AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 14ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 14ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 14ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 14, 2023 | 5:07 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 14ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಈ ದಿನ ನಿಮಗೆ ದೈವ ಪ್ರೇರಣೆ ದೊರೆಯಲಿದೆ. ಅದರಂತೆ ನಡೆದುಕೊಳ್ಳಿ. ಇದರರ್ಥ ಇಷ್ಟೇ, ನಿಮ್ಮ ಮನಸ್ಸಿಗೆ ಬಲವಾಗಿ ಅನಿಸುವಂಥ ಉತ್ತಮ ಕೆಲಸಗಳನ್ನು ಕೂಡಲೇ ಮಾಡಿ, ಅನುಮಾನಗಳನ್ನು ಇಟ್ಟುಕೊಳ್ಳದಿರಿ. ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸೂಕ್ತ ವ್ಯಕ್ತಿಯ ಪರಿಚಯ, ಸ್ನೇಹ ಆಗಲಿದೆ. ಕಾನೂನು ಮೀರುವ ಆಲೋಚನೆ ಅದೆಷ್ಟೇ ಸಣ್ಣ ಪ್ರಮಾಣದಲ್ಲೇ ಆದರೂ ಮಾಡದಿರಿ, ಸಮಸ್ಯೆಗೆ ಸಿಲುಕಿಕೊಳ್ಳುತ್ತೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಎಲ್ಲರೂ ನಿಮ್ಮನ್ನು ಗಮನಿಸುತ್ತಿರುವಂತೆ ಭಾಸ ಆಗುತ್ತದೆ. ಮದುವೆಗಾಗಿ ಪ್ರಯತ್ನಿಸುತ್ತಿರುವವರಿಗೆ ಸಂಬಂಧಿಕರ ಕಡೆಯಿಂದ ಸಹಾಯ/ನೆರವು ದೊರೆಯುತ್ತದೆ. ಯೋಗ/ಧ್ಯಾನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಲಿದೆ. ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ಇತಿಹಾಸತಜ್ಞರು, ಪ್ರಾಚ್ಯವಸ್ತುಗಳ ಸಂಶೋಧಕರಿಗೆ ಮಹತ್ತರವಾದ ಸಾಧನೆಗೆ ಬೆಂಬಲ/ನೆರವು ದೊರೆಯಲಿದೆ. ಮನೆಯಲ್ಲಿ ಕಚೇರಿಗೆ ಬೇಕಾದಂಥ ವ್ಯವಸ್ಥೆಗಳನ್ನು ಮಾಡಿಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಯಾರದೋ ಸಮಸ್ಯೆಗೆ ನೀವೇ ತಲೆ ಕೊಡುವಂಥ ಸ್ಥಿತಿ ಉದ್ಭವಿಸಲಿದೆ. ಸುಖಾಸುಮ್ಮನೆ ಆಕ್ಷೇಪಗಳು, ನಿಮ್ಮ ಬಗ್ಗೆ ಸಲ್ಲದ ಸಂದೇಹದ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಬಿಡುವೇ ದೊರೆಯದಷ್ಟು ಕೆಲಸಗಳು ಮೈ ಮೇಲೆ ಬೀಳಲಿವೆ. ಕಣ್ಣಿನ ಪೊರೆ, ಕೆಂಪಾಗುವುದು, ನೀರು