Daily Horoscope 02 October 2024: ಈ ರಾಶಿಯವರು ಸಿಟ್ಟನ್ನು ಬಿಟ್ಟು ಶಾಂತವಾಗಿ ವರ್ತಿಸುವುದು ಮುಖ್ಯ

ಅಕ್ಟೋಬರ್ 02,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ನಿಮ್ಮ ಇಂದಿನ ಕಾರ್ಯವು ಜನರಿಂದ‌ ಮೆಚ್ಚುಗೆ ಪಡೆಯಬಹುದು. ಲೆಕ್ಕಾಚಾರವು ನಿಮಗೆ ಕಗ್ಗಂಟಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಆರೋಗ್ಯವು ನಿನ್ನೆಗಿಂತ ಉತ್ತಮವಾಗಿದ್ದು, ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಹಾಗಾದರೆ ಇಂದಿನ (2024 ಅಕ್ಟೋಬರ್ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 02 October 2024: ಈ ರಾಶಿಯವರು ಸಿಟ್ಟನ್ನು ಬಿಟ್ಟು ಶಾಂತವಾಗಿ ವರ್ತಿಸುವುದು ಮುಖ್ಯ
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 02, 2024 | 12:00 AM

ಸರ್ವಪಿತೃಗಳ ಅಮಾವಾಸ್ಯೆ ಇಂದು. ಜೀವನದಲ್ಲಿ ಸಹಾಯ ಮಾಡಿದ, ಕಾರಣಾಂತರಗಳಿಂದ ಗತಿಸಿಹೋದ ಪ್ರತಿಯೊಬ್ಬರನ್ನೂ ಸ್ಮರಿಸುವ ಕಾಲ. ಕೃತಜ್ಞತೆಯಿಂದ ಎಲ್ಲರೂ ಸ್ಮರಿಸಿ, ಅವರ ನೆನಪನ್ನು ಸದಾ ಇಟ್ಟುಕೊಳ್ಳಿ. ಅವರ ಆಶೀರ್ವಾದವು ಎಂದೂ ನಿಮ್ಮ ಮೇಲಿರಲಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಬ್ರಹ್ಮ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:22 ರಿಂದ ಸಂಜೆ 01:51, ಯಮಘಂಡ ಕಾಲ ಬೆಳಿಗ್ಗೆ 07:53ರಿಂದ 09:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ10:52 ರಿಂದ 12:22 ರವರೆಗೆ.

ಮೇಷ ರಾಶಿ : ನಿಮ್ಮ ಇಂದಿನ ಕಾರ್ಯವು ಜನರಿಂದ‌ ಮೆಚ್ಚುಗೆ ಪಡೆಯಬಹುದು. ಲೆಕ್ಕಾಚಾರವು ನಿಮಗೆ ಕಗ್ಗಂಟಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಆರೋಗ್ಯವು ನಿನ್ನೆಗಿಂತ ಉತ್ತಮವಾಗಿದ್ದು, ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟ‌ಮಾಡುವ ಆಲೋಚನೆ ಇರಲಿದೆ. ಅಜ್ಞಾನದಿಂದ ಮುಟ್ಟಿದ ಬೆಂಕಿ ಸುಡಲಾರದೇ. ನೌಕರರ ಮೇಲೆ‌ ನಿಮಗೆ ಪಶ್ಚತ್ತಾಪ ಬರಬಹುದು. ಹಳೆಯ ವಿಚಾರಗಳನ್ನು ನೀವು ಮತ್ತೆ ಕೆದಕುವಿರಿ. ಬಾಯಿ‌ ಮಾತಿನ ಯಾವುದನ್ನೂ ದಾಖಲೆಯಾಗಿ ಪಡೆಯದೇ ಬರಹದ ಮೂಲಕ ವ್ಯಕ್ತಪಡಿಸಿ. ಅನ್ಯರ ವಿಚಾರಗಳನ್ನು ಆಡಿಕೊಳ್ಳಲಿದ್ದೀರಿ. ನಕಾರಾತ್ಮಕ ಮಾತೇ ಆಗಿದ್ದರೂ ನಿಮ್ಮ ದೃಷ್ಟಿಕೋನ ಬದಲಾಗಲಿ. ಬಿಡಿಸಲಾಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ಆಪ್ತರ ಸಲಹೆಯನ್ನು ಪಡೆದುಕೊಳ್ಳುವಿರಿ. ನಿಮ್ಮ ಮಾತುಗಳಲ್ಲಿ ಪರಿಷ್ಕಾರವು ಇತರರಿಗೆ ಕಾಣಿಸುವುದು.

