Daily Horoscope 27 September 2024: ಇಂದು ಈ ರಾಶಿಯವರು ಹಣಕಾಸಿನ‌ ವಿಚಾರದಲ್ಲಿ ಜಾಗರೂಕರಾಗಿರಿ

ಸೆಪ್ಟೆಂಬರ್​ 27,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ನಿಯಾರನ್ನಾದರೂ ಹಿಡಿದುಕೊಂಡು ನಿಮಗೆ ಆಗಬೇಕಾದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ನಿಮಗೆ ನಿಮ್ಮವರ ಮಾತಿನಿಂದ ಇರುಸು ಮುರುಸಾದೀತು. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 27 September 2024: ಇಂದು ಈ ರಾಶಿಯವರು ಹಣಕಾಸಿನ‌ ವಿಚಾರದಲ್ಲಿ ಜಾಗರೂಕರಾಗಿರಿ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2024 | 12:00 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಶಿವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:53 ರಿಂದ ಮಧ್ಯಾಹ್ನ 12:23, ಯಮಘಂಡ ಕಾಲ ಮಧ್ಯಾಹ್ನ 03:24ರಿಂದ ಸಂಜೆ 04:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:53 ರಿಂದ 09:23 ರ ವರೆಗೆ.

ಮೇಷ ರಾಶಿ : ಇಂದು ನಿಮಗೆ ಶುಭಾಶುಭ ಸೂಚನೆಯು ಸಿಗಲಿದ್ದು ಅದೇ ಪ್ರಕಾರವಾಗಿ ನೀವು ಮುನ್ನಡೆಯುವಿರಿ. ನಿಮಗೆ ಸಾಧ್ಯವಿರುವ ಕಾರ್ಯಗಳನ್ನು ಮಾತ್ರ ಮಾಡಿ. ಪಾಲುದಾರಿಕೆಯಲ್ಲಿ ಉಂಟಾದ ಗೊದಲ್ಲವನ್ನು ಬಗೆಹರಿಸಿಕೊಂಡು ಮೈತ್ರಿ ಮಾಡಿಕೊಂಡರೆ ಇಬ್ಬರಿಗೂ ಅನುಕೂಲವಾಗುವುದು. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ರಕ್ತಸಂಬಂಧಗಳು ನಿಮ್ಮ‌ಮನಸ್ಸನ್ನು ಕಡಿಸುವುವು. ನಿಮ್ಮ‌ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ಮಾಡುವಿರಿ. ನಿಮ್ಮ ಯಶಸ್ಸು ನಿಮಗೆ ಮುಳುವಾಗಬಹುದು. ಹಿರಿಯರ ಮಾರ್ಗದರ್ಶನವನ್ನು ಪಡೆಯುವ ಅವಶ್ಯಕತೆ ಇರಲಿದೆ. ಸೌಲಭ್ಯಗಳ ದುರ್ಬಳಕೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ನಿಮ್ಮ ಮಾತೇ ನಿಮಗೆ ಹಿಂದಿರುಗಿ ಬರಬಹುದು.

ವೃಷಭ ರಾಶಿ : ನ್ಯಾಯಸಮ್ಮತವಾದ ದಾರಿಯಲ್ಲಿ ಇದ್ದರೂ ನಿಮಗೆ ನೋವು ತಪ್ಪದು. ಇಂದು ನಿಮ್ಮ ಬಗ್ಗೆ ತಿಳಿಯದೇ ಸುಮ್ಮನೇ ಕುಖ್ಯಾತಿ ಬರುವುದು. ಆಸ್ತಿಯ ವಿಚಾರಕ್ಕೆ ಕುಟುಂಬದಲ್ಲಿ ಪರಸ್ಪರ ಜಗಳವಾಗುವ ಸಾಧ್ಯತೆ ಇದೆ. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಮಾಡುವುದು ಉತ್ತಮ. ಕಡಿಮೆ ಖರ್ಚಿನಲ್ಲಿ ನಿಮ್ಮ ಕೆಲಸವು ಮುಗಿಯುವಂತೆ ನೋಡಿಕೊಳ್ಳುವಿರಿ. ಏನಾದರೂ ಹೊಸತನ್ನು ಮಾಡುವ ಹಂಬಲವಿರುವುದು. ಉತ್ಸಾಹ ಹಾಗೂ ಸಿದ್ಧತೆಯಲ್ಲಿರುವ ನಿಮಗೆ ಮನೆಯವರ ಮಾತು ಉತ್ಸಾಹಕ್ಕೆ ಭಂಗವನ್ನು ಮಾಡಿಸಬಹುದು. ಮಾತನಾಡಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಪ್ರಶಂಸೆಯಿಂದ ನೀವು ದೂರವಿರುವಿರಿ. ಅಪರಿಚಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ಪಡೆದು ಮುನ್ನಡೆಯುವುದು ಶ್ರೇಯಸ್ಕರ. ಹಣವಿದ್ದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗದು ಎಂಬ ಸತ್ಯವು ಗೊತ್ತಾಗುವುದು. ಯಾರ ಮಾತನ್ನೂ ನಿರ್ಲಕ್ಷ್ಯ ಮಾಡಬೇಡಿ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಂಡು ವ್ಯವಹರಿಸಿ.

