Daily Horoscope 05 October 2024: ಈ ರಾಶಿಯವರು ಇಂದು ವಂಚನೆಯ ಬಲೆಯಲ್ಲಿ ಸಿಕ್ಕಿಕೊಳ್ಳಬಹುದು

ಅಕ್ಟೋಬರ್ 05,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ನಿಮ್ಮ ನಕಾರಾತ್ಮಕ ಆಲೋಚನೆಗಳು ಇತರರಿಗೂ ತಿಳಿದೀತು. ಇಂದು ನಿಮಗೆ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಕಡಿಮೆ ಆಗುವುದು. ಬಂಧುಗಳ ವಿಚಾರದಲ್ಲಿ ನಿಮಗೆ ಸಂಪೂರ್ಣ ಮನಸ್ಥಿತಿಯು ಏಕರೂಪವಾಗಿ ಇರಲಾರದು. ಹಾಗಾದರೆ ಇಂದಿನ (2024 ಅಕ್ಟೋಬರ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 05 October 2024: ಈ ರಾಶಿಯವರು ಇಂದು ವಂಚನೆಯ ಬಲೆಯಲ್ಲಿ ಸಿಕ್ಕಿಕೊಳ್ಳಬಹುದು
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2024 | 12:00 AM

ಇಂದು ಚಂದ್ರಘಂಟಾ ದೇವಿಯ ಆರಾಧನೆ ಮಾಡುವ ದಿನ. ನವರಾತ್ರದ ಮೂರನೇ ದಿನ ಕೈಯಲ್ಲಿ ತ್ರಿಶೂಲ, ಕಮಲ, ಗದಾ, ಕಮಂಡಲು, ಖಡ್ಗ, ಬಿಲ್ಲು, ಬಾಣ, ಜಪಮಾಲೆ, ಅಭಯಮುದ್ರೆ, ಜ್ಞಾನಮುದ್ರೆಗಳನ್ನು ಧರಿಸಿ ರಾಕ್ಷಸರ ಸಂಹಾರಕ್ಕೆ ಸಿಂಹವಾಗಿನಿಯಾಗಿ ಗೋಚರಿಸುತ್ತಾಳೆ. ಶತ್ರು ಸಂಹಾರಕಳಾಗಿರುವ ಆಕೆಯನ್ನು ಶ್ರದ್ಧೆ ಭಕ್ತಿಯಿಂದ ಪೂಜಿಸಬೇಕು.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಸ್ವಾತಿ, ಯೋಗ: ವಿಷ್ಕಂಭ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 17 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:52, ಯಮಘಂಡ ಕಾಲ ಮಧ್ಯಾಹ್ನ 01:50ರಿಂದ 03: 19ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:24 ರಿಂದ 07:53 ರವರೆಗೆ.

