AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope 24 March: ದಿನಭವಿಷ್ಯ; ನೂತನ ಗೃಹನಿರ್ಮಾಣದ ಬಗ್ಗೆ ಚಿಂತನೆ, ಹಣಕಾಸಿನ ಒತ್ತಡ ಕಾಡುವುದು

Nitya Bhavishya: 2024 ಮಾರ್ಚ್​ 24 ಭಾನುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ. ಯಾವ ರಾಶಿಯವರು ಇಂದು ಜಾಗೃಕರಾಗಿರಬೇಕು ಎಂದು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 24 March: ದಿನಭವಿಷ್ಯ; ನೂತನ ಗೃಹನಿರ್ಮಾಣದ ಬಗ್ಗೆ ಚಿಂತನೆ, ಹಣಕಾಸಿನ ಒತ್ತಡ ಕಾಡುವುದು
ಪ್ರಾತಿನಿಧಿಕ ಚಿತ್ರImage Credit source: Getty Images
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 24, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಭಾನು, ತಿಥಿ :ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಗಂಡ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 05:12 ರಿಂದ 06:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:39 ರಿಂದ 02:10ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ03:41 ರಿಂದ 05:12 ರ ವರೆಗೆ.

ಮೇಷ ರಾಶಿ: ಸಂಗಾತಿಯು ಇಂದು ನಿಮ್ಮ ಆಸೆಗೆ ನೀರೆರೆಚಬಹುದು. ಉದ್ಯೋಗದಲ್ಲಿ ಪ್ರೀತಿಯು ಹಲವು ಕಾರಣಗಳಿಂದ ಕಡಿಮೆ ಆಗಬಹುದು. ಪಕ್ಷಪಾತಧೋರಣೆಯಿಂದ ನೀವು ಹೊರಬಂದರೆ ಮುಂದಿನ ಹಾದಿ ಸುಗಮ‌. ನಿಮ್ಮ ವೇಗಕ್ಕೆ ವಹಿಸಿಕೊಂಡ ಕೆಲಸವು ಆಗದೇ ಇರುವುದು ನಿಮಗೆ‌ ಬೇಸರ ತರಿಸಬಹುದು.‌ ನೌಕರರ ಮೇಲೆ ಸಿಟ್ಟಾಗಬೇಕಾಗುವುದು. ಕುಟುಂಬದ ಮರ್ಯಾದೆಗೆ ತಕ್ಕಂತೆ ವರ್ತನೆ ಇರಲಿ. ಕಛೇರಿಯ ಕಾರ್ಯವು ಇಂದು ಅಧಿಕವಾಗಿ ಇರಲಿದೆ. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ನಿಮಗೆ ಜೀವನ ಸುಮ್ಮನೆ ನಷ್ಟವಾಗುತ್ತಿದ್ದಂತೆಲ್ಲ ಭಾಸವಾಗಿ, ಏನಾದರೂ ಹೊಸತನ್ನು ಮಾಡುವ ಆಸೆಯಾಗುವುದು‌ ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು.‌ ಅಪರಿಚಿತರು ಇಂದು ಕಾರ್ಯಕ್ಕೆ ವಿಘ್ನದಂತೆ ಬರುವರು.

ವೃಷಭ ರಾಶಿ: ಬೇಕಾದಷ್ಟಕ್ಕೆ ಮಾತ್ರ ನಿಮ್ಮ ಮಾತು ಇರಲಿ. ನಿಮ್ಮಲ್ಲೇ ತಪ್ಪನ್ನು ಇಟ್ಟುಕೊಂಡು ಪರರನ್ನು ದೂಷಿಸುವುದು ಸರಿಯಾಗದು. ನಿಮ್ಮ ಉದ್ಯಮಕ್ಕ ಅನುಭವಿಗಳ ಕೊರತೆ ಅತಿಯಾದಂತೆ ಕಾಣಿಸುವುದು. ಅತಿಯಾದ ಮೋಹವು ನಿಮ್ಮ ವಿವೇಚನಾ ಶಕ್ತಿಯನ್ನು ಕುಗ್ಗಿಸಬಹುದು. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ಕರ್ತವ್ಯದಲ್ಲಿ ನಿರಾಸಕ್ತಿ ಇರುವುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ಭವಿಷ್ಯವು ಅನಿಶ್ಚಿತ ಎನಿಸಬಹುದು. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು. ಇನ್ನೊಬ್ಬರನ್ನು ಮೆಚ್ಚಿಸಿ ಮಾಡುವ ಕಾರ್ಯಕ್ಕೆ ಗುಣಮಟ್ಟ ಕಡಿಮೆಯೇ.

