AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಆಪ್ತರಿಗೆ ಕೊಟ್ಟ ಹಣವು ಮರಳಿ ಬಾರದೇ ಇರಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 03) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಆಪ್ತರಿಗೆ ಕೊಟ್ಟ ಹಣವು ಮರಳಿ ಬಾರದೇ ಇರಬಹುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 03) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:16 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:36 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:56 ರಿಂದ 09:23ರ ವರೆಗೆ.

ಸಿಂಹ ರಾಶಿ : ಇಂದು ಹಣದ ಬಗ್ಗೆ ನಿಮಗೆ ಲೆಕ್ಕವೇ ಸಿಗದೇ ಖರ್ಚಾಗುವುದು. ಆಪ್ತರಿಗೆ ಕೊಟ್ಟ ಹಣವು ಮರಳಿ ಬಾರದೇ ಇರಬಹುದು. ಉನ್ನತ ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಹಣವನ್ನು ಹೊಂದಿಸುವಿರಿ. ನಿಮ್ಮ ಬಗ್ಗೆ ಮಾತನಾಡುವವರಿಗೆ ಈಗಲೇ ಉತ್ತರ ಕೊಡುವುದು ಬೇಡ. ನಿಮ್ಮ ಒರಟು ಸ್ವಭಾವವು ಇಷ್ಟವಾಗದೇ ಹೋಗಬಹುದು. ಸುಮ್ಮನೇ ಒಂಟಿಯಾಗಿ ಇದ್ದು ಹತ್ತಾರು ಯೋಚನೆಗಳು ಬರಬಹುದು. ಬಂಧುಗಳಿಂದ‌ ಉಡುಗೊರೆ ಸಿಗಲಿದೆ. ನಿಮ್ಮ ಮಾತಿನ‌ ಮೇಲೆ ನಂಬಿಕೆಯು ಕಷ್ಟವಾದೀತು. ಅಪಘಾತ ಭೀತಿಯು ಕಾಡಬಹುದು. ಕಲಾವಿದರು ಅವಕಾಶವನ್ನು ಹೆಚ್ಚು ಪಡೆಯಬಹುದು. ಹೂಡಿಕೆಯನ್ನು ಮಿತಿಯಲ್ಲಿ ಮಾಡುವುದು ಸೂಕ್ತ. ಅತಿಯಾದ ಓಡಾಟದಿಂದ ಆಯಾಸವಾಗುವುದು.

ಕನ್ಯಾ ರಾಶಿ : ನಿಮ್ಮ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಹಾಗೂ ಓದಿನ ಕಡೆ ಗಮನವು ಇಲ್ಲದಿರುವುದು ಪಾಲಕರಿಗೆ ಗೊತ್ತಾಗಿ ಬೇಸರವಾಗಬಹುದು. ಯಾವುದೇ ಉದ್ಯಮಕ್ಕೂ ಕಾನೂನಿನ ವಿಷಯದಲ್ಲಿ ನಿಮಗೆ ಬೇಕಾದ ಮಾಹಿತಿಯನ್ನು ಪಡೆದು ಮುಂದುವರಿಯಿರಿ. ಕೆಲವು ಘಟನೆಗಳು ನಿಮ್ಮ ಮನಸ್ಸನ್ನು ಚಂಚಲಗೊಳಿಸಬಹುದು. ಸ್ಪರ್ಧೆಯಲ್ಲಿ ಸೋಲಾಗುವ ಸಾಧ್ಯತೆ ಇದೆ. ಮಹಿಳೆಯರು ಸ್ವ ಉದ್ಯಮದಿಂದ ಲಾಭವನ್ನು ಮಾಡಿಕೊಳ್ಳುವರು. ಪ್ರೀತಿಯು ಅಪನಂಬಿಕೆಯಿಂದ ನಾಶವಾಗಬಹುದು. ಆಪ್ತರ ಸಹಾಯದಿಂದ ನಿಮಗೆ ಉದ್ಯೋಗವು ಸಿಗಲಿದೆ. ಭವಿಷ್ಯದ ಯೋಜನೆಯನ್ನು ಸರಿಯಾಗಿ ತೀರ್ಮಾನಿಸಿಕೊಳ್ಳುವಿರಿ. ಪಾರದರ್ಶಕ ಕಾರ್ಯವು ನಿಮ್ಮ ಮೇಲಿನ‌ ಅನುಮಾನವನ್ನು ದೂರಮಾಡುವುದು.

