Daily Horoscope 14 October 2024: ಅಹಂಭಾವ ಬಿಟ್ಟರೆ ನೆಮ್ಮದಿಯೂ ನಿಮ್ಮದೇ

ಅಕ್ಟೋಬರ್ 14,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ಅನಿರೀಕ್ಷಿತ ಧನಲಾಭವು ಸಂತೋಷವನ್ನು ಕೊಡುವುದು. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಕಷ್ಟಪಡುವಿರಿ. ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ. ಆರ್ಥಿಕವಾಗಿ ಸಬಲರಾಗಲು ಗೌಪ್ಯ ವ್ಯಾಪಾರವನ್ನು ನಡೆಸಬಹುದು. ನಿಮಗೆ ಸಿಗದಿರುವ ವಸ್ತುವು ಯಾರಿಗೂ ಸಿಗಬಾರದು ಎಂಬ ಹಠದ ಸ್ವಭಾವವನ್ನು ಬೆಳೆಸಿಕೊಳ್ಳುವಿರಿ. ಹಾಗಾದರೆ ಇಂದಿನ (2024 ಅಕ್ಟೋಬರ್ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 14 October 2024: ಅಹಂಭಾವ ಬಿಟ್ಟರೆ ನೆಮ್ಮದಿಯೂ ನಿಮ್ಮದೇ
ದಿನ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 14, 2024 | 12:00 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಗಂಡ​, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 12 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:22, ಯಮಘಂಡ ಕಾಲ ಬೆಳಿಗ್ಗೆ 10:50ರಿಂದ 12:18ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:47 ರಿಂದ 03:15 ರವರೆಗೆ.

ಮೇಷ ರಾಶಿ : ತಾಯಿಯ ಪ್ರೀತಿಯು ನಿಮಗೆ ಉತ್ಸಾಹವನ್ನು ಕೊಡುವುದು. ನಿಮಗೆ ನಂಬಿಕೆಯ ಮೇಲೆ ಆದ ಪ್ರಹಾರವನ್ನು ಸಹಿಸಲಾಗದು. ಆರ್ಥಿಕತೆಯ ಮೇಲೆ ಹಿಡಿತ ಸಾಧಿಸದಿದ್ದರೆ ಕಷ್ಟವಾಗುತ್ತಿತ್ತು. ವೈವಾಹಿಕ ಜೀವನವು ನೆಮ್ಮದಿಯಿಂದ ಇರುವುದು. ಅನಗತ್ಯ ವಿಚಾರಗಳನ್ನು ಚರ್ಚಿಸುವುದನ್ನು ಬಿಟ್ಟು ನಿಮ್ಮ ಕೆಲಸದಲ್ಲಿ ಮಗ್ನರಾಗುವುದು ಉತ್ತಮ. ಪ್ರಿಯಕರನ‌ ಜೊತೆ ಸುತ್ತಾಟ ಮಾಡುವಿರಿ. ಉದ್ಯೋಗದಲ್ಲಿ ಸಂತಸವಿರುವುದು. ಪ್ರೀತಿಯ ಮಾತಿನಿಂದ ಇಂದಿನ ನಿಮ್ಮ ಕೆಲಸವು ಆಗುವುದು. ಚಿತ್ತಚಾಂಚಲ್ಯವು ನಿಮ್ಮ ಕಾರ್ಯದ ವೇಗವನ್ನು ಕಡಿಮೆ‌ಮಾಡಿಲುವುದು. ಬಂಧುಗಳ ಸಂಪತ್ತು ಕಾರಣಾಂತರಗಳಿಂದ ನಿಮಗೆ ಸಿಗಬಹುದು. ಅನುರೂಪವಾದ ಸಂಗಾತಿಯು ನಿಮಗೆ ಸಿಗುವರು. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ಎಲ್ಲ ಮೋಡಗಳೂ ನಿಮಗೆ ಮಳೆಯನ್ನು ಸುರಿಸದು.

