Daily Horoscope 30 July 2024: ಕಾರ್ಯದ ಒತ್ತಡದಿಂದ ಸಂಗಾತಿಯ ಜೊತೆ ಜಗಳ ಮಾಡುವಿರಿ

ಜುಲೈ 30,​​ 2024ರ​​ ನಿಮ್ಮ ರಾಶಿಭವಿಷ್ಯ: ಯಾರ ಮೇಲೂ ದ್ವೇಷ ಬರುವಂತಹ ಕೆಲಸವನ್ನು ಮಾಡುವುದು ಬೇಡ. ಇಂದು ಅನಿರೀಕ್ಷಿತವಾಗಿ ವೈವಾಹಿಕ ಸಂಬಂಧವು ಕೂಡಿ ಬರಬಹುದು. ಬಂದ ಯೋಗವನ್ನು ಬಿಡುವುದು ಬೇಡ. ಇಂದು ಏನನ್ನೂ ಸಾಲವಾಗಿ ಕೊಡುವುದು ಬೇಡ. ಹಾಗಾದರೆ ಜುಲೈ 30ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 30 July 2024: ಕಾರ್ಯದ ಒತ್ತಡದಿಂದ ಸಂಗಾತಿಯ ಜೊತೆ ಜಗಳ ಮಾಡುವಿರಿ
ಕಾರ್ಯದ ಒತ್ತಡದಿಂದ ಸಂಗಾತಿಯ ಜೊತೆ ಜಗಳ ಮಾಡುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 30, 2024 | 12:02 AM

ಒಬ್ಬ ವ್ಯಕ್ತಿಯ ಹುಟ್ಟಿನ ಸಮಯದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನಗಳ ಆಧಾರದ ಮೇಲೆ ಭವಿಷ್ಯವೂ  (Horoscope) ನಿರ್ಧರಿಸಲಾಗುತ್ತದೆ. ಜ್ಯೋತಿಷ್ಯವು ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳು ಎಂದು ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ವೃದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 05:50 ರಿಂದ 05:26ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:28 ರಿಂದ 11:04ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:39ರಿಂದ 02:15ರ ವರೆಗೆ.

ಮೇಷ ರಾಶಿ: ಯಾರ ಬೆಂಬಲಕ್ಕೂ ನೀವು ಸುಮ್ಮನೇ ಇರಲಾರಿರಿ. ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ‌ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ಇಂದು ಹೊಸ ಕೆಲಸಕ್ಕಾಗಿ ಮಾಡಲಾಗುತ್ತಿರುವ ಪ್ರಯತ್ನಗಳು ಶುಭವಾಗಲಿದೆ. ಇಲ್ಲವಾದರೆ ನಷ್ಟವಾಗಬಹುದು. ಕೆಲಸ ಮತ್ತು ಖರ್ಚಿನ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳುವುದು ನಿಮಗೆ ಮುಖ್ಯ. ಹೇಳಿದ್ದನ್ನು ಪಾಲಿಸುವುದು ಅನಿವಾರ್ಯ ಹಾಗೂ ಕಷ್ಟ. ಮಾನಸಿಕ ಚಂಚಲತೆ ವಿಪರೀತವಾಗುವುದರಿಂದ ಅದನ್ನು ಹತೋಟಿಯಲ್ಲಿಡುವಿರಿ. ನೆರೆಹೊರೆಯವರ ಜೊತೆ ಸೌಹಾರ್ದವಿರಲಿ ಬಾಂಧವ್ಯವಿರಲಿ. ಯಾರದೋ ಉಪಕಾರಕ್ಕಾಗಿ ನೀವು ವೃಥಾ ತಿರುಗಾಡುವಿರಿ. ಬೇಡವೆನಿಸಿದ್ದನ್ನು ಯಾವ ಕಾಲಕ್ಕೂ ಪಡೆಯಲಾರಿರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ.

