Daily Horoscope 03 October 2024: ಇಂದು ಆಪ್ತರಿಂದ ನಿಮಗೆ ಪರೋಕ್ಷವಾಗಿ ನೋವು ಬರಬಹುದು

ಅಕ್ಟೋಬರ್ 03,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ಆಪ್ತರಿಂದ ನಿಮಗೆ ಪರೋಕ್ಷವಾಗಿ ನೋವು ಬರಬಹುದು. ಇಂದು ನಿಮ್ಮ ವೃತ್ತಿಕ್ಷೇತ್ರದಲ್ಲಿ ನೀವು ಕಲಹಕ್ಕೆ ದಾರಿ ಮಾಡಿಕೊಡುವಿರಿ. ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಚಂದದಲ್ಲಿ ಹೊಗಳುವರು. ಪುಣ್ಯಸ್ಥಳಕ್ಕೆ ಹೋಗುವ ಮನಸ್ಸಾಗುವುದು. ಕುಟುಂಬ ನಿರ್ವಹಣೆಯನ್ನು ಒತ್ತಡದಿಂದ ನೀವು ಮಾಡಬೇಕಾದೀತು. ಹಾಗಾದರೆ ಇಂದಿನ (2024 ಅಕ್ಟೋಬರ್ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 03 October 2024: ಇಂದು ಆಪ್ತರಿಂದ ನಿಮಗೆ ಪರೋಕ್ಷವಾಗಿ ನೋವು ಬರಬಹುದು
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 03, 2024 | 12:01 AM

ಇಂದಿನಿಂದ ಒಂಭತ್ತು ದಿನಗಳ ಕಾಲ ನವರಾತ್ರ ಆರಂಭವಾಗಲಿದೆ. ಜಗನ್ಮಾತೆಯಾದ ದೇವಿಯನ್ನು ಆರಾಧಿಸಿದರೆ ಸರ್ವ ಕಷ್ಟಗಳೂ ನಾಶವಾಗುತ್ತವೆ. ಆಕೆ ದುರ್ಗಾರ್ತಿನಾಶಿನೀ ಎಂಬುದಾಗಿ ಕರೆಸಿಕೊಳ್ಳಲ್ಪಡುತ್ತಾಳೆ. ಆ ದುರ್ಗೆಯು ಎಲ್ಲರ ನೋವನ್ನೂ ಕಳೆದು ಆಯುಸ್ಸು, ಆರೋಗ್ಯ, ನೆಮ್ಮದಿ, ಸಂಪತ್ತು, ವಿದ್ಯೆ ಎಲ್ಲ ಕೊಡಲಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಚಿತ್ರಾ, ಯೋಗ: ಐಂದ್ರ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:51 ರಿಂದ 03:20, ಯಮಘಂಡ ಕಾಲ ಬೆಳಿಗ್ಗೆ 06:24ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 10:52 ರವರೆಗೆ.

ಮೇಷ ರಾಶಿ : ಯಾವುದಾದರೂ ತೊಂದರೆಗೆ ನೀವೇ ಕಾರಣವೆಂದು ಪಶ್ಚಾತ್ತಾಪವಾಸೀರು. ಮನೆಯ ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ ಹಾಗೂ ಆತಂಕ ಇರುವುದು. ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹವು ಇರಲಿದೆ. ದಾಂಪತ್ಯದಲ್ಲಿ ನೀವು ಸಂತೋಷವಾಗಿರಲು ಹೊಸ ಆಯಾಮವನ್ನು ಕಂಡುಕೊಳ್ಳುವಿರಿ.‌ ಕುಟುಂಬವನ್ನು ಸಂತೋಷದಿಂದ ಇಡುವಿರಿ. ಅಸಪ್ತರನ್ನು ಕಳೆದುಕೊಳ್ಳುವ ಭೀತಿ ಇರಲಿದೆ. ಉದ್ಯಮಕ್ಕೆ ಸಂಬಂಧಿಸಿದಂತೆ ಆಪ್ತರ ನಡುವೆ ನಿಮ್ಮ ಸಮಾಲೋಚನೆಗಳು ನಡೆಸುವಿರಿ. ಆಮದು ವ್ಯವಹಾರವನ್ನು ನಿಮ್ಮ ನಿಯಂತ್ರಣಕ್ಕೆ ತರಲು ಸಾಧ್ಯವಾಗದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಯಾರದೋ ತಪ್ಪಿಗೆ ನೀವು ಉತ್ತರಿಸಬೇಕಾಗಬಹುದು. ನಿಮ್ಮ ಮಾತನ್ನು ಎಲ್ಲರಿಗೂ ಅರ್ಥವಾಗುವಂತೆ ತಿಳಿಸಿ. ಮಾತು ಅಲ್ಪವಾಗಿದ್ದರೂ ಯೋಗ್ಯವಾದ ಮಾತುಗಳನ್ನು ಆಡುವಿರಿ. ಸಂಗಾತಿಯಿಂದ ಆಗುವ ಸಣ್ಣ ತಪ್ಪನ್ನು ಕ್ಷಮಿಸುವುದು ಉಚಿತ.