ಮೇಷ ರಾಶಿ : ನಿಮಗೆ ಇಂದು ಬಂಧನದಿಂದ ಮುಕ್ತವಾದಂತೆ ಅನ್ನಿಸಬಹುದು. ನಿಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯುವ ಅವಕಾಶವು ಮತ್ತೆ ಸಿಗುವುದು. ಮೋಜಿನಲ್ಲಿ ಈ ದಿನವನ್ನು ಕಳೆಯುವಿರಿ. ಇಂದು ವಿದ್ಯಾಭ್ಯಾಸದಲ್ಲಿ ಆಸಕ್ತಿಯು ಕಡಿಮೆ ಆಗಲಿದೆ. ಆಸ್ತಿ ಖರೀದಿಯ ಬಗ್ಗೆ ಮನೆಯಲ್ಲಿ ಚಿಂತನೆಯನ್ನು ನಡೆಸಬಹುದು. ಬರಬೇಕಾದ ಹಣವನ್ನು ಪಡೆಯಲು ಮನೆಗೇ ಹೋಗಲಿದ್ದೀರಿ. ಉದ್ಯೋಗದ ಕಾರಣಕ್ಕೆ ಅಲೆದಾಟ ಅತಿಯಾಗಬಹುದು. ಮಾತು ಅವಮಾನವಂತೆ ಕಂಡರೆ ಅಲ್ಲಿರುವುದು ಬೇಡ.‌ ಬಂಧುಗಳ ಜೊತೆ ನಿಮ್ಮ ಮಾತುಕತೆ ಅಸಹಜವಾಗಿ ಇರಲಾರದು. ಸ್ನೇಹಕ್ಕೆ ನಿಮ್ಮ ಪ್ರತ್ಯುಪಕಾರವು ಇರಲಿದೆ. ಪತ್ನಿಯ ಮಾತು ನಿಮಗೆ ಅಸಮಾಧಾನವನ್ನು ತರಿಸಬಹುದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಹೆಚ್ಚಿನ ಆದಾಯದ ಬಗದಗೆ ಚಿಂತನೆ ಮಾಡುವಿರಿ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಮಾತು ನೇರವಾಗಿದ್ದರೂ ಮೃದುವಾಗಿ ಬಳಸಿಕೊಳ್ಳುವಿರಿ. ಯಾರಾದರೂ ನೀವು ಕೊಟ್ಟ ಸಲುಗೆಯನ್ನು ದುರುಪಯೋಗ ಮಾಡಿಕೊಳ್ಳಬಹುದು.

ವೃಷಭ ರಾಶಿ : ಶ್ರಮದಿಂದ ಎಲ್ಲ ಕಾರ್ಯವೂ ಆಗದು. ಉಪಾಯದಿಂದ ಮಾಡುವುದನ್ನು ಹಾಗೆಯೇ ಮಡುವುದು ಸೂಕ್ತ. ನೀವು ಬಂಧುಗಳಿಂದ ಸಹಾಯವನ್ನು ನಿರೀಕ್ಷಿಸುವಿರಿ. ನಿಮ್ಮ ಸಂಪತ್ತಿನ ಅಳೆಯುವರು. ಗುಟ್ಟನ್ನು ನೀವು ಬಿಟ್ಟಕೊಡುವಿರಿ. ನಿಮ್ಮ ತಪ್ಪು ತಿಳಿದಿಕೊಂಡವರಿಗೆ ಸರಿಯಾದ‌ ಮಾಹಿತಿಯನ್ನು ಕೊಡುವಿರಿ.‌ ಇಂದು ನಿಮ್ಮ ಆಲಸ್ಯವು ಯಶಸ್ಸಿನ ಶತ್ರುವಾಗಬಹುದು. ಸುಳ್ಳು ಹೇಳಿಕೊಂಡು ನಿಮ್ಮ ದಾಖಲೆಗಳನ್ನು ಪರಿಶೀಲಿಸಬಹುದಿ. ಧಾರ್ಮಿಕ ವಿಚಾರಕ್ಕೆ ನೀವು ಹೆಚ್ಚು ಒತ್ತಡುವಿರಿ. ಕುಟುಂಬದ ಮನೆಯಲ್ಲಿಯೇ ಇದ್ದು ಸಮಯವನ್ನು ಕಳೆಯುವಿರಿ. ಹೊಸತನ್ನು ಮಾಡಬೇಕು ಎಂಬ ಮನಸ್ಸು ಬರಬಹುದು. ಭೂಮಿಯ ವ್ಯವಹಾರವು ಇಂದು ಕಾರಣಾಂತರಗಳಿಂದ ಸ್ವಲ್ಪ ಹಿಮ್ಮುಖವಾಗಿ ಹೋಗಬಹುದು. ಯಾರ ಬಗೆಗೂ ಊಹಾಪೋಹಗಳನ್ನು ಸೃಷ್ಟಿಸುವುದು ಬೇಡ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ.

