Daily Horoscope 26 September 2024: ಈ ರಾಶಿಯವರು ನಿಮ್ಮ ಆಸ್ತಿಯನ್ನು ಕಳೆದುಕೊಳ್ಳಬಹುದು-ಎಚ್ಚರ

ಸೆಪ್ಟೆಂಬರ್​ 26,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ನಿಮ್ಮ ಇಂದಿನ ಶ್ರಮವು ಎಷ್ಟೇ ಇದ್ದರು ಒಂದು ಮಾತು ಎಲ್ಲದಕ್ಕೂ ತಣ್ಣೀರು ಹಾಕುವುದು. ನೀವು ಸುತ್ತಾಟಕ್ಕೆಂದು ಮಕ್ಕಳ ಜೊತೆ ಹೋಗುವಿರಿ. ಎಷ್ಟೇ ಕಷ್ಟಪಟ್ಟರೂ ಬಯಸಿದ್ದನ್ನು ಪಡೆಯಲು ಕಷ್ಟವಾದೀತು. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 26 September 2024: ಈ ರಾಶಿಯವರು ನಿಮ್ಮ ಆಸ್ತಿಯನ್ನು ಕಳೆದುಕೊಳ್ಳಬಹುದು-ಎಚ್ಚರ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 26, 2024 | 12:00 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 24 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:54 ರಿಂದ ಸಂಜೆ 03:24, ಯಮಘಂಡ ಕಾಲ ಬೆಳಿಗ್ಗೆ 06:23ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 10:54 ರ ವರೆಗೆ.

ಮೇಷ ರಾಶಿ : ನಿಮ್ಮ ನಿಜವಾದ ಪ್ರಯತ್ನಕ್ಕೆ ದೈವವೂ ಸಹಾಯ ಮಾಡುವುದು. ಇಂದು ಕಷ್ಟವಾದರೂ ಸಂತೋಷದಿಂದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ಪ್ರೇಮದ ವಿಚಾರದಲ್ಲಿ ಆಸಕ್ತಿ ಹೆಚ್ಚಾಗಿದ್ದು ಪ್ರೇಮಿಯನ್ನು ನೋಡಲು ಹಂಬಲಿಸುವಿರಿ. ಮಹಿಳಾ ಉದ್ಯೋಗಿಗಳಿಗೆ ಸೂಕ್ತಸ್ಥಾನವು ಸಿಗಲಿದೆ. ಎಲ್ಲಿಯೋ ಹೂಡಿಕೆ‌ ಮಾಡಿ ನಷ್ಟಮಾಡಿಕೊಳ್ಳುವಿರಿ. ಯಾರ ಮೇಲೂ ದೂರನ್ನು ಹಾಕುವುದು ಬೇಡ. ಮನೆಯಿಂದ‌ ದೂರವಿರುವ ಉದ್ಯೋಗವು ನಿಮಗೆ ಸಿಗುವ ಸಾಧ್ಯತೆ ಇದೆ. ನಿಮ್ಮ ಮಾತುಗಳಿಂದ ತಾಯಿಗೆ ಬೇಸರವಾಗಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಲು ಪ್ರಯತ್ನಿಸುವಿರಿ. ಬಂಧುಗಳ ಮನೆಗೆ ಹೋಗಿ ಬರಲಿದ್ದೀರಿ. ಭೂವಿಚಾರದ ಕಾನೂನು ಸಮರದಲ್ಲಿ ನಿಮಗೆ ಆಸಕ್ತಿ ಹೆಚ್ಚಾಗಬಹುದು. ಸಂಗಾತಿಯಿಂದ ಕಿರಿಕಿರಿ ಆಗಬಹುದು. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಹುಡುಕುವಿರಿ. ಬೋಧಕ ವರ್ಗಕ್ಕೆ ಸಂತಸದ ಸುದ್ದಿ ಸಿಗಬಹುದು.

