Daily Horoscope 26 July 2024: ಈ ರಾಶಿಯವರು ಸಹನೆ ಕಳೆದುಕೊಳ್ಳುವ ಸಂದರ್ಭ ಬರಬಹುದು ಎಚ್ಚರ!

ಜುಲೈ 26,​​ 2024ರ​​ ನಿಮ್ಮ ರಾಶಿಭವಿಷ್ಯ: ನಿಮ್ಮ ಜೀವನದ ಬಗ್ಗೆ ನಿಮಗೆ ವಿಧವಾದ ಕನಸುಗಳು ಇರಬಹುದು. ಒಂಟಿಯಾಗಿದ್ದಷ್ಟೂ ಬೇರೆ ಬೇರೆ ಯೋಚನೆಗಳು ಬರಬಹುದು. ಯಾರನ್ನಾದರೂ ಸಹಪಾಠಿಗಳನ್ನಾಗಿ ಮಾಡಿಕೊಳ್ಳುವುದು ಉತ್ತಮ. ಹಾಗಾದರೆ ಜುಲೈ 26ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 26 July 2024: ಈ ರಾಶಿಯವರು ಸಹನೆ ಕಳೆದುಕೊಳ್ಳುವ ಸಂದರ್ಭ ಬರಬಹುದು ಎಚ್ಚರ!
ಈ ರಾಶಿಯವರು ಸಹನೆ ಕಳೆದುಕೊಳ್ಳುವ ಸಂದರ್ಭ ಬರಬಹುದು ಎಚ್ಚರ!
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 26, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜುಲೈ. 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಸುಕರ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:51 ರಿಂದ 05:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:52ರಿಂದ 09:28ರ ವರೆಗೆ.

ಮೇಷ ರಾಶಿ: ಇಂದು ಕಷ್ಟವಾದರೂ ಸಂತೋಷದಿಂದ ಕೆಲಸವನ್ನು ಮಾಡುವಿರಿ. ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸಕಾರಾತ್ಮಕ ಚಿಂತನೆಗಳನ್ನು ಪ್ರಯತ್ನಪೂರ್ವಕವಾಗಿ ತಂದುಕೊಳ್ಳಬೇಕಿದೆ. ಸಂಗಾತಿಯನ್ನು ಬಿಟ್ಟಿರುವುದು ಬೇಸರ ತರಿಸಬಹುದು. ಇಂದು ತಿಳಿದು ಕೂಗಾಡಬಹುದು.‌ ನಿಮ್ಮ ಉದ್ಯೋಗವು ನಿಮಗೆ ಸಾಕೆನಿಸಿ ಹೊಸತನ್ನು ಹುಡುಕಲು ಇಚ್ಛಿಸಬಹುದು. ನಡವಳಿಕೆಯಿಂದ ಕೆಲವಷ್ಟು ಅಂಶಗಳನ್ನು ಕಲಿತಾರು. ಸಾಮಾಜಿಕ ಕೆಲಸಗಳು ನಿಮಗೆ ಇಷ್ಟವಾಗುವ ಕೆಲಸವೇ ಆಗಿದ್ದು ಬಿಡುವಿನ ವೇಳೆಯಲ್ಲಿ ಮಾಡುವಿರಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಉಪದೇಶ ನೀಡುವ ಬದಲು ಆಚರಿಸಿದರೆ ಉತ್ತಮ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಬೋಧಕ ವರ್ಗಕ್ಕೆ ಸಂತಸದ ಸುದ್ದಿ ಸಿಗಬಹುದು.

ವೃಷಭ ರಾಶಿ: ಬೇರೆಯವರು ಖುಷಿಪಡುವಂತೆ ಮಾತನಾಡುವಿರಿ. ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ನಿಮ್ಮ ವಿಚಾರದಲ್ಲಿ ಬೇರೆಯವರು ಮಧ್ಯಪ್ರವೇಶ ಮಾಡುವರು. ಇದು ನಿಮಗೆ ಬಹಳ ಸಿಟ್ಟನ್ನು ತರಿಸೀತು. ಅದನ್ನು ವ್ಯಕ್ತಪಡಿಸಲು ನೀವು ಸೂಕ್ತ ಸಂದರ್ಭವನ್ನು ಹುಡುಕುವಿರಿ. ಜಗಳವಾಗುವ ಸ್ಥಿತಿ‌ದ್ದರೂ ಸುಮ್ನನಿರುವುದು ಇತರರಿಗೆ ಆಶ್ಚರ್ಯವನ್ನು ಕೊಟ್ಟೀತು. ವೃತ್ತಿಯಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಹೇಳಿಕೆಗಳು ಬರಬಹುದು. ನಿಮ್ಮವರು ನಿಮ್ಮ ಪ್ರೀತಿಗೆ ಸೋಲಬಹುದು. ಕಳೆದುಕೊಂಡ ಸಂಬಂದವು ಮತ್ತೆ ಚಿಗುರಬಹುದು. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಕೆಲಸವನ್ನು ಆರಂಭಿಸುವಾಗ ಇರುವ ಉತ್ಸಾಹವು ಅನಂತರ ಇರದು.