ವೃಷಭ ರಾಶಿ : ಗಂಧದ ಜೊತೆ ಗುದ್ದಾಟ‌ಮಾಡಿದರೆ ಮೈ ಸುಗಂಧವಾಗುವುದು. ಯಾವ ತೊಂದರೆಯನ್ನೂ ಹಂಚಿಕೊಳ್ಳಲಾರಿರಿ. ಪರೀಕ್ಷೆಯಲ್ಲಿ ನೀವು ಅಂದುಕೊಂಡಷ್ಟು ಯಶಸ್ಸು ಸಿಗದು. ಸಂಗಾತಿಯು ಒಂದೇ ವಿಚಾರಗಳನ್ನು ಮತ್ತೆ ಮತ್ತೆ ಹೇಳಿ ನಿಮಗೆ ಬೇಸರ ಮಾಡಬುದು. ಆಲಸ್ಯವನ್ನು ಬಿಟ್ಟು ಧೈರ್ಯದಿಂದ ಮುನ್ನಡೆಯಿರಿ. ಇಂದು ನೀವು ಯಾವುದನ್ನೂ ನೇರವಾಗಿ ಹೇಳಲಾರಿರಿ. ಸಿಟ್ಟನ್ನು ಬಿಟ್ಟು ಶಾಂತವಾಗಿ ವರ್ತಿಸುವುದು ಮುಖ್ಯವಾಗುವುದು. ಹರಿವು ಇಲ್ಲದ ನೀರಿನಿಂದ ಕ್ರಿಮಿಗಳು ಉತ್ಪತ್ತಿಯಾಗುವುದು. ಕಛೇರಿಯಲ್ಲಿ ನೀವು ಎಲ್ಲ ಕೆಲಸಗಳನ್ನು ಮುಗಿಸಿಕೊಂಡು ಶಿಸ್ತಿನಿಂದ ಇರುವಿರಿ. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡವುವು.. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

ಮಿಥುನ ರಾಶಿ : ದೂರದೃಷ್ಟಿಯಿಂದ ಇಟ್ಟ ಹೆಜ್ಜೆಯು ಸರಿಯಾಗಿರುವುದು. ನಿಧಾನವಾದರೂ ಇಂದಿನ ಕೆಲಸವನ್ನು ಮಾಡಿ.‌ ನಿಮ್ಮ ಅಶಕ್ತತೆಯು ಸಿಟ್ಟಾಗಿ ಬದಲಾಗುವುದು. ಪಾಲುದಾರಿಕೆಯಲ್ಲಿ ಕಲಹವಾಗಬಹುದು. ಮಾರ್ಗದಲ್ಲಿ ಕಾಲಿಗೆ ಕಲ್ಲು ತಾಕಬಹುದು. ಅದನ್ನು ಬೈದು ಪ್ರಯೋಜನವಿಲ್ಲ. ಗೊತ್ತಿಲ್ಲ ಕೆಲಸಕ್ಕೆ ಮುನ್ನುಗ್ಗುವುದು ಬೇಡ. ನಿಮ್ಮ ಮಾತುಗಳು ಹಾಸ್ಯಾಸ್ಪದವಾಗಿ ಇರಲಿದೆ‌. ಹೊಸ ಯೋಜನೆಗಳನ್ನು ಆರಂಭಿಸುವಾಗ ಆಪ್ತರ ಜೊತೆ ಚರ್ಚೆಯನ್ನು ಮಾಡಿ. ಧನದ ವ್ಯವಹಾರದಲ್ಲಿ ನಿಮಗೆ ಸರಿಯಾದ ಮಾಹಿತಿಯ ಕೊರತೆ ಇರಲಿದೆ. ಕುಟುಂಬದ ಜೊತೆ ಸಮಯವನ್ನು ಕಳೆಯುವಿರಿ. ಬಂಧುಗಳ ವಿಚಾರದಲ್ಲಿ ನಿಮಗೆ ಅಸಮಾಧಾನ ಇರಬಹುದು. ಮಾತನಾಡುವಾಗ ಭಯವಾಗಲಿದೆ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ನಿರ್ಮಾಣ ಮಾಡಿಕೊಳ್ಳುವಿರಿ. ನಿಮ್ಮ ಆದಾಯದ ಹೆಚ್ಚಿನ ಭಾಗವು ಸೌಂದರ್ಯಕ್ಕೆ ಹೋಗುವುದು.

