Daily Horoscope 4 August 2024: ಆತುರದ ತೀರ್ಮಾನದಿಂದ ಈ ರಾಶಿಯವರು ಒತ್ತಡಕ್ಕೆ ಸಿಲುಕಬಹುದು, ಹಿರಿಯರ ಸಲಹೆ ಪಡೆಯಿರಿ

ಆಗಸ್ಟ್​ 4,​​ 2024ರ​​ ನಿಮ್ಮ ರಾಶಿಭವಿಷ್ಯ: ಮನೆಯ ಕೆಲಸದಲ್ಲಿ ನೀವು ನೀವಿಂದು ಮಗ್ನರಾಗಿರುವಿರಿ. ಆತ್ಮವಿಶ್ವಾಸವು ಪೂರ್ತಿಯಾಗಿ ನಿಮ್ಮನ್ನು ಆವರಿಸಿಲ್ಲ. ಮಕ್ಕಳ ಆರೋಗ್ಯದ ಮೇಲೆ ಗಮನವಿರುವುದು ಮುಖ್ಯ. ಅಸ್ಪಷ್ಟವಾದ ಯೋಚನೆಗಳು ನಿಮಗೆ ಕಿರಿಕಿರಿ ಉಂಟುಮಾಡಿಯಾವು. ಹಾಗಾದರೆ ಆಗಸ್ಟ್​ 4ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope 4 August 2024: ಆತುರದ ತೀರ್ಮಾನದಿಂದ ಈ ರಾಶಿಯವರು ಒತ್ತಡಕ್ಕೆ ಸಿಲುಕಬಹುದು, ಹಿರಿಯರ ಸಲಹೆ ಪಡೆಯಿರಿ
ರಾಶಿ ಭವಿಷ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 04, 2024 | 12:02 AM

ಜ್ಯೋತಿಷ್ಯದಿಂದ ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಮಾವಾಸೆ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಸಿದ್ಧಿ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:59 ಗಂಟೆ, ರಾಹು ಕಾಲ ಸಂಜೆ 05:24 ರಿಂದ 06:59, ಯಮಘಂಡ ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ, ಗುಳಿಕ ಕಾಲ ಮಧ್ಯಹ್ನ 03:49 ರಿಂದ ಸಂಜೆ 05:24ರ ವರೆಗೆ.

ಮೇಷ ರಾಶಿ: ನಿಮ್ಮ ವೈವಾಹಿಕ ಜೀವನಕ್ಕೆ ಯಾರಿಂದಲೂ ಪೂರ್ಣ ಒಪ್ಪಿಗೆ ಸಿಗದು. ಇಷ್ಟು ದಿನ ನಿಮ್ಮದೂ ಎಂದ ಕೊಂಡ ವಸ್ತುವು ಇನ್ನೊಬ್ಬರ ಸ್ವತ್ತಾಗುವ ಸಾಧ್ಯತೆ ಇದೆ. ನೀವು ಮಾಡಬೇಕೆಂದುಕೊಂಡ ಕೆಲಸವು ವಿಪರೀತ ಪರಿಣಾಮವನ್ನು ಬೀರೀತು. ಎಲ್ಲದಕ್ಕೂ ಅಪಾರ್ಥ ಮಾಡಿಕೊಳ್ಳುತ್ತಾ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಸಾಲಬಾಧೆಯು ನಿಮ್ಮನ್ನು ಕೆಟ್ಟ ಕೆಲಸಕ್ಕೆ ಪ್ರೇರಿಸಬಹುದು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ವಿಚಾರದಲ್ಲಿ ಜೊತೆಯಾಗಬಹುದು. ನಿಮ್ಮ ಅನುಭವವು ನಿಮಗೆ ನೆಮ್ಮದಿಯನ್ನೂ ಕಾರ್ಯದಲ್ಲಿ ಯಶಸ್ಸನ್ನೂ ಕೊಡುವುದು. ಉದ್ವಿಗ್ನಕ್ಕೆ ಸಿಲುಕದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆ ಇರುವುದು. ವ್ಯಸನಕ್ಕೆ ತುತ್ತಾಗಿ ಆರೋಗ್ಯವನ್ನು ಕಳೆದುಕೊಳ್ಳುವಿರಿ. ಭೂಮಿಯ ಉತ್ಪನ್ನದಿಂದ ಕೃಷಿಯ ಉತ್ಪಾದನೆಯಿಂದ ಲಾಭ ಸಿಗಲಿದೆ. ದೂರುವವರ ಬಗ್ಗೆ ಗಮನ ಮಾತ್ರ ಇರಲಿ. ಏನನ್ನೂ ಹೇಳುವುದು ಬೇಡ. ಟೀಕೆಗಳಿಗೆ ಮೌನವೇ ಉತ್ತರ.

