AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

Daily Horoscope, 30 March 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ತ್ರಯೋದಶೀ ತಿಥಿಯ ಮಂಗಳವಾರದಂದು ನಿಷ್ಪಕ್ಷಪಾತ ಮಾತು, ಹಳೆಯ ಶತ್ರುಗಳಿಂದ ಜಯ, ಸ್ಪರ್ಧೆಯಲ್ಲಿ ತೊಡಗುವಿಕೆ, ಅಪಾಯದ ಸೂಚನೆ, ವೈಯಕ್ತಿಕ ದ್ವೇಷ ಇವೆಲ್ಲ ಈ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು
ಸಾಂದರ್ಭಿಕಚಿತ್ರ Image Credit source: Google
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Mar 31, 2026 | 2:12 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:32 – 17:04, ಯಮಗಂಡ ಕಾಲ 09:25 – 10:57, ಗುಳಿಕ ಕಾಲ 12:29 – 14:00

ಮೇಷ ರಾಶಿ :

ನಿಮ್ಮ ನಡವಳಿಕೆಯು ನಿಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯುವುದು. ಕಛೇರಿಯ ಕೆಲಸಗಳನ್ನು ಯಾವುದೇ ನಿರ್ಬಂಧವಿಲ್ಲದೇ ಮಾಡುವಿರಿ. ಹೂಡಿಕೆಯ ವಿಚಾರವಾಗಿ ಚರ್ಚಿಸುವಿರಿ. ಹಳೆಯ ಪ್ರೇಮಿಗಳ ಅನಿರೀಕ್ಷಿತ ಭೇಟಿ, ಮನದೊಳಗೆ ಆನಂದ. ಸಹಾಯ ಮಾಡಲು ಹೋಗಿ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ಜಾಣ್ಮೆಯ ವ್ಯವಹಾರದಿಂದ ಇಂದು ವ್ಯಾಪಾರದಲ್ಲಿ ಲಾಭ ಪಡೆಯುವಿರಿ. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ದುರ್ವ್ಯಸನವು ನಿಮ್ಮನ್ನು ಅಂಟಿಕೊಳ್ಳಬಹುದು.

ವೃಷಭ ರಾಶಿ :

ವೈವಾಹಿಕ ಸುಖವು ಕ್ಷೀಣಿಸಬಹುದು. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ಬಂಧುಗಳು ನಿಮ್ಮ ಕಷ್ಟಕ್ಕೆ ನೆರವಾಗುವರು. ಹೊಸ ಪರಿಚಯದಲ್ಲಿ ಆತ್ಮೀಯತೆ ಬೆಳೆಯುವುದು. ಅತಿಯಾದ ಆಸೆಯಿಂದಾಗಿ ದುಃಖಿಸಬೇಕಾದೀತು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ. ಪೂರ್ವಪುಣ್ಯವು‌ ನಿಮ್ಮನ್ನು ಕಾಪಾಡಲಿದೆ.

ಮಿಥುನ ರಾಶಿ :

ಉದ್ಯಮವನ್ನು ಚುರುಕುಗೊಳಿಸುವ ಅಗತ್ಯವಿದೆ. ನಿಮ್ಮ ವ್ಯಕ್ತಿತ್ವ ಮತ್ತು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಕಿವಿಯಲ್ಲಿ ದೋಷ ಕಾಣಿಸುವುದು. ಆದಾಯದ ಮೂಲಗಳೂ ಬಲಗೊಳ್ಳುತ್ತವೆ. ಇಂದು ನೀವು ಅನುಭವಸ್ಥರ ಮಾರ್ಗದರ್ಶನವನ್ನು ತೆಗೆದುಕೊಳ್ಳಬೇಕು. ಸೃಜನಾತ್ಮಕ ಕೆಲಸದಿಂದ ಹೆಚ್ಚಿನ ಯಶಸ್ಸನ್ನು ಸಾಧಿಸುವಿರಿ. ಸಂಗಾತಿಗಳಿಬ್ಬರೂ ದೂರಾಗುವ ಯೋಚನೆ ಮಾಡಬಹುದು. ನಿಮ್ಮ ಮಾತು ನಿಷ್ಪಕ್ಷಪಾತದಿಂದ ಇರಲಿ.

