Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 22ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 22ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಆಗಸ್ಟ್ 22ರ ದಿನಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Aug 22, 2023 | 1:00 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಆಗಸ್ಟ್ 22ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನನಗ್ಯಾಕೆ ಬೇಕು ಇನ್ನೊಬ್ಬರು ವಿಚಾರ ಎಂದು ನಿಮ್ಮಷ್ಟಕ್ಕೆ ನೀವಿದ್ದರೂ ಒಂದಲ್ಲ ಒಂದು ವಿಚಾರಕ್ಕೆ ನಿಮ್ಮ ಹೆಸರನ್ನು ಎಳೆದು ತಂದು, ಮಾತನಾಡಲೇ ಬೇಕಾದ ಸನ್ನಿವೇಶ ಎದುರಾಗಲಿದೆ. ಇಬ್ಬರಲ್ಲಿ ಒಬ್ಬರ ಬಗ್ಗೆ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಬೇಕಾಗುತ್ತದೆ ಎಂಬ ಪರಿಸ್ಥಿತಿ ಬಂದಲ್ಲಿ ಸುಮ್ಮನಿರುವುದು ಉತ್ತಮ. ವೈಯಕ್ತಿಕ ಜೀವನದಲ್ಲಿ ಗೌರವ ಸಿಗುತ್ತಿಲ್ಲ ಎಂದು ಬಲವಾಗಿ ಅನಿಸಲಿದೆ. ಹಣದ ವಿಚಾರಕ್ಕೆ ನಿಮ್ಮ ಆತ್ಮಗೌರವವನ್ನು ಬಿಟ್ಟು, ಸಹಾಯ ಕೇಳಬೇಕಾದ ಸ್ಥಿತಿ ಸೃಷ್ಟಿ ಆಗುತ್ತದೆ. ನಿಮ್ಮ ಬಳಿ ಇರುವಷ್ಟು ಹಣಕ್ಕೆ ಮಾತ್ರ ಯೋಜನೆ ರೂಪಿಸುವುದು ಉತ್ತಮ. ಇಲ್ಲದಿದ್ದಲ್ಲಿ ನಿಮ್ಮ ಮೇಲೆ ಒತ್ತಡ ಹೆಚ್ಚಾಗುತ್ತದೆ. ಸಾಲಕ್ಕೆ ಪ್ರಯತ್ನ ಮಾಡುತ್ತಿದ್ದೀರಿ ಎಂದಾದಲ್ಲಿ ಎಷ್ಟು ಅಗತ್ಯವೋ ಅಷ್ಟನ್ನು ತೆಗೆದುಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಈ ದಿನ ಬಹಳ ವಿಚಾರಗಳಲ್ಲಿ ನಿಮ್ಮ ಪಟ್ಟು ಬಿಗಿ ಆಗಲಿದೆ. ನಾನು ಹೇಳಿದಂತೆಯೇ ಆಗಬೇಕು ಎಂಬಂಥ ನಿಮ್ಮ ಧೋರಣೆ ಸಾಮಾನ್ಯ ದಿನಗಳಿಗಿಂತ ಬಹಳ ವಿಭಿನ್ನವಾಗಿ ಹಾಗೂ ಬಿಗಿಯಾಗಿ ಇರಲಿದೆ. ರಾಜಕಾರಣದಲ್ಲಿ ಇರುವವರಿಗೆ ಆತ್ಮಗೌರವಕ್ಕೆ ಪೆಟ್ಟು ಬೀಳುವಂಥ ಮಾತುಗಳು ಕೇಳಿಬರಲಿವೆ. ನಿಮ್ಮ ಸಾಮರ್ಥ್ಯ ಹಾಗೂ ಈ ಹಿಂದೆ ನೀವು ಮಾಡಿದ ಸಾಧನೆ ಏನು ಎಂಬ ಪ್ರಶ್ನೆಗಳನ್ನು ಎದುರಿಸಲಿದ್ದೀರಿ. ಯುವತಿಯರಿಗೆ ಇಷ್ಟವಿಲ್ಲದ ಸಂಬಂಧವೊಂದನ್ನು ಮದುವೆಗೆ ಒಪ್ಪಿಕೊಳ್ಳಬೇಕು ಎಂಬ ಒತ್ತಡ ಸೃಷ್ಟಿ ಆಗಲಿದೆ. ನಿಮ್ಮ ಪರವಾಗಿ ಮಾತನಾಡುವವರು ಯಾರು ಇರದೆ ಒಂದಿಷ್ಟು ಬೇಸರ ಆಗುವಂಥ ಸಾಧ್ಯತೆ ಇದೆ. ಶೈಕ್ಷಣಿಕ ವಿಚಾರದಲ್ಲಿ ಅಂದುಕೊಳ್ಳದ ರೀತಿಯಲ್ಲಿ ಕೆಲವು ಬೆಳವಣಿಗೆಗಳು ನಡೆಯಲಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಈ ಹಿಂದೆ ನಿಮ್ಮ ಬಗ್ಗೆ ಲಘುವಾಗಿ, ಹಗುರವಾಗಿ ಮಾತನಾಡಿದವರೇ ಸಹಾಯವನ್ನು ಕೇಳಿಕೊಂಡು ಬರುವ ಸಾಧ್ಯತೆ ಇದೆ. ಅನಗತ್ಯವಾದ ಖರ್ಚನ್ನು ಕಡಿಮೆ ಮಾಡುವ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಲಿದ್ದೀರಿ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರ ಜತೆಗೆ ಸ್ನೇಹದಿಂದ ವರ್ತಿಸಿ, ಅವರಿಗೆ ಏನಾದರೂ ನಿಮ್ಮ ನೆರವು ಬೇಕು ಎಂದು ನಿಮಗೆ ಅನಿಸಿದಲ್ಲಿ ನೀವಾಗಿಯೇ ಕೇಳುವುದು ಉತ್ತಮ. ವೃತ್ತಿಪರರು, ಹವ್ಯಾಸಿ ಫೋಟೋಗ್ರಾಫರ್ ಗಳಿಗೆ ಉತ್ತಮ ಸಂಸ್ಥೆಗಳಿಂದ ಆಫರ್ ಗಳು ಹುಡುಕಿಕೊಂಡು ಬರಲಿವೆ. ಕಾಲು ನೋವಿನ ಸಮಸ್ಯೆ ಈಗಾಗಲೇ ಇದೆ ಎನ್ನುವವರು ಮಾತ್ರ ಬಹಳ ಜಾಗ್ರತೆಯಿಂದ ಇರಬೇಕಾಗುತ್ತದೆ. ಔಷಧ ಬದಲಾವಣೆ ಮಾಡುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಆಲೋಚಿಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಇತರರ ಕೆಲಸಕ್ಕಾಗಿ ನೀವು ಎದ್ದು- ಬಿದ್ದು ಕೆಲಸ ಮಾಡಬೇಕಾದಂಥ ಸನ್ನಿವೇಶ ಸೃಷ್ಟಿ ಆಗಲಿದೆ. ಒಂದೋ ಅಭಿಮಾನಕ್ಕೆ ಅಥವಾ ಸ್ನೇಹಕ್ಕೆ ಅಥವಾ ಇವೆರಡೂ ಅಲ್ಲದಿದ್ದಲ್ಲಿ ಮನವೊಲಿಕೆಗಾಗಿ ಹೀಗೆ ಮಾಡುವಂಥ ಸಾಧ್ಯತೆಗಳಿವೆ. ಮಕ್ಕಳ ಶಿಕ್ಷಣದ ಬಗ್ಗೆ ಸಂಗಾತಿ ಜತೆಗೆ ಗಂಭೀರವಾದ ಚರ್ಚೆ ನಡೆಸಲಿದ್ದೀರಿ. ಮನೆ ದೇವರ ಸ್ಮರಣೆ ಮಾಡಿದಲ್ಲಿ ನಿಮ್ಮ ನಿರ್ಧಾರಗಳಲ್ಲಿ ಗೊಂದಲಗಳು ಏರ್ಪಡುವಂತಿದ್ದಲ್ಲಿ ಪರಿಹಾರ ಸಿಗಲಿದೆ. ಪುಷ್ಕಳವಾದ ಊಟ- ತಿಂಡಿ ದೊರೆಯುವಂಥ ಕಾರ್ಯಕ್ರಮಗಳಲ್ಲಿ ಭಾಗೀ ಆಗಲಿದ್ದೀರಿ. ವಾಹನಗಳನ್ನು ಖರೀದಿ ಮಾಡುವಂತೆ ಆಪ್ತರು- ಸ್ನೇಹಿತರಿಂದ ಸಲಹೆಗಳು ಬರಲಿವೆ. ಇದಕ್ಕಾಗಿ ಸಾಲ ಪಡೆಯುವ ಬಗ್ಗೆಯೂ ಆಲೋಚಿಸಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಎದ್ದು ಹೋಗೋ ಮಾತು ಬಿದ್ದು ಹೋಗಲಿ ಎಂಬಂತೆ ನೀವು ಮಾಡುವ ಚೌಕಾಶಿ ಈ ದಿನ ಲಾಭ ತಂದುಕೊಡಲಿದೆ. ಅನಿರೀಕ್ಷಿತವಾಗಿ ಪ್ರಭಾವಿಗಳ ಸ್ನೇಹ ವಲಯದಲ್ಲಿ ಸೇರ್ಪಡೆ ಆಗುವಂಥ ಯೋಗ ನಿಮ್ಮ ಪಾಲಿಗೆ ಇದೆ. ಅನಂತ ಪದ್ಮನಾಭ ಸ್ವಾಮಿಯ ಆರಾಧನೆಯನ್ನು ಮಾಡಿ. ಒಂದು ವೇಳೆ ನಿಮ್ಮ ಧಾರ್ಮಿಕ ನಂಬಿಕೆ ಬೇರೆಯದ್ದಾಗಿದ್ದರೆ ಮನೆಯಿಂದ ಹೊರಡುವಾಗ ಬಿಳಿಯ ವಸ್ತ್ರವೊಂದನ್ನು ಬಳಿ ಇಟ್ಟುಕೊಳ್ಳುವುದರಿಂದ ಉತ್ತಮ ಫಲಿತಾಂಶವನ್ನು ಕಾಣಲಿದ್ದೀರಿ. ಹೊಸ ಪಾದರಕ್ಷೆ, ಶೂ ಇಂಥದ್ದನ್ನು ಖರೀದಿ ಮಾಡಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಆರ್ಥಿಕ ವಿಚಾರಗಳಲ್ಲಿ ನಿಮ್ಮ ನಿರ್ಧಾರಗಳು ಸರಿಯಾಗಲಿಲ್ಲವೇನೋ ಎಂಬ ಅನುಮಾನ ನಿಮ್ಮನ್ನು ಕಾಡುವುದಕ್ಕೆ ಶುರುವಾಗುತ್ತದೆ. ಸ್ತ್ರೀಯರಾಗಿದ್ದಲ್ಲಿ ಪುರುಷರೆಡೆಗೆ ಹಾಗೂ ಪುರುಷರಾಗಿದ್ದಲ್ಲಿ ಸ್ತ್ರೀಯರ ಕಡೆಗೆ ಆಕರ್ಷಿತರಾಗುವಂಥ ದಿನ ಇದು. ಪರಿಚಯವನ್ನು ಸ್ನೇಹಕ್ಕೆ, ಅಲ್ಲಿಂದ ಪ್ರೇಮಕ್ಕೆ ತೆಗೆದುಕೊಂಡು ಹೋಗುವ ಸಾಧ್ಯತೆಗಳು ಹೆಚ್ಚಿವೆ. ಸೆಮಿನಾರ್ ಗಳಲ್ಲಿ ಭಾಗೀ ಆಗುತ್ತಿದ್ದಲ್ಲಿ ಅಥವಾ ಯಾವುದಾದರೂ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗೀ ಆಗುತ್ತಿದ್ದಲ್ಲಿ ಈ ಸಾಧ್ಯತೆಗಳು ಜಾಸ್ತಿ ಇವೆ. ಲೇಖಕರು, ಮಾಧ್ಯಮಗಳಲ್ಲಿ ಇರುವವರು, ಮ್ಯಾಜಿಷಿಯನ್ ಗಳಿಗೆ ದೂರ ಪ್ರಯಾಣದ ಯೋಗ ಹೆಚ್ಚಿದೆ. ಇದರಿಂದ ನಿಮ್ಮ ಆದಾಯ ಜಾಸ್ತಿ ಮಾಡಿಕೊಳ್ಳುವುದಕ್ಕೆ ದಾರಿ ಗೋಚರಿಸಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಹಣಕಾಸು ವಿಚಾರದಲ್ಲಿ ಲೆಕ್ಕಾಚಾರಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳಿಗೆ ದುಡ್ಡು ಹೊಂದಿಸಬೇಕಾದಂಥ ಜವಾಬ್ದಾರಿ ನಿಮ್ಮ ಮೇಲೆ ಬರಬಹುದು. ಅಥವಾ ನಿಮ್ಮ ನೇತೃತ್ವದಲ್ಲಿ ಆ ಕಾರ್ಯಕ್ರಮ ನಡೆಸಬೇಕು ಎಂದಾಗಬಹುದು. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರುವ ಸಾಧ್ಯತೆಗಳಿವೆ. ಮಹಿಳೆಯರಿಗೆ ರಕ್ತಕ್ಕೆ ಸಂಬಂಧಿಸಿದ ಅನಾರೋಗ್ಯಗಳು ಕಾಡಬಹುದು. ಥೈರಾಯ್ಡ್ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಅದು ಉಲ್ಬಣಗೊಳ್ಳಬಹುದು. ಸೂಕ್ತ ವೈದ್ಯೋಪಚಾರಗಳನ್ನು ಮಾಡಿಕೊಳ್ಳುವ ಕಡೆಗೆ ಲಕ್ಷ್ಯ ನೀಡುವುದು ಮುಖ್ಯವಾಗುತ್ತದೆ. ದೇಹವನ್ನು ತಂಪಾಗಿ ಇರಿಸಿಕೊಳ್ಳುವುದಕ್ಕೆ ಆದ್ಯತೆ ನೀಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಹಳೆಯ ನೆನಪುಗಳನ್ನು ನಿಮ್ಮನ್ನು ಬಹಳ ಕಾಡಲಿದೆ. ಅದರಲ್ಲೂ ಪ್ರೇಮ ಪ್ರಕರಣಗಳು ಕಾಡುವಂಥ ಸಾಧ್ಯತೆ ಇದೆ. ಆದ್ದರಿಂದ ನಿಮ್ಮಿಂದ ಸಾಧ್ಯವಾದಷ್ಟೂ ಕೆಲಸಗಳಲ್ಲಿ ತೊಡಗಿಕೊಂಡಲ್ಲಿ ಉತ್ತಮ. ಮನೆಯಲ್ಲಿ ಹಿರಿಯರು ನೀಡುವ ಸಲಹೆ- ಸೂಚನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ಉದ್ಯೋಗ ಬದಲಾವಣೆಗಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ಈ ದಿನ ಕೆಲವು ಅವಕಾಶಗಳ ಬಗ್ಗೆ ಮಾಹಿತಿ ದೊರೆಯಲಿದೆ. ಉದ್ಯೋಗಸ್ಥರು, ಅದರಲ್ಲೂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಥವಾ ಮಶೀನ್ ಲರ್ನಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಂಥವರು ಹೊಸ ಕೋರ್ಸ್ ಗೆ ಸೇರ್ಪಡೆ ಆಗುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಸೋದರ ಸಂಬಂಧಿಗಳ ಭೇಟಿಯಿಂದ ಮನಸ್ಸಿಗೆ ಖುಷಿ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಮಾನಸಿಕವಾಗಿ ಈ ದಿನ ಗಟ್ಟಿಯಾಗಿ ಇರುವುದು ಮುಖ್ಯವಾಗುತ್ತದೆ. ಯಾವುದೇ ನಿರ್ಧಾರ ಮಾಡಿದರೂ ಅದು ಸರಿ ಎಂದೆನಿಸಿದಾಗ ಬದ್ಧವಾಗಿರುವುದಕ್ಕೆ ಪ್ರಯತ್ನಿಸಿ. ಇದರಿಂದ ನಿಮಗೆ ಅನುಕೂಲ ಆಗಲಿದೆ. ಈ ಹಿಂದೆ ನೀವು ನೆರವು ನೀಡಿದಂಥ ವ್ಯಕ್ತಿಯಿಂದ ನಿಮಗೆ ಅನುಕೂಲ ಒದಗಿ ಬರಲಿದೆ. ಅನಿರೀಕ್ಷಿತವಾಗಿ ಹಣ ಬರಬಹುದು. ಆಹಾರ- ನೀರಿನ ವಿಚಾರದಲ್ಲಿ ಮಾತ್ರ ಜಾಗ್ರತೆಯಿಂದ ಇರುವುದು ಮುಖ್ಯವಾಗುತ್ತದೆ. ಮುಖ್ಯವಾದ ಕಾಗದ- ಪತ್ರಗಳನ್ನು ನೋಡಿಕೊಳ್ಳುವಂಥವರು ಎಚ್ಚರಿಕೆಯಿಂದ ಇರಬೇಕು. ಒಂದು ಕಡೆಯಿಂದ ಮತ್ತೊಂದು ಕಡೆ ತೆಗೆದುಕೊಂಡು ಹೋಗುವಂಥ ವೃತ್ತಿಯಲ್ಲಿ ಇರುವವರು ಸಾಮಾನ್ಯಕ್ಕಿಂತ ಹೆಚ್ಚು ಲಕ್ಷ್ಯ ವಹಿಸಿ.

ತಾಜಾ ಸುದ್ದಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