Daily Horoscope 24 August 2024: ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು; ಶನಿವಾರದ ದ್ವಾದಶ ರಾಶಿ ಭವಿಷ್ಯ ಇಲ್ಲಿದೆ

ಆಗಸ್ಟ್​ 24,​ 2024ರ​​ ನಿಮ್ಮ ರಾಶಿಭವಿಷ್ಯ:ಇಂದು ನಿಮ್ಮ ದಾಂಪತ್ಯದ ಬಿರುಕು ನ್ಯಾಯಾಲಯದ ಮೆಟ್ಟಿಲೇರಿಸಲೂಬಹುದು. ನಿಮ್ಮ ವಸ್ತುವನ್ನು ಯಾರಿಗೂ ಕೊಡುವ ಮನಸ್ಸಾಗದು‌. ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ಹಾಗಾದರೆ ಆಗಸ್ಟ್​ 24ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 24 August 2024: ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು; ಶನಿವಾರದ ದ್ವಾದಶ ರಾಶಿ ಭವಿಷ್ಯ ಇಲ್ಲಿದೆ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 24, 2024 | 12:01 AM

ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:48 ಗಂಟೆ, ರಾಹು ಕಾಲ ಬೆಳಿಗ್ಗೆ 09:28 ರಿಂದ 11:01, ಯಮಘಂಡ ಕಾಲ ಮಧ್ಯಾಹ್ನ 02:08 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:21 ರಿಂದ 07:55ರ ವರೆಗೆ.

ಮೇಷ ರಾಶಿ : ನೀವು ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಇಟ್ಟುಕೊಳ್ಳಬೇಕಾಗುವುದು. ಇಂದು ನೀವು ಯಾವದೇ ವಿಚಾರವನ್ನು ಸಂಪೂರ್ಣವಾಗಿ ತಿಳಿದು ಮಾತನಾಡುವುದು ಒಳ್ಳೆಯದು.‌ ನಿಮ್ಮ ಮಾತು ಇತರರಿಗೆ ನೋವನ್ನು ಕೊಡಬಹುದು. ಆದಾಯದ ವಿಚಾರದಲ್ಲಿ ನಿಮಗೆ ಹತ್ತಾರು ಯೋಚನೆಗಳು ಬಂದರೂ ಅದನ್ನು ಕ್ರಮಬದ್ಧಗೊಳಿಸಲು ಪ್ರಯತ್ನಿಸಿ. ನಿಮ್ಮ ತಾಳ್ಮೆಯು ನಿಮಗೆ ಸಹಕಾರ ನೀಡುವುದು. ಇಂದು ನಿಮ್ಮ ಉತ್ಸಾಹಭಂಗವನ್ನು ಮಿತ್ರರು ಮಾಡಿಯಾರು. ಆನಾರೋಗ್ಯವಿದ್ದರೂ ತಿನ್ನಬೇಕು ಎನ್ನುವ ಚಪಲಕ್ಕೆ ಆಹಾರವನ್ನು ತಿಂದು ಆನಾರೋಗ್ಯವನ್ನು ಹೆಚ್ಚುಮಾಡಿಕೊಳ್ಳುವಿರಿ. ಕುತೂಹಲದ‌ ನೆಪದಲ್ಲಿ ಏನಾದರೂ ಮಾಡಿಕೊಳ್ಳಬೇಡಿ. ನಿಮಗೆ ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿರಲಿ. ಏರುಧ್ವನಿಯಲ್ಲಿ ಮಾತನಾಡುವುದಕ್ಕಿಂತ ವಿವೇಚನೆಯಿಂದ ಮಾತನಾಡಿ. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ಸಮಾಧಾನಚಿತ್ತರಾಗಿ ಮಾತನಾಡಿ.