ವೃಷಭ ರಾಶಿ: ನಿಮ್ಮ ಭಾವನೆಗೆ ಸರಿ ಹೊಂದುವವರ ಜೊತೆ ನಿಮ್ಮ ಮಾತುಕತೆ ಇರಲಿದೆ. ಆತುರದ ತೀರ್ಮಾನ ಹಾಗೂ ಒತ್ತಡಕ್ಕೆ ಸಿಲುಕದೇ ಜಾಗರೂಕರಾಗುರಿ. ಇಂದು ನಿಮ್ಮ ಸಾಲವು ಮರಳಿಬರಹುದು. ಸ್ನೇಹಿತರು ತಮ್ಮ ಜೊತೆ ಕರೆದುಕೊಂಡು ಹೋಗಬಹುದು. ಹಣವು ವ್ಯರ್ಥವಾಗುವದು ನಿಮ್ಮದಾಗಿರುತ್ತದೆ. ಅನಾರೋಗ್ಯಕ್ಕೆ ಸೇವಿಸುವ ಔಷಧದಿಂದ ಅಡ್ಡಪರಿಣಾಮ ಕಾಣಿಸುವುದು. ನಿಮ್ಮ ವಿರುದ್ಧ ಸಲ್ಲದ ಮಾತುಗಳನ್ನು ಕೇಳಬೇಕಾಗಬಹುದು. ಎಲ್ಲವನ್ನೂ ನೀವು ಸಮರ್ಥಿಸಿಕೊಳ್ಳುವಿರಿ. ದೈನಂದಿನ ಕೆಲಸಗಳು ನಿಮಗೆ ಭಾರವೆನಿಸಬಹುದು.‌ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ ರೀತಿ ಬೇರೆಯಾದೀತು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ನೂತನ ಗೃಹದ ಖರೀದಿಯಲ್ಲಿ ಆಸಕ್ತಿ ಇರುವುದು. ಉದ್ಯೋಗದ ಕನಸನ್ನು ಕಾಣುತ್ತಾ ಇರುವಿರಿ. ಉತ್ತಮ‌ ವಸ್ತುಗಳ ಖರೀದಿ ಮಾಡುವಿರಿ. ಇನ್ನೊಬ್ಬರ ಸಂಕಟಕ್ಕೆ ಪಶ್ಚಾತ್ತಾಪ ಪಡುವಿರಿ.

ಮಿಥುನ ರಾಶಿ: ನಿಮ್ಮನ್ನು ನೀವು ಏನೋ ಅಂದುಕೊಳ್ಳುವುದು ಬೇಡ. ನಿಮ್ಮವರೇ ಆದರೂ ಅವರ ಜೊತೆ ಹೆಚ್ಚಿನ ವ್ಯವಹಾರವು ಬೇಡಿ. ಹಣದ ವಿಚಾರವು ಯಾರನ್ನೂ ಬಿಡದು. ಮಕ್ಕಳ ಜೊತೆ ವೈಮನಸ್ಯ ಬರಬಹುದು. ನಿಮ್ಮ ಸಹೋದರನಿಂದ ಹೊಸ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಸಿಗಲಿವೆ. ಪ್ರಯಾಣ ಸುಖಕರವಿದ್ದರೂ ಖರ್ಚು ಅಧಿಕವಾಗುವುದು. ಹಠದ ಸ್ವಭಾವವನ್ನು ಕಡಿಮೆ‌ ಮಾಡಿಕೊಳ್ಳಬೇಕಾಗಬಹುದು. ಇನ್ನೊಬ್ಬರ ರಹಸ್ಯ ವಿಚಾರಗಳನ್ನು ನೀವು ಕೇಳಲು ಆಸಕ್ತರಾಗುವಿರಿ. ಔಷಧದ ಮಾರಾಟಗಾರರಿಗೆ ಅಧಿಕ ಲಾಭವಿರಲಿದೆ. ರಾಜಕೀಯದಲ್ಲಿ ಕೆಲಸ ಮಾಡುವ ಸ್ಥಳೀಯರು ಎಚ್ಚರಿಕೆಯಿಂದ ಇರಬೇಕು. ಭವಿಷ್ಯದ ಬಗ್ಗೆ ನಿಮಗೆ ಏನೇನೋ ಆಲೋಚನೆಗಳನ್ನು ಇಟ್ಟುಕೊಳ್ಳುವಿರಿ. ಧಾರ್ಮಿಕ ಆಚರಣೆಗಳನ್ನು ಶ್ರದ್ಧೆಯಿಂದ ಪೂರೈಸುವಿರಿ.