ವೃಷಭ ರಾಶಿ : ಅಧಿಕಾರಿಗಳ ಒತ್ತಡವೇ ನಿಮ್ಮ ಉದ್ವೇಗಕ್ಕೆ ಕಾರಣವಾಗಲಿದೆ. ಇಂದು ನಿಮಗೆ ಯಾರ ಸಹಾನುಭೂತಿಯೂ ಬೇಡವಾಗಬಹುದು. ಚಂಚಲವಾದ ಮನಸ್ಸನ್ನು ನೀವು ನಿಯಂತ್ರಿಸಲು ನಾನಾ ವಿಧವಾದ ಕಸರತ್ತು ಮಾಡುವಿರಿ. ಉದ್ಯೋಗದ ಸ್ಥಳದಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸವನ್ನು ಮಾಡಲು ಕಷ್ಟವಾದೀತು. ಎಲ್ಲ ಕಾರ್ಯಗಳನ್ನೂ ಮುಗಿಸಿ ಆರಾಮಾಗಿ ಇರುವಿರಿ. ಇಂದಿನ‌ ನಿಮ್ಮ ಒತ್ತಡವನ್ನು ನಿವಾರಿಸಿಕೊಳ್ಳಲು ಏಕಾಂತಕ್ಕೆ ತೆರಳುವಿರಿ. ಸ್ನೇಹಿತರು ಅವರಿಗೆ ಅರಿವಿಲ್ಲದೇ ನಿಮ್ಮನ್ನು ತಪ್ಪು ದಾರಿಗೆ ಕರೆದೊಯ್ಯಬಹುದು.‌ ನಿಮ್ಮ ಬಳಿ ಹಣವಿದ್ದರೂ ಇಂದು ನಿಮಗೆ ಬಳಕೆಗೆ ಬಾರದು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಯಾವುದಾದರೂ ಅಮೂಲ್ಯ ಕ್ಷಣಗಳನ್ನು ನೀವು ತಪ್ಪಿಸಿಕೊಳ್ಳಬಹುದು.‌ ನಿಮ್ಮ ಅಸಹಜ ಸ್ವಭಾವವನ್ನು ಸರಿಮಾಡಿಕೊಳ್ಳುವುದು ಮುಖ್ಯ.

ಮಿಥುನ ರಾಶಿ : ಅನೇಕ ವಿಚಾರಗಳ ಕಡೆ ನಿಮ್ಮ ಗಮನವಿರುವುದು. ಹಾಗಾಗಿ ಇಂದಿನ ಕಾರ್ಯವು ಸಫಲವಾಗದು. ನಿಮ್ಮ ಬಿಡುವಿನ ದಿನದಲ್ಲಿಯೂ ಕುಟುಂಬದವರ ಬಗ್ಗೆ ಕಾಳಜಿ ಇರದು. ನೀವು ಮಾಡಬೇಕಂದು ಹೊರಟ ಕೆಲಸದಲ್ಲಿ ಜಯ ಆಗಲಿದೆ. ಸ್ತ್ರೀರಿಂದ ನಿಮಗೆ ವೃತ್ತಿಯಲ್ಲಿ ಸಹಕಾರವು ಸಿಗಲಿದೆ. ಹೊಸ ಬಂಧುಗಳ ಪರಿಚಯವು ನಿಮಗಾಗುವುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಉಂಟಾಗಬಹುದು. ಅವಿವಾಹಿತರು ವಿವಾಹ ಚಿಂತನೆಯನ್ನು ಮನೆಯಲ್ಲಿ ಪ್ರಸ್ತಾಪಿಸುವಿರಿ. ನೀವು ಮನಸ್ಸಿಗೆ ನೆಮ್ಮದಿ ನೀಡುವ ಸ್ಥಳಗಳಿಗೆ ಹೋಗುವಿರಿ. ನಿಮ್ಮ‌ ಮಾತುಗಳು ಅಹಂಕಾರದಂತೆ ತೋರಬಹುದು. ನಿಮಗೆ ನಿರ್ದಿಷ್ಟ ವೇತನವನ್ನು ಪಡೆಯುವ ಹಂಬಲವಿರುವುದು. ಕಾನೂನಾತ್ಮಕ ವಿಚಾರಕ್ಕೆ ನಿಮ್ಮ ಒತ್ತು ಹೆಚ್ಚಿರುವುದು. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಹೊಸ ಕಾರ್ಯಕ್ಕೆ ದೊಡ್ಡ ಫಲದ ಯೋಜನೆ ಇರಲಿ.

