Daily Horoscope 09 October 2024: ಸಾಮೂಹಿಕ ಕಾರ್ಯದಿಂದ ನಿಮಗೆ ಯಶಸ್ಸು ಸಿಗಬಹುದು

ಇಂದು ಕೂಡ ಕಾಲರಾತ್ರಿಯ ಆರಾಧನೆಯ ದಿನ. ಸಪ್ತಮಿಯು ಎರಡು ದಿನ ಬಂದ‌ಕಾರಣ ಎರಡು ದಿನವೂ ಪೂಜಿಸುವುದು ಕ್ರಮ. ಶತ್ರುತ್ವವನ್ನು ಇಲ್ಲವಾಗಿಸುವ, ಶತ್ರುಗಳಿಗೆ ಭಯವನ್ನು ಹುಟ್ಟಿಸುವಂತೆ ಮಾಡುವ ಘೋರರೂಪ ಕಾಲರಾತ್ರಿ. ಅಂತರಂಗ ಹಾಗೂ ಬಹಿರಂಗ ಶತ್ರುಗಳ ಸಂಹಾರಕ್ಕೆ ಅತಿಪ್ರಶಸ್ತಳಾದ ದೇವಿ ಇವಳು. ಮನಃಪೂರ್ವಕವಾಗಿ ಧ್ಯಾನಿಸಿದರೆ, ಎಲ್ಲವನ್ನೂ ನೀಡುವಳು.

Daily Horoscope 09 October 2024: ಸಾಮೂಹಿಕ ಕಾರ್ಯದಿಂದ ನಿಮಗೆ ಯಶಸ್ಸು ಸಿಗಬಹುದು
ದಿನಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 09, 2024 | 12:00 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶೋಭನ​, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ12:20 ರಿಂದ 01:49, ಯಮಘಂಡ ಕಾಲ ಬೆಳಗ್ಗೆ 07:53ರಿಂದ 09:22ರವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:20 ರವರೆಗೆ.

ಮೇಷ ರಾಶಿ : ಇಂದು ನಿಮ್ಮ‌ ಜೊತೆಗಾರರ ವರ್ತನೆಯ ಮೇಲೆ ಅನುಮಾನವು ಬರಬಹುದು. ತಂದೆಯಿಂದ ನಿಮಗೆ ಆರ್ಥಿಕ ಸಹಾಯವಾಗಲಿದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡಲ್ಲಿ ಕೆಲಸದಲ್ಲಿ ಪ್ರಗತಿ ಇರಲಿದೆ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕೆಲವು ಮಾರ್ಪಾಡುಗಳು ಆಗಬಹುದು. ಮಕ್ಕಳಿಂದ ಆಗುವ ಅಸಮಾಧಾನವನ್ನು ನೀವು ಸಹಿಸಿಕೊಳ್ಳಲಾರಿರಿ. ಕೆಲವು ಸಂಗತಿಗಳು ನಿಮಗೆ ಗೊತ್ತಾಗದಿದ್ದರೇ ಉತ್ತಮ. ನಿಮ್ಮ ಉದ್ಯೋಗಕ್ಕೆ ಬರವ ಅಡೆತಡೆಗಳನ್ನು ಸರಿಮಾಡಿಕೊಂಡು ಮುನ್ನಡೆಯುವಿರಿ. ಯುವಕರಿಗೆ ಸರಿಯಾದ ಮಾರ್ಗರ್ಶನದವು ಸಿಗದೇ ಕಷ್ಟಪಡುವಿರು. ವಾಹನ ಖರೀದಿಯ ವ್ಯವಹಾರವು ನಿಮಗೆ ಸರಿಯಾಗಿ ಮುಕ್ತಾಯವಾಗದು. ಸಹೋದರರ ನಡುವೆ ಆಪ್ತತೆಯು ಹೆಚ್ಚಾಗಬಹುದು. ನಿಮ್ಮ ಕೈತಪ್ಪಿ ಹೋದುದನ್ನು ಪುನಃ ಸ್ವಾಧೀನ ಮಾಡಿಕೊಳ್ಳುವಿರಿ. ಹಳೆಯ ಗೆಳೆಯರ ಸಂಪರ್ಕವು ಅನಿವಾರ್ಯವಾಗಿ ಆಗುವುದು. ಹೂಡಿಕೆಯಲ್ಲಿ ಹಿನ್ನಡೆ ಸಾಧ್ಯತೆ ಇದೆ. ಇದರ ಕೋಪವನ್ನು ಯಾರೆದುರೂ ಪ್ರಕಟಿಸುವುದು ಬೇಡ.

