Daily Horoscope 13 October 2024: ನಿಮ್ಮ ವಿರುದ್ಧ ವಂಚನೆಯ ಆರೋಪವು ಬರಬಹುದು

ಅಕ್ಟೋಬರ್ 13,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ಹೊಸ ಜವಾಬ್ದಾರಿಗಳನ್ನು ನಿರ್ವಹಿಸುವ ಉತ್ಸಾಹದಲ್ಲಿ‌ ಇರುವಿರಿ. ವ್ಯವಹಾರದ ವಿಚಾರದಲ್ಲಿ ಪೂರ್ವಾಪರ‌ ವಿವೇಚನೆಯಿಂದ ಮುಂದುವರಿಯುವುದು ಉತ್ತಮ. ಸ್ತ್ರೀಯರಿಂದ ಅಪಮಾನವಾಗಬಹುದು. ವಿಳಂಬವಾಗಿ ಬರುತ್ತದೆ ಎಂದುಕೊಂಡ ಧನವು ಬೇಗ ಬರುವುದು. ಹಾಗಾದರೆ ಇಂದಿನ (2024 ಅಕ್ಟೋಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 13 October 2024: ನಿಮ್ಮ ವಿರುದ್ಧ ವಂಚನೆಯ ಆರೋಪವು ಬರಬಹುದು
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2024 | 12:08 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಶೂಲಿ​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 04:44 ರಿಂದ 06:13, ಯಮಘಂಡ ಕಾಲ ಮಧ್ಯಾಹ್ನ 12:19ರಿಂದ 01:47ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:16 ರಿಂದ 04:44 ರವರೆಗೆ.

ಮೇಷ ರಾಶಿ : ಶಾಂತವಸದ ಮನಸ್ಸು ಇಂದು ಕದಡಬಹುದು. ಕಾರ್ಯವನ್ನು ಚೆನ್ನಾಗಿ ನಿರ್ವಹಿಸಿದರೂ ಕೊನೆಯಲ್ಲಿ ಏನಾದರೂ ಮಾಡಿಕೊಳ್ಳುವಿರಿ. ಇಂದು ನಿಮಗೆ ಸಹಾಯದ ಮನೋಭಾವವು ಅಧಿಕವಾಗಿ ಇರಲಿದೆ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದೇ ಮನೆಯಲ್ಲಿ ಬೈಗುಳವನ್ನು ತಿನ್ನುವಿರಿ. ಪ್ರೇಮವು ನಿಮಗೆ ಸಾಕೆನಿಸಬಹುದು. ವಾಹನದಿಂದ ಅಪಘಾತವಾಗುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುವುದು. ನಿಮ್ಮ ಆತ್ಮವಿಶ್ವಾಸದಲ್ಲಿ ಕೊರತೆ ಕಾಣಿಸುವುದು. ಎಲ್ಲ ಕಾರ್ಯಗಳಲ್ಲಿಯೂ ಹೆಜ್ಜೆಯನ್ನು ಹಿಂದಿಡುವಿರಿ. ನಿಮ್ಮ ನಿರೀಕ್ಷೆಗೆ ವಿರುದ್ಧವಾದ‌ ಮಾತುಗಳು ಬರಬಹುದು. ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಮೃದು ಮಾತಿನಿಂದ ಹೆಚ್ಚು ಪ್ರಯೋಜನ ಆಗಬಹುದು. ಹೊಸ ಉದ್ಯೋಗವು ಸುಲಭಕ್ಕೆ ಸಿಕ್ಕುವುದು. ಕ್ರೋಧಕ್ಕೆ ವಶವಾಗಬೇಕಾಗುವುದು. ಯಾವುದೇ ಅನಾಹುತಗಳು ಸಂಭವಿಸಿದಂತೆ ಎಚ್ಚರಿಕೆಯೂ ಬೇಕು. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ಬೇಡ ಅಭ್ಯಾಸವು ರೂಡಿಯಾಗುವ ಸಂಭವವಿದೆ.