ಮಿಥುನ ರಾಶಿ : ಬಿಗುಮಾನವು ನಿಮ್ಮನ್ನು ತೆರೆಯಲು ಬಿಡದು. ಅಧಿಕಾರವು ನಿಮ್ಮದಾದ ಕಾರಣ ಜವಾಬ್ದಾರಿಯೂ ನಿಮ್ಮದೇ ಆಗಿರುತ್ತದೆ. ಬಂಧುಗಳಿಗಾಗಿ ನೀವು ಹಣವನ್ನು ನೀಡಬೇಕಾಗಬಹುದು. ವಿದ್ಯಾಭ್ಯಾಸಕ್ಕಾಗಿ ಮನೆಯವರಿಂದ ಪ್ರೋತ್ಸಾಹವನ್ನು ಪಡೆಯುವಿರಿ. ಅನಿವಾರ್ಯವಾಗಿ ನೀವು ಬದಲಾಯಿಸಿದ ವೃತ್ತಿಗೇ ಹೋಗಬೇಕಾಗುವುದು. ನಿಮ್ಮನ್ನು ಅತಿಯಾಗಿ ಬಿಂಬಿಸಿಕೊಳ್ಳಲು ಇಷ್ಟಪಡುವಿರಿ. ನಿಮಗೆ ಕೆಲವು ಜವಾಬ್ದಾರಿಗಳು ಬಂದು ಗಂಭೀರವಾಗುವಿರಿ. ಆರ್ಥಿಕ ವ್ಯವಹಾರದಲ್ಲಿ ನಿಮಗೆ ನಿಷ್ಠೆ ಇರುವುದು. ನಿಮ್ಮ ವೃತ್ತಿಯು ನಿಮಗೆ ಹಿಡಿಸುವುದು. ಸಹೋದರಿಂದ ನಿಮಗೆ ಬೇಕಾದ ಸಹಾಯ ಇಂದು ಪಡೆಯುವಿರಿ. ನಿಮ್ಮ ಬಗ್ಗೆ ಯಾರಿಂದಲೋ ಮಾಹಿತಿಯನ್ನು ಪಡೆಯುವರು. ಸಂಬಂಧಿಸದ ವಿಚಾರದಲ್ಲಿ ಆಸಕ್ತಿಯು ಹೆಚ್ಚಾಗಬಹುದು. ಸುಮ್ಮನೆ ಕುಳಿತಿರುವುದು ನಿಮಗೆ ಕಷ್ಟ. ನಿಮ್ಮನ್ನು ಯಾರಾದರೂ ಅಸ್ತ್ರವಾಗಿ ಬಳಸಿಕೊಳ್ಳಬಹುದು.

ಕಟಕ ರಾಶಿ : ನಿಮ್ಮ ಉದ್ಯಮವು ಇಚ್ಛೆಗೆ ಅನುಸಾರವಾಗಿ ನಡೆಯುತ್ತಿದೆಯೇ ಎಂಬುದನ್ನು ಪರೀಕ್ಷಿಸುವಿರಿ. ನಾಯಕರಾಗುವುದಕ್ಕಿಂತ ಹಾಗೆ ನಡೆದುಕೊಳ್ಳುವುದೂ ಮುಖ್ಯವಾಗಲಿದೆ. ಜೀವನವು ಬಹಳ ನಿಧಾನವಾಗಿ ಚಲಿಸುತ್ತಿದೆ ಎಂದು ಅನ್ನಿಸಬಹುದು. ಸಂಗಾತಿಯ ಜೊತೆ‌ಗಿನ ಕಲಹದಿಂದ‌ ಕೆಲ ಕಾಲ ಮೌನವು ಆವರಿಸುವುದು. ಇಂದು ಆಲಸ್ಯವು ಅಧಿಕವಾಗಿ ಇರಲಿದೆ. ಉತ್ತಮವಾದ ವೈವಾಹಿಕ ಸಂಬಂಧವನ್ನು ಪೂರ್ವಾಪರ ಯೋಚಿಸದೇ ಬಿಡುವಿರಿ. ಸ್ವತಂತ್ರವಾಗಿ ಬದುಕಲು ನಿಮಗೆ ಇಷ್ಟವಾದೀತು. ಆಪ್ತರ ಜೊತೆ ಅನೇಕ ದಿನಗಳ ಅನಂತರ ನೀವು ಕಾಲಕಳೆಯುವಿರಿ. ಇದು ನಿಮಗೆ ಸಂತೋಷವನ್ನು ಕೊಡುವುದು. ಯಾವ ಮೆಚ್ಚುಗೆಯನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಲಾರಿರಿ. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಇನ್ನೊಬ್ಬರಿಂದ ನಿಮಗೆ ಉತ್ತೇಜನ ಸಿಗಲಿದೆ. ಇಂದು ಸಹೋದ್ಯೋಗಿಗಳ ಬಗ್ಗೆ ನಿಮಗೆ ಅನಾದರ ಬರಬಹುದು.