ಕರ್ಕಾಟಕ ರಾಶಿ : ಅನ್ವೇಷಣೆಯ ಮನಃಸ್ಥಿತಿಯವರಿಗೆ ಯಾವುದಾದರೂ ಮಾರ್ಗವು ಸಿಗುವುದು. ರಾಜಕೀಯ ಪರಿವರ್ತನೆಯು ನಿಮ್ಮಲ್ಲಿ ಅಚ್ಚರಿ ತಂದೀತು. ನೀವು ಇಂದು ನಿಮಗೆ ಮಾತ್ರ ಗೊತ್ತಿರುವ ಇನ್ನೊಬ್ಬರ ರಹಸ್ಯವನ್ನು ಹೇಳುವಿರಿ. ಬಾಡಿಗೆ ಮನೆಯವರಾಗಿದ್ದರೆ ಮನೆಯನ್ನು ಬದಲಿಸುವಿರಿ. ಭೂವ್ಯವಹಾರವನ್ನು ಮಾಡುವವರಿಗೆ ಹೆಚ್ಚು ಲಾಭವು ಸಿಗಲಿದೆ. ಕಡಿಮೆಯಾಗುತ್ತಿದ್ದ ಅನಾರೋಗ್ಯವು ಪುನಃ ಕಾಣಿಸಿಕೊಳ್ಳಬಹುದು. ನಿಮ್ಮ ಇಷ್ಟದವರು ನಿಮಗೆ ವಂಚನೆ ಮಾಡುವರು. ನಾಯಕರನ್ನು ಹಿಂಬಾಲಿಸುವ ಬದಲು ನೀವೇ ನಾಯಕರಾಗಬಹುದು. ನಿಮ್ಮ ಬಗ್ಗೆಯೇ ನಿಮಗೆ ಕೀಳು ಅರಿಮೆ ಉಂಡಾಗಬಹುದು.‌ ಇಂದು ಬಿದ್ದ ಕನಸು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ಹಲವಾರು ಅಭಿಪ್ರಾಯಗಳು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಬರುವುದು. ತಪ್ಪಿಲ್ಲದೇ ಹೆದರುವ ಅವಶ್ಯಕತೆ ಇರದು. ಮಕ್ಕಳಿಗಾಗಿ ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವಿರಿ.

ಸಿಂಹ ರಾಶಿ : ಸಂಗಾತಿಯ ಮನೋಭಾವವನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಅಧಿಕಾರ ಮತ್ತು ಸಂಪತ್ತು ಪ್ರದರ್ಶನಕ್ಕೆ ಅಲ್ಲ ಎಂಬುದು ತಿಳಿಯುವುದು. ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆಯಾಗಲಿದೆ. ನಿಮಗೆ ಸಹಾಯವನ್ನು ಕೇಳಲು ಮುಜುಗರವಾದೀತು. ವ್ಯಾಪಾರದ ಸಲುವಾಗಿ ದೂರಪ್ರಯಾಣವನ್ನು ಮಾಡಬೇಕಾಗಬಹುದು. ನೀವಾಗಿಯೇ ಸ್ವಂತ ನಿರ್ಧಾರಕ್ಕೆ ಬರುವವರೆಗೆ ನಿಮಗೆ ಕಷ್ಟವಾಗುವುದು.‌ ಇಂದು ನೀವು ಒತ್ತಡ ಮಾಡಿಕೊಳ್ಳಬಾರದೆಂದು ಅಂದುಕೊಂಡಿದ್ದರೂ ಸಂದರ್ಭವು ಅದೇ ರೀತಿ ಬರುವುದು. ಆರೋಗ್ಯವನ್ನು ಗಟ್ಟಿಯಾಗಿಸಿಕೊಳ್ಳಲು ನೀವು ಪ್ರಯತ್ನಿಸಬೇಕು.‌ ಉಳಿತಾಯವನ್ನೂ ಖರ್ಚನ್ನು ಸಮಾನವಗಿ ಕಾಣುವುದು ಕಷ್ಟ. ಉದ್ಯಮದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿಸುವಿರಿ. ನಿಮ್ಮ ನೌಕರರು ನೀವು ಹೇಳಿದ ಕೆಲಸವನ್ನು ಸರಿಯಾಗಿ ಮಾಡದೇ ಇರಬಹುದು. ನಿಮ್ಮ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಯಾರದೋ ಮಾತಿನಿಂದ ಸ್ಥೈರ್ಯವನ್ನು ಕಳೆದುಕೊಳ್ಳುವಿರಿ.