ವೃಷಭ ರಾಶಿ : ನಂಬಿಕೆಗೆ ದ್ರೋಹವನ್ನು ನೀವೇ ಮಾಡಿಕೊಳ್ಳುವಿರಿ. ನಿಮ್ಮನ್ನು ನಂಬಿ ಬಂದವರಿಗೆ ಬೇಸರಕೊಡುವುದು ಬೇಡ. ಬಂಧುಗಳ ನಾನಾ‌ ಪ್ರಶ್ನೆ ತರದ ಪ್ರಶ್ನೆಗಳಿಗೆ ಉತ್ತರಿಸಿ ಸಾಕೆನಿಸುವುದು. ಎಷ್ಟೇ ಪ್ರಯತ್ನಿಸದರೂ ಕೆಲಸವು ಅಡೆತಡೆಗಳಿಂದ ಇದ್ದರೆ ಅದನ್ನು ಬಿಡುವುದು ಉತ್ತಮ. ಮನೆಯ ಕೆಲಸಗಳನ್ನು ನಿರಾಸಕ್ತಿಯು ಇರುವುದು. ಇಂದಿನ ನಿಮ್ಮ ಮಾತು ಅಗೌರವವನ್ನು ಕೊಡುವಂತಹದ್ದೇ ಆಗಿದೆ. ಈ ದಿನವನ್ನು ನೀವು ಆರಾಮವಾಗಿ ಕಳೆಯಲು ನಮ್ಮನ್ನು ಮೊದಲೇ ಸಿದ್ಧಪಡಿಸಿಕೊಂಡಿರುವಿರಿ. ಕೆಲಸ ಮಾಡುವ ವಿಧಾನದ ಬಗ್ಗೆ ತಿಳಿದುಕೊಳ್ಳಿ. ಅಮೂಲ್ಯವಾದ ವಸ್ತುವನ್ನು ಖರೀದಿಸಿ ಸಂತೋಷಪಡುವಿರಿ. ಬಂದಷ್ಟು ಆದಾಯವನ್ನು ಪ್ರೀತಿಯಿಂದ ಸ್ವೀಕರಿಸಿ. ನಿಮ್ಮವರಿಗಾಗಿ ಅಲ್ಪ ಸಮಯವನ್ನಾದರೂ ಕೊಡಬೇಕು ಅನಿಸಬಹುದು. ನಿಮ್ಮ ಸಣ್ಣ ನಿರ್ಲಕ್ಷ್ಯವು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು.

ಮಿಥುನ ರಾಶಿ : ಮೊದಲು ನೀವು ಗಟ್ಟಿಯಾಗಿ ನಿಂತು, ಮತ್ತೊಬ್ಬರನ್ನು ನಿಲ್ಲಿಸಬೇಕು. ನೀವು ಯಾರನ್ನೂ ನಿರ್ಲಕ್ಷ್ಯದಿಂದ ನೋಡುವುದು ಬೇಡ. ದಾಂಪತ್ಯದ ವಿರಸವು ಸಾಮರಸ್ಯವಾಗಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದು. ಸ್ವಪ್ರತಿಷ್ಠೆಯನ್ನು ಬಿಟ್ಟು ಬಿಡಿವುದು ಉತ್ತಮ. ವ್ಯಾಪಾರದಲ್ಲಿ ಯಾರ ಹಸ್ತಕ್ಷೇಪವನ್ನು ಸಹಿಸಲಾರಿರಿ. ತಂದೆಯ ವಿಚಾರದಲ್ಲಿ ನಿಮಗೆ ಬೇಸರವಾಗಬಹುದು. ರಾಜಕೀಯದಲ್ಲಿ ನಿಮ್ಮ ವರ್ಚಸ್ಸು ಹೆಚ್ಚುವುದು. ಸಣ್ಣ ಮನಸ್ಸಿನಿಂದ ಯೋಚಿಸುವುದನ್ನು ಬಿಡಿ. ಕೆಲಸದ ಒತ್ತಡವು ಇಂದು ಅಧಿಕವಾಗುವುದು. ಸಹೋದರನಿಗೆ ಕಾರ್ಯದ ಅನ್ವೇಷಣೆಯನ್ನು ಮಾಡಲಿದ್ದೀರಿ. ನೀವು ನಿರೀಕ್ಷಿಸಿದ ಕೆಲಸದಿಂದ ಯಶಸ್ಸು ಸಿಗಲಿದೆ. ಮಾತನ್ನು ಸರಿಯಾಗಿ ಆಡಿದರೆ ಗೌರವವು ಪ್ರಾಪ್ತವಾಗಬಹುದು. ಭೋಗದ ಕಾರಣಕ್ಕೆ ಹಣವು ಖರ್ಚಾಗುವುದು. ವಿವಾಹಕ್ಕೆ ನಿಮ್ಮೆ ದೃಢವಾದ ಮನಸ್ಸು ಇರದು. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ.

