Daily Horoscope 15 September 2024: ಸೂಕ್ಷ್ಮತೆ ಅರ್ಥಮಾಡಿಕೊಳ್ಳಲು ಕಷ್ಟವಾದೀತು, ಹೆಚ್ಚಿನ ನಿರೀಕ್ಷೆ ಬೇಡ

ಸೆಪ್ಟೆಂಬರ್​ 15,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ನಿಮ್ಮನ್ನು ನೀವೇ ಏನೋ ಅಂದುಕೊಂಡು ಬೀಗುವಿರಿ. ರಾಜಕೀಯ ಜೀವನವು ನಿಮಗೆ ಹಿಡಿದುಕೊಳ್ಳಲಾಗದ, ಬಿಡಲಾಗದ ಸ್ಥಿತಿಯನ್ನು ತಂದುಕೊಡುವುದು. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 15 September 2024: ಸೂಕ್ಷ್ಮತೆ ಅರ್ಥಮಾಡಿಕೊಳ್ಳಲು ಕಷ್ಟವಾದೀತು, ಹೆಚ್ಚಿನ ನಿರೀಕ್ಷೆ ಬೇಡ
ಸೂಕ್ಷ್ಮತೆ ಅರ್ಥಮಾಡಿಕೊಳ್ಳಲು ಕಷ್ಟವಾದೀತು, ಹೆಚ್ಚಿನ ನಿರೀಕ್ಷೆ ಬೇಡ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 15, 2024 | 12:02 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಅತಿಗಂಡ, ಕರಣ: ಭವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:32 ಗಂಟೆ, ರಾಹು ಕಾಲ ಸಂಜೆ 05:02 ರಿಂದ 06:33, ಯಮಘಂಡ ಕಾಲ ಮಧ್ಯಾಹ್ನ 12:28 ರಿಂದ 01:59ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:30 ರಿಂದ ಸಂಜೆ 05:02ರ ವರೆಗೆ.

ಮೇಷ ರಾಶಿ: ನಿಮ್ಮನ್ನು ಯಾರೊಂದಿಗೆ ಹೋಲಿಸಿಕೊಳ್ಳುತ್ತೀರಿ ಎನ್ನುವುದರ ಮೇಲೆ ನಿಮ್ಮ ಸಂತೋಷವು ಇರುವುದು‌ ಇಂದು ವ್ಯಾಪಾರದಲ್ಲಿ ಸ್ವಲ್ಪ ಮಟ್ಟಿಗೆ ಆರ್ಥಿಕ ವೃದ್ಧಿಯು ಕಾಣಿಸಿ ಸಮಾಧಾನವಾಗುವುದು. ಬಂಧುಗಳ ಕಾರಣದಿಂದ ನಿಮ್ಮ ಹಣವು ಖರ್ಚಾಗಬಹುದು. ನಿಮ್ಮ ಸ್ಥಿರಾಸ್ತಿಯ ದಾಖಲೆಗಳನ್ನು ಸರಿ ಮಾಡಿಕೊಳ್ಳಿ. ಶತ್ರುಗಳನ್ನು ಸೋಲಿಸುವ ಸಂಚು ಸಫಲವಾಗಬಹುದು. ಕಾರ್ಯವನ್ನು ಸಂಕೀರ್ಣಗೊಳಿಸದೇ ಸರಿಯಾದ ವಿಭಾಗವನ್ನು ಮಾಡಿಕೊಳ್ಳುವುದು ಉತ್ತಮ. ಮಕ್ಕಳ ಭವಿಷ್ಯಕ್ಕಾಗಿ ಉಳಿತಾಯದ ಚಿಂತೆ ಮಾಡುವಿರಿ. ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಕಷ್ಟಪಡುವಿರಿ. ವೈಯಕ್ತಿಕ ಕೆಲಸವು ಹಾಗೇ ಇರಲಿದ್ದು ನಿಮಗೆ ಆತಂಕವಾದೀತು. ನಿಮ್ಮ ಇಂದಿನ ಒತ್ತಡವನ್ನು ನೋಡಿ ಮಾತುಕೊಡಿ. ಅಪವಾದದ ಮೂಲವನ್ನು ಹುಡುಕುವ ಪ್ರಯತ್ನ ಮಾಡುವಿರಿ. ನಿಮಗೆ ಆಗದೇ ಇರುವುದನ್ನು ಯಾವ ಕಾರಣಕ್ಕೂ ಒಪ್ಪಿಕೊಳ್ಳಲಾರಿರಿ.

