Daily Horoscope 16 September 2024: ಹಣದ ತೊಂದರೆಗೆ ಅನ್ಯರ ಸಹಾಯ ಕೇಳಬೇಕಾಗುವುದು

ಸೆಪ್ಟೆಂಬರ್​ 16,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ಶೈಕ್ಷಣಿಕ ಪ್ರಗತಿಯಿಂದ ನಿಮಗೆ ಉತ್ತಮ ಅವಕಾಶಗಳು ಲಭ್ಯವಾಗುವುವು. ಒಮ್ಮೆಲೆ ಕಷ್ಟಗಳು ಬರುವುದರಿಂದ ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 16 September 2024: ಹಣದ ತೊಂದರೆಗೆ ಅನ್ಯರ ಸಹಾಯ ಕೇಳಬೇಕಾಗುವುದು
ಹಣದ ತೊಂದರೆಗೆ ಅನ್ಯರ ಸಹಾಯ ಕೇಳಬೇಕಾಗುವುದು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 16, 2024 | 12:02 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸುಕರ್ಮ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:32 ಗಂಟೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:27ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:58 ರಿಂದ ಸಂಜೆ 03:30ರ ವರೆಗೆ.

ಮೇಷ ರಾಶಿ: ಇಂದು ನ್ಯಾಯವನ್ನು ಪಡೆಯಲು ಬೇರೆ ದಾರಿಗಳಿಂದ ಪ್ರಯತ್ನಿಸುವಿರಿ. ಇಂದು ಒಂದೇ ಕಾರ್ಯವನ್ನು ಮತ್ತೆ ಮಾಡಬೇಕಾಗುವುದು. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ವಾಹನದಿಂದ ನಿಮಗೆ ತೊಂದರೆಯಾಗಲಿದೆ. ಆಸ್ತಿಯ ಖರೀದಿಯ ಬಗದಗೆ ಇಂದು ನೀವು ಹೊಸ ಪಾಲುದಾರಿಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು. ವಿದ್ಯುತ್ ಯಂತ್ರಗಳ ಖರೀಯಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಸಬಲತೆಗೆ ಕ್ರಮವನ್ನು ಕೈಗೊಳ್ಳುವುದು ಉತ್ತಮ. ನಿಮ್ಮ‌ ಭಾವನೆಯನ್ನು ಕುಟುಂಬವು ಗೌರವಿಸುವುದು. ಇಂದಿನ ಹೆಚ್ಚಿನ‌ ಸಮಯವನ್ನು ಧಾರ್ಮಿಕ ಕೆಲಸಕ್ಕೆ ಮೀಸಲಿಡಿ. ಸಂಗಾತಿಯ ವಿಚಾರವನ್ನು ಇನ್ನೊಬ್ಬರ ಬಳಿ ಹೇಳಿ ಸಮಾಧಾನ ಪಡುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ಉದ್ಯೋಗದಲ್ಲಿ ಸುಲಭದ ಉಪಾಯವನ್ನು ಕಂಡುಕೊಳ್ಳುವಿರಿ.

ವೃಷಭ ರಾಶಿ; ಆತ್ಮಾವಲೋಕನ ಮಾಡಿಕೊಳ್ಳುವುದು ನಿಮಗೆ ಯೋಗ್ಯ. ನಿಮ್ಮ ನಿಶ್ಚಿತವಾದ ಯೋಜನೆಯನ್ನು ಬದಲಾಯಿಸುವಿರಿ. ತಾಯಿಯ‌ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಲಿದೆ. ಕುಟುಂಬದಲ್ಲಿ ನಿಮ್ಮ ಬಗ್ಗೆ ಆತಂಕ ಉಂಟಾಗಬಹುದು. ಪ್ರಯತ್ನಪಟ್ಟು ಮಾಡುವ ಕೆಲಸವು ನಿಮಗೆ ಅನುಕೂಲವನ್ನು ಮಾಡುವುದು. ನಿಮ್ಮ ಕಾರ್ಯದ‌ ಬಗ್ಗೆ ಸಕಾರಾತ್ಮಕ ಭಾವನೆಯು ಕಡಿಮೆ ಆಗಬಹುದು. ಉದ್ವಿಗ್ನತೆಯು ಉಂಟಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು. ನೀವು ಇಂದು ಕೆಲಸದಲ್ಲಿ ಬದಲಾವಣೆಯನ್ನು ಇಚ್ಛಿಸುವಿರಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರ ಬನ್ನಿ. ನಿಮ್ಮ ಮೇಲೆ ವಿರೋಧಿಗಳ ಆಕ್ರಮಣವು ಆಗಬಹುದು. ಬೇಡದಿದ್ದರೂ ಸಹಾಯವು ನಿಮ್ಮ ಪಾಲಿಗೆ ಬರುವುದು. ಉದ್ಯೋಗದಲ್ಲಿ ಒತ್ತಡವಿರುವ ಕಾರಣ ಉದ್ಯೋಗವನ್ನು ಬದಲಿಸುವಿರಿ.

