AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನ ಭವಿಷ್ಯ; ಇಂದು ಈ ರಾಶಿಯವರು ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 24 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ಇಂದು ಈ ರಾಶಿಯವರು ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ
ದಿನಭವಿಷ್ಯ
TV9 Web
| Edited By: |

Updated on: May 24, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಜ್ಯೇಷ್ಠ, ಯೋಗ: ಶಿವ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:30ರ ವರೆಗೆ, ಯಮಘಂಡ ಕಾಲ 15:42ರಿಂದ 17:19ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:17ರ ವರೆಗೆ.

ಸಿಂಹ ರಾಶಿ :ನಿಮ್ಮ ಮಾತಿನಿಂದ ಜನರು ಪ್ರಭಾವಿತರಾಗಬಹುದು. ನಿಮಗೆ ಆದಾಯದ ಹೊಸ ಮಾರ್ಗಗಳು ಕಂಡುಬರಬಹುದು. ಈ ಸಮಯದಲ್ಲಿ ದೊಡ್ಡ ಅವಕಾಶದ ಹುಡುಕಾಟವು ಪೂರ್ಣಗೊಳ್ಳುತ್ತದೆ. ಆರಂಭದಲ್ಲಿ, ಕೆಲವು ಕೆಲಸಗಳನ್ನು ಯೋಚಿಸದೆ ಮಾಡಲಾಗುತ್ತದೆ ಮತ್ತು ಕೆಲವು ಪ್ರಜ್ಞಾಪೂರ್ವಕವಾಗಿ ಮುಂದುವರಿಯುತ್ತದೆ. ಇದು ಗುರಿಯ ಸಾಧನೆಗೆ ಅಥವಾ ಅನುಭವದ ಅನನ್ಯ ಕೊಡುಗೆಗೆ ಕಾರಣವಾಗುತ್ತದೆ. ಮಕ್ಕಳು ನಿಮ್ಮ ಜೊತೆ ಕಾಲವನ್ನು ಕಳೆಯಬಯಸುವರು. ದುರಭ್ಯಾಸಗಳನ್ನು ಬುದ್ಧಿಪೂರ್ವಕವಾಗಿ ಬಿಡದಲಲೇಬೇಕಾಗುವುದು. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ‌ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ಕೃತಜ್ಞತೆಯನ್ನು ಇಟ್ಟುಕೊಳ್ಳುವುದು ಕಷ್ಟವಾದರೂ ಬೇಕು.

ಕನ್ಯಾ ರಾಶಿ :ಇಂದು ನಿಮ್ಮ ಆರ್ಥಿಕವಾದ ಏರಿಳಿತಗಳು ಹೆಚ್ಚಿರುವುದು. ಸಮಾಜದಲ್ಲಿ ನಿಮ್ಮ ಗೌರವವು ಹೆಚ್ಚಾಗುತ್ತದೆ. ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಸಿಗಲಿದೆ. ದಾನ ಮಾಡುವ ಮನೋಭಾವವು ಹೆಚ್ಚಾಗುತ್ತದೆ. ನೀವು ಇಂದು ಮಂಗಲಕಾರ್ಯವನ್ನು ಯೋಜಿಸುವಿರಿ. ಕೆಲವು ನಕಾರಾತ್ಮಕ ಸುದ್ದಿಗಳಿಂದಾಗಿ ನಿಮ್ಮ ಮನಸ್ಸು ಚಿಂತಿತವಾಗಬಹುದು. ನೀವು ಸಂತಾನದ ಸಂತೋಷವನ್ನು ಹೊಂದಿರುತ್ತೀರಿ. ಇಂದಿನ ವಹಿವಾಟು ತಕ್ಕಮಟ್ಟಿಗೆ ಇರಲಿದೆ. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ‌ ತಪ್ಪನ್ನು ಒಪ್ಪಿಕೊಂಡು ಹೊಂದಾಣಿಕೆ ಮಾಡಿಕೊಳ್ಳುವಿರಿ. ವಿದೇಶೀಯ ವಸ್ತುಗಳು ನಿಮಗೆ ಸಿಗಬಹುದು. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ.