ವೃಷಭ ರಾಶಿ: ನಿಮ್ಮ ಮನಸ್ಸಿಗೆ ಬಂದಿದ್ದನ್ನು ಯಾರು ಏನೇ ಅಂದರೂ ಬದಲಿಸಲಾರಿರಿ. ಇಂದು ನಿಮ್ಮ ಹಣವು ಬಾರದೇ ಸಾಲ ಮಾಡುವ ಪರಿಸ್ಥಿತಿ ಬರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದೆ. ನಿಮ್ಮ ಮಕ್ಕಳನ್ನು ಓದಿಸಲು ಹೊರಗೆ ಕಳುಹಿಸುವ ಆಲೋಚನೆಯನ್ನು ಮಾಡುವಿರಿ. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಅಸಫಲರಾಗುವಿರಿ. ಏಕಪಕ್ಷೀಯ ನಿರ್ಧಾರವು ನಿಮ್ಮ ವಿರೋಧಿಗಳನ್ನು ಸೃಷ್ಟಿಸಿಕೊಳ್ಳಲು ಸಹಾಯವಾಗಲಿದೆ. ಆದಾಯದ ಹೆಚ್ಚಳಕ್ಕೆ ಸುಲಭೋಪಾಯವನ್ನು ಮಾಡುವಿರಿ. ವಿದೇಶಪ್ರಯಾಣದ ನಿರೀಕ್ಷೆಯಲ್ಲಿ ಇರುವಿರಿ‌. ಕುಟುಂಬದಲ್ಲಿ ಉಂಟಾದ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವಿರಿ. ಆಲಸ್ಯದಿಂದ ಮನೆಯಲ್ಲಿ ಬೈಯಿಸಿಕೊಳ್ಳುವಿರಿ. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಇಂದು ವಿಶ್ರಾಂತಿಯು ಹೆಚ್ಚು ಬೇಕೆನಿಸಬಹುದು.

ಮಿಥುನ ರಾಶಿ: ಸುಮ್ಮನಿದ್ದಾಗ ಕಳೆದ ಘಟನೆಗಳನ್ನೇ ಮತ್ತೆ ಮತ್ತೆ ನೆನಪುಮಾಡಿಕೊಳ್ಳುವಿರಿ. ನೀವು ಆರ್ಥಿಕವಾಗಿ ಸಬಲರಾಗುವತ್ತ ಗಮನವು ಇರುವುದು. ಉದ್ಯೋಗದಲ್ಲಿ ಉಂಟಾದ ಒತ್ತಡದಿಂದ ಕೆಲಸವನ್ನು ಬದಲಿಸಲು ಇಚ್ಛಿಸುವಿರಿ. ಸ್ವಂತ ಕಾರ್ಯದಲ್ಲಿ ಸಫಲತೆ ಸಂತೋಷಗಳನ್ನು ಕಾಣುವಿರಿ. ಸಿಕ್ಕ ಮೊದಲ ವೃತ್ತಿಯನ್ನು ಗಂಭೀರವಾಗಿ ಪರಿಗಣಿಸಿ ಶ್ರದ್ಧೆಯಿಂದ ಕೆಲಸವನ್ನು ಮಾಡುವಿರಿ. ಇಂದು ಪ್ರಶಾಂತವಾಗಿ ಇರಬೇಕು ಎಂದುಕೊಂಡರೂ ಅಸಾಧ್ಯವಾದೀತು. ಉನ್ನತ ಹುದ್ದೆಯನ್ನು ನೀವು ಅಪೇಕ್ಷಿಸುವಿರಿ. ಹಣಕಾಸಿನ‌ ವಿಚಾರದಲ್ಲಿ ನೀವು ಯಾವ ಮುಲಾಜನ್ನು ಇಟ್ಟುಕೊಳ್ಳುವುದು ಬೇಡ. ಇಂದು ಬಹಳ ಆತುರದಲ್ಲಿ ಇರಲಿರುವಿರಿ. ಹಳೆಯ ವಸ್ತುವನ್ನೇ ದುರಸ್ತಿ ಮಾಡುತ್ತ ಬಳಸುವಿರಿ. ಉದ್ಯಮವನ್ನು ಬೇರೆ ರೀತಿಯಲ್ಲಿ ಮುಂದುವರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ. ಸಂಗಾತಿಯ ಮೇಲಿನ ಕೋಪವನ್ನು ಕಡಿಮೆ ಮಾಡಿಕೊಂಡರೆ ನಿರಾಳವಾಗಬಹುದು.

