Daily Horoscope 19 August 2024: ನಿಮ್ಮ ಮಂತ್ರಕ್ಕೆ‌ ಮಾವಿನ ಕಾಯಿ ಬೀಳದು, ಪ್ರಯತ್ನ ಮುಖ್ಯ

ಆಗಸ್ಟ್​ 19,​ 2024ರ​​ ನಿಮ್ಮ ರಾಶಿಭವಿಷ್ಯ: ಇಂದು ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ಅತಿಥಿಗಳಿಗೆ ನಿಮ್ಮಿಂದ ಅನಾದರ ಸಿಗುವ ಸಾಧ್ಯತೆ ಇದೆ. ಒಂದು ಗುಣದಿಂದ ಅವರ ಸ್ವಭಾವವನ್ನು ಅಳೆಯುವುದು ಸರಿಯಲ್ಲ. ಆತುರದಿಂದ ನಿಮ್ಮವರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಹಾಗಾದರೆ ಆಗಸ್ಟ್​ 19ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 19 August 2024: ನಿಮ್ಮ ಮಂತ್ರಕ್ಕೆ‌ ಮಾವಿನ ಕಾಯಿ ಬೀಳದು, ಪ್ರಯತ್ನ ಮುಖ್ಯ
ನಿಮ್ಮ ಮಂತ್ರಕ್ಕೆ‌ ಮಾವಿನ ಕಾಯಿ ಬೀಳದು, ಪ್ರಯತ್ನ ಮುಖ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 19, 2024 | 12:02 AM

ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:51 ಗಂಟೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:28, ಯಮಘಂಡ ಕಾಲ ಬೆಳಿಗ್ಗೆ 11:02 ರಿಂದ ಮಧ್ಯಾಹ್ನ 12:36ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:10 ರಿಂದ 03:44ರ ವರೆಗೆ.

ಮೇಷ ರಾಶಿ: ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಕಠಿಣ ಸಂದರ್ಭದಲ್ಲಿ ನಿಮ್ಮ ವರ್ತನೆಯೂ ಲೆಕ್ಕಕ್ಕೆ ಬರಲಿದೆ. ನಿಮ್ಮ ಕೆಲಸಗಳು ನಿಮ್ಮನ್ನು ಯಾರೆಂದು ಹೇಳುವುದು. ಪರಿಶ್ರಮದ ವಿದ್ಯಾಭ್ಯಾಸಕ್ಕೆ ನಿಮ್ಮ ಮನಸ್ಸು ತೆರೆದುಕೊಳ್ಳಬಹುದು. ದಾನದಲ್ಲಿ ಇಂದು ಹೆಚ್ಚಿನ ಖುಷಿಯನ್ನು ಕಾಣುವಿರಿ. ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಯಮಗಳನ್ನು ಬೇರೆಯವರ ಮೇಲೆ ಒತ್ತಡ ತರುವುದು ಬೇಡ. ನಿಮಗೆ ಸಹೋದರನು ಸಹಾಕಾರ ನೀಡುವನು.‌ ಧೈರ್ಯದಿಂದ‌ ನೀವು ಮಾಡಬೇಕಾದ ಕೆಲಸವನ್ನು ಮಾಡಿ. ಅಧಿಕಾರಿಗಳ ವಿಚಾರದಲ್ಲಿ ನೀವು ಭಯ ಪಡುವುದು ಬೇಡ. ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡಿರಿ. ವಹಿಸಿಕೊಂಡ ಕಾರ್ಯವನ್ನು ಸಕಾಲಕ್ಕೆ ಮುಗಿಸಿ ನಿಶ್ಚಿಂತರಾಗುವಿರಿ. ಮನೆಗೆ ಬಂದ ಬಂಧುಗಳನ್ನು ಸರಿಯಾಗಿ ಮಾತನಾಡಿಸಿ. ನಿಮ್ಮ ಲಘುವಾದ ಮಾತುಗಳು ಬೇಸರ ತರಿಸೀತು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಎಲ್ಲರ ಬಗ್ಗೆಯೂ ಗೌರವ ಇರಲಿ.‌ ಯಾರನ್ನೂ ಅಪಮಾನಿಸುವ ಮನೋಭಾವ ಬೇಡ.

