Kannada News Horoscope Daily horoscope based on numerology predictions of July 30 according to number of birth dates as per numerology in Kannada
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 30ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 30ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 30ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ನೀವು ಯಾರನ್ನೋ ಸ್ಪರ್ಧಿ ಅಂತ ಅಂದುಕೊಂಡು ಬಿಟ್ಟಿದ್ದರೆ ಅದನ್ನು ತಲೆಯಿಂದ ತೆಗೆದು ಹಾಕಬೇಕಾದ ದಿನ ಇದು. ಏಕೆಂದರೆ, ದೊಡ್ಡ ಅವಕಾಶ ನಿಮ್ಮೆದುರು ಕಾಯುತ್ತಾ ಇದೆ. ಆ ಕಡೆಗೆ ಲಕ್ಷ್ಯ ನೀಡಬೇಕು. ಸಣ್ಣ- ಪುಟ್ಟ ವಿಚಾರಗಳು, ಅನುಮಾನಗಳು, ಕೀಳರಿಮೆ ನಿಮ್ಮ ಅವಕಾಶದಿಂದ ದೂರಕ್ಕೆ ತಳ್ಳಬಾರದು. ಈ ದಿನ ವಿಷ್ಣು ಸಹಸ್ರನಾಮ ಶ್ರವಣ ಅಥವಾ ಪಠಣ ಮಾಡಿ, ಇದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.
ಒಂದು ಸಲ ತೆಗೆದುಕೊಂಡ ನಿರ್ಧಾರವನ್ನು ಬದಲಿಸಿಕೊಳ್ಳಲಿಕ್ಕೆ ಹೋಗಬೇಡಿ. ಹಾಗೊಂದು ವೇಳೆ ಅನಿವಾರ್ಯ ಅಂತಾದಲ್ಲಿ ಅದನ್ನು ಸಂಬಂಧಪಟ್ಟವರ ಗಮನಕ್ಕೆ ತಕ್ಷಣವೇ ತನ್ನಿ. ಇಲ್ಲದಿದ್ದಲ್ಲಿ ನಿಮ್ಮ ವರ್ಚಸ್ಸಿಗೆ ಧಕ್ಕೆ ಆಗುವಂಥ ಸನ್ನಿವೇಶ ಸೃಷ್ಟಿ ಆಗಬಹುದು. ಹೊಸದಾಗಿ ವಸ್ತುಗಳನ್ನು ಖರೀದಿ ಮಾಡಬೇಕು ಎಂದಾದರೆ ಅದರ ಅಗತ್ಯ ಎಷ್ಟಿದೆ ಎಂಬ ಬಗ್ಗೆ ಒಂದಕ್ಕೆ ನಾಲ್ಕು ಬಾರಿ ಆಲೋಚನೆ ಮಾಡಿ, ನಿರ್ಧಾರವನ್ನು ಕೈಗೊಳ್ಳುವುದು ಉತ್ತಮ.
ನಿಮ್ಮ ಬಗ್ಗೆ ಇತರರಿಗೆ ನಿರೀಕ್ಷೆಗಳು ಜಾಸ್ತಿ ಆಗುತ್ತವೆ. ಇನ್ನೂ ಮುಂದೆಲ್ಲೋ ಡೆಡ್ ಲೈನ್ ಇದೆ ಎಂದುಕೊಂಡು ಆರಾಮವಾಗಿ ಮಾಡುತ್ತಿದ್ದ ಕೆಲಸವೊಂದನ್ನು ಈ ಕೂಡಲೇ ಈ ದಿನವೇ ಅಥವಾ ಆದಷ್ಟು ಬೇಗ ಮುಗಿಸಿಕೊಡುವಂತೆ ದುಂಬಾಲು ಬೀಳಲಿದ್ದಾರೆ. ಯಾವತ್ತೋ ನಿಮಗೆ ಕಂಡಿದ್ದ ವ್ಯಕ್ತಿ ದಿಢೀರ್ ಎಂದು ಹಣಕಾಸು ಸಾಲವನ್ನು ಕೇಳಿಕೊಂಡು ಬರುವ ಸಾಧ್ಯತೆ ಇದೆ. ಸೋದರಮಾವನ ಜತೆಗೆ ಮಾತನಾಡುವಾಗ ಎಚ್ಚರಿಕೆಯಿಂದ ಪದ ಬಳಕೆ ಮಾಡಿ. ನಿಮಗೆ ಗೊತ್ತಿಲ್ಲದ ವಿಚಾರ ಆಗಿದ್ದಲ್ಲಿ ಮೌನವೇ ಒಳ್ಳೆಯದು.