ಕನ್ಯಾ ರಾಶಿ : ವ್ಯವಹಾರವನ್ನು ಹಾಗಿಯೇ ನೋಡುವುದುನ್ನು ಕಲಿಯಿರಿ. ಸಂಬಂಧಗಳು ಸಂಬಂಧಗಳಾಗಿಯೇ ಇರಲಿ. ಮಕ್ಕಳ ಅನಾರೋಗ್ಯದ ಕಾರಣ ಅವರ ಜೊತೆ ಇರಬೇಕಾಗುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ಪಾಲಕರಿಗೆ ಆತಂಕವಾಗಬಹುದು. ಸ್ನೇಹಿತರಿಂದ ಉಡುಗೊರೆಗಳು ಸಿಗಬಹುದು. ತಾಯಿಯ ಪ್ರೀತಿಯು ನಿಮಗೆ ಹೆಚ್ಚು ಸಿಗುವುದು. ಇಂದು ನಿಮ್ಮ ಕೋಪವನ್ನು ನಿಯಂತ್ರಣಕ್ಕೆ ತಂದುಕೊಳ್ಳುವಿರಿ. ನಿಮ್ಮ ನಡವಳಿಕೆಯಯನ್ನು ಸರಿಮಾಡಿಕೊಳ್ಳಲು ಪ್ರಯತ್ನಿಸುವಿರಿ. ಸಂಗಾತಿಯ ಜೊತೆ ಕಲಹವಾಡಿ ಅನಂತರ ಪಶ್ಚಾತ್ತಾಪಪಡುವಿರಿ‌. ನಿಮ್ಮ ಕಾರ್ಯದ ಸಫಲತೆಗೆ ಕಾರಣರಾದವರನ್ನು ಕೃತಜ್ಞತೆಯಿಂದ ಸ್ಮರಿಸಿ. ನಿಮ್ಮ ಯೋಜನೆಯನ್ನು ಸರಿಯಾಗಿ ನಿರ್ವಹಿಸಲು ಕಷ್ಟವಾದೀತು. ನಿಮಗೆ ಸಮ್ಮಾನಗಳು ಸಿಗುವ ಸಾಧ್ಯತೆ ಇದೆ. ಮಕ್ಕಳ ಜೊತೆ ಇಂದು ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾದೀತು. ಸಣ್ಣ ವಿಚಾರದಲ್ಲಿ ನಿಮಗೆ ಇನ್ನೊಬ್ಬರ ಜೊತೆ ಕಲಹವಾದೀತು. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ. ನ್ಯಾಯವಾದಿಗಳು ಒತ್ತಡದಲ್ಲಿ ಇರುವರು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು.