ಕರ್ಕಾಟಕ ರಾಶಿ: ಇನ್ಮೊಬ್ಬರ ವಾಹನವನ್ನು ಚಲಾಯಿಸುವಾಗ ಭಯವಾಗುವುದು. ನಿಮ್ಮ ಸಾಮರ್ಥ್ಯದಿಂದ ಶತ್ರುಗಳ ಪೀಡಿಯು ಇಲ್ಲವಾಗುವುದು. ನಿರೋದ್ಯೋಗದಿಂದ ಬೇಸರಗೊಂಡ ನಿಮಗೆ ದೂರದ ಊರಿನಲ್ಲಿ ಕೆಲಸವು ಸಿಗಲಿದೆ. ಸಂದರ್ಭವನ್ನು ನೋಡಿಕೊಂಡು ಮಾತನಾಡುವುದು ಉಚಿತ. ಇಂದು ನಿಮ್ಮ ಕೆಲಸವನ್ನು ಬದಲಾಯಿಸಿಕೊಳ್ಳುವಿರಿ. ನಿಮ್ಮನ್ನು ನೀವೇ ಏನೋ ಅಂದುಕೊಂಡು ಬೀಗುವಿರಿ. ರಾಜಕೀಯ ಜೀವನವು ನಿಮಗೆ ಹಿಡಿದುಕೊಳ್ಳಲಾಗದ, ಬಿಡಲಾಗದ ಸ್ಥಿತಿಯನ್ನು ತಂದುಕೊಡುವುದು. ಹಣಕಾಸಿನ ಕೊರತೆಯನ್ನು ನೀವು ಮನೆಯವರಿಗೆ ಗೊತ್ತಾಗದಂತೆ ನಿಭಾಯಿಸುವಿರಿ. ವಿರುದ್ಧಾಹರ ಸೇವಯು ನಿಮ್ಮ ಆರೋಗ್ಯವನ್ನು ಕೆಡಿಸಬಹುಸು. ವಿವಾಹಕ್ಕೆ ಸಂಬಂಧಿಸಿದಂತೆ ಓಡಾಟವನ್ನು ಮಾಡಬೇಕಾಗುವುದು. ಕೆಲವನ್ನು ನೀವು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಸೇಡನ್ನು ಮುಂದುವರಿಸದೇ ಯಥಾಸ್ಥಿತಿಯಲ್ಲಿ ಇರಿ.

