Daily Horoscope 28 September 2024: ಈ ರಾಶಿಯವರು ಇಂದು ಹಣವನ್ನು ಕಳೆದುಕೊಳ್ಳಬಹುದು-ಎಚ್ಚರ

ಸೆಪ್ಟೆಂಬರ್​ 28,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ಮಕ್ಕಳ ಜೀವನವನ್ನು ಕಂಡು ಇಂದು ದುಃಖವಾಗಬಹುದು. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡಲಾಗದು. ತಪ್ಪು ಕೆಲಸದಿಂದ ಅಧಿಕಾರಿಗಳು ಗದರಿಸುವರು.‌ ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 28 September 2024: ಈ ರಾಶಿಯವರು ಇಂದು ಹಣವನ್ನು ಕಳೆದುಕೊಳ್ಳಬಹುದು-ಎಚ್ಚರ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 28, 2024 | 12:01 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:53, ಯಮಘಂಡ ಕಾಲ ಮಧ್ಯಾಹ್ನ 01:53ರಿಂದ ಸಂಜೆ 03:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:23 ರಿಂದ 07:53 ರ ವರೆಗೆ.

ಮೇಷ ರಾಶಿ : ಇನ್ನೊಬ್ಬರನ್ನು ನೋಡಿ ಬದುಕುವುದಕ್ಕಿಂತ ನಿಮ್ಮನ್ನೇ ನೋಡಿದರೆ ಒಳ್ಳೆಯದು. ನೀವು ಇಂದು ಸ್ನೇಹಿತನ ನಂಬಿಕೆಯ ಯಾರಿಗೋ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ನೂತನ ವಸ್ತ್ರಾದಿಗಳು ಬಂಧುಗಳಿಂದ ನಿಮಗೆ ಸಿಗಲಿದೆ. ಕೆಲಸದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ದಾರಿ ಅಗಲವಿದೆ ಎಂದು ಹೇಗಾದರೂ ಹೋದರೆ ಬೀಳುವುದು ನೀವೇ. ಅಧಿಕಾರಿಗಳಿಂದ ಪ್ರಶಂಸೆಯು ಸಿಕ್ಕಿ ಕೆಲಸದಲ್ಲಿ ಉತ್ಸಾಹವು ಇರಲಿದೆ. ಖಾಸಗಿ ಉದ್ಯೋಗಿಗೆ ಮುಖ್ಯಸ್ಥರಿಂದ ಕಿರಿಕಿರಿ ಆಗಬಹುದು. ಸ್ನೇಹಿತರ ಸಮಸ್ಯೆಯನ್ನು ಬಿಡಿಸಲು ನೀವು ಮುಂದಾಗುವಿರಿ. ನಿಮ್ಮ ಕೆಲಸಗಳನ್ನು ಮುಗಿಸುವ ಚಿಂತೆಯಲ್ಲಿ ಇರುವಿರಿ. ಹಣಕಾಸಿನ‌ ಹರಿವಿನಿಂದ ಸಂತೋಷವಾಗಲಿದೆ. ಸಂಪಾದನೆಗೆ ಅವಕಾಶಗಳು ನಿಮಗೆ ಸಿಗಬಹುದು. ಇಂದು ಕಾರ್ಯದ ಒತ್ತಡವು ಅಧಿಕವಾಗಿ ಇರಲಿದೆ. ನಿಮಗೆ ಕೊಟ್ಟ ಸಣ್ಣ ಕೆಲಸವನ್ನೂ ಶಿಸ್ತು ಹಾಗೂ ಉತ್ಸಾಹದಿಂದ ಮಾಡುವಿರಿ. ಪ್ರೇಮವು ಬಹಿರಂಗು ಅಂಜಿಕೆ ಇರವುದು.

