Daily Horoscope 28 August 2024: ಇಂದು ಸಂಗಾತಿಯ ಜೊತೆ ಕಲಹವಾಗಲಿದೆ; ಬುಧವಾರದ ದ್ವಾದಶ ರಾಶಿ ಭವಿಷ್ಯ ಇಲ್ಲಿದೆ

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಆಗಸ್ಟ್​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 28 August 2024: ಇಂದು ಸಂಗಾತಿಯ ಜೊತೆ ಕಲಹವಾಗಲಿದೆ; ಬುಧವಾರದ ದ್ವಾದಶ ರಾಶಿ ಭವಿಷ್ಯ ಇಲ್ಲಿದೆ
ಸಂಖ್ಯಾಶಾಸ್ತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 28, 2024 | 12:02 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಆಗಸ್ಟ್​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದಶಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:45 ಗಂಟೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 14:07, ಯಮಘಂಡ ಕಾಲ ಬೆಳಗ್ಗೆ 07:55 ರಿಂದ 09:28ರ ವರೆಗೆ, ಗುಳಿಕ ಕಾಲ 11:01 ರಿಂದ12:34ರ ವರೆಗೆ.

ಮೇಷ ರಾಶಿ : ಬಹಳ ಪರಿಶ್ರಮದಿಂದ ಇಂದು ಸ್ಥಳವನ್ನು ತಲುಪುವಿರಿ. ಬೇಡದ ವಿಚಾರಕ್ಕೆ ಮೂಗು ತೂರಿಸುವುದು ಬೇಡ. ನಿಮ್ಮ ಯೋಜನೆಗೆ ಹೊಂದಿಕೆಯಾಗುವಂತಹ ವ್ಯಕ್ತಿಗಳ ಭೇಟಿಯಾಗಲಿದೆ. ಅವರ ಜೊತೆ ಹೆಚ್ಚಿನ ಚರ್ಚೆಗಳನ್ನು ಮಾಡುವಿರಿ. ಆಪ್ತರ ಸಣ್ಣ ಬದಲಾವಣೆಯೂ ನಿಮಗೆ ಸಹಿಸಲು ಕಷ್ಟವಾದೀತು. ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆಯುವರು. ನಿಮಗೆ ಕೊಟ್ಟ ಅಧಿಕಾರವನ್ನು ಸದುಪಯೋಗಿ ಮಾಡಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿ. ಸಿಟ್ಟುಗೊಳ್ಳದೇ ತಾಳ್ಮೆಯಿಂದ ಕಾರ್ಯವನ್ನು ಸವಾಲನ್ನು ಎದುರಿಸುವ ಕಲೆ ಗೊತ್ತಿದೆ. ಅನೇಕ ದಿನಗಳಿಂದ ಮಾಡಬೇಕು ಎಂದುಕೊಂಡ ಕೆಲಸವನ್ನು ನೀವು ಆರಂಭಿಸುವಿರಿ. ದಾಂಪತ್ಯದಲ್ಲಿ ಸುಖವಾಗಿರಲು ಎಲ್ಲಿಗಾದರೂ ಹೋಗಿಬರುವುದು ಉತ್ತಮ.‌ ಹೊಸಪ್ರದೇಶದಿಂದ ನಿಮಗೆ ಉತ್ಸಾಹ ಬರಲಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಭಾವ ನಿಮ್ಮಲ್ಲಿರಲಿ.

ವೃಷಭ ರಾಶಿ : ಇಂದು ಎಲ್ಲದಕ್ಕೂ ವಿರೋಧ ಮಾಡುವುದು ನಿಮಗೇ ಇದು ಸರಿ ಕಾಣದು. ವಿಷಯ ಹಳೆಯದಾದರೂ ನಿಮ್ಮ ಬುದ್ಧಿಗೆ ಕೆಲಸವು ಸಾಕಷ್ಟು ಸಿಗುತ್ತದೆ. ಇಂದು ನೀವು ಕೆಲಸದಿಂದ ವಿಶ್ರಾಂತಿ ಪಡೆಯುವಿರಿ. ಮಕ್ಕಳು ನಿಮ್ಮ ಕೆಲಸಗಳನ್ನು ಮಾಡಿಕೊಡುವರು. ಯಾರ ಋಣವನ್ನೂ ಇಟ್ಟುಕೊಳ್ಳಲು ಬಯಸಲಾರಿರಿ. ನಿಮ್ಮ ವಿವಾಹವನ್ನು ಮಾಡಿಸಲು ಬಂಧುಗಳು ಮಾಡಿದ ಪ್ರಯತ್ನವು ನಿಷ್ಪ್ರಯೋಜಕವಾದೀತು. ರಾಜಕಾರಣದಲ್ಲಿ ನಿಮ್ಮ ಪ್ರಭಾವ ಕಡಿಮೆಯಾದೀತು. ಇಂದು ಯಾರನ್ನೂ ಬೇಗನೆ ನಂಬಲಾರಿರಿ. ಸಂಪತ್ತಿಗಾಗಿ ದುರ್ಮಾರ್ಗವನ್ನು ಹಿಡಿಯುವ ಸಾಧ್ಯತೆ ಇದೆ. ಎಷ್ಟೋ ವಿಚಾರಗಳಿಗೆ ನೀವು ನಕಾರಾತ್ಮಕ ಪ್ರತಿಕ್ರಿಯೆ ನೀಡುವಿರಿ. ಕೆಲವು ಸಂದರ್ಭದಲ್ಲಿ ಸುಮ್ಮನಿರುವುದೇ ಲೇಸು ಎಂದು ಅರಿವಾಗುವುದು. ಅವರೂ ನಿಮ್ಮ ಯಶಸ್ಸಿನ ಪಾಲುದಾರರು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯಾರಾದರೂ ನಿಮ್ಮ ಗುಟ್ಟನ್ನು ಹೊರಹಾಕಬಹುದು. ನಿಮ್ಮ ರಹಸ್ಯವನ್ನು ಬಿಟ್ಟುಕೊಡಲಾರಿರಿ. ಇಂದು ನೀವು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು.

ಮಿಥುನ ರಾಶಿ : ಇಂದು ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ನಿಮ್ಮ ದೃಷ್ಟಿ ಬದಲಾದರೆ ಎಲ್ಲವೂ ತಾನಾಗಿಯೇ ಬದಲಾಗುತ್ತದೆ. ಇಂದು‌ ನೀವು ಸಣ್ಣ ವಿಚಾರವೆಂದು ಕಡೆಗಣಿಸಿದ್ದು ದೊಡ್ಡದಾಗಬಹುದು. ಸರಳವಿಧಾನವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಇಂದಿನ ಹಣದ ಅವಶ್ಯಕತೆಯನ್ನು ಸಹೋದರನ ಮೂಲಕ ಪೂರೈಸಿಕೊಳ್ಳುವಿರಿ. ಆಸ್ತಿಯ ವಿಚಾರವಾಗಿ ನ್ಯಾಯಾಲಯಕ್ಕೆ ಹೋಗಬೇಕಾದೀತು. ನಿಮ್ಮ‌ ಇಂದಿನ ವರ್ತನೆಗಳೇ ನೀವು ಯಾರೆಂದು ತಿಳಿಸುತ್ತದೆ. ಸರ್ಕಾರಿ ಕೆಲಸಗಳನ್ನು ಹಣದ ಮೂಲಕ ಬೇಗ ಮಾಡಿಸಿಕೊಳ್ಳುವಿರಿ. ಮಾತುಗಾರಿಗೆ ಸ್ವಲ್ಪ ಹಿನ್ನಡೆಯಾಗಬಹುದು. ಅವರು ಅವಕಾಶಗಳನ್ನು ಹುಡುಕುವರು. ನಿಮ್ಮವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಹಿರಿಯರ ಎದುರು ವಿನಯದಿಂದ ಮಾತನಾಡಿ. ಅತಿಥಿಗಳನ್ನು ಗೌರವಿಸಿ, ಸತ್ಕರಿಸುವಿರಿ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ.

