AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 22ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 22ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. 

Numerology Predictions: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 22ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 22ರ ದಿನಭವಿಷ್ಯImage Credit source: freepik
Rakesh Nayak Manchi
|

Updated on: May 22, 2023 | 5:45 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 22ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಬೆಟ್ಟಿಂಗ್ ಅಥವಾ ಪಂಥದಲ್ಲಿ ಹಣ ಕಳೆದುಕೊಳ್ಳುವಂಥ ಸಾಧ್ಯತೆ ಇದೆ. ಸ್ನೇಹಿತರು ಅಥವಾ ಸಂಬಂಧಿಕರ ಮನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಥವಾ ಓಡಾಟ ನಡೆಸಬೇಕಾದ ಯೋಗ ಕಂಡುಬರುತ್ತಿದೆ. ಕುಟುಂಬ ಸದಸ್ಯರ ಜತೆಗೆ ಸಣ್ಣ- ಪುಟ್ಟ ನಿರ್ಧಾರಗಳಿಗೆ ಅಭಿಪ್ರಾಯ ಭೇದಗಳು ಉದ್ಭವಿಸಬಹುದು. ಈ ದಿನ ಸ್ನೇಹಿತರಿಂದ ಉತ್ತಮವಾದ ನೆರವು ಸಿಗುವಂಥ ಸಾಧ್ಯತೆಗಳಿವೆ. ನಿಮ್ಮಲ್ಲಿ ಕೆಲವರು ಹೊಸ ವಾಹನಗಳ ಖರೀದಿಗೆ ಅಡ್ವಾನ್ಸ್ ನೀಡಲಿದ್ದೀರಿ ಅಥವಾ ಖರೀದಿಯನ್ನೇ ಮಾಡಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಹಣಕಾಸಿನ ವಿಚಾರವು ನಿಮ್ಮ ಮೇಲೆ ಒತ್ತಡ ತರಲಿದೆ. ವಾಹನಗಳ ದುರಸ್ತಿಗೆ ಅಥವಾ ಮಾಮೂಲಿ ಸರ್ವೀಸ್ ಗೆ ಹೆಚ್ಚಿನ ಖರ್ಚು ಮಾಡಬೇಕಾಗುತ್ತದೆ. ಬ್ರ್ಯಾಂಡೆಡ್ ವಸ್ತುಗಳಿಗಾಗಿ ಹಣ ಖರ್ಚು ಮಾಡುವಾಗ ಹಿಡಿತ ಇರಲಿ. ಸಂಗಾತಿಯ ಮಾತನ್ನು ಕೇಳಿಸಿಕೊಳ್ಳಿ, ಅವರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಂಡು, ಪಾಲಿಸಿ. ಮನೆಯ ನಿರ್ಮಾಣ ಮಾಡಬೇಕು ಎಂದುಕೊಳ್ಳುತ್ತಾ ಇರುವವರಿಗೆ ಹಣ ಕಾಸಿನ ಅನುಕೂಲದಲ್ಲಿ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಪ್ರತಿಸ್ಪರ್ಧಿಗಳಿಗೆ ಅಚ್ಚರಿ ಆಗುವಂತೆ ಅಥವಾ ಬೆರಗು ಮೂಡಿಸುವಂತೆ ನಿಮ್ಮ ಬುದ್ಧಿ, ಸಾಮರ್ಥ್ಯದ ಪ್ರದರ್ಶನ ಆಗಲಿದೆ. ಈ ದಿನ ನೀವು ಬಳಸುವಂತಹ ಶೌಚಾಲಯದ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಮೂತ್ರ ಸೋಂಕಿಗೆ ಪದೇಪದೇ ತುತ್ತಾಗುವಂಥವರು ಅಂಥದ್ದೇ ಸಮಸ್ಯೆಗೆ ಗುರಿ ಆಗುವಂಥ ಸಾಧ್ಯತೆ ಇದೆ. ನಿಮ್ಮ ಮಾತಿನ ಧಾಟಿ ಅಥವಾ ಧೋರಣೆ ಬಗ್ಗೆ ಮೇಲಧಿಕಾರಿಗಳಿಗೆ ಯಾರಾದರೂ ದೂರು ನೀಡುವಂಥ ಸನ್ನಿವೇಶಗಳು ಉದ್ಭವಿಸಲಿವೆ. ತಾಳ್ಮೆ- ಸಂಯಮವನ್ನು ಕಾಯ್ದಕೊಳ್ಳಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಇತರರು ನಿಮಗೆ ವಹಿಸಿದ ಕೆಲಸವನ್ನು ನೀವೇನೋ ಬಹಳ ಆಸ್ಥೆ, ಆಸಕ್ತಿಯಿಂದ ಮಾಡುತ್ತೀರಿ. ಆದರೆ ಅದನ್ನು ವಹಿಸಿದವರಿಗೇ ಅದರ ಬಗ್ಗೆ ಗಾಂಭೀರ್ಯ ಇಲ್ಲ ಎಂಬುದು ಗಮನಕ್ಕೆ ಬರಲಿದೆ. ಮಧುಮೇಹ, ಪ್ಯಾಂಕ್ರಿಯಾಸ್ ನಲ್ಲಿ ಸಮಸ್ಯೆ ಇರುವಂಥವರು ಪಥ್ಯದ ಕಡೆಗೆ ಹೆಚ್ಚು ಲಕ್ಷ್ಯ ನೀಡಿ. ಮಾತ್ರೆ, ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ, ಏನೂ ಸಮಸ್ಯೆಯಿಲ್ಲ ಎಂದುಕೊಂಡಿರೋ ಅನಾರೋಗ್ಯ ಉಲ್ಬಣವಾದೀತು. ಹೊಸ ಕೋರ್ಸ್ ಸೇರ್ಪಡೆ ಆಗಬೇಕೆಂದಿರುವವರು ಮಾಹಿತಿಯನ್ನು ಪೂರ್ತಿಯಾಗಿ ಪಡೆದುಕೊಳ್ಳಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನವವಿವಾಹಿತರು, ಪ್ರೇಮಿಗಳಿಗೆ ಬಹಳ ಸಂತಸವಾದ ದಿನ ಇದಾಗಿರುತ್ತದೆ. ಇನ್ನು ಪ್ರೇಮ ನಿವೇದನೆ ಮಾಡಬೇಕು ಎಂದುಕೊಂಡರೂ ಅದಕ್ಕೆ ಸೂಕ್ತವಾದ ದಿನ ಇದಾಗಲಿದೆ. ಆಸ್ತಿ, ಆಭರಣ ಇಂಥದ್ದರ ಬಗ್ಗೆ ಹೆಚ್ಚು ಚರ್ಚೆ ಆಗಲಿದೆ. ನಿಮ್ಮ ಬಳಿ ಇರುವ ಹಳೇ ಒಡವೆ ಅಥವಾ ಬೆಳ್ಳಿ ವಸ್ತುಗಳನ್ನು ಹಾಕಿ, ಹೊಸದನ್ನು ಖರೀದಿಸುವಂಥ ಸಾಧ್ಯತೆ ಇದೆ. ಷೇರು ಮಾರುಕಟ್ಟೆಯಲ್ಲಿ ವ್ಯವಹರಿಸುವವರು ಆತುರದ ತೀರ್ಮಾನಗಳಿಂದ ಲಾಭದ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನನ್ನಷ್ಟಕ್ಕೆ ನಾನಿರಬೇಕು, ಊರ ಉಸಾಬರಿ ಯಾಕೆ ಬೇಕು ಎಂದು ಬಲವಾಗಿ ಅನಿಸಲಿದೆ. ಬಾಯಿ ಚಪಲದ ಕಾರಣಕ್ಕೆ ಹೊಟ್ಟೆ ಸಮಸ್ಯೆ ಮಾಡಿಕೊಳ್ಳಲಿದ್ದೀರಿ. ಮಾಂಸಾಹಾರಿಗಳಾಗಿದ್ದಲ್ಲಿ ಆಹಾರ ಸರಿಯಾದ ಬೆಂದಿದೆಯಾ ಅಥವಾ ತಾಜಾ ಆಗಿದೆಯೇ ಎಂಬುದನ್ನು ಪರೀಕ್ಷಿಸಿ, ಆ ನಂತರ ಸೇವಿಸುವುದು ಉತ್ತಮ. ಈ ದಿನ ಧನ್ವಂತರಿ ನಾರಾಯಣನ ಸ್ಮರಣೆಯನ್ನು ಮನಸ್ಸಿನಲ್ಲಿ ಮಾಡಿ. ಏಕಾಗ್ರತೆ ಸಾಧ್ಯವಾಗುತ್ತಿಲ್ಲ ಎಂದಾದರೆ ಮುಖ್ಯವಾದ ಕೆಲಸಗಳನ್ನು ಮುಂದೂಡಬಹುದು ಎಂದಾದರೆ ಮುಂದೂಡಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ನಿಮ್ಮ ಪ್ರಯತ್ನಗಳು ಫಲ ನೀಡುತ್ತಿಲ್ಲ, ನಿಮ್ಮಿಂದ ಉಪಯೋಗ ಪಡೆಯುತ್ತಿದ್ದಾರೆ, ಆದರೆ ಪ್ರತಿಫಲ ನೀಡುತ್ತಿಲ್ಲ ಎಂದೆಲ್ಲ ಮಾನಸಿಕವಾಗಿ ಚಿಂತೆಗೆ ಕಾರಣವಾಗುತ್ತದೆ. ಆಸ್ತಿ ಮಾರಾಟಕ್ಕೆ ಇಟ್ಟವರಿಗೆ ಹಿನ್ನಡೆ ಆಗಲಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗುತ್ತದೆ. ಇತರರ ಜತೆಗೋ ಅಥವಾ ಇತರರ ಸಲುವಾಗಿಯೋ ಏನನ್ನಾದರೂ ಖರೀದಿ ಮಾಡಬೇಕು ಎಂದು ಹೋದಲ್ಲಿ ನಿಮಗೂ ಯಾವುದಾದರೂ ವಸ್ತುಗಳನ್ನು ಖರೀದಿಸಬೇಕೆಂಬ ಬಯಕೆ ಮೂಡಿ, ಕೈಯಿಂದ ಹಣ ಹೋಗುವ ಯೋಗ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನಿಮ್ಮ ವೈಯಕ್ತಿಕ ಏಳ್ಗೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗುತ್ತದೆ. ವೃತ್ತಿನಿರತರಿಗೆ ಹೊಸ ಅವಕಾಶಗಳು ಹಾಗೂ ಅದು ದೊಡ್ಡ ಮಟ್ಟದ್ದು ಬರುವಂಥ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ನಿಮ್ಮ ಸಾಮರ್ಥ್ಯದ ಬಗ್ಗೆ ಅನುಮಾನ ಪಡುವುದು ಸರಿಯಲ್ಲ. ನೀವು ಬಹಳ ಸಮಯದಿಂದ ಹುಡುಕುತ್ತಿದ್ದ ಮುಖ್ಯ ದಾಖಲೆಗಳು ದೊರೆಯುವಂಥ ಅವಕಾಶಗಳಿವೆ. ಹೊಸ ವ್ಯವಹಾರ ಅಥವಾ ಈ ಹಿಂದೆ ನೀವು ಪ್ರಯತ್ನವೇ ಪಟ್ಟಿರದ ಕೆಲಸವನ್ನು ಶುರು ಮಾಡುವ ಯೋಗ ಇದೆ. ಇದರಿಂದ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಇತರರಿಗೆ ನೀವು ನೀಡಿದ ಪ್ರಾಶಸ್ತ್ಯವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೇನೋ ಎಂದು ಬಲವಾಗಿ ಅನಿಸುತ್ತದೆ. ಮುಖ್ಯವಾದ ಹುದ್ದೆಗಳಲ್ಲಿ ಇರುವವರು ಕೈಕೆಳಗೆ ಕೆಲಸ ಮಾಡುವವರ ಬಗ್ಗೆ ಕಠಿಣವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ‌್ಯತೆ ಇದೆ. ಆದ್ದರಿಂದ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮುನ್ನ ಫಲಿತಾಂಶ -ಪರಿಣಾಮಗಳ ಬಗ್ಗೆಯೂ ಆಲೋಚಿಸುವುದು ಉತ್ತಮ. ವಿನಾಕಾರಣವಾಗಿ ಶತ್ರುತ್ವವನ್ನು ಬೆಳೆಸಿಕೊಂಡು, ಆ ನಂತರ ಪರಿತಪಿಸುವಂತೆ ಆಗಲಿದೆ.

ಲೇಖನ- ಸ್ವಾತಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?