ವೃಷಭ ರಾಶಿ : ಇಂದು ಚರಾಸ್ತಿಯ ವಿಚಾರಕ್ಕೆ ಸಹೋದರರ ನಡುವೆ ವಾಗ್ವಾದ ನಡೆಯಬಹುದು. ನಿಮಗೆ ಸಾಲ ಕೊಡಲು ಯಾರಾದರೂ ಮುಂದೆಬರಬಹುದು. ನಿಮ್ಮ ವಿವೇಕವು ಸರಿಯಾಗಿ ಇರಲಿ. ನಿಮ್ಮವರನ್ನೇ ನೀವು ನಂಬದ ಸ್ಥಿತಿಯಲ್ಲಿ ಇರಬಹುದು. ನಿಮ್ಮ ಸಿಟ್ಟು ಇಂದು ಕಾಣಿಸಿಕೊಳ್ಳದೇ ಇದ್ದೀತು. ನಿಮ್ಮದೇ ಬದ್ಧತೆಯನ್ನು ನೀವು ಬಿಟ್ಟುಕೊಡಲಾರಿರಿ. ತಾಳ್ಮೆಯಿಂದ ನಿಮ್ಮ ವ್ಯವಹಾರ ಇರಲಿ. ಅಸಾಧ್ಯವನ್ನು ಸಾಧಿಸುವ ಹಠದ ಸ್ವಭಾವ ಒಳ್ಳೆಯದೇ. ಎಲ್ಲವೂ ಕೈಗೂಡುವುದು ಎಂಬ ಅತಿಯಾದ ಆತ್ಮವಿಶ್ವಾಸಬೇಡ. ನಿರ್ಭಾವುಕತೆಯು ನಿಮಗೆ ಶೋಭೆಯನ್ನು ತಂದುಕೊಡದು. ಅನ್ನಿಸಿದ್ದನ್ನು ನೀವು ಇನ್ನೊಬ್ಬರಿಗೆ ಹೇಳುವಾಗ ತಡೆಯುವಿರಿ. ನಿಮ್ಮ ಕೈಲಾದ ಸಹಾಯವನ್ನು ಮಾಡಬೇಕಾದೀತು. ಅಂದುಕೊಂಡಿದ್ದನ್ನು ಸಾಧಿಸಲಾಗದು ಎಂಬ ಅಳುಕು ನಿಮ್ಮಲ್ಲಿ ಇರುವುದು. ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ.

ಮಿಥುನ ರಾಶಿ : ಇಂದು ನಿರುಪಯೋಗಿ ವಸ್ತುಗಳನ್ನು ಅನ್ಯರಿಗೆ ಕೊಡುವಿರಿ. ಸಾಮಾಜಿಕ ಕಾರ್ಯದಲ್ಲಿ ತಾರತಮ್ಯವನ್ನು ತೋರಿಸುವುದು ಬೇಡ. ಎಲ್ಲವನ್ನೂ ಮಾತಿನಿಂದಲೇ ಬಗೆಹರಿಸಲಾಗದು. ನೀವು ನಿಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳುವಿರಿ. ನಿಮಗೆ ಅದು ಬಹಳ ಆಪ್ತವಾಗಲಿದೆ. ಯಾರ ಶ್ರೇಯಸ್ಸನ್ನಾದರೂ ಬಯಸಿದರೆ, ವೈಯಕ್ತಿಕವಾಗಿ ಅದನ್ನು ಮಾಡಿ. ಸಂಗಾತಿಯ ಜೊತೆ ಮುಕ್ತವಾಗಿ ಮಾತನಾಡಿ. ದೇವರ ದರ್ಶನವನ್ನು ನೀವು ಮಾಡುವಿರಿ.‌ ಸಮಯಕ್ಕೆ ನೀವು ನಿಮ್ಮ ವ್ಯಕ್ತಿತ್ವಗಳನ್ನು ಬಳಸಿಕೊಳ್ಳುವಿರಿ. ಸ್ತ್ರೀಯರಿಗೆ ಸಂಬಂಧಿಸಿದ ಅಪವಾದವನ್ನು ಹೊರಬೇಕಾದೀತು. ಏನೂ ಗೊತ್ತಿಲ್ಲದೇ ಯಾರ ಪರ ವಹಿಸುವ ಅಗತ್ಯವಿರದು. ಯಾರ‌ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ನಡೆಯುವಿರಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.