ಸಿಂಹ ರಾಶಿ: ಯಾರ ಜೀವನವನ್ನೂ ಸಣ್ಣದಾಗಿ ಕಾಣುವುದು ಬೇಡ. ನಿಮ್ಮ ವಿದ್ಯೆಗೆ ಉಪಯುಕ್ತವಾದ ಉದ್ಯೋಗಕ್ಕೆ ಹಲವು ಅವಕಾಶಗಳು ತೆರೆದುಕೊಳ್ಳುವುದು. ಮಕ್ಕಳು ನಿಮಗೆ ಆರ್ಥಿಕ ಸಹಾಯವನ್ನು ಮಾಡುವರು. ಅನಿರೀಕ್ಷಿತವಾದ ಮಿತ್ರನ ಭೇಟಿಯು ಸಂತೋಷವನ್ನು ಕೊಡಲಿದೆ. ಮಕ್ಕಳ ವಿವಾಹದ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡುವಿರಿ. ಸಂಗಾತಿಯ ಕಡೆಯಿಂದ ನಿಮಗೆ ಶುಭಸಮಾಚಾರವು ಬರಲಿದೆ. ಯಾವುದಕ್ಕೂ ಅವಸರಪಡದೇ ತಾಳ್ಮೆಯಿಂದ ಎಲ್ಲವನ್ನೂ ನಿರ್ವಹಿಸಿ. ಇಂದು ಮನೋರಂಜನೆಯ ಜೊತೆ ಕಾಲ ಕಳೆಯುವಿರಿ. ವ್ಯಾಪಾರವು ಮಂದಗತಿಯಲ್ಲಿ ಸಾಗಲಿದೆ. ಇಂದಿನ‌ ಅನುಭವವು ನಿಮಗೆ ಅನೇಕ‌ ಪಾಠವನ್ನು ಕಲಿಸುವುದು. ನೌಕರರಿಗೆ ನಿಮ್ಮಿಂದ ಖುಷಿಯಾಗಲಿದೆ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಸಜ್ಜನರ ಭೇಟಿಯು ಅಕಸ್ಮಾತ್ ಆಗಿ ಆಗುವುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ.

ಕನ್ಯಾ ರಾಶಿ: ನಿಮ್ಮ ಇಂದಿನ ಮೌನವೂ ಇನ್ನೊಬ್ಬರಿಗೆ ಚಿಂತೆಯಾಗುವುದು. ನಿಮ್ಮ ಸುಳ್ಳು ಯಾರಿಂದಲಾದರೂ ತಿಳಿದುಬರುವುದು. ಇಂದು ಕೆಲವು ವಿಚಾರಕ್ಕೆ ಹೊಂದಾಣಿಕೆಯ ಕೊರತೆ ಕಂಡು ದಾಂಪತ್ಯದಲ್ಲಿ ಕಲಹವಾಗುವುದು. ವಾಹನ ಖರೀದಿಯನ್ನು ಸಾಲ‌ಮಾಡಿ ಮಾಡುವಿರಿ.‌ ಇದು ನಿಮ್ಮ ಹೊಸ ಉದ್ಯಮಕ್ಕೆ ನಾಂದಿಯನ್ನು ಹಾಡಲಿದೆ. ವಿದ್ಯಾರ್ಥಿಗಳು ಓದುವ ವಿಚಾರದಲ್ಲಿ ಹಿಂಜರಿದರೂ ಪ್ರೋತ್ಸಾಹದಿಂದ ಅಭ್ಯಾಸವನ್ನು ಮಾಡುವರು. ಪ್ರೇಮದಲ್ಲಿ ಬಿದ್ದು ಸಿಕ್ಕಿಕೊಂಡು ಕಷ್ಟಪಡುವಿರಿ. ನಮಗೆ ನೀವೇ ಸೂಕ್ತವಾದ ಚೌಕಟ್ಟು ಹಾಕಿಕೊಂಡರೆ ಒಳ್ಳೆಯದು. ನೀವು ನಂಬಿಕೆಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಶುಭಸಮಾಚಾರದ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸ್ವಂತ ಕೆಲಸಕ್ಕೆ ಉದ್ಯೋಗಿಗಳನ್ನು ಬಳಸಿಕೊಳ್ಳುವಿರಿ. ಆಕಸ್ಮಿಕ ಧನಾಗಮನವಾದರೂ ಮತ್ತಾವುದೋ ರೀತಿಯಲ್ಲಿ ಹೋಗುವುದು. ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ. ವೈಯಕ್ತಿಕ ವಿಚಾರದಲ್ಲಿ ಯಾರ ಮಧ್ಯಪ್ರವೇಶವನ್ನೂ ಸಹಿಸಲಾರಿರಿ.

