Daily Horoscope 31 July 2024: ಸಲಹೆ ಕೊಡಲು ಹೋಗಿ ಅಪಮಾನವಾಗಬಹುದು

ಜುಲೈ 31,​​ 2024ರ​​ ನಿಮ್ಮ ರಾಶಿಭವಿಷ್ಯ: ಸಿಕ್ಕಿದಷ್ಟನ್ನೇ ಸ್ವೀಕರಿಸಿ ತೃಪ್ತಿಪಡಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎಲ್ಲರನ್ನೂ ಶಪಿಸುವ ಅವಶ್ಯಕತೆ ಇಲ್ಲ ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ಹಾಗಾದರೆ ಜುಲೈ 31ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 31 July 2024: ಸಲಹೆ ಕೊಡಲು ಹೋಗಿ ಅಪಮಾನವಾಗಬಹುದು
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 31, 2024 | 12:15 AM

ಜ್ಯೋತಿಷ್ಯವು ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳು ಎಂದು ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಧ್ರುವ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 14:14ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:53 ರಿಂದ 09:28ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 11:04ರಿಂದ 12:39ರ ವರೆಗೆ.

ಮೇಷ ರಾಶಿ : ಸಲಹೆಯನ್ನು ಉಚಿತವಾಗಿ ಕೊಡಲು ಹೋಗಿ ಅಪಮಾನವಾಗಬಹುದು. ಸಿಕ್ಕಿದಷ್ಟನ್ನೇ ಸ್ವೀಕರಿಸಿ ತೃಪ್ತಿಪಡಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎಲ್ಲರನ್ನೂ ಶಪಿಸುವ ಅವಶ್ಯಕತೆ ಇಲ್ಲ ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ವ್ಯವಹಾರಗಳಲ್ಲಿ ಮಾರುಕಟ್ಟೆ ವಿಸ್ತರಿಸಲು ಬಹಳ ಶ್ರಮಪಡುವಿರಿ. ಪ್ರತಿಭೆಯ ಅನಾವರಣವು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಎಲ್ಲ ವಿಚಾರಗಳಲ್ಲೂ ನಿಮ್ಮದೇ ಅಭಿಪ್ರಾಯ ಹೇಳುವುದಕ್ಕಿಂತ ಇತರರ ಅಭಿಪ್ರಾಯಗಳಿಗೂ ಬೆಲೆ ಕೊಡಿ. ಹೊಸ ನೀರು ಹರಿದು ಬರಬಹುದು. ಸ್ತ್ರೀರೋಗತಜ್ಞರಿಗೆ ಬೇಡಿಕೆ ಹೆಚ್ಚಾಗಿ ಸಂಪಾದನೆ ಅಧಿಕವಾಗಬಹುದು. ಯಾವುದೂ ಮಿತಿ ಮೀರದಂತೆ ನೋಡಿಕೊಳ್ಳಿ. ಕಳೆದ ಸಮಯವನ್ನು ನೀವು ಮೆಲುಕು ಹಾಕಿ ಸಮಯ ವ್ಯರ್ಥವಾಗಬಹುದು. ಕಲಾವಿದರು ಉತ್ತಮ‌ ಅವಕಾಶವನ್ನು ಅನಿರೀಕ್ಷಿತವಾಗಿ ಪಡೆಯುವಿರಿ. ಎಲ್ಲವನ್ನೂ ಆಸ್ವಾದಿಸುವ ಮನೋಭಾವ ಇರಲಿ.