ತುಲಾ ರಾಶಿ :ನಿಮ್ಮ ಮೇಲೆ ನಿಮಗೆ ಪೂರ್ಣಾವಾದ ನಂಬಿಕೆ ಇಡುವ ಮೂಲಕ ಯಶಸ್ಸು ಸಾಧಿಸಬಹುದು. ನಿಮ್ಮಲ್ಲಿರುವ ಗುಣಗಳು ಪ್ರಶಂಸೆಗೆ ಪಾತ್ರವಾಗಲಿದೆ. ಎಂದೊಕ ಮಾಡಿಕೊಂಡ ವಿದೇಶದ ಸಂಪರ್ಕಗಳು ಇಂದು ಪ್ರಯೋಜನವಾಗಲಿದೆ. ಶಿಕ್ಷಣದ ಬಗ್ಗೆ ನಿಮಗಿರುವ ಆಸಕದತಿ ಮತ್ತಷ್ಟು ಅಧಿಕವಾಗಬಹುದು. ಮಕ್ಕಳ ಚಿಂತೆಯಿಂದ ಎಲ್ಲ ಸಂತೋಷಗಳು ಮರೆಯಾಗಲಿವೆ. ಯಾರ ನಕಾರಾತ್ಮಕ ವಿಚಾರವೂ ನಿಮಗೆ ಏನೂ ಮಾಡದು. ಅನವಶ್ಯಕವಾದ ಸಮಸ್ಯೆಗಳು ನಿಮ್ಮನ್ನು ಕಾಡಿಯಾವು. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಆತ್ಮವಿಶ್ವಾಸವನ್ನು ಉಳಿಸಿಕೊಳ್ಳುವಿರಿ. ಅವ್ಯಕ್ತವಾದ ನೆಮ್ಮದಿಯಿಂದ ಬೀಗಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಎಂದೋ ಆದ ಬೇಸರವನ್ನು ಸ್ನೇಹಿತನ ಮುಂದೆ ಇಂದು ಪ್ರಕಟಿಸುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಗೊತ್ತಾಗದು.

ವೃಶ್ಚಿಕ ರಾಶಿ :ಇಂದು ನೀವು ಅನನೂಕುಲ ಸ್ಥಿತಿಯಿಂದ ಹೊರ ಬರುವಿರಿ. ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಸರಿಯಾದ ದಾರಿಯಿಂದ ಮಾತ್ರ ಗೆಲುವು ಸಿಗಲಿದೆ. ಅದರಿಂದ ತೃಪ್ತಿಯೂ ಆಗಲಿದೆ. ಸರ್ಕಾರಿ ಕೆಲಸಗಳು ವಿಳಂಬವಾಗುವುದು. ನೆಚ್ಚಿನ ಕಲಾವಿದರ ಭೇಟಿಯಾಗಲಿದೆ. ಆಪ್ತರಿಂದ ಉಡುಗೊರೆ ಸಿಗಲಿದೆ. ಸ್ವಲ್ಪ ಆಲಸ್ಯವು ನಿಮ್ಮ ಕೆಲಸವನ್ನು ಹಿಂದಿಕ್ಕುವುದು. ಸ್ವತಂತ್ರವಾಗಿ ಆಲೋಚನೆಗಳನ್ನು ಬೆಳೆಸಿಕೊಳ್ಳುವುದು ಉತ್ತಮ. ನಿಮ್ಮವರ ಅಹಸಜ ವರ್ತನೆ ನಿಮಗೆ ಬೇಸರ ತರಿಸೀತು. ಪ್ರೀತಿಯ ಸೆಳೆತದಿಂದ ಹೊರಬರಲಾಗದು. ಭೂಮಿಯ ಲಾಭವು ಆಗಲಿದ್ದು ಅನೇಕ‌ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಲಿಕ್ಕೆ ಸಿಗುವುದು.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