ವೃಷಭ ರಾಶಿ : ನಿಮ್ಮ ಅಸತ್ಯಗಳನ್ನು ಜನರು ಎಂದಿನಂತೆ ನಂಬಲಾರರು. ಇಂದು ನಿವು ಏನೂ ಕೆಲಸವಿಲ್ಲದೇ ಸಮಯವನ್ನು ವ್ಯರ್ಥ‌ಮಾಡುವಿರಿ. ಅಪರೂಪದ ದ್ರವ್ಯಗಳು ಸಿಗಲಿದೆ‌. ಕುಟುಂಬದ ಜೊತೆ ಸಮಯವನ್ನು ಕಳೆದುದಕ್ಕೆ ಮನಸ್ಸು ನೆಮ್ಮದಿಯಿಂದ ಇರಲಿದೆ. ಗಣ್ಯರ ವ್ಯಕ್ತಿತ್ವವು ನಿಮ್ಮ ಮೇಲೆ ಪ್ರಭಾವವನ್ನು ಬೀರಬಹುದು. ಖರ್ಚನ್ನು ಕಡಿಮೆ ಮಾಡಿಕೊಂಡ ಕಾರಣ ಆರ್ಥಿಕತೆಯು ಉತ್ತಮವಾದಂತೆ ಅನ್ನಿಸುವುದು. ಸುಮ್ಮನೇ ಆಡಿದ ಮಾತುಗಳೂ ನಿಮಗೆ ತೊಂದರೆಯಾಗಬಹುದು. ನಿಕಟವರ್ತಿಗಳೇ ನಿಮಗೆ ತೊಂದರೆಯಾಗುವುದು. ನಿಮ್ಮ ವಿರುದ್ಧ ನಡೆಯುವ ಪಿತೂರಿಯನ್ನು ತಿಳಿದುಕೊಳ್ಳುವಿರಿ. ಹಿರಿಯರಿಗೆ ಅಗೌರವವನ್ನು ತೋರುವಿರಿ. ದೇವರ ಸನ್ನಿಧಿಯಲ್ಲಿ ನಿಮಗೆ ನೆಮ್ಮದಿಯು ಸಿಗಲಿದೆ. ಆಗಿರುವ ನಕಾರಾತ್ಮಕತೆಯನ್ನು ಮರೆತು ಮುನ್ನಡೆಯುವಿರಿ. ನಿಮ್ಮ ಸಿದ್ಧಾಂತದ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳಬಹುದು.

ಮಿಥುನ ರಾಶಿ : ಸ್ಪರ್ಧಾತ್ಮಕವಾಗಿ ನೀವು ಗೆಲ್ಲಬೇಕು ಎನ್ನುವ ಹಂಬಲವಿರುವುದು. ಇಂದು ನಿಮಗೆ ಇಷ್ಟವಾಗದವರ ಜೊತೆ ಮಾತನಾಡುವ ಸಂದರ್ಭವು ಅನಿರೀಕ್ಷಿತವಾಗಿ ಬರುವುದು. ಶತ್ರುಗಳ ಕಾಟವನ್ನು ಕಡಿಮೆ‌ ಮಾಡಿಕೊಳ್ಳಲು ಯೋಜನೆಯನ್ನು ರೂಪಿಸಿಕೊಳ್ಳುವಿರಿ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು.‌ ಕುಟುಂಬದ ತೊಡಕನ್ನು ಸರಿಮಾಡಿ ಒಂದುಮಾಡುವ ಕಾರ್ಯವು ಸಫಲವಾಗುವುದು. ಸರ್ಕಾರಿ ಉದ್ಯೋಗದಲ್ಲಿ ಇದ್ದವರಿಗೆ ಕೆಲಸದ ಒತ್ತಡವು ಮೇಲಧಿಕಾರಿಗಳಿಂದ ಬರಲಿದೆ. ದೂರ ಪ್ರಯಾಣವನ್ನು ಮಾಡಲು ಬೇಕಾದ ತಯಾರಿಯ ಜೊತೆ ಹೊರಡಿ. ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ. ಸಹೋದರನಿಗೆ ಸಹಾಯವನ್ನು ಮಾಡುವ ಮನಸ್ಸು ಇರಲಿದೆ. ನಿಮ್ಮ ದ್ವಂದ್ವ ನೀತಿಯು ಮನೆಯವರಿಗೆ ಕಷ್ಟವಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ನೀವು ಸರಳತೆಯನ್ನು ರೂಢಿಸಿಕೊಳ್ಳುವುದು ಉತ್ತಮ. ಬೇಕಾದ ವಸ್ತುವನ್ನೇ ನೀವು ಯಾರಿಗಾದರೂ ಕೊಟ್ಟು ಕಳೆದುಕೊಳ್ಳುವಿರಿ.

