Daily Devotional: ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ.
ಬೆಂಗಳೂರು, ಡಿಸೆಂಬರ್ 21: ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ.
ಶಂಕುಸ್ಥಾಪನೆಯ ಮುಖ್ಯ ಉದ್ದೇಶ ಭೂಮಿಯಲ್ಲಿರಬಹುದಾದ ಮೂರು ದೋಷಗಳನ್ನು ನಿವಾರಿಸುವುದು: ಸ್ಪರ್ಶ ದೋಷ, ದೃಷ್ಟಿ ದೋಷ ಮತ್ತು ಶಲ್ಯಾ ದೋಷ (ಮೃತ್ಯು ದೋಷ). ಈ ದೋಷಗಳು ಭೂಮಿಯ ಹಿಂದಿನ ಉಪಯೋಗ ಅಥವಾ ಅಲ್ಲಿ ನೆಲೆಸಿರಬಹುದಾದ ಋಣಾತ್ಮಕ ಶಕ್ತಿಗಳಿಂದ ಉಂಟಾಗಬಹುದು. ಶಂಕುಸ್ಥಾಪನೆಯ ಸಮಯದಲ್ಲಿ, ಈಶಾನ್ಯ ದಿಕ್ಕಿನಲ್ಲಿ ಬಿಲ್ವ, ಅತ್ತಿ ಅಥವಾ ತುಳಸಿ ಗಿಡವನ್ನು ನೆಡುವುದು ಮತ್ತು ನವಗ್ರಹ ದೋಷ ನಿವಾರಣೆಗಾಗಿ ವಾಸ್ತು ಪೂಜೆ ಮಾಡುವುದು ವಾಡಿಕೆ. ಗಂಗಾಜಲ ಮತ್ತು ಪಂಚಗವ್ಯಗಳನ್ನು ಭೂಮಿಯ ಮೇಲೆ ಸಿಂಪಡಿಸುವುದರಿಂದ ಭೂಶುದ್ಧಿ ಆಗುತ್ತದೆ. ಈ ವಿಧಿಯು ನಿರ್ಮಾಣ ಕಾರ್ಯ ಸುಗಮವಾಗಿ ನಡೆಯಲು ಮತ್ತು ನಿವಾಸಿಗಳಿಗೆ ಸಮೃದ್ಧಿ ತರಲು ಸಹಾಯಕವಾಗಿದೆ ಎಂದು ಗುರೂಜಿ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