ಮಿಥುನ ರಾಶಿ : ಯಾರನ್ನಾದರೂ ಹಿಡಿದುಕೊಂಡು ನಿಮಗೆ ಆಗಬೇಕಾದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ನಿಮಗೆ ನಿಮ್ಮವರ ಮಾತಿನಿಂದ ಇರುಸು ಮುರುಸಾದೀತು. ರಾಜಕೀಯ ವ್ಯಕ್ತಿಗಳಿಂದ ಕೆಲಸವಾಗಲು ಅವರಿಗೆ ಹಣವನ್ನು ಕೊಡುವಿರಿ. ಸ್ನೇಹಿತ ಸಹವಾಸದಿಂದ ದುರಭ್ಯಾಸವನ್ನು ಕಲಿಯುವ ಸಾಧ್ಯತೆ ಇದೆ. ಎಲ್ಲರ ಎದುರೂ ನಿಮ್ಮ ಆತುರವನ್ನು ತೋರಿಸುವುದು ಬೇಡ. ನಿಮ್ಮ ಯೋಜನೆಗಳು ಹೆಚ್ಚು ಇಷ್ಟವಾಗಲಿದೆ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ನೀವು ಅಲ್ಲಗಳೆಯುವಿರಿ. ನಿಮ್ಮನ್ನು ಅಳೆಯಬಹುದು. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ಆಪ್ತರ ಅಗಲಿಕೆಯಿಂದ ನೋವಾಗುವುದು. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಏಕಾಂತದಲ್ಲಿ ನಿಮಗೆ ಹಿತವೆನಿಸುವುದು.

ಕರ್ಕಾಟಕ ರಾಶಿ : ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು. ಇಂದು ಸಾಲಬಾಧೆಯು ನಿಮಗೆ ಅತಿಯಾದಂತೆ ಭಾಸವಾಗುವುದು. ದೂರದ ಬಂಧುಗಳ ಭೇಟಿಯಾಗಲಿದೆ. ಅವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ನಡವಳಿಕೆಯು ಅಹಂಕಾರದಂತೆ ತೋರೀತು. ವರ್ತನೆಯನ್ನು ಆದಷ್ಟು ಸಂದರ್ಭಕ್ಕೆ ತಕ್ಕಂತೆ ಇಟ್ಟುಕೊಳ್ಳುವುದು ಉತ್ತಮ. ಉದ್ಯೋಗದಲ್ಲಿ ಭಡ್ತಿಯನ್ನು ಕೇಳುವಿರಿ. ಕೆಲವರ ಮಾತುಗಳು ನಿಮಗೆ ನೋವನ್ನು ತಂದೀತು. ಹೇಳಿಕೊಳ್ಳದೇ ಒಳಗೇ ಇಟ್ಟುಕೊಳ್ಳುವಿರಿ. ಉದ್ಯೋಗದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿಯವರಿಗೆ ಕಷ್ಟವು ಬರುವುದು. ಹಣಕಾಸಿನ‌ ವಿಚಾರದಲ್ಲಿ ಜಾಗರೂಕತೆ ಮುಖ್ಯವಾದೀತು. ಮಾಡುತ್ತಿರುವ ಉದ್ಯೋಗವು ನಿಮಗೆ ಸರಿಯೆನಿಸದು. ನಿಮ್ಮ‌ ಭವಿಷ್ಯದ ಕನಸನ್ನು ಮಿತ್ರರ ಜೊತೆ ಹಂಚಿಕೊಳ್ಳುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ.