ವೃಷಭ ರಾಶಿ : ಗಳಿಕೆಗಿಂತ ಕಳೆದುಕೊಂಡಿದ್ದು ಅಧಿಕವಾಗಿ ಕಾಣಿಸುವುದು. ನಿಮಗೆ ಬೇಕಾದಷ್ಟು ಸೌಲಭ್ಯಗಳಿದ್ದರೂ ಕೊರತೆ ಎನಿಸಬಹುದು. ಬಹಳ ದಿನಗಳ ಅನಂತರ ದೂರಪ್ರಯಾಣವನ್ನು ಮಾಡಲು ಹೊರಟಿರುವಿರಿ. ಪುಣ್ಯಸ್ಥಳಗಳ ದರ್ಶನವನ್ನು ಮಾಡಲು ಇಚ್ಛಿಸುವಿರಿ. ಸಾಮಾಜಿಕ ಕಾರ್ಯಗಳು ನಿಮಗೆ ಯಶಸ್ಸನ್ನು ತಂದುಕೊಡಲಿವೆ. ಆರ್ಥಿಕ ಲೆಕ್ಕಾಚಾರವು ನಿಮ್ಮನ್ನು ಬಿಡಮೇಲು ಮಾಡಬಹುದು. ವೃತ್ತಿಯಲ್ಲಿ ನಿಮಗೆ ಭಯವು ಆರಂಭವಾಗಿದ್ದು ಆಪ್ತರ ಜೊತೆ ಹಂಚಿಕೊಳ್ಳಿ. ನಿಮ್ಮ ಸಾಮರ್ಥ್ಯವು ಎಲೆ‌ಮರೆಯ ಕಾತಿಯಂತೆ ಇರಲಿದೆ. ಪ್ರೇಮವನ್ನು ಹೇಳಿಕೊಳ್ಳಲು ನೀವು ಹಿಂದೇಟು ಹಾಕುವಿರಿ. ಆಪತ್ಕಾಲಕ್ಕೆ ಇಟ್ಟ ಹಣವನ್ನು ಖರ್ಚು ಮಾಡಿಕೊಳ್ಳುವಿರಿ. ಮಕ್ಕಳ ವಿಚಾರದಲ್ಲಿ ನೀವು ದುರ್ಬಲರಾಗುವಿರಿ. ಉತ್ತರಿಸಿ ಇನ್ನಷ್ಟು ಹತಾಶರಾಗಬೇಡಿ. ಪ್ರಭಾವಿ ವ್ಯಕ್ತಿಗಳ ಆಕಸ್ಮಿಕ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು.