ವೃಷಭ ರಾಶಿ: ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಆತಂಕ ಇರುವಿರಿ. ನಿಮಗೆ ಬೇಕಾದುದನ್ನು ನೀವು ಪಡೆಯುವಿರಿ. ಅನ್ಯರು ನಿಮ್ಮನ್ನು ಗೇಲಿ ಮಾಡಿಯಾರು. ಕಛೇರಿಯ ಕಾರ್ಯಗಳು ಕೆಲವು ನಿಧಾನವಾಗಿ ಸಾಗುವುದು. ಸಣ್ಣ ವಿಚಾರವೂ ನಿಮಗೆ ಸಂತೋಷವನ್ನು ಕೊಡುವಂತೆ ನೋಡಿಕೊಳ್ಳಬೇಕು. ನಿಮಗೆ ಇಷ್ಟವಾಗದೆ ಕಡೆ ಹೋಗುವುದು ಬೇಡ. ಆತ್ಮೀಯರು ನಿಮ್ಮನ್ನು ಭೇಟಿ ಮಾಡುವರು. ಬಂದಿರುವ ಅವಕಾಶವನ್ನು ಬಿಟ್ಟು ದುಃಖಪಡುವ ಅವಶ್ಯಕತೆ ಇಲ್ಲ. ಹೆಚ್ಚಿನ ವೆಚ್ಚಕ್ಕೆ ಕಡಿವಾಣ ಹಾಕುವಿರಿ. ನಿಮ್ಮನ್ನು ನೀವು ಪರಿಚಯಿಸಿಕೊಳ್ಳುವುದು ನಿಮಗೇ ಸರಿ ಎನಿಸದು. ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವುದು ನಿಮಗೆ ಕಷ್ಟವಾದೀತು. ಅವ್ಯವಹಾರದ ಬಗ್ಗೆ ಗಮನ ಬೇಡ. ಅನಾರೋಗ್ಯದ ನಿವಾರಣೆಗೆ ದೈವದ ಮೊರೆಹೋಗುವುದು ಉಚಿತ. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಅಹಂಕಾರವಾದೀತು.

ಮಿಥುನ ರಾಶಿ: ಇಂದು ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ಅತಿಥಿಗಳಿಗೆ ನಿಮ್ಮಿಂದ ಅನಾದರ ಸಿಗುವ ಸಾಧ್ಯತೆ ಇದೆ. ಒಂದು ಗುಣದಿಂದ ಅವರ ಸ್ವಭಾವವನ್ನು ಅಳೆಯುವುದು ಸರಿಯಲ್ಲ. ಸ್ವಲ್ಪ ದಿನ‌ ಕಾದುನೋಡುವುದು ಒಳ್ಳೆಯದು. ‌ಆತುರದಿಂದ ನಿಮ್ಮವರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಪರೋಪಕಾರಕ್ಕೆ ಒಂದು ಮಿತಿ ಇರಲಿ. ಆತ್ಮೀಯರಿಂದ ನಿಮಗೆ ಇಷ್ಟವಾದುದು ಸಿಗಬಹುದು. ಆಪ್ತರನ್ನು ದೂರ ಮಾಡಿಕೊಳ್ಳಬೇಕಾದ ಸಂದರ್ಭವು ಬರಬಹುದು. ಮುಖಕ್ಕೆ ಸಂಬಂಧಿಸಿದ ರೋಗವು ಬರಬಹುದು. ಉತ್ತಮ‌ ಚಿಕಿತ್ಸೆ ಪಡೆದು ಸರಿ ಮಾಡಿಕೊಳ್ಳಿ. ಯಾವುದಕ್ಕೂ ಅಳುಕುವ ಅವಶ್ಯಕತೆ ಇಲ್ಲ.‌ ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಇಂದಿನ ಒತ್ತಡವನ್ನು ಸಹಿಸಿಕೊಂಡು ಇರುವುದು ಕಷ್ಟವಾದೀತು. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು. ಅಧಿಕಾರವು ಕೈ ತಪ್ಪಿಹೋಗಬಹುದು.