ಸಿಂಹ ರಾಶಿ : ಸಾಲವನ್ನು ತೀರಿಸಲು ನಿಮ್ಮ ಯೋಜನೆ ಕಾರ್ಯರೂಪಕ್ಕೆ ಬರುವುದು. ಇಂದು ಉದ್ಯೋಗವನ್ನು ಅರಸುತ್ತ ಇದ್ದರೆ ಇಂದು ಉತ್ತಮ ಉದ್ಯೋಗವು ಸುಳಿವು ಸಿಗಲಿದೆ. ಸ್ವಂತ ಆರೋಗ್ಯದ ಸುಧಾರಣೆಗೆ ಖರ್ಚು ಮಾಡುವಿರಿ. ಅಸಭ್ಯ ಮಾತುಗಳು ನಿಮಗೆ ಶೋಭೆಯನ್ನು ತರದು. ಎಲ್ಲರ ಜೊತೆ ಬೆರೆತು ಮಾತನಾಡುವುದನ್ನು ಇಷ್ಟಪಡುವಿರಿ. ಯಾರ ಹೊಣೆಕಾರಿಕೆಯಲ್ಲಿಯೂ ನಿಮ್ಮ ಕಾರ್ಯವನ್ನು ಬಿಡುವುದು ಬೇಡ. ವಾಸಕ್ಕಾಗಿ ನೀವು ನೂತನ ಗೃಹವನ್ನು ಖರೀದಿಸಲಿದ್ದೀರಿ. ನಿಮಗೆ ಸಿಕ್ಕ ಅವಕಾಶಗಳನ್ನು ದುರುಪಯೋಗ ಮಾಡಿಕೊಳ್ಳುವ ಆಲೋಚನೆ ಒಳ್ಳೆಯದಲ್ಲ. ಮಾನಸಿಕ ಒತ್ತಡದಿಂದ ಇಂದಿನ ಕೆಲಸವು ಬೇಗನೆ ಸಾಕೆನಿಸಬಹುದು. ಎಲ್ಲದರಲ್ಲಿಯೂ ಪ್ರತ್ಯೇಕತೆಯನ್ನು ಬಯಸುವಿರಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ನಿಮಗೆ ಯಾರಮೇಲಾದರೂ ಇರುವ ನಂಬಿಕೆ ಮಿತಿಯಲ್ಲಿ ಇರಲಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ.

ಕನ್ಯಾ ರಾಶಿ : ಸಂಘರ್ಷಗಳಿಗೆ ಸುಖಾಂತ್ಯವನ್ನು ಮಾಡಿದ್ದರೆ ಮತ್ತೇನಾದರೂ ಆದೀತು. ಇಂದು ಹಲವಾರು ದಿನಗಳ ವಾಹನ ಖರೀದಿಯ ಆಸೆಯು ಪೂರ್ಣಗೊಳ್ಳುವುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದವರಿಗೆ ಸಂಕಷ್ಟ ಬರಬಹುದು. ಭೂಮಿಯನ್ನು ವಿಸ್ತರಿಸುವ ಯೋಜನೆ ಮಾಡುವಿರಿ. ಉದ್ಯೋಗದಲ್ಲಿ ಇರಬೇಕಾದ ಚಾಣಾಕ್ಷತನ ಹಾಗೂ ಮೂಲಭೂತವಾದ ದಾಖಲೆಗಳನ್ನು ಸರಿಯಾಗಿ ಇರಿಕೊಳ್ಳುವುದು ಒಳ್ಳೆಯದು. ಅದೃಷ್ಟದಿಂದ ಬಂದಿದ್ದು ಅದು ಹೋದಮೇಲೆ ಹೋಗುವುದು. ಸಮಯವನ್ನು ಹಾಳುಮಾಡದೇ ಕೆಲಸದ ಕಡೆ ಗಮನ ಹೆಚ್ಚಿರಲಿದೆ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಇಂದು ನೀವು ಮಾಡುವಿರಿ. ಹಿರಿಯರಿಂದ ಬೈಗುಳವು ಸಿಗುವುದು.‌ ತಪ್ಪನ್ನು ತಿದ್ದಿಕೊಂಡು ಮುಂದೆ ಸರಿಯಾಗಲು ಬಯಸುವಿರಿ. ನೆಮ್ಮದಿಯನ್ನು ಬಹಳ ಶ್ರಮದಿಂದ‌ ಪಡೆಯಬೇಕಾಗುವುದು. ವಾಹನದಲ್ಲಿ ಓಡಾಟವನ್ನು ಕಡಿಮೆಗೊಳಿಸಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು.