ವೃಷಭ ರಾಶಿ: ಅಪರಿಚಿತ ವ್ಯಕ್ತಿಗಳು ನಿಮಗೆ ಬಹಳ ಆಪ್ತರಾಗುವರು. ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಇಂದು ವ್ಯವಹಾರದಲ್ಲಿ ಲಾಭ ಪಡೆಯುತ್ತಾರೆ. ಹಳೆಯ ಸ್ನೇಹಿತರಿಂದ ನಿಮಗೆ ಸಹಾಯ ಸಿಗಲಿದೆ.‌ ಹಿರಿಯರ ಜೊತೆ ನಿಷ್ಠುರ ಏರ್ಪಡಬಹುದು. ನಿಮ್ಮ ಆರೋಗ್ಯದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ತೆಗೆದುಕೊಳ್ಳವುದು ಬೇಡ. ಸರ್ಕಾರಿ ನೌಕರರಿಗೆ ಅದರಲ್ಲೂ ಉನ್ನತಾಧಿಕಾರಿಗಳಿಗೆ ಪದೋನ್ನತಿ ಆಗಬಹುದುದು. ಸಮಕಾಲೀನವಾಗಿ ನೀವು ಬಹಳ ಹಿಂದಿರುವಿರಿ ಎಂದು ಗೊತ್ತಾಗುತ್ತದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನಿಮ್ಮನ್ನು ನೀವೇ ನೋಡಿಕೊಳ್ಳುವಿರಿ.

ಮಿಥುನ ರಾಶಿ: ಸಂಗಾತಿಯ ಜೊತೆ ಕಲಹದ ಕಾರಣ ಎಲ್ಲವೂ ಅಸ್ತವ್ಯಸ್ತ ಆಗಬಹುದು.‌ ಇಂದು ನಿಮಗೆ ಕುಟುಂಬ ಜೊತೆ ಸಲುಗೆಯಿಂದ ಕಾಲವನ್ನು ಕಳೆಯುವ ಮನಸ್ಸಿರುವುದು. ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ಈ‌ ಮೊದಲೇ ನೀವು ನಿಲ್ಲಿಸಿದ ಯಾ ಕೆಲಸವು ಇಂದು ಪೂರ್ಣವಾಗುವುದು. ಕಚೇರಿಯಲ್ಲಿ ನೀವು ಅಧೀನ ಕಾರ್ಮಿಕರಿಂದ ಒತ್ತಡವನ್ನು ಅನುಭವಿಸುವಿರಿ. ಸಣ್ಣ ಸಣ್ಣ ವಿಷಯಗಳನ್ನು ತಪ್ಪಿಸುವುದು ಒಳ್ಳೆಯದು. ಹಿತಶತ್ರುಗಳ ಮಾತನ್ನು ನಂಬಬೇಕಾದೀತು. ಸಾಧ್ಯವಾದಲ್ಲಿ ಪಾಲುದಾರಿಕೆಯ ಒಪ್ಪಂದವನ್ನು ರದ್ದು ಪಡಿಸಿಕೊಳ್ಳಿ. ಮುಂದೆ ನಿಮ್ಮ ಹಣಕ್ಕೆ ತೊಂದರೆ ಬರಲಿದೆ. ಭೂ ವ್ಯವಹಾರದಲ್ಲಿ ಕೈ ಹಾಕಲು ಹೋಗಲೇಬೇಡಿ. ಹಣವನ್ನು ಹೊಂದಿಸುವುದು ಇಂದು ಸುಲಭದ ಕೆಲಸವಲ್ಲ‌. ಅನ್ಯರ ಕಾರಣದಿಂದ ತಾಳ್ಮೆಯ ಕಟ್ಟೆ ಒಡೆಯಬಹುದು. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು. ದುಃಖಿಗಳಿಗೆ ನಿಮ್ಮಿಂದಾದ ಸಾಂತ್ವನ ಹೇಳಿ.