ವೃಷಭ ರಾಶಿ : ಆನಾರೋಗ್ಯಕ್ಕೆ ಉತ್ತಮ‌ ಚಿಕಿತ್ಸೆಗಿಂತ ಮಾನಸಿಕ ನೆಮ್ಮದಿ ಧೈರ್ಯಗಳು ಉಪಯೋಗಕ್ಕೆ ಬರುವುದು. ಬೇರೆಯವರು ಖುಷಿಪಡುವಂತೆ ಮಾತನಾಡುವಿರಿ. ಆರ್ಥಿಕ ಸಹಾಯವು ಸಿಗದೇ ಕಷ್ಟಪಡಬೇಕಾದೀತು. ಮನಸ್ಸು ಚಂಚಲವಾಗಿ ಕೆಲಸವು ಸೂಚಿಸದೇ ಇದ್ದೀತು. ಚರ ಆಸ್ತಿಯನ್ನು ಕಳೆದುಕೊಳ್ಳಬಹುದು. ಯಾರಾದರೂ ನಿಮಗೆ ಸ್ಫೂರ್ತಿಯಾಗಬಹುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಇರದು. ಸ್ಥಾನವನ್ನು ಉಳಿಸಿಕೊಳ್ಳಲು ಜವಾಬ್ದಾರಿಯ ಕೆಲಸವನ್ನು ನಿರ್ವಹಿಸಬೇಕಾಗುವುದು. ಭೀತಿಯಿಂದ ಮನೆಯನ್ನು ಬಿಟ್ಟು ಹೋಗಲಾರಿರಿ. ಶುಭಾವಾರ್ತೆಯು ನಿಮಗೆ ನೆಮ್ಮದಿಯನ್ನು ತಂದೀತು. ಪ್ರಯಾಣದ ವಿಚಾರದಲ್ಲಿ ನಿಮಗೆ ನಿರಾಸಕ್ತಿ ಇರಲಿದೆ. ಬಂಧುಗಳ ಭೇಟಿಯು ಸುಖವನ್ನು ಕೊಡುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ನಿಮಗಾದ ನೋವಿನಿಂದ ಇತರರಿಗೂ ನೋವಾಗುವುದು.

ಮಿಥುನ ರಾಶಿ : ಉದ್ಯಮದಿಂದ ಆದ ಲಾಭಕ್ಕೆ ನಿಮಗೆ ಆದಾಯ ಸಿಗುವುದು. ಇಂದು ಆಪ್ತರು ನಿಮಗೆ ಬರುವ ಸಂಕಟದಲ್ಲಿ ಜೊತೆಯಾಗುವರು. ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸಾಗುವುದು. ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಯಾರದೋ ತಪ್ಪಿಗೆ ನೀವು ಬಲಿಯಾಗಬೇಕಾಗುವುದು. ಭೋಗವಸ್ತುಗಳನ್ನು ಖರೀದಿಸಿದರೂ ನಿಮಗೆ ಸಂತೃಪ್ತಿ ಸಿಗದು. ಜೀವನಕ್ಕೆ ಬೇಕಾದುದನ್ನು ಸ್ನೇಹಿರಿಂದ ಪಡೆಯುವಿರಿ. ನೀವು ಇಂದು ವಿಶೇಷ ಲಕ್ಷ್ಯವನ್ನು ಇಟ್ಟುಕೊಂಡು ಕೆಲಸ ಮಾಡುವಿರಿ. ವಿದ್ಯಾರ್ಥಿಗಳಿಗೆ ಉತ್ತಮ‌ ಅವಕಾಶಗಳು ಲಭ್ಯ ಆಗುವುದು. ಮನೋರಂಜನೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಯಂತ್ರದ ಮಾರಾಟದಿಂದ ಲಾಭವಿರಲಿದೆ. ಸಣ್ಣ ವ್ಯಾಪಾರದಲ್ಲಿ ಅಲ್ಪ ಲಾಭವಾಗಲಿದೆ. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಇನ್ನೊಬ್ಬರನ್ನು ಗೌರವಿಸಿದರೆ ನೀವೂ ದೊಡ್ಡವರಾಗುವಿರಿ.