ತುಲಾ ರಾಶಿ: ಭೂಮಿಯ ಖರೀದಯ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದರೂ ಅದನದನು ನಿಮ್ಮದಾಗಿಸಿಕೊಳ್ಳುವುದು ಇಂದು ಕಷ್ಟ. ಇಂದು ನಿಮ್ಮ ಬೆಳವಣಿಗೆಗೆ ಪೂರಕವಾದ ಸಂದರ್ಭಗಳು ಬಂದರೂ ಅದನ್ನು ನಿರ್ಲಕ್ಷ್ಯ ಮಾಡುವಿರಿ. ಒಮ್ಮೆಲೆ ಬರುವ ಕುಟುಂಬದ ನಿರ್ವಹಣೆಯ ಜವಾಬ್ದಾರಿ ಕಷ್ಟವಾಗುವುದು. ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ. ಹಣಕ್ಕೆ ಆಸೆಪಟ್ಟು ಮೋಸಹೋಗಬಹುದು. ಸಂಗಾತಿಯ ಜೊತೆ ಸಮಯವನ್ನು ಇಂದು ಸಂತೋಷದಿಂದ ಕಳೆಯುವಿರಿ. ನಿಮ್ಮ ಜೀವನದ ಮೇಲೆ ನಿಮಗೆ ಹೆಮ್ಮೆ ಉಂಟಾಗಬಹುದು.‌ ಇಂದು ನಿಮಗೆ ಇಷ್ಟವಾದವರ ಜೊತೆ ಹರಟೆ ಹೊಡೆಯುವಿರಿ. ಕೆಲವು ಮಾತುಗಳನ್ನು ಮನಸ್ಸಿಗೆ ಹಚ್ಚಿಕೊಂಡು ಸಂಕಟಪಡುವಿರಿ. ಸಾಲದಿಂದ ನಿಮಗೆ ಕಿರಿಕಿರಿಯಾಗುವುದು. ನಿಮ್ಮ ಪೂರ್ಣ ಸಾಮರ್ಥ್ಯವನ್ನು ಇಂದು ತೋರಿಸಲಾರಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು.

ವೃಶ್ಚಿಕ ರಾಶಿ: ಯಾರನ್ನೂ ನೀವು ಹೀಗೆ ಎಂದು ಫಲಕವನ್ನು ಅಂಟಿಸಲು ಸಾಧ್ಯವಾಗದು. ಇಂದು ನಿಮಗೆ ಪಿತ್ರಾರ್ಜಿತ ಸಂಪತ್ತನ್ನು ಪಡೆಯುವ ಅವಕಾಶವಿರುವುದು. ಉದ್ಯೋಗವನ್ನು ಪಡೆಯುವ ಉತ್ಸಾಹದಿಂದ ಪ್ರಯಾಣ ಮಾಡುವಿರಿ. ಆದರೆ ಹತಾಶರಾಗುವಿರಿ. ಸಾಲವು ನಿಮ್ಮ‌ ಮಾನಸಿಕ‌ಸ್ಥಿತಿಯನ್ನೇ ಬದಲಿಸೀತು. ಬಂಧುಗಳು ನಿಮ್ಮನ್ನು ಬಹಳವಾಗಿ‌ ದೂಷಿಸುವರು. ಕೊನೆಯ ಹಂತಕ್ಕೆ ಬಂದಿರುವ ನಿಮ್ಮ ಕಾರ್ಯಗಳು ಕೆಡಬಹುದು. ಮನೆಯ ಕಾರ್ಯಗಳು ಇಂದು ಬಹಳ ಇರಲಿದೆ. ವಾಹನವನ್ನು ಖರೀದಿಸಲು ಬೇರೆ ಊರಿಗೆ ಹೋಗಬೇಕಾದೀತು. ಹೊಸ ಉದ್ಯಮವನ್ನು ಆರಂಭಿಸುವ ಯೋಜನೆಯನ್ನು ಆಪ್ತರಿಗೆ ಹೇಳಿ, ಸಹಾಯವನ್ನೂ ಬಯಸುವಿರಿ. ಸಾಲ ಮರುಪಾವತಿಯ ಆಗದೇ ಆತಂಕವಾಗಲಿದೆ. ಅಕ್ಕಪಕ್ಕದವರು ನಿಮ್ಮ ಸ್ಥಿತಿಯನ್ನು ಕಂಡು ಆಡಿಕೊಳ್ಳುವ ಸಾಧ್ಯತೆ ಇದೆ. ಅನಿವಾರ್ಯ ನಿರ್ಧಾರಗಳನ್ನು ತೆಗೆದುಕೊಂಡು ಅನಂತರ ಪಶ್ಚಾತ್ತಾಪಪಡುವಿರೊ. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.