ಕರ್ಕಾಟಕ ರಾಶಿ : ಇಂದು ನಿಮ್ಮ ಅಧ್ಯಾತ್ಮದ ಆಸಕ್ತಿಗೆ ಯೋಗ್ಯವಾದ ಜನ ಹಾಗೂ ವಿಷಯ ಸಿಗಲಿದೆ. ಎಲ್ಲದಕ್ಕೂ ಉತ್ತರವಿರುತ್ತದೆಯಾದರೂ ನಿಮ್ಮ ಕಾರ್ಯವೇ ಉತ್ತರದಂತಿರಲಿ. ‌ಈ ಕಾರಣಕ್ಕಾಗಿ ಕೆಲವರನ್ನು ಎದುರು ಹಾಕಿಕೊಳ್ಳಬೇಕಾದೀತು. ಕೃಷಿಯ ಚಟುವಟಿಕೆಯಲ್ಲಿ ಇಂದು ಆಸಕ್ತಿ ಕಡಿಮೆಯಾಗಿ ಮನೆಯಲ್ಲಿಯೇ ಇರುವಿರಿ. ಕೆಲವರ ಮಾತು ನಿಮ್ಮನ್ನು ಭ್ರಾಂತಗೊಳಿಸಬಹುದು. ದಾಯಾದಿಗಳು ನಿಮ್ಮ ಅವನತಿಯನ್ನು ಕಾಯುತ್ತ ನಿಮ್ಮ ಹಿತಶತ್ರುಗಳಾಗಿರುವರು. ನಿಮ್ಮ ಕೆಲಸಕ್ಕೆ ಯಾರ ಹಸ್ತಕ್ಷೇಪವನ್ನೂ ಬಯಸಲಾರಿರಿ. ನೀವು ಪ್ರಭಾವಿ ವ್ಯಕ್ತಿಗಳ ಮೂಲಕ ಗಟ್ಟಿ ಮಾಡಿಕೊಳ್ಳುವುದು ಉತ್ತಮ. ಅದನ್ನು ಕೂಡಲೇ ಪ್ರಕಟಿಸದೇ ನಿಯಂತ್ರಿಸಲು ಪ್ರಯತ್ನಿಸಿ. ವೈವಾಹಿಕ ಜೀವನದಲ್ಲಿ ವಿಶ್ವಾಸವು ಹೆಚ್ಚಾಗುವುದು. ಇಂದು ಕೆಲಸದ ಕಾರಣಕ್ಕೆ ಏಕಾಂಗಿಯಾಗಬೇಕಾಗುವುದು.

ಸಿಂಹ ರಾಶಿ : ಇಂದು ನಿಮಗೆ ಯಾವುದೋ ನಿಶ್ಚಿತ ಮೂಲದಿಂದ ಹಣ ಬರುವ ಖಾತ್ರಿ ಸಿಕ್ಕು, ಹೆಚ್ಚಿನ ಖರ್ಚು ಮಾಡಲು ಮುಂದಾಗುವಿರಿ. ದುರಭ್ಯಾಸವು ಎಲ್ಲರಿಂದ ನಿಮ್ಮನ್ನು ದೂರವಿಡುವುದು. ರಾಜಕೀಯ ವ್ಯಕ್ತಿಗಳು ಒತ್ತಡದ ಮೇಲೆ ಅಭಿವೃದ್ಧಿಗೆ ಗಮನ ಕೊಡುವರು. ನಿಮ್ಮ ಸ್ನೇಹಿತನ ಜೊತೆ ದೂರ ಪ್ರಯಾಣ ಮಾಡುವಿರಿ. ನಿರ್ಮಾಣದ ಕಾರ್ಯವನ್ನು ನೀವು ವಹಿಸಿಕೊಳ್ಳುವಿರಿ. ಅನಗತ್ಯ ವಿಷಯವನ್ನು ಚರ್ಚಿಸಿ ಕಾಲಹರಣ ಮಾಡುವಿರಿ. ನಿಮ್ಮ ಸಾಮರ್ಥ್ಯವನ್ನು ತೋರಿಸಲು ಹೋಗಬೇಡಿ. ಎಲ್ಲದರಲ್ಲಿಯೂ ಇಂದು ನೀವು ನಕಾರಾತ್ಮಕ ವಿಷಯವನ್ನು ಹುಡುಕುವಿರಿ. ಪರಾವಲಂಬಿಯಾಗುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಸಿಗಬೇಕಾದವರು ಇಂದು ಸಿಗದೇ ಹೋಗುವರು. ನಿಮ್ಮ ಮಾತಿಗೆ ಸಮಜಾಯಿಷಿ ಕೊಡಲು ಹೋಗುವ ಅವಶ್ಯಕತೆ ಇಲ್ಲ. ಒಂಟಿತನದ ಆಲೋಚನೆಯು ಪೂರ್ಣವಾಗದು. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆಗುವುದು.

