Daily Horoscope 15 August 2024: ಸ್ವಾತಂತ್ರ್ಯ ದಿನದಂದು ಯಾರಿಗೆಲ್ಲಾ ಶುಭ, ಅಶುಭ ತಿಳಿಯಿರಿ

ಆಗಸ್ಟ್​ 15,​ 2024ರ​​ ನಿಮ್ಮ ರಾಶಿಭವಿಷ್ಯ: ಒಳ್ಳೆಯ ಸುದ್ದಿಗಳು ನಿಮಗೆ ಸಂತೋಷವನ್ನು ನೀಡಬಹುದು. ಹಿರಿಯರಿಗೆ ಪ್ರಿಯವಾದುದನ್ನು‌ ಮಾಡುವಿರಿ. ರಾಜಕಾರಣಿಗಳು ಕರ್ತವ್ಯವನ್ನು ಮಾಡುವರು. ಬೇಸರವಾಗುವ ಮಾತುಗಳನ್ನು ನೀವು ಕಡಿಮೆ‌ಮಾಡಿಕೊಳ್ಳಿ. ನಿಮ್ಮ ಸ್ನೇಹಶೀಲತೆ ಎಲ್ಲರಿಗೂ ಇಷ್ಟವಾಗುವುದು. ಹಾಗಾದರೆ ಆಗಸ್ಟ್​ 15ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 15 August 2024: ಸ್ವಾತಂತ್ರ್ಯ ದಿನದಂದು ಯಾರಿಗೆಲ್ಲಾ ಶುಭ, ಅಶುಭ ತಿಳಿಯಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 15, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಆಗಸ್​​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ವೈಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:54 ಗಂಟೆ, ರಾಹು ಕಾಲ ಮಧ್ಯಾಹ್ನ 02:11 ರಿಂದ 03:46, ಯಮಘಂಡ ಕಾಲ ಬೆಳಿಗ್ಗೆ 06:20 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:03ರ ವರೆಗೆ.

ಮೇಷ ರಾಶಿ: ಇಂದು ನಿಮಗೆ ಒಳ್ಳೆಯವರಾಗುವುದೂ ಕಷ್ಟವೆನಿಸಬಹುದು. ಮನೆಯವರು ನಿಮ್ಮ‌ ಮಾತಿನಿಂದ ಕಟ್ಟಿಹಾಕಬಹುದು. ಉಳಿದೆಲ್ಲ ಸಮಸ್ಯೆಗಿಂತ ಗುರಿಯೇ ನಿಮಗೆ ಮುಖ್ಯವಾಗಿರಲಿ. ನಿಮಗೆ ಆಹಾರಾಭಾವವು ಆಗಬಹುದು. ಕಲ್ಪಿಸಿಕೊಂಡ ವಿಚಾರವು ಹಾಗೆಯೇ ಆಗಲಿದ್ದು ನಿಮಗೆ ಆಶ್ಚರ್ಯ ಆಗಬಹುದು. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವವನ್ನು ನೀವು ಕೊಡಲಿದ್ದೀರಿ. ಉದ್ಯೋಗದಿಂದ ನಿಮ್ಮನ್ನು ಕೈಬಿಡುವ ಭಯವು ಕಾಡಬಹುದು. ಮುಂಗೋಪದಿಂದ ಸಮಸ್ಯೆಯನ್ನು ತಂದುಕೊಳ್ಳುವಿರಿ. ಆಪ್ತರ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಸಿಗಬಹುದು. ಚಿಂತೆಯಿಂದ ನಿದ್ರೆ ಕೆಡುವ ಸಾಧ್ಯತೆ ಇದೆ. ಸ್ನೇಹಿತರ ಜೊತೆ ಹರಟೆ ಹೊಡೆಯುವಿರಿ. ಪರಿಶ್ರಮವು ಇಂದು ಹೆಚ್ಚಾಗಬಹುದು. ಕ್ಷಮೆಯಿಂದ ನೀವು ದೊಡ್ಡವರಾಗುವಿರಿ. ಶತ್ರುಗಳ ನಡುವೆ ಮೌನವಾಗಿ ಬದುಕಬೇಕಾದೀತು. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಾಗದು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಯೋಗ್ಯವಾದದನ್ನು ದಾನ ಮಾಡಿ.