ಕರ್ಕಾಟಕ ರಾಶಿ : ವ್ಯವಹಾರದ ಪ್ರಜ್ಞೆ ಇಲ್ಲದವರ ಜೊತೆ ವ್ಯವಹಾರ ಕಷ್ಟ. ಇನ್ನೊಬ್ಬರನ್ನು ಬೆಳೆಸುವ ಉತ್ಸಾಹ ಯೋಜನೆ ನಿಮ್ಮಲ್ಲಿ ಇರುವುದು. ನಿಮಗೆ ಖಾಸಗಿ ಸಂಸ್ಥೆಯ ಮುಖ್ಯಸ್ಥರಾಗಲು ಕರೆ ಬರಬಹುದು. ಸಾಲದಿಂದ ನೀವು ಮುಕ್ತರಾಗಿ ಖುಷಿಪಡುವಿರಿ. ವಿನೀತರಂತೆ ನೀವು ತೋರುವಿರಿ. ಕೃಷಿಕರು ಸ್ವಲ್ಪ ಲಾಭವನ್ನು ಪಡೆಯುವರು. ವಿನಾಕಾರಣ ಇನ್ನೊಬ್ಬರ ಮೇಲೆ ಸಿಟ್ಟಾಗುವುದು ಸರಿಯಾಗದು. ನಿಮ್ಮ ಪ್ರೇಮ ಪ್ರಕರಣವು ಹೊಸ ರೂಪವನ್ನು ಒಡೆಯುವುದು. ಚಿಕಿತ್ಸೆಯು ಫಲಕಾರಿಯಾಗದೇ ಇರಬಹುದು. ಅಧಿಕಾರಿಯುತವಾದ ವರ್ತನೆಯು ಸರಿಯಾಗದು. ದೂರ ಪ್ರಯಾಣವನ್ನು ಇಂದು ಮಾಡುವುದು ಬೇಡ. ಧಾರ್ಮಿಕ ಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಕೆಲಸದ ಕುರಿತು ಗೊಂದಲ ಇರಲಿದೆ. ಯಾರದ್ದಾದರೂ ನೋವಿಗೆ ಸ್ಪಂದಿಸಿ. ಹಂಗಿನಿಂದ ಹೊರಬರಲು ನಿಮಗೆ ದಾರಿ ಸಿಗದು.