ಮಿಥುನ ರಾಶಿ: ಏಕಕಾಲಕ್ಕೆ ಹಲವಾರು ಖರ್ಚುಗಳು ಬಂದು ನಿಮಗೆ ತಲೆಬಿಸಿ ಆಗುವುದು. ನಿಮ್ಮ ಬಗ್ಗೆ ಅಪರಿಚಿತರು ಪ್ರೀತಿ ತೋರಿಸಿದರೆ ಮುಜುಗರವಾಗುವುದು. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವಾಗಬಹುದು. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗುವಿರಿ. ನಿಮ್ಮ ಆದಾಯವನ್ನು ಅಳೆಯಬಹುದು. ಪ್ರೇಯಸಿಯನ್ನು ದೂರಮಾಡಿಕೊಂಡು ಸಂಕಟಪಡುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಇಂದು ಒಂದು ಅವಕಾಶ ಸಿಗಲಿದೆ. ಯಾರಾದರೂ ನಿಮಗೆ ಉತ್ತಮ ಮಾರ್ಗದರ್ಶನವನ್ನು ಮಾಡಬಹುದು. ಬಂಧುಗಳ ಜೊತೆ ಬಿಚ್ಚುಮನಸ್ಸಿನಿಂದ ಮಾತನಾಡಲಾರಿರಿ.‌ ನಿಮ್ಮ ಅನುಭವದ ಆಧಾರದ ಮೇಲೆ ಕೆಲಸವು ಇರಲಿದೆ. ಯಂತ್ರೋಪಕರಣಗಳ‌ ವಿಚಾರದಲ್ಲಿ ನೀವು ಜಾಗರೂಕರಾಗಿರುವುದು ಮುಖ್ಯ. ವಿದೇಶಿ ಕಂಪೆನಿ ಉದ್ಯೋಗವನ್ನು ಬಯಸುವಿರಿ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ. ಕಾರ್ಯದಲ್ಲಿ ದಕ್ಷತೆಯನ್ನು ತೋರಿಸುವಿರಿ.

ಕರ್ಕಾಟಕ ರಾಶಿ: ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುವುದು ಇಷ್ಟವಾಗುವುದು. ಇಂದು ನಿಮ್ಮ ಪ್ರೇಮವು ಸ್ನೇಹಿತರ ಮೂಲಕ ಸಫಲವಾಗುವುದು. ಕೆಲಸದ ಸ್ಥಳದಲ್ಲಿ ಹಿರಿಯರು ಮಾರ್ಗದರ್ಶನ ಪಡೆಯಿರಿ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸುವರು. ಸಾಲವನ್ನು ಮುಕ್ತಾಯ‌ ಮಾಡಿಕೊಂಡು ಸಂತೃಪ್ತಿ ಆಗುವುದು. ವ್ಯಾಪಾರದ ಉದ್ದೇಶಕ್ಕೆ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ. ನಿಮ್ಮ ಸಂಗಾತಿಯಿಂದ‌ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದೀತು. ನಿಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳುವುದು ಉತ್ತಮ. ನಿಮ್ಮ ವೃತ್ತಿ, ಹಣಕಾಸಿನ‌ ವಿಚಾರಕ್ಕೆ ಬಂದಾಗ ನೀವು ಬಹಳ ದುರ್ಬಲರಾಗುವಿರಿ. ಅಪರಿಚಿತರ ಬಗ್ಗೆ ಎಚ್ಚರಿಕೆ ಅವಶ್ಯಕ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ಬಂಧುಗಳ‌ ಟೀಕೆಗೆ ನೀವು ಸೊಪ್ಪುಹಾಕಲಾರಿರಿ. ಕಾರ್ಯದಲ್ಲಿ ಇನ್ನೊಬ್ಬರ ಸಹಾಯವನ್ನು ಬಯಸುವಿರಿ.