ವೃಷಭ ರಾಶಿ : ನೇರ ಮಾತು ಕಹಿಯಾಗುವುದು. ಇಂದು ನೀವು ಸ್ತ್ರೀಯರ ವಿಚಾರದಲ್ಲಿ ಸೂಕ್ಷ್ಮಮತಿಗಳಾಗುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡದಿರುವುದು ನಿಮಗೆ ಬೇಸರವನ್ನು ತರಿಸುವುದು. ಮಕ್ಕಳ‌ ಮುಂದಿನ ವಿದ್ಯಾಭ್ಯಾಸಕ್ಕೆ ಸರಿಯಾದ ಮಾರ್ಗವನ್ನು ಹಾಕಿಕೊಡುವಿರಿ. ಅಪೂರ್ಣವಾಗಿರುವ ಕಛೇರಿಯ ಕೆಲಸಗಳು ಇಂದು ಮುಗಿಸುವ ಕೆಲಸವನ್ನು ಮಾಡುವಿರಿ. ಧೈರ್ಯದಿಂದ ಇರುವ ನಿಮಗೆ ಹೇಡಿತನ ಆವರಿಸುವುದು. ನಿಮ್ಮದೇ ಆದೇ ಯೋಜನೆಗಳು ಕಾರ್ಯದ ವೇಗವನ್ನು ಹೆಚ್ಚಿಸಲು ಸಾಧ್ಯವಾಗುವುದು. ಆಸ್ತಿಯ ವಿಚಾರವಾಗಿ ವಾಗ್ವಾದಗಳು ಸಲ್ಲದು. ಕಾನೂನನ್ನು ಪಾಲಿಸಿ. ಒಂದೇ ವಿಚಾರದ ಬಗ್ಗೆ ಅಧಿಕ ಚಿಂತನೆಯನ್ನು ಮಾಡಿ ಮನಸ್ಸನ್ನು ಕೆಡಿಸಿಕೊಳ್ಳುವಿರಿ. ನೂತನ ವಸ್ತುಗಳ ಖರೀದಿಯಿಂದ ವಂಚಿತರಾಗುವಿರಿ. ನಿಮ್ಮ ವಿಶ್ರಾಂತ ಸ್ಥಿತಿಯನ್ನು ಇತರರು ಹಾಸ್ಯ ಮಾಡಬಹುದು. ಸಂಗಾತಿಯ ಮೇಲೆ‌ ಪ್ರೀತಿಯು ಹೆಚ್ಚಾಗಬಹುದು. ಆಲೋಚನೆ ಮಾಡುವಷ್ಟರಲ್ಲಿ ಕೆಲಸವೇ ಮುಗಿಯಬಹುದು.

ಮಿಥುನ ರಾಶಿ : ನಿಮ್ಮದೇ ಸರಿ ಎನ್ನುವ ಅಹಂಭಾವ ಬಿಟ್ಟರೆ ನೆಮ್ಮದಿಯೂ ನಿಮ್ಮದೇ. ನಕಾರಾತ್ಮಕ ಯೋಚನೆಗಳು ನಿಮ್ಮನ್ನು ಸುಮ್ಮನಿರಲು ಬಿಡದು. ನಿಮ್ಮವರ ಭಾವನೆಗಳಿಗೆ ಬೆಲೆ ಕೊಡಿ. ದೂರ ಪ್ರಯಾಣವು ಸುಖಕರವಾಗುವುದು. ನ್ಯಾಯಾಲಯದಲ್ಲಿ ನಿಮ್ಮ ಕಾರ್ಯಗಳು ಸಲೀಸಾಗಿ ಮುಗಿಯುವುದು. ಕೃಷಿಯಲ್ಲಿ ತೊಡಗಿಕೊಂಡವರು ಹೊಸ ಆವಿಷ್ಕಾರವನ್ನು ಮಾಡುವರು. ನಿಮ್ಮ ವಿಶ್ವಾಸಕ್ಕೆ ಸರಿಯಾದ ಫಲಿತಾಂಶವು ಸಿಗುವುದು. ಗೆಳೆತನವು ಕಲಹದಲ್ಲಿ ಮುಕ್ತಾಯವಾಗುವುದು. ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸವು ಆಗಬಹುದು. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಾಣಿಸುವುದು. ಇನ್ನೊಬ್ಬರನ್ನು ದೂರುವ ಅಭ್ಯಾಸವನ್ನು ಬಿಡುವುದು ಒಳ್ಳೆಯದು. ನಿಮ್ಮ ಮಾತುಗಳೇ ತಿರುಗಿಬರಬಹುದು. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ. ಸಂಕೀರ್ಣತೆಯನ್ನು ನೀವು ಕಡಿಮೆ‌ ಮಾಡಿಕೊಂಡರೆ ಉತ್ತಮ. ನೀವೇ ಮಾಡಿದ ಕಾರ್ಯವಾದರೂ ಪರಿಶೀಲನೆ ಮುಖ್ಯ.