ವೃಷಭ ರಾಶಿ : ಸಹೋದರರ ಭಿನ್ನಾಭಿಪ್ರಾಯವನ್ನು ಮೂರನೆಯವರು ಸರಿ ಮಾಡುವರು. ಇಂದಿನ ಕೆಲಸಗಳ ಯೋಜನೆ ಬಗ್ಗೆ ಸರಿಯಾದ ದೃಷ್ಟಿ ಇರಲಿ. ದೂರಪ್ರಯಾಣ ಸುಖಕರವಾಗಿ ಇರುವುದು.‌ ಇಂದು ನಿಮಗೆ ಒಡಹುಟ್ಟಿದವರು ಸಾಕಷ್ಟು ವಿರೋಧವನ್ನು ಮಾಡಿಯಾರು. ಖರ್ಚಿಗೆ ತಕ್ಕಂತೆ ಆದಾಯವೂ ಬರುವುದರಿಂದ ಆರ್ಥಿಕ ಸ್ಥಿತಿಯು ಸಮತೋಲನದಲ್ಲಿ ಇರವುದು. ಕೆಲಸದಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ಹಿರಿಯರ ಆರೋಗ್ಯ ಸಮಸ್ಯೆಗಳು ಸರಿಯಾಗಬಹುದು. ನಿಮ್ಮವರನ್ನು ಸತ್ಕಾರ್ಯಕ್ಕೆ ಮನವೊಲಿಸಲು ಶ್ರಮಪಡಬೇಕಾದೀತು. ಸ್ಥಿರಾಸ್ತಿಗೆ ಸಂಬಂಧಿಸಿದ ಸರ್ಕಾರಿ ಕಾನೂನು ತೊಡಕುಗಳು ಇಂದು ನಿವಾರಣೆಯಾಗುವುದು. ಸ್ಪರ್ಧಾತ್ಮಕ ವಿಚಾರದಲ್ಲಿ ಹಿಂದುಳಿಯಬೇಕಾಗುವುದು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ. ಹೊಸ ಉಪಕ್ರಮಗಳು ನಿಮಗೆ ಯಶಸ್ಸು ಕೊಡುವುದು.

ಮಿಥುನ ರಾಶಿ : ನಿಮ್ಮ ಮೇಲೆ ಹೆಚ್ಚಿನ ಕಣ್ಣು ಇರುವ ಕಾರಣ ಬಹಳ ಜಾಗರೂಕತೆ ಅವಶ್ಯಕ. ಎಲ್ಲ ಕೆಲಸವನ್ನೂ ಬೇರೆಯವರೇ ಮಾಡಲಿ ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಭೂಮಿಯ ವ್ಯವಹಾರದವರಿಗೆ ನಂಬಿಕೆ ದ್ರೋಹ ಆಗಬಹುದು. ದಾಂಪತ್ಯದಲ್ಲಿ ಅನ್ಯೋನ್ಯತೆ ಮೂಡುವುದು ಕಷ್ಟವಾದೀತು. ಕೋಪವನ್ನು ನಿಯಂತ್ರಿಸುವುದು ಅವಶ್ಯಕ. ಇಲ್ಲವಾದರೆ ಕೆಟ್ಟ ಹೆಸರನ್ನು ಪಡೆಯಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಗೆ ಹುದ್ದೆ ದೊರೆಯುವುದು. ನೀವು ಪ್ರೇಮದಲ್ಲಿ ಬಿದ್ದುದರಿಂದ ಹಿರಿಯರು ನಿಮ್ಮ ಪ್ರೀತಿಗೆ ಒಪ್ಪಿಗೆ ನೀಡುವರು. ವೃತ್ತಿಯಲ್ಲಿ ಬಹಳ ಜಾಣ್ಮೆಯಿಂದ ಕೆಲಸವನ್ನು ಮಾಡುವಿರಿ. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಚಿಂತನೆಯ ಜೊತೆ ನಿಮ್ಮ ಮುಂದಿನ ಹೆಜ್ಜೆ ಇರಲಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ. ಸಂಗಾತಿಯ ಮನೋರಥವನ್ನು ಇಂದು ನೀವು ಈಡೇರಿಸುವುದು ಕಷ್ಟವಾಗುವುದು.

