AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಕಛೇರಿಯಲ್ಲಿ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಲಿದೆ, ಆಲಸ್ಯ ಹೆಚ್ಚಾಗಬಹುದು

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 06 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ಕಛೇರಿಯಲ್ಲಿ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಲಿದೆ, ಆಲಸ್ಯ ಹೆಚ್ಚಾಗಬಹುದು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 06, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶುಭ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:30ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:40 ರಿಂದ 03:40 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06: 26 ರಿಂದ ಬೆಳಗ್ಗೆ 07:58ರ ವರೆಗೆ.

ಮೇಷ ರಾಶಿ: ಹಿಂದೆ ನೆಟ್ಟ ಗಿಡಗಳು, ಬೆಳೆದು ಮರವಾಗಿ ಫಲವನ್ನು ಮತ್ತೆಂದೋ ಕೊಡುವಂತೆ, ಎಂದೋ ಮಾಡಿದ ಸತ್ಕಾರ್ಯ ಇಂದು ಫಲ ಕೊಡುವುದು ನಿಮಗೆ. ಕಳೆದುಹೋದ ಬಗ್ಗೆ ನೆನೆನೆನೆದು ಕೊರಗಿ ಕಣ್ಣೀರಾಗುವುದಕ್ಕಿಂತ ಉತ್ತಮ ಆಲೋಚನೆಗಳಿಂದ ಮುಂದಿನದನ್ನು ಚಿಂತಿಸಿ. ನಿಮ್ಮ ಕುಟುಂಬದ ವಾತಾವರಣವು ಸ್ವಲ್ಪ ಆತಂಕದಿಂದ‌ ಕೂಡಿರಬಹುದು. ಕೆಲಸದಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಲಹೆಯನ್ನು ಕೊಡಲು ಹೋಗಬೇಡಿ. ನೀವು ಸುಲಭವಾಗಿ ಜನರ ವಿಶ್ವಾಸವನ್ನು ಗಳಿಸುವಿರಿ. ನಿಮ್ಮ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಆದರೆ ಅದರ ಬಗ್ಗೆ ಸಾಕಷ್ಟು ಯೋಚಿಸಿ ಮುಂದುವರಿಯಿರಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು.‌ ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ಮಾನಸಿಕವಾಗಿ ಉತ್ಸಾಹವು ಕಡಿಮೆ ಇರುವುದು.

ವೃಷಭ ರಾಶಿ: ಅದೃಷ್ಟವನ್ನು ಹುಡುಕುತ್ತಿದ್ದರೆ ಇಂದು ಸ್ವಾಗತಿಸಿ. ಅತಿಯಾದ ಪ್ರಯಾಣದಿಂದ ಆಯಾಸ ಮತ್ತು ಒತ್ತಡಗಳು ನಿರ್ಮಾಣವಾಗುವುದು. ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು ಪ್ರಶಂಸಿಸುವರು‌. ಹೊಸ ಕೆಲಸವನ್ನು ಆರಂಭಿಸುವ ಹುನ್ನಾರ ನಡೆಸುವಿರಿ. ನಿಮ್ಮನ್ನು ಇಷ್ಟಪಟ್ಟವರೊಡನೆ ಸಮಯವನ್ನು ಕಳೆಯಿರಿ. ನಿಮ್ಮ ಕೆಲಸದ ಮೇಲೆ ನೀವು ಸಂಪೂರ್ಣ ಗಮನವಿಲ್ಲದೇ ಯಾವುದೋ ಯೋಚನೆಯಲ್ಲಿ ಎಡವಟ್ಟು ಮಾಡಿಕೊಳ್ಳುವಿರಿ. ನಿಮ್ಮ ಸೌಕರ್ಯವು ಹೆಚ್ಚಾಗುತ್ತದೆ ಎಂದು ಖುಷಿ ಪಡುವ ಬದಲು ಆಲಸ್ಯದತ್ತ ನಿಮ್ಮ ನಡೆ ಇರಲಿದೆ. ಆಲಸ್ಯದಿಂದ ಎದ್ದಾಗ ಮಾತ್ರ ನೀವು ನಿಮ್ಮ ಅನೇಕ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ಸದಸ್ಯರ ಅಗತ್ಯತೆಗಳ ಬಗ್ಗೆ ನೀವು ಗಮನ ಹರಿಸಬೇಕು. ನಿಮ್ಮ ಪ್ರತಿಭೆಗೆ ಯೋಗ್ಯವಾದ ಕಾರ್ಯವು ಸಿಗುವುದು. ಭೂಮಿಯ ವ್ಯವಹಾರವನ್ನು ಒಬ್ಬೊಂಟಿಯಾಗಿ ನಿರ್ವಹಿಸುವಿರಿ. ಸಹೋದ್ಯೋಗಿಗಳಿಂದ ಅನಿವಾರ್ಯವಾಗಿ ಸಹಾಯವನ್ನು ಪಡೆಯುವಿರಿ.‌