ತುಲಾ ರಾಶಿ : ಚಾಣಾಕ್ಷತನದಿಂದ ಗಿಟ್ಟಿಸಿಕೊಂಡ ಅಧಿಕಾರವು ಸಮಯಮಿತಿಯಲ್ಲಿ ಇರುತ್ತದೆ. ಪ್ರೇಮಪ್ರಕರಣವು ನಿಮಗೆ ದುಃಖವನ್ನು ಕೊಟ್ಟೀತು. ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪವು ಬರಲಿದೆ. ಶತ್ರುಗಳೂ ನಿಮಗೆ ಉಪದೇಶ ಮಾಡುವರು. ಮಕ್ಕಳಿಗಾಗಿ ನೀವು ಬದಲಾವಣೆಯನ್ನು ಮಾಡಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನೀವು ಬಹಳ ಅನಾದರ ತೋರುವುರಿ. ವಿದ್ಯಾರ್ಥಿಗಳಿಂದ ಹೆಚ್ಚಿನ ನಿರೀಕ್ಷೆಯು ಇರಲಿದೆ. ನಿಮಗೆ ಬರುವ ಸಮಸ್ಯೆಗಳು ನಗಣ್ಯವಾಗಿದ್ದರೂ ಅದನ್ನು ದೊಡ್ಡ ಮಾಡಿಕೊಳ್ಳುವಿರಿ. ಆರೋಗ್ಯವು ನಿಮಗೆ ವರವಾಗಿದ್ದರೂ ಅದು ಕೆಲವು ಸಮಯ ತೊಂದರೆಯನ್ನು ಕೊಡುವುದು. ನಿಮ್ಮವರನ್ನು ನೀವು ಮರೆಯುವಿರಿ. ಒಳ್ಳೆಯವರ ಸಹವಾಸವು ಸಿಗಬಹುದು. ಕೆಲವನ್ನು ನೀವು ಬಿಟ್ಟುಕೊಡುವುದೇ ಸೂಕ್ತ. ನಿಮ್ಮದಲ್ಲ ಎಂಬ ನಿರ್ಧಾರವನ್ನು ಮಾಡಿ ಸುಮ್ಮನಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು.

ವೃಶ್ಚಿಕ ರಾಶಿ : ನಿಮ್ಮ ಮಾತುಗಳು ಚಾಣಾಕ್ಷತನದಂತೆ ಇರುವುದು. ನಿಮ್ಮ ಸಾಧನೆಯನ್ನು ಹಂಚಿಕೊಳ್ಳುವಿರಿ‌. ಯೋಗ್ಯ ಪುರಸ್ಕಾರ, ಮಾತುಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ನಿಮಗೆ ಮೋಸವಾಗಲಿದ್ದು, ಅದರಲ್ಲೂ ನಿಮ್ಮವರೇ ಅದನ್ನು ಮಾಡಿದ್ದು ಎಂಬ ವದಂತಿಯು ನಿಮಗೆ ಸಹಿಸಲು ಅಸಾಧ್ಯವಾದುದಾಗಿದೆ. ನಿಮ್ಮ ಸಣ್ಣ ವ್ಯಾಪಾರವೂ ಆದಾಯದ ಮೂಲವಾಗಬಹುದು. ಎಂದೋ ನಿರೀಕ್ಷಿಸಿದ್ದ ಬಡ್ತಿಯು ಇಂದು ಸಿಗಲಿದೆ. ಯಾರಾದರೂ ಹುಳಿ ಹಿಂಡುವ ಕೆಲಸಕ್ಕೆ ಬರಬಹುದು. ಮಾತಿನ ನಿಯಂತ್ರಣವು ತಪ್ಪಿ‌ಹೋಗಲಿದೆ. ವಿಳಂಬಕ್ಕಾಗಿ ನೀವು ವ್ಯಥೆ ಪಡಬೇಕಾದೀತು. ನಿಮಗೆ ಧೈರ್ಯವನ್ನು ತುಂಬಲು ಸಂಗಾತಿಯ ಸಹಾಯವನ್ನು ಪಡೆಯಿರಿ. ಬಂಧುಗಳು ನಿಮ್ಮ ಮನೆಗೆ ಬರಲಿದ್ದಾರೆ. ನಿದ್ರಾಹೀನತೆಯಿಂದ ನಿಮಗೆ ಕೆಲವು ತೊಂದರೆಗಳು ಆಗಬಹುದು. ಅನಪೇಕ್ಷಿತ ಖರ್ಚನ್ನು ಮಾಡಬೇಕಾದೀತು. ನಿಮ್ಮನ್ನು ನೀವು ಕುಗ್ಗಿಸಿಕೊಳ್ಳುವುದು ಬೇಡ. ಮಕ್ಕಳ ಬಗ್ಗೆ ಸ್ವಲ್ಪ ಅತಿಯಾದ ಕಾಳಜಿ ಬೇಕು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು.

