AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಸಾಲ‌ ಪಡೆದವರು ಪೀಡಿಸಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಡಿಸೆಂಬರ್​​ 02) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ಸಾಲ‌ ಪಡೆದವರು ಪೀಡಿಸಬಹುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 02, 2023 | 12:45 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಡಿಸೆಂಬರ್​ ​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಬ್ರಹ್ಮ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:33 ರಿಂದ 10:57 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:47 ಗಂಟೆ 03:11 ನಿಮಿಷಕ್ಕೆ, ಗುಳಿಕ ಕಾಲ ಬೆಳಗ್ಗೆ 06:43 ರಿಂದ 08:08ರ ವರೆಗೆ.

ಧನು ರಾಶಿ : ವೈದ್ಯವೃತ್ತಿಯು ಹೊಸ ತಿರುವನ್ನು ಪಡೆದುಕೊಳ್ಳಬಹುದು. ನಿಮ್ಮಿಂದಾಗದ ಕಾರ್ಯದಲ್ಲಿ ಶ್ರದ್ಧೆಯು ಆಧಿಕವಾಗಿರುವುದು. ತಮಾಷೆಗೆ ಆಡಿದ ಮಾತು ಕಲಹವಾಗಿ ಪರಿವರ್ತಿತವಾದೀತು. ಸರ್ಕಾರದ ಅಧಿಕಾರಗಳ ಭಯವು ಇರಲಿದೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ. ಆಹಾರ ವ್ಯತ್ಯಾಸದಿಂದ ಹೊಟ್ಟೆಯಲ್ಲಿ ಶೂಲೆ ಕಾಣಿಸಿಕೊಳ್ಳಬಹುದು. ದೇಹದಂಡನೆಯು ಹೊಸ ಖಯಿಲೆಯನ್ನು ತರಿಸಬಹುದು. ಮನೆಯ ಔಷಧಿಯಿಂದ ಅದನ್ನು ಸರಿ ಮಾಡಿಕೊಳ್ಳಿ. ನಿಮಗೆ ಸಂಸ್ಥೆಯಲ್ಲಿ ಕಾರ್ಯವನ್ನು ನಿರ್ವಹಿಸಲು ಕರೆ ಬರಬಹುದು. ನಿಮ್ಮ ಕಳೆದ ಜೀವನವನ್ನು ಮೆಲುಕುಹಾಕುವಿರಿ. ಇಂದು ಸಾಲದಿಂದ ನೀವು ಮುಕ್ತರಾಗಿ ಸ್ವಲ್ಪ ನೆಮ್ಮದಿ ಪಡುವಿರಿ. ಕೃಷಿಕರು ತಮ್ಮ ಉತ್ಪನ್ನದಿಂದ ಅಲ್ಪ ಲಾಭ ಪಡೆವರು. ವಿನಾಕಾರಣ ಇನ್ನೊಬ್ಬರ ಮೇಲೆ ಸಿಟ್ಟಾಗುವುದು ಬೇಡ. ಇನ್ನೊಬ್ಬರ ಮಾತನ್ನು‌ ಕೇಳುವ ಸಹನೆ ಇರಲಿ. ಮರೆವು ಹೆಚ್ಚಾದಂತೆ ಅನ್ನಿಸೀತು.

ಮಕರ ರಾಶಿ : ನಿಮ್ಮವರು ಎಂಬ ಮನೋಭಾವ ಅಧಿಕವಾಗಿ ಕಾಡುವುದು.‌ ಅಪರಿಚಿತ ಪ್ರದೇಶವು ನಿಮಗೆ ಆತಂಕವನ್ನು ಹೆಚ್ಚಿಸಬಹುದು. ಸಂಗಾತಿಯ ಬಳಿ ವಾಹನ ಖರೀದಿಗಾಗಿ ಒತ್ತಾಯಿಸುವಿರಿ. ಆಪ್ತರಿಂದ ನಿಮಗೆ ಇಷ್ಟವಾದ ವಸ್ತುವು ಪ್ರಾಪ್ತವಾಗುವುದು. ಆಕಸ್ಮಿಕವಾಗಿ ಅನಾರೋಗ್ಯವು ಕಾಣಿಸಿಕೊಳ್ಳಬಹುದು. ಸಾಲ‌ಪಡೆದವರು ನಿಮ್ಮನ್ನು ಪೀಡಿಸಬಹುದು. ಸಂಗಾತಿಯನ್ನು ಕಳೆದುಕೊಳ್ಳುವ ಭೀತಿ ಇರಲಿದೆ. ಪಾಲುದಾರಿಕೆಯಲ್ಲಿ ಇಂದು ಸಣ್ಣ ವಿಚಾರಕಗಕೇ ಕಲಹವಾಗುವುದು. ಇಂದು ಅಗತ್ಯವಿರುವಷ್ಟು ಮಾತ್ರವೇ ಮಾತನಾಡಿ. ನಿಮ್ಮದಲ್ಲದ ವಸ್ತುಗಳನ್ನು ಯಾರಿಗಾದರೂ ಕೊಡುವ ಮೊದಲು ಯೋಚಿಸಿ. ಗೊತ್ತಿಲ್ಲ ಕೆಲಸಕ್ಕೆ ಹುಂಬುತನ‌ ಬೇಡ. ನಿಮ್ಮ ಮಾತುಗಳು ಹಾಸ್ಯಾಸ್ಪದವಾಗುವುದು. ಹಿರಿಯರ ಜೊತೆ ಅನುಭವವನ್ನು ಹಂಚಿಕೊಳ್ಳುವಿರಿ.