ವೃಷಭ ರಾಶಿ: ಯಾರ ಮೇಲೇ ಇಡುವ ವಿಶ್ವಾಸವೂ ನಿಮಗೆ ಸಮಾಧಾನವಾಗದು. ಸಾಲಕ್ಕೆ ಸಂಬಂಧಿಸಿದ ವಿಷಯಗಳು ಇತ್ಯರ್ಥವಾಗಲಿವೆ. ಬಂಧುಗಳ ಭೇಟಿಗಾಗಿ ನೀವು ದೂರಪ್ರಯಾಣ ಮಾಡುವಿರಿ. ನಿಮ್ಮ ಭವಿಷ್ಯದ ಕಲ್ಪನೆಗಳು ವಾಸ್ತವದಿಂದ ದೂರವಾಗುವುದು. ನಿಮ್ಮಲ್ಲಿ ಏನನ್ನೋ ಸಾಧಿಸಿದ ತೃಪ್ತಿ ಇರಲಿದೆ. ಬರಬೇಕಾದ ಹಣವು ಬಾರದೇ ಮೋಸವಾಗಲಿದೆ. ನಿಮ್ಮದೇ ಕೆಲಸಗಳ ನಡುವೆ ನೀವು ಕಳೆದು ಹೋಗುವಿರಿ.‌ ಕುಟುಂಬಕ್ಕೆ ಸಮಯ ಕೊಡಲು ಕಷ್ಟವಾದೀತು. ನಿಮ್ಮ ಅನಾರೋಗ್ಯವು ಇಂದು ಹೆಚ್ಚಾಗಬಹುದು. ನೀವು ಮುಂಗಡವಾಗಿ ಕೊಟ್ಟ ಹಣವು ಬಾರದೇ ಹೋದೀತು. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ತಂದೀತು. ಸಹೋದರರ ನಡುವೆ ರಹಸ್ಯ ಸಮಾಲೋಚನೆ ನಡೆಯಬಹುದು. ಯಾರ ಮೇಲೂ ಹಗುರಾದ ಮನೋಭಾವ ಬೇಡ. ಕೆಲವು ಸಂಗತಿಗಳು ನಿಮ್ಮ ಸಮಯವನ್ನು ವ್ಯರ್ಥ ಮಾಡಬಹುದು. ದೀರ್ಘಕಾಲದ ಗೆಳೆತನವು ಒರಟು ಮಾತಿನಿಂದ ಮುಕ್ತಾಯವಾಗುವುದು.

ಮಿಥುನ ರಾಶಿ: ಬೇಕೆಂದು ಮಾಡದಿದ್ದರೂ ನಿಮ್ಮ ಮೇಲೆ‌ ಕೆಲವು ಆರೋಪಗಳು ಬರುವುದು. ಬೇಸರ ಪಡದೇ ಅದನ್ನು ಸರಿಮಾಡಿಕೊಳ್ಳುವ ವಿಧಾನವನ್ನು ಹುಡುಕಿ. ಹೊಸದಾಗಿ ವೃತ್ತಿಯನ್ನು ಆರಂಭಿಸಿದವರಿಗೆ ತಮ್ಮ ವೃತ್ತಿಜೀವನದ ಬಗ್ಗೆ ಗೊಂದಲದಲ್ಲಿ ಇರುವರು. ನಿಮ್ಮ ವಸ್ತುವನ್ನು ನೀವೇ ಪಡೆದುಕೊಳ್ಳಲು ಓಡಾಟ ಮಾಡಬೇಕಾದೀತು. ನಿಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಕೇಳಬೇಕಾದ ಸ್ಥಿತಿ ಬರಬಹುದು. ಸಂಗಾತಿಯ ವ್ಯಥೆಯನ್ನು ಸರಿಮಾಡುವುದು ನಿಮ್ಮದಾಗಿದೆ. ಸಮಾಧಾನ ಚಿತ್ತದಿಂದ ನೀವು ನಿಮ್ಮ ಅವಲೋಕನವನ್ನು ಮಾಡುವಿರಿ. ಅಸಭ್ಯ ಮಾತುಗಳಿಂದ ನಿಮ್ಮ ವ್ಯಕ್ತಿತ್ವವನ್ನು ಹೇಳಬಹುದು. ನಿಮ್ಮ ಹಣವು ಕರಗುವ ಬಗ್ಗೆ ಚಿಂತೆ ಆಗಲಿದೆ. ನಿಮ್ಮ ಬಗ್ಗೆ ಆಡಿಕೊಳ್ಳುತ್ತಿರುವವರು ಸುಮ್ಮನಾಗುವರು. ಹೃದಯವೈಶಾಲ್ಯದಿಂದ ಪ್ರಶಂಸೆ ಸಿಗುವುದು. ಸಮರಸದ ಮಾತು ಕೊನೆಗೆ ವೈಷಮ್ಯದಿಂದ ಕೊನೆಯಾಗುವುದು. ವಾಹನದ ಮೇಲಿನ ವ್ಯಾಮೋಹ ಕಡಿಮೆಯಾಗುವುದು.