ಧನು ರಾಶಿ : ನೀವೇ ನಿಮ್ಮನ್ನು ಸರಿಮಾಡಿಕೊಳ್ಳುವ ಬಗ್ಗೆ ಯೋಚಿಸಿದರೆ ಉತ್ತಮ. ಕಾನೂನಿನಿಂದ ಜಯಸುವ ಉತ್ಸಾಹವು ಇಂದು ನಿರುತ್ಸಾಹದಲ್ಲಿ ಕೊನೆಯಾಗಲಿದೆ. ಎಲ್ಲವೂ ವಿಧಿಯ ನಿಯಮದಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖವು ಹೆಚ್ಚಾಗುವುದು. ನಿಮ್ಮರನ್ನು ನೀವು ದೂರ ಮಾಡಿಕೊಳ್ಳುವಿರಿ. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನೀವು ನಿರಾಕರಿಸುವಿರಿ.‌ ನಿರ್ಭೀತಿಯು ನಿಮ್ಮ ಮಾರ್ಗವನ್ನು ತಪ್ಪಿಸಬಹುದು. ಪ್ರೇಮ ವ್ಯವಹಾರವನ್ನು ತಿಳಿಸಲು ನೀವು ಭಯಪಡುವಿರಿ. ವಾಹನ ಚಾಲನೆಯಲ್ಲಿ ನುರಿತವರಾದರೂ ಕಾಲವು ಅದಾವುದನ್ನೂ ಕೇಳದು.‌ ನಿಮ್ಮ ನೇರ ನುಡಿಗಳು ಇನ್ನೊಬ್ಬರಿಗೆ ನೋವನ್ನು ಕೊಟ್ಟೀತು. ಹೇಳಿಕೊಳ್ಳಲು ಯಾರಾದರೂ ಆಪ್ತರು ಬೇಕಾಗಬಹುದು. ಕೆಲವನ್ನು ಸುಮ್ಮನೇ ಮನಸ್ಸಿನಲ್ಲಿ ಅಂದುಕೊಂಡು ಕಾಲಹರಣ ಮಾಡುವಿರಿ. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು.

ಮಕರ ರಾಶಿ : ಸಮಾನಮನಸ್ಕರು ಸೇರಿದಾಗ ಮಾತ್ರ ನಿಮ್ಮ ಕಾರ್ಯವು ಸಾಧುವಾಗುವುದು. ನೀವು ಎಲ್ಲದಕ್ಕೂ ಅನುಕೂಲ ಯೋಗವನ್ನು ನೋಡುತ್ತ ಕುಳಿತಿರಲು ಆಗದು. ನೀವು ಪಡೆದುಕೊಂಡ ವಿರಾಮವನ್ನು ಆನಂದದಿಂದ ಕಳೆಯುವಿರಿ. ಸ್ನೇಹಿತರ ಮೇಲೆ ನಿಮಗೆ ಶಂಕೆ ಉಂಟಾಗಬಹುದು. ಹಣದ ವಿಚಾರವನ್ನು ನೀವು ಯಾರ ಬಳಿಯೂ ಹೇಳುವುದು ಬೇಡ. ನಿಮಗೆ ಯಾರೋ ಹೇಳುವ ನಿಯಮಗಳು ಬಂಧದಂತೆ ಅನ್ನಿಸುವುದು. ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಸಹಾಯವನ್ನು ಪಡೆಯುವಿರಿ. ಒಂದಿಷ್ಟು ಕಾರ್ಯದಲ್ಲಿ ಒತ್ತಡವಿರಲಿದೆ. ನಿಮಗೆ ನಿಮ್ಮದೇ ಆದ ಬಳಗವು ಇರಲಿದ್ದು ಅವರ ಜೊತೆ ಸಮಯವನ್ನು ಕಳೆಯುವಿರಿ. ಯಾರು ಏನೇ ಅಂದರೂ ನಿಮ್ಮ ನಿರ್ಧಾರವನ್ನು ಬದಲಿಸಿಕೊಳ್ಳಲು ಹೋಗುವುದಿಲ್ಲ‌. ಸ್ಥಿರಾಸ್ತಿಗಳ ಬಗ್ಗೆ ವಿವಸದವಾಗುವುದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ಸ್ನೇಹ ಸಂಬಂಧದಲ್ಲಿ ಅನ್ಯರ ಆಗಮನವಾಗಲಿದೆ.

