Daily Horoscope 26 August 2024: ಈ ರಾಶಿಯವರಿಗೆ ಇಂದು ಅಶುಭವಾರ್ತೆ ಬರಬಹುದು; ಸೋಮವಾರದ ದ್ವಾದಶ ರಾಶಿ ಭವಿಷ್ಯ ಇಲ್ಲಿದೆ

ಆಗಸ್ಟ್​ 26,​ 2024ರ​​ ನಿಮ್ಮ ರಾಶಿಭವಿಷ್ಯ: ಇಂದು ನಿಮಗೆ ನೌಕರರಿಂದ ತೊಂದರೆ ಬರಬಹುದು. ವಿಶೇಷ ದ್ರವ್ಯ ಲಾಭದಿಂದ ಸಂತೋಷಪಡುವಿರಿ. ಆಕಸ್ಮಿಕ ಭೇಟಿಯು ಪ್ರೇಮವಾಗಿ ಬದಲಾಗಬಹುದು. ಮಕ್ಕಳ ಜೊತೆ ನೀವು ಹೆಚ್ಚಿನ ಸಮಯವನ್ನು ಕಳೆಯುವಿರಿ. ಹಾಗಾದರೆ ಆಗಸ್ಟ್​ 26ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 26 August 2024: ಈ ರಾಶಿಯವರಿಗೆ ಇಂದು ಅಶುಭವಾರ್ತೆ ಬರಬಹುದು; ಸೋಮವಾರದ ದ್ವಾದಶ ರಾಶಿ ಭವಿಷ್ಯ ಇಲ್ಲಿದೆ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 26, 2024 | 12:01 AM

ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ / ಅಷ್ಟಮೀ, ನಿತ್ಯನಕ್ಷತ್ರ: ಕೃತ್ತಿಕಾ / ರೋಹಿಣೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:47 ಗಂಟೆ, ರಾಹು ಕಾಲ 07:55 ರಿಂದ 09:28, ಯಮಘಂಡ ಕಾಲ 11:01 ರಿಂದ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ ಸಂಜೆ 03:41ರ ವರೆಗೆ.

ಮೇಷ ರಾಶಿ : ಇಂದು ದೈವಭಕ್ತಿಗೆ ನಿಮಗೆ ಅನುಕೂಲಕರ ವಾತಾವರಣವು ಸಿಗಲಿದೆ. ನಿಮ್ಮ ಉತ್ಸಾಹವೇ ಸಮಸ್ಯೆಗಳಿಗೆ ರಾಮಬಾಣ. ನಿಮಗೆ ಸ್ವಂತ ಉದ್ಯೋಗದ ಮೇಲೆ ಇರಬೇಕಾದ ಕಾಳಜಿಯು ಅನ್ಯ ಕಾರಣದಿಂದ‌ ಕಡಿಮೆಯಾಗಿ ನಷ್ಟವನ್ನು ಅನುಭವಿಸಬೇಕಾದೀತು. ಹೂಡಿಕೆಯ ವಿಚಾರದಲ್ಲಿ ಆತುರ ಬೇಡ. ಸರಿಯಾಗಿ ಗಮನಿಸಿ ಮುಂದಿನ ಹೆಜ್ಜೆ ಇಡಿ. ನೀವು ವೃತ್ತಿಪರರಾಗಿದ್ದರೆ ಕಛೇರಿಯಲ್ಲಿ ನಿಮಗೆ ಇಂದು ಅಶುಭವಾರ್ತೆಯು ಬರಬಹುದು. ಧೈರ್ಯವನ್ನು ತಂದುಕೊಳ್ಳುವುದು ಮುಖ್ಯ. ಕಳೆದುಕೊಂಡ ಸಂಗಾತಿಯ ನೆನಪು ನಿಮಗೆ ಅತಿಯಾಗಿ ಕಾಡಬಹುದು. ಮಾನಸಿಕವಾಗಿ ನೀವು ಕುಗ್ಗುವಿರಿ. ಯಾರೋ ಕೆಲವರಿಗಾಗಿ ನೀವು ಬದಲಾಗುವುದು ಬೇಡ. ಅಪರೂಪದ ಸ್ನೇಹಿತರನ್ನು ಮನೆಗೆ ಕರೆದು ಸಂತೋಷಪಡುವಿರಿ. ಯಾವುದೋ ಗಹನವಾದ ಆಲೋಚನೆಯಲ್ಲಿ ನೀವು ಮುಳುಗಿರುವಿರಿ. ಇನ್ನೊಬ್ಬರ ವಸ್ತುವನ್ನು ಕೇಳಿ ಪಡೆಯಿರಿ.

