Horoscope Today May 27, 2024: ಹತ್ತಾರು ವಿಚಾರಗಳಲ್ಲಿ ಆಸಕ್ತಿ ಹೊಂದುವಿರಿ, ಅತಿಯಾದ ಆತುರ ಬೇಡ

2024 ಮೇ 27ರ ದಿನ ಭವಿಷ್ಯ: ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today May 27, 2024: ಹತ್ತಾರು ವಿಚಾರಗಳಲ್ಲಿ ಆಸಕ್ತಿ ಹೊಂದುವಿರಿ, ಅತಿಯಾದ ಆತುರ ಬೇಡ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: May 26, 2024 | 7:21 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಮೇ​​​​​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಶುಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:41 ರಿಂದ 09:17 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:54 ರಿಂದ 12:30ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:06 ರಿಂದ 03:43ರ ವರೆಗೆ.

ಮೇಷ ರಾಶಿ: ಬೇರೆ ಹೂಡಿಕೆಯಲ್ಲಿ ನಿಮಗೆ ಆಸಕ್ತಿ ಹೆಚ್ಚಿರುವುದು. ನೀವು ಅಂದುಕೊಂಡ ರೀತಿಯಲ್ಲಿ ನಡೆಯದೇ ವಿರುದ್ಧವಾಗಿ ನಡೆಯುವುದನ್ನು ಕಂಡು ನಿರಾಸೆಗೊಳ್ಳುವಿರಿ. ಆರೋಗ್ಯವು ಕೈ ಕೊಡಬಹುದು. ತುರ್ತು ಆಹಬೇಕಾದ ಕೆಲಸಗಳಿಗೆ ತೊಂದರೆಯಾಗಬಹುದು. ಧನಪ್ರಾಪ್ತಿಯು ಆಗುವಂತೆ ಇದ್ದರೂ ಆಗದೇ ಕೈತಪ್ಪಿ ಹೋಗಬಹುದು. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ವಿಶ್ವಾಸಘಾತದಿಂದ ನೋವಾಗಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಯಾವುದರಲ್ಲಿಯಾದರೂ ರಿಸ್ಕ್ ತೆಗೆದುಕೊಳ್ಳಲು ಬಯಸುವಿರಿ.

ವೃಷಭ ರಾಶಿ: ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು. ಒಮ್ಮೆಲೆ ಹತ್ತಾರು ವಿಚಾರಗಳಲ್ಲಿ ಆಸಕ್ತಿಯನ್ನು ಹೊಂದುವಿರಿ. ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ಇಂದು ನೀವು ಬಯಸಿದ್ದನ್ನು ಪಡೆದುಕೊಳ್ಳುವ ತವಕದಲ್ಲಿ ಇರುವಿರಿ. ಅತಿಯಾದ ಆತುರದಲ್ಲಿ ಅನಾಹುತವನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ಎಂದೂ ಆಗದ ವಿಚಾರದಲ್ಲಿ ನಿಮಗೆ ಆಸಕ್ತಿ ಇರುವುದು. ಹೊರಗಡೆಗೆ ಊಟಕ್ಕೆ ಹೋಗಲಿದ್ದೀರಿ. ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ಕುಟುಂಬದವರ ಜೊತೆ ಸಮಯವನ್ನು ಕಳೆಯುವಿರಿ. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ. ಬೇಕೆಂದೇ ನಿಮ್ಮನ್ನು ಕೆಣಕುವರು.