ಕಟಕ ರಾಶಿ: ಇಂದು ನೀವು ಹಣವನ್ನು ಖರ್ಚು ಮಾಡದೇ ಜಿಪುಣರಂತೆ ತೋರುವಿರಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಇಂದು ನಿಮ್ಮ ಮಾತಿನ ಮೃದುತ್ವವು ನಿಮ್ಮ ಗೌರವವನ್ನು ಹೆಚ್ಚಿಸುವುದು. ದುರಭ್ಯಾಸದಿಂದ ಗೊತ್ತಾಗದಂತೆ ಹಣವು ಖರ್ಚಾಗುವುದು. ಇಂದು ನಿಮ್ಮ ಸಹನೆಯ ಪರೀಕ್ಷೆಯೂ ಆಗಬಹುದು.‌ ಉತ್ತಮ ಫಲಿತಾಂಶ ಇದರಿಂದ ಹೊರಬರಲಿದೆ. ಸ್ನೇಹವನ್ನು ಬಲವಂತವಾಗಿ ಪಡೆದುಕೊಳ್ಳುವುದು ಬೇಡ. ಇನ್ನೊಬ್ಬರಿಗೆ ಕೊಟ್ಟ ಹಣವು ಸಕಾಲಕ್ಕೆ ಬಾದೆ ನೀವೇ ಸಾಲಗಾರರಾಗುವ ಪ್ರಸಂಗವು ಬಂದರೂ ಬಂದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸುವುದು ಬೇಡ. ಬೇಕಾದವರನ್ನು ಮಾತಿನಿಂದ ದೂರ ಮಾಡಿಕೊಳ್ಳುವಿರಿ. ನಿಮ್ಮ ಅತಿಯಾದ ಮಾತು ಕಿರಿಕಿರಿ‌ ಮಾಡೀತು. ಕಛೇರಿಯಲ್ಲಿ ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು.

ಸಿಂಹ ರಾಶಿ: ವಿದ್ಯಾಭ್ಯಾಸದಲ್ಲಿ ಪ್ರಗತಿಯ ಜೊತೆ ಶತ್ರುಗಳೂ ಉಂಟಾಗುವರು. ನಿಮ್ಮ ಮುಂಗೋಪವು ನಿಮ್ಮವರಿಗೆ ಮುಜುಗರವಾಗಬಹುದು. ಉದ್ಯೋಗದಿಂದ ಹೊರನಡೆಯುವ ಸಾಧ್ಯತೆ ಇದೆ. ಇಂದು ನೀವು ಜೀವನೋಪಾಯಕ್ಕೆ ತೋಚಿದ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮ ಕಾರ್ಯದ ವಿಳಂಬದಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ. ಹಿಡಿದ ಕಾರ್ಯವನ್ನು ಮುಗಿಸುವಂತಹ ಛಲಗಾರಿಕೆ ನಿಮಗೆ ಅವಶ್ಯಕ. ಇದು ನಿಮ್ಮ ಯಶಸ್ಸಿನ ಗುಟ್ಟೂ ಆಗಿದೆ. ಮಾತನಾಡುವ ಪೂರ್ವದಲ್ಲಿ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆಯೂ ಗಮನವಿರಲಿ. ಧನ ಮತ್ತು ಮಾನಗಳನ್ನು ಕಳೆದುಕೊಳ್ಳಬೇಕಾಗುವುದು. ಸ್ಥಾನವು ಕೈ ತಪ್ಪುವುದು ಎಂಬ ಭೀತಿ ಇರಲಿದೆ. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರಿಚಿತ ಸ್ಥಳದಿಂದ ಭೀತಿಯಾಗಬಹುದು. ಮಕ್ಕಳನ್ನು ನಯವಾಗಿ ಪರಿವರ್ತನೆ ಮಾಡುವುದು ಸೂಕ್ತ.