ಕರ್ಕಾಟಕ ರಾಶಿ : ನಿಮಗೆ ಗೊತ್ತಿರುವುದನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ವೀಕ್ಷಿಸಬಹುದು. ಇಂದು ನಿಮಗೆ ಬರಬೇಕಾದ ಹಣವು ಅನಿರೀಕ್ಷಿತ ರೀತಿಯಲ್ಲಿ ಬಂದರೂ ಅದು ಇನ್ನೊಂದು ಮಾರ್ಗದಲ್ಲಿ ಖಾಲಿಯಾಗುವುದು. ನಿಮಗೆ ಇಷ್ಟವಿಲ್ಲದವರನ್ನು ಮನಸ್ಸಿನಿಂದ ಹೊರಹಾಕಿ. ಆತುರದಲ್ಲಿ ಗೃಹನಿರ್ಮಾಣವನ್ನು ಮಾಡಬೇಕಾಗುವುದು. ವಾಹನವನ್ನು ಚಾಲಾಯಿಸುವಾಗ ಅನೇಕ ನಕಾರಾತ್ಮಕ ಯೋಚನೆಗಳು ಬರಲಿದೆ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ರೀತಿಯ ಪರೀಕ್ಷೆಗಳು ಬರಬಹುದು. ಸ್ವತಂತ್ರವಾದ ಆಲೋಚನೆಯನ್ನು ಬೆಳೆಸಿಕೊಳ್ಳಿ. ಸದುದ್ದೇಶದ ಸಂಬಂಧಗಳು ನಿಮಗೆ ಯಶಸ್ಸು ಕೊಡುವುದು. ಇಂದು ಹೆಚ್ಚು ಶ್ರಮವಹಿಸಿ ಕೆಲಸವನ್ನು ಮಾಡಬೇಕಾದೀತು. ನಿಮ್ಮ ಮನವನ್ನು ಸಂಗಾತಿಯು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವರು. ಹಿರಿಯರ ಹಿತವಚನವನ್ನು ಕೇಳುವ ವ್ಯವಧಾನ ಇರದು.

ಸಿಂಹ ರಾಶಿ : ನಿಮಗೆ ಇಂದು ಏನಾದರೂ ಹೊಸತನ್ನು ಮಾಡುವ ಉದ್ದೇಶವಿರುವುದು. ಇಂದು ನಿಮ್ಮ ಕರ್ತವ್ಯಗಳನ್ನು ಮರೆಯು ಸಾಧ್ಯತೆ ಇದ್ದು, ಯಾರೋ ಅದನ್ನು ನೆನಪಿಸಬೇಕಾದೀತು. ಹೂಡಿಕೆಯನ್ನು ಮಾಡಿ ಹೊಸ ಚಿಂತೆಯನ್ನು ತಂದುಕೊಳ್ಳುವಿರಿ. ಇಷ್ಟ ಮಿತ್ರರ ಜೊತೆ ಸಮಯವನ್ನು ಕಳೆಯುವಿರಿ. ಅಸೂಯೆಯ ಕಾರಣ ಯಾವ ಸಂತೋಷವ‌ನ್ನೂ ನೀವು ಪೂರ್ಣವಾಗಿ ಅನುಭವಿಸಲಾರಿರಿ. ಬಂಧುಗಳ ಮಾತು ನಿಮ್ಮ ಸಿಟ್ಟಿಗೆ ಕಾರಣವಾಗಬಹುದು. ನಿರಂತರ ಒಂದಲ್ಲ ಒಂದು ಕೆಲಸದಲ್ಲಿ ನೀವು ಮಗ್ನರಾಗಿರುವಿರಿ. ಕೃಷಿ ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗಬಹಿಸುವಿರಿ. ನಿಮಗೆ ಬರಬೇಕಾದ ಹಣವನ್ನು ಕೇಳಿ ಪಡೆಯುವಿರಿ. ನಿಮ್ಮ ಸ್ಥಾನವನ್ನು ನೀವು ಬಿಟ್ಟಕೊಡುವಿರಿ. ಮತ್ತೆ ಆರೋಗ್ಯವು ಕಡೆವುದು ನಿಮಗೆ ಕಷ್ಟವಾಗುವುದು. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ಮಿತ್ರರ ಜೊತೆ ಮನೋರಂಜನೆಗೆ ತೆರಳುವಿರಿ.

