AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಕೋಪದಿಂದ ನಿಮ್ಮ‌ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 01) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಕೋಪದಿಂದ ನಿಮ್ಮ‌ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Sep 01, 2023 | 12:20 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 10:59 ರಿಂದ 12:33ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 03:38 ರಿಂದ 05:11ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 07:54 ರಿಂದ 09:27ರ ವರೆಗೆ.

ಸಿಂಹ ರಾಶಿ : ಜಾಣ್ಮೆಯಿಂದ ಮಾಡುವ ಸರ್ಕಾರದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಯ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಬರುವ ಅಡೆತಡೆಗಳನ್ನು ನೀವು ಧೈರ್ಯವಾಗಿ ಎದುರಿಸುವಿರಿ. ನೀವು ಕಲಿತ ವಿದ್ಯೆಯು ನಿಮಗೆ ಬಲವಾಗಲಿದೆ. ಸಭೆಯಲ್ಲಿ ಅತಿಥಿಗಳಾಗಿ ನೀವು ಭಾಗಿಗಳಾಗುವಿರಿ. ನಿಮ್ಮ‌ ಕನಸನ್ನು ಸಾಕಾರಗೊಳಿಕೊಳ್ಳುವತ್ತ ನಿಮ್ಮ ಆಲೋಚನೆಯು ಇರಲಿದೆ. ಪ್ರೇಮ‌ಸಂಬಂಧವು ಸಡಿಲವಾಗಬಹುದು. ಸೊಂಟ ನೀವು ನಿಮಗೆ ಬಾಧೆಯನ್ನು ಕೊಡಬಹುದು. ಔಷಧೋಪಚಾರಗಳಿಂದ ಕಡಿಮೆ ಆಗುವುದು. ಯಾರಿಗಾದರೂ ನಿಮ್ಮ ಯೋಗ್ಯತೆಗೆ ಅನುಸಾರವಾಗಿ ಧನ ಸಹಾಯವನ್ನು ಮಾಡುವಿರಿ.

ಕನ್ಯಾ ರಾಶಿ : ನಾಜೂಕಾದ ಕಾರ್ಯಗಳಿಗೆ ನಿಮಗೆ ಪ್ರಶಂಸೆಯೂ ಅಪಹಾಸ್ಯವೂ ಸಿಗಲಿದೆ. ಕೋಪದಿಂದ ನಿಮ್ಮ‌ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಕುಟುಂಬದ ಕಲಹಕ್ಕೆ ಹೆದರಿ ಹೊಸ ಜೀವನವನ್ನು ನಡೆಸಲು ಇಚ್ಛಿಸುವಿರಿ. ಪುಣ್ಯಸ್ಥಳಗಳಿಗೆ ಹೋಗಿ ನೆಮ್ಮದಿಯನ್ನು ಪಡೆಯುವಿರಿ. ಅಧಿಕ ಮಾತುಗಳು ಬೇಡ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಸಿಗುವುದು. ಖರ್ಚಿನ ಬಗ್ಗೆ ಸರಿಯಾದ ಚಿತ್ರಣವಿರಲಿ.‌ ನಿಮ್ಮ ವಸ್ತುಗಳು ಕಾಣಿದಸದೇ ಉದ್ವೇಗಕ್ಕೆ ಸಿಕ್ಕಿಕೊಳ್ಳುವಿರಿ. ಎಲ್ಲವೂ ನಿಮಗೆ ದುರದೃಷ್ಟದಂತೆ ತೋರುವುದು. ಕಣ್ಣಿನ ದೋಷವನ್ನು ನಿವಾರಿಸಿಕೊಳ್ಳಬೇಕಾಗುವುದು. ನಿಮ್ಮ ಅಭಿರುಚಿಗೆ ಪ್ರೋತ್ಸಾಹವು ಸಿಗಲಿದೆ.

ತುಲಾ ರಾಶಿ : ಆರ್ಥಿಕತೆಯನ್ನು ನೀವು ಬಲಗೊಳಿಸಿಕೊಳ್ಳುವಿರಿ. ದುರಭ್ಯಾಸದಿಂದ ಧನನಷ್ಟವನ್ನು ಮಾಡಿಕೊಳ್ಳುವಿರಿ. ಮಿತ್ರರಿಂದ ನಿಮಗೆ ಮೋಸವಾಗುವುದು. ಧಾರ್ಮಿಕ ವಿಚಾರದಲ್ಲಿ ನೀವು ಹೆಚ್ಚು ತಿಳಿವಳಿಕೆಯು ಇರಲಿದೆ. ಕಛೇರಿಯಲ್ಲಿ ಆಗುವ ಕಲಹದಿಂದ ಉದ್ಯೋಗದಲ್ಲಿ ಬದಲಾವಣೆಯನ್ನು ಮಾಡುವಿರಿ. ವಿದೇಶವನ್ನು ಸುತ್ತುವ ಮನಸ್ಸಾಗಲಿದೆ. ಸ್ಥಿರಾಸ್ತಿಯನ್ನು ಸ್ವಲ್ಪ ನಷ್ಟಕೊಳ್ಳುವಿರಿ. ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವಿರಿ. ಸಕಾರಾತ್ಮಕ ವಿಚಾರಕ್ಕೆ ನಿಮಗೆ ಪ್ರಶಂಸೆಯು ಸಿಗಬಹುದು. ಕಳೆದುಕೊಂಡಿದ್ದನ್ನು ಪಡೆಯುವವರೆಗೂ ನಿಮಗೆ ಸಮಾಧಾನ ಇರದು. ಸಹೋದ್ಯೋಗಿಯ ಜೊತೆ ಪ್ರೇಮವಾಗುವುದು.

ವೃಶ್ಚಿಕ ರಾಶಿ : ಉದ್ಯೋಗದ ನಿಮಿತ್ತ ಹೆಚ್ಚು ತಿರುಗಾಟವು ಆಗಲಿದೆ. ಸಂಗಾತಿಯ ಮಾತುಗಳು ನಿಮ್ಮ‌ ಸ್ವಾಭಿಮಾನಕ್ಕೆ ತೊಂದರೆಯನ್ನು ಉಂಟುಮಾಡುವುದು. ನೀವು ಅಪಮಾನವನ್ನೂ ಸಹಿಸಿಕೊಂಡು ಕೆಲಸದಲ್ಲಿ ಮಗ್ನರಾಗುವಿರಿ. ಹೊಸ ಉದ್ಯೋಗಕ್ಕೆ ಸೇರಿಕೊಳ್ಳುವಿರಿ. ನಿಮ್ಮ ಶ್ರೇಯಸ್ಸನಲ್ಲಿ ಬಂಧುಗಳ‌ ಪಾತ್ರವು ಬಹಳ ಇರಲಿದೆ. ನಿಮಗೆ ಇಂದು ಮಕ್ಕಳ ಬೆಳವಣಿಗೆಯು ಸಮಾಧಾನವನ್ನು ತರದು. ಸಾಮಾಜಿಕವಾಗಿ ಉತ್ತಮ‌ ಬಾಂಧವ್ಯವು ಇರಲಿದೆ‌. ಸ್ನೇಹಿತರ ಜೊತೆ ಉತ್ತಮ‌ ಬಾಂಧವ್ಯವು ಇರಲಿದೆ. ನಿಮ್ಮ ಆಸಕ್ತಿಯ‌ ವಿಚಾರವು ಬದಲಾಗುವುದು. ನಿಮ್ಮ ಸ್ವಭಾವವು ದುರುಪಯೋಗ ಆಗುವುದು.

ಲೋಹಿತಶರ್ಮಾ 8762924271 (what’s app only)

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