ಮಿಥುನ ರಾಶಿ: ಇಂದು ಆಪ್ತರು ನಿಮಗೆ ಬರುವ ಸಂಕಟದಲ್ಲಿ ಜೊತೆಯಾಗುವರು. ಧೈರ್ಯದಿಂದ ನೀವು ಇರಬಹುದು. ತಂತ್ರಜ್ಞರಿಗೆ ಉತ್ತಮ ಕೆಲಸ ಸಿಗಲಿದೆ. ಭೋಗವಸ್ತುವಿನ ಜೊತೆ ಹೆಚ್ಚು ಕಾಲಕಳೆಯಲು ಬಯಸುವಿರಿ. ಬಂಧುಗಳ ಒಡನಾಟ ಹೆಚ್ಚಾಗುವುದು. ನಿಮ್ಮ ಗುರಿಯ ಬಗ್ಗೆ ಬಲ್ಲವರು ತಿಳಿಸಬಹುದು. ಮನಸ್ಸು ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಹೇಳಿಬಿಡಬಹುದು. ವೈವಾಹಿಕ‌ಜೀವನವು ಬಹಳ‌ ಕಷ್ಟ ಎನಿಸಬಹುದು. ಸಂತೋಷದಿಂದ ಇರುಲು ಕಷ್ಟಪಡಬೇಕಾದ ಸ್ಥಿತಿ ಇದೆ. ಕೊರತೆಗಳ ಬಗ್ಗೆ ಹೆಚ್ಚು ನೀವು ಕೊರಗಬಹುದು. ನೋವನ್ನು ಯಾರಲ್ಲಿ ಹೇಳಿಕೊಳ್ಳಬೇಕು ಎಂಬ ಅಳುಕು ಇರುವುದು. ಒಂದೇ ಕೆಲಸದಿಂದ ಎರಡು ಪ್ರಯೋಜನವನ್ನು ಪಡೆಯುವಿರಿ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ಸಣ್ಣ ವ್ಯಾಪಾರದಲ್ಲಿ ಅಲ್ಪ ಲಾಭವಾಗಲಿದೆ. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು.

ಕಟಕ ರಾಶಿ: ಇಂದು ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ವೀಕ್ಷಿಸಬಹುದು. ಅನಾರೋಗ್ಯ ಕಾರಣದಿಂದ ನಿಮ್ಮ ಬಗ್ಗೆಯೇ ನಿಮಗೆ ಜುಗುಪ್ಸೆ ಬರಬಹುದು. ಹಣವನ್ನು ಗಳಿಸುವ ಹಂಬಲವು ಅತಿಯಾಗಿದ್ದರೂ ದಾರಿಗಳು ಮಾತ್ರ ಕಾಣಿಸದೇ ಇದ್ದೀತು. ಮರಣಭೀತಿಯು ನಿಮ್ಮನ್ನು ಕಾಡಬಹುದು.‌ ಕೆಟ್ಟ ಆಲೋಚನೆಗಳನ್ನು ಬಿಟ್ಟು ಸರಿಯಾದುದರ ಬಗ್ಗೆ ಗಮನವಿರಲಿ. ಅಲ್ಪಾದಾಯದಲ್ಲಿ ತೃಪ್ತಿಪಡುವಿರಿ. ಸಂಗಾತಿಯ ಆಯ್ಕೆಯನ್ನು ಸರಿಯಾಗಿ ಮಾಡಿಕೊಳ್ಳಿ. ಮೇಲ್ನೋಟಕ್ಕೆ ಒಪ್ಪಿ ಅನಂತರ ಕಷ್ಟವಾದೀತು. ಮನೆಯ ಜವಾಬ್ದಾರಿಗಳು ಬರಬಹದು. ಅತ್ಯಾಪ್ತರ ಗುರುತು ಮರೆಯಾಗಬಹುದು. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಹಿರಿಯರ ಹಿತವಚನವನ್ನು ಕೇಳುವ ವ್ಯವಧಾನ ಇರದು. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ಇರುವ ವಸ್ತುಗಳನ್ನು ಅಪರಿಚಿತರಿಗೆ ಕೊಡುವಿರಿ.

