AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 13ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 13ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 13ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 13, 2023 | 5:18 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 13ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಆರಂಭಿಸಿದ ಕೆಲಸಗಳು ಸಲೀಸಾಗಿ ಮುಗಿಯುವುದಕ್ಕೆ ಬೇಕಾದ ವೇದಿಕೆ ಸಿದ್ಧವಾಗಲಿದೆ. ನಿಮಗೆ ಬೇಕಾದ ಪದಾರ್ಥಗಳು, ಸಹಾಯವನ್ನು ಕೇಳಿ ಪಡೆದುಕೊಳ್ಳುವುದಕ್ಕೆ ಸಂಕೋಚ ಪಡದಿರಿ. ಅನಿರೀಕ್ಷಿತವಾಗಿ ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿಗಳನ್ನು ವಹಿಸುವಂಥ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಆಹ್ವಾನ ಬರುವಂಥ ಯೋಗ ಇದ್ದು, ರುಚಿಕಟ್ಟಾದ ಊಟ- ತಿಂಡಿಗಳನ್ನು ಮಾಡಲಿದ್ದೀರಿ. ಹೊಸ ವಸ್ತ್ರಾಭರಣಗಳನ್ನು ಸಹ ಖರೀದಿಸುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ದೈಹಿಕ ಪರಿಶ್ರಮ ಹೆಚ್ಚಾಗಲಿದೆ. ಯಾವುದೇ ಕೆಲಸ ಮಾಡುವ ಮುಂಚೆ ಸರಿಯಾದ ಯೋಜನೆಯನ್ನು ಮಾಡುವುದು ಮುಖ್ಯ. ಎದುರಿಗಿರುವ ವ್ಯಕ್ತಿಯ ಸಾಮರ್ಥ್ಯವನ್ನು ತಿಳಿದುಕೊಳ್ಳದೆ ಯಾವುದೇ ಆತುರದ ತೀರ್ಮಾನವನ್ನು ತೆಗೆದುಕೊಳ್ಳದಿರಿ. ವಾಹನಗಳು ಇದ್ದಲ್ಲಿ ದುರಸ್ತಿಗಾಗಿ ಹಣ ಖರ್ಚಾಗುವಂಥ ಯೋಗ ಇದೆ. ಇತರರಿಂದ ಶಿಫಾರಸು ಮಾಡಿಸುವ ಮೂಲಕ ಕೆಲವು ಅನುಕೂಲಗಳು ದೊರೆಯಲಿವೆ. ಸಂಗಾತಿ ಜತೆಗೆ ಮಾತುಕತೆ ಆಡುವಾಗ ಎಚ್ಚರಿಕೆ ಇರಲಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪ್ರತಿ ಸಲವೂ ನಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ಸಾಧ್ಯತೆಯೇನೂ ಇರುವುದಿಲ್ಲ. ಕೆಲವು ಬಾರಿ ನಾವೇ ಕೇಳಿ ಪಡೆದುಕೊಳ್ಳಬೇಕಾಗುತ್ತದೆ. ಈ ದಿನ ಅಂಥದ್ದೇ ಪರಿಸ್ಥಿತಿ ಇರುತ್ತದೆ. ನಿಮಗೆ ಸಿಗಬೇಕಾದದ್ದನ್ನು ಕೇಳಿ ಪಡೆಯಬೇಕು. ಉದ್ಯೋಗ ಅಥವಾ ವ್ಯವಹಾರಕ್ಕೆ ಸಂಬಂಧಿಸಿದ ಅತಿ ಮುಖ್ಯವಾದ ವಿಚಾರಗಳು ಏನಾದರೂ ಇದ್ದಲ್ಲಿ ಅದನ್ನು ನೀವು ಮೇಲಿನವರಿಗೆ ಮುಟ್ಟಿಸಿದ್ದೀರಿ ಎಂಬುದಕ್ಕೆ ದಾಖಲೆಗಳನ್ನು ಇಟ್ಟುಕೊಳ್ಳಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಸ್ವಂತ ವ್ಯವಹಾರ ಮಾಡುತ್ತಿರುವವರು ವ್ಯಾಪಾರ ವಿಸ್ತರಣೆಗಾಗಿ ಯೋಜನೆಯನ್ನು ರೂಪಿಸಲಿದ್ದೀರಿ. ಇದಕ್ಕಾಗಿ ಸಾಲ ಪಡೆಯುವುದರ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಎಲ್ಲ ಕೆಲಸವನ್ನು ಒಬ್ಬರೇ ಮಾಡುವುದಕ್ಕೆ ಹೊರಡಬೇಡಿ. ಇತರರ ಸಹಾಯದ ಅಗತ್ಯ ಕಂಡುಬಂದಲ್ಲಿ ಪಡೆದುಕೊಳ್ಳಿ. ಯಾರಿಗೆ ಕಾಲು ನೋವಿನ ಸಮಸ್ಯೆ ಈಗಾಗಲೇ ಅನುಭವಿಸುತ್ತಿದ್ದಲ್ಲಿ ಅದು ಉಲ್ಬಣ ಆಗುವಂತಹ ಸಾಧ್ಯತೆಗಳಿವೆ. ಆ ಬಗ್ಗೆ ಎಚ್ಚರಿಕೆಯನ್ನು