ಕಟಕ ರಾಶಿ : ಭಿನ್ನಮತವನ್ನು ನೀವು ಇಂದೇ ಉಪಶಮನ ಮಾಡಿಕೊಳ್ಳುವುದು ಉತ್ತಮ. ಭೂಮಿಯ ಉತ್ಪನ್ನದ ವ್ಯವಹಾರವು ಬಹಳ ಚೆನ್ನಾಗಿ ಆಗಬಹುದು. ಸರ್ಕಾರದಿಂದ ಬರಬೇಕಾದ ಹಣವು ಬಂದು ಸಾಲದಿಂದ ನೀವು ಮುಕ್ತವಾಗುವಿರಿ. ಯಾವುದೇ ದುರಭ್ಯಾಸವು ನಿಮಗೆ ಕೆಟ್ಟ ಹೆಸರನ್ನು ತರಬಹುದು. ಸಾಹಸಪ್ರಿಯರಿಗೆ ಹೊಸ ವಿಚಾರಗಳು ಬರಬಹುದು. ಇಂದು ನಿಮ್ಮ ಹಣದ ಒಳಹರಿವು ತೃಪ್ತಿಕರವಾಗಿರುತ್ತದೆ. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶ ಸಿಗಬಹುದು. ವ್ಯಾಪಾರದಲ್ಲಿ ಚೇತರಿಕೆ ಕಂಡು ಸಂತಸವಾಗುವುದು. ನಿಮ್ಮ ಕಾರ್ಯಕ್ಷಮತೆಯನ್ನು ಸಂಸ್ಥೆಯು ಪ್ರಶಂಸಿಸುವುದು.‌ ಯಾರೋ ಮಾಡಿದ ತಪ್ಪಿಗೆ ನಿಮಗೆ ಶಿಕ್ಷೆಯಾಗಬಹುದು. ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಯಾರಾದರೂ ತಪ್ಪು ತಿಳಿದಾರು ಎಂಬ ಭಾವವು ನಿಮ್ಮನ್ನು ಕಾಡಬಹುದು. ಪ್ರಾಣಿಗಳ ಮೇಲೆ ಅಪಾರ ದಯೆ ಬರಬಹುದು.

ಸಿಂಹ ರಾಶಿ : ಪುಣ್ಯ ಸ್ಥಳಗಳ ದರ್ಶನದಿಂದ ನಿಮಗೆ ಮಾನಸಿಕ ಅಶಾಂತಿ ದೂರಾಗುವುದು. ಸ್ನೇಹಿತರಿಗೆ ಮಾಡಿದ ಸಹಾಯದಿಂದ ನಿಮಗೆ ಅನುಕೂಲವಗಲಿದೆ. ಉನ್ನತ ಅಧಿಕಾರಿಗಳಿಗೆ ಮುಂಬಡ್ತಿ ದೊರೆಯುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ಅವಸರ ಬೇಡ. ಖರ್ಚನ್ನು ನಿಭಾಯಿಸುವುದು ನಿಮಗೆ ಬಹಳ ಕಷ್ಟವಾದೀತು. ನಿಮ್ಮ ಉಪಕಾರವೇ ನಿಮಗೆ ಹಿಂದಿರುಗಿ ಬರಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚು ಶ್ರದ್ಧೆಯು ಬರಬಹುದು. ನಿಮ್ಮನ್ನು ಕಛೇರಿಯಲ್ಲಿ ಗಮನಿಸಬಹುದು. ಹಾಗಾಗಿ ಸಣ್ಣ ನಡೆಯೂ ದೊಡ್ಡ ಸುದ್ದಿಗೆ ಕಾರಣವಾಗಬಹುದು. ಏಕಾಂತವು ನಿಮಗೆ ಹಿತವೆನಿಸಬಹುದು. ಯಾರಾದರೂ ನಿಮ್ಮನ್ನು ತೆಗಳಿದರೆ ಅದನ್ನು ನೀವು ಸಕಾರಾತ್ಮಕವಾಗಿ ಸ್ವೀಕರಿಸಿ. ಬಂಧುಗಳ ಚರಾಸ್ತಿಯು ಸಿಗಬಹುದು. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ ಕಾರಣ ಸಿಟ್ಟಾಗಬಹುದು. ಆದಾಯದ ಮೂಲಗಳು ಹೆಚ್ಚಾಗುವುದು.‌ ನಂಬಿದವರಿಗೆ ಬೇಕಾದ ವ್ಯವಸ್ಥೆ ಮಾಡುವಿರಿ.