ಕರ್ಕಾಟಕ ರಾಶಿ : ನಿಮ್ಮ ಅನನುಕೂಲವನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ. ನಿಮಗೆ ಇಂದು ಅಭದ್ರತೆಯ ಅನುಭವವಾಗಲಿದೆ. ಮಕ್ಕಳಿಂದ ನಿಮಗೆ ಆರ್ಥಿಕ ನೆರವು ಸಿಗಲಿದೆ. ದುರಭ್ಯಾಸವನ್ನು ಬಿಡಲು ಒಬ್ಬೊಬ್ಬರಾಗಿ ಹೇಳಬಹುದು. ಅಪಮಾನವಾಗುವ ಸಂದರ್ಭದಲ್ಲಿ ನೀವು ಇರಲಾರಿರಿ. ನಿಮ್ಮ ಉತ್ಸಾಹದ ಕೆಲಸವು ಮಾದರಿಯಾಗುವುದು. ನಿರ್ಲಕ್ಷ್ಯದಿಂದ ಉತ್ತಮ‌ ಅವಕಾಶಗಳಿಂದ ವಂಚಿತರಾಗುವಿರಿ. ಕುಟುಂಬ ಮಹತ್ವವು ತಿಳಿಯುವುದು. ಮನೆಯ ಹಿರಿಯ ಆರೋಗ್ಯವು ದುರ್ಬಲವಾಗಿದ್ದು ಇದೇ ನಿಮಗೆ ಚಿಂತೆಯು ಆಗಬಹುದು. ಸಣ್ಣ ವ್ಯಾಪಾರದಲ್ಲಿ ಬಹುಮಟ್ಟಿನ ಲಾಭವು ಬರಬಹುದು. ಆತ್ಮಾಭಿಮಾನವು ಅಧಿಕವಾಗಿ ತೋರುವುದು. ಸಹೋದರಿಯ ಜೊತೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳುವಿರಿ. ಸಾಲವಾಗಿ ಪಡೆದ ಹಣವನ್ನು ತೀರಿಸುವಿರಿ. ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಹೊಸ ಯೋಜನೆಯು ನಿಮಗೆ ಬರಲಿದೆ.

ಸಿಂಹ ರಾಶಿ : ಉದ್ಯೋಗದ ಸ್ಥಾನದಲ್ಲಿ ಶತ್ರುಗಳ ಕಾಟವು ಗೊತ್ತಾಗುವುದು. ಆರ್ಥಿಕ ವಿಚಾರಕ್ಕೆ ದಾಂಪತ್ಯದಲ್ಲಿ ಇಂದು ಕಲಹವಾಗುವುದು. ನಿದ್ರೆಯು ಸರಿಯಾಗಿ‌ ಆಗದೇ ಕಿರಿಕಿರಿ ಎನಿಸಬಹುದು. ಎಲ್ಲರ ಮೇಲೂ ಕೋಪಗೊಳ್ಳುವಿರಿ. ಮಕ್ಕಳ ಕುರಿತು ನಿಮಗೆ ದೂರುಗಳು ಬರಬಹುದು. ಹಿತಶತ್ರುಗಳಿಂದ ದೂರವಿರುವುದು ಉತ್ತಮ. ಈ ದಿನವು ಉತ್ಸಾಹದಿಂದ ಕೆಲಸ ಮಾಡುತ್ತ ಕಳೆದುಹೋಗುವುದು. ಅತಿಯಾದ ಆಲೋಚನೆಯು ತಲೆನೋವು ತಂದೀತು. ಸಹೋದರರ ನಡುವೆ ಸಂಪತ್ತಿಗಾಗಿ ಕಲಹವಾದೀತು. ತಂದೆಯ ಸ್ವಭಾವವು ನಿಮಗೆ ಇಷ್ಟವಾಗದು. ಹೊಸ ಆದಾಯದ ಮೂಲವು ಸಿಕ್ಕಿ ಸಂತೋಷವಾಗಲಿದೆ. ಸಾಮಾಜಿಕ ವ್ಯವಸ್ಥೆಯಲ್ಲಿ ತೊಡಗಲು ಅವಕಾಶವು ಸಿಗುವುದು. ರಾಜಕಾರಣಿಗಳು ಸಮಾಜದಿಂದ ಗೌರವವನ್ನು ಪಡೆದು ಸಂತೋಷಿಸುವಿರಿ. ದುರಾಸೆಯಲ್ಲಿ ಸಿಕ್ಕಿಕೊಂಡು ನಷ್ಟವನ್ನು ಅನುಭವಿಸುವಿರಿ. ಬಂಧುಗಳ ಜೊತೆ ವಿನಾಕಾರಣ ಮನಸ್ತಾಪ ಆಗಬಹುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ಮೈ ಮರೆತು ತಪ್ಪು ಮಾಡುವಿರಿ.

ಕನ್ಯಾ ರಾಶಿ : ಕೃತಜ್ಞತೆಯನ್ನು ಬಿಡುಬುದು ಬೇಡ. ಇಂದು ನಿಮ್ಮ ಮೇಲೆ ಎಲ್ಲರಿಂದ ಆಕ್ರಮಣವಾಗಬಹುದು. ಸ್ಥಿರಾಸ್ತಿಯ ವಿಕ್ರಯದ ವಿಚಾರದಲ್ಲಿ ಏಕಮುಖವಾದ ಅಭಿಪ್ರಾಯವು ಒಳ್ಳೆಯದಲ್ಲ. ಸ್ನೇಹಿತರು ನಿಮ್ಮ ಮಾರ್ಗವನ್ನು ತಪ್ಪಿಸುವರು. ಶಿಕ್ಷಣ ಕ್ಷೇತ್ರದಲ್ಲಿ ನೀವು ಸಾಧನೆ ಮಾಡಲು, ನಿಮ್ಮ‌ ಕಾರ್ಯವನ್ನು ಗುರುತಿಸಲು ಸಕಾಲ. ನಿಮಗೆ ಬಂದ‌ ಅಪವಾದವನ್ನು ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ.‌ ಕತ್ತಲಲ್ಲಿರುವ ನಿಮಗೆ ಬೆಳಕನ್ನು ತೋರುವವರು ಬರುವರು. ನಿಮ್ಮ ಹೊಸ ಉದ್ಯಮವು ಸತತ ಪರಿಶ್ರಮದಿಂದ ಅಭಿವೃದ್ಧಿಯನ್ನು ಕಾಣುವುದು. ಪ್ರಭಾವೀ ಜನರ‌ ಜೊತೆ ಅಂತರವನ್ನು ಇಟ್ಟುಕೊಳ್ಳಿ.‌ ಮನೆಯವರ ವರ್ತನೆಗೆ ನಿಮಗೆ ಸಿಟ್ಟು ಬರಬಹುದು. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧವು ಆಗಬಹುದು. ಮನಸ್ಸಿಗೆ ಹಿಡಿಸದ್ದನ್ನು ಪ್ರಯತ್ನ ಪೂರ್ವಕವಾಗಿ ಮಾಡುವುದು ಬೇಡ. ಆಸ್ತಿಯನ್ನು ಸರಿಯಾಗಿ ವಿಭಾಗಿಸಿಕೊಳ್ಳಿ. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ.