ಕರ್ಕ ರಾಶಿ: ನಿಮ್ಮ ಉದ್ಯಮಕ್ಕೆ ಯಾರಾದರೂ ಬೆನ್ನೆಲುಬಾಗಿ ಬರಬಹುದು. ಯಾರ ಬಗ್ಗೆಯೂ ಗೊತ್ತಿಲ್ಲದೇ ಮಾತನಾಡುವುದು ಬೇಡ. ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸಲು ಕಷ್ಟವಾದರೂ ಅನಿವಾರ್ಯವಾಗಿ ಬಿಡಬೇಕಾದೀತು.‌ ಮನೆಯ ಕೆಲಸದಲ್ಲಿ ನೀವು ನೀವಿಂದು ಮಗ್ನರಾಗಿರುವಿರಿ. ಆತ್ಮವಿಶ್ವಾಸವು ಪೂರ್ತಿಯಾಗಿ ನಿಮ್ಮನ್ನು ಆವರಿಸಿಲ್ಲ. ಮಕ್ಕಳ ಆರೋಗ್ಯದ ಮೇಲೆ ಗಮನವಿರುವುದು ಮುಖ್ಯ. ಅಸ್ಪಷ್ಟವಾದ ಯೋಚನೆಗಳು ನಿಮಗೆ ಕಿರಿಕಿರಿ ಉಂಟುಮಾಡಿಯಾವು. ಸಾಮಾಜಿಕ ಕಾರ್ಯದಲ್ಲಿ ಹಿನ್ನಡೆಯಾಗಬಹುದು. ಅನಗತ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ. ಅದೇ ಉತ್ತಮವಾದುದೂ ಕೂಡ. ವ್ಯವಸ್ಥೆಯ ಕಾರಣಕ್ಕೆ ವ್ಯಕ್ತಿಯನ್ನು ದ್ವೇಷಿಸುವಿರಿ. ಹಗುರವಾದಷ್ಟು ಎತ್ತರಕ್ಕೆ ಏರಬಹುದು.