ಕರ್ಕಾಟಕ ರಾಶಿ :

ಸಾಲ ಕೊಟ್ಟವರ ಮಾತಿನಿಂದ ಇಂದು ನೆಮ್ಮದಿ ಹಾಳಾಗುವುದು. ನಿಮ್ಮ ತಪ್ಪನ್ನು ಎಲ್ಲರೆದು ಒಪ್ಪಿಕೊಳ್ಳಲು ಆಗದು. ಅಧಿಕ ಆಸ್ತಿಯೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು. ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ನೀವು ಸರಿಯಾದ ಫಲಿತಾಂಶಗಳನ್ನು ಪಡೆಯಲಿದ್ದೀರಿ. ನಿಮ್ಮ ತಪ್ಪಿಗೆ ಕ್ಷಮೆ ಕೇಳುವವರೆಗೂ ಪರಿಚಿತರು ನಿಮ್ಮನ್ನು ಬಿಡಲಾರರು. ನೀವು ಹೊಸ ವಾಹನವನ್ನು ಸ್ನೇಹಿತರ ಒತ್ತಾಯಕ್ಕೆ ಖರೀದಿ ಮಾಡುವಿರಿ. ಒಂದೇ ತರದ ಜೀವನವು ನಿಮಗೆ ಬೇಸರವಾಗುವುದು.

ಸಿಂಹ ರಾಶಿ :

ಇಂದು ಮಾಡಿದ ಕಠಿಣ ಕೆಲಸವು ಮುಂದಿನ ದಿನಗಳಲ್ಲಿ ಖಚಿತವಾದ ಫಲಿತಾಂಶವನ್ನು ನೀಡಲಿದೆ. ಇಂದು ಕೆಲವು ಕೆಲಸಗಳಲ್ಲಿ ಅನಿರೀಕ್ಷಿತ ಲಾಭದ ಪರಿಸ್ಥಿತಿ ಇದೆ. ನೀವು ಇಂದು ನಿಮ್ಮ ಕುಟುಂಬದ ಜೊತೆ ಸಮಯ ಕಳೆಯಬೇಕು ಎಂದುಕೊಂಡವರು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು, ಅವರ ಸಾಧನೆಗಾಗಿ ಸಮ್ಮಾನಿಸಬಹುದು. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ ಕಾರಣ ಸಿಟ್ಟಾಗಬಹುದು. ಆದಾಯದ ಮೂಲಗಳ ಸಂಖ್ಯೆ ಹೆಚ್ಚುಮಾಡಿಕೊಳ್ಳುವಿರಿ.‌ ಬಹಳ ದಿನಗಳಿಂದ ಮರೆತುಹೋಗಿದ್ದ ಸಂಗತಿಯನ್ನು ಯಾರಾದರೂ ನೆನಪಿಸುವರು.

ಕನ್ಯಾ ರಾಶಿ :

ನಿಮ್ಮ ಪ್ರಮುಖ ಕೆಲಸಕ್ಕೆ ಸಂಬಂಧಿಸಿದ ರೂಪರೇಷೆಯನ್ನು ಮಾಡಿ. ಮಾತನ್ನು ಕಡಿಮೆ ಮಾಡಿ ಕಾರ್ಯದಲ್ಲಿ ತೋರಿಸಿ. ಅನಪೇಕ್ಷಿತ ವಿಚಾರದ ಬಗ್ಗೆ ಚರ್ಚೆ ಬೇಡ. ನಿಮ್ಮಲ್ಲಿ ಇರುವುದನ್ನು ಹಂಚಿ ಸ್ವೀಕರಿಸಿ. ಸುಮ್ಮನೇ ಸಮಯವನ್ನು ಹಾಳು ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಕಡಿಮೆ ಲಾಭವು ಸಮಾಧಾನ ತರದು. ಉದ್ಯೋಗದಲ್ಲಿ ಒತ್ತಡವನ್ನು ನಿಭಾಯಿಸಲು ಒದ್ದಾಡುವಿರಿ. ತಂದೆಯ ಜೊತೆ ಹಣಕಾಸಿನ ವಿಚಾರಕ್ಕೆ ಜಗಳವಾಗಬಹುದು. ಕೋಪದಿಂದ ಶಾಂತವಾಗಲು ಹಲವಾರು ದಾರಿಗಳನ್ನು ಕಂಡುಕೊಳ್ಳುವಿರಿ. ಸ್ತ್ರೀಯರನ್ನು ಅಪರಿಚಿತರು ಕಾಡಬಹುದು.