ಕನ್ಯಾ ರಾಶಿ : ಇಂದು ಮಹಿಳೆಯರಿಗೆ ವೃತ್ತಿಯಲ್ಲಿ ಕಿರಿಕಿರಿ ಉಂಟಾಗಲಿದೆ. ಇಂದಿನ ನಿಮ್ಮ ಕೋಪವನ್ನು ಶಾಂತ ಮಾಡಲು ಸಂಗಾತಿಯು ಶ್ರಮಪಡಬಹುದು. ನಿಮ್ಮ ಮನಸ್ಸು ಅತಿ ಚಾಂಚಲ್ಯದಿಂದ ಇರಲಿದ್ದು, ಕೆಲಸವು ಹಾಳಾಗಬಹುದು. ಮಹಿಳೆಯರು ಸಕಾರಾತ್ಮಕ ಚಿಂತನೆಯತ್ತ ಗಮನಕೊಡುವುದು ಉತ್ತಮ. ಆದಾಯವು ನಿರೀಕ್ಷಿತ ಮಟ್ಟದಲ್ಲಿದ್ದು ಖರ್ಚು ಇನ್ನೂ ಅಧಿಕವಾಗಬಹುದು. ವಾಹನ ಖರೀದಿಯ ಬಗ್ಗೆ ನಿಮಗೆ ಪೂರ್ಣ ತೃಪ್ತಿ ಇರದು. ಕೃಷಿ ಸಂಬಂಧಿಸಿದ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆಯಾಗಬಹುದು. ಸರ್ಕಾರಿ ಉದ್ಯೋಗಿಗಳಿಗೆ ಹೆಚ್ಚಿನ ಹುದ್ದೆಯನ್ನು ನೀಡುವ ಪ್ರಸ್ತಾಪವೂ ಬರಬಹುದು. ಅತಿಯಾದ ಆಡಂಬರವು ಇತರ ಕಣ್ಣು ಕುಕ್ಕುವುದು. ಇನ್ನೊಬ್ಬರ ಅಹಂಕಾರಕ್ಕೆ ಸೊಪ್ಪು ಹಾಕುವುದು ಬೇಡ. ನಿರ್ಲಕ್ಷ್ಯದಿಂದ ಎಲ್ಲವೂ ಸಾಧ್ಯ. ಹೂಡಿಕೆಯ ವಿಚಾರವಾಗಿ ದೀರ್ಘ ಚರ್ಚೆ ಮಾಡುವಿರಿ.