ಕರ್ಕಾಟಕ ರಾಶಿ : ಅವಿವಾಹಿತರಿಗೆ ಇಂದು ವಿವಾಹಕ್ಕೆ ಯೋಗ್ಯವಾದ ಮಾತುಗಳು ಕೇಳಿಸಬಹುದು. ನಿಮ್ಮ ಸಂತೋಷದ ಸುದ್ದಿಯನ್ನು ಇತರರಿಗೂ ಹಂಚುವಿರಿ. ನಿಮ್ಮ ಆಲೋಚನೆಗಳನ್ನು ಮನೆಯವರ ಮೇಲೆ‌ಹೇರಲು ಹೋದರೆ ಕಲಹವೇ ಆದೀತು. ನೈತಿಕ ಬೆಂಬಲ ಸಿಗುವುದು ಕಷ್ಟ. ಹಣಕಾಸಿನ‌ ಕೊರತೆ ಇದ್ದರೂ ನೆಮ್ಮದಿಯ ಜೀವನ ಇರಲಿದೆ. ನಿಮ್ಮವರು ನಿಮಗೆ ಕೊಡುವ ಸಲಹೆಗಳು ನಿಮಗೆ ನಕಾರಾತ್ಮಕವಾಗಿ ತೋರುವುದು. ಇಂದು ನಿಮ್ಮ‌ ಪ್ರೀತಿಪಾತ್ರರನ್ನು ಭೇಟಿ ಮಾಡುವಿರಿ. ನಿಮಗೆ ಏನೇ ಆಗುವುದಿದ್ದರೂ ದಾಖಲೆ ಸಹಿತವಾಗಿ ಇರಲಿ. ನಿಮ್ಮಲ್ಲಿ ಹೊಸ ಬಗೆಯ ಉತ್ಸಾಹವು ಇರಲಿದೆ. ರಾಜಕೀಯದವರ ಬೆಂಬಲ ಸಿಗಲಿದೆ. ಅದನ್ನು ಸದುಪಯೋಗ ಮಾಡಿಕೊಳ್ಳುವುದು ಉತ್ತಮ. ನಿಮಗೆ ಆಯ್ಕೆಗಳನ್ನು ಮಾಡಲು ಗೊಂದಲವಿರಬಹುದು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಆತುರದಲ್ಲಿ ನಿಮ್ಮ ಎಲ್ಲ ಕಾರ್ಯವೂ ಮೊಟಕುಮಾಡುವಿರಿ. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ.

ಸಿಂಹ ರಾಶಿ : ಇಂದು ಮನೆಯನ್ನು ನೋಡಿಕೊಳ್ಳುವ ಹೊಣೆ ನಿಮಗೆ ಸಿಗಲಿದೆ. ನಿಮ್ಮ ಉತ್ಸಾಹವೇ ನಿಮಗೆ ಶಾಪವಾದೀತು. ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ. ನಿಮ್ಮ ಉದ್ಯೋಗಕ್ಕೆ ಬೇಕಾದ ಸಲಹೆಗಳನ್ನು ನೀವು ತೆಗೆದುಕೊಳ್ಳಬೇಕಾಗಬಹುದು. ಆದಷ್ಟು ಗುಂಪುಗಾರಿಕೆಯನ್ನು ಸಾಮೂಹಿಕವಾದ ಕಾರ್ಯದಲ್ಲಿ ಮಾಡುವುದು ಬೇಡ. ಹೆಚ್ಚಿನ ಕೆಲಸಗಳನ್ನು ನೀವು ಮುಂದೂಡಲಿದ್ದೀರಿ. ಎಲ್ಲದಕ್ಕೂ ನೀವು ಇನ್ನೊಬ್ಬರನ್ನು ಬೊಟ್ಟು ಮಾಡಿಸಲಿದ್ದೀರಿ. ನಿಮ್ಮ ಮನವೊಲಿಸಲು ಬಹಳ ಕಷ್ಟವಾದೀತು. ಸಂಗಾತಿಯ ವಿಷಯದಲ್ಲಿ ನಿಮಗೆ ಬೇಸರವಾಗಲಿದೆ. ಸುಖವನ್ನು ಪಡೆಯಲು ನೀವು ಬೇರೆ ಮಾರ್ಗವನ್ನು ಹುಡುಕುವಿರಿ.‌ ಕೆಟ್ಟ ಅಭ್ಯಾಸವನ್ನು ಆರಂಭಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಸಾಮರ್ಥ್ಯವನ್ನು ತೋರಿಸುವಿರಿ. ಹಣಸಂಪಾದನೆಯ ವಿಚಾರವೇ ತಲೆಯಲ್ಲಿ ಓಡಾಡಲಿದೆ‌. ತೋರಿಕೆಗೆ ಮಾತ್ರ ದಾನ ಬೇಡ, ಮನಸ್ಸಿನಿಂದ ಇರಲಿ ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ನಿಮ್ಮವರೆಂದುಕೊಂಡವರು ನಿಮ್ಮವರಾಗದೇ ಇರಬಹುದು.