ಎಲ್ಲರೂ ನಿಮ್ಮನ್ನು ಗಮನಿಸುತ್ತಿರುವಂತೆ ಭಾಸ ಆಗುತ್ತದೆ. ಮದುವೆಗಾಗಿ ಪ್ರಯತ್ನಿಸುತ್ತಿರುವವರಿಗೆ ಸಂಬಂಧಿಕರ ಕಡೆಯಿಂದ ಸಹಾಯ/ನೆರವು ದೊರೆಯುತ್ತದೆ. ಯೋಗ/ಧ್ಯಾನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಲಿದೆ. ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ಇತಿಹಾಸತಜ್ಞರು, ಪ್ರಾಚ್ಯವಸ್ತುಗಳ ಸಂಶೋಧಕರಿಗೆ ಮಹತ್ತರವಾದ ಸಾಧನೆಗೆ ಬೆಂಬಲ/ನೆರವು ದೊರೆಯಲಿದೆ. ಮನೆಯಲ್ಲಿ ಕಚೇರಿಗೆ ಬೇಕಾದಂಥ ವ್ಯವಸ್ಥೆಗಳನ್ನು ಮಾಡಿಕೊಳ್ಳಲಿದ್ದೀರಿ.
ಈ ದಿನ ನಿಮಗೆ ದೈವ ಪ್ರೇರಣೆ ದೊರೆಯಲಿದೆ. ಅದರಂತೆ ನಡೆದುಕೊಳ್ಳಿ. ಇದರರ್ಥ ಇಷ್ಟೇ, ನಿಮ್ಮ ಮನಸ್ಸಿಗೆ ಬಲವಾಗಿ ಅನಿಸುವಂಥ ಉತ್ತಮ ಕೆಲಸಗಳನ್ನು ಕೂಡಲೇ ಮಾಡಿ, ಅನುಮಾನಗಳನ್ನು ಇಟ್ಟುಕೊಳ್ಳದಿರಿ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸೂಕ್ತ ವ್ಯಕ್ತಿಯ ಪರಿಚಯ, ಸ್ನೇಹ ಆಗಲಿದೆ. ಕಾನೂನು ಮೀರುವ ಆಲೋಚನೆ ಅದೆಷ್ಟೇ ಸಣ್ಣ ಪ್ರಮಾಣದಲ್ಲೇ ಆದರೂ ಮಾಡದಿರಿ, ಸಮಸ್ಯೆಗೆ ಸಿಲುಕಿಕೊಳ್ಳುತ್ತೀರಿ.
ಯಾರದೋ ಸಮಸ್ಯೆಗೆ ನೀವೇ ತಲೆ ಕೊಡುವಂಥ ಸ್ಥಿತಿ ಉದ್ಭವಿಸಲಿದೆ. ಸುಖಾಸುಮ್ಮನೆ ಆಕ್ಷೇಪಗಳು, ನಿಮ್ಮ ಬಗ್ಗೆ ಸಲ್ಲದ ಸಂದೇಹದ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಬಿಡುವೇ ದೊರೆಯದಷ್ಟು ಕೆಲಸಗಳು ಮೈ ಮೇಲೆ ಬೀಳಲಿವೆ. ಕಣ್ಣಿನ ಪೊರೆ, ಕೆಂಪಾಗುವುದು, ನೀರು ಸೋರುವುದು ಸೇರಿದಂತೆ ಕಣ್ಣಿಗೆ ಸಂಬಂಧಿಸಿದ ಒಂದಲ್ಲ ಒಂದು ಸಮಸ್ಯೆಯನ್ನು ನೀವು ಎದುರಿಸಲಿದ್ದೀರಿ. ದೂರದ ಸಂಬಂಧಿಕರು ಕಾರ್ಯ ನಿಮಿತ್ತ ನಿಮ್ಮನ್ನು ಭೇಟಿ ಆಗುವ ಸಾಧ್ಯತೆಗಳಿವೆ.
