಿಸಬಹುದು. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು.

ಕುಂಭ ರಾಶಿ :ಇಂದು ಅಧಿಕ ಸಂಪತ್ತಿನ ವ್ಯಯ ಆಗುವುದು. ಕಾರ್ಯ ಮಾಡುವ ಧೈರ್ಯವಿದ್ದರೂ ಕಾರ್ಯದಲ್ಲಿ ನಿರಾಸಕ್ತಿಯೂ ಕಾಣಿಸಬಹುದು. ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯವಾಗುತ್ತವೆ. ಇಂದು ನ್ಯಾಯಾಲಯದಲ್ಲಿ ತೀರ್ಪು ಬರಲಿದೆ. ಎಂತಹದೇ ತೀರ್ಮಾನ ಬಂದರೂ ಸ್ವೀಕರಿಸಿ‌. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ಮನೆಯಿಂದ ದೂರವಿರುವ ನೀವು ಬೇಸರಗೊಳ್ಳುವಿರಿ. ನಿಮ್ಮ ಸ್ನೇಹಿತರು ನಿಮ್ಮ ಗುಟ್ಟನ್ನು ಹೊರಹಾಕಿಯಾರು. ಧಾರ್ಮಿಕವಾಗಿ ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ಕಾಲು ನೋವು ಕಾಣಿಸಿಕೊಂಡೀತು. ಹಿರಿಯರಿಂದ ಆಶೀರ್ವಾದವು ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ನೀವು ಲಾಭಗಳಿಸಬಹುದಾಗಿದೆ‌. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡುವರು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು. ಇಂದಿನ ಆದಾಯದಿಂದ ನಿಮ್ಮ ಪಡೆಯಬೇಕಾದುದನ್ನು ಪಡೆಯುವಿರಿ.

ಮೀನ ರಾಶಿ :ಇಂದು ಮನಸ್ಸಿನ ಕಿರಿಕಿರಿಯನ್ನು ಅನುಭವಿಸದೇ ಅನ್ಯ ಮಾರ್ಗವಿರದು. ಸ್ವಬುದ್ಧಿಯಿಂದ ಕಾರ್ಯಗಳನ್ನು ಮಾಡುವಿರಿ. ನಿಮ್ಮ ಪ್ರೇಮವು ಸನ್ಮಾರ್ಗದಲ್ಲಿ ಕರೆದುಕೊಂಡು ಹೋಗದು. ಇಂದು ನಿಮಗೆ ಹೊಸತನ್ನೇನಾದರೂ ಮಾಡುವ ಮನಸ್ಸಿದ್ದರೂ ಬೇಕಾದ ವ್ಯವಸ್ಥೆ, ಪರಿಸ್ಥಿತಿಗಳು ಇಲ್ಲದೇ ನಿಲ್ಲಿಸಬೇಕಾದೀತು. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಗೊಂದಲಗಳು ಎದುರಾಗುವುದು. ಉದ್ಯೋಗದಲ್ಲಿ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆ ಇದೆ. ಗೊಂದಲಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ತೀರ್ಮಾನಕ್ಕೆ ಬರದೇ ಅನುಭವಿಸಬೇಕಾಗಬಹುದು. ಅನುಭವಿಗಳ ಮಾರ್ಗದರ್ಶನ ಪಡೆಯಿರಿ. ಮಾತನ್ನು ಹಿತವೂ ಮಿತವೂ ಆಗುವಂತೆ ಮಾಡಿ. ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು.

-ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್