ಕನ್ಯಾ ರಾಶಿ : ಇಂದು ನಿಮ್ಮ ಉದ್ಯಮದಲ್ಲಿ ಆದ ನಷ್ಟದಿಂದ ಮನಸಿನೊಳಗೆ ಸಂಕಟಪಡುವಿರಿ. ತಂತ್ರಜ್ಞಾನದಿಂದ ನಿಮ್ಮ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ಸಮಯದ ಬೆಲೆಯನ್ನು ನೀವು ಇಂದು ಅರ್ಥಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ಇರುವ ಭಾವನೆಗಳು ಬದಲಾಗಬಹುದು. ಇಷ್ಟಪಟ್ಟಿದ್ದನ್ನು ನೀವು ಪಡೆದುಕೊಳ್ಳುವಿರಿ. ವಿದ್ಯಾಭ್ಯಾಸಕ್ಕೆ ಸಮಯ ಹೊಂದಿಕೆ ಕಷ್ಟವಾದೀತು. ಮನೋವ್ಯಥೆಯನ್ನು ನೀವು ನಿಧಾನವಾಗಿ ಕಳೆದುಕೊಳ್ಳುವಿರಿ. ನಿಮಗೆ ಸಮ್ಮಾನ ಮಾಡಲು ಆಪ್ತರು ನಿಶ್ಚಯಿಸುವರು. ನೂತನ ವಸ್ತುಗಳನ್ನು ಪಡೆದುಕೊಳ್ಳುವವರಿದ್ದೀರಿ. ನಿಮ್ಮ ಸಿಟ್ಟಿಗೆ ಮನೆಯಲ್ಲಿ ಭಯ ಉಂಟಾಗಬಹುದು. ಕಲಾವಿದರಿಗೆ ಉತ್ತಮ ವ್ಯವಸ್ಥೆ ಇಂದು ಸಿಗಲಿದೆ. ಕುಟುಂಬದಿಂದ‌ ನಿಮಗೆ ಬೇಕಾದ ಸಹಕಾರ ಸಿಗಲಿದೆ. ಮಕ್ಕಳು ನಿಮ್ಮನ್ನು ಪ್ರೀತಿಸುವರು. ಅನಾರೋಗ್ಯದ ಕಾರಣ ಉತ್ಸಾಹದ ಯಾವ ಕಾರ್ಯವನ್ನೂ ಮಾಡಲಾಗದು. ಕೃಷಿಯ ಚಟುವಟಿಕೆಯಲ್ಲಿ ನೀವು ಭಾಗಿಯಾಗುವಿರಿ.

ತುಲಾ ರಾಶಿ : ನಿಮ್ಮ ಕಾರ್ಯದಕ್ಷತೆಗೆ ಜವಾಬ್ದಾರಿಗಳು ಬದಲಾಗಲಿವೆ. ಚೆನ್ನಾಗಿರುವ ವ್ಯವಸ್ಥೆಯನ್ನು ಇನ್ನೂ ಚೆನ್ನಾಗಿ ಮಾಡಲು ಹೋಗಿ ಹಾಳು ಮಾಡುವಿರಿ. ಮಾನಸಿಕ ತೊಂದರೆಯನ್ನು ಅನುಭವಿಸುವಿರಿ. ತಾಳ್ಮೆಯಿಂದ ಇರುವುದು ಇಂದು ನಿಮಗೆ ಕಷ್ಟವಾದೀತು. ಇನ್ನೊಬ್ಬರ ಮಾತಿಗೆ ಅವಕಾಶವನ್ನು ಮಾಡಿಕೊಡಿ. ಕೃಷಿಯಲ್ಲಿ ನೀವು ಹೊಸ ವಿಧಾನವನ್ನು ರೂಪಿಸಿಕೊಳ್ಳುವಿರಿ‌‌. ಸೌಂದರ್ಯಕ್ಕೆ ಹೆಚ್ಚಿನ ಮಹತ್ತ್ವವನ್ನು ಕೊಡಲಿದ್ದೀರಿ. ವಿದೇಶಕ್ಕೆ ಹೋಗುವುದು ಕಾರಣಾಂತರಗಳಿಂದ ನಿಂತುಹೋದೀತು. ಬಹಳ ದಿನಗಳ ಅನಂತರ ಭೇಟಿಯಾದ ಮಿತ್ರನಿಗೆ ಆತಿಥ್ಯ ಮಾಡುವಿರಿ. ಮಿತ್ರರ ಮೂಲಕ ನಿಮ್ಮ ವಿವಾಹವು ಸಂಭವಿಸುವುದು. ತಂದೆ, ತಾಯಿಗಳು ಮಕ್ಕಳ‌ ಮೇಲೆ ಕಣ್ಣಿಡುವುದು ಒಳ್ಳೆಯದು. ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ನಿಮ್ಮ ಮಾತು ಸತ್ಯವೇ ಆದರೂ ಅದನ್ನು ಹೇಳುವ ರೀತಿಯಲ್ಲಿ ಹೇಳಿ.