ಕುಂಭ ರಾಶಿ : ನಿಮಗೆ ಆತ್ಮಸಂತೋಷವೇ ಮುಖ್ಯವಾಗಿದ್ದು, ಅದನ್ನು ಪಡೆಯುವಿರಿ. ಮಕ್ಕಳ ಕಾರಣದಿಂದ ನೀವು ತಲೆ ತಗ್ಗಿಸಬೇಕಾಗಬಹುದು. ಆಕಸ್ಮಿಕ ಧನಲಾಭದಿಂದ ಸಂತಸವು ಇರಲಿದೆ. ರಪ್ತು ಉದ್ಯಮದಲ್ಲಿ ನಿಮಗೆ ಲಾಭ ಸಿಗಲಿದೆ. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡುವಿರಿ. ಪರೀಕ್ಷೆಯಲ್ಲಿ ನೀವು ಅಂದುಕೊಂಡಷ್ಟು ಫಲಿತಾಂಶ ಸಿಗದು. ನಿಮ್ಮ ಪ್ರೀತಿಗೆ ಬೆಲೆ ಸಿಗದೇಹೋದೀತು. ಸಂಗಾತಿಯು ನಿಮಗೆ ಒಂದೇ ವಿಚಾರಗಳನ್ನು ಮತ್ತೆ ಮತ್ತೆ ಹೇಳಿ ಬೇಸರ ತರಿಸುವರು. ಮೈ ಚಳಿಯನ್ನು ಬಿಟ್ಟು ಧೈರ್ಯದಿಂದ ಮುನ್ನಡೆಯಿರಿ. ನಿಮಗಾದ ಸಹಾಯವನ್ನು ನೀವು ಸ್ಮರಿಸಿಕೊಳ್ಳುವಿರಿ. ಅಧಿಕಾರಿಗಳ ಪ್ರಶ್ನೆಗೆ ನಿಮ್ಮ ಉತ್ತರವು ಸರಿಯಾಗಿ ಇರಲಿ. ನಿಮ್ಮನ್ನು ನೋಡುವ ದೃಷ್ಟಿಯು ಬದಲಾದೀತು. ಸಿಟ್ಟನ್ನು ಬಿಟ್ಟು ಶಾಂತವಾಗಿ ಸಮಾಧಾನ ಚಿತ್ತದಿಂದ ಮಾತನಾಡಿ.

ಮೀನ ರಾಶಿ : ಉದ್ಯೋಗದಲ್ಲಿ ಬಡ್ತಿ ಸಿಗಬಹುದು. ಸ್ಥಿರಾಸ್ತಿ ಅಲ್ಪ ಭಾಗವನ್ನು ಮಾರಾಟ ಮಾಡುವ ಚಿಂತನೆ ನಡೆಸುವಿರಿ. ಜೀವನ ಸಂಗಾತಿಯನ್ನು ಅಚ್ಚರಿಗೊಳಿಸುವಿರಿ. ನಿಮ್ಮ ಎಲ್ಲ ಕಾರ್ಯವನ್ನು ಬಿಟ್ಟು ಇಂದು ನೀವು ಅವರ ಜೊತೆ ಸಮಯವನ್ನು ಕಳೆಯುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಸಹೋದರನಿಂದ ಆರ್ಥಿಕ ಸಹಕಾರವನ್ನು ನಿರೀಕ್ಷಿಸುವಿರಿ. ಆರೋಗ್ಯವು ನಿನ್ನೆಗಿಂತ ಉತ್ತಮವಾಗಿದ್ದು, ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟ‌ಮಾಡುವ ಆಲೋಚನೆ ಇರಲಿದೆ. ನಿಮ್ಮ ಸ್ನೇಹಿತರಲ್ಲಿ ಇಂದು ದೊಡ್ಡ ಸಾಲವನ್ನು ಕೇಳುವಿರಿ. ಸ್ವೋದ್ಯೋಗವನ್ನು ಮಾಡುತ್ತಿದ್ದರೆ ಸ್ವಲ್ಪ ನಷ್ಟವಾಗಬಹುದು. ಕುಟುಂಬವು ನಿಮ್ಮ ಜೊತೆಗೆ ನಿಲ್ಲುವುದು. ಹಳೆಯ ವಿಚಾರಗಳನ್ನು ನೀವು ಮತ್ತೆ ಕೆದಕುವಿರಿ. ನಿಮ್ಮ ಮಾತಿನಿಂದ ಯಾವ ಕೆಲಸವು ಆಗದು.

-ಲೋಹಿತಶರ್ಮಾ – 8762924271 (what’s app only)

ನೂತನ ಜಿಎಸ್​ಟಿಯಿಂದ ಕರ್ನಾಟಕಕ್ಕೆ 70 ಸಾವಿರ ಕೋಟಿ ನಷ್ಟದ ಅಂದಾಜು
ನೂತನ ಜಿಎಸ್​ಟಿಯಿಂದ ಕರ್ನಾಟಕಕ್ಕೆ 70 ಸಾವಿರ ಕೋಟಿ ನಷ್ಟದ ಅಂದಾಜು
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