ಕರ್ಕಾಟಕ ರಾಶಿ : ಯಾರಿಂದಲೂ ನಿಮಗೆ ಸುಲಭವಾಗಿ ಮೆಚ್ಚುಗೆ ಸಿಗದು. ನೀವು ಇಂದು ದೂರದ ಪ್ರಯಾಣವನ್ನು ಮಾಡಲು ಸಾಧ್ಯವಾಗದು. ಒಂದು ಕಡೆ ಹಣದ ವ್ಯವಹಾರವನ್ನು ಮುಕ್ತಾಯ ಮಾಡಿದರೆ ಮತ್ತೊಂದು ಕಡೆಗೆ ತೆರೆದುಕೊಳ್ಳುವುದು. ಸಂಗಾತಿಯ ಒತ್ತಾಯದ ಮೇರೆಗೆ ಹೊಸ ಉದ್ಯೋಗಕ್ಕೆ ಹೋಗುವ ಮನಸ್ಸು ಮಾಡುವಿರಿ. ವಿದ್ಯಾರ್ಥಿಗಳಿಗೆ ಮನಸ್ಸು ಚಂಚಲವಾಗಿದ್ದು ಗಂಭೀರವಾಗಿ ಇದನ್ನು ಪರಿಗಣಿಸಬೇಕಾದೀತು. ಸಮಾರಂಭಗಳಿಗೆ ಭೇಟಿ ನೀಡುವಿರಿ. ಹೂಡಿಕೆಯ ಹಣವು ಎಷ್ಟೋ ವರ್ಷಗಳ ಅನಂತರ ಸಿಗಲಿದ್ದು ನಿಮ್ಮ ಸರಿಯಾಗಿ ಉಪಯೋಗಕ್ಕೆ ಬರಲಿದೆ. ಉರಿಯುವ ಬೆಂಕಿಗೆ ತುಪ್ಪವನ್ನು ಹಾಕುವುದು ಬೇಡ. ಸುಲಭವಾದ ಕೆಲಸವನ್ನು ಸಂಕೀರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಸಂಗಾತಿಗಳು ಒಂದೆಡೆ ಕುಳಿತು ನಿಮ್ಮ ಮನಸ್ಸನ್ನು ಹಂಚಿಕೊಳ್ಳಿ. ನಿಮ್ಮ ಕರ್ತವ್ಯವನ್ನು ಮರೆಯದೇ ನಿಭಾಯಿಸಲು ಪ್ರಯತ್ನಿಸಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ನಿಮಗೇ ಗೊತ್ತಾಗದಂತೆ ಇಂದು ಹಣವು ಖರ್ಚಾಗವುದು.

ಸಿಂಹ ರಾಶಿ : ಇಂದು ನಿಮಗೆ ಸಕಲಾಕ್ಕೆ ಸಿಗುವ ಸಹಾಯದಿಂದ ಸಂತೋಷವಾಗವುದು. ಇನ್ನೊಬ್ಬರ ನೋವಿಗೆ ಸ್ಪಂದನೆ ಸರಿಯಾಗಿ ಇರಲಿ. ಸಾಮಾಜಿಕ ಗೌರವವು ನಿಮಗೆ ಸಿಗಲಿದ್ದು ಇದರಿಂದ ಅಹಂಕಾರವೂ ಬರಬಹುದು. ಪರಿಚಿತರ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವುದು ಸರಿಯಾಗದು. ಮಕ್ಕಳಿಗೆ ನಿಮ್ಮ ಪ್ರೀತಿಯ ಅವಶ್ಯಕತೆ ಇರಲಿದೆ. ಸಂಪತ್ತಿನ ಕಡೆ ಅಧಿಕವಾದ ಗಮನ ಇರಲಿದ್ದು ಸಂಬಂಧಗಳು ಸಡಿಲಾಗುವುದು. ನಿಮ್ಮ ಪ್ರತಿಭೆಯನ್ನು ತೋರಿಸುವ ಮನಸ್ಸು ಮಾಡುವಿರಿ. ಭೂಮಿಯ ಮೇಲೆ ಹೂಡಿಕೆ ಮಾಡುವ ನಿಮ್ಮ ಯೋಜನೆಗೆ ಪ್ರೋತ್ಸಾಹವು ಸಿಗಬಹುದು. ಉದ್ಯಮದಲ್ಲಿ ನಿಮಗೆ ಆದಾಯವು ಕಡಿಮೆ ಆಗಬಹುದು. ಒಪ್ಪಿಕೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮುಗಿಸಿ. ನಿಮ್ಮವರಿಗಾಗಿ ಕೆಲವನ್ನು ಕಳೆದುಕೊಳ್ಳಬೇಕಾಗುವುದು. ಸಮಸ್ಯೆಯನ್ನು ಸರಳ ಮಾಡಿಕೊಂಡು ಬಗೆಹರಿಸಿಕೊಳ್ಳಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಸಾಹಸ ಪ್ರವೃತ್ತಿ ಒಳ್ಳೆಯದಲ್ಲ.