ಕರ್ಕಾಟಕ ರಾಶಿ: ನಿಮ್ಮ ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯ ಸಿಗಲಿದೆ. ಮನೆಯ ಕೆಲಸದಲ್ಲಿ ಆಸಕ್ತಿ ಹೆಚ್ಚಿರುವುದು. ಮನಸ್ತಾಪಗಳನ್ನು ಹೊರಹಾಕುವಲ್ಲಿ ಹಾಕಿ ಮತ್ತು ಅದಕ್ಕೆ ರೀತಿಯೂ ಇರಲಿ. ನಿಮ್ಮ ಉತ್ಸಾಹವು ಸಂಜೆಯ ಸಮಯಕ್ಕೆ ಅತಿಯಾಗಿ ಇರುವುದು. ಉದ್ಯೋಗದ ನಿಮಿತ್ತ ನೀವು ದೂರದ ಊರಿಗೆ ಪ್ರಯಾಣಮಾಡಬೇಕಾಗಿ ಬರಬಹುದು. ಅಲ್ಲಿನ ವಾತಾವರಣ ನಿಮಗೆ ಅನುಕೂಲವಾಗದೆಯೂ ಇರಬಹುದು. ನಿಮ್ಮವರೇ ಕಣ್ಮರೆಯಾಗಿ ಆತಂಕ ಸೃಷ್ಟಿಯಾಗುವುದು. ಸಮಯವನ್ನು ವ್ಯರ್ಥಮಾಡದೇ ಸದ್ವಿನಿಯೋಗ ಮಾಡಿಕೊಳ್ಳುವುದು ಉತ್ತಮ. ಕೃಷಿಯನ್ನು ನಂಬಿದವರಿಗೆ ಸ್ವಲ್ಪ ಕಷ್ಟವಾಗಲಿದೆ. ಅದಕ್ಕೋಸ್ಕರ ನಿಮ್ಮ ಶ್ರಮವನ್ನು ವ್ಯರ್ಥಮಾಡಿಕೊಳ್ಳಬೇಡಿ. ಕಣ್ತಪ್ಪಿನಿಂದ ಆದ ಸಣ್ಣ ಅನಾಹುತವೂ ದೊಡ್ಡ ರೂಪವನ್ನು ಪಡೆಯಬಹುದು.. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು.

ಸಿಂಹ ರಾಶಿ: ಅಧಿಕಾರದ ಹಿಡಿತ ತಪ್ಪುವ ಸಾಧ್ಯತೆ ಇದೆ. ನಿಮ್ಮ ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ಸಂದರ್ಭಕ್ಕೆ ತಕ್ಕಹಾಗೆ ನಿಮ್ಮನ್ನು ಪರಿವರ್ತನೆ ಮಾಡಿಕೊಂಡರೆ ಯಾವುದೂ ಕಷ್ಟವಾಗದು. ನಿಮ್ಮನ್ನು ನೀವು ನಿಯಂತ್ರಿಸಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಆಲೋಚನೆಗಳು ಮಾರ್ಗವನ್ನು ತಪ್ಪಬಹುದು. ವಾಹನ‌ಖರೀದಿಗೆ ನಿಮ್ಮದೇ ಆದ ಕೆಲವು ನಿಯಮಗಳು ಇರಬಹುದು. ಇಂದು ನಿಮ್ಮ ಮಾತಿನ‌ ಹರಿತ ಮುಂದಿನವರನ್ನು ಘಾಸಿ ಮಾಡೀತು. ಬಾಲಿಶ ಆಲೋಚನೆಯನ್ನು ಬಿಡುವುದು ಉತ್ತಮ. ಬೆಂಕಿಯಿಂದ ಸುಡಲೂಬಹುದು, ದೀಪವನ್ನೂ ಬೆಳಗಬಹುದು. ನಿರ್ಧಾರಗಳು ನಿಮ್ಮ ಕೈಯಲ್ಲಿ ಇರುವುದು. ನಿಮ್ಮ ದೃಷ್ಟಿ ವಿಶಾಲವಾಗಿ ಇರಲಿ. ಸಜ್ಜನರ ಸಹವಾಸ ಸಿಗುವುದು. ಅವರನ್ನು ಆಡಿಕೊಳ್ಳಬೇಡಿ. ಮಕ್ಕಳು ನಿಮ್ಮನ್ನು ಕಂಡು ಹಾಸ್ಯ ಮಾಡಿಯಾರು.‌ ಅದಕ್ಕೆ ಏನನ್ನಾದರೂ ಹೇಳಬೇಡಿ. ಗೆಲುವಿಗಾಗಿ ಅಧಿಕ ಶ್ರಮದ ಅವಶ್ಯಕತೆ ಇರಲಿದೆ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ.