ಧನು ರಾಶಿ: ನಿಮ್ಮ ಕಾರ್ಯವನ್ನು ಮಾಡಲು ಒಂದೊಂದೆ ಕಾರಣವನ್ನು ಹೇಳುವಿರಿ. ನಿಮ್ಮ ಇಂದಿನ ಎಲ್ಲ ಕಾರ್ಯಗಳಿಗೂ ಟೀಕೆಗಳು ಇರಲಿದ್ದು, ಅದನ್ನು ಮನಸ್ಸಿಗೆ ತಂದುಕೊಳ್ಳುವಿರಿ. ನಿಮ್ಮ‌ಕಾರ್ಯವನ್ನು ವೀಕ್ಷಿಸಿ ನಿಮಗೆ ಹೆಚ್ಚಿನ‌ ಬಡ್ತಿಯನ್ನು ಖಾಸಗಿ‌ ಸಂಸ್ಥೆ ಕೊಡಲಿದೆ. ಆರ್ಥಿಕ ಹಿನ್ನಡೆಯನ್ನು ನೀವು ಸುಧಾರಿಸಿಕೊಳ್ಳಬೇಕಾಗುವುದು. ನಿಮ್ಮ ವ್ಯಕ್ತಿತ್ವವು ಇತರರಿಗೆ ಉದಾಹರಣೆಯಾಗಲಿದೆ. ಸಮಯಕ್ಕೆ ಕಾದಿದ್ದು‌ ಸಾರ್ಥಕ‌ ಎನಿಸಬಹುದು. ಮಾತಿನಲ್ಲಿ ಮೃದುತ್ವ ಇರಲಿ. ವೈಯಕ್ತಿಕ ಕಾರ್ಯ ನಿಮಿತ್ತ ಪ್ರಯಾಣ ಮಾಡಬೇಕಾಗಬಹುದು.‌ ಅಪರಿಚಿತ ಕೆಲಸದಲ್ಲಿ ಮುನ್ನುಗ್ಗಿ ಕಾರ್ಯವನ್ನು ಸಾಧಿಸುವಿರಿ. ಕೆಲವು ದೋಷಗಳು ನಿಮಗೆ ನಗಣ್ಯವಾಗಲಿವೆ. ನಕಾರಾತ್ಮಕ ಮಾತುಗಳಿಗೆ ಸ್ಪಂದಿಸುವುದು ಬೇಡ. ಸ್ನೇಹಿತರನ್ನು ಕಳೆದುಕೊಳ್ಳುತ್ತೇನೆ‌ ಎಂಬ ಭಯವು ಕಾಡಬಹುದು. ಮನಸ್ಸಿನ ನೋವನ್ನು ನೀವೇ ಅನುಭವಿಸಿ ಕಡಿಮೆ‌ ಮಾಡಿಕೊಳ್ಳುವಿರಿ. ಉದ್ಯೋಗವಿಲ್ಲದೇ ಬೇಸರಗೊಂಡ ನಿಮಗೆ ಬೇರೆಕಡೆಯಲ್ಲಿ ಕೆಲಸವು ಸಿಗುವುದು. ಆಕಸ್ಮಿಕವಾಗಿ ಕೆಲವರನ್ನು ಕಳೆದುಕೊಳ್ಳುವಿರಿ. ಅಪರಿಚಿತರ ಮಾತಿನಿಂದ ನಿಮ್ಮ ವ್ಯಕ್ತಿತ್ವವು ಬದಲಾಗುವುದು.