ಸಿಂಹ ರಾಶಿ: ನಿಮ್ಮ ಉದ್ಯೋಗದ ನಿಷ್ಠೆಯು ಮೇಲಧಿಕಾರಿಗಳಿಗೆ ಇಷ್ಟವಾಗುವುದು. ಇಂದು ನೀವು ನಿಶ್ಚಿಂತೆಯಿಂದ ವೃತ್ತಿಯಲ್ಲಿ ತೊಡಗಿಕೊಳ್ಳುವಿರಿ. ಸಾಲವನ್ನು ನೆನೆಸಿಕೊಂಡು ನೀವು ಬಹಳ ಸಂಕಟಪಡುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಲಿದೆ. ಬಂಧುಗಳ ಅಸಹಜವಾದ ಮಾತನ್ನು ತಿರಸ್ಕರಿಸುವಿರಿ. ನಿಮ್ಮ ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನಗಳು ನಿಮ್ಮ ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಕುಟುಂಬದಲ್ಲಿ ನೀವು ಗಂಭೀರವಾದ ವಿವಾದಗಳನ್ನು ಮಾಡುವಿರಿ. ನೀವು ಮತ್ತು ಸಂಗಾತಿ ನಡುವೆ ಹಣದ ಬಗ್ಗೆ ಬಿಸಿ ಬಿಸಿ ಚರ್ಚೆ ಆಗಲಿದೆ. ಒತ್ತಡವಿಲ್ಲದೆ ಇಂದು ನಿಮ್ಮ ದಿನವನ್ನು ಆನಂದಿಸಲು ಪ್ರಯತ್ನಿಸಿ. ನಿಮ್ಮ ನಿಮ್ಮ ಒತ್ತಡವನ್ನು ಇತರರ ಸಹಾಯದಿಂದ ಕಡಿಮೆಮಾಡಿಕೊಳ್ಳಲು ಸಾಧ್ಯ. ಸಾಮಾಜಿಕವಾಗಿ ಏನನ್ನಾದರೂ ಮಾಡಬೇಕು ಎಂದೆನಿಸಬಹುದು. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ.

ಕನ್ಯಾ ರಾಶಿ: ಯಾವ ಒಪ್ಪಂದವನ್ನೂ ಬಾಯಿ ಮಾತಿನಲ್ಲಿ ಮಾಡಿಕೊಳ್ಳಬೇಡಿ. ನೀವು ಇಂದು ಆಪ್ತರನ್ನೇ ದ್ವೇಷಿಸುವಿರಿ. ಹಣದ ತೊಂದರೆಗೆ ಅನ್ಯರ ಸಹಾಯವನ್ನು ಕೇಳಬೇಕಾಗುವುದು. ಸ್ಥಿರಾಸ್ತಿಯಲ್ಲಿ ಹೆಚ್ಚು ಲಾಭವನ್ನು ಪಡೆಯಲು ನೀವು ಯೋಚಿಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದುವಾಗುವಿರಿ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಅನ್ಯರ ಬೆಂಬಲ ಸಿಗಲಿದೆ. ಇಂದು ನೀವು ಲವಲವಿಕೆಯಿಂದ ಇದ್ದು ಇನ್ನೊಬ್ಬರನ್ನೂ ಹಾಗೆ ನೋಡಿಕೊಳ್ಳುವಿರಿ. ಶೈಕ್ಷಣಿಕ ಪ್ರಗತಿಯಿಂದ ನಿಮಗೆ ಉತ್ತಮ ಅವಕಾಶಗಳು ಲಭ್ಯವಾಗುವುವು. ಬೇಕಾದಷ್ಟು ಸಂಪತ್ತಿದ್ದರೂ ಅದನ್ನು ಖರ್ಚು ಮಾಡುವ ಮನಸ್ಸು ಬಾರದು. ಒಮ್ಮೆಲೆ ಕಷ್ಟಗಳು ಬರುವುದರಿಂದ ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಹೆಣ್ಣುಮಕ್ಕಳ ಬಗ್ಗೆ ನಿಮಗೆ ಅತಿಯಾದ ಕನಿಕರ ಇರುವುದು. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಸಣ್ಣ ಉದ್ಯೋಗವಾದರೂ ಪ್ರಾಮಾಣಿಕತೆ ಇರಲಿ.