ವೃಷಭ ರಾಶಿ : ಇಂದು ದುರಭ್ಯಾಸದಿಂದ ಸಿಗುವ ಉನ್ನತ ಸ್ಥಾನವು ತಪ್ಪಬಹುದು. ಒತ್ತಡವಿದ್ದರೂ ಅದನ್ನು ನಿಭಾಯಿಸಿಕೊಂಡು ಹೋಗುವಿರಿ. ಇಂದು ನೀವು ನಿಮಗೆ ವಹಿಸಿದ ಕೆಲಸವನ್ನು ಬಿಟ್ಟು ಬೇರೆ ಕೆಲಸದಲ್ಲಿ ಮಗ್ನರಾಗುವಿರಿ. ಆಸಕ್ತಿ ಇದ್ದರೂ ಅನಿವಾರ್ಯ ಕಾರಣದಿಂದ ಜವಾಬ್ದಾರಿಯನ್ನು ತಪ್ಪಿಸಿಕೊಳ್ಳುವಿರಿ. ಸ್ವೇಚ್ಛಾಚಾರದ ವರ್ತನೆಯು ನಿಮ್ಮವರಿಗೆ ಇಷ್ಟವಾಗದು. ನಿಮ್ಮ ಕಾರ್ಯಕ್ಕೆ ಸಹಾಯಕರಾಗಿ ಉತ್ತಮರೇ ಸಿಗುತ್ತಾರೆ ಎಂಬ ಆಸೆ ಬೇಡ. ಕಛೇರಿಯ ಕೆಲಸದ ಕಾರಣ ನೀವು ಓಡಾಟ ಮಾಡಬೇಕಾದೀತು. ಪ್ರಯೋಜನವಾಗದೇ ಬೇಸರವಾದೀತು. ದೈಹಿಕವಾಗಿ ಶ್ರಮಿಸುವವರಿಗೆ ಲಾಭವಿದೆ. ತಾಯಿಯ ಮಾತನ್ನು ನೀವು ಕೇಳುವಿರಿ. ಗೊತ್ತಿದ್ದರೂ ಏನನ್ನೂ ಹೇಳದೇ ಮೌನದಿಂದ ಇರಲು ಪ್ರಯತ್ನಿಸುವಿರಿ. ಸ್ತ್ರೀಯರಿಂದ ತೊಂದರೆಯಾಗಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ಐಷಾರಾಮಿಯಾಗಿ ಬದುಕುವ ಕನಸು ಕಾಣುವಿರಿ.

ಮಿಥುನ ರಾಶಿ : ನಿಮ್ಮ ಇಂದಿನ ಹೊಸ ಪ್ರಯತ್ನಗಳು ಕಾರ್ಯಕ್ಕೆ ಬೇಕಾದ ಉತ್ಸಾಹವನ್ನು ಕೊಡುವುದು. ನಿಮಗೆ ಗೊತ್ತಿಲ್ಲದ ಕಾರ್ಯವನ್ನೂ ನೀವು ಒಪ್ಪಿಕೊಳ್ಳುವಿರಿ. ಮಕ್ಕಳಿಗೆ ಇಂದು ಸ್ವಲ್ಪ ಹಣವನ್ನು ಖರ್ಚುಮಾಡಬೇಕಾದೀತು. ಓಡಾಟಕ್ಕೆ ವಾಹನದ ಅವಶ್ಯಕತೆ ಬೇಕೆನಿಸಬಹುದು. ಸುಳ್ಳು ಹೇಳಿ‌ ಸ್ವಾರ್ಥವನ್ನು ಸಾಧಿಸಿಕೊಳ್ಳುವಿರಿ. ಹೆಚ್ಚು ಮಾತನಾಡಲು ನಿಮಗೆ ಸಮಯದ ಅಭಾವ ಇರುವುದು. ಕೃಷಿಯಲ್ಲಿ ಲಾಭ ಗಳಿಸುವ ಉಪಾಯವನ್ನು ಮಾಡುವಿರಿ. ನಿಮ್ಮ ಹಳೆಯ ಸಂಬಂಧವು ಮತ್ತೆ ಚಿಗುರೊಡೆಯಬಹುದು. ಹಿಂದಿನ ಶ್ರಮವು ಸಾರ್ಥಕವಾದೀತು. ಆಸ್ತಿಯ ಖರೀದಿಯನ್ನು ಮುಂದಕ್ಕೆ ಹಾಕಿ. ನಿಮ್ಮ ಆತುರವು ಇನ್ನೊಬ್ಬರಿಗೆ ಪರಿಹಾಸವಾದೀತು. ಕಛೇರಿಯಲ್ಲಿ ಇಂದು ನೀವು ಸ್ವತಂತ್ರರು. ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ.

