AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 07 April: ಇಂದು ಈ ರಾಶಿಯವರ ಮಾತು ನಂಬಿಕೆಗೆ ಅರ್ಹವಲ್ಲ

Daily Horoscope, 07 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಷಷ್ಠೀ ತಿಥಿಯ ಮಂಗಳವಾರದಂದು ವ್ಯವಹಾರದಲ್ಲಿ ಪಾರದರ್ಶಕತೆ, ಒಳ್ಳೆಯದನ್ನು ಮಾಡುವ ಬುದ್ಧಿ, ಕಡಿಮೆ ಆದಾಯ, ಕಲೆಯ ಸಿದ್ಧಿ, ಭೋಗಕ್ಕೆ ಖರ್ಚು ಇವೆಲ್ಲ ಈ ದಿನದಂದು.

Horoscope Today 07 April: ಇಂದು ಈ ರಾಶಿಯವರ ಮಾತು ನಂಬಿಕೆಗೆ ಅರ್ಹವಲ್ಲ
HoroscopeImage Credit source: asianetnews.com
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 07, 2026 | 12:30 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ – 06 – 17 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:31 – 17:04, ಯಮಗಂಡ ಕಾಲ 09:22 – 10:54, ಗುಳಿಕ ಕಾಲ 12:27 – 13:59

ಮೇಷ ರಾಶಿ: ನಿಮ್ಮ ಮೇಲಿನ ಪ್ರೀತಿಯಿಂದ ಯಾರಾದರೂ ಅಗತ್ಯ ಸಹಕಾರವನ್ನು ಕೊಡುವರು. ವ್ಯಾಪಾರವನ್ನು ವಿಸ್ತರಿಸಲು ಕುಟುಂಬದ ಸದಸ್ಯರ ಸಹಾಯ ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ವೃತ್ತಿಗೆ ಸಂಬಂಧಿಸಿದ ಬೇರೆ ಬೇರೆ ಮಜಲುಗಳನ್ನು ಅರಿಯುವಿರಿ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಮುಖ್ಯ ಕೆಲಸವನ್ನು ನೀವು ಮರೆಯುವಿರಿ. ಅಪರಿಚಿತರಿಂದ ನಿಮಗೆ ಕೆಲಸ ಸಿಗಬಹುದು. ಇಂದು ನೀವು ಮಾನಸಿಕವಾಗಿ ತುಂಬಾ ಆಯಾಸವನ್ನು ಅನುಭವಿಸಬಹುದು.

ವೃಷಭ ರಾಶಿ: ಮನಸ್ಸಿನಲ್ಲಿ ನೀವು ತಾಜಾತನವನ್ನು ಅನುಭವಿಸುವಿರಿ. ನೀವು ಕೆಲಸದಲ್ಲಿ ಸಹೋದ್ಯೋಗಿಗಳಿಂದ ಸಹಾಯ ಪಡೆಯುವುದನ್ನು ಮುಂದುವರಿಸುತ್ತೀರಿ. ನಿಮಗೆ ಬೆಂಬಲ ಸಿಗುತ್ತದೆ. ವೈರಾಗ್ಯಭಾವವನ್ನು ಉಂಟಾಗಲಿದೆ. ನೀವು ಕೆಲವು ನಿರಾಶಾದಾಯಕ ಮಾಹಿತಿಯನ್ನು ಇಂದು ಪಡೆಯುವಿರಿ. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ. ವೃತ್ತಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳ ನಿರೀಕ್ಷೆಯಲ್ಲಿ ಇರುವಿರಿ. ಶತ್ರುಗಳು ಪ್ರಬಲರಾಗದಂತೆ ನೋಡಿಕೊಳ್ಳಿ.