ಮಿಥುನ ರಾಶಿ : ಎಲ್ಲದರಲ್ಲಿಯೂ ಋಣಾತ್ಮಕತೆಯನ್ನು ನೋಡಿದರೆ ಯಶಸ್ಸು ನಿಮಗೆ ಸಿಗುವುದು ಕಷ್ಟವಾಗಬಹುದು. ಪ್ರಭಾವಿಗಳ ಜೊತೆ ನೀವು ಪ್ರಯಾಣ ಮಾಡುವಿರಿ. ಉದ್ಯೋಗದಲ್ಲಿ ಮನಸ್ತಾಪ ಬಂದು ನೀವು ಆ ಉದ್ಯೋಗವನ್ನು ಬಿಡುವಿರಿ. ಮೇಲಧಿಕಾರಿಗಳ ಜೊತೆ ವಾಗ್ವಾದ ಬೇಡ. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಆಗದೇ ಇರುತ್ತವೆ. ನೀವು ಹೇಳಬೇಕಾದ ವಿಷಯಗಳನ್ನು ಇನ್ನೊಬ್ಬರಿಗೆ ಹೇಳುವಿರಿ. ಮರೆವು ನಿಮಗೆ ಬಹಳ ತೊಂದರೆಯನ್ನು ಕೊಟ್ಟೀತು. ಉದ್ಯಮವನ್ನು ಮಾಡುವ ಮೊದಲು ಅದರ ವ್ಯಾಪ್ತಿಯನ್ನು ಅರ್ಥಮಾಡಿಕೊಳ್ಳಿ. ಅಪರಿಚಿತರ ಕರೆಯಿಂದ ನಿಮಗೆ ಕಷ್ಟವು ಬರಬಹುದು. ನಿಮಗೆ ಏಕಾಂತ ಬೇಕೆನಿಸಿ ದೂರ ಎಲ್ಲಿಯಾದರೂ ಹೋಗುವ ಮನಸ್ಸು ಮಾಡುವಿರಿ. ಸಜ್ಜನರ ಸಹವಾಸವು ನಿಮ್ಮ ಅಹಂಕಾರದಿಂದ ಇರುವ ಕಾರಣ ಸಿಗದು. ಯಾವುದಾದರೂ ಒಂದಕ್ಕೆ ನೀವು ನಿಮ್ಮನ್ನು ಅರ್ಪಿಸಿಕೊಳ್ಳುವುದು ಸೂಕ್ತ. ಸಾಮೂಹಿಕ ಕಾರ್ಯದಿಂದ ನಿಮಗೆ ಯಶಸ್ಸು ಸಿಗಬಹುದು. ಸ್ತ್ರೀಯರಿಗೆ ಖಾಸಗಿ ಸಂಸ್ಥೆಯಲ್ಲಿ ಅಧಿಕಾರ ಸಿಗಲಿದೆ. ಯಾವುದನ್ನೂ ಕೆಲವರ ಮಾತಿನ ಮೇಲೆ ನಂಬಲಾಗದು.

ಕರ್ಕಾಟಕ ರಾಶಿ : ನಿಮ್ಮ ಇಂದಿನ ಮಧ್ಯ ಯಾವ ಪಕ್ಷಪಾತವನ್ನೂ ತೋರಿಸದು. ಸ್ವಂತ ಉದ್ಯೋಗಸ್ಥರಿಗೆ ಲಾಭವಾಗುವುದು. ಸರ್ಕಾರದ ಅಧಿಕಾರಿಗಳು ನಿಮ್ಮನ್ನು ಪೀಡಿಸಬಹುದು. ಸ್ವತಂತ್ರವಾಗಿದ್ದರೂ ಏನನ್ನಾದರೂ ಕಳೆದುಕೊಳ್ಳುತ್ತೇನೆ ಎಂಬ‌ ಭಯವು ಇರುವುದು. ಜೀವನದಲ್ಲಿ ಜುಗುಪ್ಸೆ ಬಂದಂತೆ ವರ್ತಿಸುವಿರಿ. ಮಕ್ಕಳಿಂದ ನೀವು ಪೀಡಿತರಾಗುವಿರಿ. ದಾಂಪತ್ಯದ ಬಿರುಕನ್ನು ನೀವು ಸರಿಮಾಡಲು ಅರ್ಹರು. ಹೊಸತನ್ನು ಕಲಿಯುವ ಆಸೆಯಿದ್ದು ಅವಕಾಶವನ್ನು ಹುಡುಕುವಿರಿ. ಯಾವುದೂ ಜಾದೂವಿನಂತೆ ಆಗದು. ಸಮಯವನ್ನು ನಿರೀಕ್ಷಿಸುವ ತಾಳ್ಮೆಯನ್ನು ಬೆಳೆಸಿಕೊಳ್ಳಬೇಕು. ನಿಮ್ಮ ಕುಲದಿಂದ‌ ಗೌರವವು ಸಿಗಬಹುದು. ಅಧಿಕಾರಯುತವಾದ ಮಾತು ಲೆಕ್ಕಕ್ಕೆ ಬಾರದು. ಹೊಸ ಆರಂಭದಲ್ಲಿ ವೇಗವನ್ನು ಪಡೆದುಕೊಳ್ಳುವುದು. ಅಕ್ರಮ ಆಸ್ತಿಯಿಂದ‌ ತೊಂದರೆಯಾಗಬಹುದು. ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರುವಿರಿ. ತೋರಿಕೆಗೆ ಮಾಡುವ ಕೆಲಸದಲ್ಲಿ ನಿಮಗೆ ಸಂತೋಷ ಸಿಗದು. ‌ಬೇಕಾದ ವಸ್ತುವುದು ನಿಮಗೆ ಸಿಗದೇಹೋಗಬಹುದು.