ವೃಶ್ಚಿಕ ರಾಶಿ : ನಿಮಗೆ ಸಿಗುವ ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಮಕ್ಕಳ ಆರೋಗ್ಯದ ಕಾರಣದಿಂದ ನೀವು ಕಛೇರಿಗೆ ವಿರಾಮ‌ ಹಾಕಬೇಕಸದೀತು. ನಿಮ್ಮ ತಪ್ಪನ್ನು ಒಪ್ಪಿಕೊಳ್ಳದೇ ಎಲ್ಲರನ್ನೂ ಶಪಸುವುದು ಸರಿಯಲ್ಲ. ನಿಮ್ಮವರ ಸಲಹೆಯನ್ನು ಪಡೆದು ಕೆಲಸಕ್ಕೆ ಹೋಗುವುದು ಒಳ್ಳೆಯದು. ನಿಮ್ಮ ಪರೀಕ್ಷೆಯ ಕಾಲವಾಗಿದ್ದು ನೀವು ಅದನ್ನು ದಾಟಲು ಶ್ರಮಪಡಬೇಕಾದೀತು. ಆಕಸ್ಮಿಕವಾಗಿ ವಸ್ತುವನ್ನು ಕಳೆದುಕೊಳ್ಳುವಿರಿ. ಅನಿವಾರ್ಯವಿದ್ದಾಗ ಮಾತ್ರ ಪ್ರಯಾಣ ಮಾಡಿ. ಬಂಧುಗಳ ನಡುವೆ ಕಲಹವಾಗಬಹುದು. ಅವರು ನಿಮ್ಮಿಂದ ದೂರ ಉಳಿಯಬಹುದು. ನಿಮಗೆ ಕಿರಿಕರಿಯಾಗುವ ಸ್ಥಳದಿಂದ‌ ದೂರವಿರಲು ಪ್ರಯತ್ನಿಸುವಿರಿ. ದೇಹವನ್ನು ದಂಡಿಸುವುದು ಪ್ರಮಾಣಬದ್ಧವಾಗಿರಲಿ. ಸರಿಯಾದ ಮಾರ್ಗವನ್ನು ಅನುಸರಿಸಿ. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ.