ಸಿಂಹ ರಾಶಿ : ಪ್ರಯಾಣದಲ್ಲಿ ನಿಮಗೆ ಏನಾದರೂ ತೊಂದರೆ ಕಾಣಿಸೀತು. ನಿಮ್ಮ ಬಲವು ಸಾಮಾಜಿಕ ಕಾರ್ಯದಿಂದ ಟೀಕೆಗೆ ಗುರಿಯಾಗುವಿರಿ. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಆಸಕ್ತಿ ಇದ್ದರೂ ಅದನ್ನು ಅರ್ಥಮಾಡಿಕೊಳ್ಳಲು ಕಷ್ಟವಾದೀತು. ಯಾರನ್ನೋ ಸಂಶಯಿಸುತ್ತ ಇರುವುದು ಬೇಡ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳಬೇಕಾದಲ್ಲಿಗೆ ಹೇಳಿ.‌ ಇಂದು ವ್ಯವಹಾರವು ಅಧಿಕ ಲಾಭವನ್ನು ತಂದುಕೊಡದು. ಶಿಸ್ತನ್ನು ರೂಢಿಸಿಕೊಳ್ಳುವುದು ಕಷ್ಟವಾದೀತು. ನಿಮ್ಮ ಮನಸ್ಸಿನ ಕೊಳ ತಿಳಿಯಾಗಿದ್ದರೆ ಏನು ಬಿದ್ದರೂ ಕಾಣಿಸುತ್ತದೆ. ಕಾರಣಾಂತರಗಳಿಂದ ನೀವು ಹೋಗುವ ಪ್ರಯಾಣವು ಸ್ಥಗಿತಗೊಳ್ಳಬಹುದು.‌ ಆಡಳಿತಾತ್ಮಕ ವಿಚಾರದಲ್ಲಿ ನಿಮಗೆ ಹಿನ್ನಡೆ ಆಗಬಹುದು. ದೂರ ಪ್ರಯಾಣವು ನಿಮಗೆ ಇಷ್ಟವಾದೀತು. ಪರಿಮಳದ ವೃಕ್ಷದ ಬಳಿ ನಿಂತರೆ ಅಲ್ಲಿಂದ ಬರುವ ಗಾಳಿಯೇ ನಿಮಗೆ ಸುಗಂಧವನ್ನು ಕೊಡುವುದು. ಇಂದು ಉದರಬಾಧೆಯಿಂದ ಸಂಕಟಪಡಬೇಕಾದೀತು.

ಕನ್ಯಾ ರಾಶಿ : ನಿಮ್ಮ ವಿರಾಮ ಸಮಯವನ್ನು ಯಾರಾದರೂ ಕಸಿದುಕೊಳ್ಳಬಹುದು. ಯಾರದೋ ಮಾತಿನ ಮೇರೆಗೆ ಇಂದು ಕುಟುಂಬದಲ್ಲಿ ಕಲಹವಾಗಬಹುದು. ಯಾರನ್ನೂ ನಿಮ್ಮ ಮೂಗಿನ ನೇರಕ್ಕೆ ಅಳೆಯಬಾರದು. ಇಂದು ನಿಮಗೆ ಕಛೇರಿಯ ಕೆಲಸಗಳು ಅತಿಯಾಗಿದೆ ಎಂದು ಅನ್ನಿಸಬಹುದು. ಕುರುಡಾಗಿ ಯಾರನ್ನೂ ನಂಬಲಸಹದು. ಸಂಗಾತಿಗೆ ನಿಮ್ಮ ವರ್ತನೆಯಲ್ಲಿ ಬದಲಾವಣೆ ಕಾಣಿಸುವುದು. ನಿಮ್ಮ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ. ನಿಮ್ಮ ಸಾಮರ್ಥ್ಯದಿಂದ ಉನ್ನತ ಹುದ್ದೆಯನ್ನು ನೀವು ಅಲಂಕರಿಸುವಿರಿ. ಭೀತಿಯಿದ್ದರೆ ಯಾವುದನ್ನೂ ಮಾಡಲಾಗದು, ಕಲಿಯಲೂ ಆಗದು. ಯಾವುದಕ್ಕಾದರೂ ಒಂದು ಮಾಪನವಿರಲಿ. ಚಂಚಲವಾದ ಮನಸ್ಸು ನಿಮಗೆ ಅನೇಕ ಒಳ್ಳೆಯ ಆಯ್ಕೆಯನ್ನು ತಪ್ಪಿಸುವುದು. ಕೃತಜ್ಞತೆಯು ನಿಮ್ಮ ಉನ್ನತ ಸ್ಥಾನಕ್ಕೆ ಕಾರಣವಾಗುವುದು.