ಕರ್ಕಾಟಕ ರಾಶಿ : ಇಂದು ನೀವು ಎಂತಹ ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ವ್ಯಾಪಾರದ ಸ್ಥಳದಲ್ಲಿ ಕಲಹವಾಗುವ ಸಾಧ್ಯತೆ ಇದೆ. ಸಮಯವನ್ನು ನೋಡಿ ನೀವು ಮಾತನಾಡುವುದು ಒಳ್ಳೆಯದು. ಎಲ್ಲ ಸಂದರ್ಭದಲ್ಲಿ ನಿಮಗೆ ಗೌರವವು ಸಿಗುತ್ತದೆ ಎಂದು ನಂಬ ಬೇಡಿ. ನಿಮ್ಮ‌ ಸ್ಥಾನವನ್ನು ಉಳಿಸಿಕೊಳ್ಳಲು ಬಹಳ ಶ್ರಮಪಡುವಿರಿ. ನಿಮ್ಮ ದೃಷ್ಟಿಯಲ್ಲಿ ಯಾವುದೂ ಸರಿಯಾಗದು. ಆದಾಯದ‌ ಮೂಲವು ಬದಲಾಗಬಹುದು. ದಿನನಿತ್ಯದ ಕೆಲಸದಲ್ಲಿ ವ್ಯತ್ಯಾಸವನ್ನು ಕಾಣುವಿರಿ. ಕಛೇರಿಯಲ್ಲಿ ನಿಮ್ಮ ಬಗ್ಗೆ ಸಲ್ಲದ ಮಾತುಗಳು ಬರಬಹುದು. ಸಮಯದಲ್ಲಿ ಮುಗಿಸುವ ಕೆಲಸವನ್ನೂ ಮುಗಸಿ ಮುಂದಿನ ಆಲೋಚನೆಯನ್ನು ಮಾಡಿ. ನೀವು ಅನುಸರಿಸುವ ಕ್ರಮದಲ್ಲಿ ವ್ಯತ್ಯಾಸ ಇರಬಹುದು. ವಿವಾಹಕ್ಕೆ ಬರುವ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಿ. ನಿಮ್ಮ ಮಾತುಗಳಿಂದ ನೋವಾಗಲಿದೆ. ಹೇಳಬೇಕಾದುದನ್ನು ನೇರವಾಗಿ ಹೇಳಿ.

ಸಿಂಹ ರಾಶಿ : ಇಂದು ನಿಮ್ಮ ಗೃಹ ನಿರ್ಮಾಣದ ಕಡೆಗೆ ಗಮನವಾಗಬೇಕಾಗುವುದು. ಉದ್ಯೋಗಕ್ಕೆ ವಿರಾಮ‌ ಹೇಳಿದ ನಿಮಗೆ ದಗ್ಭ್ರಾಂತಿಯಾಗಬಹುದು. ನೀವು ಇಂದು ಮನೆಗಾಗಿ ಏನನ್ನಾದರೂ ಕೊಡಲಿದ್ದೀರಿ. ಒಳ್ಳೆಯ ವ್ಯಕ್ತಿಯನ್ನು ನೀವು ದೂರಮಾಡಿಕೊಳ್ಳುವಿರಿ. ನಿಮ್ಮ‌ಕೆಲಸಗಳು ಕೆಲವು ನಿಷ್ಪ್ರಯೋಜಕವೂ ಆಗಬಹುದು. ಯಾರದೋ ಮಾತಿಗೆ ಬೇಸರಿಸಿಕೊಳ್ಳುವುದು ಸರಿಯಲ್ಲ. ಯಾರದೋ ಮೇಲಿನ‌ ಸಿಟ್ಟನ್ನು ನೀವು ತೀರಿಸಿಕೊಳ್ಳುವ ಭರದಲ್ಲಿ ನಿಮಗೆ ಸರಿ ತಪ್ಪುಗಳ ನಿರ್ಣಯ ಕಷ್ಟವಾದೀತು. ನೀವಿಂದು ಯಾರನ್ನಾದರೂ ಅನುಸರಣ ವ್ಯಕ್ತಿತ್ವವನ್ನು ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮದಾದ ಕೆಲಸಗಳು ಹಾಗೆಯೇ ಉಳಿದುಕೊಳ್ಳಬಹುದು. ನಿಮ್ಮ ನೋವಿಗೆ ನೀವೇ ಔಷಧ ಮಾಡಿಕೊಳ್ಳಬೇಕು. ಯಾರೋ ಬರುತ್ತಾರೆ ಎಂದು ಕಾಯುವುದು ಬೇಡ. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ವಿದೇಶದವರ ಜೊತೆ ನಿಮ್ಮ ವ್ಯವಹಾರವು ನಡೆಯುವುದು.