ಮಿಥುನ ರಾಶಿ: ನೀವು ಶೈಕ್ಷಣಿಕ ಕೆಲಸಕ್ಕಾಗಿ ಬೇರೆ ಸ್ಥಳಕ್ಕೆ ಹೋಗಬಹುದು. ನಿಮಗೆ ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ನಿಮಗೆ ಆರ್ಥಿಕ ಲಾಭಗಳು ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಪುತ್ರನಿಂದ ಧನಸಹಾಯ ಸಿಗಲಿದೆ‌. ಭೂಮಿಯ ವ್ಯವಹಾರದಲ್ಲಿ ಬೇಸರ ಬರಬಹುದು. ನಿಮ್ಮ ಬಗ್ಗೆ ಇರುವ ಭಾವನೆ ಬದಲಾಗುವುದು. ನೀವು ಆಡಂಬರದಿಂದ ದೂರವಿರಿ. ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಬಂಧುಗಳ ಜೊತೆ ಚರ್ಚಿಸುವಿರಿ.

ಕರ್ಕಾಟಕ ರಾಶಿ: ಇಂದು ನಿಮ್ಮ ಖರ್ಚಿನ ಪ್ರಮಾಣ ಹೆಚ್ಚಾಗುತ್ತದೆ. ಮಾತನಾಡುವಾಗ ನೀವು ಜಾಗರೂಕರಾಗಿರಬೇಕು. ಆದರೆ ಇಂದು ಲಾಭದ ಅವಕಾಶಗಳು ಇರುತ್ತವೆ, ಆದರೆ ಸುತ್ತಲೂ ಓಡಾಟ ಕೂಡ ಇರುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡೀತು. ನಿಮ್ಮ ಇಂದಿನ ದಿನಚರಿಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು.

ಸಿಂಹ ರಾಶಿ: ನಿಮ್ಮ ಸಹೋದರ ಸಹೋದರಿಯರಿಂದ ನೀವು ಆರ್ಥಿಕ ಸಹಾಯವನ್ನು ಪಡೆಯಬಹುದು. ಅವರೆದುರು ನಿಮ್ಮ ಪ್ರತಿಭೆಯ ಅನಾವರಣವಿಂದು. ಹಳೆಯ ನೋವುಗಳು ಇಂದು ಹೆಚ್ವಾಗಬಹುದು. ಸಂಗಾತಿಯ ಜೊತೆ ಮನಿಸು ಕಾಣಿಸಿಕೊಳ್ಳುವುದು. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು. ನೀವು ಇಂದು ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಇಂದು ಹಠಾತ್ ಘಟನೆಯ ಬಗ್ಗೆ ಯಾವುದೇ ತಕ್ಷಣದ ನಿರ್ಧಾರ ತೆಗೆದುಕೊಳ್ಳುವುದನ್ನು ಬೇಡ.

ಕನ್ಯಾ ರಾಶಿ: ನಿಮ್ಮ ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಮಾತನಾಡದೇ ಸುಮ್ಮನಿರುವುದು ಒಳ್ಳೆಯದು. ಅದು ಇಂದು ಪೂರ್ಣಗೊಳ್ಳುವುದಕ್ಕೆ ಒತ್ತಡವು ಅನಿವಾರ್ಯವಾದೀತು. ಸಂಪನ್ಮೂಲಗಳನ್ನು ಕಾಳಜಿಯಿಂದ ರಕ್ಷಿಸಿಕೊಳ್ಳಿ. ಆದಾಯದ ಸ್ವಲ್ಪ ಭಾಗವನ್ನು ಉಳಿಸಲು ಬೇಕಾದ ಚಿಂತನೆ ಇರಲಿದೆ. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ. ನಿಮ್ಮ ಆಸೆಯೂ ಈಡೇರುತ್ತದೆ. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ನೀವು ಅಗತ್ಯ ಸಹಾಯವನ್ನು ಪಡೆಯುತ್ತೀರಿ.