ಕನ್ಯಾ ರಾಶಿ: ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ವ್ಯಾಮೋಹದಿಂದ ಕೆಲವನ್ನು ನೀವು ಬಿಡುವುದು ಕಷ್ಟವಾದೀತು. ನಿಮ್ಮ ವ್ಯವಹಾರದ ಬಗ್ಗೆ ಕಣ್ಣಿಟ್ಟಿರುತ್ತಾರೆ. ನಿಮ್ಮ ಆಪ್ತರೆನಿಸಕೊಂಡವರ ಜೊತೆ ಬೇಕಾದುದಷ್ಟನ್ನೇ ಮಾತನಾಡಿ. ಪುಣ್ಯಕ್ಷೇತ್ರಕ್ಕೆ ನೀವು ಹೋಗಲಿದ್ದೀರಿ. ಜ್ಞಾನವನ್ನು ಮಾರಾಟಕ್ಕಾಗಿ ಬಳಸುವುದು ಯೋಗ್ಯವಾಗದು. ಏಕಾಗ್ರತೆಯಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ತಂದೆಯಿಂದ ನಿಮಗೆ ಶುಭವಾರ್ತೆ ಸಿಗಬಹುದು. ನಿಮ್ಮ ಕೈಲಾಗುವ ಕೆಲಸವನ್ನಷ್ಟೇ ಮಾಡಿ. ನಿಮ್ಮನ್ನು ಮೀರಿದ ಕೆಲಸವನ್ನು ಮಾಡುವುದು ಬೇಡ. ವ್ಯಾಪರ ಸುಗಮವಾಗಿ ಸಾಗುವುದು. ಮನೆಯವರಿಂದ ದೂರವಿದ್ದೇನೆಂಬ ಭಾವವು ಕಾಡಬಹುದು. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ನಿಮ್ಮ ಬಳಿ ಬಂದವರಿಗೆ ಸಾಂತ್ವನದ ಸುಖವು ಬೇಕಾಗಿರಬಹುದು. ಒಳ್ಳೆಯ ಮಾತುಗಳು ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡುವುದು.

ತುಲಾ ರಾಶಿ: ಬೇಗನೆ ಯಶಸ್ಸು ಸಿಗುವುದೆಂದು ದಾರಿ ಬದಲಿಸಬಾರದು. ಗುಣಾತ್ಮಕತೆಯಲ್ಲಿ ನಿಮಗೆ ಹಿನ್ನಡೆಯಾಗಲಿದೆ. ಸಂಗಾತಿಯ ನಡುವಿನ ವೈಮನಸ್ಯವು ಮಕ್ಕಳಿಂದ ದೂರಾಗಬಹುದು. ಕಛೇರಿಯಲ್ಲಿ ನಿಮ್ಮ ಕೆಲಸವು ಶಿಸ್ತಿನಿಂದ ಇರಲಿ. ಕರ್ತವ್ಯದ ವಿಚಾರದಲ್ಲಿ ನೀವು ಸೋಲುವಿರಿ. ಯಾವುದನ್ನೂ ಮೇಲ್ನೋಟದಿಂದ ತೀರ್ಮಾನಿಸುವುದು ಬೇಡ‌. ಎಂತಹ ಒಳ್ಳೆಯದನ್ನು ತೋರಿಸಿದರೂ ಅದು ನಿಮಗೆ ವಿಪರೀತ ಪರಿಣಾಮವನ್ನು ಉಂಟುಮಾಡೀತು. ಎಲ್ಲ‌ ಮೋಡಗಳೂ‌‌ ಮಳೆಯನ್ನು ಸುರಿಸುವುದಿಲ್ಲ. ಹಣದ ಅನಿವಾರ್ಯತೆ ಇದ್ದರೂ ಸಿಕ್ಕುವುದು ಕಷ್ಟವಾದೀತು. ದೂರವಿದ್ದ ಪ್ರೇಮಿಗಳು ಇಂದು ಒಂದಾಗುವರು. ಈಗಿನ ಪರಿಸ್ಥಿತಿಯಲ್ಲಿ ಬದಲಾವಣೆ ಬೇಕೆನಿಸುವುದು. ನಿಮಗಿರುವ ಹೊಣೆಗಾರಿಕೆ ತಪ್ಪಬಹುದು. ಪ್ರಯಾಣದಲ್ಲಿ ಜಾಗರೂಕತೆ ಅವಶ್ಯಕ. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳನ್ನು ನೀವು ಕೇಳಿಬೇಕಾಗಬಹುದು.