ಸಿಂಹ ರಾಶಿ: ಇಂದು ನೀವು ಯಾರ ಮಾತನ್ನೂ ಕೇಳದೇ ನಿಮ್ಮಷ್ಟಕ್ಕೆ ನಿರ್ಧಾರಕ್ಕೆ ಬರುವಿರಿ. ನಿಮ್ಮ ಗುರಿಗಳು ಸ್ಪಷ್ಟವಾಗಿ ಇದ್ದರೂ ಇನ್ನೊಬ್ಬರ ಪ್ರೋತ್ಸಾಹವನ್ನು ನೀವು ಬಯಸುವಿರಿ. ಪ್ರಯಾಣವು‌ ಇಂದು ನಿಮಗೆ ಇಷ್ಟವಾಗದೇ ಹೋಗುವುದು. ಹಣದ ವಿಚಾರದಲ್ಲಿ ಕೆಲವು ವ್ಯತ್ಯಾಸಗಳು ಆಗಲಿದೆ. ನಕಾರಾತ್ಮಕ ಆಲೋಚನೆಗಳು ಸಂಗಾತಿಯ ಕಡೆಯಿಂದ ನಿಮಗೆ ಬರಬಹುದು. ನೀವು ಇಂದು ಹೆಚ್ಚು ಕೆಲಸವನ್ನೂ ಕಡಿಮೆ ಮಾತುಗಳನ್ನೂ ಆಡುವುದು ಮುಖ್ಯ. ಪ್ರಮುಖ ಜನರ ಭೇಟಿಯಿಂದ ಉದ್ಯೋಗಕ್ಕೆ ಹೊಸ ಬಲವೂ ಬರಲಿದೆ. ಕುಟುಂಬದ ಹಿರಿಯರು ನಿಮ್ಮ ಜೊತೆ ಸಮಯವನ್ನು ಕಳೆಯಲು ಇಷ್ಟಪಡುವರು. ಕ್ರೀಡಾಸಕ್ತರಿಗೆ ಶುಭ ಸಮಾಚಾರ ಹಾಗೂ ಅವಕಾಶಗಳ ರಹದಾರಿ ತೆರೆಯುವುದು. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಂಡು ಅವರಿಂದ ದೂರವೂ ಆಗಬಹುದು. ವಾಹನ ಖರೀದಿಗೆ ನಿಮಗೆ ಸಮಯವಿದೆ. ಆತುರ ಬೇಡ. ಅಸಹಾಯಕರಾಗಿ ಕುಳಿತು ಮತ್ತಷ್ಟು ಹತಾಶರಾಗುವ ಅವಶ್ಯಕತೆ ಇಲ್ಲ.

ಕನ್ಯಾ ರಾಶಿ: ಹೊಸ ವಿದ್ಯುತ್ ಉಪಕರಣಗಳು ನಿಮಗೆ ಸಂತೋಷವನ್ನು ಕೊಡುತ್ತವೆ. ಇನ್ನೊಬ್ಬರಿಗೆ ಬಗ್ಗೆ ಮಾತನಾಡುವಾಗ ಪೂರ್ವಾಪರ ಆಲೋಚನೆ ಬೇಕು. ಉದ್ಯೋಗದ ಸ್ಥಳದಿಂದ ನಿಮ್ಮನ್ನು ಹೊರ ಹಾಕಿಯಾರು. ಸಂಗಾತಿಯ ನೋವಿಗೆ ಸ್ಪಂದಿಸಿವುದು ಕಷ್ಟವಾದೀತು. ವ್ಯಾಪಾರವು ಇಂದು ಚೆನ್ನಾಗಿ ಆಗಲಿದೆ. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸುವ ಆಲೋಚನೆ ಮಾಡಿಕೊಳ್ಳುವುದು ಉತ್ತಮ. ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಾಡುವಿರಿ. ಆದರೆ ಪಾಲುದಾರಿಕೆಯನ್ನು ಮಾಡುವಾಗ ಹಲವು ಬಾರಿ ಯೋಚಿಸಿ. ರಮಣೀಯ ಸ್ಥಳಕ್ಕೆ ನೀವು ಹೋಗಲಿದ್ದೀರಿ. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದೇಶದಲ್ಲಿ ಉನ್ನತ ಅಭ್ಯಾಸಕ್ಕೆ ಅವಕಾಶ ಸಿಗುವುದು. ಉದ್ಯೋಗವು ನಿಮ್ಮನ್ನು ಪ್ರಯಾಣ ಮಾಡಿಸುವುದು.