ಕರ್ಕಾಟಕ ರಾಶಿ: ಯಾರಾದರೂ ನಿಮ್ಮನ್ನೇ ಗುರಿ ಮಾಡಿಕೊಂಡು ಇರಬಹುದು. ಇಂದು ನಿಮ್ಮ ಕಾರ್ಯಗಳು ಸುಲಭದಲ್ಲಿ ಪೂರ್ಣಗೊಳ್ಳುವುದು. ನಿಮ್ಮ ಸ್ಥಾನವನ್ನು ಬಿಟ್ಟುಕೊಡಲು ನೀವು ಒಪ್ಪುವುದಿಲ್ಲ. ದ್ವೇಷವು ನಿಮ್ಮ ಮನಸ್ಸನ್ನು‌ ಹಾಳು ಮಾಡುವುದು. ನಿಮ್ಮನ್ನು ಅಪ್ರಾಮಾಣಿಕರೆಂದು ಹೀಗಳೆಯಬಹುದು.‌ ಇಂದು ನಿಮ್ಮ ಅಭಿಪ್ರಾಯವನ್ನು ಆಪ್ತರ ಜೊತೆ ಹಂಚಿಕೊಳ್ಳಲಿದ್ದೀರಿ. ಅತಿಯಾದ ವಿಶ್ವಾಸವು ನಿಮಗೆ ತೊಂದರೆಯನ್ನು ತಂದೀತು. ಅತ್ಯಾಪ್ತತೆಯಿಂದ ನಿಮಗೆ ಸಂಕಟವಾಗಬಹುದು. ಹಿರಿಯರ ಮಾತುಗಳನ್ನು ತಿರಸ್ಕರಿಸುವ ಮಾನಸಿಕತೆ ಇರಲಿದೆ. ಪ್ರೇಮವು ಕಾಮವಾಗಿ ಪರಿವರ್ತನೆ ಆಗಬಹುದು. ಇಂದಿನ‌ ನಿಮ್ಮ ಕಾರ್ಯದಿಂದ ಪ್ರೀತಿಯನ್ನು ಗಳಿಸುವಿರಿ. ಸಂಬಂಧದಲ್ಲಿನ ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಯಾರಾದರೂ ಪ್ರಾಬಲ್ಯವನ್ನು ಸಾಧಿಸಬಹುದು.

ಸಿಂಹ ರಾಶಿ: ಇಂದಿನ ತಪ್ಪು ಕಾರ್ಯಗಳಿಗೆ ಆತ್ಮ ಸಾಕ್ಷಿ ಅಡ್ಡ ಬರಬಹುದು. ಇಂದು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲು ಕಷ್ಟವಾಗುವುದು. ನೀವು ಆತ್ಮವಿಶ್ವಾಸವು ಶಕ್ತಿಯಿಂದ ತುಂಬಿರುವಿರಿ. ಕಛೇರಿಯಲ್ಲಿ ಒತ್ತಡದ ವಾತಾವರಣವಿರಲಿದೆ. ಒಳ್ಳೆಯ ಸುದ್ದಿಗಳು ನಿಮಗೆ ಸಂತೋಷವನ್ನು ನೀಡಬಹುದು. ಹಿರಿಯರಿಗೆ ಪ್ರಿಯವಾದುದನ್ನು‌ ಮಾಡುವಿರಿ. ರಾಜಕಾರಣಿಗಳು ಕರ್ತವ್ಯವನ್ನು ಮಾಡುವರು. ಬೇಸರವಾಗುವ ಮಾತುಗಳನ್ನು ನೀವು ಕಡಿಮೆ‌ಮಾಡಿಕೊಳ್ಳಿ. ನಿಮ್ಮ ಸ್ನೇಹಶೀಲತೆ ಎಲ್ಲರಿಗೂ ಇಷ್ಟವಾಗುವುದು. ಜನರ ಬೆಂಬಲವನ್ನು ಪಡೆಯಲು ಪ್ರಯತ್ನಿಸುವಿರಿ. ದುರಭ್ಯಾಸಗಳಿಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಎಲ್ಲರ ಜೊತೆ ವಾದಕ್ಕಿಳಿಯುವ ಮನಸ್ಸಿನಲ್ಲಿ ಇರುವಿರಿ. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಮಕ್ಕಳಿಂದ ಅನಾದರವಾಗಬಹುದು. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಲ್ಲಿ ತೋರಿಸಿಕೊಳ್ಳಲಾರಿರಿ.