ಮಿಥುನ ರಾಶಿ: ಇಂದು ನೀವು ನಿಚ್ಚಲ ಮನಸ್ಸಿನಿಂದ ವಿಚಲಿತರಾಗುವುದು ಬೇಡ. ಶೈಕ್ಷಣಿಕವಾದ ಪ್ರಗತಿಯನ್ನು ಸಾಧಿಸಬೇಕಾಗಬಹಿದು. ನಿಮ್ಮ ಕಿವಿ ಮಾತುಗಳು ಅನೇಕರಿಗೆ ಸ್ಫೂರ್ತಿಯಾಗಬಹುದು. ಒಂದಿಲ್ಲೊಂದು ವಿಷಯಗಳಿಂದ ಸುಖವನ್ನು ಪಡೆಯುವ ನಿಮಗೆ ಮುಂಬರುವ ವಿಷಯಗಳನ್ನು ಹೇಗೆ ನಿಭಾಯಿಸಬೇಕು ಎನ್ನುವ ಸ್ಪಷ್ಟತೆಯನ್ನು ಇಟ್ಟುಕೊಂಡಿರುತ್ತೀರಿ. ಶತ್ರುಗಳಿಂದ ಎಚ್ಚರವಾಗಿರಿ. ಇಂದು ನಿಮ್ಮ ಪ್ರಮುಖ ಕೆಲಸಗಳು ವೇಗದಿಂದ ಸಾಗುವುದು. ನಿಮಗೆ ಅಯಾಚಿತವಾಗಿ ಬರುವ ಶುಭಸಂದರ್ಭವನ್ನು ಸಂತೋಷಿಸುವಿರಿ. ಸಕಾರಾತ್ಮಕ ವಿಷಯಗಳು ವೇಗವನ್ನು ಪಡೆಯುತ್ತವೆ.‌ ಮಕ್ಕಳಿಗಾಗಿ ನೀವು ಹೊಸ ವಾಹನವನ್ನು ಖರೀದಿಸಬಹುದು. ನಿಮ್ಮ ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಲು ನೀವು ಯೋಚಿಸುತ್ತಿದ್ದರೆ, ಈಡೇರುತ್ತದೆ. ಹಳೆಯ ಯೋಜನೆಗಳಿಗೆ ಪುನಶ್ಚೇತನವನ್ನು ನೀಡುವಿರಿ. ಪ್ರಭಾವೀ ಶತ್ರುಗಳನ್ನು ನೀವು ಸೋಲಿಸುವಿರಿ. ಅಜಾಗರೂಕತೆಯಿಂದ ನಿಮಗೆ ನಷ್ಟ ಮಾಡಿಕೊಳ್ಳುವಿರಿ.

ಕರ್ಕಾಟಕ ರಾಶಿ: ಇಂದು ನಿಮ್ಮೊಳಗಿದ್ದ ಮೋಡಗಟ್ಟಿದ ವಾತಾವರಣ, ಕರಗಿ, ನೀರಾಗಿ ಹನಿ ನೀರ ಸುರಿಸುವುದು. ಮಕ್ಕಳಿಂದ ಮಾನಸಿಕ ಹಿಂಸೆ ಎದುರಾದೀತು. ಖರ್ಚು ಹೆಚ್ಚಾಯಿತು ಎನ್ನುವ ಭಯವಿರುವುದು. ಉದ್ಯಮಿಗಳಿಗೆ ವ್ಯಾಪಾರಕ್ಕೆ ಸಂಬಂಧಿಸಿದ ಅನಿರೀಕ್ಷಿತ ಪ್ರಯಾಣವು ಬರಲಿದೆ‌. ಯಾರಿಗಾದರೂ ಕಾದು ಸಮಯವು ಹಾಳಾಗುವುದು. ನಿಮಗೆ ಸಂಬಂಧಗಳಲ್ಲಿ ಗೌರವವನ್ನು ಕಾಪಾಡಿಕೊಳ್ಳುವುದು ಕಷ್ಟವಾದೀತು. ನ್ಯಾಯಾಂಗದ ವಿಷಯಗಳಲ್ಲಿ ನೀವು ತಾಳ್ಮೆಯನ್ನು ಕಾಪಾಡಿಕೊಳ್ಳಬೇಕು. ಶುದ್ಧ ಮನಸ್ಸಿನಂತೆ ತೋರಿದರೂ ಅಂತರಂಗದಲ್ಲಿ ಕಲ್ಮಶವು ಹೆಚ್ಚಿರುವುದು. ವಿವಾಹದ ಮಾತುಕತೆಗಳನ್ನು ನಡೆಸಲು ದೂರದ ಊರಿಗೆ ಪ್ರಯಾಣ ಮಾಡುವಿರಿ. ಜಾಣ್ಮೆಯಿಂದ ನಿಮ್ಮ ಕೆಲಸವನ್ನು ಬೇಗ ಪೂರ್ಣ‌ಮಾಡುವಿರಿ. ಉದ್ಯೋಗದಲ್ಲಿ ಹೊಸ ವಿಚಾರಗಳನ್ನು ನೀವು ಕಲಿಯಬೇಕಾಗುವುದು. ಕಳೆದುಕೊಂಡಷ್ಟು ವೇಗವಾಗಿ ಉಳಿಸಿಕೊಳ್ಳುವುದು ಕಷ್ಟವೆನಿಸುವುದು.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!