ಸಿಂಹ ರಾಶಿ : ಪರೋಪಕಾರವು ಉತ್ತಮವಾದ ಗುಣವಾದರೂ ಅದು ವಿಷಕಾರಿ ಸರ್ಪದಂತೆ ಆಗಬಹುದು. ಬಹು ದಿನಗಳ ವಿವಾಹದ ಚಿಂತೆಯು ನಿಮ್ಮಿಂದ ದೂರಾಗುವುದು. ಲಾಭವು ಇಲ್ಲದ ಪ್ರಯಾಣವು ನಿಮಗೆ ಬೇಸರವನ್ನು ತರಿಸಬಹುದು. ನಿಮಗೆ ಪ್ರಶಂಸೆಯ ಜೊತೆ ಹೆಚ್ಚಿನ ಜವಾಬ್ದಾರಿಗಳೂ ಬರಬಹುದು. ಮಕ್ಕಳಿಂದ ನಿಮಗೆ ಪ್ರೀತಿ ಸಿಗಬಹುದು. ಪ್ರಯಾಣದ ಆಯಾಸವನ್ನು ಪರಿಹರಿಸಿಕೊಳ್ಖುವುದು ನಿಮಗೆ ಕಷ್ಟವಾದೀತು. ಇಬ್ಬರೂ ಒಪ್ಪಿಕೊಂಡ ಸಂಗಾತಿಗಳು ದೂರವಾಗುವ ಸಾಧ್ಯತೆಯೂ ಇದೆ. ಜೊತೆಗಾರರು ನಿಮ್ಮ ಕಂಡು ಹಾಸ್ಯ ಮಾಡಬಹುದು. ಸಂಗಾತಿಗಾಗಿ ಏನನ್ನಾದರೂ ಕೊಡಬೇಕು ಎನಸಿಬಹದು. ಅಧಿಕ ಖರ್ಚನ್ನು ನೀವು ನಿಯಂತ್ರಿಸುವುದು ಒಳ್ಳೆಯದೇ. ಸಮಯವನ್ನು ನೋಡಿಕೊಂಡು ನೀವು ಮುಂದುವರಿಯುವುದು ಯೋಗ್ಯವಿದೆ. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು. ನೀವು ವಿನಾಕಾರಣ ಯಾರನ್ನೂ ಇಷ್ಟಪಡಲಾರಿರಿ.