ಮಿಥುನ ರಾಶಿ: ನಿಮ್ಮ ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಇಂದು ವಾಹನದ ಸಮಯವು ವ್ಯತ್ಯಾಸವಾದ್ದರಿಂದ ನಡೆಯಬೇಕಾಗ ಸ್ಥಿತಿ ಬರಬಹುದು. ತಂದೆಯ ಜೊತೆ ಉಂಟಾದ ಮನಸ್ತಾಪದಿಂದ ಕಂಗೆಡಲಿದ್ದೀರಿ. ಮಾತುಗಾರರಾಗಿದ್ದರೆ ಒಳ್ಳೆಯ ಅವಕಾಶಗಳು ಸಿಗಲಿವೆ. ನಂಬಿಕೆಯು ಬರುವಂತೆ ಕೆಲಸ ಮಾಡಿ. ಮೋಸದಿಂದ ನಿಮ್ಮ ಹಣವು ಕಳೆದುಹೋಗುವುದು. ನಿಮ್ಮ ಪ್ರೇಮಪ್ರಕರಣವು ಗಂಭೀರಸ್ಥಿತಿಯನ್ನು ತಲುಪಲಿದೆ. ತಾಳ್ಮೆಯಿಂದ ವ್ಯವಹರಿಸಿ, ಸರಿ ಮಾಡಿಕೊಳ್ಳಿ. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು.

ಕಟಕ ರಾಶಿ: ಸಾಲಬಾಧೆಯು ನಿಮ್ಮನ್ನು ಅತಿಯಾಗಿ ಕಾಡಲಿದೆ. ಅಷ್ಟೇ ಅಲ್ಲದೇ ಸಾಲ ಕೊಟ್ಟವರೂ ನಿಮ್ಮನ್ನು ದಿನವೂ ಕೇಳುವರು. ಮಾತನ್ನು ಆಡುವಾಗ ಪದಗಳ ಮೇಲೆ ಗಮನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಪತ್ನಿಯಿಂದ ಅವಮಾನಕ್ಕೆ ಒಳಗಾಗಬೇಕಾಗಿಬರಬಹುದು. ಭವಿಷ್ಯದ ಕುರಿತು ಆಲೋಚನೆಯಲ್ಲಿ ಮಗ್ನರಾಗಿರುತ್ತೀರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟಂತೆ ನಿಮ್ಮಲ್ಲಿ ಒಂದಿಷ್ಟು ಗೊಂದಲಗಳು ಇರಬಹುದು. ವಿವಾಹವಾಗಲು ಬಹಳ ಆತುರಪಡುವಿರಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು.

ಸಿಂಹ ರಾಶಿ: ಉದ್ಯೋಗವನ್ನು ಅರಸುತ್ತ ಇದ್ದರೆ ಇಂದು ಉತ್ತಮ ಉದ್ಯೋಗವು ಅನಿರೀಕ್ಷಿತವಾಗಿ ಸಿಗಲಿದೆ. ಸಿಕ್ಕ ಉದ್ಯೋಗವು ಮುಂದೆ ಅನೇಕ ಲಾಭವನ್ನು ಮಾಡಿ ಕೊಡಲಿದೆ. ವಾಹನಚಾಲನೆ ಮಾಡುವಾಗ ಜಾಗರೂಕರಾಗಿರಿ. ಇನ್ನೊಬ್ಬರಿಂದ ನಿಮ್ಮ ವಾಹನಕ್ಕೆ ಅಪಘಾತವಾಗಬಹುದು. ಭಯದ ವಾತಾವರಣದಲ್ಲಿ ಹೊರಬರಲು ಕಷ್ಟವಾಗದು. ಕೆಲಸವು ನಿಧಾನವಾದುದರಿಂದ ನಿಮಗೆ ನಿರಾಸೆಯಾಗಬಹುದು. ವಿನಾಕಾರಣ ಮನೆಯವರನ್ನು ದೂರುತ್ತ ಕುಳಿತುಕೊಳ್ಳಬೇಡಿ. ನಿಮ್ಮ ಕರ್ತವ್ಯವೇನು ಎಂಬುದು ನೀವೇ ನೆನಪಿಗೆ ತಂದುಕೊಂಡು ಮಾಡಿ. ಅತಿಯಾಸೆಯಿಂದ ದುಃಖವು ಬರಬಹುದು. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ.