ತುಲಾ ರಾಶಿ: ಪಾದಧಿಕಾರವು ತಪ್ಪುವ ಸಾಧ್ಯತೆ ಇದೆ. ಇಂದು ನೀವು ಬೆಟ್ಟವನ್ನೇ ಮೈಮೇಲೆ ಹಾಕಿಕೊಳ್ಳುವ ಕೆಲಸವನ್ನು ಖಂಡಿತ ಮಾಡಬೇಡಿ. ಅಪರಿಚಿತ ವಿಷಯಕ್ಕೆ ಮೌನವಾಗಿ ಇರುವಿರಿ. ಸ್ನೇಹಿತರು ಸರಿಯಾಗಿ ಪ್ರತಿಕ್ರಯಿಸಿಲ್ಲ ಎಂಬ ಕಾರಣಕ್ಕಾಗಿ ನೀವು ಬೇಸರಗೊಳ್ಳುವಿರಿ. ಆರ್ಥಿಕ ವಿಚಾರಕ್ಕೆ ಅಪವಾದವು ಬರುವ ಸಾಧ್ಯತೆ ಇದೆ. ಆಪ್ತರಿಗೆ ಏನನ್ನಾದರೂ ಕೊಡುವಿರಿ. ನೀವು ಇಂದು ಬದಲಾಗಲು ಯೋಚಿಸುತ್ತಿದ್ದರೆ ನಿಮ್ಮವರು ಅದನ್ನು ಬಿಟ್ಟುಕೊಡರು. ವಿದ್ಯಾರ್ಥಿಗಳು ಓದಿನ‌ ಕಡೆಗೆ ಗಮನ ಕೊಡಲು ಕಷ್ಟವಾದೀತು. ಭೂಮಿಯ ವ್ಯವಹಾರದಲ್ಲಿ ಆತುರ ಬೇಡ. ನಿಮ್ಮ ವಿವಾಹವು ದೈವದ ಇಚ್ಛೆಯಂತೆ ಆಗಿದ್ದು ಅದನ್ನು ನಂಬಿ ನಡೆಯಿರಿ. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಪ್ರತ್ಯೇಕವಾಗಿ ಕಂಡರೂ ಯಾವುದೇ ನಿರ್ಧಾರಕ್ಕೆ ಬರುವುದು ಬೇಡ.

ವೃಶ್ಚಿಕ ರಾಶಿ: ದುಸ್ಸಾಹಸಗಳು ನಿಮ್ಮ ಧೈರ್ಯವನ್ನು ಕೆಡಿಸಬಹುದು. ಅನ್ಯ ಕಾರ್ಯಗಳಿಂದ ನಿಮ್ಮ ಸಮಯವು ವ್ಯರ್ಥವಾಗಿ ನಿಮ್ಮ ಕೆಲಸಕ್ಕೆ ಸಮಯದ ಅಭಾವವಾದೀತು. ತಪ್ಪಿಗೆ ತಂಡ ತೆರಬೇಕಾದೀತು. ಇಂದು ನೀವು ಮಾತು ಕಡಿಮೆ ಮಾಡಿದಷ್ಟೂ ನಿಮಗೆ ಅನುಕೂಲವಿದೆ. ಅವಿವಾಹಿತರು ವಿವಾಹಕ್ಕೆ ಮಾಂಗಲ್ಯ ಭಾಗ್ಯ ಬರಲಿದೆ. ಆಯ ಕಟ್ಟಿನ ಸ್ಥಳದಲ್ಲಿರುವವರಿಗೆ ತೊಂದರೆ, ಒತ್ತಡ. ವ್ಯಾಪಾರವು ಅಧಿಕ ಲಾಭವನ್ನು ಗಳಿಸಬಹುದು. ಸಮಯಕ್ಕೆ ಅನುಸಾರವಾಗಿ ನೀವು ಕೆಲಸಗಳನ್ನು ಮಾಡಿ. ಆಪದ್ಧನವನ್ನು ಕೂಡಿಡುವಿರಿ. ವೃತ್ತಿಯನ್ನು ನೀವು ಇಷ್ಟಪಡುವಿರಿ. ಆಹಾರವನ್ನು ಕೇಳಿ ಬಂದವರಿಗೆ ಕಿಂಚಿತ್ತಾದರೂ ದಾನ ಮಾಡುವಿರಿ. ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಸೇವಾ ಮನೋಭಾವದಿಂದ ಕೆಲಸವನ್ನು ಮಾಡುವಿರಿ. ನಿಮಗೆ ಅಧಿಕಾರಿಗಳಿಂದ ಅಪಮಾನವೂ ಆದೀತು.

