AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 14ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 14ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 14ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 14, 2023 | 5:12 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಏಪ್ರಿಲ್ 14ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಉದ್ಯೋಗ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಅಲ್ಲಿ ಅನುಸರಿಸುವ ಕೆಲವು ಪದ್ಧತಿಗಳನ್ನು ಬದಲಾವಣೆ ಮಾಡುವುದಕ್ಕೆ ಯೋಜನೆ ರೂಪಿಸುವ ಸಾಧ್ಯತೆ ಇದೆ. ಇತರರ ವೈಯಕ್ತಿಕ ವಿಚಾರದ ಬಗ್ಗೆ ಈ ಹಿಂದೆ ನೀವು ಮಾತನಾಡಿದ್ದು ಈಗ ನಿಮಗೆ ಪಶ್ಚಾತ್ತಾಪ ಮೂಡುವಂತೆ ಮಾಡಬಹುದು. ತಂದೆಯವರು, ತಂದೆ ಸಮಾನರಾದವರ ಆರೋಗ್ಯ ವಿಚಾರ ಚಿಂತೆಗೆ ಗುರಿ ಆಗುವಂತೆ ಮಾಡುತ್ತದೆ. ಹಣಕಾಸಿನ ಅಗತ್ಯ ಹೆಚ್ಚು ಕಂಡುಬರಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಈ ದಿನ ನೀವಾಗಿಯೇ ಕೆಲವು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಲಿದ್ದೀರಿ. ದೊಡ್ಡ ಗುಂಪುಗಳ ಮಧ್ಯೆ ಮಾತನಾಡುವ ಸಂದರ್ಭಗಳಲ್ಲಿ ಉತ್ಸಾಹದಿಂದಲೋ ಉದ್ವೇಗದಿಂದಲೋ ಹೇಳಿದ ವಿಚಾರಗಳಿಂದ ಸಮಸ್ಯೆಗಳು ಎದುರಾಗಬಹುದು. ಹೋಟೆಲ್ ಉದ್ಯಮದಲ್ಲಿ ಇರುವಂಥವರು ವಿಸ್ತರಣೆಗಾಗಿ ಯೋಜನೆ ರೂಪಿಸುವ ಸಾಧ್ಯತೆ ಇದೆ. ಮಕ್ಕಳ ಭವಿಷ್ಯ, ಶಿಕ್ಷಣ, ವಿವಾಹಕ್ಕಾಗಿ ಹೊಂದಿಸುವುಕ್ಕಾಗಿ ಸಾಲಕ್ಕೆ ಪ್ರಯತ್ನಿಸುತ್ತಿರುವವರಿಗೆ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ದೈಹಿಕವಾಗಿ, ಮಾನಸಿಕವಾಗಿ ವಿಶ್ರಾಂತಿ ಪಡೆಯುವುದು ಬಹಳ ಅಗತ್ಯ ಎಂದೆನಿಸುತ್ತದೆ. ತವರು ಮನೆಯ ಸಂಗತಿಗಳು ಹೆಣ್ಣುಮಕ್ಕಳಿಗೆ ಚಿಂತೆಗೆ ಕಾರಣ ಆಗಲಿದೆ. ಆದಾಯ ಹೆಚ್ಚಳ ಮಾಡಿಕೊಳ್ಳಬೇಕು ಎಂಬ ಕಾರಣಕ್ಕೆ ಹೊಸದಾಗಿ ಸ್ವ ಉದ್ಯೋಗಗಳನ್ನು ಆರಂಭ ಮಾಡುವುದಕ್ಕೆ ಯೋಜನೆ ರೂಪಿಸುವ ಸಾಧ್ಯತೆ ಇದೆ. ಉಷ್ಣ ಬಾಧೆ ಇರುವಂಥವರು ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ವಹಿಸಬೇಕಾಗುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಭಾವನಾತ್ಮಕ ವಿಚಾರಗಳು ಈ ದಿನ ಮುನ್ನೆಲೆಗೆ ಬರಲಿವೆ. ನೀವು ಹೇಳಬೇಕಾದ್ದನ್ನು ಮುಲಾಜಿಲ್ಲದೆ ಹೇಳುವುದು ಬಹಳ ಕಷ್ಟವಾಗಲಿದೆ. ನಿಮ್ಮ ಬಲ ಎಂದೆನಿಸಿಕೊಂಡ ಕೆಲವು ನಿರ್ಧಾರಗಳು ಸಹಾಯಕ್ಕೆ ಬರಲಿವೆ. ಹೊಸದಾಗಿ ಏನನ್ನಾದರೂ ಕಲಿಯುವುದಕ್ಕೆ ಆರಂಭಿಸುತ್ತಿದ್ದೀರಿ ಎಂದಾದರೆ ಮಾಮೂಲಿಗಿಂತ ಹೆಚ್ಚಿನ ಶ್ರಮ ಹಾಕುವುದು ಅತ್ಯಗತ್ಯ. ಭೂಮಿ, ವಾಹನ, ದೊಡ್ಡ ಸರಕುಗಳ ಸಾಗಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುಂಚಿತವಾಗಿ ಇದು ನಿಮ್ಮ ಶ್ರಮವನ್ನು ಎಷ್ಟು ನಿರೀಕ್ಷಿಸುತ್ತದೆ ಎಂಬ ಲೆಕ್ಕಾಚಾರ ಹಾಕಿಕೊಳ್ಳಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮ್ಮ ಬಳಿ ಇರುವ ಹಣವೆಷ್ಟು ಹಾಗೂ ಅದಕ್ಕೆ ಎಂಥ ಯೋಜನೆ ರೂಪಿಸಿಕೊಳ್ಳಬಹುದು ಎಂಬ ಬಗ್ಗೆ ಲಕ್ಷ್ಯ ನೀಡಿ. ಜಠರಕ್ಕೆ ಸಂಬಂಧಿಸಿದ ಅನಾರೋಗ್ಯ ಸಮಸ್ಯೆಗಳು ಈಗಾಗಲೇ ಕಾಡುತ್ತಿದೆ ಎಂದಲ್ಲಿ ಸೂಕ್ತವಾದ ವೈದ್ಯರನ್ನು ಭೇಟಿ ಆಗಿ, ಚಿಕಿತ್ಸೆ ಪಡೆಯುವುದರ ಕಡೆಗೆ ಗಮನ ನೀಡಿ. ನೀವು ಈಗಾಗಲೇ ಮಾಡಿರುವ ಹೂಡಿಕೆ ಅಂದುಕೊಂಡ ಮಟ್ಟದಲ್ಲಿ ಪ್ರತಿಫಲವನ್ನು ನೀಡುತ್ತಿಲ್ಲ ಎಂಬ ಕಾರಣಕ್ಕೆ ಅದನ್ನು ಬೇರೆಡೆ ಹೂಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಶುಭ ಕಾರ್ಯಗಳಲ್ಲಿ, ಗೆಟ್ ಟು ಗೆದರ್ ಅಥವಾ ಪಾರ್ಟಿಗಳಲ್ಲಿ ಭಾಗೀ ಆಗುವಂಥ ಯೋಗ ಇದೆ. ಮನೆಯ ದುರಸ್ತಿಗೆ, ಪೀಠೋಪಕರಣ, ಎಲೆಕ್ಟ್ರಿಕಲ್ ವಸ್ತುಗಳ ಖರೀದಿಗೆ ಖರ್ಚು ಮಾಡುವಂಥ ಯೋಗ ಇದೆ. ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ಬಗ್ಗೆ ಗಂಭೀರವಾದ ಆಲೋಚನೆ ಮಾಡಲಿದ್ದೀರಿ. ಪೌರೋಹಿತ್ಯ, ಜ್ಯೋತಿಷ್ಯ, ದೇವಸ್ಥಾನ ಪಾರುಪತ್ತೆದಾರರಾಗಿ ಇರುವವರಿಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ಗೌರವಾದರಗಳು ನಿಮಗೆ ದೊರೆಯಲಿವೆ. ಕೆಲಸ ಮಾಡುತ್ತಿರುವ ಸ್ಥಳದಲ್ಲಿ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಅಭಿಪ್ರಾಯವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಎಲ್ಲರನ್ನೂ ಸಮಾಧಾನ ಮಾಡುತ್ತೀನಿ ಎಂಬ ಲೆಕ್ಕಾಚಾರ ಹಾಕಿಕೊಳ್ಳುತ್ತಾ ನಿಮ್ಮೊಳಗೆ ಅಸಮಾಧಾನ ಉದ್ಭವಿಸಲಿದೆ. ಈ ದಿನ ಷಣ್ಮುಖನ ಸ್ಮರಣೆ, ಧ್ಯಾನ ಅಥವಾ ಆರಾಧನೆಯನ್ನು ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕೆಲಸದ ಒತ್ತಡವೋ ಅಥವಾ ಏಕ ಕಾಲಕ್ಕೆ ಹಲವು ಜವಾಬ್ದಾರಿಗಳು ನಿರ್ವಹಿಸ ಬೇಕಾಗುವುದರಿಂದ ಕೆಲವು ಮುಖ್ಯವಾದ ಅಂಶಗಳನ್ನು ಮರೆತುಬಿಡುವ ಸಾಧ್ಯತೆ ಇದೆ. ಆದ್ದರಿಂದ ಆದ್ಯತೆಯ ಮೇಲೆ ಯಾವ ಕೆಲಸವನ್ನು ಮೊದಲಿಗೆ ಹಾಗೂ ಆ ನಂತರದಲ್ಲಿ ಮಾಡುವುದು ಯಾವುದು ಎಂಬ ಬಗ್ಗೆ ಪಟ್ಟಿಯೊಂದನ್ನು ಮಾಡಿಟ್ಟುಕೊಂಡು ಬಿಡಿ. ಆಪ್ತರೊಬ್ಬರ ಸಣ್ಣ ಮಟ್ಟಿನ ಅನಾರೋಗ್ಯ ಕೂಡ ನಿಮಗೆ ತೀವ್ರ ತರವಾದ ಆತಂಕವನ್ನು ಮೂಡಿಸಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಲೆಕ್ಕ, ಸಂಶೋಧನೆ ಅಥವಾ ವಿಶ್ಲೇಷಣೆಯಂಥ ಉದ್ಯೋಗದಲ್ಲಿ ಇರುವವರು ನಿಮಗೆ ವಹಿಸಿದ ಜವಾಬ್ದಾರಿಯನ್ನು ಮುಗಿದಿದೆ ಎಂದು ಹೇಳುವ ಮುಂಚೆ ಒಂದಕ್ಕೆ ನಾಲ್ಕು ಬಾರಿ ಪರೀಕ್ಷಿಸಿಕೊಳ್ಳಿ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರಿಂದ ಮತ್ತೊಮ್ಮೆ ಪರಿಶೀಲನೆ ಮಾಡಿಸುವುದು ಉತ್ತಮ ನಿರ್ಧಾರ ಎನಿಸಿಕೊಳ್ಳುತ್ತದೆ. ಮಹಿಳೆಯರು ಉದ್ಯೋಗಕ್ಕಾಗಿ ಪ್ರಯತ್ನವನ್ನು ಪಡುತ್ತಾ ಇದ್ದಲ್ಲಿ ಈ ದಿನ ಅವಕಾಶಗಳ ಬಗ್ಗೆ ಸ್ನೇಹಿತರು ಅಥವಾ ಸಂಬಂಧಿಕರ ಮೂಲಕ ಮಾಹಿತಿ ದೊರೆಯುತ್ತದೆ.

ಲೇಖನ- ಎನ್‌.ಕೆ.ಸ್ವಾತಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