ಕನ್ಯಾ ರಾಶಿ: ಹೊಸ ಯೋಜನೆಗಳು ನಿಮ್ಮನ್ನು ಹಿಡುಕಿ ಬರಬಹುದು. ಅವಶ್ಯಕ ವಸ್ತುವನ್ನು ಕಣ್ಮರೆ ಮಾಡಿಕೊಳ್ಳುವಿರಿ. ಹೊಸ ಕಛೇರಿಯಲ್ಲಿ ಬಹಳ ಉತ್ಸಾಹದಿಂದ ಕೆಲಸ ಮಾಡುವಿರಿ. ನಿಮಗೆ ಬೇಕಾದ ಹಣವನ್ನು ಹೊಂದಿಸಲು ಓಡಾಡಬೇಕಾಗಬಹುದು. ಪರಿಚಿತ ವ್ಯಕ್ತಿಗಳಿಂದಲೇ ನಿಮಗೆ ಮೋಸವಾಗಬಹುದು. ಆದಾಯದ ಮೂಲವನ್ನು ನೀವು ಹೆಚ್ಚಿಸಿಕೊಳ್ಳುವಿರಿ. ಅನಿರೀಕ್ಷಿತ ಓಡಾಟದಿಂದ ನಿಮ್ಮ ಪೂರ್ವನಿಶ್ಚಿತ ಕಾರ್ಯಗಳು ಅಸ್ತವ್ಯಸ್ತವಾಗಲಿದೆ. ನಿಮ್ಮ ಬಯಕೆಯನ್ನು ಪೂರೈಸಿಕೊಳ್ಳಲು ನೀವು ಕಷ್ಟಪಡುವಿರಿ. ಅಸಂಬದ್ಧ ಮಾತುಗಳಿಂದ ನಿಮಗೆ ಬೇಸರವಾಗಬಹುದು. ಯಾರನ್ನೋ ಮೆಚ್ಚಿಸಲು ಕೆಲಸಮಾಡಬೇಕಾಗುವುದು. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಮಕ್ಕಳಿಗೆ ನಿಮ್ಮಿಂದ ಏನಾದರೂ ಕೊಡುಗೆ ಸಿಗುವುದು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಹಣಕಾಸಿನಲ್ಲಿ ವ್ಯವಹಾರದಲ್ಲಿ ಪಾರದರ್ಶಕತೆ ಇದ್ದಷ್ಟು ಉತ್ತಮ.