ಕನ್ಯಾ ರಾಶಿ : ಅಧಿಕಾರಿಗಳಿಗೆ ಬೇಕಾದುದನ್ನು ನೀಡಿ ಅವರನ್ನು ಸಂತೋಷಪಡಿಸುವಿರಿ. ಸಾಧ್ಯವಾದಷ್ಟು ನಿಮ್ಮ‌ ಕೆಲಸವನ್ನು ಸದ್ದಿಲ್ಲದೇ ಮಾಡಿ ಮುಗಿಸಿ. ಇಂದು ನೀವು ಮನೆಯಲ್ಲಿಯೇ ವಾಸ ಮಾಡಿ. ನಿಮ್ಮ ಸಂಬಂಧಿಸಿದ ವಸ್ತುಗಳು ಕಾಣೆಯಾಗಬಹುದು. ಅಧಿಕೃತ ಮಾಹಿತಿಯನ್ನು ಪಡೆದು ಮುಂದುವರಿಯುವುದು ಒಳ್ಳೆಯದು. ಇಂದು ನಿಮಗೆ ತುಂಬ ಕೆಲಸಗಳಿದ್ದರೂ ಮಾಡಲು ನಿಮಗೆ ಆದ್ಯತೆ ಎಂದು ಕೊಡಲು ಕಷ್ಟವಾದೀತು. ದಾಂಪತ್ಯದಲ್ಲಿ ನೀವು ಸುಖವನ್ನು ಅನುಭವಿಸುವಿರಿ. ನಿಮ್ಮ ಕೋಪವನ್ನು ನೀವು ನಿಯಂತ್ರಿಸುವುದು ಕಷ್ಟವಾದೀತು. ಸಣ್ಣ ಪರಿಶ್ರಮಕ್ಕೂ ನಿಮಗೆ ಉತ್ತಮ ಫಲವಿರಲಿದೆ. ಸಂಗಾತಿಗೆ ಸಂತೋಷವನ್ನು ಕೊಡುವಿರಿ. ಯಾರದೋ ಮಾತಿಗೆ ನೀವು ಚಿಂತಿತರಾಗದೇ ನಿಮ್ಮ ಕೆಲಸದಲ್ಲಿ ಮಗ್ನರಾಗುವಿರಿ. ಮನಸ್ತಾಪಗಳು ದೂರವಾಗಿ ಕುಟುಂಬದಲ್ಲಿ ಅನ್ಯೋನ್ಯತೆ ಎದ್ದು ತೋರುವುದು. ಮಕ್ಕಳ‌ ವಿಚಾರದಲ್ಲಿ ದುಂದು ವೆಚ್ಚ ಮಾಡಬೇಕಾದೀತು. ಹೂಡಿಕೆಯಲ್ಲಿ ಅತಿಯಾದ ನಿರೀಕ್ಷೆ ಬೇಡ.