ಕನ್ಯಾ ರಾಶಿ : ನಿಮ್ಮ ಹಸ್ತಕ್ಷೇಪವು ಇತರರಿಗೆ ಕಷ್ಟವಾದೀತು.‌ ನಿಮ್ಮ ಅತಿಯಾದ ಸಲುಗೆಯು ದ್ವೇಷಕ್ಕೆ ಕಾರಣವೂ ಆಗಬಹುದು. ಆರ್ಥಿಕ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಒತ್ತಡಗಳನ್ನು ಮರೆತು ಒಂದೆಡೆ ಇರುವುದು ಸುಖವೆನಿಸುವುದು. ಹೆಚ್ಚಿನ‌ ಒತ್ತಡವನ್ನು ಮಾಡಿಕೊಳ್ಳದೇ ಕೆಲಸವನ್ನು ಮುಗಿಸುವಿರಿ. ವಿದೇಶಪ್ರಯಾಣವನ್ನು ಹೆಚ್ಚು ಅನಂದದಿಂದ ಮಾಡುವಿರಿ. ಆತ್ಮಾವಲೋಕನದಿಂದ ನಿಮಗೆ ಬದಲವಾಣೆ ಬೇಕು ಎನಿಸಬಹುದು. ನಿಮ್ಮ ಭಾವನೆಗಳನ್ನು ಆಪ್ತರ ಜೊತೆ ಹಂಚಿಕೊಂಡು ಸಮಾಧಾನ ಪಡುವಿರಿ. ವಿವಾಹದ ಮಾತುಕತೆಗಳು ನಿಮಗೆ ಸಂತೋಷವನ್ನು ಕೊಡುವುದು. ಅನಪೇಕ್ಷಿತ ಸ್ಥಳದಲ್ಲಿ ನೀವು ಇರಲು ಬಯಸುವುದಿಲ್ಲ. ವಾತಸಂಬಂಧಿ ಖಾಯಿಲೆಯು ಹೆಚ್ಚಾಗಬಹುದು. ದಾನ ಮಾಡವ ಮನಸ್ಸಾಗಲಿದೆ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಖ್ಯಾತಿಯನ್ನು ಪಡೆಯುವ ಆಸೆಯಾಗುವುದು. ಹೋಲಿಕೆಯಿಂದ ಕೀಳರಿಮೆ‌ ನಿಮಗೆ ಬರಬಹುದು.