ತುಲಾ ರಾಶಿ: ಮನೆಯ ಖರೀದಿ ವ್ಯವಹಾರದಲ್ಲಿ ಗೊಂದಲವಾಗುವುದು.‌ ನಿಮ್ಮ ಇಂದಿನ ಕೆಲವು ನಡೆಗಳು ವ್ಯವಹಾರದ ಪ್ರಗತಿಗೆ ಮಾರಕವಾಗುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆವಿರಲಿದೆ. ನೀವು ಕೊಟ್ಟ ಹಣವು ವಾಪಾಸು ಬರುವುದು ಕಷ್ಟ. ಹಿರಿಯರ ಮಧ್ಯಸ್ತಿಕೆಯಿಂದ ಸಮಸ್ಯೆಗಳು ಪರಿಹಾರವಾಗಬಹುದು. ನಿಮ್ಮ ನಡೆತೆಗಳು ಅನುಮಾನವನ್ನು ಹುಟ್ಟಿಸಬಹುದು. ಹೂಡಿಕೆಯ ವಿಚಾರದಲ್ಲಿ ನೀವು ಅನುಭವಗಳನ್ನು ಕೇಳುವುದು ಉತ್ತಮ. ಮನೆಯ ಪರಿಸ್ಥಿತಿಯನ್ನು ಸುಧಾರಿಸಲು ನೀವು ಕಷ್ಟಪಡುವಿರಿ. ಅಧಿಕಾರದ ಜಂಬವನ್ನು ಬಿಡಿ. ಎಲ್ಲರೂ ನಿಮ್ಮ‌ ಆಪ್ತರಾಗುವರು. ಸಣ್ಣ ನೋವು ಇಂದು ದೊಡ್ಡದಾಗಿ ಅದನ್ನು ತಡೆಯಲು ಕಷ್ಟವಾದೀತು. ದೀರ್ಘಕಾಲದ ವೈರವು ಮುಕ್ತಾಯವಾಗುವುದು. ಮಾತನ್ನು ಚೆನ್ನಾಗಿ ಬಲ್ಲವರಾಗಿದ್ದರು ಕಟುವಾದ ಮಾತುಗಳನ್ನು ಆಡಬೇಡಿ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ ಲಾಭವನ್ನು ಪಡೆಯುವ ದೀರ್ಘಕಾಲದ ಯೋಜನೆಯ ಕನಸನ್ನು ಕಾಣುವಿರಿ. ನೇರವಾಗಿ ಯಾರನ್ನೂ ದೂರುವುದಿಲ್ಲ. ನೀವು ಸೋಲನ್ನು ಜೀರ್ಣಿಸಿಕೊಳ್ಳುವುದು ಕಷ್ಟ.

ವೃಶ್ಚಿಕ ರಾಶಿ: ನಿಮ್ಮ ವಿವಾಹಕ್ಕೆ‌ ಮನೆಯವರಿಂದ ಒತ್ತಡ ಹೆಚ್ಚಾಗುವುದು. ಸಮಯಕ್ಕೆ ಗೌರವ ಕೊಡುವುದನ್ನು ನೀವು ಕಲಿಯಬೇಕಾದೀತು. ಏನಾದರೂ ಹೊಸತನವನ್ನು ಹುಟ್ಟಿಸಿಕೊಳ್ಳಬಹುದು. ನಿಮ್ಮವರೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು. ಕಾನೂನನಲ್ಲಿ ನಿಮಗೆ ಮುನ್ನಡೆಯಿಂದ ಸಂತೃಪ್ತಿ ಇರುವುದು. ಅಧಿಕಾರಿ ವರ್ಗದಿಂದ ನಿಮಗೆ ಕಿರಿಕಿರಿ ಉಂಟಾಗಬಹುದು‌. ಹೊಸತನ್ನು ತಿಳಿದುಕೊಳ್ಳಲು ನೀವು ಸೋಲಬಹುದು. ಅನಿರೀಕ್ಷಿತ ವಾರ್ತೆಯಿಂದ ನಿಮಗೆ ದುಃಖವಾಗಬಹುದು. ಬಹಳ ಚಂಚಲವಾದ ಮನಸ್ಸನ್ನು ಶುಭವಾದ ಕಾರ್ಯದಲ್ಲಿ ಜೋಡಿಸಿ. ತಾಳ್ಮೆಯಿಂದ ಇದ್ದರೆ ಎಲ್ಲವನ್ನೂ ಸಾಧಿಸಲು ಸಾಧ್ಯ. ಕೆಲಸದ ಸಮಯವನ್ನು ಅದಕ್ಕಾಗಿ ಮಾತ್ರ ಮೀಸಲಿಡಿ. ನಿಮ್ಮ ಸಂಕಟವನ್ನು ಹೇಳಿಕೊಂಡರೂ ತೊಂದರೆ, ಸುಮ್ಮನೆ ಇದ್ದರೂ ತೊಂದರೆ ಆಗುವುದು. ಮಕ್ಕಳ ಕೆಟ್ಟ ಸ್ವಭಾವವನ್ನು ಈಗಲೇ ತೆಗೆದುಹಾಕಿ. ಅಪರಿಚಿತ ಕರೆಗಳು ಹೆಚ್ಚಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ.