ತುಲಾ ರಾಶಿ : ನಿಮ್ಮ ಪಟ್ಟ ಶ್ರಮಕ್ಕೆ ಈಗ ಗೌರವವನ್ನು ಪಡೆದುಕೊಳ್ಳುವಿರಿ. ಭಾವನೆ ವಿಶಾಲವಾದಷ್ಟು ನಿಮ್ಮ ವ್ಯಕ್ತಿತ್ವವೂ ವಿಶಾಲವಾಗುವುದು. ಅನವಶ್ಯಕ ವಸ್ತುಗಳನ್ನು ಖರೀದಿ ಮಾಡಿದ್ದಕ್ಕೆ ಮನೆಯಲ್ಲಿ ಸಂಗಾತಿಯ ಜೊತೆ ಕಲಹವಾಗಲಿದೆ. ಸಹೋದರರ ನಡುವೆ ಕಲಹವಾಗುವ ಸಾಧ್ಯತೆ ಇದೆ. ಕುಟುಂಬ ಶಾಂತಿಯಿಂದ ಇರಲು ಒಬ್ಬರನ್ನು ಒಬ್ಬರು ಅನುಸರಿಸಬೇಕಾದೀತು. ನೀವಿಬ್ಬರೂ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ಸಾಲಕ್ಕೆ ಅರ್ಜಿ ಸಲ್ಲಿಸಿದ್ದು ಬರುವ ತನಕ ತಾಳ್ಮೆಯಿಂದ ಕಾಯಬೇಕಾದೀತು. ನೀವು ಪ್ರಾಮಾಣಿಕತೆಯನ್ನು ತೋರಿಸಬೇಕಾದೀತು. ಸಮಯವನ್ನು ನೋಡಿ ಹೇಳಬೇಕಾದ ವಿಚಾರವನ್ನು ಹೇಳಿ. ಇಲ್ಲವಾದರೆ ನಿಮ್ಮ‌ ಮಾತು ಬೇರೆ ಪರಿಣಾಮವನ್ನು ಕೊಟ್ಟೀತು. ನಿಮಗೆ ಸೂಕ್ತವೆನಿಸಿದ ವ್ಯಕ್ತಿಗಳಲ್ಲಿ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ಸ್ನೇಹಿತರ ಬಳಗ ನಿಮ್ಮನ್ನು ಕೆಟ್ಟ ಕೆಲಸಕ್ಕೆ ಪ್ರೇರಿಸಬಹುದು. ಬೀಳುವ ನಿಮ್ಮನ್ನು ಯಾರಾದರೂ ರಕ್ಷಿಸಿಯಾರು. ನ್ಯಾಯ ನೀತಿಯ ವಿರುದ್ಧ ನಡೆಯುವುದು ಬೇಡ.

ವೃಶ್ಚಿಕ ರಾಶಿ : ಇಂದು ನಿಮ್ಮ ಬಾಕಿ ಉಳಿದ ಸಾಲಗಳನ್ನು ಪೂರ್ಣ ಮಾಡಿ. ಸಂಗಾತಿಯ ಪ್ರೀತಿಯಿಂದ ನೀವು ವಂಚಿತರಾಗಬೇಕಾದೀತು. ನಿಮ್ಮ ಅಂದಾಜನ್ನು‌ ಮೀರಿ ಹಣವು ಖರ್ಚಾಗಬಹುದು. ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ವಿಷಯದಲ್ಲಿ ಗಮನಕೊಟ್ಟು ನೀವು ಯಾವುದನ್ನೂ ಸರಿಯಾಗಿ ನಿರ್ವಹಿಸಲಾಗದೇ ಒದ್ದಾಡುವಿರಿ. ಎಲ್ಲರ ಜೊತೆಗಿದ್ದರೂ ನಿಮಗೆ ಒಂಟಿತನವು ಕಾಡಬಹುದು. ಸತ್ಯನ್ನೇ ಹೇಳುತ್ತೇನೆಂದು ಇನ್ನೊಬ್ಬರಿಗೆ ನೋವು ಕೊಡುವುದು