ಕನ್ಯಾ ರಾಶಿ: ಎಲ್ಲರಿಗೂ ನೀವು ಇಷ್ಟವಾಗುವಿರಿ. ಇಂದು ಸ್ನೇಹಿತರ ಒತ್ತಾಯಕ್ಕೆ ಮೋಜಿಗಾಗಿ ಹಣವನ್ನು ಹಾಕಿ ಕಳೆದುಕೊಳ್ಳುವಿರಿ. ಮನೆಯ ಬಗ್ಗೆ ನಿಮಗೆ ಒಲವು ಕಡಮೆಯಾದೀತು. ಸಮಯಕ್ಕೆ ಸರಿಯಾಗಿ ನಿಮ್ಮ ಜವಾಬ್ದಾರಿಯನ್ನು ಮುಗಿಸುವಿರಿ. ನಿಮ್ಮ ಶತ್ರುಗಳ ಸಂಖ್ಯೆಯು ಇಂದು ಹೆಚ್ಚಾಗಬಹುದು. ರಾಜಕೀಯದಲ್ಲಿ ತೊಡಗಿರುವ ಜನರಿಗೆ ಒಳ್ಳೆಯ ಅನುಕೂಲವಿರಲಿದೆ. ಹಣವಿಲ್ಲದಿದ್ದರೂ ಕೊರಗು ಇರದು. ಅದನ್ನು ನಿಯಂತ್ರಣ ಮಾಡುವ ಜಾಣ್ಮೆಯೂ ಇದೆ. ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗಿರಲಿದೆ. ಹಣದ ಅಪವ್ಯಯವು ಆಗದಂತೆ ನೋಡಿಕೊಳ್ಳಿ. ಮಾತಿನಲ್ಲಿ ಹಿಡಿತವಿದ್ದರೆ ನಿಮಗೆ ಇಂದು ಕ್ಷೇಮ. ಸಣ್ಣದಕ್ಕೂ ಸಂಗಾತಿಯ ಬೆಂಬಲವನ್ನು ಅಪೇಕ್ಷಿಸುವಿರಿ. ಹಿರಿಯರಿಗೆ ಕೊಡಬೇಕಾದ ಗೌರವವನ್ನು ಕೊಡಿ. ಹಳೆಯ ತಪ್ಪಿನಿಂದ ಪಾಠ ಕಲಿಯಬೇಕು. ಬೇಡದ ಜವಾಬ್ದಾರಿಯನ್ನು ಮೈಮೇಲೆ ಹಾಕಿಕೊಳ್ಳುವಿರಿ.

ತುಲಾ ರಾಶಿ: ಮೇಲಧಿಕಾರಿಗಳ ಕಿರುಕುಳವನ್ನು ಸಹಿಸುವುದು ಕಷ್ಟವಾಗುವುದು. ಇಂದು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ಇಂದು ಹಣದ ವಿಷಯದಲ್ಲಿ ಅನುಕೂಲವಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸುದ್ದಿಯು ಬರಲಿದೆ. ವ್ಯಾಪಾರದ ಲಾಭಕ್ಕೆ ಅಡ್ಡದಾರಿ ಹಿಡಿಯುವ ಸಂದರ್ಭ ಬರಲಿದೆ. ನೀವು ಸಾಕಷ್ಟು ವಿರೋಧಿಗಳನ್ನು ಹೊಂದಿದ್ದರೂ ನಿಮ್ಮನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ. ನಿಮ್ಮನ್ನು ವಿರೋಧಿಸುವವರನ್ನು ನೀವು ಇಷ್ಟಪಡಲಾರಿರಿ. ಸ್ನೇಹಿತನ ಭೇಟಿಯಿಂದ ಮನಸ್ಸು ತುಂಬಾ ಸಂತೋಷವಾಗುವುದು. ಅವರ ಎಲ್ಲಾ ಸಹಕಾರಗಳನ್ನು ತೆಗೆದುಕೊಳ್ಳಿ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಬಹುದು. ನಿಮ್ಮ ಅಧ್ಯಯನವು ಕಡಿಮೆಯಾಗಲಿದೆ. ಯಾರಾದರೂ ಮಾನಸಿಕವಾದ ಒತ್ತಡವನ್ನು ತರಿಸಬಹುದು. ನಿಮ್ಮ ನಿರ್ಧಾರವನ್ನು ಮತ್ತೊಬ್ಬರಿಗೆ ಹೇರಿ ಖುಷಿಪಡುವಿರಿ.

