AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

Daily Horoscope, 25 March 2026: ಮಾರ್ಚ್ 25, 2026 ರ ನಿತ್ಯ ಭವಿಷ್ಯ. ಶಾಲಿವಾಹನ ಶಕ 1949, ಚೈತ್ರ ಮಾಸದ ಸಪ್ತಮೀ ತಿಥಿಯ ಬುಧವಾರದ ಈ ದಿನ, ಗ್ರಹಗಳ ಸ್ಥಾನ ನಿಮ್ಮ ರಾಶಿಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ತಿಳಿಯಿರಿ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ಕೌಟುಂಬಿಕ, ವೈವಾಹಿಕ ಮತ್ತು ವೃತ್ತಿಜೀವನದಲ್ಲಿ ಎದುರಾಗಬಹುದಾದ ಅವಕಾಶಗಳು ಮತ್ತು ಸವಾಲುಗಳನ್ನು ಇಲ್ಲಿ ವಿವರಿಸಲಾಗಿದೆ. ಅನಿರೀಕ್ಷಿತ ತಿರುವುಗಳಿಗೆ ಸಿದ್ಧರಾಗಿರಿ.

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು
ಸಾಂದರ್ಭಿಕಚಿತ್ರ Image Credit source: Google
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Mar 25, 2026 | 1:17 AM

Share

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಆಯುಷ್ಮಾನ್, ಕರಣ : ತೈತಿಲ, ಸೂರ್ಯೋದಯ – 06 – 26 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:30 – 14:01, ಯಮಗಂಡ ಕಾಲ 07:57 – 09:28, ಗುಳಿಕ ಕಾಲ 10:59 – 12:30

ಮೇಷ ರಾಶಿ :

ನೀವು ಎಂದೋ ಆರಂಭಿಸಬೇಕೆಂದುಕೊಂಡ ಯೋಜನೆಗಳನ್ನು ಇಂದು ಪ್ರಾರಂಭಿಸಬಹುದು. ವಾಹನಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಪುಣ್ಯ ಪ್ರದೇಶಗಳಿಗೆ ಪ್ರಯಾಣಿಸಿ ದಾನ-ಧರ್ಮದಲ್ಲಿ ಭಾಗಿಯಾಗಿಯಾಗುವಿರಿ. ನಿಮ್ಮ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಸೂಯೆ ಪಡಬಹುದು. ಆದರೆ ನಿಮ್ಮ ಉತ್ತಮ ನಡವಳಿಕೆಯನ್ನು ನೋಡಿ, ಜನರು ನಿಮ್ಮನ್ನು ಒಲಿಸಿಕೊಳ್ಳಲು ಬಯಸುತ್ತಾರೆ.

ವೃಷಭ ರಾಶಿ :

ತಾಯಿಯ ಕಡೆಯಿಂದ ಸಂಬಂಧಗಳು ಸುಧಾರಿಸುತ್ತವೆ. ವ್ಯಾಪಾರ, ವ್ಯವಹಾರದಲ್ಲಿ ಡೋಲಾಯಮಾನವಾದ ಸ್ಥಿತಿ ಇರುವುದು. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ. ಅತಿಥಿ ಸತ್ಕಾರದಿಂದ ಒತ್ತಡ ದೂರ. ನಿಮ್ಮ ಸ್ಥಗಿತಗೊಂಡ ಕಾರ್ಯಗಳನ್ನು ಪೂರ್ಣಗೊಳ್ಳಬಹುದು. ಕೃಷಿಯ ಬಗ್ಗೆ ಅಧಿಕ ಆಸಕ್ತಿ. ಇಂದು ನೀವು ಸಂತೋಷವಾಗಿರುವುದರಿಂದ ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತೀರಿ.

ಮಿಥುನ ರಾಶಿ :

ನೀವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ. ಈ ಸಮಯದಲ್ಲಿ, ಹೊರಗೆ ಏನನ್ನಾದರೂ ತಿನ್ನುವುದನ್ನು ತಪ್ಪಿಸಿ. ಮದುವೆಯಾಗಲು ಪ್ರಯತ್ನಿಸುವವವರಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಉದ್ಯೋಗಿಗಳಿಗೆ ಉದ್ಯಮದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೌಲ್ಯಯುತವಾದ ಏನನ್ನಾದರೂ ಪಡೆಯುವ ಬಯಕೆಯನ್ನು ಇಂದು ಪೂರೈಸಬಹುದು.

ಕರ್ಕಾಟಕ ರಾಶಿ :

ವ್ಯವಹಾರವನ್ನು ಹೆಚ್ಚಿಸಲು ಕುಟುಂಬದ ಜೊತೆ ಸಮಾಲೋಚನೆ ಮಾಡಬೇಕಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶಗಳು ಸಿಗುತ್ತವೆ. ವೃತ್ತಿರಂಗದಲ್ಲಿ ಪ್ರತಿಷ್ಠಿತರ ಸಹಯೋಗದಿಂದ ಕಾರ್ಯಸಿದ್ಧಿ. ಗೊತ್ತಿದ್ದೂ ತಪ್ಪು ಮಾಡುವ ಮೂರ್ಖತನಕ್ಕೆ ಅನುಭವಿಸುವುದೊಂದೇ ದಾರಿ. ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಸ್ಥಾನವನ್ನು ದುರ್ಬಲಗೊಳಿಸಬಹುದು.