ಧನು ರಾಶಿ : ಇಂದು ನಿಮ್ಮ ದಾಂಪತ್ಯದ ಬಿರುಕು ನ್ಯಾಯಾಲಯದ ಮೆಟ್ಟಿಲೇರಿಸಲೂಬಹುದು. ನಿಮ್ಮ ವಸ್ತುವನ್ನು ಯಾರಿಗೂ ಕೊಡುವ ಮನಸ್ಸಾಗದು‌. ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ನಿಮ್ಮ ಆಲೋಚನೆಗಳನ್ನು ಸಂಗಾತಿಯು ತಿದ್ದಲು ಪ್ರಯತ್ನಿಸಬಹುದು. ಏನೇ ಪಡೆದುಕೊಳ್ಳುವುದಿದ್ದರೂ ಸರಿಯಾದ ಮಾರ್ಗದಿಂದ ಪಡೆಯಲು ಪ್ರಯತ್ನಿಸಿ. ಯಾವುದಾದರೂ ಉತ್ತಮ ವಿಚಾರಗಳು ನಿಮ್ಮಿಂದ‌‌ ಹೊರಬರುವುದು ಕಷ್ಟಸಾಧವಾದೀತು. ನಿಮ್ಮನ್ನು ಗೌರವಿಸಿಲ್ಲ ಎಂಬ ವ್ಯಥೆಯು ಹೆಚ್ಚಾಗಬಹುದು. ‌ಏಕಾಂತದಲ್ಲಿ ಇರುವುದು ನಿಮಗೆ ಕಷ್ಟವಾದೀತು. ಬೇಕಾದುದನ್ನು ಪಡೆಯಲು ನೀವು ಬಹಳ ಪರಿಶ್ರಮಿಸಬಹುದು. ನಂಬಿಕೆಯ ಕೊರತೆಯು ಅತಿಯಾಗಿ ಕಾಡಬಹುದು. ಭೂಮಿಯ ಖರೀದಿಗೆ ಸಹೋದರನ ಸಹಕಾರ ಪಡೆಯುವಿರಿ.‌ ವಂಚಿಸುವ ಯೋಚನೆ ಮಾಡಿದ್ದರೆ ಅದನ್ನು ಮರೆತುಬಿಡಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ.

ಮಕರ ರಾಶಿ : ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ವ್ಯವಹಾರದಲ್ಲಿ ಯಾರಾದರೂ ನಿಮ್ಮನ್ನು ಮಾತಿನಿಂದ ಮರುಳುಮಾಡಬಹುದು. ಹಣದ ಪ್ರಾಮುಖ್ಯವನ್ನು ತಿಳಿದುಕೊಳ್ಳುವ ಸಮಯವಿಂದು. ಹಣವನ್ನು ನೀವು ಹೂಡಿಕೆಯಲ್ಲಿ ಇಡುವ ಸಾಧ್ಯತೆ ಇದೆ. ಸಾಲದ ಹಣವನ್ನು ಪಾವತಿಸಿ ಸ್ವಲ್ಪ ಖುಷಿಪಡುವಿರಿ. ನೌಕರರಿಂದ ಕೆಲಸವನ್ನು ಮಾಡಿಸಿಕೊಳ್ಳುವ ಚಾಣಾಕ್ಷತನ ಬೇಕು. ಆರೋಗ್ಯದಲ್ಲಿ ಅನಿರೀಕ್ಷಿತ ಬದಲಾವಣೆಯು ನಿಮಗೆ ಆತಂಕ ಉಂಟಾಗಬಹುದು‌. ಕೊರತೆಯಿಂದ ನಿಮಗೆ ಉದ್ವೇಗವು ಉಂಟಾಗಬಹುದು. ನಿಮ್ಮ ಔದಾರ್ಯತೆಯು ನಿಮಗೇ ಬಹಳ ಕಷ್ಟವಾಗಬಹುದು. ಹಿರಿಯರಿಂದ ಶುಭಾಶೀರ್ವಾದವನ್ನು ಪಡೆದು ನಿಮಗೆ ಧೈರ್ಯ ಬರಬಹುದು. ಸತ್ಯವನ್ನು ಆಡಲು ನೀವು ಹಿಂಜರಿಯುವಿರಿ. ಸರಳವನ್ನು ನೀವು ಕ್ಲಿಷ್ಟಕರವಾಗಿಸಿಕೊಳ್ಳುವಿರಿ. ನಿಮ್ಮ ಖಾಸಗಿ ತನಕ್ಕೆ ತೊಂದರೆಯಾಗಲಿದೆ. ವಂಚನೆಯ ಸುಳಿವನ್ನು ಮೊದಲೇ ಪಡೆಯುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು.