ತುಲಾ ರಾಶಿ: ಧಾರ್ಮಿಕಾರ್ಯಗಳಲ್ಲಿ ಅನಾಸಕ್ತಿಯೆದ್ದು ತೋರುವುದು. ನೀವಾಡುವ ಮಾತುಗಳನ್ನು ನಿಮ್ಮ ಸಹಾಯಕ್ಕೆ ಇದ್ದವರು ಕೇಳಬಹುದು. ಯಾರ ಮೇಲೂ ಅಸೂಯೆಪಡದೇ ನಿರ್ಮಲ‌ಮನಸ್ಸಿನಿಂದ ಇರುವಿರಿ. ಇಂದು ನಿಮ್ಮವರೆ ಮೇಲೆ‌ ಅತಿಯಾದ ಅಕ್ಕರೆ ಇರುವುದು. ಯಾವುದುಕ್ಕುಯ ಅತಿಯಾದ ಕ್ರಮವನ್ನು ತೆಗೆದುಕೊಳ್ಳುವುದು ಬೇಡ. ನಿಮ್ಮ ವ್ಯವಹಾರದ ದೀರ್ಘಾವಧಿಯ ಯೋಜನೆಗಳಿಗೆ ನೀವು ಸಂಪೂರ್ಣ ಗಮನ ಹರಿಸಬೇಕು. ನಿಮ್ಮ ತಾಯಿವು ದೈಹಿಕ ನೋವನ್ನು ಅನುಭವಿಸಬಹುದು. ನಿಮ್ಮ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಬೇಕಾಗುತ್ತದೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ಬಡ್ತಿಯ ಹಾಗೂ ಬದಲಾವಣೆ ಸಿಗುವ ಸಾಧ್ಯತೆ ಇದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಧರ್ಮಕರ್ಮಗಳಲ್ಲಿ ಭಾಗವಹಿಸಿ. ಮಾನಸಿಕ ನೆಮ್ಮದಿಯು ನಿಮ್ಮದಾದೀತು. ನೀವು ಹಿಂಜರಿಕೆಯಿಲ್ಲದೆ ಅಂದುಕೊಂಡ ಕಾರ್ಯದಲ್ಲಿ ಮುಂದುವರಿಯುವಿರಿ. ಇಂದು ನೀವು ಜನರನ್ನು ಆಕರ್ಷಿಸುವಿರಿ. ಜನರು ನಿಮ್ಮ ಆಲೋಚನಾ ವಿಧಾನವನ್ನು ಇಷ್ಟಪಡುತ್ತಾರೆ. ನಿಮ್ಮ ಸಲಹೆಯಿಂದ ಜನರು ಪ್ರಯೋಜನ ಪಡೆಯುತ್ತಾರೆ. ಇಂದು ಕೆಲವು ಒಳ್ಳೆಯ ಸುದ್ದಿಗಾಗಿ ಕಾಯುತ್ತಿದ್ದಾರೆ.

ಧನು ರಾಶಿ: ನಿಮ್ಮ ಕೆಲಸದಲ್ಲಿ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಆದರೆ ಕೆಲಸದ ಸ್ಥಳದಲ್ಲಿ ತೊಂದರೆಗಳು ಉಂಟಾಗಬಹುದು. ಮಾತುಗಳನ್ನು ಎಚ್ಚರದಿಂದ ಆಡಿ. ಮಾತು ಕಂಟಕಗಳನ್ನು ತಂದೀತು. ನಿಮ್ಮ ಜೀವನಶೈಲಿಯನ್ನು ಆಕರ್ಷಕವಾಗಿಸಲು ನೀವು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ನಿಮ್ಮ ಪೋಷಕರ ಜೊತೆ ಕೆಲವು ವಿಷಯದ ಬಗ್ಗೆ ನೀವು ಕಲಹದ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ವಾತಾವರಣವು ನಿಮಗೆ ಅನುಕೂಲಕರವಾಗಿಲ್ಲದಿದ್ದರೆ, ನಿಮ್ಮ ಮನಃಸ್ಥಿತಿಯು ಹದಗೆಡುತ್ತದೆ. ದೈನಂದಿನ ಕೆಲಸದಲ್ಲಿ ಸಮಸ್ಯೆಗಳು ಉಳಿಯಬಹುದು.