ವೃಶ್ಚಿಕ ರಾಶಿ: ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ‌. ಸ್ವಾರ್ಥವನ್ನು ಬಿಟ್ಟು ಆಚೆಗೆ ಬಂದಾಗ ನಿಮ್ಮ ಬುದ್ಧಿಯೂ ವಿಕಾಸವಾಗುತ್ತದೆ. ಕೃಷಿಯಲ್ಲಿ ಆಸಕ್ತಿ ಇರುವವರು ಹೊಸತನ್ನು ಮಾಡುವರು. ನೀವು ವಂಶಪಾರಂಪರ್ಯವಾಗಿ ಬಂದ ವಿದ್ಯೆಯನ್ನು ದುಡಿಮೆಗೆ ಬಳಸಿಕೊಳ್ಳುವಿರಿ. ಸಂಗಾತಿಯ ಕೆಲವು ವರ್ತನೆಗಳು ನಿಮಗೆ ವಿಚಿತ್ರ ಎನಿಸಬಹುದು. ಬಹಳ ದಿನಗಳ ಅನಂತರ ಸ್ನೇಹಿತರ ಜೊತೆ ಕಾಲವನ್ನು ಕಳೆಯುವಿರಿ. ಕ್ರೀಡೆಗೆ ಸಂಬಂಧಿಸಿದ ವಸ್ತುಗಳಿಂದ ಲಾಭವು ಸಿಗುವುದು. ನೀವು ಹಣವನ್ನು ಖರ್ಚುಮಾಡಬೇಕಾಗಿ ಬರಬಹುದು. ಭಕ್ತಿ ಇದ್ದರೂ ಅದನ್ನು ಸದ್ವಿನಿಯೋಗ‌ಮಾಡಲು ಸಮಯ ಸಾಕಾಗದು. ಗೆಳೆತನಕ್ಕೆ ಹೊಸ ವ್ಯಕ್ತಿಗಳು ಸಿಗುವರು.‌ ಅವರವರ ಸಾಮರ್ಥ್ಯವನ್ನು ನೀವು ತಿಳಿದಿಲ್ಲ. ಕೆಲವನ್ನು ನೀವು ಸಣ್ಣವರಿಂದ ಕಲಿಯಬೇಕಾಗುವುದು. ನಿಮ್ಮ ನೌಕರರ ಜೊತೆ ಆಪ್ತ ಸಮಾಲೋಚನೆ ಮಾಡುವಿರಿ. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು.

