AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ವಾಹನವನ್ನು ಚಲಾಯಿಸುವಾಗ ಆತುರ ಬೇಡ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ವಾಹನವನ್ನು ಚಲಾಯಿಸುವಾಗ ಆತುರ ಬೇಡ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 18, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 09:27 ರಿಂದ 10:52ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:36 ರಿಂದ 08:01ರ ವರೆಗೆ.

ಸಿಂಹ ರಾಶಿ : ಸಣ್ಣ ಸಂಸ್ಥೆಯೊಂದನ್ನು ಹುಟ್ಟುಹಾಕುವ ಯೋಚನೆ ಬರುವುದು. ಆಹಾರದ ಉದ್ಯಮದಲ್ಲಿ ಅಧಿಕ ಲಾಭವೂ ಕೆಲವು ಅನಿರೀಕ್ಷಿತ ತೊಂದರೆಯೂ ಬರಬಹುದು. ಉದ್ಯೋಗದ ಅವಕಾಶಗಳ ನಿರೀಕ್ಷೆಯಲ್ಲಿ ಇರುವಿರಿ. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಕೆಲವರ ಮಾತಿಗೆ ಉತ್ತರವನ್ನು ಕೊಡುವುದು ಇಷ್ಟವಾಗದು. ಇಂದು ನಿಮ್ಮ‌ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಕರ್ತವ್ಯದತ್ತ ನಿಮ್ಮ ಗಮನಹರಿಸುವಿರಿ. ನಿಮ್ಮ ಮೇಲೆ‌ ಬಂದ ಅಪವಾದವನ್ನು ನೀವು ಇನ್ನೊಬ್ಬರ ಮೇಲೆ‌ ಹಾಕಲು ಪ್ರಯತ್ನಿಸುವಿರಿ.

ಕನ್ಯಾ ರಾಶಿ : ಉದ್ಯಮಕ್ಕೆ ಆಪ್ತರ,‌ ಪರಿಚಿತರ ಪ್ರೋತ್ಸಾಹವು ಸಿಗಲಿದೆ. ಆಸ್ತಿಯ ವಿಚಾರದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದಕೊಳ್ಳಲಾಗದು. ಸಹೋದರನ ಮಾತು ನಿಮಗೆ ಜೀರ್ಣಮಾಡಿಕೊಳ್ಳುವುದು ಕಷ್ಟವಾಗಿ ಸಿಟ್ಟಾಗುವಿರಿ. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಹೂಡಿಕೆಯನ್ನು ಬೇರೆಯವರ ಹೆಸರಿನಲ್ಲಿ ಮಾಡುವಿರಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ. ಸಂಗಾತಿಯು ನಿಮ್ಮ ಜೊತೆ ಜಗಳವಾಡಿ ಹಳೆಯ ವಿಚಾರವನ್ನು ಪುನಃ ಪ್ರಸ್ತಾಪಿಸಬಹುದು. ಸ್ತ್ರೀಸಂಬಂಧವಾದ ಆರೋಪವು ಬರಲಿದ್ದು, ಆತಂಕವೂ ಆಗುವುದು.

ತುಲಾ ರಾಶಿ : ಹಣಕಾಸಿನ‌ ವಿಚಾರದಲ್ಲಿ ದುಡುಕುವುದು ಬೇಡ. ನಿಮ್ಮ ಯೋಜನೆಗಳು ಕ್ರಮವನ್ನು ಅನುಸರಿಸಿ ಇರಲಿ.‌ ವಿಶ್ವಸ್ಥರ ಸಲಹೆಯನ್ನು ಪಡೆದುಕೊಳ್ಳಿ. ಬಂಧುಗಳಿಗಾಗಿ ಇಂದಿನ ಸಮಯವನ್ನು ಕೊಡುವಿರಿ. ‌ಅಶುಭ ವಾರ್ತೆಯಿಂದ ಏನನ್ನು ಮಾಡಲೂ ದಿಕ್ಕು ತೋರದು. ಆಸ್ತಿಯ ವಿಚಾರವಾಗಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧರಾಗುವಿರಿ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ.ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರು. ಕಳೆದು ಹೋದ ಪ್ರೇಮವನ್ನು ಮತ್ತೆ ಯಾರಾದರೂ ನೆನಪಿಸುವರು. ತಪ್ಪನ್ನು ಒಪ್ಪಿಕೊಳ್ಳದೇ ಅಹಂಕಾರವನ್ನು ತೋರಿಸುವಿರಿ. ನಿಮ್ಮ ಬಗ್ಗೆ ಬೇರೆಯವರಿಗೆ ಔದಾರ್ಯಭಾವವು ಇರಲಿದೆ. ನಿಮ್ಮ‌ ಅಸಾಮಾನ್ಯ ಚಿಂತನೆಯು ನಿಮ್ಮನ್ನು ದೊಡ್ಡವರನ್ನಾಗಿ ಮಾಡಿದ್ದು. ಅಪ್ರಾಪ್ತರ ಜೊತೆ ವಾಗ್ವಾದ ಬೇಡ.

ವೃಶ್ಚಿಕ ರಾಶಿ : ವ್ಯವಹಾರದಲ್ಲಿ ಕಾಳಜಿ ತಪ್ಪಿದ ಕಾರಣ ನಷ್ಟ ಮಾಡಿಕೊಳ್ಳುವಿರಿ. ಕಾರ್ಯಗಳು ನಿಧಾನವಾಗುತ್ತಿದೆ ಎಂಬ ಬೇಸರವು ಬೇಡ. ಇಂದಿನ ಸೋಲಿನಿಂದ ಪಾಠ ಕಲಿಯುವಿರಿ. ಅನಿರೀಕ್ಷಿತ ಪ್ರಯಾಣವು ಆಯಾಸವನ್ನು ಕೊಡಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ‌ ಮೇಲೆ ಬರಲಿದೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮ‌ ಅಂತಸ್ಸಾಕ್ಷಿಗೆ ಸತ್ಯವನ್ನು ಹೇಳುವ ಧೈರ್ಯ ಬರುವುದು. ವಿದೇಶದಿಂದ ಆಹ್ವಾನವು ಬರಬಹುದು. ಆತುರದ ಪ್ರಯಾಣವನ್ನು ಇಂದು ಮಾಡಬೇಡಿ. ಒತ್ತಾಯದಿಂದ‌ ಸ್ನೇಹಿತರ ಮನೆಗೆ ಹೋಗುವಿರಿ. ಆದಾಯದ ಬಗ್ಗೆ ಗಮನಹರಿಸಿ ಆರೋಗ್ಯವನ್ನು ನಿರ್ಲಕ್ಷ್ಯದಿಂದ ನೋಡುವಿರಿ.

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್