ಮಕರ ರಾಶಿ: ಪ್ರೀತಿಪಾತ್ರರನ್ನು ಭೇಟಿ ಆಗುವುದರಿಂದ ನೀವು ಸಂತೋಷವನ್ನು ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರುತ್ತದೆ. ಆರಂಭದಲ್ಲಿ ಕೆಲವು ತೊಂದರೆಗಳು ಎದುರಾಗಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳುವತ್ತ ಪ್ರಯತ್ನಿಸಿ. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು.

ಕುಂಭ ರಾಶಿ: ಕಲೆ ಮತ್ತು ಸಾಹಿತ್ಯದಲ್ಲಿ ನಿಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ನಿಮಗೆ ಸಾಧ್ಯವಾಗುತ್ತದೆ. ತಾಯಿ ಮತ್ತು ಕುಟುಂಬದ ಎಲ್ಲ ಸದಸ್ಯರೊಂದಿಗೆ ಆತ್ಮೀಯತೆ ಹೆಚ್ಚಾಗುತ್ತದೆ. ಅಲ್ಪಾವಧಿಯ ವಲಸೆಯ ಸಾಧ್ಯತೆಯಿದೆ. ಚಾಣಾಕ್ಷ ಬುದ್ಧಿಯಿಂದ ಅದನ್ನು ಪರಿಹರಿಸಿಕೊಳ್ಳುವಿರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ನೀವು ಮಕ್ಕಳಿಂದ ಬೆಂಬಲವನ್ನು ಪಡೆಯುತ್ತೀರಿ. ನೀವು ಕಠಿಣ ಪರಿಶ್ರಮದಿಂದ ನಿಮ್ಮ ಯೋಜನೆಯನ್ನು ಪೂರ್ಣಗೊಳಿಸುತ್ತೀರಿ.

ಮೀನ ರಾಶಿ: ಶೈಕ್ಷಣಿಕ ಕೆಲಸವು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ಆದರೆ ನಿಮ್ಮ ತಾಯಿಯ ಅನಾರೋಗ್ಯದ ಕಾರಣ ನೀವು ಚಿಂತೆಯಲ್ಲಿರುತ್ತೀರಿ. ನಿಮ್ಮ ಗೌರವಕ್ಕೆ ಧಕ್ಕೆ ಉಂಟಾಗುವುದರಿಂದ ನೀವು ದುಃಖಿತರಾಗುವಿರಿ. ಆಪ್ತರ ಭೇಟಿ ಹಾಗೂ ಮಾರ್ಗದರ್ಶನದ ಸುತ್ತಾಟದಲ್ಲಿ ಇಂದು ಮುಕ್ತಾಯಗೊಳ್ಳಲಿದೆ‌. ನಿಮ್ಮ ಕೆಲಸಕ್ಕಿಂತ ಇತರರ ಕೆಲಸಗಳ ಮೇಲೆ ಹೆಚ್ಚು ಗಮನವಿರುವುದು. ನಿಮ್ಮ ಮೇಲೆ ದುಷ್ಪರಿಣಾಮ ಬೀರಬಹುದು. ಉದ್ಯಮಿಗಳಿಗೆ ಸಮಯ ಉತ್ತಮವಾಗಿಲ್ಲ. ಯಾರಿಗೂ ಸಾಲ ನೀಡುವುದನ್ನು ತಪ್ಪಿಸಿ. ಹಳೆಯ ಸಾಲವು ನಿಮಗೆ ಒತ್ತಡವನ್ನು ಉಂಟುಮಾಡಬಹುದು.

ಲೋಹಿತ ಹೆಬ್ಬಾರ್-8762924271 (what’s app only)

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