ತುಲಾ ರಾಶಿ : ಕಳೆದುಕೊಂಡಲ್ಲಿಯೇ ಹುಡುಕಿದರೆ ಸಿಗಬಹುದು. ನಿಮ್ಮನ್ನು ಗೌರವಿಸಿಲ್ಲ ಎಂಬ ಅಳುಕು ಕಾಣಿಸುಬಹುದು. ಮನಸ್ಸಿಗೆ ಹಿಡಿಸದ ಕೆಲಸವನ್ನು ಮಾಡಲು ಹಿಂಜರಿಯುವಿರಿ. ಕುಟುಂಬದ ಜೊತೆ ಪುಣ್ಯ ಸ್ಥಳಗಳಿಗೆ ಹೋಗುವಿರಿ. ಮನಸ್ಸಿನ ಚಾಂಚಲ್ಯಕ್ಕೆ ನೀವು ಯೋಗ್ಯವಾದ ಉಪಚಾರವನ್ನು ಮಾಡುವಿರಿ. ಗೃಹನಿರ್ಮಾಣದ ಬಗ್ಗೆ ಎಲ್ಲರ ಜೊತೆ ಕುಳಿತು ಚರ್ಚಿಸುವಿರಿ. ದಾನವು ನಿಮ್ಮ ದೋಷವನ್ನು ನಾಶ ಮಾಡುವುದು.‌ ಒಳ್ಳೆಯ ವಸ್ತುವನ್ನು ದಾನ ಮಾಡಿ. ಅಧ್ಯಾತ್ಮದಲ್ಲಿ ಆಸಕ್ತಿ ಇರಲಿದೆ. ಪ್ರೇಮಜೀವನವು ನಿಮಗೆ ಸಾಕಾಗಿ ಹೋಗುವುದು. ವಿವಾಹದ ಮಾತುಕತೆಯು ನಿಮಗೆ ಸಂತೋಷವನ್ನು ನೀಡದು. ನೆರೆ ಹೊರೆಯ ಜೊತೆ ಕಲಹವಾಗುವುದು. ಮಕ್ಕಳ‌ ಭವಿಷ್ಯದ ಬಗ್ಗೆ ಚಿಂತೆ ಇರುವುದು. ಬೇರೆಯವರ ಬಗ್ಗೆ ನಿಮಗೆ ಅಸೂಯೆ ಬರಬಹುದು. ವಿರುದ್ಧ ವಂಚನೆಯ ಆರೋಪವು ಬರಬಹುದು. ನಿಮಗೆ ಬರುವ ಯಾವುದನ್ನೂ ನಿಯಂತ್ರಣ ಮಾಡಲಾಗದು.