ಕರ್ಕಾಟಕ ರಾಶಿ : ಸಂಗಾತಿಯ ಎಲ್ಲ ಮಾತಿಗೂ ನಿಮ್ಮ ಒಮ್ಮತ ಇರದು. ಇದು ಕಲಹಕ್ಕೆ ಕಾರಣವಾಗಬಹುದು. ನೀವು ಇಂದು ಏನನ್ನು ಕೊಡುವುದಿದ್ದರೂ ಮನಃಪೂರ್ವಕವಾಗಿ ಕೊಡುವುದು ಉತ್ತಮ. ಕಲಾವಿದರಿಗೆ ವೃತ್ತಿಯಲ್ಲಿ ಗೌರವ ಸಿಗುವುದು. ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಡುವಿರಿ. ಕಛೇರಿಯ ಒತ್ತಡದ ಕೆಲವು ನಿಮಗೆ ಕಷ್ಟವಾದೀತು. ಗೆಲುವು ನಿಮ್ಮದಾದರೂ ಗೆಲ್ಲುವ ದಾರಿ ನಿಮ್ಮದಲ್ಲ. ಪ್ರಯಾಣದಲ್ಲಿ ನಿಮ್ಮ ವಸ್ತುಗಳು ಕಾಣೆಯಾಗಬಹುದು. ಹಿತಶತ್ರುಗಳಿಂದ ನಿಮ್ಮ ಮನಸ್ಸು ನೆಮ್ಮದಿಯಿಂದ ಇರದು. ಹೊಸ ವಿಚಾರಗಳು ನಿಮಗೆ ಆಸಕ್ರಿಯನ್ನು ಮೂಡಿಸುವುದು. ಬಂಧುಗಳ ಸಹಾಯದಿಂದ ಉದ್ಯೋಗ ಪ್ರಾಪ್ತಿಯು ಆಗುವುದು. ಅವರ ಪ್ರಭಾವದಿಂದ‌ ನಿಮಗೆ ಉನ್ನತ ಸ್ಥಾನವೂ ಪ್ರಾಪ್ತವಾಗುವುದು. ತಪ್ಪು ಮಾರ್ಗವನ್ನು ನೀವು ಅರಿವಿಲ್ಲದೇ ಪ್ರವೇಶಿಸುವುರಿ. ಪ್ರಯಾಣದ ಅಡೆತಡೆಯು ನಿಮಗೆ ಕೋಪ ತರಿಸಬಹುದು. ಸ್ವಂತಕ್ಕೆ ಪ್ರಯೋಜನವಿಲ್ಲದ ಯಾವ ಕಾರ್ಯವನ್ನೂ ನೀವು ಮಾಡಲಾರಿರಿ.

ಸಿಂಹ ರಾಶಿ : ಧಾರ್ಮಿಕ ಮುಖಂಡರ ಅಧಿಕಾರದ ವಿಚಾರದಲ್ಲಿ ಗೊಂದಲ ಉಂಟಾಗುವುದು.‌ ನಿಮ್ಮ ಪ್ರತಿಷ್ಠೆಗಳಿಂದ ಯಾರಿಗೂ ತೊಂದರೆಯಾಗದು. ನೀವು ಉಢಾಫೆ ಮಾಡುವ ಸಂಗತಿಗಳೇ ನಿಮಗೆ ಅಂಟಿಕೊಳ್ಳುವುದು. ನಿಮ್ಮ ಯೋಜನೆಯ ಕೆಲಸಗಳಿಗೆ ವಿಘ್ನಗಳು ಬರುವುದು. ಸರಿಯಾದ ಮಾಹಿತಿಯ ಕೊರತೆ ಕಾಣುವುದು. ಯಾರೂ ನಿಮಗೆ ಸರಿಯಾಗಿ ಸ್ಪಂದಿಸದೇ ಇರುವವರು. ನೇರವಾದ ಮಾತು ನಿಮಗೆ ಖುಷಿಕೊಡಬಹುದು. ಎಲ್ಲ ಕಡೆಗಳಲ್ಲಿ ವಿಳಂಬವಾದಂತೆ ತೋರುವುದು. ಇದೆಲ್ಲವೂ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡಬಹುದು. ಪ್ರಭಾವೀ ವ್ಯಕ್ತಿಗಳ ಸಹಾಯವನ್ನು ಪಡೆದುಕೊಳ್ಳುವ ಸಂದರ್ಭವು ನಿಮಗೆ ಬರಬಹುದು. ಕೆಲವನ್ನು ಹೊಂದಿಸಿಕೊಂಡು ಹೋಗುವುದು ಅನಿವಾರ್ಯ. ವಾಹನವನ್ನು ಬದಲಾಯಿಸಿ ಹೊಸ ವಾಹನವನ್ನು ಖರೀದಿಸುವಿರಿ. ನಿಮ್ಮದಲ್ಲದ ವಸ್ತುವನ್ನು ಪಡೆದುಕೊಂಡು ಕಷ್ಟಪಡುವಿರಿ. ತಲ್ಲಣಿಸುವ ಮನಸ್ಸನ್ನು ಉಪಾಯದಿಂದ ತಣಿಸಿ.

ಕನ್ಯಾ ರಾಶಿ : ಬೇಕಾದಷ್ಟು ವಿಶ್ರಾಂತಿ ಪಡೆದು ಕಾರ್ಯದಲ್ಲಿ ಪ್ರವೃತ್ತರಾಗಿ. ಮಹಿಳೆಯರ ಜೊತೆ ಕೆಲಸ ಮಾಡುವುದು ಕಷ್ಟವಾಗುವುದು. ಮಕ್ಕಳ ವಿವಾಹಕ್ಕೆ ನೀವು ತಿರುಗಾಟ ಮಾಡಬೇಕಾಗಬಹುದು. ನಿಮ್ಮ ಶಿಸ್ತಿನ ಕೆಲಸಕ್ಕೆ ಹೆಚ್ಚಿನ ಜವಾಬ್ದಾರಿಗಳು ಬರಬಹುದು. ನಿಮ್ಮ ವರ್ತನೆಯಿಂದ ಬಂಧುಗಳು ಅಸಮಾಧಾನಗೊಳ್ಳುವರು. ಸರ್ಕಾರದಿಂದ ಆಗಬೇಕಾದ ಕೆಲಸಗಳು ಬೇಗ ಆಗುವುವು. ನಿಮ್ಮ ಹಣವನ್ನು ಯೋಗ್ಯವಾದ ಸ್ಥಳದಲ್ಲಿ ಹೂಡಿಕೆ ಮಾಡುವಿರಿ. ಸಾಹಸವನ್ನು ಮಾಡಲು ಹೋಗುವುದು ಬೇಡ. ಕಷ್ಟಕಾಲದಲ್ಲಿ ಸಹಾಯ ಮಾಡಿದವರನ್ನು ನೀವು ನೆನಪಿಸಿಕೊಂಡು ಅವರ ಜೊತೆ ಮಾತನಾಡುವಿರಿ‌. ಕೆಲವರಿಂದ ನಿಮ್ಮ ದಿಕ್ಕನ್ನು ತಪ್ಪಿಸುವ ಪ್ರಯತ್ನ ನಡೆಯುವುದು. ಅಪರಿಚಿತರ ಜೊತೆ ಮಾತುಕತೆಗಳು ಮಿತಿಯಲ್ಲಿ ಇರಲಿ. ಈ ಕಾರಣಕ್ಕೆ ನಿಮಗೆ ಕೆಲಸದ ಪ್ರದೇಶದಲ್ಲಿ ಅಸ್ಥಿರತೆ ಇರುತ್ತದೆ. ಕಷ್ಟದ ಫಲವು ನಿಮಗೆ ಇಂದು ಗೊತ್ತಾಗಲಿದೆ.