ಧನು ರಾಶಿ: ಬಂಧುಗಳ ಒರಟುತನ ನಿಮಗೆ ಇಷ್ಟವಾಗದು. ನಿಮ್ಮನ್ನು ನೀವೇ ಏಕಾಂಗಿ ಎಂದು ಲೆಕ್ಕಿಸುವುದು ಬೇಡ. ಸಾಮಾಜಿಕ ಕಾರ್ಯವು ನಿಮ್ಮ‌ ಯಶಸ್ಸನ್ನು ತಂದುಕೊಡಬಹುದು. ಹೊರಗಿನ ಆಹಾರ ವಸ್ತುವಿನಿಂದ ಆರೋಗ್ಯ ಕೆಡುವುದು. ಆ ವಿಷಯದ ಸರಿಯಾದ ಆಯ್ಕೆ ಮಾಡಲು ನಿಮಗೆ ಕಷ್ಟವಾದೀತು.‌ ಶಿಕ್ಷಕವೃತ್ತಿಯಲ್ಲಿ‌ ನೀವು ಇದ್ದರೆ ವಿದ್ಯಾರ್ಥಿಗಳಿಂದ ಸಮ್ಮಾನವು ಸಿಗಲಿದೆ. ಅಸಹಜ ಬೆಳವಣಿಗೆಗೆ ನೀವು ಕಾರಣರಾಗುವಿರಿ. ವಾಹನಕ್ಕಾಗಿ ನೀವು ಹಣವನ್ನು ವ್ಯಯಿಸುವಿರಿ. ನೂತನ‌ ಉದ್ಯೋಗಕ್ಕೆ ನೀವು ಪ್ರಯತ್ನಶೀಲರಾಗುವಿರಿ. ಯಾರ ವಿರೋಧವನ್ನೂ ಕಟ್ಟಿಕೊಳ್ಳುವುದು ಬೇಡ. ಅಲ್ಪಾವಧಿಯಲ್ಲಿ ಲಾಭವನ್ನು ಗಳಿಸಲು ಹೋಗಿ ಮುಗ್ಗರಿಸುವಿರಿ. ಸಣ್ಣ ಅಪಮಾನವೂ ನಿಮಗೆ ದೊಡ್ಡದಾಗಿ ತೋರುವುದು. ನಿಮ್ಮ ಗುಣಮಟ್ಟವನ್ನು ಕಾಯ್ದಿರಿಸಿಕೊಳ್ಳುವುದು ಕಷ್ಟವಾದೀತು. ಜವಾಬ್ದಾರಿಯುತ ಸ್ಥಾನವು ನಿಮಗೆ ಸಿಗಲಿದೆ. ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ.

ಮಕರ ರಾಶಿ: ಅನಿರೀಕ್ಷಿತ ವಾರ್ತೆಯಿಂದ ನಿಮಗೆ ಕಷ್ಟವಾಗುವುದು. ನಿಮ್ಮ ನಕಾರಾತ್ಮಕ ಆಲೋಚನೆಗಳು ಅನ್ಯರ ಇಷ್ಟವಾಗದು. ಇಂದು ಮನೆಯ ಅನೇಕ ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗಬಹುದು. ಉದ್ಯೋಗದಲ್ಲಿ ಹೆಚ್ಚು ಒತ್ತಡ ಇರಲಿದೆ. ಸಹೋದ್ಯೋಗಿಗಳ ಸಹಾಯವನ್ನೂ ನೀವು ಪಡೆಯಬಹುದಾಗಿದೆ. ಸಮಾರಂಭಗಳಿಗೆ ನೀವು ಭಾಗವಹಿಸಲಿದ್ದೀರಿ. ತುರ್ತು ಪ್ರಯಾಣ ಮಾಡುವ ಅನಿವಾರ್ಯತೆ ಎದುರಾಗಬಹುದು. ನಿಮಗೆ ಇಂದು ಅಶುಭವಾರ್ತೆಯು ಕೇಳಿಬರಬಹುದು. ಕೆಲಸವನ್ನು ಮುಕ್ತಾಯಗೊಳಿಸದೇ ಇರಲು ನಾನಾ ಕಾರಣಗಳು ದೊರೆಯಬಹುದು. ವೈವಾಹಿಕ ಜೀವನವು ನಿಮ್ಮ ಮಾನಸಿಕ ಬೌದ್ಧಿಕ ಬೆಳವಣಿಗೆಗೆ ತೊಡಕು ಕೊಡುವುದು.@ ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಅಜ್ಞಾತ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ.