ವೃಶ್ಚಿಕ ರಾಶಿ : ಒಳ್ಳೆಯ ಆಚಾರದಿಂದ ನಿಮಗೇ ಸಂತೃಪ್ತಿ ಸಿಗುವುದು. ಇಂದು ನಿಮ್ಮ ವಿದೇಶ ಪ್ರಯಾಣವು ಸಫಲವಗುವುದುಬೆಂಬ ಭರವಸೆ ಬರಲಿದೆ. ಹಣವನ್ನು ಹೊಂದಿಸಲು ನಿಮಗೆ ಕಷ್ಟವಾದೀತು. ಸ್ಥಿರಾಸ್ತಿಗಳು ನಿಮಗೆ ಲಾಭವನ್ನು ಕೊಟ್ಟಾವು. ಇಂದಿನ ಆಯಾಸವು ವಿಶ್ರಾಂತಿಯನ್ನು ಕೊಟ್ಟೀತು. ಇನ್ನೊಬ್ಬರಿಂದ ಏನನ್ನಾದರೂ ನಿರೀಕ್ಷಿಸಿ ಅನಂತರ ಬೇಸರಗೊಳ್ಳುವಿರಿ. ಉದ್ಯೋಗಿಗಳಿಗೆ ಸಂತೋಷದ ಸಮಾಚಾರವು ಇರುವುದು. ನಿಮಗೆ ಸಂಬಂಧಿಸಿದ ಸಲಹೆಗಳು ಬಂದರೆ ಅದನ್ನು ಸ್ವೀಕರಿಸಿ. ಅವರನ್ನು ಗೌರವಿಸಿ. ಅನಿರೀಕ್ಷಿತ ಸಂಪತ್ತು ನಿಮಗೆ ಸಂತೋಷವನ್ನು ಕೊಡುವುದು.‌ ಅರಂಭಗಳಿಗೆ ಭೇಟಿ ನೀಡುವಿರಿ. ಮನೆಯಲ್ಲಿ ನಿಮ್ಮ ಸಹಕಾರವು ಪ್ರಶಂಸೆಗೆ ಪಾತ್ರವಾಗುವುದು. ಬಂಧುಗಳ‌ ಬಗ್ಗೆ ನಿಮಗೆ ಪ್ರೀತಿ ಇರುವುದು. ಅಪರಿಚಿತರು ನಿಮ್ಮ ಎಲ್ಲ‌ ವಿಚಾರಗಳನ್ನು ಚರ್ಚಿಸುವರು. ಅನಿವಾರ್ಯವಾಗಿ ಮನೆಯಿಂದ ದೂರ ಹೋಗುವಿರಿ. ಕೇವಲ‌ ನಗುವಿನಿಂದ ಇನ್ಮೊಬ್ಬರನ್ನು ನೀವು ಸೋಲಿಸಬಹುದು.

ಧನು ರಾಶಿ : ಖುಷಿಯಾಗಿರಲು ಹಲವು ಸಂಗತಿಗಳಿದ್ದರೂ ಅದನ್ನು ನಿರ್ಲಕ್ಷಿಸುವಿರಿ. ತಪ್ಪು ತಿಳಿವಳಿಕೆಯಿಂದ ಸಂಬಂಧವು ದೂರಾಗುವ ಸಾಧ್ಯತೆ ಇದೆ. ನಿಮ್ಮ ಆತ್ಮಗೌರವಕ್ಕೆ ತೊಂದರೆ ಆಗುವ ಕಡೆ ನೀವು ಹೋಗಲಾರಿರಿ. ನಿಮಗೆ ನಿಶ್ಚಯಾತ್ಮಕ ಬುದ್ಧಿಯು ಇಂದು ಇರಲಾರದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಮನಸ್ಸಿಡಲು ಕಷ್ಟವಾದೀತು. ದೇಹಕ್ಕೆ ಹೆಚ್ಚು ಶ್ರಮವನ್ನು ಕೊಡುವಿರಿ. ಮತ್ತೆ ಮತ್ತೆ ನಿಮ್ಮ ವಿರುದ್ಧ ಶತ್ರುಗಳು ಕತ್ತಿಮಸೆಯಬಹುದು. ಸಾಮಾಜಿಕ ಮನ್ನಣೆಯನ್ನು ಪಡೆಯಲು ಬಯಸುವಿರಿ. ವಿದೇಶದಲ್ಲಿ ಇರುವವರಿಗೆ ಮನೆಯವರ ನೆನಪಾಗುವುದು. ಅಮೂಲ್ಯ ವಸ್ತುಗಳನ್ನು ನೀವು ಕಳೆದುಕೊಂಡು ಸಂಕಟಪಡುವಿರಿ. ಯಂತ್ರೋಪಕರಣಕ್ಕೆ ಹಣವನ್ನು ಖರ್ಚುಮಾಡುವಿರಿ. ಹಿರಿಯರ ಮೇಲೆ ಗೌರವ ಇರಲಿ. ಗೌರವವನ್ನು ಕೇಳಿಪಡೆಯುವುದಲ್ಲ, ಅದಾಗಿಯೇ ಬರುವಂತೆ ಇರಲಿ. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು. ನಿಮ್ಮ ದುರಭ್ಯಾಸವು ಅತಿಯಾಗಲಿದೆ. ವಸ್ತುಗಳನ್ನು ಸದುಪಯೋಗ ಮಾಡಲು ಕಲಿಯಬೇಕಾಗುವುದು.