ಸಿಂಹ ರಾಶಿ: ಇಂದು ನಿಮ್ಮ ಕರ್ತವ್ಯಗಳನ್ನು ಮರೆಯು ಸಾಧ್ಯತೆ ಇದ್ದು, ಯಾರೋ ಅದನ್ನು ನೆನಪಿಸಬೇಕಸದೀತು. ಇದರಿಂದ ನಿಮಗೆ ಕೋಪಕ್ಕೆ ಬರಬಹುದು. ನೀವು ಚೆನ್ನಾಗಿ ಇರುವುದು, ಸಂತೋಷದಿಂದ ಮಾತನಾಡುವುದು, ಎಲ್ಲರ ಜೊತೆ ಬೆರೆಯುವುದು ನಿಮ್ಮ ಬಂಧುಗಳಿಗೆ ಅಸಹ್ಯವಾದೀತು. ಉಮ್ನತ ವಿದ್ಯಾಭ್ಯಾಸವು ಕಷ್ಟವೆನಿಸಬಹುದು. ತುಂಬಾ ಕಷ್ಟದಿಂದ ಗಳಿಸಿದ ಹಣವನ್ನು ಖರ್ಚುಮಾಡಲು ಮನಸ್ಸುಬಾರದು. ಹೊರಗಡೆ ಸುತ್ತಾಡಲು ಹೋಗಬಹುದು. ಇನ್ನೊಬ್ಬರನ್ನು ಅನುಕರಿಸುವ ನಿಮ್ಮ ಸ್ವಭಾವವನ್ನು ಬಿಡುವುದು ಒಳ್ಳೆಯದು. ಕೆಲವು ವಿಚಾರದಲ್ಲಿ ಧೈರ್ಯದ ಕೊರೆತೆ ಕಾಣುವುದು. ಹಳೆಯ ಸ್ನೇಹಿತೆಯು ಬಹಳ ಕಾಡಬಹುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ‌ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಮತ್ತೆ ಆರೋಗ್ಯವು ಕಡೆವುದು ನಿಮಗೆ ಕಷ್ಟವಾಗುವುದು. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಅಡ್ಡಿಬರಬಹುದು.

ಕನ್ಯಾ ರಾಶಿ: ನಿಮಗೆ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಪಾಲುದಾರಿಕೆ ಸಿಗಬಹುದು. ಗೃಹೋಪಯೋಗಿ ವ್ಯಾಪಾರದಲ್ಲಿ ಮಂದಗತಿ ಇರಲಿದೆ. ಯಂತ್ರೋಪಕರಣದ ಮಾರಾಟಗಾರಿಗೆ ಲಾಭವು ಆಗುವುದು. ಕೆಲಸದ ಸ್ಥಳದಲ್ಲಿ ಎಲ್ಲರೂ ನಿಮ್ಮ ಹಿಡಿತದಲ್ಲಿ ಇರಬೇಕು ಎನ್ನುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳುವಿರಿ. ಸಂಗಾತಿಯ ಜೊತೆ ಮಾತನಾಡಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಅನಾರೋಗ್ಯವು ನಿಮ್ಮ ಕಾರ್ಯಗಳಿಗೆ ಹಿನ್ನಡೆ ಮಾಡುವುದು. ನಿಮಗೆ ಸಿಗುವ ಹಣವು ಮಧ್ಯವರ್ತಿಗಳ ಕಾರಣದಿಂದ ಕೈತಪ್ಪಬಹುದು. ದೇವತೋಪಾಸನೆಯಲ್ಲಿ ಶ್ರದ್ಧೆ ಬರುವುದು. ವಿಷಯ ತಿಳಿದು ಮನಸ್ಸು ಕುಗ್ಗಬಹುದು. ನಿಮ್ಮ ವಿದ್ಯಾಪ್ರಗತಿಯು ಬಹಳ ಯಶಸ್ವಿಯಾಗುವುದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ಸತ್ಪಾತ್ರರಿಗೆ ದಾನವನ್ನು ಮಾಡಿ.