ಸಿಂಹ ರಾಶಿ : ನಿಮ್ಮ ವ್ಯಕ್ತಿತ್ವದಿಂದ ಯಾರಾದರೂ ಆಕರ್ಷಿತರಾಗಹುದು. ಮಕ್ಕಳಿಂದ ನಿಮ್ಮ ತೊಂದರೆ ದೂರಾಗುವುದು. ಸಾಲವೇ ನಿಮಗೆ ಸಾಲವಾಗದು. ಅನಾರೋಗ್ಯದ ಕಾರಣ ಆರ್ಥಿಕ ಮಟ್ಟವು ಕುಸಿಯುವುದು. ಹೆಚ್ಚಿನ ಆರ್ಥಿಕಮೂಲವನ್ನೂ ಪಡೆಯಲು ಕಷ್ಟವಾದೀತು. ಹೊಸ ಉದ್ಯಮದ ಯೋಚನೆಯನ್ನು ಸದ್ಯ ಕೈ ಬಿಡುವುದು ಒಳ್ಳೆಯದು. ನಿಮ್ಮ ಕುಂದುಕೊರತೆಗಳನ್ನು ಯಾರ ಬಳಿಯೂ ಹೇಳಿಕೊಳ್ಳಲು ಇಚ್ಛೆಪಡುವುದಿಲ್ಲ. ಆಪ್ತರ ಜೊತೆ ನೋವು ಎಲ್ಲವನ್ನೂ ಮರೆಯಲು ಸುತ್ತಾಡಲಿದ್ದೀರಿ. ನಿಮ್ಮ ಬಗ್ಗೆ ಇತರರಿಗೆ ಅನುಕಂಪ ಬರಬಹುದು. ಅಧಿಕಾರಕ್ಕಾಗಿ ನೀವು ತಂತ್ರವನ್ನು ಬಳಸಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತೆಯಿಂದ ಇರುವುದು ಸುಖವೆನಿಸಬಹುದು. ಸರ್ಕಾರದ ಕೆಲಸವನ್ನು ಬಹಳ ಕಷ್ಟದಿಂದ ಮಾಡಿಸಿಕೊಳ್ಳಬೇಕು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ಹಾಗೆಯೇ ಉಳಿಯದು.