ತುಲಾ ರಾಶಿ : ಭಿನ್ನ ಮನಸ್ಸುಗಳ ಜೊತೆ ನಿಮಗೆ ಹೊಂದಾಣಿಕೆ ಅಸಾಧ್ಯನಿಮ್ಮ ಮೇಲೆ ಇತರರ ದೃಷ್ಟಿ ಬೀಳುವ ಸಾಧ್ಯತೆ ಇರದು. ಸಾಮಾಜಿಕ ಜೀವನದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನಿಮ್ಮ ಮಮಕಾರದಿಂದ ನಿಮಗೆ ತೊಂದರೆಯಾಗಲಿದೆ. ನಿಮ್ಮ ತಪ್ಪು ತಿಳಿವಳಿಕೆಗೆ ಯಾರನ್ನೂ ದೂರುವುದು ಬೇಡ. ಹಣದ ಸಂಪಾದನೆಗೆ ಅನೇಕ ಮಾರ್ಗಗಳು ಇದ್ದರೂ ನಿಮಗೆ ಅದಾವುದೂ ಇಷ್ಟವಾಗದು. ಪಾಲುದಾರಿಕೆಯಲ್ಲಿ ಉದ್ಯೋಗವನ್ನು ಪ್ರಾರಂಭಿಸಿ.‌ ಇಂದು ನಿಮ್ಮ ಒಬ್ಬರ ಶ್ರಮವು ವ್ಯರ್ಥವಾಗಬಹುದು. ಸ್ನೇಹ ಬಳಗವು ದೊಡ್ಡದಾಗಬಹುದು. ನಿರ್ಮಾಣದ ಕೆಲಸವು ಬಹಳ ನಿಧಾನವಾಗಬಹುದು. ಇದರಿಂದ ನಿಮ್ಮಲ್ಲಿ ಆತಂಕ ಹೆಚ್ಚಬಹುದು. ಹೆಸರು ಗಳಿಸಬೇಕು ಎಂಬ ಹಂಬಲ ಬರುವುದು. ಯಾರೋ ಮಾಡಿದ ತಪ್ಪಿಗೆ ನಿಮಗೆ ತೊಂದರೆಯಾಗಲಿದೆ. ಅನಿರೀಕ್ಷಿತ ಗೆಲುವು ನಿಮಗೆ ಖುಷಿಕೊಟ್ಟೀತು. ನಿರ್ಧಾರಗಳನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳುವಿರಿ. ಅಧಿಕಾರಿಗಳು ನಿಮ್ಮ ಬಗ್ಗೆ ತಪ್ಪಾದ ಭಾವನೆಗಳನ್ನು ಇಟ್ಟುಕೊಳ್ಳುವರು.

ವೃಶ್ಚಿಕ ರಾಶಿ : ವಿದೇಶದ ವ್ಯವಹಾರದಲ್ಲಿ ನಿಮಗೆ ವ್ಯಾಪಕತೆ ಸಿಗಲಿದೆ. ನಿಮ್ಮ ಬಳಿ ಇರುವ ಸಂಪತ್ತನ್ನು ಸಹಾಯಕ್ಕಾಗಿ ಕೊಟ್ಟು ಕಳೆದುಕೊಳ್ಳುವಿರಿ. ಖರ್ಚಿನ ಮೇಲೆ‌‌ ನಿಯಂತ್ರಣ ಸಾಧಿಸಬೇಕೆಂದು ಹೊರಟರೂ ಅದು ಮತ್ತೆಲ್ಲೋ ಒಂದು ಕಡೆ ಹರಿದು ಹೋಗುವುದು. ಮನೆಗೆ ಬೇಕಾದ ವಸ್ತುಗಳ‌ ಪಟ್ಟಿಯು ದೀರ್ಘವಾಗಿ ಕಾಣಿಸುವುದು. ನೂತನ ವಸ್ತುಗಳ ಖರೀದಿಯನ್ನು ನೀವು ಮಾಡಲಿದ್ದೀರಿ. ವಂಚಿತರಾಗುವ ಸಾಧ್ಯತೆ ಇದೆ.