ಮಿಥುನ ರಾಶಿ: ನೀವೇ ಹಾಕಿಕೊಂಡ ನಿರ್ಬಂಧಗಳನ್ನು ನೀವು ದಾಟಲಾಗದು. ಖುಷಿಯ ಕ್ಷಣಗಳನ್ನು ನೀವೇ ಕೈಯಾರೆ ನಾಶ ಮಾಡಿಕೊಳ್ಳುವಿರಿ. ಕೆಲವು ಸೂಕ್ಷ್ಮ ವಿಚಾರವನ್ನು ನೀವು ಜೋಪಾನವಾಗಿ ನಿರ್ವಹಿಸಬೇಕಾಗುವುದು. ಆಪ್ತರನ್ನು ನೀವು ಬಹಳ ಆತ್ಮೀಯವಾಗಿ ಕಾಣುವಿರಿ. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಕಲೆಯಲ್ಲಿ ಉಂಟಾದ ಆಸಕ್ತಿಯು ನಿಮ್ಮ ಮನಸ್ಸನ್ನು ಚೆನ್ನಾಗಿಡಬಹುದು. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ಹಳೆಯ ರೋಗಗಳಿಂದ ನೀವು ಮುಕ್ತರಾದಂತೆ ತೋರುವುದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳಬೇಕಾದೀತು. ಮನಸ್ಸಿನಿಂದ ಗಟ್ಟಿಯದ ಹೊರತು ಯಾವುದನ್ನೂ ನಿಭಾಯಿಸಲು ಆಗದು.

ಕಟಕ ರಾಶಿ: ಮಕ್ಕಳ ವಿದ್ಯಾಭ್ಯಾಸಕ್ಕೆ ನೀವು ಪೂರಕವಾಗಿ ಇರುವುದು ಉತ್ತಮ. ಕಳೆದುದನ್ನು ಚಿಂತಿಸಿ ಸಮಯ ವ್ಯರ್ಥ ಮಾಡಿಕೊಳ್ಳುವಿರಿ‌. ಬೇಕಾದವರನ್ನು ದೂರ ಮಾಡಿಕೊಂಡು ಏನನ್ನೂ ಸಾಧಿಸಲಾರಿರಿ. ಯಾರ ಬೆಂಬಲವನ್ನೂ ನಿರೀಕ್ಷಿಸದೇ ನಿಮ್ಮ ಕಾರ್ಯವನ್ನು ಮಾಡುವಿರಿ. ನಿಮ್ಮ ಯೋಜನೆಗಳು ವಾಸ್ತವಕ್ಕೆ ಹತ್ತಿರವಿರಬಹುದು. ಸಮಾರಂಭಗಳಿಗೆ‌ ಸ್ನೇಹಿತರ ಜೊತೆ ಹೋಗುವಿರಿ. ಅಪರಿಚಿತರು ನಿಮ್ಮ ಬಳಿ ಹಣಕ್ಕಾಗಿ ಪೀಡಿಸಬಹುದು. ವಂಚನೆಗೆ ಗೊತ್ತಾಗದಂತೆ ಸಿಕ್ಕಿಕೊಳ್ಳಬೇಕಾದೀತು. ನಿಮ್ಮ ಸ್ಥಾನಕ್ಕೆ ಯೋಗ್ಯವಾದ ಮಾತು ಇರಲಿ.‌ ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಯಾರ ಸಲಹೆ ಪಡೆಯದೇ ಮನಸ್ಸಿಗೆ ಬಂದಂತೆ ವ್ಯವಹರಿಸುವುದನ್ನು ಬಿಡಿ. ಸಂಗಾತಿಯ ಆರೋಗ್ಯದ ಅಧಿಕ ಲಕ್ಷ್ಯ ಅವಶ್ಯಕ. ನಿಮ್ಮವರೇ ನಿಮಗೆ ಭಯವನ್ನು ಕಾಡಬಹುದು.