ಕನ್ಯಾ ರಾಶಿ: ಇಂದು ಹಲವಾರು ದಿನಗಳಿಂದ ವಾಹನ ಖರೀದಿಯ ಆಸೆಯನ್ನು ಪೂರ್ಣಮಾಡಿಕೊಳ್ಳುವಿರಿ. ವಿನಾಕಾರಣ ವಾಗ್ವಾದಗಳು ನಡೆಯಬಹುದು. ನ್ಯಾಯಾಲಯದಲ್ಲಿ ನಿಮಗೆ ಜಯವು ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ನೀವು ಹಣವನ್ನು ಸಂಪಾದಿಸಲಿದ್ದೀರಿ. ಭೂಮಿಗೆ ಸಂಬಂಧಿಸಿದಂತೆ ಸಣ್ಣ ಕಲಹಗಳು ಆಗಬಹುದು. ವ್ಯಾಪಾರವನ್ನು ಬಹಳ ಜಾಣ್ಮೆಯಿಂದ ಮಾಡುವಿರಿ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಹೊರದೇಶದಲ್ಲಿ ಇರುವವರಿಗೆ ಕಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು. ಅಚಾತುರ್ಯದಿಂದ ನಡೆದ ಘಟನೆಯು ನಿಮ್ಮನ್ನು ಕಾಡಬಹುದು. ಅಧ್ಯಯನ ವಿಧಾನವನ್ನು ಬದಲಿಸಿಕೊಳ್ಳಿ.

ತುಲಾ ರಾಶಿ: ನೀವು ಇಂದು ಉದ್ಯೋಗದ ಸ್ಥಳದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ನಿಮಗೆ ಕಾರ್ಯದಿಂದ ತೃಪ್ತಿ ಮಹತ್ತ್ವಪೂರ್ಣಗ್ರಂಥವನ್ನು ರಚಿಸಲು ಇಂದು ಮುಂದಾಗಬಹುದು‌. ನಿಮ್ಮನ್ನು ಇಷ್ಟಪಡುವವರ ಜೊತೆ ನೀವು ಕೆಲವು ಸಮಯವಿರಬೇಕಾಗುತ್ತದೆ. ರಾಜಕೀಯ ವ್ಯಕ್ತಿಗಳಿಂದ ಪ್ರೇರಿತರಾಗಿ ಕಾರ್ಯವನ್ನು ಮಾಡುವಿರಿ. ಉದ್ಯೋಗವನ್ನು ಬದಲಿಸುವ ನಿರೀಕ್ಷೆಯಲ್ಲಿರುವಿರಿ. ಸರಳ ಸಮಾರಂಭದಲ್ಲಿ ಭಾಗಿಯಾಗಬಹುದು. ಸಮಯವನ್ನು ದುರುಪಯೋಗ ಮಾಡಿಕೊಳ್ಳಿದ್ದೀರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು. ದಾಂಪತ್ಯದಲ್ಲಿ ಮುಸುಕಿನ ಸಮರ ನಡೆಯುತ್ತಿರುವುದು.

ವೃಶ್ಚಿಕ ರಾಶಿ: ಬಲವಂತದ ಪ್ರೇಮ ತಪ್ಪಿಹೋಗಬಹುದು. ನಿಮಗಿಷ್ಟವಾದವರ ಜೊತೆ ನಿಮ್ಮ ವಿಹಾರ ಇರುವುದು. ಇಂದು ಬಾಯಿ ಚಪಲಕ್ಕೆ ಅಹಿತಕರಚಮವಾದ ಆಹಾರವನ್ನು ಸೇವಿಸುವಿರಿ. ಇಲ್ಲವಾದರೆ ನಿಮಗೇ ಕಂಟಕವಾದೀತು. ನಿರಂತರವಾದ ಶ್ರಮದಿಂದ ಬಳಲಲಿದ್ದೀರಿ. ಪಿತ್ರಾರ್ಜಿತ ಆಸ್ತಿಯ ಅನುಭವಿಸುವ ಬಯಕೆಯನ್ನು ಇಟ್ಟಿಕೊಂಡಿದ್ದೀರಿ. ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಕಲೆಯನ್ನು ಕರಗತ ಮಾಡಿಕೊಳ್ಳಿ. ಕಾನೂನಿನ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌ ಭಯದಿಂದ ಕೆಲಸ ಮಾಡಿಸಿಕೊಳ್ಳುವಿರಿ.