ತುಲಾ ರಾಶಿ : ದುಷ್ಟರ ಜೊತೆಗೂ ಒಂದು ರಾಜಿ ಮಾಡಿಕೊಳ್ಳಿ.‌ ಇಲ್ಲವಾದರೆ ನಿಮಗೆ ನೆಮ್ಮದಿ ಇರದು. ನಿಮ್ಮ ಪ್ರೇಮವು ಇತರರಿಗೆ ಗ್ರಾಸವಾಗಬಹುದು. ವಾಹನ ಖರೀದಿಸಲು ನಿಮಗೆ ಹಣಕಾಸಿನ ಸಹಾಯವು ಸಿಗಲಿದೆ. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ದಾಂಪತ್ಯದಲ್ಲಿ ಕಲಹವಿರಲಿದ್ದು ಮುಂದುವರಿಸುವುದು ಬೇಡ. ಹಗುರವಾದುದನ್ನು ಎತ್ತುವುದು ಸುಲಭ. ಭಾರವಾದುದನ್ನು ಇಟ್ಟುಕೊಳ್ಳುವುದು ಸುಲಭ. ಹೆಚ್ಚು ಪ್ರಯತ್ನದಿಂದ ಅಲ್ಪ ಲಾಭವಾಗಲಿದೆ‌. ಕೃಷಿಯಲ್ಲಿ ಇಂದು ನೀವು ಹೆಚ್ಚು ತೊಡಗಿಸಿಕೊಳ್ಳುವಿರಿ. ನೇರವಾದ ಮಾತಿನಿಂದ ಇತರರಿಗೆ ನೋವನ್ನು ಉಂಟುಮಾಡುವಿರಿ. ನಿಮ್ಮ ನಿಜವಾದ ಆಪ್ತರು ನಿಮಗೆ ಗೊತ್ತಾಗುವರು. ತಾಯಿಯ ಜೊತೆ ವಾಗ್ವಾದವನ್ನು ಮಾಡಲಿದ್ದೀರಿ. ಸುಳ್ಳನ್ನು ಹೇಳುವುದು ಗೊತ್ತಾದೀತು. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಯಾರಿಂದಲಾದರೂ ಅನನುಕೂಲತೆಯು ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ : ಇಂದು ಖರ್ಚು ಮಾಡುವ ಮೊದಲು ಏನು ಲಾಭವಿದೆ ಎಂಬ ಲೆಕ್ಕಾಚಾರದಲ್ಲಿ ಇರುವಿರಿ. ಇಂದು ಅಪರಿಚಿತ ಕರೆಗಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ದಾಂಪತ್ಯದಲ್ಲಿ ಪ್ರೀತಿಯು ಅಧಿಕವಾಗಿದ್ದು ಬಹಳ ಸಂತೋಷವನ್ನು ಅನುಭವಿಸುವಿರಿ. ಅಪರಿಚಿತರು ನಿಮ್ಮ ಮನೆಗೆ ಭೇಟಿಯಾಗಲಿದ್ದೀರಿ. ವೃತ್ತಿಯಲ್ಲಿ ನಿಮ್ಮ ಸಹಕಾರವು ಅಧಿಕವಾಗಿದ್ದು ಪ್ರಶಂಸೆಯು ಸಿಗಲಿದೆ. ಕಬ್ಬಿಣದಂತಹ ವಸ್ತುವೂ ಸಮಯ ಸರಿದಾಗ ರೂಪಾಂತರವಾಗುವುದು. ತಾಳ್ಮೆಯು ನಿಮ್ಮನ್ನು ರೂಪಾಂತರ ಮಾಡುವುದು. ಭವಿಷ್ಯದ ಬಗ್ಗೆ ಭಯಗೊಂಡಿದ್ದು ಮಾರ್ಗದರ್ಶನವನ್ನು ಪಡೆಯುವಿರಿ. ನಿಮ್ಮ ಬಗ್ಗೆ ದೂರು ಸಲ್ಲಿಸುವರು. ಯಾರದೋ ಮಾತು ನಿಮಗೆ ಹಿಂಸೆಯನ್ನು ತರಬಹುದು. ಕಳೆದುಹೋದ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲಿದ್ದೀರಿ. ಆಪ್ತರ ಮೇಲೆ‌ ಅಪನಂಬಿಕೆ ಇಟ್ಟು ಎಲ್ಲವೂ ಹಾಳಾಗುವುದು. ನೀವಾಡುವ ಮಾತುಗಳು ನಂಬಿಕೆ ಬರುವಂತಿರಲಿ. ನಿಮ್ಮ ದೃಷ್ಟಿಗೆ ದೋಷಬರಬಹುದು.