ತುಲಾ ರಾಶಿ : ನಿಮ್ಮ ಮರೆವಿನಿಂದ ಕೆಲವು ಮುಖ್ಯವಾದ ವಸ್ತುವನ್ನೇ ಕಳೆದುಕೊಳ್ಳಬಹುದು. ನಿಮ್ಮ ಇಂದಿನ ಕಾರ್ಯವು ತಾರ್ಕಿಕ ಅಂತ್ಯವನ್ನು ಕಾಣದೇ ಹೋಗಬಹುದು. ರಾಜಕೀಯವನ್ನೇ ತಮ್ಮ ಕಾರ್ಯಕ್ಷೇತ್ರವನ್ನು ಮಾಡಿಕೊಂಡವರಿಗೆ ಸ್ವಲ್ಪ ಹಿನ್ನಡೆಯಾಗಬಹುದು. ಎಲ್ಲವನ್ನೂ ನಿಮ್ಮ ಪರವಾಗಿ ಮಾಡಿಕೊಳ್ಳಲು ಪ್ರಯತ್ನಿಸದರೂ ಅಲ್ಪ ಲಾಭವಾಗುವುದು. ಪ್ರೀತಿಯನ್ನು ನೀವು ಆಟದಂತೆ ಆಡುವಿರಿ. ವಿದ್ಯಾರ್ಥಿಗಳು ವ್ಯರ್ಥ ತಿರುಗಾಟವನ್ನು ಮಾಡಬೇಕಾಗುವುದು. ಖರೀದಿಸಲು ಇಚ್ಛಿಸುವವರು ಉತ್ತಮ ಭೂಮಿಯನ್ನು ಪಡೆಯುವ ಸಾಧ್ಯತೆ ಇದೆ. ಇದಕ್ಕೆ ಬಂಧುವರ್ಗದಿಂದ ಬೇಕಾದ ಸಹಾಯವೂ ಸಿಗುವುದು. ನಿಮ್ಮ ಪರಿಶ್ರಮದ ಕೆಲಸಗಳು ನಿರರ್ಥಕವಾಗುವುದು. ಪ್ರಶಂಸೆಯೂ ಸಿಗದೇ ಇರುವುದು ನಿಮಗೆ ಬೇಸರವನ್ನು ತಂದೀತು. ವಿನಾಕಾರಣದ ನಿಮ್ಮವರನ್ನು ನೋಯಿಸಿ ಪಶ್ಚಾತ್ತಪಪಡುವಿರಿ. ನೀವು ಬಿಟ್ಟ ಬಾಣವು ಗುರಿಯ ಕಡಗೆ ಇದೆಯೇ ಎಂದು ತಿಳಿಯಿರಿ.