ಕನ್ಯಾ ರಾಶಿ : ನಿಮ್ಮವರ ಮೇಲೆ ನಿಮಗೆ ಸಂದೇಹವು ಆರಂಭವಾಗುವುದು. ಇಂದು ನಿಮ್ಮ‌ ನಿರೀಕ್ಷಿತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಹೆಚ್ಚು ಒತ್ತಡದಿಂದ ಇರುವಿರಿ. ಮಾತನಾಡುವಾಗ ಹೆಚ್ಚು ಸ್ಪಷ್ಟತೆ ಇರಲಿ. ಹಣಕಾಸಿನ ಲೆಕ್ಕಾಚಾರದಲ್ಲಿ ನಿಮಗೆ ಕೆಲವು ಗೊಂದಲಗಳು ಬರಬಹುದು. ಯಾರಾದರೂ ನಿಮ್ಮ ಬಳಿ ಅಮೂಲ್ಯವಾದ ವಸ್ತುಗಳನ್ನು ಜೋಪಾನ ಮಾಡಿ ಇಡಲು ಹೇಳಬಹುದು. ಸಹೋದ್ಯೋಗಿಗಳ ಜೊತೆ ನಿಮ್ಮ ವರ್ತನೆಯು ಸರಿಯಾಗಿ ಇರಲಿ. ಅಧಿಕಲಾಭಕ್ಕಾಗಿ ಏನನ್ನಾದರೂ ಮಾಡಲು ಹೋಗುವುದು ಬೇಡ. ಶತ್ರುಗಳು ನಿಮ್ಮ ಕಾರ್ಯವನ್ನು ತಪ್ಪಿಸಲು ಹುಟ್ಟಿಕೊಳ್ಳಬಹುದು. ವಿದ್ಯಾರ್ಥಿಗಳು ಮನೆಯವರು ಹಾಕಿಕೊಟ್ಟ ಚೌಕಟ್ಟನ್ನು ಮೀರಲಾರರು. ನಿಮ್ಮ ವಿದ್ಯೆಗೆ ಯೋಗ್ಯವಾದ ಉದ್ಯಮವನ್ನು ಅನ್ವೇಷಣೆ ಮಾಡುವಿರಿ. ನಿಮ್ಮ‌ ನಿಜಸ್ವರೂಪ ಗೊತ್ತಾಗಬಹುದು. ನಿಮ್ಮ ಸಂಬಂಧಿಕರಿಂದ ಭವಿಷ್ಯಕ್ಕೆ ಉತ್ತಮ ಸಲಹೆಯನ್ನು ಪಡೆಯಬಹುದು.

ತುಲಾ ರಾಶಿ : ಮನೆಯಲ್ಲಿ ಯಾರಾದರೂ ನಿಮ್ಮನ್ನೇ ಗುರಿಯಾಗಿಸಿಕೊಂಡು ಮಾತನಾಡಬಹುದು. ತುರ್ತಾಗಿ ಸ್ಥಳ ಬದಲಾವಣೆ ಮಾಡಬೇಕಾಗಬಹುದು. ಬಹು ದಿನಗಳಿಂದ ಇದ್ದ ನಿರುದ್ಯೋಗ ಸಮಸ್ಯೆಯು ಇಂದು ದೂರಾಗಿ, ಬೇಸರವೂ ಕಳೆಯಬಹುದು. ಭೂಮಿಯು ಲಾಭವಾಗುವಂತೆ ಇದ್ದರೂ ಕೈ ತಪ್ಪಿ ಹೋಗಬಹುದು. ನಿಮ್ಮ ಸ್ವಭಾವವು ಇತರರಿಗೆ ಕಿರಿಕಿರಿ ತರಿಸಬಹುದು. ಒಳ್ಳೆಯ ವಸ್ತುವಿನ ಲಾಭವಾಗುವುದು. ಅವ್ಯವಹಾರದಿಂದ ಭಯವಾಗಬಹುದು. ಯಾರನ್ನೂ ನೀವು ಕೆಳಮಟ್ಟದಲ್ಲಿ ಕಾಣಲು ಬೇಡ. ಉನ್ನತ ವ್ಯಾಸಂಗಕ್ಕಾಗಿ ನೀವು ಸ್ನೇಹಿತನ‌ ಜೊತೆ ತರಳುವಿರಿ. ಸ್ಥಾನಚ್ಯುತಿಯ ಭಯವು ನಿಮ್ಮನ್ನು ಕಾಡಬಹುದು.‌ಮನೆಯ ಸಂದರ್ಭವನ್ನು ನೆನೆದು ದುಃಖಿಸಬಹುದು. ಬಂಧುಗಳು ನಿಮ್ಮನ್ನು ಅಳೆಯಬಹುದು. ಇಂದು ನೀವು ಕೆಲಸದಿಂದ ವಿರಾಮವನ್ನು ಪಡೆಯುವ ಯೋಚನೆ ಬರುವುದು. ಸ್ನೇಹಿತರ ಅಸಹಕಾರವು ನಿಮಗೆ ಬೇಸರ ಕೊಡಬಹುದು.

ವೃಶ್ಚಿಕ ರಾಶಿ : ವಿದ್ಯಾರ್ಥಿಗಳು ಅಭ್ಯಾಸದ ವಿಷಯದಲ್ಲಿ ಮೈಮರೆಯಬಹುದು. ಇಂದು ನೀವು ಮಾಡುವ ಕಾರ್ಯದಲ್ಲಿ ವಿಳಂಬವು ಕಾಣಿಸುವುದು. ಅಸೂಯೆಯು ನಿಮ್ಮ ಇತರ ಕೆಲಸಗಳನ್ನು ನಷ್ಟ ಮಾಡಿಸುವುದು. ಸ್ನೇಹಿತರ ಸಹಾಯವು ನಿಮಗೆ ಬಲವನ್ನು ತಂದುಕೊಡುವುದು. ಪ್ರಭಾವೀ ವ್ಯಕ್ತಿಗಳು ನಿಮ್ಮನ್ನು ಆಕರ್ಷಿಸಬಹುದು. ದಾಂಪತ್ಯದಲ್ಲಿ ಮಧುರ ಕ್ಷಣಗಳು ಇರಲಿವೆ. ಎಲ್ಲವನ್ನೂ ತಿಳಿದುಕೊಂಡೂ ನೀವು ಮುಂದೆ ಸಾಗಲು ಭಯಪಡುವಿರಿ. ಕೆಲವರ ಮಾತು ನಿಮ್ಮನ್ನು ನಿಷ್ಕ್ರಿಯಗೊಳಿಸಬಹುದು. ವ್ಯಾಪಾರವನ್ನು ಮಿತವಾದ ಲಾಭದಲ್ಲಿ ಮಾಡಿ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರೆ ನಿಮಗೆ ಅಸಮಾಧಾನದ ವಾತಾವರಣವು ಉಂಟಾಗಬಹುದು. ಕಛೇರಿಯ ಸಮೂಹ ಕಾರ್ಯದಲ್ಲಿ ನೀವು ಪೂರ್ಣವಾಗಿ ಭಾಗಿಯಾಗಲಾರಿರಿ. ಯಾರದೋ ಮಾತಿಗೆ ವಶವಾಗುವ ಸಾಧ್ಯತೆ ಇದೆ. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು. ತಪ್ಪಾದ ಆಚರಣೆಯನ್ನು ಮಾಡುವುದು ಬೇಡ.

ಧನು ರಾಶಿ : ಅಧ್ಯಾತ್ಮದ ಕಡೆಗೆ ನಿಮ್ಮ ಮನಸ್ಸು ಹರಿದರೂ ಸರಿಯಾದ ಮಾರ್ಗದರ್ಶನವೂ ಬೇಕು. ದಾಂಪತ್ಯದಲ್ಲಿ ನಂಬಿಕೆ ದೂರಾಗಬಹುದು. ನಾನಾ ಮಾರ್ಗಗಳಿಂದ ಹಣವು ಬರಬಹುದು. ‌ಉತ್ಸಾಹಕ್ಕೆ ಭಂಗ ಬರುವ ಕಡೆ ನೀವು ಇರಲಾರಿರಿ. ನಿಮ್ಮ ಉದ್ಯೋಗವು ನಿಮಗೆ ಸಾಕೆನಿಸಬಹುದು. ಪ್ರಸಿದ್ಧಿಗಾಗಿ ನೀವು ಹಂಬಲಿಸುವಿರಿ. ನಿಮ್ಮ ಕೆಲಸವನ್ನು ಬಿಟ್ಟು ಇತರರ ಕೆಲಸದ ಕಡೆ ಗಮನ ಹರಿಸುವಿರಿ. ಹೂಡಿಕೆಯಿಂದ ಕೈಯನ್ನು ಸುಟ್ಟುಕೊಳ್ಳಬಹುದು. ಉದ್ಯೋಗದಲ್ಲಿ ಅಧಿಕ ಲಾಭಕ್ಕಾಗಿ ಶ್ರಮಿರಿಸಿದರೂ ಲಾಭವನ್ನು ಪಡೆಯುವುದು ಕಷಗಟವಾದೀತು. ಪ್ರಾಮಾಣಿಕತೆಯಿಂದ ನಿಮಗೆ ಉನ್ನತ ಸ್ಥಾನವು ಸಿಗಬಹುದು. ಸಂಗಾತಿಯ ವಿಚಾರದಲ್ಲಿ ನಿಮಗೆ ಗೊಂದಲವು ಬರಬಹುದು. ನಿಮಗೆ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸಲು ನಿಮಗೆ ಕಷ್ಟವಾದೀತು. ಯಾವುದಾದರೂ ಒಂದು ಮಿತಿಯಲ್ಲಿ ಇದ್ದರೆ ಚೆಂದ. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಕೊಡುವುದು.