ವೃಶ್ಚಿಕ ರಾಶಿ: ಇಂದಿನ ಆದಾಯ ಕಡಿಮೆ ಇದ್ದರೂ ನೆಮ್ಮದಿ ಇರಲಿದೆ. ಇಂದು ನಿಮ್ಮ ಮಾತು ಕಡಿಮೆ ಇದ್ದಷ್ಟೂ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ ಇದೆ. ನಿಮ್ಮ ಹೂಡಿಕೆಯಿಂದ ವ್ಯರ್ಥ ಓಡಾಟವಾಗಬಹುದು. ಪುಣ್ಯ ಸ್ಥಳಗಳ ಭೇಟಿಯ ಭಾಗ್ಯ ಸಿಗುವುದು. ಆಸ್ತಿ ಖರೀದಿಗೆ ಕಾಲವು ಉತ್ತವವಾಗಿದ್ದರೂ ನಿಮಗೆ ಧೈರ್ಯವು ಸಾಲದೇ ಹೋದೀತು. ನಿಮಗೆ ಹಣದ ಸಹಾಯವು ತಾನಾಗಿಯೇ ಬರುವುದರಿಂದ ಇದ್ದ ಚಿಂತೆಯು ದೂರಾಗುವುದು. ಇದು ನಿಮ್ಮ ವ್ಯವಹಾರವನ್ನು ಇನ್ನಷ್ಟು ವಿಸ್ತರಿಸುತ್ತದೆ. ಯಾರನ್ನೋ ಅವಲಂಬಿಸಿ ನೀವು ಕೆಲಸ ಮಾಡುವುದು ಬೇಡ. ಯಾವುದೇ ಕೆಲಸಕ್ಕೆ ಬೇರೆಯವರ ಮೇಲೆ ಅವಲಂಬಿತರಾಗಬೇಡಿ. ಉದ್ಯಮವು ದಿಕ್ಕು ತಪ್ಪದಂತೆ ನೋಡಿಕೊಳ್ಳಿ. ಹೊರದೇಶಕ್ಕೆ ನೀವು ಹೋಗಬೇಕಾದ ಸ್ಥಿತಿಯು ಬರಬಹುದು. ಸ್ವ ಉದ್ಯೋಗ ನಿಮಗೆ ಹಿತವೆನಿಸುವುದು.

ಧನು ರಾಶಿ: ಯಾರ ಮೇಲೂ ದ್ವೇಷ ಬರುವಂತಹ ಕೆಲಸವನ್ನು ಮಾಡುವುದು ಬೇಡ. ಇಂದು ಅನಿರೀಕ್ಷಿತವಾಗಿ ವೈವಾಹಿಕ ಸಂಬಂಧವು ಕೂಡಿ ಬರಬಹುದು. ಬಂದ ಯೋಗವನ್ನು ಬಿಡುವುದು ಬೇಡ. ಇಂದು ಏನನ್ನೂ ಸಾಲವಾಗಿ ಕೊಡುವುದು ಬೇಡ. ಅಧಿಕ ಖರ್ಚೇ ನಿಮ್ಮ ಅಶಾಂತಿಗೆ ಕಾರಣವಾಗುವುದು. ಮನೆ ಸದಸ್ಯರ ಮಧ್ಯೆ ಮೂಡಿದ್ದ ಭಿನ್ನಾಭಿಪ್ರಾಯಗಳು ದೂರವಾಗಿ ಸೌಹಾರ್ದತೆ ಮೂಡಲಿದೆ. ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಹೋಗಿ. ದೂರ ಪ್ರಯಾಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಂಭವವಿದೆ. ಮತ್ತೊಬ್ಬರ ಜೊತೆ ವಿನಾಕಾರಣ ವಾಗ್ವಾದ ಬೇಡ. ಕೆಲಸದಲ್ಲಿ ಗಮನವಿರಲಿ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಲು ಹೋಗಬಹುದು. ಸ್ವಂತ ಬುದ್ಧಿಯಿಂದ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ವ್ಯಾಪಾರಕ್ಕೆ ಯೋಗ್ಯವಾದ ಮಾತು ಇರಲಿ. ನಿಮ್ಮ ಇಂದಿನ ಮಾತು ಕೇಳುಗರಿಗೆ ಹೃದ್ಯವಾಗುವುದು.