ತುಲಾ ರಾಶಿ: ನಿಮ್ಮದಾದ ಸಂಪತ್ತನ್ನು ಇನ್ನೊಬ್ಬರಿಗೆ ಕೊಡಬೇಕಾಗುವುದು. ಸಹನೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಿಮಗೆ ಎಚ್ಚರಿಕೆ ಇರಲಿ. ಬಹಳ ಆಯಾಸವಾದಂತೆ ಎನಿಸಬಹುದು. ನಿನ್ನೆಯ ಸುಸ್ತಿನಿಂದ ಹೊರಬರಲು ವಿಶ್ರಾಂತಿ ಪಡೆಯುವಿರಿ. ಆಹಾರ ಸೇವೆಯನ್ನು ಮಾಡಲು ನಿಮ್ಮ ಕ್ರಮವನ್ನು ರೂಢಿಸಿಕೊಳ್ಳುವಿರಿ. ತಾಯಿಯ ಜೊತೆ ಇಂದು ನಿಮ್ಮ ಎಲ್ಲ ವಿಷಯವನ್ನು ಹೇಳಿಕೊಳ್ಳುವಿರಿ. ಮನೆಯನ್ನು ನಿರ್ಮಿಸಲು ಹೊಸ ಜಾಗವನ್ನು ಖರೀದಿಸಬಹುದು. ವಕೀಲ ವೃತ್ತಿಯಲ್ಲಿ ಹಿನ್ನಡೆಯಾಗಲಿದೆ. ಮೋಜು ಮಾಡಲು ಹೋಗಿ ಹಣವನ್ನು ಕಳೆದುಕೊಳ್ಳುವ ಸಂಭವವಿದೆ. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸಬಹುದು. ಹವ್ಯಾಸಗಳು ನಿಮಗೆ ಪ್ರಯೋಜನವನ್ನು ಕೊಡುತ್ತದೆ. ಇಂದು ಖರೀದಿಸಿದ ಹೊಸ ವಸ್ತುವಿನಿಂದ ನಿಮಗೆ ಖುಷಿಯಾಗುವುದು.

ವೃಶ್ಚಿಕ ರಾಶಿ: ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಈಗಿರುವ ಕೆಲಸವನ್ನು ಬಿಟ್ಟು ಸ್ವಂತ ಉದ್ಯೋಗಕ್ಕೆ ತೊಡಗಬಹುದು. ಅತಿಯಾಗಿ ದೇಹವನ್ನು ದಂಡಿಸಬೇಡಿ. ನಿಮ್ಮ ಸಾಮರ್ಥ್ಯವನ್ನು ನೋಡಿಕೊಳ್ಳಿ. ಹಣವಿದ್ದರೂ ವಾಹನವನ್ನು ಕೊಳ್ಳುವ ಯೋಗ ದೂರವಿದೆ. ವಸ್ತುಗಳ ಕಳ್ಳತನವಾಗಬಹುದು. ಇದೇ ವಿಚಾರಕ್ಕೆ ಮನೆಯಲ್ಲಿ ಕಲಹವಾದೀತು. ನಿಮ್ಮ‌ಭಾವನೆ ತೊಂದರೆಯಾಗಲಿದೆ. ರಾಜಕೀಯ ವ್ಯಕ್ತಿಗಳ ಸಹಾಯದಿಂದ ಹೊಸ ಉದ್ಯೋಗಕ್ಕೆ ಸೇರಿಕೊಳ್ಳುವಿರಿ. ನಿಮ್ಮ ಬಗ್ಗೆ ನಿಮಗೆ ಕೀಳರಿಮೆ ಬರಬಹುದು. ಪ್ರೀತಿಯ ಮಾತುಗಳಿಂದ ಇಂದಿನ ಕೆಲಸವನ್ನು ಮಾಡಿಸಿಕೊಳ್ಳುವಿರಿ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ಯಾರನ್ನಾದರೂ ಗೆಳೆಯರನ್ನಾಗಿ ಮಾಡಿಕೊಳ್ಳುವಿರಿ. ಆದಾಯಕ್ಕೆ ಯಾರಿಂದಲಾದರೂ ಅಡ್ಡಿಯಾಗಿ, ಸಿಟ್ಟುಗೊಳ್ಳುವಿರಿ. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಮಂಗಲವಾದ ಕಾರ್ಯಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ.