ತುಲಾ ರಾಶಿ : ನಿಮ್ಮ ಕ್ಷಣಿಕ ಕೋಪವೇ ಎಲ್ಲರ ಕೆಂಗಣ್ಣಿಗೆ ಗುರಿಯಾಗುವುದು. ಇಂದು ನಿಮ್ಮ ಸಮಾಜಮುಖೀ ಕಾರ್ಯಗಳಿಗೆ ಗೌರವ, ಪ್ರಶಂಸೆಗಳು ಸಿಗಲಿವೆ. ನೆರೆ-ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಿ. ನಿಮ್ಮ ಕಾರ್ಯಕ್ಕೆ ವಿದೇಶದಿಂದ ಕರೆ ಬರಬಹುದು. ಸ್ನೇಹಿತರ ಜೊತೆ ವ್ಯವಹಾರ ಮಾಡುವಾಗ ಅಪನಂಬಿಕೆಗಳು ಬಾರದಂತೆ ಎಚ್ಚರವಹಿಸಿರಿ. ಸ್ವಂತ ವ್ಯವಹಾರದಲ್ಲಿ ನಷ್ಟವಾಗಬಹುದು. ನಿಮ್ಮವರನ್ನು ಕೆಳಗೆ ಬೀಳಲು ಕೊಡಲಾರಿರಿ. ನೌಕರರಿಗೆ ಹೆಚ್ಚು ಒತ್ತಡವಾಗಬಹುದು. ಕೃಷಿಯು ನಿಮಗೆ ಆಸಕ್ತಿಯ ವಿಷಯವಾಗಿದ್ದು ತೊಡಗಿಕೊಳ್ಳಲು ತೊಡಕುಗಳು ಇರಲಿದೆ. ನೀವು ತೆರಿಗೆಯ ವಿಚಾರದಲ್ಲಿ ಸರಿಯಾಗಿ ಇರಬೇಕಾಗಬಹುದು. ಹಿರಿಯರ ಮಾತನ್ನು ತಾತ್ಸಾರ ಮಾಡುವುದು ಬೇಡ. ಮಾತನ್ನು ಕಡಿಮೆ ಮಾಡಿ ಕಾರ್ಯದಲ್ಲಿ ತೋರಿಸಿ. ಅನಪೇಕ್ಷಿತ ವಿಚಾರದ ಬಗ್ಗೆ ಚರ್ಚೆ ಮಾಡಿ ಕಾಲಹರಣವಾಗುವುದು.

ವೃಶ್ಚಿಕ ರಾಶಿ : ನಿಮ್ಮ ಹೆಸರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ನೀವು ಅಂದುಕೊಂಡಿದ್ದು ಮಾತ್ರ ಸತ್ಯವಾಗಲಾರದು. ಅದಕ್ಕಿರುವ ಮುಖವನ್ನು ಗಮನಿಸಿ ತೀರ್ಮಾನಿಸಿ. ಸಾಲವಾಧೆ ಎದುರಾಗಲಿದ್ದು ಸಮಸ್ಯೆಯನ್ನು ಧೈರ್ಯದಿಂದ ನಿರ್ವಹಿಸಬೇಕಾಗುವುದು. ಉದ್ಯಮಕ್ಕೆ ಆರ್ಥಿಕ ನೆರವು ಸಿಗಲಿದೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿದ್ದು ಒಪ್ಪಿಕೊಳ್ಳುವಿರಿ. ಪ್ರಭಾವಶಾಲಿ ವ್ಯಕ್ತಿಯ ಭೇಟಿಯಾಗುವುದು. ವಿದ್ಯಾಭ್ಯಾಸದ ಓದಿನಲ್ಲಿ ಆಸಕ್ತಿ ಹೆಚ್ಚಾಗಬಹುದು.‌ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುವಿರಿ. ಹಿರಿಯರಿಂದ ನಿಮ್ಮ ಕುಟುಂಬದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವುದು. ನಿಮ್ಮವರ ಮೇಲೆ ಬೇಸರವನ್ನು ವ್ಯಕ್ತಪಡಿಸುವಿರಿ. ಆಪ್ತರ ವಿಯೋಗವು ನಿಮ್ಮನ್ನು ಕುಗ್ಗಿಸಬಹುದು. ಅಧಿಕಾರದ ಬಗ್ಗೆ ವ್ಯಾಮೋಹವು ಕಡಿಮೆಯಾಗುವುದು. ನೀವು ಕಷ್ಟದಲ್ಲಿ ಸುಖವನ್ನು ಕಾಣುವ ಮಾರ್ಗವನ್ನು ಹುಡುಕಿಕೊಳ್ಳುವಿರಿ. ಕಳೆದಕೊಂಡ ನಿಮ್ಮ ವಸ್ತುವನ್ನು ಮತ್ತಾರದೋ ಮೂಲಕ ಪಡೆದುಕೊಳ್ಳುವಿರಿ.