ಕನ್ಯಾ ರಾಶಿ : ಇಂದು ನೀವು ನಿಮ್ಮ ಪ್ರತಿಬಂಧವನ್ನು ಮೀರಿ ತೊಂದರೆ ಪಡುವಿರಿ. ನಿಮಗೆ ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಪಾಲುದಾರಿಕೆ ಸಿಗಬಹುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮರೆಯಬಹುದು. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಹೊಸ ವಸ್ತುಗಳು ನಿಮಗೆ ಖುಷಿಯನ್ನು ಕೊಟ್ಟೀತು. ಆರ್ಥಿಕ ವ್ಯವಹಾರವು ನಿಮ್ಮ ಪರವಾಗಿ ಇರುವುದು. ದಾಂಪತ್ಯದಲ್ಲಿ ಅಸಹಜ‌ ಮಾತುಕತೆಗಳು ಕಿರಿಕಿರಿಯನ್ನು ತಂದೀತು. ಶುಭ ಸಮಾಚಾರದ ನಿರೀಕ್ಷೆಯಲ್ಲಿ ನೀವು ಇರುವಿರಿ. ಕರ್ತವ್ಯದಲ್ಲಿ ನೀವು ಇಂದು ನಿರತರಾಗಿರುವಿರಿ. ಪ್ರೇಮ ಸಂಬಂಧವು ದಾರಿತಪ್ಪಬಹುದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ಸಾತ್ತ್ವಿಕ ವಿಚಾರದ ಕಡೆ ನಿಮ್ಮ ಗಮನವು ಹೋಗುವುದು.

ತುಲಾ ರಾಶಿ : ಇಂದು ನಿಮ್ಮಲ್ಲಿ ಉತ್ಸಾಹವಿದ್ದು ನೀವೇ ಸ್ವತಃ ಜವಾಬ್ದಾರಿಯನ್ನು ಪಡೆಯುವಿರಿ. ನಿಮ್ಮದಾದ ಸಂಪತ್ತನ್ನು ಇನ್ನೊಬ್ಬರಿಗೆ ಕೊಡಬೇಕಾಗುವುದು. ನಿಮ್ಮ ವ್ಯಕ್ತತ್ವಕ್ಕೆ ಕಳಂಕವನ್ನು ಶತ್ರುಗಳು ಮಸಿ ಬಳಿಯಬಹುದು. ಬೆನ್ನು ನೋವು ನಿಮ್ಮ ಯಾವ ಕೆಲಸವನ್ನೂ ಮಾಡಲು ಕೊಡದು. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡಲಿದ್ದೀರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಅತಿಯಾದ ಆಸೆ ಬೇಡ. ಕೂಡಿಟ್ಟ ಹಣವನ್ನು ನೀವು ಇಂದು ಬಿಡಿಸಿಕೊಳ್ಳುವಿರಿ. ನಿಮ್ಮ ನೋವಿಗೆ ಅಪರಿಚಿತರು ಸ್ಪಂದಿಸಬಹುದು.‌ ಸಂಗಾತಿಯ ಜೊತೆ ಹಳೆ ವಿಚಾರಗಳನ್ನು ಮಾತನಾಡುವಿರಿ. ಅಪರೂಪಕ್ಕೆ ಸಿಕ್ಕ ಆಹಾರವನ್ನು ಮಿತವಾಗಿ ಸೇವಿಸಿ, ಆರೋಗ್ಯವನ್ನು ಕಾಅಡಿಕೊಳ್ಳಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸಬಹುದು. ಹವ್ಯಾಸಗಳು ನಿಮಗೆ ಪ್ರಯೋಜನವನ್ನು ಕೊಡುತ್ತದೆ. ಇಂದು ಖರೀದಿಸಿದ ಹೊಸ ವಸ್ತುವಿನಿಂದ ನಿಮಗೆ ಖುಷಿಯಾಗುವುದು.