‌ ನಿಮ್ಮನ್ನು ಗುರುತಿಸಬೇಕು ಎನ್ನುವ ಹಂಬಲ ಇರಲಿದೆ. ನಿಮಗೆ ಗೌರವ ಸಿಗುವ ಸ್ಥಾನದಲ್ಲಿ ಮಾತ್ರ ಇರುವಿರಿ. ನಿಮ್ಮ ಗುಣಗಳನ್ನು ದುರುಪಯೋಗ ಮಾಡಿಕೊಳ್ಳುವರು. ಪ್ರೀತಿಯಿಂದ‌ ಗೆಲ್ಲುವ ನಿರ್ಧಾರವು ಒಳ್ಳೆಯದು. ತಾನು ಕಂಡಿದ್ದು ಮಾತ್ರ ಸರಿ ಎಂಬ ವಾದವು ನಿಮ್ಮವರಿಗೆ ಬೇಸರ ತರಿಸೀತು. ನಿಮ್ಮ ಯಾರಾದರೂ ಕೆಲಸ ವಹಿಸಿ ನಿಶ್ಚಿಂತರಾಗಬಹುದು. ಅನುಪಯುಕ್ತ ಆಹಾರವನ್ನು ಸೇವಿಸುವುದು ಬೇಡ.

ಧನು ರಾಶಿ : ಮಕ್ಕಳು ಧೃತಿಗೆಡದಂತೆ ಅವರಿಗೆ ಧೈರ್ಯವನ್ನು ತುಂಬುವ ಅನಿವಾರ್ಯತೆ ಇದೆ. ಸ್ವಂತ ಬಲವಿಲ್ಲದೇ ನೀವು ಯಾರನ್ನೂ ಎದುರಿಸಲಾಗದು. ನಿಮಗೆ ಸಂಬಂಧಿಸದ ವಿಚಾರಗಳನ್ನು ನೀವು ಹೆಚ್ಚು ಮಾತನಾಡಲು ಬಯಸುವಿರಿ. ದೂರ ಪ್ರಯಾಣದಿಂದ ಹೆಚ್ಚು ಆಯಾಸಗೊಳ್ಳುವಿರಿ. ಸಿಕ್ಕಿದ್ದನ್ನು ಜೋಪಾನವಾಗಿ ಇಟ್ಟುಕೊಳ್ಳುವ ಬಗ್ಗೆ ಯೋಚಿಸಿ. ಕೆಲವರಿಂದ ನಿಮ್ಮ ಕಾರ್ಯಕ್ಕೆ ತಾತ್ಸಾರದ ಮಾತು ಕೇಳಿಬರಬಹುದು. ನೀವು ಇಂದು ನಾಜೂಕಾದ ಮಾತುಗಳಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಹೆಚ್ಚು ಆಡಂಬರವನ್ನು ನೀವು ಇಷ್ಟಪಡುವಿರಿ. ಭೋಗವಸ್ತುಗಳ ಖರೀಯು ಅಧಿಕವಾಗಿ ಇರಲಿದೆ.‌ ಬಂಗಾರದ ಸೂಜಿಯಾದರೂ ಕಣ್ಣಿಗೆ ಚುಚ್ಚುವುದಿಲ್ಲ. ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ. ನಿಮಗೆ ಬೆಲೆ ಕೊಡದೇ ಇರುವುದು ನಿಮಗೆ ಬೇಸರವಾಗುವುದು.