ಧನು ರಾಶಿ: ಧಾರ್ಮಿಕ ಕಾರ್ಯಗಳಿಗೆ ಮುಂದಾಳುತ್ವವವನ್ನು ವಹಿಸುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಅಕ್ಕಪಕ್ಕದವರ ಜೊತೆ ಅಸಮಾಧಾನ ವ್ಯಕ್ತವಾಗುವುದು. ಸಂಗಾತಿಯ ಜೊತೆ ಸಂತೋಷ ಕೂಟದಲ್ಲಿ ಭಾಗವಹಿಸುವಿರಿ. ಸ್ನೇಹಿತರಿಂದ ಹಣವನ್ನು ಸಾಲವಾಗಿಯೂ ಒಡೆಯಬಹುದು. ಸುವ್ಯವಸ್ಥಿತ ಭವಿಷ್ಯದ ಕನಸು ಕಾಣುವಿರಿ. ಅಸ್ಥಿರವಾದ ವ್ಯವಸ್ಥೆಯು ಕಿರಿಕಿರಿಯನ್ನು ಉಂಟುಮಾಡಬಹುದು. ಕೋಪಗೊಳ್ಳಬೇಕಾದ ಪರಿಸ್ಥಿತಿ ಇದ್ದರೂ ಅದನ್ನು ನಿಯಂತ್ರಿಸಿಕೊಳ್ಳಬೇಕಾಗಿದೆ. ಸಹೋದರನ ಬಗ್ಗೆ ಪ್ರೀತಿ ಅತಿಯಾದೀತು. ನೀವು ಭರವಸೆ ಕೊಡಲು ಪ್ರಸಿದ್ಧರು ಎಂಬ ಬಿರುದು ಬರದಂತೆ ನೋಡಿಕೊಳ್ಳಿ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ಹೋದರೆ ಕಷ್ಟವಾದೀತು‌‌.

ಮಕರ ರಾಶಿ: ಕುಟುಂಬದವರ ಮಾತಿನ ಅಲಕ್ಷ್ಯದಿಂದ ನಿಮಗೆ ಸಮಸ್ಯೆಯಾದೀತು. ಹಿರಿಯರಿಗೆ ತೊಂದರೆಯನ್ನು ಕೊಡಲು ಹೋಗಬೇಡಿ. ಮಕ್ಕಳ ಜೊತೆ ಸಂತೋಷವನ್ನು ಅನುಭವಿಸುವಿರಿ. ಅರ್ಥವಿಲ್ಲದ ವ್ಯರ್ಥ ಮಾತುಗಳನ್ನು ನಿಲ್ಲಿಸುವುದು ಉತ್ತಮ‌. ನೀವು ಬಯಸಿದ ವಸ್ತುವು ಅನಾಯಾಸವಾಗಿ ದೊರೆಯುವುದು. ತುರ್ತು ಕಾರ್ಯದಿಂದ ಮಾಡಬೇಕಾದ ಕೆಲಸವನ್ನು ಬಿಡುವಿರಿ. ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಕಡಿಮೆ‌ ಆದೀತು. ವಿದ್ಯಾರ್ಥಿಗಳು ಆಗಿ ಹೋದರ ಬಗ್ಗೆ ಹೆಮ್ಮೆಯಿಂದ‌ ಬೀಗುವ ಅವಶ್ಯಕತೆಯಿಲ್ಲ. ಮುಂದಿನ ವಿದ್ಯಾಭ್ಯಾಸಕ್ಕೆ ಹೆಚ್ಚು ಮಹತ್ತ್ವವನ್ನು ಕೊಡಿ. ಒಬ್ಬರೇ ಎಲ್ಲಿಯಾದರೂ ಸುತ್ತಾಟ ಮಾಡಬಹುದು. ಅಪಮಾನದಂತೆ ಅನ್ನಿಸೀತು ನಿಮಗೆ. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಸಹೋದ್ಯೋಗಿಗಳ ವರ್ತನೆಯಿಂದ ಸಿಟ್ಟಾಗುವ ಸಾಧ್ಯತೆ ಇದೆ. ಭೋಗವಸ್ತುಗಳನ್ನು ಖರೀದಿ ಮಾಡುವಿರಿ.