ಕನ್ಯಾ ರಾಶಿ : ಇಂದು ಮಕ್ಕಳ ವಿಚಾರಕ್ಕೆ ಹಣವು ವ್ಯಯವಾಗಬಹುದು. ಬದ್ಧತೆಯಿಂದ ಮಾಡಿದ ಕಾರ್ಯಕ್ಕೆ ಶ್ರೇಯಸ್ಸು ನಿಮ್ಮದೇ. ಅಕಾರಣವಾದ ವಿವಾದಗಳಿಂದ ಸಮಯವು ಹಾಳಾಗಬಹುದು.‌ ಆಕಸ್ಮಿಕವಾಗಿ ಬರುವ ಸುದ್ದಿಯಿಂದ ನಿಮಗೆ ಸಂತೋಷವಾಗಲಿದೆ. ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕಿದ್ದರೆ ನಿಮಗರ ಸಿಗಬಹುದು. ವ್ಯಾವಹಾರಿಕ ಗೌಪ್ಯತೆಯನ್ನು ನೀವು ಇಟ್ಟುಕೊಳ್ಳುವುದು ಅನಿವಾರ್ಯ. ವಿದ್ಯಾಭ್ಯಾಸವನ್ನು ಬಹಳ ಆಸಕ್ತಿಯಿಂದ ವಿದ್ಯಾರ್ಥಿಗಳು ಮಾಡುವರು. ಬಂಧುಗಳ ಸಲಹೆಯನ್ನು ನೀವು ಸ್ವೀಕರಿಸಿ ಬಿಡುವಿರಿ. ಸಂಗಾತಿಯ ನಡತೆಯು ನಿಮಗೆ ಅನುಮಾನವನ್ನು ತರಿಸಬಹುದು. ದಂಪತಿಗಳು ಜೊತೆಯಾಗಿ ಪುಣ್ಯಸ್ಥಳಗಳಿಗೆ ಹೋಗುವಿರಿ. ನಿಮಗೆ ಸಾಧಿಸುವ ಛಲವು ಬರಬಹುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ನಿಮ್ಮ ಮಾತು ಇನ್ನೊಬ್ಬರ ಕೋಪವನ್ನು ಕರಗಿಸೀತು. ನಿಮ್ಮ ಬಗ್ಗೆ ಬರುವ ಆರೋಪವನ್ನು ಸುಳ್ಳು ಮಾಡಿ ತೋರಿಸುವ ಕಾರ್ಯಕ್ಕೆ ಮುಂದಾಗುವಿರಿ.

