AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ದಿನಭವಿಷ್ಯ: ಈ ರಾಶಿಯವರು ತಮ್ಮ ಆದಾಯವನ್ನು ಹೆಚ್ಚಿಸಲು ಹೊಸ ದಾರಿ ಹುಡುಕುವರು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 07 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ದಿನಭವಿಷ್ಯ: ಈ ರಾಶಿಯವರು ತಮ್ಮ ಆದಾಯವನ್ನು ಹೆಚ್ಚಿಸಲು ಹೊಸ ದಾರಿ ಹುಡುಕುವರು
ದಿನಭವಿಷ್ಯ
ಗಂಗಾಧರ​ ಬ. ಸಾಬೋಜಿ
|

Updated on: Jun 07, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜೂನ್ 07) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಧೃತಿ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:46 ರಿಂದ ಸಂಜೆ 05:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:41ರ ವರೆಗೆ.

ಮೇಷ ರಾಶಿ: ನೀವು ಈಗಲೇ ಮನೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಮರ್ಥರಿಲ್ಲ. ಎಲ್ಲದಕ್ಕೂ ಕುಟುಂಬದ ಸಹಕಾರವನ್ನು ಪಡೆಯುವಿರಿ. ಸಂಗಾತಿಯ ಸಂಪತ್ತಿನಿಂದ ಖುಷಿಪಡುವಿರಿ. ಶಿಕ್ಷವೃತ್ತಿಯವರಿಗೆ ಯಶಸ್ಸು ಸಿಗುವುದು. ಸಂಪತ್ತು ಏರಿಕೆಯಾಗುವುದು.‌ ಅನಿರೀಕ್ಷಿತ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ. ಸಂಪತ್ತಿಗೆ ಸಂಬಂಧಿಸಿದ ಒಳ್ಳೆಯ ಸುದ್ದಿಯನ್ನು ನೀವು ಪಡೆಯುತ್ತೀರಿ. ಕುಟುಂಬದಿಂದ ಬೆಂಬಲ ಸಿಗಲಿದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಸಾಕಷ್ಟು ಪ್ರಗತಿ ಹೊಂದುವಿರಿ ಆದರೆ ಇಂದು ಹಣಕಾಸಿನ ವಿಷಯಗಳಲ್ಲಿ ಯಾರನ್ನೂ ಕುರುಡಾಗಿ ನಂಬಬೇಡ. ನಿಮ್ಮ ಪ್ರೇಮಿಗೆ ಅಚ್ಚರಿಯ ಉಡುಗೊರೆ ನೀಡಲು ಇಂದು ಸೂಕ್ತ ದಿನ. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ವಿಶ್ವಾಸವನ್ನು ಹೆಚ್ಚಿಸುತ್ತದೆ. ಸಂಗಾತಿಯೊಂದಿಗಿನ ಸಂಬಂಧವು ಗಟ್ಟಿಯಾಗುತ್ತದೆ.

ವೃಷಭ ರಾಶಿ: ಎಲ್ಲ ಶರತ್ತುಗಳಿಗೂ ಸರಿಯಾದ ನಿಬಂಧನೆ ಇರಲಿ. ಪಿತ್ರಾರ್ಜಿತ ಸಂಪತ್ತಿನಿಂದ ಸುಖವು ಇರುವುದು. ಸಹೋದರ ಜೊತೆ ಕಲಹವು ಆಗಬಹುದು. ಇಂದು ಕಚೇರಿಯಲ್ಲಿ ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಸವಾಲಿನ ಕೆಲಸಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಕುಟುಂಬ ಪ್ರವಾಸವನ್ನು ಯೋಜಿಸಬಹುದು. ಹೊಸ ಆಸ್ತಿ ಅಥವಾ ವಾಹನ ಖರೀದಿ ಸಾಧ್ಯ. ಒಂಟಿ ಜನರು ಇಂದು ವಿಶೇಷ ವ್ಯಕ್ತಿಯನ್ನು ಭೇಟಿಯಾಗುತ್ತಾರೆ. ಆದಾಯವನ್ನು ಹೆಚ್ಚಿಸಲು ಹೊಸ ಆಯ್ಕೆಗಳನ್ನು ನೋಡಿ. ವೃತ್ತಿ ಪ್ರಗತಿಗಾಗಿ ಕಿರಿಯ ಸಹೋದರ ಸಹೋದರಿಯರಿಗೆ ಯಾವಾಗಲೂ ಸಲಹೆ ನೀಡುತ್ತಿರಿ. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ. ವೃತ್ತಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳ ನಿರೀಕ್ಷೆಯಲ್ಲಿ ಇರುವಿರಿ.