ಕುಂಭ ರಾಶಿ: ನಿಮ್ಮ ಮಾತು ಇಂದು ಕೇಳುಗರಿಗೆ ಹಿಂಸೆ ಕೊಡಬಹುದು. ಆಪ್ತರ ಜೊತೆ ಮಾತುಕತೆಗಳು ಆಗಬಹುದು. ಬಯಕೆಯನ್ನು ಬಹಳ ಬಲವಾಗಿ ಹಿಡಿದಿಟ್ಟುಕೊಳ್ಳುವಿರಿ. ತೊಂದರೆಯನ್ನು ತೆಗೆದುಕೊಳ್ಳದೇ ಕೆಲಸವನ್ನು ಮುಗಿಸುವ ಮಾನಸಿಕ ಸ್ಥಿತಿಯನ್ನು ಹೊಂದಿದ್ದೀರಿ. ಇಂದು ನಿಮ್ಮ ಪರೀಕ್ಷೆಯ ಕಾಲವಾಗಿದ್ದು ಸ್ಥೈರ್ಯವು ಕಡಿಮೆ ಆಗುವುದು. ಮನೆಯ ಬಗ್ಗೆ ಚಿಂತೆಯೂ ಕಾಡಬಹುದು. ನಿಮ್ಮ ಜೀವನದ ಬಗ್ಗೆ ನಿಮಗೆ ವಿಧವಾದ ಕನಸುಗಳು ಇರಬಹುದು. ಒಂಟಿಯಾಗಿದ್ದಷ್ಟೂ ಬೇರೆ ಬೇರೆ ಯೋಚನೆಗಳು ಬರಬಹುದು. ಯಾರನ್ನಾದರೂ ಸಹಪಾಠಿಗಳನ್ನಾಗಿ ಮಾಡಿಕೊಳ್ಳುವುದು ಉತ್ತಮ. ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬಹುದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ನಿಶ್ಚಿತ ಲಾಭವು ಪ್ರಾಪ್ತವಾಗಲಿದೆ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ನಿಮ್ಮ ಕಾರ್ಯವು ನಿಮಗೆ ಭಯವನ್ನು ಕೊಡುವುದು.

ಮೀನ ರಾಶಿ: ಇಂದು ನೀವು ಸುತ್ತಾಟಕ್ಕೆಂದು ಮಕ್ಕಳ ಜೊತೆ ಹೋಗುವಿರಿ. ಕಡಿಮೆ ವೆಚ್ಚದಲ್ಲಿ ಹೆಚ್ಚು ಸಂಪಾದಿಸುವ ಯೋಜನೆಯನ್ನು ಹಾಕಿಕೊಳ್ಳುವುದಕ್ಕೆ ಎಲ್ಲಿಂದಲಾದರೂ ನಿಮಗೆ ಐಡಿಯಾ ಸಿಗಬಹುದು. ಬೇಡದ ಯೋಚನೆಗಳೇ ನಿಮ್ಮ ತಲೆಯಲ್ಲಿ ಸುತ್ತಬಹುದು. ನಿಮ್ಮದೇ ಮನಸ್ಸಾದರೂ ನಿಮ್ಮ ಮಾತನ್ನು ಕೇಳದೇ ಇದ್ದೀತು. ನೀವು ಅಂದು ಕೊಂಡ ವಿಚಾರಗಳು ನಿಮ್ಮಿಂದ ಆಗಿಲ್ಲ ಎಂಬ ಬೇಸರವು ಉಂಟಾದೀತು. ‌ಹಣಕಾಸಿನ ವಿಚಾರದಲ್ಲಿ ಸ್ವಲ್ಪಮಟ್ಟಿನ ಸುಧಾರಣೆ ಇದ್ದು ಸಂತಸವಿರಲಿದೆ. ಯಂತ್ರಾಗಾರದಲ್ಲಿ ಕೆಲಸವು ಇಂದು ಅತಿಯಾಗುವುದು. ಸಂಗಾತಿಯ ಜೊತೆ ಹೆಚ್ಚಿನ ಸಮಯವನ್ನು ಕಳೆಯಬಹುದು. ಅನೇಕ ದಿನಗಳ ಅನಂತರ ಸಂತೋಷದಿಂದ ಇರುವ ದಿನವಾಗಿದೆ. ಪ್ರೀತಿಪಾತ್ರರಿಗೆ ಸಮಯ ವ್ಯರ್ಥ ಮಾಡುವಿರಿ. ನಿಮ್ಮ ಪ್ರೇಮವು ಇಂದು ಯಾರಿಂದಲೋ ಬಹಿರಂಗವಾಗುವುದು. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ.

ಲೋಹಿತ ಹೆಬ್ಬಾರ್-8762924271 (what’s app only)

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