ತುಲಾ ರಾಶಿ : ಇಂದು ಉದ್ವೇಗವು ನಿಮ್ಮ ಕೆಲಸವನ್ನು ಅಸ್ತವ್ಯಸ್ತ ಮಾಡಲಿದೆ. ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಇಂದು ನಿಮ್ಮ ಸೇವೆಗೆ ಗೌರವವು ಸಿಗಬೇಕಾದರೂ ಸಿಗದೇ ಹೋದೀತು. ಪ್ರಭಾವಿ ವ್ಯಕ್ತಿಗಳ ಜೊತೆ ಸೆಣಸುವ ಸನ್ನಿವೇಶಗಳು ಬರಬಹುದು. ಅನಧಿಕೃತಿ ವ್ಯವಹಾರದಿಂದ ನಿಮಗೆ ಕಷ್ಟವಾದೀತು. ನಿಮ್ಮ ಅಂತರಂಗವು ನಕಾರಾತ್ಮಕವಾಗಿ ಏನನ್ನಾದರೂ ಹೇಳುತ್ತಿದ್ದರೆ ಅದನ್ನು ವ್ಯಕ್ತಪಡಿಸಲು ಹೋಗಬೇಡಿ. ಸ್ವಲ್ಪ ಸಮಾಧಾನದಿಂದ ಇರಿ. ಉದ್ಯೋಗದಲ್ಲಿ ಬದಲಾವಣೆ ಆಗಬಹುದು. ಸರ್ಕಾರದಿಂದ ಬರುವ ಹಣವು ಕೈ ತಪ್ಪಬಹುದು. ಅದು ಬಂದಂತೆ ಸದ್ಯ ಮುಂದುವರಿಯಿರಿ. ಪುರುಷಪ್ರಯತ್ನವು ಈಗ ಬೇಡ. ಅಪ್ರಯೋಜಕವಾಗಲಿದೆ. ಆದಷ್ಟು ಸಮಯ ತಾಳ್ಮೆಯಿಂದ ಇರಬೇಕಾಗಿದೆ. ವಿದೇಶ ಪ್ರವಾಸದ ಕನಸು ಕಾಣುತ್ತಿರುವವರು ನನಸು ಮಾಡಿಕೊಳ್ಳಬಹುದಾಗಿದೆ. ಉಪಕಾರದ ಸ್ಮರಣೆ ನಿಮಗೆ ಯಶಸ್ಸನ್ನು ಕೊಟ್ಟೀತು. ಯಾರದೋ ಕಾರಣದಿಂದ ನಿಮ್ಮ ಇಂದಿನ ಗುರಿಯೇ ಬದಲಾಗಬಹುದು.

ವೃಶ್ಚಿಕ ರಾಶಿ : ಇಂದು ನಿಮ್ಮ ನ್ಯಾಯಾಲಯದ ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಎಂದೋ ಮಾಡಿದ ಉಪಕಾರವು ಇಂದು ನಿಮ್ಮ ಕೈ ಸೇರುವುದು. ನಿಶ್ಚಿತ ಕಾರ್ಯಗಳು ಸರಿಯಾಗಿ ಆಗದೇ ಇರುವುದು ಅಸಮಾಧನಕ್ಕೆ ಮುಖ್ಯಕಾರಣವಾಗಿದೆ. ನಿಮ್ಮ ವಿದ್ಯೆಗೆ ಅನುಗುಣವಾದ ವೃತ್ತಿಯು ಸಿಗಲಿದೆ. ನಿಮ್ಮ ಅನಾರೋಗ್ಯಕ್ಕೆ ಅನೇಕ ವೈದ್ಯರನ್ನು ಸಂಪರ್ಕಿಸಿ ಸೋಲುವಿರಿ. ಸುಳ್ಳಾಡುವ ಸಂದರ್ಭವು ಬರಬಹುದು. ಅಹಂಕಾರದಿಂದ ಕಛೇರಿಯಲ್ಲಿ ಕಲಹವಾಗಬಹುದು. ಸಹೋದ್ಯೋಗಿಗಳನ್ನು ಎದುರುಹಾಕಿಕೊಳ್ಳುವಿರಿ. ಇನ್ನೊಬ್ಬರನ್ನು ನೋಡಿ ಅಸೂಯೆಪಡುವುದು ಬೇಡ. ಬಂಧುಗಳ ವರ್ತನೆಯು ನಿಮಗೆ ಬೇಸರ ತರಿಸೀತು. ಮೇಲ್ನೋಟಕ್ಕೆ ಯಾವುದನ್ನೂ ತೀರ್ಮಾನ ಮಾಡುವುದು ಬೇಡ. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನಹರಿಸುವರು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ವಿರೋಧಿಸದೇ ಒಳ್ಳೆಯ ರೀತಿಯಲ್ಲಿ ಮಾತನಾಡಿ.