ಸಿಂಹ ರಾಶಿ :

ಪ್ರೇಮ ಅನುಭವಗಳು ಕಹಿಯಾದ ಕಾರಣ ಪ್ರೇಮದ ಕೊಡು ಕೊಳ್ಳುವಿಕೆಯಿಂದ ದೂರ. ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಲಾಭ ಪಡೆಯುತ್ತೀರಿ. ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ವಾಸಿಸುವ ಸ್ಥಳದಲ್ಲಿ ನೆಮ್ಮದಿ ದೂರಾದ ಅನುಭವವಾಗಬಹುದು. ಕೊಡು ಕೊಳ್ಳುವ ವ್ಯವಹಾರಗಳಲ್ಲಿ ಲಾಭ ಕಂಡು ಬಂದರೂ, ಜಾಗರೂಕತೆ ವಹಿಸುವುದು ಅಗತ್ಯ. ಬಲಗಣ್ಣಿನ ತೊಂದರೆ ಕಾಣಿಸುವುದು.

ಕನ್ಯಾ ರಾಶಿ :

ಕೈಯಲ್ಲಿ ಸಾಕಷ್ಟು ಹಣವನ್ನು ಹೊಂದಿರುವ ನೀವು ನೆಮ್ಮದಿಯಿಂದ ಇರುವಿರಿ. ಕೆಲವು ಕೆಲಸದ ಭರದಲ್ಲಿ ಇಂದು ಸಮಯವು ನಿಮ್ಮದಾಗಿರದು. ವಾತಾವರಣವು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಗಾತಿಯ ಸಾಕಷ್ಟು ಬೆಂಬಲ ಮತ್ತು ಒಡನಾಟವನ್ನು ಪಡೆಯುತ್ತೀರಿ. ಶುಭ ಕಾರ್ಯದ ಚಿಂತನೆ ಅನಿರೀಕ್ಷಿತವಾಗಿ ನಡೆಯಲಿದೆ. ಉದ್ಯಮ, ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ.

ತುಲಾ ರಾಶಿ :

ಉದ್ಯೋಗ ಮತ್ತು ವ್ಯವಹಾರ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳಿಂದ ಊಹಿಸಲಾಗದ ಯಶಸ್ಸನ್ನು ಸಾಧಿಸುವಿರಿ. ಯಾವುದೇ ಆರ್ಥಿಕ ವೆಚ್ಚದಲ್ಲಿ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ. ಇಂದು ತಪ್ಪಾದ ಹೂಡಿಕೆಯಿಂದ ಹಣೆಕಳೆದುಕೊಳ್ಳುವಿರಿ. ವ್ಯಾಪಾರ, ವ್ಯವಹಾರಗಳ ಮುನ್ನಡೆಗಾಗಿ ಪ್ರಯಾಣದ ಮಾತುಕತೆಯ ಸಾಧ್ಯತೆ ಇರುತ್ತದೆ. ದಾಯಾದಿಗಳ ಆಗಮನ ಕಿರಿಕಿರಿ ತರಲಿದೆ.

ವೃಶ್ಚಿಕ ರಾಶಿ :

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಮತ್ತು ಕುಟುಂಬದ ಜವಾಬ್ದಾರಿಗಳನ್ನು ಪೂರೈಸಲಾಗುವುದು. ಒಂದರ ಆಳ ತಪ್ಪಿದರೂ ಮತ್ತೊಂದರಲ್ಲಿ ಬೀಳಬೇಕಾಗುವುದು. ವಾಹನ ಬಳಕೆಯಲ್ಲಿ ಎಚ್ಚರಿಕೆಯಿಂದ ಬಳಸಿ, ಆಕಸ್ಮಿಕ ವಾಹನ ವೈಫಲ್ಯದಿಂದಾಗಿ ವೆಚ್ಚಗಳು ಹೆಚ್ಚಾಗಬಹುದು. ಚಿಂತಿತ ವ್ಯವಹಾರಗಳು ಹಂತ ಹಂತವಾಗಿ ಬಲಗೊಳ್ಳಲಿವೆ. ಅದೃಷ್ಟ ಬಲದಿಂದ ಹೂಡಿಕೆಗಳು ಲಾಭದಾಯಕವಾಗಲಿವೆ. ನಿಮ್ಮ ಸ್ಥಾನವು ಆರ್ಥಿಕವಾಗಿ ಸದೃಢವಾಗಿರುತ್ತದೆ.