ಮಕರ ರಾಶಿ : ನೀವು ಇಂದು ಸೇವಾಮನೋಭಾವದಿಂದ ಕಾರ್ಯದಲ್ಲಿ ತತ್ಪರರಾಗುವಿರಿ. ನಿಮಗೆ ಅನ್ಯತರ ಮಾತು ಬಹಳ ಹಿತವೆನಿಸವುದು. ಕಲಾವಿದರು ತಮ್ಮ ಇಂದಿನ‌ ದಿನವನ್ನು ಸಂತೋಷದಿಂದ ಕಳೆಯುವರು. ಆರ್ಥಿಕಲಾಭವು ಇರಲಿದೆ. ವ್ಯಾಪಾರಕ್ಕೆ ಸಂಬಂಧಿಸಿದಂತೆ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನಿಮ್ಮವರ ಆರೋಗ್ಯದಲ್ಲಿ ಹಠಾತ್ ನ್ಯೂನತೆ ಕಾಣಿಸುವುದು. ಕೃಷಿಯಲ್ಲಿ ಹೆಚ್ಚು ಆಸಕ್ತಿಯು ಇದ್ದು ಇಂದು ಅದರ ಕಡೆ ಹೆಚ್ಚು ಗಮನವನ್ನು ಕೊಡುವಿರಿ. ವಾಹನ‌ಚಾಲನೆಯಲ್ಲಿ ಜಾಗರೂಕತೆ ಇರಲಿ. ಸಂಗಾತಿಯನ್ನು ನೀವು ಹೊರಗೆ ಕರೆದುಕೊಂಡು ಹೋಗಿ ಖುಷಿಪಡಿಸುವಿರಿ. ಉತ್ಸಾಹವು ಇಂದು ಹೆಚ್ಚಿರಲಿದೆ. ಸುಳ್ಳಾಡಲು ಹೋಗಿ ಸಿಕ್ಕಿಕೊಳ್ಳುವಿರಿ. ಪ್ರಾಮಾಣಿಕತೆಯು ನಿಮಗೆ ವರವಾಗಲಿದೆ. ಮರೆವು ಅತಿಯಾದಂತೆ ತೋರುವುದು. ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ನಿಮ್ಮ ಬಗ್ಗೆ ಕುಟುಂಬದಲ್ಲಿ ಒಳ್ಳೆಯ ಅಭಿಪ್ರಾಯವು ಇರುವುದು.