ವೃಶ್ಚಿಕ ರಾಶಿ : ವ್ಯಾವಹಾರಿಕ ಸಂಬಂಧವನ್ನು ಹಾಗೆಯೇ ಇಟ್ಟುಕೊಂಡರೆ ಒಳ್ಳೆಯದು. ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ. ವ್ಯಾಪರವು ನಷ್ಟವಾದರೂ ತಾಳ್ಮೆಯಿಂದ ಇದ್ದು ಇದನ್ನು ಮುಂದುವರಿಸಿ. ಮೂರನೇ ವ್ಯಕ್ತಿಗಳ ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬಯಸುವಿರಿ. ವಿದೇಶವನ್ನು ಸುತ್ತುವ ಮನಸ್ಸಾಗುವುದು. ಆರ್ಥಿಕತೆಯನ್ನು ಸುಸ್ಥಿರ ಮಾಡಿಕೊಳ್ಳಲು ದೇಹವನ್ನು ದಂಡಿಸಬೇಕಾಗುವುದು. ಆಯಾಸದಂತೆ ನಿಮಗೆ ಅನ್ನಿಸೀತು. ನೆಮ್ಮದಿಗಾಗಿ ದೇವಾಲಯಕ್ಕೆ ಹೋಗಬಹುದು. ನಿಮ್ಮ ನಿರೀಕ್ಷೆಯಲ್ಲಿ ಕೆಲವು ಫಲಿಸಬಹುದು. ಅನಾಯಾಸವಾಗಿ ಫಲವನ್ನು ಪಡೆಯಲು ಬಯಸುವುದು ಸರಿಯಲ್ಲ. ಆದಾಯಕ್ಕೆ ಯಾರಿಂದಲಾದರೂ ಅಡ್ಡಿಯಾಗಿ, ಸಿಟ್ಟುಗೊಳ್ಳುವಿರಿ. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಸ್ವಾಲಂಬಿಯಾಗುವುದು ಕೂಡಲೇ ಕಷ್ಟ. ಅಮಂಗಲವಾದ ಕಾರ್ಯಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ರಾಜಕೀಯ ಏರಿಳಿತದಿಂದ ನಿಮ್ಮ ನಿರ್ಧಾರವು ಸರಿಯಾಗದು.

ಧನು ರಾಶಿ : ನಿಮ್ಮ ನಿಯೋಜಿತ ಕಾರ್ಯಗಳನ್ನು ಮಾಡಲು ಜನರು ಸಿಗದೇಹೋಗಬಹುದು. ಧಾರ್ಮಿಕ ಕಾರ್ಯಗಳಿಗೆ ಮುಂದಾಳುತ್ವವವನ್ನು ವಹಿಸುವಿರಿ. ನಿಮ್ಮ ಬಳಿ ಸಾಲವನ್ನು ಕೇಳಬಹುದು. ವೈದ್ಯರಿಗೆ ಪ್ರಶಂಸೆ ಸಿಗಬಹುದು.‌ ಸರ್ಕಾರಿ ಉದ್ಯೋಗಿಗಳ ಸ್ಥಾನವು ಬದಲಾಗುವುದು. ಎಲ್ಲವನ್ನೂ ತಿಳಿದಿದ್ದೇ‌ನೆ ಎಂಬ ಅಹಂಕಾರ ಬೇಡ. ಭವಿಷ್ಯದ ಬಗ್ಗೆ ದೊಡ್ಡ ಕನಸನ್ನು ಇಟ್ಟುಕೊಳ್ಳುವಿರಿ. ಮಕ್ಕಳು ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು. ಬೇರೆ ಕಡೆಗೆ ಕಳುಹಿಸುವ ವಸ್ತುಗಳು ನಿಮಗೆ ಕೊರತೆಯಾಗಬಹುದು. ಮನೆಯ ವಾತಾರಣದಲ್ಲಿ ಇರಲು ಖುಷಿಪಡುವಿರಿ. ನಿಮ್ಮ ವಸ್ತುಗಳನ್ನು ಸ್ನೇಹಿತನಿಗೆ ದಾನವಾಗಿ ಕೊಡುವಿರಿ. ಮಕ್ಕಳ‌ ಜೊತೆ ಸಮಯವನ್ನು ಕಳೆಯುವುದು ಇಷ್ಟವಾದೀತು. ರಹಸ್ಯ ವಿಚಾರಗಳನ್ನು ಗೊತ್ತಿಲ್ಲದೇ ಹಂಚಿಕೊಳ್ಳುವಿರಿ. ಕೆಲವು ಸಮಯ ಚೆನ್ನಾಗಿದೆ ಎಂದಿದ್ದು ಅನಂತರ ಚೆನ್ನಾಗಿರದೇಹೋಗಬಹುದು. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು. ಸ್ವತಂತ್ರವಾದ ಆಲೋಚನೆಯು ಇಲ್ಲದೇ ನಿಮಗೆ ಕಷ್ಟವಾದೀತು‌‌.