ಕನ್ಯಾ ರಾಶಿ : ಔಷದೀಯ ವ್ಯಾಪಾರದಲ್ಲಿ ಗಣನೀಯ ಪ್ರಗತಿಯು ಕಾಣಿಸುವುದು. ಕುಟುಂಬದಲ್ಲಿ ಬರುವ ಕಲಹಕ್ಕೆ ವಿರಾಮದ ಅಗತ್ಯವಿದೆ. ನಿಮ್ಮ ಬಳಿ ಅಪರಿಚಿತರು ಸಹಾಯವನ್ನು ಕೇಳಿಕೊಂಡು ಬರಬಹುದು. ಇಲ್ಲ ಎನದೇ ಅಲ್ಪವನ್ನಾದರೂ ದಾನಮಾಡಿ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಯಾವ ಹೊರೆಯನ್ನೂ ನೀವು ಹೊರಲು ಸಿದ್ಧರಾಗುವುದಿಲ್ಲ. ಮನೆಯಲ್ಲಿ ದೊಡ್ಡ ಮಟ್ಟದಲ್ಲಿ ಧಾರ್ಮಿಕ ಕಾರ್ಯವನ್ನು ಮಾಡುವ ಯೋಚನೆ‌ ಇರಲಿದೆ. ಅಧಿಕ ಕಾರ್ಯಗಳು ಇರಲಿದ್ದು ನಿಮಗೆ ಯಾವುದೂ ಸೂಚಿಸದೇ ಹೋಗಬಹುದು. ಮನಬಂದಂತೆ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಬಂಧುಗಳ ಜೊತೆ ನಿಮ್ಮ ವಿಚಾರವನ್ನು ಹಂಚಿಕೊಂಡು ಸಮಾಧಾನ ಪಡುವಿರಿ. ಭವಿಷ್ಯದ ಬಗ್ಗೆ ಚಿಂತೆಯೂ ಕಾಡಬಹುದು. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ಮಕ್ಕಳ ತೀರ್ಮಾನಕ್ಕೆ ನೀವು ಬದ್ಧರಾಗಬೇಕಾಗುವುದು. ಅಪರಿಚಿತರ ಜೊತೆ ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುವಿರಿ.

ತುಲಾ ರಾಶಿ : ನಿಮ್ಮ ಖರ್ಚಿನ ಅಂದಾಜು ಮೀರಿದಂತೆ ನಿಮಗೆ ಕಾಣಿಸಬಹುದು. ನಿಮಗೆ ಸಿಗುವ ಜಯದಿಂದ ಕುಟುಂಬಕ್ಕೆ ಸಂತಸ. ಒಂಟಿಯಾಗಿ ಇದ್ದಷ್ಟೂ ನಿಮಗೆ ಏನೇನೋ ಯೋಚನೆಗಳು ಬರಬಹುದು. ನಿಮ್ಮ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಿ. ಕೆಲವು ಪ್ರಗತಿಗಳು ನಿಮಗೆ ಆಶ್ಚರ್ಯಕರ ಎನಿಸುವುದು. ಜಾಣತನದಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳಬೇಕಾಗಬಹುದು.‌ ಇಂದು ನಿಮಗೆ ಎಲ್ಲ ಕಾರ್ಯಗಳೂ ವಿಳಂಬವಾಗಲಿದೆ. ನಿಮ್ಮ ಮಾತಿಗೆ ಬೆಲೆ ಇಲ್ಲದೇ ಹೋಗಬಹುದು. ನೀವು ನಡೆಸುವ ಉದ್ಯಮಕ್ಕೆ ನೀವು ವೇಗವನ್ನು ಕೊಡುವಿರಿ. ವಿದೇಶಪ್ರಯಾಣಕ್ಕೆ ನಿಮಗೆ ಅವಕಾಶಗಳು ಬರಬಹುದು. ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಮಾಡುವಿರಿ. ಆತ್ಮೀಯರ ಒಡನಾಟದಿಂದ ನಿಮಗೆ ಖುಷಿಯಾಗಲಿದೆ. ವಿವಾದವನ್ನು ಮಾಡಿಕೊಳ್ಳಲು ಮನಸ್ಸಾಗದು. ವಿಶ್ವಾಸವನ್ನು ಉಳಿಸಿಕೊಳ್ಳುವ ಬಗ್ಗೆ ನಿಮ್ಮ ಪ್ರಯತ್ನ ಇರುವುದು.