ತುಲಾ ರಾಶಿ : ಇಂದಿನ ಕೆಲವು ಘಟನೆಗಳನ್ನು ಪ್ರತಿಕೂಲವಾಗಿ ತೆಗೆದುಕೊಂಡರೆ ಕಷ್ಟ. ಇಂದು ನಿಮಗೆ ಕಾರ್ಯದಿಂದ ತೃಪ್ತಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದ ಬಗ್ಗೆ ಆತಂಕ ಇರಲಿದೆ. ಪರೀಕ್ಷೆಯ ಭಯವು ನಿಮ್ಮ ಅಧ್ಯಯನ ದಿಕ್ಕನ್ನೇ ತಪ್ಪಿಸಬಹುದು. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇಲವ ಓಡಾಟ, ಮಾತು ಕತೆಗಳಲ್ಲಿಯೇ ಮುಕ್ತಾಯವಾಗಲಿದೆ. ಜವಾಬ್ದಾರಿ ಇಲ್ಲದ ಕಡೆ ನೀವು ಹೋಗುವುದು ಬೇಡ. ಮಾತನಾಡವೇಕಾದ ಸಂಧರ್ಭದಲ್ಲಿ ಮೌನ ವಹಿಸುವಿರಿ. ಕಾಲ್ಪನಿಕ ಜಗತ್ತಿನಿಂದ ಹೊರಬರುವ ದಾರಿಯನ್ನು ಕಂಡುಕೊಳ್ಳಿ. ಹಣದ ಹಿಂದೆ ಎಷ್ಟೇ ಬಿದ್ದರೂ ಸಿಕ್ಕಬೇಕಾದುದು ಮಾತ್ರ ಸಿಗಲಿದೆ. ದಕ್ಕುವುದು ಮಾತ್ರ ಸಿಕ್ಕುತ್ತದೆ. ನಿರುಪಯುಕ್ತ ವಸ್ತುಗಳನ್ನು ಮಾತ್ರ ನೀವು ದಾನ ಮಾಡುವಿರಿ. ನಿಮಗೆ ಬೇಕಾದುದು ಇದ್ದಲ್ಲಿಗೆ ಬರುವುದು. ನಿಮ್ಮಿಂದ ಪಾಲಕರಿಗೆ ತೊಂದರೆಯಾಗುವುದು. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ : ಸಮಯಕ್ಕೆ ಸರಿಯಾಗಿ ನಿಮ್ಮ ಬುದ್ಧಿಯು ಸ್ಫುರಿಸುವುದು. ಇಂದು ನಿಮ್ಮ ಬಲವಂತದ ಪ್ರೇಮ ತಪ್ಪಿಹೋಗುವುದು. ಉದ್ಯೋಗದ ಸ್ಥಳವು ನಿಮಗೆ ಖುಷಿಯ ಸ್ಥಾನವಾಗಲಿದೆ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡಲಿದ್ದೀರಿ. ಆರ್ಥಿಕತೆಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯನ್ನು ನೀವು ಇಷ್ಟಪಡಲಾರಿರಿ. ಸಂಗಾತಿಯಿಂದ ಹೊಗಳಿಕೆಯನ್ನು ಪಡೆಯುವಿರಿ. ಹೊರಗಿನ ವಸ್ತುವನ್ನು ಹೆಚ್ಚು ಸೇವಿಸುವಿರಿ. ನಿಮ್ಮ ಪ್ರಯತ್ನವು ಸಫಲತೆಯನ್ನು ಕಾಣುವುದು. ಸಂತೋಷವನ್ನು ಯಾರ ಜೊತೆಗಾದರೂ ಹಂಚಿಕೊಳ್ಳುವಿರಿ. ಗುರಿಯನ್ನು ಸೇರುವ ಮಾರ್ಗದ ಬಗ್ಗೆ ಸ್ಪಷ್ಟತೆ ಇರಲಿ. ಉತ್ತಮ ದಿನಗಳ ನಿರೀಕ್ಷೆಯಲ್ಲಿ ನೀವು ಇರುವಿರಿ. ನೂತನ ಉದ್ಯೋಗವನ್ನು ಆರಂಭಿಸಲು ಭಯವಿರುವುದು. ಇನ್ನೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌ ಭಯದಿಂದ ಕೆಲಸ ಮಾಡಿಸಿಕೊಳ್ಳುವಿರಿ.