ಧನು ರಾಶಿ : ಇಂದು ನೀವು ಭಾವಪರವಶರಾಗುವ ಸಾಧ್ಯತೆ ಇದೆ. ನಿಮಗೆ ಇಷ್ಟವಿಲ್ಲದ ವಿಚಾರದಲ್ಲಿ ಚರ್ಚೆ ನಾಡೆಯುವುದು. ಪ್ರೀತಿ ಪಾತ್ರರನ್ನು ನೀವು ದೂರಮಾಡಿಕೊಳ್ಳುವಿರಿ. ನಿರಂತರ ಕೆಲಸವನ್ನು ಮಾಡದೇ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಭೂಮಿಯ ದಾಖಲೆಗಳನ್ನು ಸರಿಮಾಡಿಕೊಳ್ಳಲು ಶ್ರಮಿಸಬೇಕಾದೀತು. ನಿಮಗೆ ಮನ್ನಣೆ ಸಿಗದೇ ಇರುವುದಕ್ಕೆ ಸಿಟ್ಟಗುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಿಮುಖರಾಗುವ ಸಾಧ್ಯತೆ ಇದೆ. ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಅಪರೂಪದ ಸ್ಥಳಕ್ಕೆ ಹೋಗಲಿದ್ದೀರಿ. ಎಲ್ಲ ಸಂದರ್ಭದಲ್ಲಿ ನಿಮ್ಮ ವರ್ತನೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಹಣವನ್ನು ಕಳೆದುಕೊಳ್ಳಬಹುದು. ಸಂಗಾತಿಯ ಮೇಲೆ ಸಿಟ್ಟುಗೊಳ್ಳಲಿದ್ದೀರಿ. ಸಂಗಾತಿಯು ನಿಮ್ಮನ್ನು ಬೆರಗುಗೊಳಿಸಬಹುದು. ದೂರದ ಬಂಧುಗಳ ಸಮಾಗಮವಾಗಬಹುದು. ಬೇಡವೆಂದರೂ ಕೆಲವು ಮಾತನ್ನು ಆಡುವ ಸಂದರ್ಭವು ಬರುತ್ತದೆ. ನಿಮ್ಮ ಮೆಚ್ಚುಗೆಯನ್ನು ನಿರೀಕ್ಷಿಸಿಯಾರು.

ಮಕರ ರಾಶಿ : ಇಂದು ನಿಮ್ಮ‌ ಬಗ್ಗೆ ಬರುವ ಅಪವಾದವನ್ನು ನೀವು ಜೀರ್ಣಿಸಿಕೊಳ್ಳಲು ಕಷ್ಟವಾದೀತು. ಸಂಗಾತಿಯ ವಿಚಾರದಲ್ಲಿ ನಿಮಗೆ ಸಂಪೂರ್ಣ ತೃಪ್ತಿ ಇರದು. ಕೋಪ ಅಲ್ಪಾವಧಿಯಾದರು ಅದು ಹೆಚ್ಚು ಸಮಯವನ್ನು ಹಾಳುಮಾಡುವುದು.‌ ಪ್ರೇಮ ಸಂಬಂಧವು ಆಕರ್ಷಕವಾಗಿದ್ದರೂ ಬಹು ಕಾಲ ಉಳಿಯದು. ಇಂದು ನೀವು ಎದುರಾಳಿಯನ್ನು ಎದುರಿಸುವುದು ಕಷ್ಟವಾದೀತು. ವೃತ್ತಿಯಲ್ಲಿ ಖುಷಿಯಿಂದ ಈ ದಿನವನ್ನು ಕಳೆಯುವಿರಿ. ಅನ್ಯರಿಂದ ಅಪಹಾಸ್ಯಕ್ಕೆ ಒಳಗಾಗುವಿರಿ. ಅಪರಿಚಿತ ದೂರವಾಣಿ‌‌ ಕರೆಗಳು ನಿಮ್ಮನ್ನು ಮೋಸ ಮಾಡಬಹುದು. ಆಹಾರದ ವ್ಯಾಪಾರವನ್ನು ನೀವು ನಡೆಸುತ್ತಿದ್ದರೆ ಎಂದಿಗಿಂತ ಅಧಿಕ ಲಾಭವು ಆಗಬಹುದು. ಮಾತಗಳನ್ನು‌ ಇಂದು ಕಡಿಮೆ ಆಡಲಿದ್ದೀರಿ. ಅನಧಿಕೃತ ಮಾಹಿತಿಯನ್ನು ಹಂಚಿ ಎಲ್ಲರ‌ ಕೆಂಗಣ್ಣಿಗೆ ಗುರಿಯಾಗುವಿರಿ. ನಿಮ್ಮ ಮೇಲೆ ದೋಷಪೂರಿತ ಕಣ್ಣು ಬೀಳಬಹುದು. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು.