ಸೋರುವುದು ಸೇರಿದಂತೆ ಕಣ್ಣಿಗೆ ಸಂಬಂಧಿಸಿದ ಒಂದಲ್ಲ ಒಂದು ಸಮಸ್ಯೆಯನ್ನು ನೀವು ಎದುರಿಸಲಿದ್ದೀರಿ. ದೂರದ ಸಂಬಂಧಿಕರು ಕಾರ್ಯ ನಿಮಿತ್ತ ನಿಮ್ಮನ್ನು ಭೇಟಿ ಆಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಸ್ವಂತ ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುವುದಕ್ಕೆ ನಿರ್ಧರಿಸಲಿದ್ದೀರಿ. ಕೆಲಸ ಆಗುವ ತನಕ ಒಂದು ರೀತಿ ಇದ್ದು, ಆ ನಂತರ ಜನರು ಬದಲಾಗುತ್ತಿದ್ದಾರೆ ಎಂದು ಬಲವಾಗಿ ನಿಮಗೆ ಅನಿಸುವುದಕ್ಕೆ ಶುರುವಾಗುತ್ತದೆ. ಒಂದೇ ಕಡೆ ಹಾಗೂ ಒಂದೇ ರೀತಿಯಲ್ಲಿ ಆಲೋಚನೆ ಮಾಡುತ್ತಿದ್ದ ನೀವು ಇದೀಗ ನಾಲ್ಕೂ ಕಡೆಯ ಸಾಧ್ಯತೆಗಳನ್ನು ಅಳೆದು- ತೂಗಿ ನೋಡುವುದಕ್ಕೆ ಆರಂಭಿಸುತ್ತೀರಿ. ವಿದ್ಯಾರ್ಥಿಗಳ ಮೇಲೆ ಅಪವಾದ ಬರುವ ಸಾಧ್ಯತೆ ಇದೆ, ಎಚ್ಚರಿಕೆ ಬೇಕು. ಮಹಿಳೆಯರಿಗೆ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದಲ್ಲಿ ಶುಭ ಸುದ್ದಿ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಮದುವೆಗಾಗಿ ಪ್ರಯತ್ನಿಸುತ್ತಿರುವವರಿಗೆ ಪ್ರಮುಖವಾದ ಬೆಳವಣಿಗೆ ಕಂಡುಬರಲಿದೆ. ಸಂಬಂಧಿಕರು, ಸ್ನೇಹಿತರು ನಿಮಗೆ ನೆರವು ನೀಡುವ ಸಾಧ್ಯತೆಗಳಿವೆ. ಇತರರು ನಿಮ್ಮ ಬಳಿ ಗುಟ್ಟು ಎಂದು ಹೇಳಿದ್ದರ ರಹಸ್ಯವನ್ನು ಕಾಪಾಡಿಕೊಳ್ಳುವ ಕಡೆಗೆ ಹೆಚ್ಚಿನ ಗಮನವನ್ನು ನೀಡಿ. ಸಾರ್ವಜನಿಕ ಬದುಕಿನಲ್ಲಿ ಇರುವವರಿಗೆ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಚಿನ್ನಾಭರಣಗಳ ಖರೀದಿಗಾಗಿ ಕ್ರೆಡಿಟ್ ಕಾರ್ಡ್ ಬಳಸುವಂಥ ಸನ್ನಿವೇಶ ಎದುರಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಮ್ಮ ಕೆಲಸಗಳನ್ನು ನಾವೇ ಮಾಡಬೇಕು, ಇನ್ನೊಬ್ಬರಿಗೆ ನಮ್ಮ ಕನಸುಗಳನ್ನು ಒಪ್ಪಿಸಬಾರದು ಎಂದು ಬಲವಾಗಿ ನಿಮಗೆ ಅನಿಸುವುದಕ್ಕೆ ಆರಂಭವಾಗುತ್ತದೆ. ಈ ಬದಲಾವಣೆ ಬರುವುದಕ್ಕೆ ನೀವು ಒಂದಿಷ್ಟು ಬೆಲೆಯನ್ನು ಸಹ ತೆರಬೇಕಾಗುತ್ತದೆ. ತುಂಬ ಮುಖ್ಯವಾದ ದಾಖಲೆ- ಪತ್ರಗಳನ್ನು ಸರಿಯಾಗಿ ಇಡುವಂತೆ ನಿಮಗೆ ಹೇಳಿದಲ್ಲಿ ಮಾಮೂಲಿಗಿಂತ ಹೆಚ್ಚು ಜಾಗ್ರತೆಯಿಂದ ಇರಿ. ಭೂಮಿ ಖರೀದಿಗಾಗಿಯೇ ಹಣಕಾಸು ಸಂಸ್ಥೆಗಳಲ್ಲಿ ಸಾಲ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಕೌಟುಂಬಿಕ ವಿಚಾರಗಳು ಈ ದಿನ ಪ್ರಾಶಸ್ತ್ಯ ಪಡೆದುಕೊಳ್ಳಲಿವೆ. ಮಕ್ಕಳ ಸಲುವಾಗಿಯೇ ಹೆಚ್ಚಿನ ಸಮಯ, ಹಣ ಮೀಸಲಿಡುವ ದಿನ ಇದಾಗಿರಲಿದೆ. ನಿಮ್ಮ ತ್ಯಾಗ ಹಾಗೂ ಶ್ರಮಕ್ಕೆ ಫಲ ದೊರೆಯಲಿದೆ. ನೀವು ಮಾಡಬೇಕಾದ್ದೇನೆಂದರೆ, ನೀವು ಯಾವುದೇ ದೇವರನ್ನು ಆರಾಧನೆ ಮಾಡಿದರೂ ಪರವಾಗಿಲ್ಲ, ಅದಕ್ಕೆ ಸಿಹಿ ನೈವೇದ್ಯ ಮಾಡಿ, ಮನೆಯ ಮಹಡಿಯೋ ಅಥವಾ ಎತ್ತರದ ಸ್ಥಳದಲ್ಲಿ ಇಟ್ಟುಬನ್ನಿ. ಸಿಹಿ ಅಂದರೆ, ಕನಿಷ್ಠ ಸಕ್ಕರೆ ಆದರೂ ಪರವಾಗಿಲ್ಲ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನನ್ನ ಶ್ರಮಕ್ಕೆ ಬೆಲೆಯೇ ಸಿಕ್ಕುತ್ತಿಲ್ಲ, ಎಷ್ಟು ಪ್ರಯತ್ನ ಪಟ್ಟರೂ ನನ್ನ ಕೆಲಸ ತುದಿ ಮುಟ್ಟುತ್ತಿಲ್ಲ ಅಂದುಕೊಳ್ಳುತ್ತಿರುವವರಿಗೆ ಇವತ್ತು ಒಂದಿಷ್ಟು ಸಮಾಧಾನ ದೊರೆಯುತ್ತದೆ. ಕಣ್ಣು- ಕಿವಿಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ ಆ ಬಗ್ಗೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರಲ್ಲಿ ತೋರಿಸಿ. ಇನ್ನು ಸಾಧ್ಯವಾದಲ್ಲಿ ತುಳಸೀ ಗಿಡಕ್ಕೆ ಒಂದು ತಂಬಿಗೆಯಷ್ಟು ನೀರನ್ನು ಹಾಕಿ. ಯಾವುದಾದರೂ ಕಾರಣಕ್ಕೆ ನೀವು ಹಾಕುವಂತಿಲ್ಲ ಅಂತಾದರೆ ಬೇರೆಯವರಿಂದಲಾದರೂ ಹಾಕಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಪೋಷಕರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಸಾಲದ ಬಗ್ಗೆ ಒಂದಿಷ್ಟು ಕ್ಯಾಲ್ಕುಲೇಟರ್ ಹಿಡಿದು, ಲೆಕ್ಕ ಹಾಕಿಕೊಳ್ಳುವ ಸಮಯ. ಸಂಗಾತಿ ಏನಾದರೂ ಹೇಳುತ್ತಿದ್ದಾರೆ ಅಂದರೆ ಸ್ವಲ್ಪ ಕೇಳಿಸಿಕೊಳ್ಳಿ. ಇದರಿಂದ ತುಂಬ ದೊಡ್ಡ ಸಹಾಯ ಆಗುತ್ತದೆ ಅಂತಲ್ಲ, ಸಂಬಂಧ ಸುಧಾರಿಸುತ್ತದೆ. ನೆಮ್ಮದಿ ವಾತಾವರಣ ಸೃಷ್ಟಿ ಆಗುತ್ತದೆ. ನಿಮ್ಮಿಂದ ಸಾಧ್ಯವಾದಲ್ಲಿ, ಅನುಕೂಲ ಇದ್ದಲ್ಲಿ ಪಾರಿವಾಳಗಳಿಗೆ ಕೈಲಾದಷ್ಟು ಆಹಾರ ಹಾಕಿ.

ಲೇಖನ- ಎನ್‌.ಕೆ.ಸ್ವಾತಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