ತೆಗೆದುಕೊಳ್ಳಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಬಂಧು- ಮಿತ್ರರನ್ನು ಭೇಟಿ ಆಗುವಂಥ ಯೋಗ ಇದೆ. ಅಥವಾ ದೂರ ಪ್ರಯಾಣಕ್ಕೆ ತೆರಳಬೇಕಾದ ಅಗತ್ಯ ಕಂಡುಬರುತ್ತದೆ. ಸಣ್ಣ- ಪುಟ್ಟ ವಿಚಾರಗಳಿಗೆ ಮಕ್ಕಳ ಜತೆಗೆ ಭಿನ್ನಾಭಿಪ್ರಾಯ ಏರ್ಪಡಬಹುದು. ರಾಜಕಾರಣಿಗಳಿಗೆ ವಿರೋಧಿಗಳಿಂದ ಭಾರೀ ಮುಖಭಂಗ ಆಗುವ ಸಾಧ್ಯತೆಗಳಿವೆ. ನಿಮಗೆ ಸಂಪೂರ್ಣವಾಗಿ ಮಾಹಿತಿ ಇಲ್ಲದ ವಿಚಾರಗಳಿಗೆ ಅಭಿಪ್ರಾಯ ಹೇಳದಿರುವುದು ಉತ್ತಮ ಎನಿಸಿಕೊಳ್ಳುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ದಿಢೀರನೇ ನೀವು ಅಂದುಕೊಂಡಂತೆಯೇ ಹಲವು ಬದಲಾವಣೆಗಳು, ಬೆಳವಣಿಗೆಗಳು ಕಂಡುಬರಲಿವೆ. ಕೋರ್ಟ್ ವ್ಯಾಜ್ಯಗಳು ನಡೆಯುತ್ತಿದ್ದಲ್ಲಿ ಕೆಲವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದಕ್ಕೆ ಅವಕಾಶಗಳು ದೊರೆಯಲಿವೆ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಕೆಲವು ಅನುಕೂಲಗಳು ದೊರೆಯುವ ಸಾಧ್ಯತೆ ಇದೆ. ನಿಮ್ಮ ಜವಾಬ್ದಾರಿಗಳನ್ನು ಸಮಯಕ್ಕೆ ಮುಗಿಸಿದ್ದೀರಾ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ತುಂಬ ಸಮಾಧಾನವಾಗಿ ದಿನ ಕಳೆಯುವುದರ ಕಡೆಗೆ ಆಲೋಚನೆ ಮಾಡಿ. ಬರಬೇಕಾದ ಹಣ ಇದ್ದಲ್ಲಿ ಅದನ್ನು ಫಾಲೋ ಅಪ್ ಮಾಡುವುದು ಮುಖ್ಯವಾಗುತ್ತದೆ. ದೀರ್ಘ ಕಾಲದಿಂದ ನಿರೀಕ್ಷೆ ಮಾಡುತ್ತಿದ್ದ ಅವಕಾಶವೊಂದು ಈಗ ದೊರೆಯುವ ಸಾಧ್ಯತೆಗಳಿವೆ. ಸ್ನೇಹಿತರು ನಿಮ್ಮಿಂದ ಆರ್ಥಿಕ ಸಹಾಯವನ್ನು ಬಯಸಿ ಬರುವಂಥ ಸಾಧ್ಯತೆ ಇದೆ. ಕ್ರೆಡಿಟ್ ಕಾರ್ಡ್ ಬಳಸುವಂಥವರು ಖರ್ಚಿನ ಮೇಲೆ ಹಿಡಿತ ಸಾಧಿಸುವುದು ಬಹಳ ಮುಖ್ಯ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಈಗಾಗಲೇ ನಿರ್ಧಾರವಾದಂಥ ಪ್ರಯಾಣವೋ ಹೂಡಿಕೆ ತೀರ್ಮಾನವನ್ನೋ ಬದಲಿಸಬೇಕಾದಂಥ ಅನಿವಾರ್ಯ ಸೃಷ್ಟಿ ಆಗಲಿದೆ. ಇತರರನ್ನು ನಂಬಿ, ಒಪ್ಪಿಸಿದಂಥ ಕೆಲಸವು ಅಂದುಕೊಂಡಂತೆ ಪೂರ್ತಿ ಆಗದೆ ಬೇಸರ ಆಗಲಿದೆ. ಬ್ಯೂಟಿಪಾರ್ಲರ್ ನಡೆಸುತ್ತಿರುವವರಿಗೆ ಆದಾಯದಲ್ಲಿ ಇಳಿಕೆ ಕಂಡುಬಂದು, ಆತಂಕಕ್ಕೆ ಕಾರಣ ಆಗಬಹುದು. ಆದರೆ ಇದು ತಾತ್ಕಾಲಿಕ ಅಷ್ಟೇ ಎಂಬುದು ಗಮನದಲ್ಲಿ ಇರಲಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಕುಟುಂಬ ಸದಸ್ಯರ ಆರೋಗ್ಯ ವಿಚಾರವು ಆತಂಕಕ್ಕೆ ಕಾರಣ ಆಗಲಿದೆ. ಈ ಹಿಂದೆ ನೀವು ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ಸ್ವಲ್ಪ ಮಟ್ಟಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಇದರಿಂದ ನಿಮ್ಮ ಮೇಲೆ ನಿಮಗೆ ಬೇಸರ ಆಗಲಿದೆ. ಇತರರ ಹಣಕಾಸಿನ ಅಗತ್ಯಗಳಿಗೆ ಸಹಾಯ ನೀಡಬೇಕು ಎಂದು ಆಲೋಚಿಸುವ ಮೊದಲು ನಿಮ್ಮ ಸ್ಥಿತಿಯ ಬಗ್ಗೆ ಆಲೋಚಿಸುವುದು ಮುಖ್ಯವಾಗುತ್ತದೆ. ದೂರದ ಸಂಬಂಧಿಗಳು ಮನೆಗೆ ಭೇಟಿ ನೀಡಲಿದ್ದಾರೆ.

ಲೇಖನ- ಎನ್‌.ಕೆ.ಸ್ವಾತಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್