ವೃಶ್ಚಿಕ ರಾಶಿ : ಎಲ್ಲವನ್ನೂ ಸಂಭ್ರಮಿಸಿದರೆ ಯಾವುದೂ ಕಷ್ಟವೆನಿಸದು. ನಿಮ್ಮ‌ ಸಮಾನರಿಗೂ ಕೆಲವು ಸಂದರ್ಭದಲದಲಿ ಗೌರವ ಕೊಡಬೇಕಾಗುವುದು. ನಿಮ್ಮ ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೂ ಆಗದು. ದ್ವಂದ್ವಗಳು ಬಂದಾಗ ಎದುರಿಸುವ ಬಗ್ಗೆ ಯೋಚಿಸಿ. ಆಪ್ತರ ಭೇಟಿಯಾಗುವ ನಿಮ್ಮ ಕಾರ್ಯವು ಸಫಲವಾಗದು. ಅಧಿಕಾರಿ ವರ್ಗ ನಿಮ್ಮ‌ ಮೇಲೆ ಬಂದ ದೂರಿನ ವಿಚಾರಣೆಯನ್ನು ಮಾಡಬಹುದು. ಸ್ತ್ರೀಯರ ಸಖ್ಯವನ್ನು ನೀವು ಮಾಡಿಕೊಳ್ಳುವಿರಿ. ಹಿತಶತ್ರುಗಳನ್ನು ಹಿಮ್ಮೆಟ್ಟಿಸಲು ನಿಮಗೆ ಕೆಲವು ತಂತ್ರಗಳು ಗೊತ್ತಿರುವುದು. ಅದನ್ನು ಪ್ರಯೋಗಿಸುವಿರಿ. ನಿಮ್ಮ ಅಗಾಧ ಜ್ಞಾನದ ಬಗ್ಗೆ ಸ್ಥೈರ್ಯವು ಬೇಕು. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಕೆಲವು ಅನುಭವಗಳು ನಿಮಗೆ ಪಾಠವಾಗಬಹುದು.

ಧನು ರಾಶಿ : ನಿಮಗೆ ಹೊಂದಾಣಿಕೆ ಸ್ವಭಾವವು ಹಿಡಿಸುವುದಿಲ್ಲ. ಕಾನೂನಿಗೆ ಸಮ್ಮತವಾದ ಕಾರ್ಯವನ್ನು ಮಾಡುವಿರಿ. ಸುಖವಾಗಿರಲು ಬೇಕಾದ ಎಲ್ಲ ಮಾರ್ಗಗಳನ್ನು ಹುಡುಕುವಿರಿ. ಗೊತ್ತಿಲ್ಲದೇ ಮಾತನಾಡುವುದು ನಿಮಗೆ ಶೋಭೆ ತರದು. ವಂಚನೆಯ ಬಲೆಯಲ್ಲಿ ನೀವು ಸಿಕ್ಕಿಕೊಳ್ಳಬಹುದು. ಕಲಹವದಿಂದ ನಿಮಗೆ ತೃಪ್ತಿ ಸಿಕ್ಕರೂ ಇತರರ ಪಾಡನ್ನೂ ಗಮನಿಸಿ. ನಿಮ್ಮವರನ್ನು ರಕ್ಷಿಸಿಕೊಳ್ಳಲು ಬಹಳ ಪ್ರಯತ್ನ ಪಡುವಿರಿ. ನೀವು ಬಯಸಿದ್ದನ್ನು ಪಡೆದುಕೊಂಡು ನೆಮ್ಮದಿಯಾಗಿ ಇರಲಾರಿರಿ. ಮನೆಯವರ ವೈರವನ್ನು ಕಟ್ಟಿಕೊಂಡು ಏನು ಸಾಧಿಸುವಿರಿ.‌ ಸಂಗಾತಿಯ ಪ್ರೀತಿಯನ್ನು ನೀವು ಉಳಿಸಿಕೊಳ್ಳಲು ಪ್ರಯತ್ನಿಸುವಿರೊ. ಬಂಧುಗಳು ನಿಮ್ಮನ್ನು ಮನೆಗೆ ಆಹ್ವಾನಿಸಬಹುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಆಸಕ್ತಿಯು ಕಡಿಮೆ ಆಗಬಹುದು. ಯಾರಮೇಲೂ ಒತ್ತಡಬೇಡ. ಸಂಗಾತಿಯ ಮಾತುಗಳು ನಿಮಗೆ ಅನಿರೀಕ್ಷಿತ ಆದೀತು. ಅನಪೇಕ್ಷಿತ ಖರ್ಚನ್ನು ನಿಯಂತ್ರಣಕ್ಕೆ ತರಬೇಕು. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ.