ಧನು ರಾಶಿ : ನೀವು ಇಂದು ಮಾಡಿದ ತಪ್ಪನ್ನು ಮಾಡದೇ ಎಲ್ಲರಿಂದ ಸೈ ಎನಿಸಿಕೊಳ್ಳುವಿರಿ. ಪರರ ಕಷ್ಟಗಳಗೆ ಸ್ಪಂದಿಸಲು ಆಗದೇ ಇರಬಹುದು. ಬಂಧುಗಳ ಜೊತೆ ಸಂಬಂಧವನ್ನು ಇಟ್ಟುಕೊಳ್ಳುವುದು ನಿಮ್ಮ ವರ್ತನೆಯ ಮೇಲೆ ಇರುವುದು. ಹೊಸ‌ ಕೆಲಸವನ್ನೇನಾದರೂ ಆರಂಭಿಸಿದರೆ ಅದನ್ನು ನಿಮ್ಮ ಶತ್ರುಗಳು ನಿಲ್ಲಿಸುವರು. ನಿಮ್ಮ ಗೌಪ್ಯ ವಿಚಾರಗಳು ಕೆಲವರಿಗೆ ತಿಳಿದು ಹಾಸ್ಯ ಮಾಡಬಹುದು. ನೆರೆಯವರನ್ನು ಪ್ರೀತಿಯಿಂದ ಮಾತನಾಡಿಸುವುದು ಅನಿವಾರ್ಯವಾಗಲಿದೆ. ಸಂಗಾತಿಯ ಜೊತೆ ವಾದಕ್ಕಿಳಿದು ಸೋಲಬೇಕಾಗುವುದು. ವಿದ್ಯಾಭ್ಯಾಸದ ಹಿನ್ನಡೆಯಿಂದ ನಿಮಗೆ ಆತಂಕ ಹೆಚ್ಚಾಗುವುದು. ಹೊಂದಾಣಿಕೆಯನ್ನು ನೀವು ಬೆಳೆಸಿಕೊಳ್ಳಬೇಕಾಗಬಹುದು. ಸ್ನೇಹಿತರು ವಂಚಿಸುವ ಸಾಧ್ಯತೆ ಇದೆ. ರಾಜಕೀಯ ಒತ್ತಡವು ನಿಮಗೆ ಹೆಚ್ಚು ಬರುವುದು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಮ್ಮ ವಸ್ತುಗಳನ್ನು ಮರುಬಳಕೆ ಮಾಡಲು ಯೋಚಿಸಿ. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು.

ಮಕರ ರಾಶಿ : ನೀವು ಅಪ್ತರ ಸಲಹೆಗಳನ್ನು ಕೇಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ನಿಮ್ಮ ದುರುಪಯೋಗವನ್ನು ಸ್ನೇಹಿತರು ತಪ್ಪಿಸುವರು. ಇಂದು ನೀವು ಎಲ್ಲವನ್ನೂ ಮಾಡಬಲ್ಲವರು ಎಂಬ ಅಭಿಮಾನ ಉಂಟಾಗಲಿದೆ. ಆಪ್ತರೇ ನಿಮಗೆ ನಂಬಿಕೆಗೆ ದ್ರೋಹ ಬಗೆಯಬಹುದು. ಕೇಳಬೇಕಾದುದನ್ನು ನೇರವಾಗಿ ಕೇಳಿ. ಬಹಳ ದಿನಗಳಿಂದ ಉದ್ಯೋಗವು ಸಿಗದೇ ಮಾನಸಿಕವಾಗಿ ಕುಗ್ಗುವಿರಿ. ಮಕ್ಕಳು ಕೇಳಿದ್ದನ್ನು ಕೊಡಿಸಿ ಅವರನ್ನು ಸಂತೋಷಪಡಿಸುವಿರಿ. ವಿದೇಶ ಪ್ರಯಾಣದ‌ ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನಿಸಿ. ಊಹಿಸದ ವಾರ್ತೆಯೊಂದು ಬಂದು ಸಂತೋಷವಾಗಿ ಇಡುವುದು. ಉತ್ತಮ ಲಾಭಕ್ಕಾಗಿ ನೀವು ಯೋಜನೆಯನ್ನು ಹಾಕುವಿರಿ. ನಿಮ್ಮ ವಸ್ತುವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಅನುಕಂಪ ಬೇಕಸದೀತು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಮನೆಯ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳುವಿರಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು.