ವೃಶ್ಚಿಕ ರಾಶಿ : ಏಕಾಗ್ರತೆಯನ್ನು ನೀವು ಅಸ್ತ್ರವಾಗಿ ಬಳಸಿಕೊಳ್ಳಬಹುದು. ಜವಾಬ್ದಾರಿಗಳು ನಿಮಗೆ ಭಾರವೆನಿಸಿ ಅದನ್ನು ಹಂಚಿಕೆ ಮಾಡುವ ಸಾಧ್ಯತೆ ಇದೆ. ನಿಮಗೆ ಸಿಕ್ಕ ಜವಾಬ್ದಾರಿಗಳು ಅಸಮಾಧಾನವನ್ನು ಉಂಟುಮಾಡುವುದು. ಯಾರ ಜೊತೆಯೂ ಬೆರೆಯುವ ಮನಸ್ಸಾಗದು. ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ನಿಮಗೆ ಸಮಯ ಬೇಕಾಗುವುದು. ಎಲ್ಲ ವಿಚಾರಗಳಿಗೂ ನಿಮ್ಮನ್ನು ಬೆರಳು ಮಾಡಿ ತೋರಿಸುವರು. ನಿಮ್ಮಮಾಧ್ಯಮದ ಉದ್ಯೋಗಿಗಳು ಹೆಚ್ಚಿನ ಆದಾಯವನ್ನು ಪಡೆಯುವರು. ಮೇಲಧಿಕಾರಿಗಳ ವಿಶ್ವಾಸವನ್ನು ಗಳಿಸುವಿರಿ. ನೀವು ಇಂದು ಬಹಳ‌ ಬೇಡಿಕೆ ಉಳ್ಳವರಾಗಿರುವಿರಿ. ಯಾರದೋ ಮಾತಿಗೆ ಉದ್ವೇಗಕ್ಕೆ ಒಳಗಾಗುವಿರಿ. ನಿಮ್ಮ ಕುಶಲಕಾರ್ಯಗಳು ಎಲ್ಲರಿಗೂ ಇಷ್ಟವಾದೀತು. ತಂದೆಯ ಮಾತನ್ನು ಗೌರವಿಸುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಭೂ ವ್ಯವಹಾರದಲ್ಲಿ ಯಶಸ್ಸು ಸಿಗುವುದು. ನಿಮ್ಮ‌ ಸಂಶೋಧನೆಗೆ ಅಡ್ಡಿಗಳ ಬರುವುದು.

ಧನು ರಾಶಿ : ನಿಮ್ಮ ದೂರದೃಷ್ಟಿಯಿಂದ ನಿಮ್ಮ ಗುರಿ ಬದಲಾಗುವುದು. ನಿರುದ್ಯೋಗಿಗಳಿಗೆ ಸ್ನೇಹಿತರಿಂದ ಸಹಕಾರವು ಸಿಗುವುದು. ಸ್ತ್ರೀಯರ ವಿಷಯದಲ್ಲಿ ನೀವು ಬಹಳ ಜಾಗರೂಕತೆಯಿಂದ ವ್ಯವಹರಿಸುವುದು ಉತ್ತಮ. ನಿಮಗೆ ಬರಬೇಕಾದ ಹಣವು ಬಾರದೇ ಹೋಗಬಹುದು. ಕೇಳಿ ಪಡೆಯಬೇಕಾದ ಸ್ಥಿತಿಯೂ ಬರಬಹುದು. ಅಜಾಡ್ಯದಿಂದ ನಿಮ್ಮ ಕಾರ್ಯವನ್ನು ಸಾಧಿಸಬಹುದು. ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ನಿಮ್ಮ ಕಾರ್ಯವೂ ಮಂದಗತಿಯಲ್ಲಿ ಇಂದು ಸಾಗಬಹುದು. ಅಶಿಸ್ತಿನ ವ್ಯವಹಾರದಿಂದ ಸಹೋದ್ಯೋಗಿಗಳ ನಡುವೆ ವಾಗ್ವಾದವು ಆಗಬಹುದು. ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುವಿರಿ. ಅತಿಥಿ ಸತ್ಕಾರವನ್ನು ಬಹಳ ಪ್ರೀತಿಯಿಂದ ಮಾಡಿ. ನಿಮಗೆ ಸಾಧಿಸುವ ಛಲವಿದ್ದರೆ ಮಾತ್ರ ಉಪಕರಣಗಳು ನಿಮ್ಮ ಕೈ ಸೇರುವುದು. ಉದ್ಯಮಕ್ಕೆ ಸಂಬಂಧಿಸಿದ ನಿಮ್ಮ ಆಲೋಚನೆಯನ್ನು ಇತರರು ತಳ್ಳಿಹಾಕಬಹುದು. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ವಿದ್ಯಾಭ್ಯಾಸದ ಪ್ರಗತಿಯು ಖುಷಿಕೊಡುವುದು.