ಮಕರ ರಾಶಿ : ಮನೆಯಲ್ಲಿ ನಡೆಯುವ ಮಂಗಳ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಸ್ವಪ್ರತಿಷ್ಠೆಯಿಂದ ಎಲ್ಲವನ್ನೂ ಹಾಳು ಮಾಡಿಕೊಳ್ಳುವಿರಿ. ಹಿರಿಯರೆದುರು ತಗ್ಗಿ ಬಗ್ಗಿ ನಡೆಯುವುದು ಒಳ್ಳೆಯದು. ದೇವತಾಕಾರ್ಯಗಳಲ್ಲಿ ಆಸಕ್ತಿಯು ಇದ್ದರೂ ಕಾರಣಾಂತರಗಳಿಂದ ಅದು ಸಾಧ್ಯವಾಗದು. ಯಾರಾದರೂ ನಿಮ್ಮ ಮೇಲೆ ಹೆಚ್ಚು ಪ್ರಭಾವ ಬೀರಬಹುದು. ಕಛೇರಿಯಲ್ಲಿ ಅಧಿಕಾರಿಗಳ ನಿಮ್ಮ ಕಾರ್ಯಕ್ಕೆ ಸಂಬಂಧಿಸಿದಂತೆ ವಾದ ಮಾಡಬಹುದು. ಸಾಲವನ್ನು ಕೊಡಲು ಹೋಗುವುದು ಬೇಡ. ಸಹೋದರರಿಗೆ ಮಾರ್ಗದರ್ಶನ ನೀಡಿ ಮತ್ತು ಅವರ ಅಗತ್ಯಕ್ಕೆ ಅನುಗುಣವಾಗಿ ಅವರನ್ನು ಬೆಂಬಲಿಸಿ. ನಿಮ್ಮ ಸಂಬಂಧಗಳು ಬಳಕೆಯಲ್ಲಿ ಇಲ್ಲದೇ ದೂರವಾಗುವುದು. ಬುದ್ಧಿಪೂರ್ವಕವಾಗಿ ತಪ್ಪುಗಳನ್ನು ಮಾಡಿ ಪಶ್ಚಾತ್ತಪಪಡುವಿರಿ. ಯಾರಿಗೂ ನೀವು ಸುಲಭವಾಗಿ ಸ್ಪಂದಿಸಲಾರಿರಿ. ಸಕಾರಾತ್ಮಕ ಅಂಶಗಳನ್ನು ಸ್ವೀಕರಿಸಲು ಸಿದ್ಧರಿರಿ. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವುದು ನಿಮಗೆ ಖುಷಿ ಕೊಡುವುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು.