ಧನು ರಾಶಿ : ಸಾಮಾಜಿಕ ಕಾರ್ಯದಲ್ಲಿ ತೊಡಗುವುದಷ್ಟೇ ಅಲ್ಲ, ಆರ್ಥಿಕ ಸಹಾಯವನ್ನೂ ನೀವು ಮಾಡಬೇಕಾಗುವುದು. ಇಂದು ವಿದ್ಯಾರ್ಥಿಗಳಿಗೆ ತಾಯಿಯಿಂದ ತಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವರು. ಗಂಡಾಂತರದಿಂದ ಪಾರಾಗಿ ನೆಮ್ಮದಿಯ ನಿಟ್ಟುಸಿರು ಬಿಡುವಿರಿ. ಮನೆಗೆ ಬೇಕಾದ ಉಪಕರಣಗಳನ್ನು ಖರೀದಿಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಹೆಚ್ಚಿನ ಆತಂಕ ಇರಲಿದೆ. ದೊಡ್ಡ ವ್ಯವಹಾರಸ್ಥರ ಜೊತೆ ಸಂವಾದ ಮಾಡುವ ಸನ್ನಿವೇಶ ಬರುವುದು. ಕಳೆದುಕೊಂಡದ್ದರೆ ಬಗ್ಗೆ ಹೆಚ್ಚು ಮೋಹ ಉಂಟಾಗುವುದು. ಗೊಂದಲವನ್ನು ಮಾಡಿಕೊಳ್ಳದೇ ಸರಳವಾಗಿ ಕೆಲಸಗಳನ್ನು ಮಾಡುವುದು ಒಳ್ಳೆಯದು. ಅಲ್ಪ ಹೂಡಿಯತ್ತ ಗಮನವಿರಲಿದೆ. ಒಂದಕ್ಕಿಂತ ಹೆಚ್ಚು ಕೆಲಸವನ್ನು ಒಟ್ಟಿಗೇ ಮಾಡಲು ಹೋಗುವಿರಿ. ದಾನ ಮಾಡಲು ಮನಸ್ಸು ಹಿಂಜರಿಯಲಿದೆ. ಮಾನಸಿಕ ಅಸಮತೋಲನವು ನಿಮ್ಮನ್ನು ಭ್ರಾಂತಗೊಳಿಸಬಹುದು.‌ ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ನಿಮ್ಮ ಪ್ರತಿಕ್ರಿಯೆ ಯೋಗ್ಯವಾಗಿರಲಿ. ನಿಮಗೆ ಬೇಕಾದ ಯಾವುದನ್ನೂ ಸುಲಭವಾಗಿ ಪಡೆಯಲಾಗದು.

ಮಕರ ರಾಶಿ : ಕುಟುಂಬದಲ್ಲಿ ಸಲ್ಲದ ಮಾತುಗಳು ಬರಬಹುದು. ಅದನ್ನು ತೆಗೆದುಕೊಂಡು ಹೋಗುವುದು ನಿಮ್ಮದೇ ಕಾರ್ಯವಾಗಬಹುದು. ಇಂದು ನೀವು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳಾಗುವುದು. ಹೊಸ ಉದ್ಯಮವನ್ನು ಆರಂಭಿಸಲು ಧೈರ್ಯವು ಸಾಲದು. ಇನ್ನೊಬ್ಬರ ಜೊತೆ ಸೇರಿ ಮುಂದುವರಿಸುವುದು ನಿಮ್ಮ ಉತ್ತಮ ಆಯ್ಕೆ ಆಗಬಹುದು. ಮಕ್ಕಳಿಂದ ನಿಮ್ಮ ಉದ್ಯಮಕ್ಕೆ ಸಹಾಯವು ಸಿಗಬಹುದು. ಅಂದುಕೊಂಡಮಾತ್ರಕ್ಕೆ ಎಲ್ಲವೂ ಆಗುತ್ತದೆ ಎಂಬುದಿಲ್ಲ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾಗಿ ಇರಲಿದೆ. ಹೊಂದಾಣಿಕೆಯ ಮನೋಭಾವವು ಮುಖ್ಯವಾಗುವುದು. ಹಣವನ್ನು ಉಳಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುವಿರಿ. ಇಂದಿನ ನಿಮ್ಮ ವರ್ತನೆಯು ಗಾಂಭೀರ್ಯದಿಂದ ಇರಲಿದೆ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ಮಕ್ಕಳೆದುರು ನಿಮ್ಮ ನಡವಳಿಕೆ ಸರಿಯಾಗಿ ಇರಲಿ.