ಮಕರ ರಾಶಿ : ಸಾಲವನ್ನು ತೀರಿಸುವ ಬಗ್ಗೆ ಸಣ್ಣ ಪ್ರಯತ್ನವನ್ನಾದರೂ ಮಾಡಿ. ಇಂದು ನೀವು ಬೇರೆಯವರ ಕಷ್ಟಕ್ಕೆ ಸ್ಪಂದಿಸಬೇಕಾಗಬಹುದು. ಆರ್ಥಿಕ ಮೂಲವು ಕೈತಪ್ಪಿ ಹೋಗಬಹುದು. ಕನಸನ್ನು ನನಸಾಗಿಸಲು ನಿಮ್ಮ ಪ್ರಯತ್ನ ಅತಿಮುಖ್ಯವಾಗುವುದು. ಎಲ್ಲವೂ ಸರಿಯಿದ್ದರೂ ಮತ್ತೆಲ್ಲೋ ತಪ್ಪನ್ನು ಕಂಡುಕೊಳ್ಳುವಿರಿ. ನಿಮ್ಮ‌ ನಿಯಮವನ್ನು ಪಾಲಿಸಿದ್ದು ನಿಮಗೆ ಖುಷಿ ಕೊಡಬಹುದು. ಮಕ್ಕಳ ವಿದ್ಯಾಭ್ಯಾಸದಿಂದ ನಿಮಗೆ ಅಲ್ಪ ಪ್ರಮಾಣದಲ್ಲಿ ಖುಷಿ ಕಾಣಿಸುವುದು. ನಿಮಗೆ ಒತ್ತಡದಲ್ಲಿ ಕೆಲಸ ಮಾಡುವುದು ಅಭ್ಯಾಸವಾಗಿ ಹೋಗಿದೆ. ತಾಯಿಯಿಂದ ಅತಿಯಾದ ಸಹಕಾರವನ್ನು ಬಯಸುವಿರಿ. ಜನರ ಜೊತೆ ಬೆರೆಯಲು ನಿಮಗೆ ಇಂದು ಸಮಯ ಸಾಕಾಗದು. ಸಂಗಾತಿಯನ್ನು ನೀವು ಖುಷಿ‌ಪಡಿಸಲು ಎಲ್ಲಿಗಾದರೂ ಕರೆದುಕೊಂಡು ಹೋಗುವಿರಿ. ಯಾರಿಂದಲೂ ದಿಡೀರ್ ಬದಲಾವಣೆಯನ್ನು ನಿರೀಕ್ಷಿಸುವುದು ಬೇಡ. ಪಾಲುದಾರಿಕೆಯಲ್ಲಿ ಅನವಶ್ಯಕ ವಾದವನ್ನು ಮಾಡಬೇಕಾಗುವುದು. ಉದ್ಯಮವು ಬೆಳವಣಿಗೆಯಿಂದ ಸಂತೋಷವಾಗಲಿದೆ.

