AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 03) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 03, 2023 | 12:25 AM

Share

ಇಂದಿನ ನಿಮ್ಮ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಆಯುಷ್ಮಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 02:14 ರಿಂದ 03:49ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:17 ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:28 ರಿಂದ 11:03ರ ವರೆಗೆ.

ಸಿಂಹ ರಾಶಿ: ಹಣಕಾಸಿನ ವಿಚಾರದಲ್ಲಿ ನಿಮಗೆ ಮೋಸವಾಗಲಿದ್ದು, ಅದರಲ್ಲೂ ನಿಮ್ಮವರೇ ಅದನ್ನು ಮಾಡಿದ್ದು ಎಂಬ ವದಂತಿಯು ನಿಮಗೆ ಸಹಿಸಲು ಅಸಾಧ್ಯವಾದುದಾಗಿದೆ. ಎಂದೋ ನಿರೀಕ್ಷಿಸಿದ್ದ ಬಡ್ತಿಯು ಇಂದು ಸಿಗಲಿದೆ. ಯಾರಾದರೂ ಹುಳಿ ಹಿಂಡುವ ಕೆಲಸಕ್ಕೆ ಬರಬಹುದು. ಮಾತಿನ ನಿಯಂತ್ರಣವು ತಪ್ಪಿ‌ಹೋಗಲಿದೆ. ವಿಳಂಬಕ್ಕಾಗಿ ನೀವು ವ್ಯಥೆ ಪಡಬೇಕಾದೀತು. ನಿಮಗೆ ಧೈರ್ಯವನ್ನು ತುಂಬಲು ಸಂಗಾತಿಯ ಸಹಾಯವನ್ನು ಪಡೆಯಿರಿ. ಬಂಧುಗಳು ನಿಮ್ಮ ಮನೆಗೆ ಬರಲಿದ್ದಾರೆ. ನಿದ್ರಾಹೀನತೆಯಿಂದ ನಿಮಗೆ ಕೆಲವು ತೊಂದರೆಗಳು ಆಗಬಹುದು. ಅನಪೇಕ್ಷಿತ ಖರ್ಚನ್ನು ಮಾಡಬೇಕಾದೀತು.

ಕನ್ಯಾ ರಾಶಿ: ಪ್ರೇಮಪ್ರಕರಣವು ನಿಮಗೆ ದುಃಖವನ್ನು ಕೊಟ್ಟೀತು. ನಿಮ್ಮನ್ನು ನಿಂದಿಸುವವರ ವಿರುದ್ಧ ಅತಿಯಾದ ಕೋಪವು ಬರಲಿದೆ. ಶತ್ರುಗಳೂ ನಿಮಗೆ ಉಪದೇಶ ಮಾಡುವರು. ಮಕ್ಕಳಿಗಾಗಿ ನೀವು ಬದಲಾವಣೆಯನ್ನು ಮಾಡಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನೀವು ಬಹಳ ಅನಾದರ ತೋರುವುರಿ. ವಿದ್ಯಾರ್ಥಿಗಳಿಂದ ಹೆಚ್ಚಿನ ನಿರೀಕ್ಷೆಯು ಇರಲಿದೆ. ನಿಮಗೆ ಬರುವ ಸಮಸ್ಯೆಗಳು ನಗಣ್ಯವಾಗಿದ್ದರೂ ಅದನ್ನು ದೊಡ್ಡ ಮಾಡಿಕೊಳ್ಳುವಿರಿ. ಆರೋಗ್ಯವು ನಿಮಗೆ ವರವಾಗಿದ್ದರೂ ಅದು ಕೆಲವು ಸಮಯ ತೊಂದರೆಯನ್ನು ಕೊಡುವುದು. ನಿಮ್ಮವರನ್ನು ನೀವು ಮರೆಯುವಿರಿ. ಒಳ್ಳೆಯವರ ಸಹವಾಸವು ಸಿಗಬಹುದು.

ತುಲಾ ರಾಶಿ: ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಂಡು ಪಾಲಕರಿಗೆ ಆತಂಕವಾಗಬಹುದು. ಸ್ನೇಹಿತರಿಂದ ಉಡುಗೊರೆಗಳು ಸಿಗಬಹುದು. ತಾಯಿಯ ಪ್ರೀತಿಯು ನಿಮಗೆ ಹೆಚ್ಚು ಸಿಗುವುದು. ಇಂದು ನಿಮ್ಮ ಕೋಪವನ್ನು ನಿಯಂತ್ರಣಕ್ಕೆ ತಂದುಕೊಳ್ಳುವಿರಿ. ನಿಮ್ಮ ನಡವಳಿಕೆಯಯನ್ನು ಸರಿಮಾಡಿಕೊಳ್ಳಲು ಪ್ರಯತ್ನಿಸುವಿರಿ. ಸಂಗಾತಿಯ ಜೊತೆ ಕಲಹವಾಡಿ ಅನಂತರ ಪಶ್ಚಾತ್ತಾಪಪಡುವಿರಿ‌. ನಿಮ್ಮ ಯೋಜನೆಯನ್ನು ಸರಿಯಾಗಿ ನಿರ್ವಹಿಸಲು ಕಷ್ಟವಾದೀತು. ನಿಮಗೆ ಸಮ್ಮಾನಗಳು ಸಿಗುವ ಸಾಧ್ಯತೆ ಇದೆ. ಮಕ್ಕಳ ಜೊತೆ ಇಂದು ಕಾಲವನ್ನು ಕಳೆಯುವುದು ನಿಮಗೆ ಇಷ್ಟವಾದೀತು. ಸಣ್ಣ ವಿಚಾರದಲ್ಲಿ ನಿಮಗೆ ಇನ್ನೊಬ್ಬರ ಜೊತೆ ಕಲಹವಾದೀತು. ಒಳ್ಳೆಯ ಸಮಯವನ್ನು ನೀವು ನಿರೀಕ್ಷಿಸುವಿರಿ.

ವೃಶ್ಚಿಕ ರಾಶಿ: ಸಾಲಬಾಧೆಯಿಂದ ನಿಮಗೆ ಬಹಳ ತೊಂದರೆಯಾಗಲಿದೆ. ನಿಮಗೆ ಸಹಾಯವನ್ನು ಕೇಳಲು ಮುಜುಗರವಾದೀತು. ವ್ಯಾಪಾರದ ಸಲುವಾಗಿ ದೂರಪ್ರಯಾಣವನ್ನು ಮಾಡಬೇಕಾಗಬಹುದು. ಇಂದು ನೀವು ಒತ್ತಡ ಮಾಡಿಕೊಳ್ಳಬಾರದೆಂದು ಅಂದುಕೊಂಡಿದ್ದರೂ ಸಂದರ್ಭವು ಅದೇ ರೀತಿ ಬರುವುದು. ಆರೋಗ್ಯವನ್ನು ಗಟ್ಟಿಯಾಗಿಸಿಕೊಳ್ಳಲು ನೀವು ಪ್ರಯತ್ನಿಸಬೇಕು.‌ ಉದ್ಯಮದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿಸುವಿರಿ. ನಿಮ್ಮ ನೌಕರರು ನೀವು ಹೇಳಿದ ಕೆಲಸವನ್ನು ಸರಿಯಾಗಿ ಮಾಡದೇ ಇರಬಹುದು. ನಿಮ್ಮ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಸುಬ್ರಹ್ಮಣ್ಯನ ಆರಾಧನೆಯನ್ನು ನೀವು ಮಾಡಿಕೊಂಡು ಮುಂದುವರಿಯಿರಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