ಧನು ರಾಶಿ :

ಹೊಸ ಉದ್ಯಮಿಗಳು ಪ್ರಯೋಜನ ಪಡೆಯಲಿದ್ದಾರೆ. ಪ್ರಾಣಿಗಳಿಂದ ಆಪತ್ತು ಬರಬಹುದು. ಕಾರ್ಯಕ್ಷೇತ್ರದಲ್ಲಿ ನಿಮ್ಮ ನಾಯಕತ್ವದಲ್ಲಿ ನಡೆಯುತ್ತಿರುವ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಧಾರ್ಮಿಕ ಕಾರ್ಯಗಳಲ್ಲಿ ಸಮಯವನ್ನು ಕಳೆಯಲಾಗುವುದು. ಇಂದು ಲೌಕಿಕ ಆನಂದದ ವಿಧಾನಗಳು ಹೆಚ್ಚಾಗುತ್ತವೆ. ಇಂದು ಸಹೋದರ ಸಹೋದರಿಯ ಜೊತೆಗಿನ ನಿಮ್ಮ ವಾತ್ಸಲ್ಯವು ತೃಪ್ತಿಯನ್ನು ಕೊಡುವುದು.

ಮಕರ ರಾಶಿ :

ದಾಂಪತ್ಯದ ಕಲಹದಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ವಿಪರೀತ ಪರಿಣಾಮವುಂಟು ಮಾಡಲಿದೆ. ಯಾವುದೇ ಕೆಲಸವನ್ನು ಪೂರ್ಣಗೊಳಿಸದ ಕಾರಣ ನಿಮ್ಮ ಮನಸ್ಸು ಕೂಡ ತೊಂದರೆಗೊಳಗಾಗಬಹುದು. ಉದ್ಯೋಗಿಗಳು ಕ್ಷೇತ್ರದಲ್ಲಿ ಬಡ್ತಿ ಸುದ್ದಿಗಳನ್ನು ಕೇಳಬಹುದು. ಆದ್ದರಿಂದ ವ್ಯಾಪಾರಿಗಳು ಸಹ ಲಾಭ ಪಡೆಯಬಹುದು. ನಿಮ್ಮನ್ನು ವಶಪಡಿಸಿಕೊಳ್ಳುವ ತಂತ್ರಗಾರಿಕೆ ನಡೆಯುವುದು. ವ್ಯವಹಾರ ರೂಪಾಂತರವನ್ನು ಯೋಜಿಸಲಾಗುತ್ತದೆ.

ಕುಂಭ ರಾಶಿ :

ಉದ್ಯೋಗ ಕ್ಷೇತ್ರದಲ್ಲಿ ಅರ್ಹತೆಯನ್ನು ಹೆಚ್ಚಿಸುವಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಕುಟುಂಬದ ವಿಚಾರದಲ್ಲಿ ವಿರೋಧಿಗಳು ಜಯ ಸಾಧಿಸುವರು. ಹೊಸ ಒಪ್ಪಂದದ ಬಾಗಿಲು ಮತ್ತು ಸ್ಥಾನ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಚಿಂತೆ ಕಡಿಮೆಯಾಗಲಿದೆ. ಆಸ್ತಿಯ ವಿಚಾರದಲ್ಲಿ ಅಧಿಕ ಲಾಭ ಸಿಗಲಿದೆ. ಹುಚ್ಚುನತನದ ಸಾಹಸದಿಂದ ನಿಮ್ಮವರು ಬಲಿ. ಇಂದು ನಿಮಗೆ ಕೆಲವು ತೊಂದರೆಗಳಾಗುವ ಸಾಧ್ಯತೆಯಿದೆ.

ಮೀನ ರಾಶಿ :

ಕುಟುಂಬ ಜೀವನವು ಒತ್ತಡವನ್ನುಂಟು ಮಾಡುತ್ತದೆ. ಆದರೆ ಪ್ರೀತಿಪಾತ್ರರ ಜೊತೆ ಸಮಯ ಕಳೆಯಲಾಗುತ್ತದೆ. ಸಂಗಾತಿಯ ಬೆಂಬಲ ಮತ್ತು ಒಡನಾಟವನ್ನು ಪಡೆಯುವಿರಿ. ಶುಭ ಕಾರ್ಯದ ನಿರ್ಧಾರವು ಪ್ರಯತ್ನ ಬಲದಿಂದ ಫಲ ನೀಡಲಿದೆ. ಇಂದು ನಿಮ್ಮ ವೈವಾಹಿಕ ಜೀವನವು ಸಂತೋಷಕರವಾಗಿರುತ್ತದೆ. ಇದರೊಂದಿಗೆ, ನೀವು ಇಂದು ದಿನದ ಶುಭವನ್ನು ಪಡೆಯುತ್ತೀರಿ. ವ್ಯವಹಾರದಲ್ಲಿನ ವಿಸ್ತರಣೆ ನಿಮಗೆ ಸಂತೋಷವನ್ನು ನೀಡುತ್ತದೆ.

-ಲೋಹಿತ ಹೆಬ್ಬಾರ್-8762924271 (what’s app only)

Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!