ಸಿಂಹ ರಾಶಿ: ಇಂದು ಆರ್ಥಿಕ ಸುಭದ್ರತೆಯ ಬಗ್ಗೆ ಯಾರದ್ದಾದರೂ ಸಲಹೆಗಾರ ಪಡೆಯುವುದು ಉತ್ತಮ. ಮನಸೋ ಇಚ್ಛೆ ವ್ಯಕ್ತಪಡಿಸಿ ವ್ಯವಹಾರವನ್ನು ಮಾಡಲು ನಿಮಗೆ ಆಗದು. .ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ತಡೆಗಟ್ಟಲು ಕೆಲಸದಲ್ಲಿ ಅತಿಯಾದ ದೃಢತೆಯನ್ನು ತಪ್ಪಿಸಿ. ಸಣ್ಣ ವ್ಯಾಪಾರವು ಅಧಿಕಫಲವನ್ನು ಕೊಡುವುದು. ಕೆಟ್ಟ ಅಭ್ಯಾಸಕ್ಕೆ ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಸರಳ ಉಪಾಯವನ್ನು ಕಾರ್ಯದಲ್ಲಿ ಹಾಕುವಿರಿ. ಸಿಟ್ಟನ್ನು ಎಲ್ಲರೆದುರು ಹೊರಹಾಕುವುದು ಬೇಡ. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ‌ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ಉಪಕಾರದ ಸ್ಮರಣೆಯನ್ನು ನೀವು ಇಟ್ಟುಕೊಳ್ಳುವುದು ಅನಿವಾರ್ಯ. ನಿಮ್ಮ ಬಗ್ಗೆ ನಿಮಗೆ ಇರಲೇಬೇಕಾದ ಕೆಲವು ವಿಚಾರಗಳನ್ನು ರೂಢಿಸಿಕೊಳ್ಳಿ.

ಕನ್ಯಾ ರಾಶಿ: ದೇಹದ ಯಾವುದೋ ಒಂದು ಭಾಗಕ್ಕೆ ಹೊಕ್ಕ ವಿಷವು ಇಡೀ ದೇಹವನ್ನು ನಾಶ ಮಾಡುವಂತೆ ಕುಟುಂಬಕ್ಕೆ ಹೊಕ್ಕ ಕೆಟ್ಟ ವಿಚಾರಗಳು ಕುಟುಂಬವನ್ನೇ ನಾಶ ಮಾಡಲು ಸಾಕು. ಯಾರಿಗೆ ಎಷ್ಟು ಪ್ರಾಮುಖ್ಯ ಕೊಡಬೇಕು ಎನ್ನುವುದನ್ನು ತಿಳಿದುಕೊಳ್ಳುವ ಅವಶ್ಯಕತೆ ಇದೆ‌. ಮುನ್ನುಗ್ಗಿ ನಡೆಯುವುದು ಸರಿಯಾದರೂ, ದಾರಿ ಹೇಗಿದೆ ಎಂಬುದನ್ನು ಗಮನಿಸಬೇಕಾಗುವುದು‌. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ‌ ತಪ್ಪನ್ನು ಒಪ್ಪಿಕೊಂಡು ಹೊಂದಾಣಿಕೆ ಮಾಡಿಕೊಳ್ಳುವಿರಿ. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ. ಯಾವ ವಿರೋಧವನ್ನು ಸಹಿಸುವ ಮನಃಸ್ಥಿತಿ ಇಂದು ನಿಮಗೆ ಇರದು.

ತುಲಾ ರಾಶಿ: ನೀವು ಎಲ್ಲ ರೀತಿಯಿಂದ ಸುರಕ್ಷಿತರಾಗಿದ್ದರೂ ಎಲ್ಲೋ ಒಂದು ಕಡೆ ಅಸಮಾಧಾನ ನಿಮ್ಮ ತಲೆಯೊಳಗೆ ನುಸುಳುವುದು. ಶತ್ರುಗಳ ಬಗೆಗೆ ನಿಮಗೆ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವಿರಿ. ದಾಂಪತ್ಯದಲ್ಲಿ ಇನ್ನೊಬ್ಬರ ಕಾರಣದಿಂದ ಕಲಹವಾಗಬಹುದು. ರಾಜಕೀಯದಲ್ಲಿ ತೃಪ್ತಿ ಸಿಗದೇ ತೊಳಲಾಟ ಇರಲಿದೆ. ಸಂಗಾತಿಯ ಆರೋಗ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ಹಿರಿಯರ ಮಾರ್ಗದರ್ಶನವನ್ನು ಶಿರಸಾ ಅಲಿಸುವಿರಿ. ಅವ್ಯಕ್ತವಾದ ನೆಮ್ಮದಿಯಿಂದ ಬೀಗಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಎಂದೋ ಆದ ಬೇಸರವನ್ನು ಸ್ನೇಹಿತನ ಮುಂದೆ ಇಂದು ಪ್ರಕಟಿಸುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ಪ್ರತ್ಯೇಕತೆಯನ್ನು ನೀವು ಬಯಸುತ್ತಿರುವಿರಿ. ಹೂಡಿಕೆಯಿಂದ ಆರ್ಥಕ ಅಭಿವೃದ್ಧಿಯಾಗಲಿದೆ ಎಂಬ ನೆಮ್ಮದಿ ಇರುವುದು.