ಮಕರ ರಾಶಿ: ಸಮಯವು ಸದುಪಯೋಗವಾಗಬೇಕಾದರೆ ಅದರ ಬಗ್ಗೆ ಪೂರ್ಣ ಗಮನಕೊಟ್ಟು ಸರಿಮಾಡಿಕೊಳ್ಳಿ. ಇದರಿಂದ ನಿಮ್ಮ ಕಾರ್ಯದಲ್ಲಿ ವೇಗ ಅಧಿಕವಾಗುವುದು. ನಿಮಗೆ ಇಂದು ದಾನ ಕೊಡಬೇಕೆಂಬ ಮನಸ್ಸು ಬರುವುದು. ಉತ್ತಮವಾದ ವಸ್ತುವನ್ನು ಉತ್ತಮರಿಗೇ ಕೊಡಿ. ಉದ್ಯಮದಲ್ಲಿ ನಿಮ್ಮ ಚಿಂತನಾರಹಿತ ನಿರ್ಧಾರದಿಂದ‌ ನಿಮಗೆ ನಷ್ಡವಾಗಲಿದೆ.‌ ನಿಮ್ಮ ಎಲ್ಲ‌ ಯೋಜನೆಯೂ ಬಿಡಮೇಲಾಗಬಹುದು. ಸಂಗಾತಿಗೆ ಪ್ರೀತಿಯನ್ನು ನೀಡಿ ಖುಷಿಪಡಿಸಿ. ಪೂರ್ವ ಯೋಜನೆಯನ್ನು ಮಾಡದೇ ವಿನಾಕಾರಣ ಹಣವನ್ನು ನಷ್ಟಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲಿದ್ದಾರೆ. ನಿಮ್ಮ ವಸ್ತುಗಳು ಇನ್ನೊಬ್ಬರಿಂದ ಹಾಳಾಗಿದ್ದು ನಿಮಗೆ ಬಹಳ‌ ಬೇಸರವಾದೀತು.‌ ಕಛೇರಿಯಲ್ಲಿ ನಿಮಗೆ ಪ್ರಶಂಸೆ‌ಯು ಸಿಗಲಿದೆ. ಸರಳತೆಯನ್ನು ರೂಢಿಸಿಕೊಳ್ಳುವುದು ನಿಮಗೇ ಒಳ್ಳೆಯದು. ಅಸೂಯೆಪಟ್ಟರೆ ನಿಮ್ಮನ್ನೇ ನೀವು ಸುಟ್ಟಕೊಂಡಂತೆ. ವಿಲಾಸಿ ಜೀವನದ ಕನಸಿನಲ್ಲಿ ಇರುವಿರಿ. ಪ್ರೀತಿಯನ್ನು ಕುಟುಂಬದ ಜೊತೆ ಹಂಚಿಕೊಳ್ಳುವಿರಿ.

ಕುಂಭ ರಾಶಿ: ನಿಮ್ಮ ದುಃಖವನ್ನೇ ಸರಿಮಾಡಿಕೊಳ್ಳದೇ ಇನ್ನೊಬ್ಬರ ಬಗ್ಗೆ ಕಾಳಜಿ ಅಧಿಕವಾಗುವುದು. ಇಂದು ನೀವು ವಹಿಸಿಕೊಟ್ಟ ಕಾರ್ಯವನ್ನು ಮಾಡಿದ್ದು ನಿಮಗೆ ಸಂತೋಷವಾಗಲಿದೆ. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ನಿಮ್ಮ‌ ಗುರಿಯನ್ನು ತಲುಪಲು ನಿಮಗೆ ಸದ್ಯಕ್ಕೆ ಅಸಾಧ್ಯ ಎನಿಸಬಹುದು. ಫಲ ಬರುವತನಕ ನಿಮ್ಮ ಪ್ರಯತ್ನವಿರಲಿ. ನೀವು ವಿರೋಧವನ್ನು ಲೆಕ್ಕಿಸದೇ ಮುನ್ನುಗ್ಗಿ ಅಪಾಯವನ್ನು ತಂದುಕೊಳ್ಳುವಿರಿ. ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳು ಕಷ್ಟವಾದೀತು. ಇನ್ನೊಬ್ಬರ ಮಾತಿಗೂ ಬೆಲೆ ಮತ್ತು ಅವಕಾಶವನ್ನು ಮಾಡಿ‌ಕೊಡಿ. ಯಾವುದರ ಮೇಲೂ ಹೆಚ್ಚಿನ ನಿರೀಕ್ಷೆ ಬೇಡ. ಅಪರಿಚಿತರು ನಿಮ್ಮನ್ನು ಟೀಕಿಸಬಹುದು. ಸ್ನೇಹಿತರು ನಿಮ್ಮ ಉದ್ಯೋಗವನ್ನು ಬದಲಿಸಲು ಬಹಳ ಒತ್ತಾಯ ಮಾಡುವರು. ಸಂಗಾತಿಯ ಜೊತೆ ಮನಸ್ತಾಪ ಬರುವ ಕಾರಣ, ನಿಮ್ಮ ಕೆಲಸ ಕಾರ್ಯಗಳಲ್ಲಿ ಒಂದಿಲ್ಲೊಂದು ಕಿರಿಕಿರಿ ಇರುವುದು. ಭಾವನಾತ್ಮಕವಾಗಿ ನಿಮಗೆ ಸೋಲಾಗುವುದು. ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಸಫಲರಾಗುವುದಿಲ್ಲ.