ಕುಂಭ ರಾಶಿ : ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಕೊರತೆ ಕಾಣಿಸುವುದು. ಮಿತ್ರರ ಜೊತೆ ನೀವು ಪಾಲುದಾರಿಕೆಯಲ್ಲಿ ಒಪ್ಪಂದವನ್ನು ಮಾಡಿಕೊಳ್ಳುವಿರಿ. ನಿಮ್ಮವರ ಬಗ್ಗೆ ನಿಮಗೆ ಪ್ರೀತಿ ಇರದು. ಸಂಬಂಧದಲ್ಲಿ ವ್ಯವಹಾರವು ಬೇಡ. ನಿಮ್ಮ ಶತ್ರುಗಳು ನಿಮ್ಮಿಂದ ಇಂದು ಅಪ್ರತ್ಯಕ್ಷವಾಗಿ ಪ್ರಯೋಜನವನ್ನು ಪಡೆವರು. ಅಸಂಬದ್ಧ ಮಾತುಗಳನ್ನು ಆಡುವುದು ಬೇಡ. ವೃತ್ತಿಯ ಸಂಕಟವನ್ನು ಆಪ್ತರ ಜೊತೆ ಹಂಚಿಕೊಳ್ಳುವಿರಿ. ವ್ಯಾಪಾರದಲ್ಲಿ ಅಧಿಕ ಲಾಭವನ್ನು ಗಳಿಸಲು ಹೋಗಿ ಇನ್ಯಾವುಕ್ಕೋ ಹಣವು ಖಾಲಿಯಾಗುಬಹುದು. ಸಂಗಾತಿಯ ಮಾತುಗಳಿಗೆ ನಿಮ್ಮ ವಿರೋಧವು ಉಚಿತವಾಗಿರುವುದು. ನೀವು ಉಪಾಯದ ಜೊತೆ ಅಪಾಯವನ್ನು ಯೋಜನೆಯಲ್ಲಿ ಚಿಂತಿಸುವ ಅಗತ್ಯ ಬರುವುದು. ಕುಟುಂಬದಲ್ಲಿ ಎಲ್ಲರನ್ನೂ ಸಮಾಧಾನ ಮಾಡಲಾಗದು. ನಿಮ್ಮ ಕರ್ತವ್ಯವನ್ನು ಮಾಡಿ ಮುಗಿಸಿದರೆ ಅಷ್ಟೇ ಸಾಕು. ರಾಜಕೀಯ ವ್ಯಕ್ತಿಗಳಿಗೆ ಬೆಂಬಲವಿರುವುದನ್ನು ಕಾಣಬಹುದು. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ.

ಮೀನ ರಾಶಿ : ಹೊಸ ಜವಾಬ್ದಾರಿಗಳನ್ನು ನಿರ್ವಹಿಸುವ ಉತ್ಸಾಹದಲ್ಲಿ‌ ಇರುವಿರಿ. ವ್ಯವಹಾರದ ವಿಚಾರದಲ್ಲಿ ಪೂರ್ವಾಪರ‌ ವಿವೇಚನೆಯಿಂದ ಮುಂದುವರಿಯುವುದು ಉತ್ತಮ. ಸ್ತ್ರೀಯರಿಂದ ಅಪಮಾನವಾಗಬಹುದು. ವಿಳಂಬವಾಗಿ ಬರುತ್ತದೆ ಎಂದುಕೊಂಡ ಧನವು ಬೇಗ ಬರುವುದು. ಇಂದು ನೀವು ನಿಮ್ಮ ವೃತ್ತಿಯನ್ನು ನಿರ್ಧರಿಸುವಿರಿ. ವಿನಾ ಕಾರಣ ಸುತ್ತಾಡಿ ಆಯಾಸವಾಗುವುದು. ಸ್ವಾಭಿಮಾನವನ್ನು ಬಿಡಲು ನಿಮಗೆ ಆಗದು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ತಾಯಿಯ ಜೊತೆ ವಾಗ್ವಾದ ಮಾಡಬಹುದು. ಧಾರ್ಮಿಕ ಶ್ರದ್ಧೆಯಿಂದ ದೇವತಾರಾಧನೆಯನ್ನು ಮಾಡುವಿರಿ. ಇಂದು ಹೆಚ್ಚಿನ ಸಮಯವನ್ನು ನೀವು ಭಕ್ತಿಗಾಗಿ ಮೀಸಲಿಡುವಿರಿ. ಆದಾಯದ ಮೂಲವನ್ನು ಹುಡುಕುವಿರಿ. ನೆಮ್ಮದಿಯು ನಿಮ್ಮ ಪಾಲಿಗೆ ಇರಲಿದೆ. ಸಮಾರಂಭದಲ್ಲಿ ಬಂಧುಗಳ ಭೇಟಿಯಾಗುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ. ಸಕಾರಾತ್ಮಕ ಯೋಚನೆಗಳೂ ನಿಮಗೆ ಬಾಧೆಯನ್ನು ತರುವುದುಂಟು.

-ಲೋಹಿತ ಹೆಬ್ಬಾರ್ – 8762924271 (what’s app only)

ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಸಂಜು 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