ಮಕರ ರಾಶಿ : ದೈವಾನುಗ್ರಹವಿದ್ದರೆ ಏನನ್ನೂ ಸಾಧಿಸಬಹುದು ಎಂಬ ಆತ್ಮವಿಶ್ವಾಸವು ಇರುವುದು. ಇಂದು ನಿಮ್ಮ ಮನಸ್ಸು ಭಯದಿಂದ ಹಿಂದೇಟು ಹಾಕಬಹುದು. ಉದ್ಯೋಗದ ಕಾರಣದಿಂದ ಬೇರೆ ಊರಿನಲ್ಲಿ ಇದ್ದರೂ ಮನೆಯ ನೆನಪು ನಿಮ್ಮನ್ನು ಅತಿಯಾಗಿ ಕಾಡಬಹುದು. ಉದ್ಯೋಗವೇ ಸಾಕು ಎನಿಸಬಹುದು.‌ ಸಾಲದ ಅತಿಯಾದ ಚಿಂತೆ ಇರುವುದು. ಅತಿಯಾದ ಒತ್ತಡದಿಂದ ಹೊರಬರಲು ಯಂತ್ರಗಳನ್ನು ಮಾಡುವಿರಿ.‌ ಏಕಾಗ್ರತೆಯಿಂದ ಸ್ವಲ್ಪ ಓದಿದರೂ ನಿಮಗೆ ಹೆಚ್ಚು ಫಲವನ್ನು ಕೊಟ್ಟೀತು. ಅನಗತ್ಯ ತಿರುಗಾಟದಿಂದ ನಿಮಗೆ ಬೇಸರವಾಗಲಿದೆ. ಸಂಗಾತಿಯನ್ನು ನೀವು ದೂರ ಮಾಡಿಕೊಳ್ಳುವಿರಿ ಉಳಿತಾಯಕ್ಕೆ ಹೆಚ್ಚು ಪ್ರಾಮುಖ್ಯವನ್ನು ಕೊಡುವಿರಿ. ಜಾಡ್ಯವು ನಿಮ್ಮ ಪ್ರಗತಿಗೆ ಮಾರಕ. ಪ್ರತ್ಯೇಕವಾಗಿ ಇರಲು ನಿಮಗೆ ಬಾರದು. ಸಾಲ ಹೊರೆಯ ಸ್ವಲ್ಪ ಕಡಿಮೆ ಆಗುವುದು. ಉನ್ನತ ಅಭ್ಯಾಸವನ್ನು ಸಮಸ್ಯೆಯ ಕಾರಣದಿಂದ ಮುಂದೂಡುವಿರಿ.

ಕುಂಭ ರಾಶಿ : ನಿಮ್ಮ ಉನ್ನತ ಅಭ್ಯಾಸಕ್ಕೆ ಯಾರಾದರೂ ಆರ್ಥಿಕ ಸಹಾಯವನ್ನು ಮಾಡಬಹುದು. ಸರ್ಕಾರದ ಉದ್ಯೋಗಕ್ಕೆ ನಿಮ್ಮ ಸಣ್ಣ ಪ್ರಯತ್ನ ಇರಲಿದೆ. ಭಾರದ ವಸ್ತುಗಳನ್ನು ನೀವು ಒಯ್ಯುವುದು ಬೇಡ. ನಿಮ್ಮದಾದ ಚೌಕಟ್ಟನ್ನು ಮಾಡಿಕೊಳ್ಳುವಿರಿ. ಅಸಾಮಾನ್ಯ ವಿಚಾರವನ್ನು ನೀವು ಸರಳೀಕರಿಸುವ ನೈಪುಣ್ಯತೆಯನ್ನು ಹೊಂದಿರುವಿರಿ. ಕೆಲವು ವಿಚಾರಕ್ಕೆ ಆಲಸ್ಯವು ವರವಾಗಬಹುದು. ಯಾರ ಜೊತೆಯೂ ನೀವು ಕಲಹವನ್ನು ಮಾಡಿಕೊಳ್ಳ ಬೇಡಿ. ಇನ್ಮೊಬ್ಬರನ್ನು ನೋಡಿ ನೀವೂ ನಿರುತ್ಸಾಹಿಗಳಾಗುವಿರಿ. ಸಂಗಾತಿಯ ಜೊತೆ ದೂರ ಪ್ರಯಾಣವನ್ನು ಮಾಡಿ ಬನ್ನಿ. ಅನನುಕೂಲತೆಯನ್ನು ಸ್ನೇಹಿತರಿಗೆ ಹೇಳಿ ಸಮಾಧಾನವನ್ನು ತಂದುಕೊಳ್ಳುವಿರಿ. ವ್ಯಾಪಾರವು ಕುಂಟುತ್ತ ಸಾಗುವುದು. ಹಿರಿಯರ‌ ಮಾತನನ್ನು ಅನಿಸರಿಸಲು ನೀವು ಹಿಂದೇಟು ಹಾಕಬಹುದು. ಅಪರಿಚಿತರು ನಿಮ್ಮನ್ನು ಭೇಟಿಯಾದಾರು. ನಿಮ್ಮ ಸಹಾಯವನ್ನು ಕೇಳಿಯಾರು.