ವೃಶ್ಚಿಕ ರಾಶಿ: ನಿಮ್ಮಿಂದಾದ ತಪ್ಪಿಗೆ ನೀವೇ ಕ್ಷಮೆ ಯಾಚಿಸಿ ಅದನ್ನು ಸರಿಮಾಡಿಕೊಳ್ಳುವಿರಿ. ಸಮಾಜಿಕ ಕಾರ್ಯಗಳಿಂದ ಪ್ರಶಂಸೆಯು ನಿಮ್ಮತ್ತ ಅನಾಯಾಸವಾಗಿ ಹರಿದುಬರುವುದು. ಸಮಚಿತ್ತವು ನಿಮ್ಮ ದುಃಖದ ನಿವಾರಣೆಗೆ ಕಾರಣವಾಗುತ್ತದೆ. ನಕಾರಾತ್ಮಕ ವಿಚಾರಗಳ ಕಡೆ ಗಮನ ಬೇಡ. ಆದಾಯ ಮೂಲದ ಬಗ್ಗೆ ಅಸಮಾಧಾನ ಬರಬಹುದು. ನಿಮ್ಮ ಬಗ್ಗೆ ಇರುವ ಭಾವವು ಬದಲಾಗಲಿದ್ದು ನಕಾರಾತ್ಮಕ ಪ್ರತಿಕ್ರಿಯೆಯು ನಿಮ್ಮಂದ ಬರಲಿದೆ. ಭೂಮಿಯ ಲಾಭವು ಆಗಲಿದ್ದು ಅನೇಕ‌ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಹೊಸ ಉದ್ಯಮದ ಕಡೆ ಸೆಳೆತವು ಅತಿಯಾಗಬಹುದು. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಲಿಕ್ಕೆ ಸಿಗುವುದು. ನಿಮ್ಮ ಕೆಲಸವನ್ನು ಶಿಸ್ತಿನಿಂದ ಮಾಡಿ ಮುಗಿಸುವಿರಿ.

ಧನು ರಾಶಿ: ನಿಮ್ಮ ಬಗ್ಗೆಯೇ ನಿಮಗೆ ನಕಾರಾತ್ಮಕ ಯೋಚನೆಗಳು ಬರಬಹುದು. ಅದನ್ನು ನಿಲ್ಲಿಸಲು ಪ್ರಯತ್ನಿಸಿ. ಮನಸ್ಸಿಗೆ ಬೇರೆ ಯಾವುದಾದರೂ ಕೆಲಸ ಕೊಡಿ. ಸಹೋದರರ ಬಗ್ಗೆ ನಿಮಗಿರುವ ಭಾವವು ಬದಲಾದೀತು. ಕುಟುಂಬದ ಸಮಸ್ಯೆಗಳಿಂದಾಗಿ ನಿಮ್ಮ ಸಂಗಾತಿ ಇಂದು ಅಸಮಾಧಾನಗೊಳ್ಳಬಹುದು. ಎಲ್ಲವನ್ನೂ ವಹಿಸಿಕೊಂಡು ಅನಂತರ ಅತಂತ್ರವಾದೀತು. ಮಾನಸಿಕ ಅಸಮತೋಲನವನ್ನು ಕಾಯ್ದುಕೊಳ್ಳುವುದು ಸವಾಲಾಗಬಹುದು. ವಾಹನ ಖರೀದಿಗೆ ಆಲೋಚನೆ ಇರಲಿದ್ದು ಸಾಲ ಮಾಡಬೇಕಗಬಹುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಇಂದು ಮಾಡುವ ಎಲ್ಲ ಕಾರ್ಯಗಳನ್ನೂ ಪೂರ್ಣ ಮಾಡಲಾರಿರಿ. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು. ಮನೆಯವರ ಸಣ್ಣ ತಪ್ಪುಗಳನ್ನು ಸಹಿಸಲಾರಿರಿ. ಮತ್ತೆ ಮತ್ತೆ ಉಂಟಾದ ಅನಾರೋಗ್ಯದಿಂದ ನಿಮ್ಮ ದಿನಚರಿಯನ್ನೇ ಬದಲಾಯಿಸಿಕೊಳ್ಳಬೇಕಾಗುವುದು.