ಉಚಿತವಾಗಲಾರದು. ವಿದ್ಯಾರ್ಥಿಗಳಿಂದ‌ ನಿಮಗೆ ಆಶ್ಚರ್ಯ ಇರಲಿದೆ. ನಿಮ್ಮ ಬಗೆಗಿನ‌ ವಿಚಾರವನ್ನು ನೀವು ನಿರ್ಲಕ್ಷ್ಯ ಮಾಡುವಿರಿ. ಅಸಾಧ್ಯವಾದುದನ್ನು ಸಾಧಿಸುವ ಹುಂಬುತನ‌ ಬೇಡ. ನಿಮ್ಮ ದಾರಿಯು ಸರಿ ಇದೆಯೇ ಎಂಬ ಯೋಚನೆಗೆ ಬಂದು‌ ಅನಂತರ ಮುಂದುವರಿಯಿರಿ. ಒಳ್ಳೆಯ ಕಡೆಯಿಂದ ಒಳ್ಳೆಯದನ್ನೇ ನಿರೀಕ್ಷಿಸಿ. ಉತ್ಸಾಹಕ್ಕೆ ನಿಮ್ಮದೇ ಆದ ಕಾರಣವನ್ನು ಕಂಡುಕೊಳ್ಳಬೇಕು. ನಿಮ್ಮ ದಿನಚರಿ ನಿಧಾನವಾಗಿರುತ್ತದೆ. ಪ್ರತಿಯೊಂದು ಕ್ರಿಯೆಯನ್ನು ನಿಧಾನಗತಿಯಲ್ಲಿ ಸಾಗುವುದು. ನೀವು ಕೊಟ್ಟಿದ್ದೇ ನಿಮಗೆ ಸಿಗುವುದು ಸೃಷ್ಟಿಯ ನಿಯಮ.

ಧನು ರಾಶಿ : ನಿಮಗೆ ಇಂದು ಮುಖ್ಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಾಗದು. ನಿಮ್ಮ ಹೇಳಿಕೆಗಳು ಮತ್ಯಾರಿಗೋ ಅಪಾಯವನ್ನು ಕೊಡುವುದು. ನಿಮ್ಮ ನಡತೆಯನ್ನು ನೀವೇ ಗಮನಿಸಿಕೊಂಡು ಸರಿ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಕಾರ್ಯ ವೈಫಲ್ಯಕ್ಕೆ ಇನ್ನೊಬ್ಬರನ್ನು ದೂರುವುದು ಸರಿಯಲ್ಲ. ನಿಮ್ಮ ಮಾತು ಔಚಿತ್ಯಪೂರ್ಣವಾಗಿ ಇರಲಿ. ಕಳೆದು ಕೊಂಡ ಮಾನವನ್ನು ಮರಳಿ ಪಡೆಯಲಾಗದು. ಒಂದೇ ಕಾರ್ಯವನ್ನು ನಂಬಿರುವುದು ಕಷ್ಟ. ನಿಮ್ಮ ವೃತ್ತಿಯ ಕ್ಷೇತ್ರದಲ್ಲಿ ನಿಮಗೆ ಸ್ವಲ್ಪ ಅಗೌರವವೂ ಇರಬಹುದು. ಆರ್ಥಿಕತೆಯನ್ನು ನೀವು ಬೆಳೆಸಿಕೊಳ್ಳಲು ಹೆಚ್ಚು ಶ್ರಮವು ಅವಶ್ಯಕ. ಸಹೋದ್ಯೋಗಿಯನ್ನು ನೀವು ಮಿತ್ರರನ್ನಾಗಿ ಪಡೆಯುವಿರಿ. ಇನ್ನೊಬ್ಬರಿಂದ ಒಳ್ಳೆಯದನ್ನು ಕಲಿಯುವಿರಿ. ಅವಸರಕ್ಕೆ ಒಳಗಾಗಿ ಏನನ್ನಾದರೂ ಮಾಡಿಕೊಂಡೀರ, ಜಾಗರೂಕರಾಗಿರಿ. ಸರಳ ಜೀವನವನ್ನು ನೀವು ಇಷ್ಟಪಡುವಿರಿ. ದುರಭ್ಯಾಸವನ್ನು ರೂಢಿಸಿಕೊಳ್ಳುವ ಸಂಭವವು ಬರಬಹುದು.