ಕುಂಭ ರಾಶಿ : ಆಪ್ತರಿಂದ ನಿಮಗೆ ಪರೋಕ್ಷವಾಗಿ ನೋವು ಬರಬಹುದು. ಇಂದು ನಿಮ್ಮ ವೃತ್ತಿಕ್ಷೇತ್ರದಲ್ಲಿ ನೀವು ಕಲಹಕ್ಕೆ ದಾರಿ ಮಾಡಿಕೊಡುವಿರಿ. ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಚಂದದಲ್ಲಿ ಹೊಗಳುವರು. ಪುಣ್ಯಸ್ಥಳಕ್ಕೆ ಹೋಗುವ ಮನಸ್ಸಾಗುವುದು. ಕುಟುಂಬ ನಿರ್ವಹಣೆಯನ್ನು ಒತ್ತಡದಿಂದ ನೀವು ಮಾಡಬೇಕಾದೀತು. ವೈದ್ಯ ವೃತ್ತಿಯನ್ನು ಇಷ್ಟ ಪಡುವವರು ಯಶಸ್ಸನ್ನು ಗಳಿಸುವರು. ನಿಮಗೆ ಎಷ್ಟೋ ವಿಚಾರವನ್ನು ಕಲಿಯಬೇಕು ಎಂಬ ಆಸೆಯು ಅತಿಯಾಗಲಿದೆ. ಹೊಸ ಉದ್ಯೋಗಕ್ಕೆ ಪ್ರವೇಶ ಪಡೆಯುವಿರಿ. ನಿಮ್ಮ ಅನುಕೂಲವನ್ನು ನೋಡಿ ಖರ್ಚು ಮಾಡುವುದು ಉತ್ತಮ. ಯಾರಿಗಾದರೂ ನಿಮ್ಮ ವರ್ತನೆಯು ಇಷ್ಟವಾಗದೇ ಹೋಗಬಹುದು. ನಿಮಗೆ ಸೃಜನಾತ್ಮಕ ಕಾರ್ಯದಲ್ಲಿ ಆಸಕ್ತಿ ಹೆಚ್ಚು ಕಾಣಿಸುವುದು. ಸಂತೋಷದ ಕೊನೆಯಲ್ಲಿ ದುಃಖವಿರಲಿದೆ. ಇಬ್ಬರ ನಡುವಿನ ಶೀತಲ ಸಮರವು ತಿಳಿಯಾಗಬಹುದು. ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವಾಗುವುದು.

ಮೀನ ರಾಶಿ : ನೀವು ಇಂದು ಅನವಶ್ಯಕ ವಿವಾದಗಳಿಗೆ ಮಾತನ್ನು ಹರಿದುಬಿಡುವುದು ಬೇಡ.‌ ನಿಮ್ಮ ಮಾನಸಿಕ ತೊಳಲಾಟಕ್ಕೆ ಪೂರ್ಣವಿರಾಮದ ಅವಶ್ಯಕತೆ ಇದ್ದು, ಸರಿಯಾದ ವ್ಯಕ್ತಿಯಿಂದ ಅದು ಸಾಧ್ಯವಾಗುವುದು. ಆಪ್ತರನ್ನು ದೂರ ಮಾಡಿಕೊಂಡು ಸಂಕಟಪಡಬೇಕಾದೀತು. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಎದ್ದು ಕಾಣುವುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡಿ. ವಾಹನದ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಇರಲಿದೆ. ನಿಮ್ಮ ಅಧಿಕಾರ ಕಾರ್ಯಕ್ಕಾಗಿಯೇ ಹೊರತು ಅಧಿಕಾರಚಲಾವಣೆ ಮಾಡಲಾಗಿರದು. ನೀವು ಸಮಯದ ನಿರೀಕ್ಷೆಯಲ್ಲಿ ಇರುವಿರಿ. ತಾಳ್ಮೆಯಿಂದ ಇದ್ದಷ್ಟೂ ನಿಮಗೆ ಹೆಚ್ಚು ಲಾಭವು ಸಿಗಲಿದೆ. ಅತಿಯಾಗಿ ಯಾರನ್ನೂ ನಂಬುವುದು ಬೇಡ. ನೋವನ್ನು ನುಂಗಲು ಕಷ್ಟವಾದೀತು.‌ ಅನಾರೋಗ್ಯದಿಂದ ಸ್ವಲ್ಪ ಆರಾಮೆನಿಸಬಹುದು. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು.

-ಲೋಹಿತ ಹೆಬ್ಬಾರ್ – 8762924271 (what’s app only)

ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​