ಕುಂಭ ರಾಶಿ : ನಿಮ್ಮ ಕಾರ್ಯದ ಅನುಭವದ ಮೇಲೆ ಉತ್ತಮ ಸ್ಥಾನವು ಪ್ರಾಪ್ತವಾಗುವುದು. ಮನೆಯಿಂದ ದೂರವಿರುವ ನಿಮಗೆ ಕುಟುಂಬದವರ ನೆನಪಾಗುವುದು. ನೋವನ್ನು ನುಂಗಿ ಬದುಕುವ ಕಲೆಯನ್ನು ನೀವು ಅರ್ಥಮಾಡಿಕೊಂಡಿರುವಿರಿ. ಸ್ವಂತ ಉದ್ಯಮವನ್ನು ನಡೆಸುವವರು ಪ್ರಸಾರದ ಕಡೆಗೆ ಗಮನ ಕೊಡುವಿರಿ.‌ ಯಾರನ್ನೂ ನೋಯಿಸುವುದು ನಿಮಗೆ ಇಷ್ಟವಾಗದು. ನೂತನ ವಸ್ತುಗಳನ್ನು ಪಡೆಯಲಿದ್ದೀರಿ. ಮನೋರಂಜನೆಯಲ್ಲಿ ನಿಮ್ಮ ಹೆಚ್ಚಿನ ಸಮಯವು ಇಂದು ಕಳೆಯಲಿದೆ. ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಕಛೇರಿಯ ಕೆಲಸವನ್ನು ಕಾರಣಾಂತರಗಳಿಂದ ಮುಂದು ಹಾಕಲಿದ್ದೀರಿ. ನಿಮ್ಮ ಸ್ವಭಾವವನ್ನು ಸರಿ ಮಾಡಿಕೊಳ್ಳಬೇಕು ಎಂದನಿಸಬಹುದು. ಬಲವಂತದಿಂದ ನೀವು ಯಾರಬಳಿಯೂ ಕೆಲಸವನ್ನು ಮಾಡಿಸಲು ಹೋಗಬೇಡಿ, ಅದು ಆಗದು. ಕೆಲವು ಅವಕಾಶಗಳನ್ನು ನೀವೇ ಬಿಟ್ಟು ಹಾಳು ಮಾಡಿಕೊಳ್ಳುವಿರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ.

ಮೀನ ರಾಶಿ : ನಿಮ್ಮ ಉದ್ಯಮಕ್ಕೆ ಮನೆಯಿಂದ ಪ್ರೋತ್ಸಾಹ ಸಹಾಯಗಳು ಸಿಗದಿದ್ದರೂ ಬಂಧುಗಳಿಂದ ಸಿಗುವುದು. ಇಂದು ನಿಮಗೆ ಎಲ್ಲ ಕಾರ್ಯದಲ್ಲಿಯೂ ಉತ್ಸಾಹವು ಕಡಿಮೆ ಇರುವುದು. ನಿಮ್ಮ ಚರ ಸಂಪತ್ತನ್ನು ಜೋಪಾನ ಮಾಡಿಕೊಳ್ಳಿ. ಸ್ನೇಹಿತರಿಂದ ಲಾಭವು ನಿಮಗೆ ಸಿಗಲಿದೆ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಆರಾಮಾಗಿ ಇರಲು ಹೆಚ್ಚು ಇಷ್ಟಪಡುವಿರಿ. ಅತಿಯಾದ ಆಯಾಸವನ್ನು ಮಾಡಿಕೊಳ್ಳಲು ಹೋಗುವುದು ಬೇಡ. ಕಛೇರಿಯಲ್ಲಿ ಸಹೋದ್ಯೋಗಿಗಳ ಸಹಾನುಭೂತಿಯು ಸಿಗಲಿದೆ. ವೃತ್ತಿಯನ್ನು ನೀವು ಆನಂದಿಸುತ್ತ ಮಾಡುವಿರಿ. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಆರ್ಥಿಕತೆಯ ವಿಚಾರವು ನಿಮಗೆ ಪೂರ್ಣವಾಗಿ ತಿಳಿಯದು. ನಿಮ್ಮ ಅಜ್ಞಾನವನ್ನು ಪ್ರದರ್ಶಿಸುವುದು ಬೇಡ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಪರರ ಕಷ್ಟದ ಬಗ್ಗೆಯೂ ನಿಮಗೆ ಅರಿವಿರಲಿ. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯಬಾರದು.

-ಲೋಹಿತ ಹೆಬ್ಬಾರ್-8762924271 (what’s app only)

ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!