ಧನು ರಾಶಿ : ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿ. ಅಲ್ಪರ ಸಂಗದಿಂದ ಸ್ವಾಭಿಮಾನ ಧಕ್ಕೆ ಬರುವುದು. ಮುಜುಗರವನ್ನು ಎದುರಿಸಬೇಕಾಗಬಹುದು. ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಪ್ರಾಮಾಣಿಕತೆಯಿಂದ ಯಶಸ್ಸು ಸಿಗಲಿದೆ. ಕೆಲಸದ ಮಧ್ಯದಲ್ಲಿಯೂ ಕುಟುಂಬದ ಆಗು ಹೋಗುಗಳತ್ತ ಗಮನಹರಿಸುವಿರಿ. ನಿಸ್ವಾರ್ಥಿಗಳಂತೆ ಕಂಡರೂ ವಂಚನೆಯ ಬುದ್ಧಿಯನ್ನು ಬೆಳೆಸಿಕೊಳ್ಳುವಿರಿ. ಹಳೆಯ ಸ್ನೇಹಿತರ ಜೊತೆ ಕಾಲ ಕಳೆಯುವಿರಿ. ಲೆಕ್ಕ ಪತ್ರಗಳನ್ನು ಪರಿಶೀಲನೆ ಮಾಡುವವರಿಗೆ ಹೆಚ್ಚು ಕೆಲಸ ದೊರೆಯುತ್ತದೆ. ಎಲ್ಲ ಕೆಲಸಗಳೂ ಏಕಕಾಲಕ್ಕೆ ಬರಬಹುದು. ನಿಮ್ಮ ಮೇಲಿನ ಭರವಸೆಯು ಸುಳ್ಳಾಗದೇ ಇರಲಿದೆ. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು. ನಿಮ್ಮ ಮಾತಿಗೆ ಬೆಂಬಲವಿರುವುದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ಶತ್ರುಗಳ ಹುನ್ನಾರದಲ್ಲಿ ಸಿಕ್ಕಿಬೀಳುವಿರಿ.

ಮಕರ ರಾಶಿ : ಮಿತ್ರರ ಜೊತೆ ಮನಸ್ತಾಪ ಏರ್ಪಡುವುದು. ಮೇಲಧಿಕಾರಿಗಳ ಮಾತನ್ನು ಲಘುವಾಗಿ ತೆಗೆದುಕೊಂಡು ಕೆಂಗಣ್ಣಿಗೆ ಗುರಿಯಾಗುವಿರಿ. ಕಾರ್ಯದ ಒತ್ತಡ ನಿಮ್ಮನ್ನು ಇಂದು ಬಂಧಿಸಿ ಇಡಲಿದೆ. ಹೊಸ ಕಾರ್ಯಗಳಿಗೆ ನೀವು ತರಬೇತಿ ಪಡೆಯುವಿರಿ. ಹೆಚ್ಚು ಜನರ ಸಂಪರ್ಕ ಮಾಡಬೇಕಾದ ಅನಿವಾರ್ಯತೆ ಬರಬಹುದು. ಧನ ಆದಾಯವು ನಿಮ್ಮ ನಿರೀಕ್ಷೆಯನ್ನು ತಲುಪಬಹುದು. ಸ್ನೇಹಿತರ ತಪ್ಪು ನಿಮ್ಮ ಮೇಲೆ ಬರಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರು ಉತ್ತಮ‌ ಫಲಿತಾಂಶವನ್ನು ಪಡೆಯಬಹುದು. ವೃತ್ತಪರರಿಗೆ ಸಮಯಕ್ಕೆ ಸರಿಯಾಗಿ ಆಗಬೇಕಾದ ಕಾರ್ಯವು ಆಗದು. ಸಂಶೋಧನೆಯಲ್ಲಿ ಹೊಸ ಮಾರ್ಗವು ಕಾಣಿಸಿಕೊಳ್ಳುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ಮನೋಬಲವನ್ನು ಹೆಚ್ಚು ಮಾಡಿಕೊಳ್ಳಿ.