ಧನು ರಾಶಿ: ಇಂದು ದುಸ್ಸಾಧ್ಯವಾದ ಕಾರ್ಯವನ್ನೇ ಮಾಡಲು ಮುಂದಾಗುವಿರಿ. ಕಾರ್ಯಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆ ನಿಮಗೆ ಖುಷಿಯನ್ನು ಕೊಡದು. ಪ್ರಯಾಣದ ದಣಿವು ನಿಮ್ಮನ್ನು ಬಾಧಿಸೀತು‌. ನೀವು ಯಾರಿಗಾದರೂ ಮಾದರಿಯಾಗಬೇಕು ಎಂದುಕೊಳ್ಳಬೇಕಿಲ್ಲ. ಮಕ್ಕಳಿಗೆ ಆದರೆ ಸಾಕು. ಸಂಗಾತಿಯ ತಪ್ಪನ್ನು ಹೇಳುವ ರೀತಿಯಲ್ಲಿ ಹೇಳಿ.‌ ಇಲ್ಲವಾದರೆ ಸುಮ್ಮನೇ ವೈಮನಸ್ಯ ಉಂಟಾಗಬಹುದು. ಆವರಣವನ್ನು ಖರೀದಿಸಲಿದ್ದೀರಿ. ಮರಳಿ ಯತ್ನ ಮಾಡುವುದೇ ಸೋಲಿನಿಂದ ಕಲಿಯುವ ಪಾಠ. ಎಲ್ಲ ಸಮಯದಲ್ಲಿಯೂ ನಿಮ್ಮ‌ ಮಾತು ಸರಿಯಲ್ಲ. ಹಿರಿಯರಿಗೆ ಎದುರಾಡುವುದು ನಿಮಗೆ ಶೋಭೆಯಾಗದು. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ. ಖರ್ಚಿನ ಬಗ್ಗೆ ಅಂದಾಜು ಇಲ್ಲದೇ ಕಾರ್ಯವನ್ನು ಒಪ್ಪಿಕೊಳ್ಳುವಿರಿ. ಮಕ್ಕಳ ಅತಿಯಾದ ಮಾತು ನಿಮಗೆ ಮುಜುಗರ ತಂದೀತು. ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಪೋಷಕರ ಸಹಕಾರ ಸಿಗಲಿದೆ.

ಮಕರ ರಾಶಿ: ಇಂದು ನಿಮಗೆ ನ್ಯಾಯಾಲಯದ ವಿಚಾರದಲ್ಲಿ ಬೇಸರವೆನಿಸಬಹುದು. ಯುವಕರಲ್ಲಿ ಅಧಿಕ ಉತ್ಸಾಹ ಕಾಣಿಸುವುದು. ದಾಂಪತ್ಯದಲ್ಲಿ ಸಾಮರಸ್ಯವು ಸ್ವಲ್ಪವೇ ಬರಲಿದೆ. ಅಪರಿಚಿತರು ನಿಮ್ಮ ನಡುವೆ ಏನಾದರೂ ಆಗುವಂತೆ ನೋಡಬಹುದು. ಪಾಲುದಾರಿಕೆಯಲ್ಲಿ ಇರುವವರು ಪರಸ್ಪರರ‌ ಮಾತನ್ನು‌ ಮಾತ್ರ ನಂಬಿ. ಅನ್ಯರ ಮಾತನ್ನು ಕೇಳಿಸಿಕೊಳ್ಳುವುದು ಬೇಡ. ಉತ್ಮ ಅವಕಾಶಗಳ ಜೊತೆ ಮುನ್ನಡೆಯಿರಿ. ಶ್ರದ್ಧೆಯ‌ ಕೊರೆತೆಯು ಕಾಣಿಸುವುದು. ಕಛೇರಿಯಲ್ಲಿ ಕೆಲವರ ಕೆಲಸವು ನಿಮ್ಮ ಮೇಲೆ ಬರಬಹುದು. ಸಾಧ್ಯವಾದಷ್ಟು ಮಾಡಿ. ನಕಾರಾತ್ಮಕ ಪ್ರತಿಕ್ರಿಯೆ ಬೇಡ. ಮಕ್ಕಳ‌ ವಿಚಾರದಲ್ಲಿ ಸಕಾರಾತ್ಕ ಬೆಂಬಲವನ್ನು ನೀಡಿ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ. ಮಾತುಗಳನ್ನು ಬೇಕಾದಲ್ಲಿ ಮಾತ್ರ ಬಳಸಿ.