ತುಲಾ ರಾಶಿ: ವ್ಯವಸ್ಥೆಯ ಕೈಮೀರುವತ ತನಕ‌ ಅದನ್ನು ಬಿಡುವುದು ಬೇಡ. ಇಂದು ಅವಸರದಲ್ಲಿ ಉದ್ಯೋಗದ ತೀರ್ಮಾನವನ್ನು ನೀವು ತೆಗೆದುಕೊಳ್ಳಬೇಡ. ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟವಾಗುತ್ತದೆ. ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವ ಮನಃಸ್ಥಿತಿಯನ್ನು ಹೊಂದುವಿರಿ. ನೀವು ಸಭ್ಯರಂತೆ ಕಂಡರೂ ಯಾರೂ ನಂಬಲಾರರು. ನಿಮ್ಮ ಇಂದಿನ ಆರ್ಥಿಕ ಸ್ಥಿತಿಯು ನಿಮಗೆ ಹೆಚ್ಚು ಸುಖ ಕೊಡುವುದು. ಸಂಗಾತಿಯಿಂದ ನೀವು ಬೇಸರವನ್ನು ಅನುಭವಿಸಬೇಕಸದೀತು. ನಿಮ್ಮ ಇಂದಿನ ಕೆಲಸಗಳು ಹೆಚ್ಚು ಸಮಾಧಾನವನ್ನು ತರುವುದು. ಇಂದು ನೀವು ಗಂಭೀರವಾದ ಆಲೋಚನೆಯಲ್ಲಿ ಮುಳುಗುವಿರಿ. ನಿಮ್ಮ ಗೊಂದಲಗಳಿಗೆ ಉತ್ತರವನ್ನು ನೀವೇ ಕಂಡುಕೊಳ್ಳುವಿರಿ. ಬೆಲೆಬಾಳುವ ವಸ್ತುಗಳ ಖರೀದಿಯಿಂದ ಆರ್ಥಿಕ ಹೊರೆಯಾಗುವುದು. ಉದ್ಯೋಗದ ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಬಂದ ಹಣವನ್ನು ಸರಿಯಾಗಿ ವಿನಿಯೋಗವಾಗುವಂತೆ ಮಾಡಿ.

ವೃಶ್ಚಿಕ ರಾಶಿ: ಕೌಟುಂಬಿಕ ವಾತಾವರಣವನ್ನು ನೀವು ಸಂತೋಷದಿಂದ ಅನುಭವಿಸುವಿರಿ. ಇಂದು ಸ್ನೇಹಿತರು ನಿಮಗೆ ಬೇಕಾದ ಸಲಹೆಯನ್ನು ಪಡೆಯುವಿರಿ. ಅನಿರೀಕ್ಷಿತವಾಗಿ ಬಂದ ಜವಾಬ್ದಾರಿಗಳು ನೀವು ನಿರ್ವಹಿಸಬೇಕಾಗುವುದು. ಸ್ವಂತ ಉದ್ಯೋಗವನ್ನು ನಡೆಸಲು ಚಿಂತನೆ ಆರಂಭವಾಗಲಿದೆ. ನಿಮ್ಮ ಸ್ಥಿರಾಸ್ತಿಯ ಬಗ್ಗೆ ಶಂಕೆ ಇರುವುದು. ನಿಮ್ಮ‌ ಸುತ್ತಮುತ್ತಲಿನವರು ನಿಮಗೆ ತೊಂದರೆ ಕೊಡಬಹುದು. ಇಂದು ನೀವು ಒತ್ತಡದ ಕೆಲಸದಿಂದ ವಿರಾಮ ಪಡೆಯುವಿರಿ. ವಿದೇಶದ ನಿಮ್ಮ ಉದ್ಯಮವು ಕಷ್ಟ ಎನಿಸಬಹುದು. ಹೊಸದಾಗಿ ಕೆಲಸಕ್ಕೆ ಸೇರಿದವರು ಕಾರ್ಯದಲ್ಲಿ ಉತ್ಸಾಹವನ್ನು ತೋರಿಸುವರು. ನೀವು ಇಂದು ಆಸ್ತಿಕತೆಯನ್ನು ರೂಢಿಸಿಕೊಳ್ಳುವಿರಿ. ನಿಮ್ಮ ವೃತ್ತಿಪರ ಜೀವನದಲ್ಲಿ ಅದೃಷ್ಟವು ನಿಮ್ಮ ಪರವಾಗಿರಬಹುದು. ಸೃಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ. ಸ್ತ್ರೀಯರು ವಸ್ತುಗಳನ್ನು ಬದಲಾಯಿಸಿಕೊಳ್ಳುವರು.