ಮಕರ ರಾಶಿ: ನೀವು ಇಂದು ದೇವರ ಮೇಲೆ‌ ಸಂಪೂರ್ಣ ಭಾರ ಹಾಕಿ ನಿಮ್ಮ ಕಾರ್ಯವನ್ನು ಆರಂಭಿಸುವಿರಿ. ನಿಮ್ಮ ಅತ್ಯುತ್ಸಾಹಕ್ಕೆ ದೇಹವು ಸಹಕರಿಸದೇ ಇರಬಹುದು. ಮಕ್ಕಳ ತುಂಟಾಟಕ್ಕೆ ಅವರಿಗೆ ಬೈದು ಅವರ ದ್ವೇಷಕ್ಕೆ ಕಾರಣರಾಗುವಿರಿ. ಇಂದು ಕಲೆಗೆ ಸಂಬಂಧಿಸಿ ಮಾಡುತ್ತಿರುವ ಸುಖಾಂತ್ಯವಾಗುವುದು. ಪಾಲುದಾರರ ಜೊತೆಗಿನ ಒಪ್ಪಂದವು ಅಂತ್ಯವಾಗಬಹುದು. ಧನಾಗಮನ ನಿರೀಕ್ಷೆಯಿಂದ ನೀವು ಸಾಲವನ್ನು ಪಡೆಯುವಿರಿ. ಕಛೇರಿಯಲ್ಲಿ ಸಹೋದ್ಯೋಗಿಯು ಕೊಡುವ ಎಲ್ಲ ಸಹಕಾರವನ್ನೂ ತೆಗೆದುಕೊಳ್ಳಿ. ನಿಮ್ಮ ತಾಯಿಯ ಕಡೆಯಿಂದ ಆರ್ಥಿಕ ಲಾಭವನ್ನು ಪಡೆಯುತ್ತಿರುವಿರಿ. ವಿದೇಶದಲ್ಲಿರುವ ಕುಟುಂಬದ ಸದಸ್ಯರಿಂದ ನಿಮಗೆ ಶುಭ ಸುದ್ದಿಯು ಬರುವುದು. ಉದ್ಯಮದಲ್ಲಿ ನಿಮಗೆ ಪ್ರಗತಿ ಕಾಣಿಸುವುದು. ಉಚಿತವಾದ ಸ್ಥಾನವು ಇಂದು ನಿಮಗೆ ಸಿಗಬಹುದು. ವಿಶ್ವಾಸ ಘಾತದಿಂದ ನಿಮಗೆ ಬೇಸರವಾಗುವುದು.