ತುಲಾ ರಾಶಿ :

ಮನಸ್ಸಿನಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಭಾವನೆಗಳಲ್ಲಿ ಬರುವ ಮೂಲಕ ನೀವು ಹಾನಿ ಮಾಡಬಹುದು. ಇಂದು ನೀವು ಆಕರ್ಷಕ ವ್ಯಕ್ತಿಗಳಾಗಿ ಕಾಣುರುವಿರಿ. ಕೃಷಿಯ ಕೆಲಸದಲ್ಲಿ ನಿಮ್ಮ ಉತ್ಸಾಹ ಕಡಿಮೆಯಾಗಲಿದೆ. ನಿಮ್ಮ ಕಾರ್ಯ ಸಾಮರ್ಥ್ಯದ ಆಧಾರದ ಮೇಲೆ, ನೀವು ಯಾವುದೇ ಪ್ರಮುಖ ಕೆಲಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಾಧ್ಯವಾಗುತ್ತದೆ. ನೀವು ಕಷ್ಟದಲ್ಲಿ ಸುಖವನ್ನು ಕಾಣುವ ಮಾರ್ಗವನ್ನು ಹುಡುಕಿಕೊಳ್ಳುವಿರಿ. ಅಮೂಲ್ಯ ವಸ್ತುಗಳ ಸಂಪಾದನೆಯಾಗಲಿದೆ.

ವೃಶ್ಚಿಕ ರಾಶಿ :

ನಿಮ್ಮ ಆದಾಯದ ಮೂಲಗಳಿಂದ ಆದಾಯವು ಕಡಿಮೆಯಾಗಬಹುದು. ಜೀವನದಲ್ಲಿ ಕೆಲವು ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತೀರಿ. ಹೊಸದನ್ನು ಮಾಡಲು ಯೋಚಿಸುವಿರಿ. ನಿಮ್ಮೊಳಗಿನ ಹೊಸ ಶಕ್ತಿಯ ಪರಿಣಾಮವನ್ನು ನೀವು ಅನುಭವಿಸುವಿರಿ. ಅನಗತ್ಯ ಚಟುವಟಿಕೆಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ಮನೆಯವರ ಜೊತೆ ವಾಗ್ವಾದಕ್ಕೆ ನಿಲ್ಲುವಿರಿ. ಸಂತಾನ ಸಂತೋಷವನ್ನು ನೀವು ಇಂದು ಅನುಭವಿಸುವಿರಿ.

ಧನು ರಾಶಿ :

ಸಕಾರಾತ್ಮಕ ಮನೋಭಾವವನ್ನು ಇಟ್ಟುಕೊಳ್ಳುವುದರಿಂದ, ಶೀಘ್ರದಲ್ಲೇ ವಿಷಯಗಳು ಸಾಮಾನ್ಯವಾಗುತ್ತವೆ. ಕೆಲವು ದಿನಗಳಿಂದ ನಡೆಯುತ್ತಿರುವ ಯಾವುದೇ ಸಮಸ್ಯೆಗೆ ಇಂದು ಸ್ವಲ್ಪ ಪರಿಹಾರ ದೊರೆಯಲಿದೆ. ಮಕ್ಕಳ ಗಮನವೂ ಅವರ ಅಧ್ಯಯನದ ಕಡೆಗೆ ಇರುತ್ತದೆ. ನಿಮ್ಮ ಮಾತುಗಳು ಇತರರಿಗೆ ಇಷ್ಟವಾಗುವುದು. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಇರಲಿದೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದು. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು.

ಮಕರ ರಾಶಿ :

ಕುಶಲ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಿರುವುದು. ಯಾವುದೇ ಸ್ಥಗಿತಗೊಂಡ ಸರ್ಕಾರಿ ಕೆಲಸಗಳು ಇಂದು ಪೂರ್ಣಗೊಳ್ಳಬಹುದು. ಆದ್ದರಿಂದ ನಿಮ್ಮ ಸಂಪೂರ್ಣ ಗಮನವನ್ನು ಅದರ ಮೇಲೆ ಇರಿಸಿ. ಯಾವುದೇ ವ್ಯಕ್ತಿಯೊಂದಿಗೆ ಚರ್ಚಿಸುವಾಗ ಅವರ ವೈಯಕ್ತಿಕ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಬೇಡಿ. ಅಪರಿಚಿತರ ಮಾತು ನಿಮಗೆ ಸಮಾಧಾನವನ್ನು ಕೊಡಬಹುದು. ಯಾರ ಮಾತನ್ನೂ ನೀವು ಕೇಳಲಾರಿರಿ. ಉದ್ಯೋಗದಲ್ಲಿ ನಿಮ್ಮ ಸ್ಥಾನವು ಬದಲಾಗುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು.