ಧನು ರಾಶಿ: ಇಂದು ವಿದ್ಯಾರ್ಥಿಗಳಿಗೆ ತಂದೆಯಿಂದ ಅಗತ್ಯವಿರುವ ಧನವು ಲಭ್ಯವಾಗಬಹುದು. ಅಧರ್ಮ ಮಾರ್ಗದಲ್ಲಿ ಹೋಗಲು ಯಾರದರೂ ಪ್ರೇರಣೆ ಕೊಡಬಹುದು. ಖರ್ಚು ಹೆಚ್ಚಾಗಬಹುದು. ಆನಾರೋಗ್ಯವಿದ್ದರೂ ಅದನ್ನು ಲೆಕ್ಕಿಸದೇ ನಿಮ್ಮ ಕೆಲಸದದಲ್ಲಿ ತೊಡಗುವಿರಿ. ಪೂರ್ವಾಪರಜ್ಞಾನವಿಲ್ದೇ ಪರರ ನಿಂದನೆಯ ಕಾರ್ಯದಲ್ಲಿ ತಲ್ಲೀನರಾಗಿರುವಿರಿ. ನಿಮ್ಮ ಅಂತರಂಗವು ಸರಿಯಾಗಿ ಇನ್ನೊಬ್ಬರಿಗೆ ತಿಳಿಯುವುದು. ನಿಮ್ಮ ಸ್ವಭಾವವು ಇತರರಿಗೆ ಇಷ್ಟವಾಗದೇ ಹೋಗಬಹುದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ಉನ್ನತ ವಿದ್ಯಾಭ್ಯಾಸಕ್ಕೆ ನಿಮ್ಮವರು ಸಲಹೆ ಕೊಡಬಹುದು. ನಿಮ್ಮ ಹಣವನ್ನು ಪರಿಚಿತರು ಕೇಳಬಹುದು. ಅಧಿಕಾರವು ಅಹಂಕಾರವಾಗಿ ಬದಲಾಗುವುದು ಬೇಡ. ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು.

ಮಕರ ರಾಶಿ: ನೀವು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳು ಮಾಡಿಕೊಳ್ಳುವಿರಿ. ಹಿರಿಯರ ಸಲಹೆಯನ್ನು ಪಡೆಯಿರಿ. ಸುಮ್ಮನೆ ಸ್ವಲ್ಪ ಹೊತ್ತು ಕುಳಿತುಕೊಳ್ಳಿ. ಮನಸ್ಸು ಶಾಂತವಾಗುವುದು. ಒತ್ತಡದಲ್ಲಿ ಸಿಲುಕಿಕೊಳ್ಳಬೇಡಿ. ಕೆಲಸದಲ್ಲಿ ಎಂತಹ ಒತ್ತಡವಿದ್ದರೂ ನಿಮ್ಮ ಹತೋಟಿಯಲ್ಲಿ ನೀವಿರಿ. ಕೆಲಸಗಳು ಒಂದೊಂದಾಗಿಯೇ ಮುಗಿಯುವುವು. ಸಂತಸ ವಾತಾವರಣವು ಮನೆಯಲ್ಲಿ ಇರುವುದು. ಸುಂದರಜೀವನ ನಮ್ಮ ಪೂರ್ವಜರ ಪುಣ್ಯದ ಫಲವೆಂದು ಇಂದು ಆನ್ನಿಸಬಹುದು. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ಹಿತೈಷಿಗಳ ಸಹವಾಸದಿಂದ ಮನಸಿಗೆ ಸಂತಸ ಉಂಟಾಗುವುದು. ಹೊಸ ವ್ಯವಹಾರಕ್ಕೆ ಹಿಂದೇಟು ಮನಸ್ಸು ಹಾಕುವುದು. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ಮಕ್ಕಳಿಗೆ ಪ್ರೀತಿ ತೋರಿಸುವ ಅವಶ್ಯಕತೆ ಇರುವುದು.