ಧನು ರಾಶಿ: ದುರಭ್ಯಾಸವಿಲ್ಲದೇ ಇರುವುದೇ ದೊಡ್ಡ ಯೋಗ್ಯತೆ. ಅವರನ್ನು ಕಳೆದುಕೊಳ್ಳುವುದು ಬೇಡ. ಇಷ್ಟು ದಿನ ರಹಸ್ಯವಾಗಿ ಉಳಿದಿದ್ದ ವಿಷಯವು ಪ್ರಕಟಗೊಳ್ಳುವುದು. ಎಲ್ಲರ ಜೊತೆ ಬೆರೆಯುವ ನಿಮ್ಮ ಸ್ವಭಾವವು ಇತರರಿಗೆ ಇಷ್ಟವಾಗದೇ ಹೋದೀತು. ಕಷ್ಟವೋ ಸುಖವೋ ಹೊತ್ತ ಜವಾಬ್ದಾರಿಗೆ ನ್ಯಾಯವನ್ನು ಕೊಡಬೇಕು. ನಿಮ್ಮ ಕೆಲಸವನ್ನು ನೀವೇ ಮಾಡಲು ಇಷ್ಟಪಡುವಿರಿ. ನೇರವಾದ ಮಾತು ಕೆಲವರಿಗೆ ಅಸಹ್ಯವಾದೀತು. ನಿಮ್ಮ ನುಡಿಗಳ ಮೇಲೆ ನಿಗಾ ಇರಲಿ. ಅಪರೂಪದ ಬಂಧುಗಳನ್ನು ಭೇಟಿಯಾಗುವಿರಿ. ಅಭಿನಯಾದಿ ಕಲಾವಿದರಿಗೆ ಅನುಕೂಲಕರ ಸಂದರ್ಭಗಳು ಎದುರಾಗುವುವು. ನಿಮ್ಮನ್ನು ಕೆಲವರ ಮಾತು ಕೆರಳಿಸೀತು. ತಾಳ್ಮೆ ಬೇಕಾದೀತು. ಸಂಗಾತಿಯ ಮನೋಭಾವವನ್ನು ಅರ್ಥವಾಗುವುದು ಕಷ್ಟವಾದೀತು. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಸಪ್ಪೆ ಎನಿಸುವಂತೆ ಮಾತನಾಡಬೇಡಿ.

ಮಕರ ರಾಶಿ: ನಿಮ್ಮದಾದ ಪ್ರಖರವಾದ ಯೋಚನೆಯನ್ನು ಪ್ರಸ್ತುತ ಪಡಿಸುವಿರಿ. ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಕಾಯಬೇಡಿ. ನಿಮ್ಮ ಪ್ರಯಾಣವನ್ನು ನಿಲ್ಲಿಸುವುದು ಬೇಡ. ಸ್ನೇಹಿತರಿಂದ ನೀವು ದೂರವಿರುವ ಯೋಚನೆ ಮಾಡುವಿರಿ. ನಿಮಗೆ ಬೆಂಬಲವನ್ನು ಕುಟುಂಬದವರು ಕೊಡುವರು. ಬದ್ಧತೆಗೆ ಬೆಲೆ ಕೊಡಬೇಕಾಗುವುದು. ವ್ಯವಹಾರವನ್ನು ಶುದ್ಧವಾಗಿ ಮಾಡುವುದು ನಿಮಗೆ ಬಹಳ ಪ್ರಿಯವಾದ ಸಂಗತಿಯಾಗಲಿದೆ. ನಿಮ್ಮ ವ್ಯವಹಾರವನ್ನು ಪ್ರಶಂಸಿಸುವರು. ಅನಗತ್ಯ ಓಡಾಟದಿಂದ ನೀವು ಸಿಟ್ಟಗೊಳ್ಳಬಹುದು. ಅಚಾನಕ್ ಆಗಿ ಬಂದ ಕೆಲವು ಘಟನೆಗೆ ಪ್ರತಿಕ್ರಿಯೆ ಕಷ್ಟವಾಗಬಹುದು. ಯಾರೋ‌ ಮಾಡಿದ ತಪ್ಪಿಗೆ ನೀವು ಶಿಕ್ಷೆಯನ್ನು ಅನುಭವಿಸಬೇಕಾದೀತು. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ಆರ್ಥಿಕತೆಯ ಬೆಳವಣಿಗೆಯಿಂದ ನಿಮಗೆ ಸಂತೋಷವಿದೆ.