ಕುಂಭ ರಾಶಿ: ವಿವಾಹಕ್ಕೆ ಎದುರಾಗುವ ದೈವಿಕ‌ ಸಮಸ್ಯೆಯನ್ನು ಧಾರ್ಮಿಕ ಆಚರಣೆಗಳ ಮೂಲಕ ಸರಿ ಮಾಡಿಕೊಳ್ಳಬಹುದು. ಸಾಮಾಜಿಕ ಜಾಲತಾಣದಲ್ಲಿ ಸಮಯವನ್ನು ಹೆಚ್ಚು ಕಳೆಯಬಹುದು. ಇಂದು ಹಣಕಾಸಿನ ವಿಚಾರದಲ್ಲಿ ಮಾಡಿದ ಪ್ರಯತ್ನಗಳು ಸಫಲವಾಗುವುವು. ಕಲೆಗೆ ಸಂಬಂಧಿಸಿದವರಾಗಿದ್ದರೆ ದೂರದ ಊರಿಗೆ ಪ್ರಯಾಣ ಮಾಡುವಿರಿ. ಮರ್ಯಾದೆಯನ್ನು ಮೀರಿ‌ ನೀವು ವರ್ತಿಸುವುದು ಕಷ್ಟವಾಗುವುದು. ಚಾಡಿ ಮಾತುಗಳಿಗೆ ಕಿವಿ ಕೊಡಬೇಡಬುದು. ಕಿರಿಯರ ಜೊತೆ ಪ್ರೀತಿಯಿಂದ ವ್ಯವಹರಿಸಿ. ಅನವಶ್ಯಕ ವಸ್ತುಗಳನ್ನು ಖರೀದಿಸಿ ದಂಡ ಮಾಡುವಿರಿ. ನೀವು ನಿಮ್ಮ ಹಿರಿಯರ ಸಲಹೆಯನ್ನು ಅನುಸರಿಸಿದರೆ ಉತ್ತಮವಾದುದನ್ನು ಪಡೆಯುವಿರಿ. ದೇಹಕ್ಕೆ ಆಯುಧದಿಂದ ಘಾಸಿಯಾಗಬಹುದು. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು. ನಿಮ್ಮ ವಿರೋಧಿಗಳಲ್ಲಿ ಒಬ್ಬರು ನಿಮಗೆ ಕಿರುಕುಳ ನೀಡಲು ಪ್ರಯತ್ನಿಸಬಹುದು.

ಮೀನ ರಾಶಿ: ಇಂದು ನೀವು ಏಕಾಂತವಾಗಿ ಇರಲು ಆಗದು. ಯಾರದೋ ದ್ವೇಷಕ್ಕೆ ನೀವು ಬಲಿಯಾಗಬೇಕಾದೀತು. ಏನಾದರೂ ಅಡಚಣೆ ಇರುವುದು. ನಿಮ್ಮೊಳಗೆ ಅತೃಪ್ತಭಾವವು ಇರಲಿದೆ‌. ಇಂದು ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳಬಹುದು. ಇದು ನಿಮಗೆ ಬಹಳ ದಿನಗಳ ಅನಂತರದ ಸಂತೋಷ ನೀಡುವ ಸಂಗತಿಯಾಗಲಿದೆ. ಸಾಮರಸ್ಯವನ್ನು ಉಂಟುಮಾಡುವುದು ಸುಲಭದ ಕಾರ್ಯವಲ್ಲ. ನೀವು ಇಂದು ನಿಮ್ಮದೇ ಹೊಸ ಉದ್ಯೋಗವನ್ನು ಪ್ರಾರಂಭಿಸುವ ಯೋಚನೆ ಹುಟ್ಟಿಕೊಳ್ಳುವುದು. ಹಿರಿಯರಿಂದ ನಿಮಗೆ ಬರಬೇಕಾದ ಆಸ್ತಿಯು ಬರಬಹುದು. ದುಡುಕುತನ, ಮುಂಗೋಪಗಳೆಲ್ಲ ಕಡಿಮೆಯಾಗಲಿದೆ. ಸಹೋದರರು ನಿಮ್ಮ ಕಷ್ಟದಲ್ಲಿ ಭಾಗಿಯಾಗುವರು. ಯಾವದನ್ನೂ ಕ್ಷಣದಲ್ಲಿ ಬದಲಿಸಲಾಗದು. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ.

ಲೋಹಿತ ಹೆಬ್ಬಾರ್-8762924271 (what’s app only)

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