ಕುಂಭ ರಾಶಿ: ಇಂದು ಮನೆಯಿಂದ ದೂರವಿರುವ ನಿಮಗೆ ಮನೆಯ ನೆನಪಾಗುವುದು. ಎಂದೋ ಹೂಡಿದ ಹಣವು ಇಂದು ಉಪಯೋಗಕ್ಕೆ ಬರಲಿದೆ. ವಾಹನದಲ್ಲಿ ಸಂಚಾರವನ್ನು ಮಾಡುವುದರಿಂದ ನಿಮಗೆ ಕೆಲವು ಅನಾನುಕೂಲತೆಗಳು ಆಗಬಹುದು. ನಿಮ್ಮ ಅಜ್ಞಾನದಿಂದ ಆದ ಕೆಲಸಕ್ಕೆ ನೀವೇ ಹೊಣೆಗಾರರಾಗುವಿರಿ. ಮನಸ್ಸಿನಲ್ಲಿಯೇ ಸಂಕಟಪಟ್ಟುಕೊಳ್ಳುವುದನ್ನು ಬಿಟ್ಟು, ಆಪ್ತರ ಜೊತೆ ಹಂಚಿಕೊಳ್ಳಿ. ಮನಸ್ಸು ಹಗುರಾದೀತು. ಕಛೇರಿಯಲ್ಲಿ ನಿಮಗೆ ಹೊಸ ನಾಯಕ ಬರಬಹುದು. ಅವರನ ಜೊತೆ ನಿಮ್ಮ ವರ್ತನೆಯು ಆಪ್ತವಾಗಿ ಇರಲಿದೆ‌. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು. ನೀವು ರುಚಿಕರವಾದ ಆಹಾರದಿಂದ ಸಂತೋಷಿಸುವಿರಿ. ಸಾಮಾಜಿಕ ಕಾರ್ಯಗಳಿಗೆ ಒತ್ತಡಗಳು ಇರಲಿದೆ.

ಮೀನ ರಾಶಿ: ಇಂದು ನಿಮಗೆ ಎಲ್ಲ ಕಾರ್ಯದಲ್ಲಿಯೂ ಉತ್ಸಾಹ ಉತ್ಸಾಹವು ಕಡಿಮೆ ಇರುವುದು. ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿ. ಸೋಲನ್ನು ಒಪ್ಪಿಕೊಳ್ಳಲು ನಿಮಗೆ ಇಂದು ಆಗದು. ನಿಮ್ಮ ಬುದ್ಧಿಯಿಂದ ನಿಮಗೆ ಆಗಬೇಕಾದ ಕೆಲಸಗಳನ್ನು ಮಾಡಿಕೊಳ್ಳುವಿರಿ. ಆರ್ಥಿಕವಾಗಿ ಸುಧಾರಣೆಯಾಗಲಿದೆ. ಆಕಸ್ಮಿಕವಾಗಿ ಬಂದ ವಾರ್ತೆಯು ನಿಮಗೆ ಖುಷಿಯನ್ನೂ ಬೇಸರವನ್ನೂ ತರಬಹುದು. ಆಪ್ತರ ಜೊತೆ ದೂರಪ್ರಯಾಣ ಮಾಡಲಿದ್ದೀರಿ. ವಿದ್ಯಾರ್ಥಿಗಳು ಓದಿನ ಕಡೆ ಗಮನಹರಿಸಬೇಕಿದೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಜಲಮೂಲಗಳಿಂದ ಆದಾಯ ಸಿಗಬಹುದು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ‌ ಕಷ್ಟವನ್ನು ಆಪ್ತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾಗುವುದು.

-ಲೋಹಿತ ಹೆಬ್ಬಾರ್-8762924271 (what’s app only)

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