ಧನು ರಾಶಿ: ನಿಮ್ಮ ಬೆಳವಣಿಕೆಗೆಯು ಸಾತ್ತ್ವಿಕ ರೀತಿಯಲ್ಲಿ ಇರಲಿ. ಇಂದು ಸಿಟ್ಟಿನ ಭರದಲ್ಲಿ ನೀವು ವಿವೇಚನೆಯನ್ನು ಕಳೆದುಕೊಳ್ಳುವಿರಿ. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ಪ್ರೀತಿಯಿಂದ ಕೊಟ್ಟ ಹಣವನ್ನು ನೀವು ಕೇಳುವುದರೊಳಗೆ ಹಿಂದಿರುಗಿಸಿ. ವಾಸದ ಸ್ಥಳವನ್ನು ನೀವು ಬದಲಾಯಿಸುವಿರಿ. ನೀವು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕಾದೀತು. ನಿಮ್ಮ ಸಾಧನೆಯನ್ನು ನೀವು ಎಲ್ಲರ ಬಳಿ ಹೇಳಿಕೊಳ್ಳುವಿರಿ. ಮಹತ್ತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸೂಕ್ಷ್ಮ ವಿವೇಕದ ಅಗತ್ಯತೆ ಇದೆ. ತಂತ್ರವನ್ನು ಹೂಡಿ ನಿಮ್ಮ ಹಿತಶತ್ರುವನ್ನು ಕಂಡುಕೊಳ್ಳುವಿರಿ. ನಿಮ್ಮ‌ ಬಗ್ಗೆ ನಿಮಗೆ ಹೆಮ್ಮೆ ಎನಿಸಬಹುದು. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಕಳೆದುಕೊಂಡಿದ್ದನ್ನು ಹೇಗಾದರೂ ಮಾಡಿ ಪಡೆದುಕೊಳ್ಳುವಿರಿ. ವ್ಯಾಪಾರದಲ್ಲಿ ಜಾಗರೂಕತೆ ಮುಖ್ಯ.

ಮಕರ ರಾಶಿ: ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರದರ್ಶನ ಇರಲಿದೆ. ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳು ಎದುರಾಗುವುದು. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಅಧಿಕವಾಗಿ ಇರಲಿದೆ. ಮಿತ್ರರು ನಿಮ್ಮ ಸಹಾಯಕ್ಕೆ ಬರುವರು. ಅನನುಕೂಲತೆಯನ್ನು ನೀವು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ. ನಿಮಗೆ ಆತ್ಮಾಭಿಮಾನದಿಂದ ನಿಮಗೇ ತೊಂದರೇ ಇಂದಿನ ದಿನವನ್ನು ಆನಂದಿಸಲು, ನಿಮ್ಮ ಜವಾಬ್ದಾರಿಗಳನ್ನು ಪೂರೈಸುವತ್ತ ಗಮನವಿರಲಿ. ವ್ಯಕ್ತಿಗತ ಸಂಬಂಧಗಳನ್ನು ಸರಿಯಾಗಿ ಇರುವಂತೆ ನೋಡಿಕೊಳ್ಳಿ. ನೀವು ಎಲ್ಲವನ್ನೂ ಪ್ರಾಯೋಗಿಕ ಹಿನ್ನೆಲೆಯಲ್ಲಿ ನೋಡುವಿರಿ. ನೀವು ಮಕ್ಕಳಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಿರಿ. ಕೆಲವು ಸವಾಲುಗಳು ಉದ್ಭವಿಸಬಹುದು. ನಿಮ್ಮ ವಿವಾಹವು ಕಾನೂನು ವಿವಾದದ ವಿಷಯವಾಗಿದ್ದರೆ, ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಪ್ರಯೋಗ ವಿಭಾಗದಲ್ಲಿ ಕೆಲಸ ಮಾಡುವರು. ಯಾರ ಮಾತನ್ನಾದರೂ ಸಮಾಧಾನದಿಂದ ಕೇಳಿ.