ಮೀನ ರಾಶಿ: ನಿಮ್ಮ ಮನವನ್ನು ಒಲಿಸುವುದು ಕಷ್ಟ. ಯಾವುದೂ ನಿಮಗೆ ಸಮಾಧಾನ ಕೊಡದು. ನಿಮ್ಮ ವ್ಯಾಪಾರದ ವಿಸ್ತಾರದ ಬಗ್ಗೆ ಪಾಲುದಾರರ ಜೊತೆ ಮಾತನಾಡುವಿರಿ. ವಾಹನ ಚಾಲನೆಯಿಂದ ಅಪಘಾತ ಸಂಭವಿಸಬಹುದು. ನಕಾರಾತ್ಮಕತೆಯಿಂದ ಹೊರಬರುವುದು ಸುಲಭವಲ್ಲ. ನಿಮಗೆ ಇಂದು‌ ಮನೆಯಲ್ಲಿಯೇ ಇರಬೇಕಾದ ಸ್ಥಿತಿಯು ಬಂದಿರುವುದರಿಂದ‌ ಬಂಧನದಂತೆ ಅನ್ನಿಸಬಹುದು. ಹಣದ ವ್ಯವಹಾರವು ಸುಲಲಿತವಾಗಿ ಆಗಲಿದೆ. ಪ್ರತಿಭಾನ್ವಿತರಿಗೆ ಪ್ರೋತ್ಸವು ಸಿಗುವುದು. ಸಕಾಲಕ್ಕೆ ಸಿಗದ ಮಾಹಿತಿಯಿಂದ ಸೌಲಭ್ಯದಿಂದ‌ ವಂಚಿತರಾಗುವಿರಿ. ನಿಮ್ಮ ವಿವಾಹದ‌ ಮಾತು‌ಕತೆಗಳು ನಡೆಯಬಹುದು. ಇಂದು ನೀವು ಸವಾಲನ್ನು ಸ್ವೀಕರಿಸುವ ಮನಸ್ಸು ಇರಲಿದೆ. ನಿಮ್ಮ ಕಲಹದಿಂದ ಮತ್ತಾರೋ ಪ್ರಯೋಜನ ಪಡೆದಾರು. ಕೃಷಿ ಕ್ಷೇತ್ರದತ್ತ ನಿಮ್ಮ‌ ಚಿತ್ತವು ಇರಲಿದೆ. ಒತ್ತಾಯ ಪೂರ್ವಕವಾಗಿ ಯಾವುದನ್ನೂ ಮಾಡಿಸುವುದು ಬೇಡ. ಅದು ಆಗುವುದಿಲ್ಲ. ಆಂತರಿಕ ಕಲಹವು ಎಲ್ಲರಿಗೂ ಗೊತ್ತಾಗುವಂತೆ ಮಾಡಿಕೊಳ್ಳುವಿರಿ. ಮಾಡಿಕೊಳ್ಳುವಿರಿ.

ಲೋಹಿತ ಹೆಬ್ಬಾರ್ – 8762924271 (what’s app only)

ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್