ಮಕರ ರಾಶಿ : ನಿಮ್ಮ ಮಕ್ಕಳನ್ನು ಸರಿಯಾದ ಮಾರ್ಗಕ್ಕೆ ತರಲು ಸಮಯವು ಬೇಕಾಗುವುದು. ಕುಟುಂಬದವರ ಮಾತಿನ ಅಲಕ್ಷ್ಯದಿಂದ ನಿಮಗೆ ಸಮಸ್ಯೆಯಾದೀತು. ಸಂಗಾತಿಯ ನೋವನ್ನು ಕೇಳುವಷ್ಟು ತಾಳ್ಮೆ ಇಲ್ಲವಾದೀತು. ಸರಿಯಾದ ಸಮಯಕ್ಕೆ ವೈದ್ಯರ ಬಳಿ ಹೋಗಿ ಆರೋಗ್ಯವನ್ನು ಸರಿ ಮಾಡಿಕೊಳ್ಳುವಿರಿ. ನಿಮ್ಮ ನಿರ್ಬಂಧಗಳು ಕುಟುಂಬದವರಿಗೆ ಇಷ್ಟವಾಗದು. ಕಛೇರಿಯ ಒತ್ತಡದ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಮಾನಸಿಕವಾಗಿ ನೀವು ಕುಗ್ಗುವಿರಿ. ವೇತನವನ್ನು ಹೆಚ್ಚಿಸಿಕೊಳ್ಳಲು ಮಾರ್ಗವನ್ನು ಹುಡುಕುವ ಸಂಭವ ಇದೆ. ಹೊಸ ಉದ್ಯೋಗಕ್ಕೆ ಬೇಕಾದ ಸಿದ್ಧತೆಯನ್ನೂ ಮಾಡಿಕೊಳ್ಳುವಿರಿ. ಆರಂಭದಲ್ಲಿಯೇ ಅಪನಂಬಿಕೆಯನ್ನು ದೂರಮಾಡಿಕೊಳ್ಳುವುದು ಉತ್ತಮ. ಸಂಗಾತಿಯನ್ನು ಹೊರಗೆ ಸುತ್ತಾಡಲು ಕರೆಯುವಿರಿ. ಯಾರೋ ಕೊಟ್ಟದ್ದನ್ನು ಸ್ವೀಕರಿಸುವುದಿಲ್ಲ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು. ಆಹಾರದ ವಿಚಾರದಲ್ಲಿ ಸಿಟ್ಟಾಗುವಿರಿ. ಇದನ್ನು ಕಡಿಮೆ ಮಾಡಿಕೊಳ್ಳಬೇಕು.