ಕುಂಭ ರಾಶಿ : ನಿಮ್ಮ ಆಲೋಚನೆಗಳಿಗೆ ಸರಿಹೊಂದುವವರ ಜೊತೆ ಸಖ್ಯವಾಗಲಿದೆ. ನಿಮಗೆ ಇಂದು ದೇಹಾರೋಗ್ಯವು ಕ್ಷೀಣಿಸಿದಂತೆ ಭಾಸವಾಗುವುದು. ಕೋಪದಲ್ಲಿ ಏನನ್ನಾದರೂ ಹೇಳಬಹುದು.‌ ಜಾಗ್ರತೆ. ದೂರದೃಷ್ಟಿಯಿಂದ ಮುಂಬರುವ ತೊಂದರೆಯನ್ನು ತಡೆಗಟ್ಟುವಿರಿ. ಭವಿಷ್ಯದ ಬಗ್ಗೆ ಅಸ್ಪಷ್ಟವಾದ ಚಿಂತೆಯು ಇರಲಿದೆ. ಯಂತ್ರಗಳ ವ್ಯಾಪಾರಿಗಳಿಗೆ ಲಾಭದಾಯಕ ದಿನ ಇಂದು‌. ನಿಮ್ಮ ಅಸತ್ಯದ ಮಾತುಗಳು ಯಾರಿಗೂ ಸಂದೇಶವನ್ನು ಉಂಟುಮಾಡದು. ಇಂದು ನಿಮ್ಮ ಪರಿಶ್ರಮವು ವ್ಯರ್ಥವಾಗಬಹುದು. ಯಾರಾದರೂ ಏನನ್ನಾದರೂ ಕೊಡಲು ಬಂದರೆ ನಿರಾಕರಿಸಿ. ಹಿತಶತ್ರುಗಳಿಗೆ ನಿಮ್ಮ ಯಶಸ್ಸನ್ನು ಸಹಿಸಲಾಗದು. ವ್ಯರ್ಥವಾದ ಚರ್ಚೆಗಳಿಂದ ಸಮಯವನ್ನು ಕಳೆಯುವಿರಿ. ನಿಮ್ಮ ಆಲೋಚನೆಯನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ಸಂಗಾತಿಯ ಜೊತೆಗೆ ಪ್ರೀತಿಯ ಸಲ್ಲಾಪವು ಕಾಣಿಸುವುದು. ವಿಷಯದಲ್ಲಿ ನೀವು ಗೊಂದಲವಿರಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವ್ಯವಸ್ಥೆಯನ್ನು ಮಾಡಿಕೊಡಬೇಕಾಗಬಹುದು.

ಮೀನ ರಾಶಿ : ನಿಮ್ಮ ದೌರ್ಬಲ್ಯವೇ ಶಕ್ತಿಯ ಕೇಂದ್ರವೂ ಆಗಬಹುದು. ರಾಜಕೀಯ ಕ್ಷೇತ್ರದಲ್ಲಿ ಕಾದಾಟ, ವಾಗ್ವಾದಗಳು ಅಧಿಕವಾಗಿ ಇರಲಿವೆ. ಬೇಸರದಿಂದ ಹೊರಬರಲು ನಿಮಗೆ ಕಷ್ಟವಾದೀತು. ನಕಾರಾತ್ಮಕ ಆಲೋಚನೆಗಳೇ ನಿಮ್ಮ ಮನಸ್ಸಿನಲ್ಲಿ ಓಡಾಡುತ್ತವೆ. ಒತ್ತಡದಿಂದ ಕೆಲಸವನ್ನು ಮಾಡಬೇಕಾಗಬಹುದು. ಅಧಿಕಾರಿಗಳಿಂದ ಮೆಚ್ಚುಗೆ ಗಳಿಸುವ ಸಾಧ್ಯತೆ ಇದೆ. ಸ್ತ್ರೀಯರ ಸಹಾಯದಿಂದ ಜವಾಬ್ದಾರಿಯನ್ನು ಮುಗಿಸುವಿರಿ. ಮಕ್ಕಳ ಬಗ್ಗೆ ಹೆಚ್ಚು ಗಮನ ಅಗತ್ಯ. ಯಾರನ್ನು ನೆಚ್ಚುವಿರಿ ಎನ್ನುವುದರ ಮೇಲೆ ನಿಮ್ಮ ಜೀವನಕ್ಕೆ ದಾರಿ ಗೊತ್ತಾಗಲಿದೆ. ತಿಳಿವಳಿಕೆ ಇಲ್ಲದವರ ಮುಂದೆ ನಿಮ್ಮ ಉದ್ಯಮವನ್ನು ಹೇಳಿ ಪ್ರಯೋಜನವಿಲ್ಲ. ಯಾರದೋ ತಪ್ಪನ್ನು ನೀವು ಸರಿ ಮಾಡಬೇಕಾದೀತು. ಆಪದ್ಧನವನ್ನು ಕೂಡಿಡುವುದು ಒಳ್ಳೆಯದು. ಮೋಸಹೋಗುವ ಸಾಧ್ಯತೆ ಇದೆ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು. ನಿಮ್ಮ ಪ್ರಮುಖ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..