ಮಕರ ರಾಶಿ : ಇಂದು ನಿಮ್ಮ ವಿವಾಹದ ಇಚ್ಛೆಯನ್ನು ಮನೆಯಲ್ಲಿ ಹೇಳುವಿರಿ. ಸರ್ಕಾರಿ ಕೆಲಸದಲ್ಲಿ ನಿಮಗೆ ಇಂದು ಹಿನ್ನಡೆಯಾಗಲಿದೆ. ಸೋಲನ್ನು ಒಪ್ಪಿಕೊಳ್ಳಲು ನೀವು ಹಿಂದೇಟು ಹಾಕುವಿರಿ. ದುರಭ್ಯಾಸವನ್ನು ನೀವು ಮಿತ್ರರಿಂದ ಪಡೆಯುವಿರಿ. ನೀವು ಮಾಡಿದ ಸಹಾಯವು ನಿಮಗೇ ಬರುವುದು. ಎಲ್ಲರೆದುರು ಮಾತನಾಡುವ ಸಂದರ್ಭ ಬರಲಿದ್ದು ನೀವು ಮುಜಗರಗೊಳ್ಳುವಿರಿ. ವ್ಯವಹಾರದ ಕಾರಣದಿಂದ ಆರೋಗ್ಯದ ಹದವು ತಪ್ಪಬಹುದು. ನಿಮ್ಮ ಮೇಲೆ ಸಿಟ್ಟಾಗುವ ಸಾಧ್ಯತೆಯೂ ಇದೆ. ಹೆಚ್ಚಿನ ಸಮಯವನ್ನು ಇಂದು ಪ್ರಯಾಣದಲ್ಲಿಯೇ ಕಳೆಯುವಿರಿ. ಅಸ್ವಾಭಾವಿಕ‌ ನಡೆಗಳಿಂದ ನಿಮ್ಮವರಿಗೆ ಅನುಮಾನ ಬರಬಹುದು. ತಂದೆಯ ಮಾತನ್ನು ನೀವು ಖಂಡಿಸುವಿರಿ. ಶತ್ರುಗಳ ಭಯವು ನಿಮ್ಮನ್ನು ಕಾಡಬಹುದು.‌ ಯಾರಿಂದಲೋ ಸಿಕ್ಕ ವಸ್ತುಗಳನ್ನು ಜೋಪಾನ ಮಾಡುವಿರಿ. ಈ ದಿನ ನೀವು ಶಾರೀರಿಕ ಕಾಳಜಿಯನ್ನು ಹೆಚ್ಚು ಮಾಡಬೇಕಾದೀತು. ಸಂಗಾತಿಯ ಎದುರು ಏನನ್ನೂ ಹೇಳದೇ ಸುಮ್ಮನಿರುವಿರಿ.

ಕುಂಭ ರಾಶಿ : ನಿಮ್ಮ ಸ್ವತಂತ್ರ ಯೋಚನೆಯಿಂದ ಯಶಸ್ಸು ಸಿಗಲಿದೆ. ಆರ್ಥಿಕತೆಯ ಪ್ರಗತಿಗೆ ಯಾರದ್ದಾದರೂ ಸಹಕಾರ ಪಡೆಯುವಿರಿ. ತುರ್ತಾಗಿ ಹಣದ ಅಗತ್ಯ ಕಂಡುಬಂದು, ಸಾಲ ಮಾಡಬೇಕಾಗಿ ಬರುವುದು. ಅಹಂಕಾರದಿಂದ ಕೂಡಿದ ಮನಸ್ಸಿನ ಜೊತೆ ಯಾರೂ ಬರುವುದಿಲ್ಲ. ನೀವು ಒಂಟಿಯಾಗುವಿರಿ. ಸರಿಯಾದ ವಿಚಾರವನ್ನು ತಿಳಿದು ಮಾತನಾಡುವುದು ಉತ್ತಮ. ಸ್ನೇಹಿತರನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮ ಕಾರಣದಿಂದ ಕುಟುಂಬ ನೆಮ್ಮದಿಯಿಂದ ಇದೆ ಎಂದು ಭಾವಿಸುವರು. ಯಾವ ಕ್ಷಣವನ್ನೂ ನೀವು ಮನಸ್ಸು