ಕುಂಭ ರಾಶಿ : ನಿಮ್ಮ ನಕಾರಾತ್ಮಕ ಆಲೋಚನೆಗಳು ಇತರರಿಗೂ ತಿಳಿದೀತು. ಇಂದು ನಿಮಗೆ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಕಡಿಮೆ ಆಗುವುದು. ಬಂಧುಗಳ ವಿಚಾರದಲ್ಲಿ ನಿಮಗೆ ಸಂಪೂರ್ಣ ಮನಸ್ಥಿತಿಯು ಏಕರೂಪವಾಗಿ ಇರಲಾರದು. ಸಂಬಂಧಗಳನ್ನು ಸಡಿಲ‌ಮಾಡಿಕೊಳ್ಳುವಿರಿ. ನಿಮ್ಮ ವರ್ತನೆಯಿಂದ ನಿಮ್ಮನ್ನು ನೋಡುವ ಕ್ರಮವು ಬದಲಾದೀತು. ಅಧ್ಯಾತ್ಮವು ನಿಮಗೆ ನೆಮ್ಮದಿಯನ್ನು ಕೊಡುವುದು. ಮುಖದಲ್ಲಿ ನಗುವುದು ನಿಮ್ಮ ಎಲ್ಲ ಕೆಲಸಗಳನ್ನು ಮಾಡಿಸಿಕೊಡುವುದು. ಇನ್ನೊಬ್ಬರ ಸುಖಕ್ಕಾಗಿ ನೀವು ಸುಖವನ್ನು ತ್ಯಾಗಮಾಡಬೇಕಾಗುವುದು. ಜ್ಞಾನದ ಬಗ್ಗೆ ನಿಮಗೆ ಅರಿವು ಕಡಿಮೆ ಇರುವುದು ಗೊತ್ತಾಗುವುದು. ವಿನಾ ಕಾರಣ ಕಾಲಹರಣ ಮಾಡಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಸ್ವಾಭಿಮಾನವೇ ನಿಮ್ಮನ್ನು ಮುನ್ನುಗ್ಗಲು ಬಿಡದು.

ಮೀನ ರಾಶಿ : ನಿಮಗೆ ಯಾವುದೇ ಕಟ್ಟುಪಡುಗಳಲ್ಲಿ ಇರಲು ಮನಸ್ಸಾಗದು. ಇಂದು ನಿಮ್ಮ ಉದ್ಯೋಗದಲ್ಲಿ ಉತ್ತಮ ಪ್ರಗತಿಯು ಇರುವುದು. ಭವಿಷ್ಯದ ಬಗ್ಗೆ ನಿಮಗಿರುವ ಕಲ್ಪನೆಯು ಬದಲಾಗಬಹುದು. ‌ಹಣಕಾಸಿನ ವಿಚಾರದಲ್ಲಿ ನೀವು ಬಹಳ ಕಾಳಜಿಯನ್ನು ವಹಿಸಬೇಕಾಗುವುದು. ಅತಿಯಾದ ಬುದ್ಸದಿವಂತಿಕೆಯನ್ನು ತೋರಿಸಲು ಹೋಗಿ ಮುಗ್ಗರಿಸಬಹುದು. ವಾಹನಕ್ಕಾಗಿ ಖರ್ಚು ಮಾಡುವ ಸ್ಥಿತಿಯು ಬರಬಹುದು. ಸಹಾಯವನ್ನು ಯಾರಾದರೂ ಕೇಳುವರು. ಒಂಟಿಯಾಗಿ ಇರಲು ನೀವು ಇಂದು ಹೆಚ್ಚು ಇಷ್ಟಪಡಬಹುದು. ಭೂಮಿಗೆ ಸಂಬಂಧೊಟ್ಟ ಕಲಹವು ತಾತ್ಕಾಲಿಕವಾಗಿ ನಿಲ್ಲುವುದು. ಏನನ್ನಾದರೂ ಯೋಚಿಸುವ ಬದಲು ಆಗಬೇಕಾದ ಕೆಲಸದ‌ ಕಡೆ ಗಮನಕೊಡುವುದು ಮುಖ್ಯವಾಗುವುದು. ಹಳೆಯ ಕಡತಗಳನ್ನು ನೀವು ವಿಲೇವರಿ ಮಾಡುವಿರಿ. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