ಕುಂಭ ರಾಶಿ; ಒಳ್ಳೆಯದನ್ನು ಬಿಟ್ಟು ಇರುವುದು ನಿಮಗೆ ಸರಿ ಕಾಣಿಸದು. ನೀವು ಅಗತ್ಯದ ಖರ್ಚುಗಳನ್ನೂ ನಿಯಂತ್ರಿಸಲು ಹೋಗಿ ಎಡವಟ್ಟು ಮಾಡಿಕೊಳ್ಳಬಹುದು. ಸ್ಚಂತ ಕಾರ್ಯಗಳಿಗೆ ಸಮಯವನ್ನು ಹೊಂದಿಸಲು ನಿಮಗೆ ಕಷ್ಟವಾದೀತು. ಎಲ್ಲ ಸಮಯದಲ್ಲಿಯೂ ನಿಮಗೆ ನಿಮ್ಮವರು ಬೇಕು ಎನಿಸಬಹುದು. ಯಾರದೋ ಕೋಪವನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳಲು ಹೋಗಬಹುದು. ಒಂದರಮೇಲೊಂದರಂತೆ ನಿಮಗೆ ಕರೆಗಳು ಬರಬಹುದು. ಅದನ್ನು ನಿವಾರಿಸಿಕೊಳ್ಳಲು ನಿಮಗೆ ಕಷ್ಟವಾದೀತು. ಹೂಡಿಕೆಯನ್ನು ಕೇವಲ ಅಂದಾಜಿಗೆ ಮಾಡಿ, ಹಣವನ್ನು ಕಳೆದುಕೊಳ್ಳಬೇಕಾಗುವುದು. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ತಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದೇ ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ.

ಮೀನ ರಾಶಿ: ಇಂದು ನಿಮಗೆ ಭೂಮಿಯ ಉತ್ಪನ್ನದಿಂದ ಆದಾಯ ಕಡಿಮೆ ಆಗುವುದು. ಯಾರಾದರೂ ಸಾಲವನ್ನು ಕೇಳಿ ಬರಬಹುದು. ನಿಮ್ಮದಾದ ಕೆಲವು ನಿಲುವುಗಳಿಗೆ ನೀವು ಬದ್ಧರಾಗಿರಿ. ಲೆಕ್ಕಾಚಾರದ ವಿಚಾರದಲ್ಲಿ ನಿಮಗೆ ಅಪಮಾನದ ರೀತಿ ಎನಿಸಬಹುದು. ಅನಿವಾರ್ಯತೆಯನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ನೀವು ನಿಮ್ಮ ನಡತೆಯನ್ನು ಬದಲಿಸಿಕೊಳ್ಳಲು ಹೋಗುವುದು ಬೇಡ.‌ ಆಪ್ತರು ದೂರವಾಗುವ ಸಂಕಟವನ್ನು ನೀವು ಜೀರ್ಣಿಸಿಕೊಳ್ಳುವ ಅಗತ್ಯವಿದೆ. ಆಪ್ತರಿಂದ ಉಡುಗೊರೆ ಸಿಗಬಹುದು. ನಿಮ್ಮ ಕೆಲಸದಲ್ಲಿ ನೀವು ಮಗ್ನರಾಗುವಿರಿ. ನೆಮ್ಮದಿಯನ್ನು ನೀವು ಪಡೆಯಲು ಪ್ರಯತ್ನಿಸುವಿರಿ. ಇಂದು ಒಂದುಕಡೆ ಸುಮ್ಮನೆ ಕುಳಿತಿರುವುದು ಕಷ್ಟದ ಸಂಗತಿಯಾಗಲಿದೆ. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಅದು ಆಗದು. ಆನಾರೋಗ್ಯವಿದ್ದರೂ ಆತ್ಮಬಲವನ್ನು ಇಟ್ಟುಕೊಳ್ಳಬೇಕಾಗುವುದು.

ಲೋಹಿತ ಹೆಬ್ಬಾರ್ -8762924271 (what’s app only)