ಖಾಲಿಯಾಗದಂತೆ ನೋಡಿಕೊಳ್ಳಿ. ಆರ್ಥಿಕ ಸಹಾಯಕ್ಕೆ ಸಿಗುವವರು ನಿಮ್ಮಿಂದ ಮತ್ತೇನನ್ನೋ ಬಯಸುವರು. ನಿಮ್ಮ ಮಾತು ನೇರವಾಗಿರಲಿ. ಅರ್ಥವತ್ತಾಗಿರಲಿ. ಇಂದು ನಿಮ್ಮ ಆಪ್ತರನ್ನು ಕಡೆಗಣಿಸುವಿರಿ. ಅಪರಿಚಿತರ ಜೊತೆ ಅನುಚಿತ ವರ್ತನೆ ಬೇಡ. ನಿಮ್ಮ ಸಿದ್ಧಾಂತವನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಶುಭ ಸುದ್ದಿಯು ನಿಮ್ಮನ್ನು ಪ್ರೋತ್ಸಾಹಿಸಬಹುದು. ನಿಮ್ಮ ಗುಣವನ್ನು ಅಪಾರ್ಥ ಮಾಡಿಕೊಂಡಾರು.

ಮೀನ ರಾಶಿ : ಇಂದು ನಿಮಗೆ ಹಿರಿಯರ ಆಸೆಯನ್ನು ಪೂರೈಸಿದ ಸಂತೃಪ್ತಿ ಇರುವುದು. ಧನವ್ಯವಹಾರವನ್ನು ಜಾಗರೂಕತೆಯಿಂದ ಮಾಡಿ. ವ್ಯಾಪರವು ಮಧ್ಯಮಫಲದಿಂದ ಇರಲಿದೆ. ಹೆಚ್ಚು ಪರಿಶ್ರಮದಿಂದ ನಿಮಗೆ ಆಯಾಸವಾದೀತು. ವಿಶ್ರಾಂತಿಯನ್ನು ಒಡೆದು ಮುಂದುವರಿಯುವುದು ಉತ್ತಮ. ಯೋಜಿತ ಕಾರ್ಯದಲ್ಲಿ ಅತಿಯಾದ ಫಲಾಪೇಕ್ಷೆ ಬೇಡ. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಖುಷಿಯಿಂದ ತೊಡಗಿಕೊಳ್ಳುವರು. ಎಲ್ಲವನ್ನೂ ನಿಮ್ಮ ಮೂಲಕವೇ ನಡೆಯಬೇಕು ಎಂಬ ಮಾನಸಿಕ ಸ್ಥಿತಿಯು ಒಳ್ಳೆಯದಲ್ಲ. ನಿಮ್ಮ ಜವಾಬ್ದಾರಿಯ‌ ಕೆಲಸಗಳು ಸರಿಯಾಗಿ ನಡೆತುತ್ತಿದೆಯೇ ಎಂಬುದನ್ನು ಗಮನಸಿ. ಸರ್ಕಾರಿ ಕೆಲಸವನ್ನು ಅಲ್ಲಿರುವ ಆಪ್ತರ ಮೂಲಕ ಮಾಡಿಸಿಕೊಳ್ಳುವಿರಿ. ಆಪ್ತರ ಜೊತೆ ಹಳೆಯ ನೆನಪನ್ನು ಹಂಚಿಕೊಳ್ಳುವಿರಿ. ಸೌಂದರ್ಯಕ್ಕೆ ಹೆಚ್ಚು ಮಹತ್ವವನ್ನು ಕೊಡಲಿದ್ದೀರಿ. ಮನೆಯವರ ಮನ ನೋಯಿಸಿ ಕಾರ್ಯ ಮಾಡಲಾಗದು. ಪ್ರತಿಯೊಂದು ಕ್ಷಣವನ್ನೂ ಆನಂದಿಸುವಿರಿ. ಹಿಂದಿನ ತಪ್ಪುಗಳು ಪಾಠವಾಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!