ಮಕರ ರಾಶಿ : ನಿಮ್ಮ ದೃಷ್ಟಿಯು ಬದಲಾದರೆ ಎಲ್ಲವೂ ಬದಲಾಗುವುದು. ಕಛೇರಿಯ ವ್ಯವಹಾರವು ನಿಮಗೆ ಚಿಂತೆಯನ್ನು ಹೆಚ್ಚು ಮಾಡಬಹುದು. ನಿಮ್ಮ ಯೋಜನೆಯನ್ನು ಕಾರ್ಯಗತಗೊಳಿಸಲು ನೀವು ಸಫಲರಾಗುವಿರಿ. ಸ್ನೇಹಿತರ ಜೊತೆ ಅನೌಪಚಾರಿಕ ಮಾತುಗಳನ್ನು ಆಡುವಿರಿ. ಸಹವಾಸದೋಷದಿಂದ ನಿಮಗೆ ಕಷ್ಟವಾದೀತು. ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟಪಡುವಿರಿ. ಮಕ್ಕಳ ಸಂತೋಷದಲ್ಲಿ ನೀವು ಭಾಗಿಯಾಗಿ. ನೈಮಿತ್ತಿಕ ಕರ್ಮಗಳನ್ನು ನೀವು ಮಾಡಲೇಬೇಕಾಗುವುದು. ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಸಮ್ಮಾನವನ್ನು ಪಡೆಯುವರು. ಸ್ನೇಹಸಂಬಂಧವು ಇನ್ನಷ್ಟು ಬಲವಾಗುವುದು. ದುಃಖದ ಸನ್ನಿವೇಶಗಳನ್ನು ನೀವು ಸಂತೋಷದ ಸಂದರ್ಭವಾಗಿ ಪರಿವರ್ತಿಸುವಿರಿ. ಇಷ್ಟದ ಜನರನ್ನು ಭೇಟಿಯಾಗಲು ಹೋಗಬಹುದು. ಕುಟುಂಬಕ್ಕೆ ನಿಮ್ಮಿಂದ ಆಗಬೇಕಾದ ಕಾರ್ಯಗಳ ಬಗ್ಗೆ ತಿಳಿದುಕೊಳ್ಳುವಿರಿ. ನಿಮ್ಮ ವಿದೇಶ ಪ್ರವಾಸವು ಕಾರಣಾಂತರಗಳಿಂದ ರದ್ದಾಗುವುದು. ಆಕಾಶಕ್ಕೆ ಉಗಿದರೆ ನಿಮಗೇ ತೊಂದರೆ.

ಕುಂಭ ರಾಶಿ : ಗೊತ್ತಿಲ್ಲದ ವ್ಯವಹಾರದಿಂದ ನಿಮಗೆ ಮುಖಭಂಗವಾಗಬಹುದು. ಆತುರದಲ್ಲಿ ಏನನ್ನಾದರೂ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಂದು ಸಂಭ್ರಮದ ವಾತಾವರಣದಲ್ಲಿ ಸಮಯವನ್ನು ಕಳೆಯುವಿರಿ. ಅನಗತ್ಯ ಮಧ್ಯಪ್ರವೇಶದಿಂದ ಗೌರವ ಕಡಿಮೆಯಾಗುವುದು. ಮನೆಯ ಕೆಲಸವು ಅಧಿಕವಾಗಿ ಆಯಾಸವಾಗಬಹುದು. ನಿಮ್ಮ ಬಯಕೆಗಳನ್ನು ಪೂರೈಸಲಿಕೊಳ್ಳಲು ಇತರರ ಸಹಾಯವನ್ನು ಕೇಳುವಿರಿ. ಕಛೇರಿಯ ಕೆಲಸಗಳು ನಿಗದಿತ ಸಮಯಕ್ಕೆ ಮುಕ್ತಾಯವಾಗುವುದು. ನಿಮ್ಮ ಹಳೆಯ ವಸ್ತುಗಳನ್ನು ಮಾರಾಟ ಮಾಡಿ, ಹೊಸತನ್ನು ಪಡೆಯುವಿರಿ. ವಿವಾಹದ ಮಾತುಕತೆಗಳು ನಿಮಗೆ ಸಂತೋಷವನ್ನು ನೀಡುವುದು. ಭವಿಷ್ಯದ ಬಗ್ಗೆ ಅನಗತ್ಯವಾದ ಆಲೋಚನೆಗಳು ಬರಬಹುದು. ಸ್ತ್ರೀಯರ ಸಹಾಯದಿಂದ ನಿಮ್ಮ ಕಛೇರಿಯ ಕಾರ್ಯವು ಸರಿಯಾಗುವುದು. ನಿಮ್ಮ ಹೇಳಿಕಯನ್ನು ಇಂದು ಬದಲಾಯಿಸುವಿರಿ. ಬಂಧುಗಳ ವಿಚಾರಕ್ಕೆ ಆರ್ಥಿಕನಷ್ಟವಾಗುವುದು. ಸಂಗಾತಿಯ ಬಗ್ಗೆ ಪೂರ್ವಾಗ್ರಹವು ಇರುವ ಕಾರಣ ಯಾವ ಇಷ್ಟವಾಗದು.

ಮೀನ ರಾಶಿ : ನೀವು ಇಂದು ಯಾವದನ್ನೂ ಪರಿಸ್ಥಿತಿಯ ಮೇಲೆ‌ ಅಳೆಯಲು ಹೋಗುವುದು ಬೇಡ. ಗೊಂದಲದ ಕಾರಣದಿಂದ ಯಾವುದನ್ನೂ ಪೂರ್ಣವಾಗಿ ನಿರ್ಧಾರ ಮಾಡಲಾಗಸು. ನೀವು ಸ್ಥಾನಮಾನದ ಪ್ರಾಪ್ತಿಗಾಗಿ ಯಾರನ್ನಾದರೂ ದೂರವಿರಿ. ಶೋಧಕವರ್ಗಕ್ಕೆ ಉತ್ತಮ ಪ್ರಶಂಸೆಯು ಸಿಗಬಹುದು. ಪುಣ್ಯಕ್ಷೇತ್ರ ದರ್ಶನಕ್ಕೆ ಸ್ನೇಹಿತರ ಜೊತೆ ಹೋಗುವ ಮನಸ್ಸಾಗುವುದು. ಸ್ನೇಹಿತರನ್ನು ರಕ್ಷಿಸಲು ಹೋಗಿ ನೀವು ಅಪಾಯಕ್ಕೆ ಸಿಲುಕುವಿರಿ. ಅನಿರೀಕ್ಷಿತ ಧನಲಾಭವು ಸಂತೋಷವನ್ನು ಕೊಡುವುದು. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳಲು ಕಷ್ಟಪಡುವಿರಿ. ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ. ಆರ್ಥಿಕವಾಗಿ ಸಬಲರಾಗಲು ಗೌಪ್ಯ ವ್ಯಾಪಾರವನ್ನು ನಡೆಸಬಹುದು. ನಿಮಗೆ ಸಿಗದಿರುವ ವಸ್ತುವು ಯಾರಿಗೂ ಸಿಗಬಾರದು ಎಂಬ ಹಠದ ಸ್ವಭಾವವನ್ನು ಬೆಳೆಸಿಕೊಳ್ಳುವಿರಿ. ತಂತ್ರಜ್ಞರಿಗೆ ಸಿಹಿ ಸುದ್ದಿಯು ಕಾದಿರುವುದು. ನಿಮ್ಮ ಹೊಸ ಪ್ರಯತ್ನಕ್ಕೆ ಕುಟುಂಬದ ಬೆಂಬಲವು ಸಿಗುವುದು. ಅಲ್ಪಾವಧಿಯಲ್ಲಿ ಹೆಚ್ಚು ಪಡೆಯಬೇಕು ಎನ್ನುವ ಅತಿಯಾದ ಆಸೆ ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