ಮಕರ ರಾಶಿ: ಇಂದಿನ ಸಮಾರಂಭದಲ್ಲಿ ನಿಮ್ಮನ್ನು ಹುಡುಕಿಕೊಂಡು ಭೇಟಿಮಾಡಬಹುದು. ಮಕ್ಕಳ ಮೇಲೆ ನಿಮ್ಮ ಪ್ರೀತಿಯು ಕಡಿಮೆಯಾಗುವುದು. ನಿಮ್ಮ ಚುರುಕುತನದಿಂದ ಎಲ್ಲರನ್ನೂ ಎಚ್ಚರಿಸುವಿರಿ. ಇದ್ದಕಿದ್ದಂತೆ ಅಭ್ಯಾಸದ ಕಡೆ ಸೆಳೆತ ಹೆಚ್ಚಾಗುವುದು. ಸುಮ್ಮನಿರುವ ಶತ್ರುವನ್ನು ಕೆಣಕಿ ಮೈಮೇಲೆ ಹಾಕಿಕೊಳ್ಳುವಿರಿ. ಪ್ರೀತಿಯ ವಿಚಾರಕ್ಕೆ ನಿಮಗೆ ಬಂದರೆ ಪೂರ್ಣ ಸಮಾಧಾನ‌ ಸಿಗದು.‌ ವಿದ್ಯಾರ್ಥಿಗಳು ಸಹವಾಸದೋಷದಿಂದ ಕೆಡುವ ಸಾಧ್ಯತೆ ಇದೆ. ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಪ್ರಯಾಣವನ್ನು ಆನಂದಿಸುವಿರಿ.

ಕುಂಭ ರಾಶಿ: ಪುಣ್ಯಕ್ಷೇತ್ರಗಳ ದರ್ಶನದಿಂದ ವ್ಯಾವಹಾರಿಕ ಒತ್ತಡಗಳು ಕಡಿಮೆಯಾಗುವುದು. ನೂತನ ಗೃಹನಿರ್ಮಾಣದ ಬಗ್ಗೆ ಆಸಕ್ತಿ ಹೆಚ್ಚುವುದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ಅಡ್ಡಗಾಲು ಹಾಕಿಯಾರು. ನಿಮ್ಮ ಇಚ್ಛೆಗಳು ಪೂರ್ಣವಾಗದೇ ಬೇಸರವಾಗಬಹುದು. ಪ್ರಭಾವಿಗಳ ಬೆಂಬಲವನ್ನು ಅಪೇಕ್ಷಿಸುವಿರಿ. ಉದ್ಯೋಗಕ್ಕಾಗಿ ಅಲೆದಾಡಿ ಸ್ಥಿತಿ ಬರಲಿದ್ದು, ಆಯಾಸವೂ ಬೇಸರವೂ ನಿಮಗೆ ಆಗಬಹುದು. ನಿಮ್ಮ ಪಿತ್ರಾರ್ಜಿತ ಆಸ್ತಿಯು ನಷ್ಟವಾಗಬಹುದ ಎಂಬ ಆತಂಕವು ಇರಲಿದೆ. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಅನಂತರ ನೀವೂ ಹಗುರಾಗಬಹುದು. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ಕಳ್ಳತನದ ಭೀತಿಯು ನಿಮಗೆ ಇರವುದು‌. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು. ಯಾರಿಗಾಗಿಯೋ ನೀವು ಸಮಯವನ್ನು ಕೊಡಬೇಕಾಗಬಹುದು.

ಮೀನ ರಾಶಿ: ಇಂದು ನೀವು ಮನೆ ಕೆಲಸವನ್ನು ಬೇಗ ಮುಗಿಸಿ ಸ್ವಲ್ಪ ಬಿಡುವು ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಹೂಡಿಕೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವಿರಿ. ಕೌಟುಂಬಿಕ ಜೀವನವು  ಶಾಂತಿಯುತ ಮತ್ತು ಸಂತೋಷದಿಂದ ಇರುವುದು‌‌. ಎಲ್ಲದಕ್ಕೂ ಇಂದು ತಾಳ್ಮೆ ಅತ್ಯಂತ ಅವಶ್ಯಕ. ಸಂಬಂಧಗಳನ್ನು ಆಪ್ತವಾಗಿಸಿಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಸ್ತ್ರೀಯರಿಂದ ಇಂದಿನ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸಬಹುದು. ಅದನ್ನು ನಿರ್ಲಕ್ಷಿಸಿ ಬೇಕಾದ ಕಡೆಯಲ್ಲಿ ತೊಡಗಿಸಿ. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಇನ್ನೊಬ್ಬರನ್ನು ರಿಪೇರಿ ಮಾಡಲು ಹೋಗಿ ಸಮಯ ಹಾಳಾದೀತು. ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶವು ಬರಬಹುದು.

ಲೋಹಿತ ಹೆಬ್ಬಾರ್-8762924271 (what’s app only)

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?