ಕುಂಭ ರಾಶಿ : ಬೇಡದ ವಿಚಾರದ ಬಗ್ಗೆ ಚರ್ಚೆಗಳು ನಡೆಯಲಿವೆ. ಇಂದು ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ ಎನಿಸಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಆರಂಭಿಸಿದ ಕಾರ್ಯಗಳಲ್ಲಿ ಸಫಲತೆ ಸಿಗಲಿದೆ. ಹಳೆಯ ಸಾಲಗಳನ್ನು ತೀರಿಸಿ ನೆಮ್ಮದಿಯಿಂದ ಇರುವಿರಿ.‌ ಆರ್ಥಿಕತೆಯ ಗೊಂದಲಕ್ಕೆ ಪರಿಹಾರ ದೊರೆಯುವುದು. ಸಂಗಾತಿಯ ಆದಾಯವನ್ನು ನೀವು ಪಡೆಯಬಯಸುವಿರಿ. ನೂತನ ವಾಹನವನ್ನು ಖರೀದಿಸುವಿರಿ.‌ ಹೆಚ್ಚಿನ ಆದಾಯಕ್ಕೆ ವೃತ್ತಿಯನ್ನು ಬದಲಿಸುವಿರಿ. ಸಮಯಕ್ಕೆ ಸರಿಯಾಗಿ ನಿದ್ರೆಯ ಅವಶ್ಯಕತೆ ಇರಲಿದೆ. ನಿಮ್ಮ ಜಾಣತನವೇ ನಿಮಗೆ ವರವಾಗಲಿದೆ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಕಾರ್ಯದ ಪರಿಣತಿಯಿಂದ ನಿಮಗೆ ಉನ್ನತ ಸ್ಥಾನ ಮಾನ ಪ್ರಾಪ್ತಿ.

ಮೀನ ರಾಶಿ : ದೇವರಲ್ಲಿ ಭಕ್ತಿಯ ಕೊತರೆ ಕಾಣಿಸುವುದು. ನಿಮ್ಮ ಸಂಕೋಚದ ಸ್ವಭಾವದಿಂದ ಹೇಳಬೇಕಾದ ವಿಚಾರವನ್ನು ಹೇಳದೇ ಸುಮ್ಮನಾಗುವಿರಿ.‌ ಉದ್ಯಮದ ಸೃಷ್ಟಿಗೆ ಬೇಕಾದ ಬಂಡವಾಳವು ಸಿಗಲಿದೆ. ಇಂದು ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಹೊಸ ಜೀವನ ಶೈಲಿಗೆ ಒಗ್ಗಿಕೊಳ್ಳುವುದು ಕಷ್ಟವಾಗಬಹುದು.‌ ಮನಸ್ಸನ್ನು ನಿಯಂತ್ರಿಸಲು ನಿಮಗೆ ಕಷ್ಟವಾದೀತು. ಭೂ ಲಾಭಕ್ಕಾಗಿ ಅನ್ಯ ಮಾರ್ಗವನ್ನು ಹಿಡಿಯುವಿರಿ. ಲೆಕ್ಕಪತ್ರಗಳನ್ನು ಸರಿಯಾಗಿ ಇಡಿ. ಸಾಮಾಜಿಕ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮವರ ಬಗ್ಗೆ ನಿಮಗೆ ಪ್ರೀತಿ ಬರಬಹುದು. ಉದ್ಯೋಗದಲ್ಲಿ ನಿಮಗೆ ಹೆಚ್ಚಿನ ಅನುಕೂಲತೆಗಳು ಉಂಟಾಗಬಹುದು. ಮನಸ್ಸು ಹಾಳಾಗುವ ಸಾಧ್ಯತೆ ಇದೆ. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಷ್ಟವಿಲ್ಲದಿದ್ದರೂ ನೀವು ಹಿರಿಯರ ಮಾತನ್ನು ಕೇಳಬೇಕಾಗುವುದು.

-ಲೋಹಿತ ಹೆಬ್ಬಾರ್-8762924271 (what’s app only)

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