ಕುಂಭ ರಾಶಿ : ಸಜ್ಜನರ ಭೇಟಿಯಾಗುವ ಸಾಧ್ಯತೆ ಇದೆ. ನಿಮಗೆ ನಿರೀಕ್ಷಿತ ಫಲ‌ಸಿಗದೇ ಮನೆಯವರಿಗೆ ಬೇಸರವಾಗಬಹುದು. ಆಪ್ತರ ಜೊತೆ ಉದ್ಯೋಗಕ್ಕೆ ಸಂಬಂಧಿಸಿದ ಸಮಾಲೋಚನೆಯನ್ನು ನಡೆಸುವಿರಿ. ಇಂದಿನ ಬೆಳಗ್ಗೆ ಹೆಚ್ಚಿನ ಉತ್ಸಾಹ ಇರಲಿದೆ. ಅನುಕೂಲಕರ ವಾತಾವರಣವನ್ನು ನೀವು ಸೃಷ್ಟಿಸಿಕೊಂಡು ಇರುವಿರಿ. ನಿಮಗೆ ಆರ್ಥಿಕವಾಗಿ ಬಲವಾಗಲು ಆಲೋಚಿಸುವಿರಿ. ನಿಮ್ಮ‌ ಮನಸ್ಸು ಕ್ಷಣವೂ ಬೇರೆ ಆಲೋಚನೆಯಲ್ಲಿ‌ ಮುಳುಗಿರುವುದು. ಸಹೋದ್ಯೋಗಳ ಸಹಕಾರ ಬೇಕಿದ್ದರೆ ಅವರನ್ನು ನಿಮ್ಮತ್ತ ಒಲಿಸಿಕೊಳ್ಳಬೇಕು. ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಿಕೊಳ್ಳಲು ಇಷ್ಟಪಡುವಿರಿ. ಆಯಾಸವು‌ ಅಧಿಕವಾಗಿದ್ದರೂ ಆಲಸ್ಯದಿಂದ ಮೇಲೇರುವ ಯೋಚನೆ‌ಮಾಡುವಿರಿ. ಸರಳವಾದ ಕೆಲಸಗಳನ್ನು ಮಾಡುವಿರಿ. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಮಾರಾಟದ ವಿಷಯದಲ್ಲಿ ಹಿನ್ನಡೆಯಾಗಲಿದೆ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು.

ಮೀನ ರಾಶಿ : ಒತ್ತಡದ ನಡುವೆಯೂ ಕಾರ್ಯನಿರ್ವಹಣೆ ಮಾಡಿದ ಕೌಶಲಕ್ಕೆ ಪ್ರಂಶಸೆಗಳು ಸಿಗಲಿವೆ. ಯಾರನ್ನೋ ಗೆಲ್ಲುವುದು ಸುಲಭದ ತುತ್ತಲ್ಲ. ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ನಿಮ್ಮನ್ನು ಇಂದು ಕೆಲವರು ಭೇಟಿಯಾಗಲಿದ್ದಾರೆ. ನಿಮ್ಮ ವ್ಯಕ್ತಿತ್ವವನ್ನು ನೀವು ಪರಿಚಯಿಸುವಿರಿ. ನೀವು ನೆಮ್ಮದಿಯನ್ನು ಕಳೆದುಕೊಳ್ಳಲು ಕೆಲವು ಸಂಗತಿಗಳು ಆಗಬಹುದು. ನಿಮ್ಮ ಶ್ರಮಕ್ಕೆ ಎಂತಹ ಫಲವೆಂದು ಇಂದು ಗೊತ್ತಾಗುವುದು. ಎಲ್ಲ ಕೆಲಸಗಳು ನಿಮ್ಮ ಸ್ಥಾನವನ್ನು ಏರಿಸಬಹುದು. ಬಾಕಿ ಕೆಲಸಗಳನ್ನು ನೀವು ಪೂರೈಸಿಕೊಳ್ಳುವುದು ಉತ್ತಮ. ನಿಮಗೆ ಉಂಟಾದ ನೋವನ್ನು ನೀವೇ ನುಂಗಿಕೊಳ್ಳಬೇಕಾದೀತು. ಹಣಕಾಸಿನ ತೊಂದರೆ ಸ್ವಲ್ಪಮಟ್ಟಿಗೆ ನಿವಾರಣೆ ಆಗಲಿದೆ. ಜೀವನದ ಹಾದಿಯಲ್ಲಿ ಹೆಚ್ಚು ಏರಿಳಿತಗಳು ಇರದೇ ಆರಾಮಾಗಿ ಹೋಗುವಿರಿ. ಜಾಣ್ಮೆಯಿಂದ ಸವಾಲನ್ನು ಎದುರಿಸಬೇಕಾಗಬಹುದು. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?