ಕುಂಭ ರಾಶಿ :

ಇಂದು ಸಾಮಾಜಿಕ ಚಟುವಟಿಕೆಗಳಿಗೆ ನಿಮ್ಮದಾದ ಕೊಡುಗೆ ಇರಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಮೇಲಧಿಕಾರಿಗಳ ವರ್ತನೆಯು ನಿಮ್ಮನ್ನು ಅಸಮಾಧಾನಗೊಳಿಸಬಹುದು. ನಿಮ್ಮ ತಂದೆಯ ಜೊತೆ ಸೌಹಾರ್ದ ಸಂಬಂಧವನ್ನು ಕಾಪಾಡಿಕೊಳ್ಳಲು ಬಯಸುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಜವಾಬ್ದಾರಿಗಳಿಂದ ನೀವು ಮುಕ್ತರಾಗಿ ಸಂತೋಷಿಸುವಿರಿ. ಅಪರಿಚಿತರು ನಿಮಗೆ ಸಮಸ್ಯೆಯನ್ನು ಕೊಡುವರು.

ಮೀನ ರಾಶಿ :

ನಿಮಗೆ ಯಾರನ್ನು ದ್ವೇಷಿಸಲೂ ಬಲವಾದ ಕಾರಣ ಇರದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಪರ್ಧಿಸುವ ಬಯಕೆ ಇರಲಿದೆ. ಕೆಲವು ಪ್ರಮುಖ ವ್ಯಕ್ತಿಗಳ ಯಶಸ್ಸು ನಿಮಗೆ ಹೆಚ್ಚು ಸ್ಫೂರ್ತಿ ನೀಡುತ್ತದೆ. ನಿರಂತರ ಓಡಾಟದಲ್ಲಿರುಬ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರವಾಗಲಿದೆ. ನಿಮಗೆ ಯಾವುದರೂ ಅನವಶ್ಯಕ ಖರ್ಚು ಎಂದು ಕಂಡರೆ ಹೇಗಾದರೂ ಮಾಡಿ ನಿಲ್ಲಿಸುವಿರಿ. ಬಂಧನದಂತೆ ಅನ್ನಿಸಬಹುದು. ಅಪರಿಚಿತರ ಜೊತೆ ಸಲುಗೆ ಬೇಡ. ಸಂಗಾತಿಯ ಆಲೋಚನೆಗಳು ನಿಮಗೆ ಇಷ್ಟವಾಗಬಹುದು. ಇನ್ನೊಬ್ಬರಿಗೂ ಸಂತೋಷವಾಗುವಂತೆ ಇರುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

Follow Us
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
6,6,6,6,6.. ವಾರೆ ವ್ಹಾ ವೈಭವ್ ಸೂರ್ಯವಂಶಿ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
ತಂಡದಿಂದ ಹೊರಹಾಕಿದ ಸಿಎಸ್​ಕೆ ವಿರುದ್ಧ ಮಿಂಚಿದ ಜಡೇಜಾ
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
BJP ರೋಡ್ ಶೋಗೆ ಕಾಂಗ್ರೆಸ್ ಧ್ವಜ ಹಿಡಿದು 'ಕೈ' ಕಾರ್ಯಕರ್ತರ ಎಂಟ್ರಿ!
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಹತ್ಯೆ ಯತ್ನ: ಚಾಕುವಿನಿಂದ ಚುಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಗ್ಯಾಸ್ ರೀಫಿಲ್ ಮಾಡುವಾಗ ಏಕಾಏಕಿ ಸಿಲಿಂಡರ್​ ಸ್ಫೋಟ: ಮನೆ ಛಿದ್ರಛಿದ್ರ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಪ್ರಯಾಣಿಕರು ಬದುಕುಳಿದಿದ್ದೇ ಪವಾಡ
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ
ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ 5 ದಿನ ಕ್ಯಾಂಪೇನ್​​​ಗೆ ಶ್ರೀರಾಮುಲು ವ್ಯಂಗ್ಯ