ಕುಂಭ ರಾಶಿ: ಇಂದು ಉದ್ಯೋಗದಲ್ಲಿ ಒತ್ತಡವು ಅಧಿಕವಾಗುವುದು. ಏನು ಮಾಡಬೇಕು ಎಂಬ ಭ್ರಾಂತಿಯೂ ಕಾಡುವುದು. ಇದು ನಿಮ್ಮ ಸಾಮರ್ಥ್ಯವನ್ನು ತೋರಿಸುತ್ತದೆ. ಅಹಂಕಾರದಿಂದ ಬೀಗುವುದು ಬೇಡ. ನಿಮ್ಮನ್ನು ಇಷ್ಟಪಡುವವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸಣ್ಣ ಸಣ್ಣ ತಪ್ಪಿಗೂ ನೀವು ಸಂಗಾತಿಯನ್ನು ದೂಷಿಸುವಿರಿ. ಜೀವನೋಪಾಯಕ್ಕೆ ಯಾವುದಾದರೊಂದು ವೃತ್ತಿಯನ್ನು ಆಶ್ರಯಿಸುವುದು ಉತ್ತಮ. ವಿವಾದಗಳು ಶಾಂತವಾಗಿವಂತೆ ನೋಡಿಕೊಳ್ಳಿ. ಇಲ್ಲವಾದರೆ ಅದರ ಪರಿಣಾಮವು ಭಯಂಕರವಾದೀತು. ನಿಮ್ಮ ಸಂಪತ್ತನ್ನು ತಿಳಿಸುವುದು ಬೇಡ. ಅಪರಿಚಿತ ವ್ಯಕ್ತಿಗಳು ನಿಮ್ಮನ್ನು ಸಂಪರ್ಕ ಮಾಡಿಯಾರು. ವೈಯಕ್ತಿಕ ವಹಿವಾಟಿನ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ಹಳೆಯ ಗೆಳತನವು ಮತ್ತೆ ಒಂದಾಗುವುದು.

ಮೀನ ರಾಶಿ: ಇಂದು ನಿಮ್ಮ ಜ್ಞಾನದ ಜೊತೆ ನಿಮ್ಮ ಪ್ರಯತ್ನವೂ ಇದ್ದರೆ ಬಯಸಿದ ಯಶಸ್ಸನ್ನು ಪಡೆಯಬಹುದು. ಸಹನೆಯನ್ನೇ ಆಯುಧವಾಗಿರಿಸಿಕೊಳ್ಳಿ. ಎಲ್ಲವನ್ನೂ ಎದುರಿಸಲು ಸಾಧ್ಯವಾಗುವುದು. ವಿಶೇಷ ಸಮಾರಂಭಕ್ಕೆ ಆಹ್ವಾನ ಬರಬಹುದು. ನೀವು ನಿಮ್ಮ ಘನತೆಯನ್ನು ಬಿಟ್ಟುಕೊಡಲು ಒಪ್ಪುವುದಿಲ್ಲ. ಸಮಯಕ್ಕೆ ಸರಿಯಾಗಿ ನಿಮಗೆ ಅವಶ್ಯಕತೆ ಇರುವುದು ಬಂದು ಒದಗಬಹುದು. ಏಕಾಂತದಿಂದ ನಿಮಗೆ ನೆಮ್ಮದಿಯು ಸಿಗಬಹುದು. ಆಪ್ತರನ್ನು ನೀವು ಭೇಟಿಯಾಗಲಿದ್ದೀರಿ. ಗುಟ್ಟನ್ನು ಸಮಯ ನೋಡಿ ಹೇಳಿ. ನಿಮಗೆ ಗೊತ್ತಿಲ್ಲದೇ ಮೋಜಿನಲ್ಲಿ ಸೇರಿ ಹಣವನ್ನು ನಷ್ಟ ಮಾಡಿಕೊಳ್ಳುವಿರಿ. ಬೇಕಾದ ವಸ್ತುಗಳನ್ನು ಜೋಪಾನ ಮಾಡಿಕೊಳ್ಳಿ. ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ಸ್ಥಿರಾಸ್ತಿಯ ಉಳಿವಿಗೆ ಹೋರಾಟವನ್ನೇ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ಮುಳುಗುವಿರಿ.

ಲೋಹಿತ ಹೆಬ್ಬಾರ್-8762924271 (what’s app only)

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