ಕುಂಭ ರಾಶಿ : ಸಾಮಾಜಿಕ ಕಾರ್ಯಗಳ ಬಗ್ಗೆ ಕಿವಿಮಾತನ್ನು ಆಪ್ತರು ಹೇಳುವರು. ಅದನ್ನು ಕೇಳಿಸಿಕೊಳ್ಳುವ ವ್ಯವಧಾನವೂ ಬೇಕು. ನಿಮ್ಮ ಮಾತು ಇಂದು ಕೇಳುಗರಿಗೆ ಹಿಂಸೆ ಕೊಡಬಹುದು. ಸಂಗಾತಿಯ ನಡುವೆ ಭಿನ್ನಾಭಿಪ್ರಾಯವು ಬರಬಹುದು. ಸತತ ಸುತ್ತಾಟದಿಂದ ಆಯಾಸವಾಗಲಿದೆ. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನಿಮಗೆ ಚಿಂತೆಯು ಕಾಡಬಹುದು. ಹೊಸ ಕೆಲಸಕ್ಕೆ‌ ನಿಮಗೆ ಧೈರ್ಯವು ಸಾಕಾಗದು. ಇರುವುದರಲ್ಲಿ ನೆಮ್ಮದಿಯನ್ನು ಕಾಣಲು ಹೆಚ್ಚು ಇಷ್ಟಪಡುವಿರಿ. ನೀವು ಇಂದು ಸುಮ್ಮನೇ ಕುಳಿತಾಗ ಕೇವಲ ಸೋಲುಗಳೇ ನಿಮ್ಮ ಕಣ್ಣೆದುರು ಕಾಣಿಸುವುದು. ಕೆಲವು ವಿಚಾರದಲ್ಲಿ ನಿಮ್ಮ‌ ಮಾನಸಿಕ ಸ್ಥಿತಿಯು ಬದಲಾಗಬಹುದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ನಿಶ್ಚಿತ ಲಾಭವು ಪ್ರಾಪ್ತವಾಗಲಿದೆ. ಚರ ಆಸ್ತಿಯನ್ನು ಮಾರಾಟ ಮಾಡಿ ಹಣದ ಗಳಿಸುವಿರಿ. ಕೂಗಾಡಿ ಯಾವುದನ್ನೂ ಮಾಡಿಸಿಕೊಳ್ಳಲಾಗದು.

ಮೀನ ರಾಶಿ : ನಿಮ್ಮ ಇಂದಿನ ಶ್ರಮವು ಎಷ್ಟೇ ಇದ್ದರು ಒಂದು ಮಾತು ಎಲ್ಲದಕ್ಕೂ ತಣ್ಣೀರು ಹಾಕುವುದು. ನೀವು ಸುತ್ತಾಟಕ್ಕೆಂದು ಮಕ್ಕಳ ಜೊತೆ ಹೋಗುವಿರಿ. ಎಷ್ಟೇ ಕಷ್ಟಪಟ್ಟರೂ ಬಯಸಿದ್ದನ್ನು ಪಡೆಯಲು ಕಷ್ಟವಾದೀತು. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನೀವು ವ್ಯಾಪಾರದಲ್ಲಿ ಆರ್ಥಿಕ ಲಾಭಕ್ಕಿಂತ ಗ್ರಾಹಕರ ವಿಶ್ವಾಸ ಗಳಿಸುವುದು ಇಂದು ನಿಮಗೆ ಮುಖ್ಯವೆನಿಸುವುದು. ಆರ್ಥಿಕವಾಗಿ ಸಬಲರಾಗಲು ಅನೇಕ ಆರ್ಥಿಕ ಮೂಲವನ್ನು ಹುಡುಕುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವನ್ನು ಮಾಡುವರು. ಮಕ್ಕಳ‌ ವಿವಾಹ ಕೆಲಸದಲ್ಲಿ ನೀವು ಮಗ್ನರಾಗುವಿರಿ. ಶತ್ರುಗಳ ಉಪಟಳ ಕಡಿಮೆ ಆಗಿದ್ದು ನೀವು ನಿಶ್ಚಿಂತೆಯಿಂದ ಇರುವಿರಿ. ಶುಭ ಕಾರ್ಯದಲ್ಲಿ ನೀವು ತೊಡಗುವಿರಿ. ಮಾತನ್ನು ಕಡಿಮೆ ಮಾಡುವಿರಿ. ಮಹಿಳಾ ಉದ್ಯೋಗಿಗಳು ಹೆಚ್ಚಿನ ಸ್ಥಾನವನ್ನು ಪಡೆಯುವಿರಿ. ಯಾರನ್ನೂ ದೂರುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸರಿ ಮಾಡಿಕೊಂಡು ಹೋಗುವಿರಿ. ನೀವು ಪ್ರೀತಿಪಾತ್ರರ ಜೊತೆ ಹೆಚ್ಚು ಒಡನಾಡುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!