ಕುಂಭ ರಾಶಿ : ಇಂದು ನಿಮ್ಮನ್ನು ಅಪರಿಚಿತರು ವಶ ಮಾಡಿಕೊಳ್ಳಲು ಪ್ರಯತ್ನಿಸುವರು. ಉದ್ಯೋಗದ ಸ್ಥಳವನ್ನು‌ ಸದ್ಯ ಅನ್ವೇಷಿಸುವುದು ಬೇಡ.‌ ಒಂದು ಕಡೆ ಸುಮ್ನನೆ‌ ಕುಳಿತು ಅಭ್ಯಾಸವಿರದು. ಬೇರೆಯವರಿಗೆ ಉಪಕಾರ ಮಾಡಲು ಹೋಗಿ ನಿಮಗೆ ಸಿಗುವುದು ಕಷ್ಟ. ಯಾರಮೇಲಾದರೂ ಅಪವಾದವನ್ನು ಮಾಡುವ ಮೊದಲು ಆಲೋಚಿಸಿ. ಆಪ್ತರ ಮಾತನ್ನು ಕೇಳದೇ ಬೇಸರಿಸುವ ಸಂದರ್ಭವು ಬರಬಹುದು. ವಾಹನದಲ್ಲಿ ಸಂಚಾರವು ನಿಮಗೆ ಹೆಚ್ಚು ಇಷ್ಟವಾಗುವುದು. ಅಪರಿಚಿತರ ಜೊತೆ ಮಾತುಗಳನ್ನು ಕಡಿಮೆ‌ ಮಾಡಿ. ಇಂದಿನ‌ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನವಿರಲಿದೆ. ಮೇಲಧಿಕಾರಿಗಳ ನಡುವೆ ಚರ್ಚೆ ಮಾಡಲಿದ್ದೀರಿ. ಸಮಯವನ್ನು ಹಾಳು ಮಾಡಿಕೊಂಡು ದುಃಖಿಸುವಿರಿ. ನಿಮ್ಮನ್ನು ನಂಬಿಸಿ ಕೆಲಸ ಮಾಡಿಸಿಕೊಳ್ಳುವರು. ಪರಿಚಿತರ ಮೂಲಕ ನಿಮಗೆ ಅಪರಿಚಿತರ ಸಹಾಯ ದೊರೆಯುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು.

ಮೀನ ರಾಶಿ : ಇಂದು ನಿಮಗೆ ನೌಕರರಿಂದ ತೊಂದರೆ ಬರಬಹುದು. ವಿಶೇಷ ದ್ರವ್ಯ ಲಾಭದಿಂದ ಸಂತೋಷಪಡುವಿರಿ. ಆಕಸ್ಮಿಕ ಭೇಟಿಯು ಪ್ರೇಮವಾಗಿ ಬದಲಾಗಬಹುದು. ಮಕ್ಕಳ ಜೊತೆ ನೀವು ಹೆಚ್ಚಿನ ಸಮಯವನ್ನು ಕಳೆಯುವಿರಿ. ಯಾರ‌ ಮಾತನ್ನೋ‌ ನಂಬಿ ನಿಮ್ಮವರ ಮೇಲೆ‌ ಅನುಪಡುವಿರಿ. ಹೊರಗಿನ ಆಹಾರವನ್ನು ತಿನ್ನಲು ನೀವು ಇಚ್ಛಿಸುವಿರಿ. ಆತಂಕದಲ್ಲಿ ನಿಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವಿರಿ. ‌ಸಂಗಾತಿಯಿಂದ ನೀವು ಉಡುಗೊರೆಯನ್ನು ಪಡೆಯುವಿರಿ. ತಪ್ಪಿಗೆ ಪಶ್ಚಾತ್ತಾಪವನ್ನು ಪಡೆಯುವ ದಿನ ಇಂದು. ದೇವರಿಗೆ ಶರಣಾಗಿ ನಿಮಗೆ ಆಗಬೇಕಾದ ಕೆಲಸವನ್ನು ನಿವೇದಿಸಿಕೊಳ್ಳುವಿರಿ. ಮನೋರಂಜನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ನಿಮ್ಮ ಕೇಳಿಕೊಂಡು ಬಂದವರಿಗೆ ಸಹಾಯವನ್ನು ಮಾಡಲು ಒಪ್ಪಿಕೊಳ್ಳುವಿರಿ. ಸೇವಾ ಮನೋಭಾವ ಕಡಿಮೆ ಆಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್