ಮಿಥುನ ರಾಶಿ: ಇಂದು ನಿಮ್ಮ ಪ್ರಭಾವವು ಜನರಿಗೆ ತಾನಾಗಿಯೇ ಗೊತ್ತಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಸಿಗದೆಂದು ಮತ್ತೇನನ್ನೋ ಮಾಡಲು ಹೋಗುವುದು ಬೇಡ. ವೃತ್ತಿ ಜೀವನದಲ್ಲಿ ಸ್ವಲ್ಪ ಎಚ್ಚರದಿಂದ ಕೆಲಸ ಮಾಡಬೇಕಾಗುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಕೆಲವು ಜನರು ಹಳೆಯ ಆಸ್ತಿಯನ್ನು ಮಾರಾಟ ಮಾಡುವ ಮೂಲಕ ಅಥವಾ ಬಾಡಿಗೆಗೆ ನೀಡುವ ಮೂಲಕ ಹಣ ಗಳಿಸುತ್ತಾರೆ. ನಿಮ್ಮ ಸಂಗಾತಿಯನ್ನು ಹೇಗಾದರೂ ಮಾಡಿ ಅಚ್ಚರಿಗೊಳಿಸಬಹುದು. ಇದು ಪ್ರೀತಿಯ ಸಂಬಂಧಗಳಲ್ಲಿ ಮಾಧುರ್ಯವನ್ನು ತರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧವು ಬಲವಾದ ಮತ್ತು ಆಳವಾಗಿರುತ್ತದೆ. ನಿಮ್ಮ ಆಪ್ತರ ಜೊತೆ ಕೆಲವು ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಸ್ನೇಹಿತರ ಜೊತೆ ಸಂಬಂಧದಲ್ಲಿ ನಡೆಯುತ್ತಿರುವ ಭಿನ್ನಾಭಿಪ್ರಾಯವು ಪರಿಹರಿಸಲ್ಪಡುತ್ತದೆ. ಭೂಮಿಯ ವ್ಯವಹಾರದಲ್ಲಿ ಬೇಸರ ಬರಬಹುದು.

ಕರ್ಕಾಟಕ ರಾಶಿ: ನಿಮ್ಮ ಮಾತಿನಿಂದ ಇಂದು ಆಗಬೇಕಾದ ಕೆಲಸವು ಆಗುವುದು. ನವೀನ ಆಲೋಚನೆಗಳು ಮತ್ತು ಸೃಜನಶೀಲತೆಯೊಂದಿಗೆ ಮಾಡಿದ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ವ್ಯಾಯಾಮ ಮತ್ತು ಯೋಗದೊಂದಿಗೆ ದಿನವನ್ನು ಪ್ರಾರಂಭಿಸಿ. ನಿಮ್ಮ ಫಿಟ್ನೆಸ್ ಬಗ್ಗೆ ಗಮನ ಕೊಡಿ. ಇಂದು ನೀವು ಆಪ್ತ ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕಾಗಬಹುದು. ಮಹತ್ತ್ವ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿವೆ. ನಿಮ್ಮ ಕೆಲಸವು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ವೃತ್ತಿ ಬೆಳವಣಿಗೆಗೆ ಹೊಸ ಆಯ್ಕೆಗಳನ್ನು ಅನ್ವೇಷಿಸಿ. ನಿಮ್ಮ ಇಂದಿನ ದಿನಚರಿಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು. ಕೆಲವು ವಿಶೇಷ ಕೆಲಸಗಳನ್ನು ಪೂರ್ಣಗೊಳ್ಳುವ ನಿರೀಕ್ಷೆಯಿದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!