ಕುಂಭ ರಾಶಿ: ನಿಮ್ಮ ಗುರಿಯನ್ನು ಇಂದು ಯಾರಾದರೂ ಬದಲಿಸಬಹುದು. ಬದಲಾವಣೆಗಾಗಿ ದಿನವನ್ನೋ ವ್ಯಕ್ತಿಗಳನ್ನೋ ಕಾಯುವುದು ಬೇಡ. ನಿಮ್ಮವರನ್ನು ನೀವು ಕಳೆದುಕೊಂಡು ದುಃಖಪಡಬೇಕಾದೀತು. ಒಳ್ಳೆಯ ಅಭ್ಯಾಸವನ್ನು ಬೆಳೆಸಿಕೊಳ್ಳುವುದು ಉತ್ತಮ. ಈ ದಿನವನ್ನು ಬಹಳ ಉತ್ಸಾಹದಿಂದ ಕಳೆಯುವಿರಿ. ನೆರೆ ಹೊರೆಯ ಕಾರಣದಿಂದ ಮನೆಯಲ್ಲಿ ಮನಸ್ತಾಪ ಬರಬಹುದು. ದೇವತಾರಾಧನೆಗೆ ಹೆಚ್ಚು ಮನಸ್ಸು ತೊಡಗುವುದು. ನಿಮ್ಮ ಇಚ್ಛೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಆತುರದ ನಿರ್ಧಾರವನ್ನು ಬಿಟ್ಟು ವಾಸ್ತವವಾಗಿ ಯೋಚಿಸಿ. ಏಕಮುಖಗಮನವು ತೊಂದರೆ ಕೊಟ್ಟೀತು. ಗುರಿಯೆಡೆಗೆ ಪ್ರಯತ್ನವು ನಿರಂತರವಾಗಿರಲಿ. ಧಾರ್ಮಿಕ ಕಾರ್ಯದಲ್ಲಿ ತೊಡಗಿರುವವರಿಗೆ ಆದಾಯವು ಹೆಚ್ಚು ಇರಲಿದೆ. ಪ್ರಯಾಣದ ಉದ್ದೇಶವೇ ಬದಲಾಗಿ ಕೆಲಸವೂ ಕೈಗೂಡದು.

ಮೀನ ರಾಶಿ: ನಿಮಗೆ ಸಿಗುವ ಕೆಲವು ಜವಾಬ್ದಾರಿಗಳಲ್ಲಿ ಹಿನ್ನಡೆಯಾಗಲಿದೆ. ವಿದೇಶೀಯ ವ್ಯಾಪಾರವು ಯಾವುದೇ ತೊಂದರೆ ಇಲ್ಲದೇ ನಡೆಯುವುದು. ನಿಮ್ಮ ಮಂತ್ರಕ್ಕೆ‌ ಮಾವಿನ ಕಾಯಿ ಬೀಳದು. ಪ್ರಯತ್ನ ಬಹಳ ಮುಖ್ಯ. ನಿಮ್ಮ ವಿರುದ್ಧ ಯಾರಾದರೂ ಮಾತನಾಡಬಹುದು. ಹಿತಶತ್ರುಗಳ ನಿಮ್ಮ ವಿರುದ್ಧ ಸಂಚುರೂಪಿಸುವರು. ಮೂಗಿಗೆ ಒರೆಸಿದ ತುಪ್ಪದಂತೆ ಕಮಲ ಲಾಭಕ್ಕಾಗಿ ತಾಳ್ಮೆಯಿಂದ ಕಾಯುವಿರಿ. ಸರ್ಕಾರದಿಂದ ನಿಮಗೆ ಶುಭವಾರ್ತೆ ಸಿಗಲಿದೆ. ರಾಜಕೀಯದವರ ಒಡನಾಟ ಬೆಳೆಯಬಹುದು. ಸ್ತ್ರೀಯರ ಸಹವಾಸ ಸಿಗಲಿದೆ. ಸಂಗಾತಿಯ ಮೇಲೆ‌ ಅನುಮಾನದ ಅಧಿಕವಾಗುವುದು. ಮಾತನ್ನು ಕಡಿಮೆ‌ ಮಾಡಿ. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಶತ್ರುಗಳು ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ.

ಲೋಹಿತ ಹೆಬ್ಬಾರ್ – 8762924271 (what’s app only)

ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!