ಕುಂಭ ರಾಶಿ: ಪರಧನದಿಂದ ನಿಮಗೆ ಹಿಂಜರಿಕೆ ಇರಲಿದೆ. ಹೂಡಿಕೆಯ ಕಾರಣದಿಂದ‌ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು‌ ಮರುಕಳಿಸಬಹುದು. ವಿದೇಶದ ವ್ಯಾಪಾರವನ್ನು ಮಾಡುವವರಿಗೆ ಶುಭ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಲಿದೆ. ಸಂಗಾತಿಯ ಜೊತೆ ಸಮಯವನ್ನು ಕಳೆಯುವಿರಿ. ಶೈಕ್ಷಣಿಕವಾಗಿ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು. ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವುದು ಉತ್ತಮ. ಸಂಗಾತಿಯಿಂದ ನಿಮಗೆ ಬೇಸರವಾಗಲಿದೆ. ಇದು ನಿಮಗೆ ಸಂತೋಷವೂ ಆಗಲಿದೆ. ನಿಮ್ಮ ಪ್ರಯತ್ನಗಳಿಂದ ಉತ್ತಮ ಫಲಿತಾಂಶವನ್ನು ಕಾರಣವಾಗಬಹುದು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.

ಮೀನ ರಾಶಿ: ಖಾಸಗಿ ಉದ್ಯೋಗದಲ್ಲಿ ಇದ್ದವರಿಗೆ ತೊಂದರೆ. ನಿಮಗೆ ವ್ಯವಹಾರವು ಅಂದುಕೊಂಡಷ್ಟು ಸಾಧಿಸಲಾಗದೇ ಇಂದು ಬೇಸರವಾಗಬಹುದು. ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಮಾಡಬಹುದು. ಸಣ್ಣಮಟ್ಟಿನ‌ ಗೌರವವು ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿಯು ಇರಲಿದ್ದು, ನೀವು ತೊಡಗಿಕೊಳ್ಳುವಿರಿ. ಮಾನಸಿಕ ಅಸ್ಥಿರತೆಯನ್ನು ನೀವು ನಿಯಂತ್ರಮಾಡಬೇಕಾಗುವುದು. ನೀವು ಸ್ಪರ್ಧೆಯಲ್ಲಿ ಜಯಗಳಿಸಲು ಬಹಳ ಪ್ರಯತ್ನವನ್ನು ಮಾಡುವಿರಿ. ಕಾನೂನು‌ಸಮರಕ್ಕೆ ನಿಮಗೆ ಹೊಸ ಆಯಾಮ‌ ಸಿಗಲಿದೆ. ಲಾಭವನ್ನು ಪಡೆಯಲು ಹೋಗಿ ಇರುವ ಸಂಪತ್ತನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ. ಭವಿಷ್ಯದ‌ ಕುರಿತಂತೆ ನಿಮ್ಮ ಉದ್ದೇಶವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ಇಂದು ನಿಮಗೆ ಆತ್ಮತೃಪ್ತಿಯು ಇರುವುದು. ಯಾವುದನ್ನಾದರೂ ನಂಬಿಕಸ್ಥರ ಜೊತೆ ವ್ಯವಹರಿಸಿ. ನಿಮ್ಮನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವಿರಿ.

ಲೋಹಿತ ಹೆಬ್ಬಾರ್ – 8762924271 (what’s app only)