ಮೀನ ರಾಶಿ : ನಿಮ್ಮಲ್ಲಿ ವಿನೀತ ಸ್ವಭಾವವಿದ್ದರೆ ಏನನ್ನೂ ಪಡೆಯಲು ಸಾಧ್ಯ. ನಿಮ್ಮನ್ನು ಭೇಟಿಯಾಗಲು ಬಂದವರನ್ನು ಅಗೌರವವನ್ನು ತೋರಿಸಿದಂತೆ ಕಾಣಿಸುಬುದು.‌ ಲಾಭವನ್ನು ಗಮನದಲ್ಲಿಟ್ಟುಕೊಂಡು ನೀವು ಮತ್ತೆಲ್ಲವನ್ನೂ ಮರೆಯುವಿರಿ. ನಿಮ್ಮ ಬಗ್ಗೆ ಇತರರಿಗೆ ಅನುಕಂಪ ಬರಬಹುದು. ನಿಮ್ಮ ಮಾತನ್ನು ನಡಸಿಕೊಡಲು ನಿಮ್ಮಿಷ್ಟದವರು ಪ್ರಯತ್ನಿಸುವರು. ಅಹಂಕಾರವು ನಿಮ್ಮನ್ನು ಎಲ್ಲರಿಂದ ದೂರವಿರಿಸಬಹುದು. ತಾಯಿಯು ನಿಮ್ಮ ಪರವಾಗಿ ನಿಲ್ಲು ಅವರ. ವಾಹನವನ್ನು ಖರೀದಿಸುವ ಯೋಚನೆ ಮಾಡವಿರಿ. ಹಣಕ್ಕಾಗಿ ಸಾಲ‌ ಮಾಡಲು ಸಲಹೆಯನ್ನೂ ಕೊಡಬಹುದು.‌ ನಿರಂತರ ಕಾರ್ಯವನ್ನು ಮಾಡು ಅವಶ್ಯಕತೆ ಇಲ್ಲ. ಸುಮ್ಮನೇ ಕುಳಿತು ಏನ್ನಾದರೂ ನಕಾರಾತ್ಮಕ ಯೋಚನೆಯನ್ನು ಮಾಡುವಿರಿ. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಸಿಂಗಲ್ ಆಗಿರೋನೇ ಸಿಂಹ: ಅಸಲಿ ಆಟ ತೋರಿಸಲು ರೆಡಿಯಾದ ಲಾಯರ್ ಜಗದೀಶ್
ಸಿಂಗಲ್ ಆಗಿರೋನೇ ಸಿಂಹ: ಅಸಲಿ ಆಟ ತೋರಿಸಲು ರೆಡಿಯಾದ ಲಾಯರ್ ಜಗದೀಶ್
ಮನೆಯ ಬಲೆಯೊಳಗೆ ಸಿಕ್ಕಿಬಿದ್ದ 7 ಅಡಿ ಉದ್ದದ ಹಾವು!
ಮನೆಯ ಬಲೆಯೊಳಗೆ ಸಿಕ್ಕಿಬಿದ್ದ 7 ಅಡಿ ಉದ್ದದ ಹಾವು!
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ
ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು: ಸುರೇಶ್ ಲೆಕ್ಕಾಚಾರ
ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು: ಸುರೇಶ್ ಲೆಕ್ಕಾಚಾರ
Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ
Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