ಕುಂಭ ರಾಶಿ : ನೀವು ಉದ್ಯಮದಲ್ಲಿ ಅನಿರೀಕ್ಷಿತ ಬದಲಾವಣೆ ತರುವಿರಿ. ಅಪ್ತರ ಮೇಲಿನ ನಂಬಿಕೆಯು ನಷ್ಟವಾಗುವುದು. ನಿಮ್ಮ ಇಂದಿನ ಸಮಯ ಹಾಗೂ ಶಕ್ತಿಯು ಇತರರಿಗೆ ಮೀಸಲಾದೀತು. ನಿಮಗೆ ಸಂಬಂಧಪಡದ ವಿಚಾರದಲ್ಲಿ ತೊಡಗಿಸಿಕೊಳ್ಳಬೇಡಿ. ನಿಮ್ಮ ಸಂಗಾತಿಯ ಜೊತೆ ಇಂದು ಏನನ್ನೂ ಹಂಚಿಕೊಳ್ಳದೇ, ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.‌ ಸಂಗಾತಿಯ ಮಾತಗಳು ನಿಮಗೆ ಕಿರಿಕಿರಿ ಎನಿಸಿದರೂ ಮಾತನ್ನೇ ಅನುಸರಿಸುವಿರಿ. ಖರ್ಚಿನ ಮಾರ್ಗಗಳು ಒಂದೊಂದೇ ತೆರೆದುಕೊಂಡು ನಿಮಗೆ ಬೇಸರವನ್ನು ಉಂಟುಮಾಡಬಹುದು. ಹೊಸ ಯೋಜನೆಯನ್ನು ನೀವು ಇಂದು ಆರಂಭಿಸುವಿರಿ. ಬೆಂಬಲವು ಚೆನ್ನಾಗಿರಲಿದೆ. ನಿಮ್ಮನ್ನೇ ನೀವು ಪ್ರಶಂಸಿಸಿಕೊಳ್ಳುವಿರಿ. ಹಲವು ತೊಡಕುಗಳಿಂದ ನೀವು ಮುಕ್ತರಾಗಲು ಬಯಸುವಿರಿ. ನಿಮ್ಮ ಕೆಲಸವು ನ್ಯಾಯ ಸಮ್ಮತವಾಗಿ ಇರಿ. ನೀವು ಕಾಲ್ಪನಿಕ ಪ್ರಪಂಚಕ್ಕೆ ಪ್ರಯಾಣಿಸುವಿರಿ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ.

ಮೀನ ರಾಶಿ : ಮಕ್ಕಳ ಜೀವನವನ್ನು ಕಂಡು ಇಂದು ದುಃಖವಾಗಬಹುದು. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡಲಾಗದು. ತಪ್ಪು ಕೆಲಸದಿಂದ ಅಧಿಕಾರಿಗಳು ಗದರಿಸುವರು.‌ ನಿಮ್ಮಿಂದ ಸ್ವಲ್ಪ ಉದಾಸೀನತೆಯೂ ಸಮಸ್ಯೆಯನ್ನು ಹೆಚ್ಚಾಗುವಂತೆ ಮಾಡುವುದು. ನೀವು ಪ್ರೀತಿಯಿಂದ ನೋವನ್ನು ಅನುಭವಿಸಬಹುದು. ಸಹೋದ್ಯೋಗಿಗಳು ಇಂದಿನ ನಿಮ್ಮ ಕೆಲಸಗಳನ್ನು ಪೂರ್ಣಗೊಳಿಸಲು ಸಹಾಯ ಮಾಡಬಹುದು. ಏಕಾಗ್ರತೆಯಿಂದ ಮಾಡುವ ಕೆಲಸವನ್ನು ಮಾಡಲು ಕಷ್ಟವಾದೀತು. ಸಂಗಾತಿಯಿಂದ ನಿಮಗೆ ಸಲಹೆಯಂತೆ ಮುಂದುವರಿಯಿರಿ. ಆಗಬೇಕಾದ ಕೆಲಸಕ್ಕೆ ಇಂದಿನ ಸುತ್ತಾಟವು ವ್ಯರ್ಥವಾಗಲಿದೆ. ಮನೆಯ ನಿರ್ಮಾಣದ ಕಾರ್ಯವನ್ನು ಮಾಡುವುದು ಕಷ್ಟವಾಗಲಿದೆ. ಏಕಾಂತದಲ್ಲಿ ಇರಲು ಇಷ್ಟವಾಗುವುದು. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿರದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ.

-ಲೋಹಿತ ಹೆಬ್ಬಾರ್-8762924271 (what’s app only)

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​