ಯಾವುದು ಸುಳ್ಳು ಹಾಗೂ ಯಾವುದರಲ್ಲಿ- ಯಾರಲ್ಲಿ ಎಷ್ಟಿದೆ ಸತ್ಯ ಎಂಬುದು ಈ ದಿನ ತುಂಬ ಸ್ಪಷ್ಟವಾಗಿ ನಿಮಗೆ ಗೊತ್ತಾಗುತ್ತದೆ. ಇನ್ನೊಬ್ಬರು ನಿಮ್ಮ ಎಲ್ಲ ವಿಚಾರಗಳಲ್ಲಿ ಮೂಗು ತೂರಿಸಿಕೊಂಡು ಬರುತ್ತಿದ್ದಾರೆ ಎಂಬ ಕಾರಣಕ್ಕೆ ಸಿಟ್ಟಾಗಲಿದ್ದೀರಿ. ಮೇಲ್ನೋಟಕ್ಕೆ ಕಂಡಿದ್ದನ್ನು ಸತ್ಯ ಎಂದು ನಂಬಬಾರದು ಎಂದು ಅನುಭವಕ್ಕೆ ಬರುತ್ತದೆ. ಮನೆಗೆ ಗೃಹೋಪಯೋಗಿ ವಸ್ತುಗಳೋ ಅಥವಾ ಪೀಠೋಪಕರಣಗಳನ್ನು ತರುವುದಕ್ಕೆ ಖರ್ಚು ಮಾಡಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುವಾಗ ವೆಚ್ಚದ ಮೇಲೆ ನಿಯಂತ್ರಣ ಇಟ್ಟುಕೊಳ್ಳಿ.
ಈ ದಿನ ನಿಮ್ಮ ಆತ್ಮಗೌರವ, ಪ್ರತಿಷ್ಠೆಗೆ ಪೆಟ್ಟು ನೀಡುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಕುಟುಂಬದ ಬಗ್ಗೆ ನಿಮ್ಮ ಯೋಚನೆ ಜಾಸ್ತಿ ಆಗುತ್ತದೆ. ಇನ್ನು ಮನೆ ಕಟ್ಟುತ್ತಿರುವವರು, ಸೈಟು ಖರೀದಿಸಬೇಕು ಎಂದಿರುವವರಿಗೆ ಈ ದಿನ ಮಹತ್ವದ್ದಾಗಿರುತ್ತದೆ. ಷೇರು – ಡಿಜಿಟಲ್ ಸ್ವತ್ತುಗಳಲ್ಲಿ ಹೂಡಿಕೆ ಮಾಡಿರುವವರು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಅಂತರಂಗದ ರಹಸ್ಯಗಳನ್ನು ಯಾರ ಜತೆಗೂ ಹಂಚಿಕೊಳ್ಳಬೇಡಿ.
ಈ ದಿನ ಎಲ್ಲರ ಮೇಲೂ ನಂಬಿಕೆ ಕಳೆದುಕೊಳ್ಳುವಂಥ ಸನ್ನಿವೇಶ ಎದುರಾಗುತ್ತದೆ. ಏಕಾಂಗಿ ಆಗಿಬಿಟ್ಟಿರೇನೋ ಎಂದು ಬಲವಾಗಿ ಅನಿಸಿಕೆ ಮೂಡುತ್ತದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಪದೋನ್ನತಿಯ ಸೂಚನೆ ದೊರೆಯಲಿದೆ. ಹೊಸದಾಗಿ ಕೆಲಸಗಳನ್ನು ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಸಿಟ್ಟನ್ನು ಮಾಡಿಕೊಳ್ಳದಿರಿ, ಏಕೆಂದರೆ ಭವಿಷ್ಯದಲ್ಲಿ ಇದರಿಂದ ನಿಮಗೆ ಅನುಕೂಲ ಇದೆ.