ತುಲಾ ರಾಶಿ : ಹಳೆಯ ವ್ಯಾಧಿಯು ಮತ್ತೆ ಕಾಣಸಿಕೊಳ್ಳುವುದು. ಉದ್ಯೋಗದ ವಿಚಾರವನ್ನು ಬಹಳ ಗೌಪ್ಯವಾಗಿ ಇಡುವಿರಿ. ಸಲ್ಲದ ಮಾತನ್ನು ಹಿರಿಯರಿಗೆ ಹೇಳುವಿರಿ. ಅಹಂಕಾರವು ನಿಮ್ಮನ್ನು ಕೆಳಗೆ ದೂಡಬಹುದು. ಸರಳತೆಯನ್ನು ರೂಢಿಸಿಕೊಳ್ಳುವ ಬಗ್ಗೆ ಆಲೋಚನೆ ಇರಲಿ. ಅನಗತ್ಯಗಳ ಅಪೇಕ್ಷೆಯಿಂದ ಸಂಗಾತಿಯ ಸಂಪತ್ತನ್ನು ಖಾಲಿ‌ಮಾಡುವಿರಿ. ನಿಮ್ಮ ಮನಸ್ಸು ಕಾರ್ಯದಲ್ಲಿ ಮಗ್ನವಾಗಿ ಇರದು. ಆರಂಭಿಸಿದ ಉದ್ಯೋಗದಲ್ಲಿ ಯಾವ ವಿಘ್ನವೂ ಬಾರದಂತೆ ಪ್ರಾರ್ಥಿಸಿ. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ನಿಮ್ಮ ಆದಾಯದ ಮೂಲವಾದ ವ್ಯಾಪಾರದಲ್ಲಿ ಲಾಭವಿರುವುದು. ಬಹಳ ದಿಗಳಿಂದ ಅನುಭವಿಸುತ್ತಿರುವ ರೋಗಕ್ಕೆ ಔಷಧವು ಸಿಗುವುದು. ಸಹೋದ್ಯೋಗಿಗಳಿಗೆ ಸಿಕ್ಕ ಪ್ರಶಂಸಯಿಂದ‌ ಅಸೂಯೆಯಾಗಬಹುದು.

ವೃಶ್ಚಿಕ ರಾಶಿ : ಮನಮೋಹಕ ಸ್ಥಳಗಳಿಗೆ ಹೋಗುವಿರಿ. ಅನಿರೀಕ್ಷಿತವಾಗಿ ಸಿಕ್ಕ ಬಂಧುಗಳನ್ನು ಮನೆಗೆ ಆಮಂತ್ರಿಸುವಿರಿ. ಪ್ರೀತಿಯಲ್ಲಿ ನಂಬಿಕೆ ಕಡಿಮೆ ಆಗಬಹುದು. ನಿರುಪಯುಕ್ತ ವಸ್ತುಗಳನ್ನು ದಾನರೂಪವಾಗಿ ಕೊಡುವಿರಿ. ನಿಮ್ಮ ಎಲ್ಲ ಕಾರ್ಯಗಳೂ ವಿಳಂಬವಾಗಿ ಅಧಿಕಾರಿಗಳಿಂದ ಹೇಳಿಸಿಕೊಳ್ಳುವಿರಿ. ಇಂದು ಸ್ತ್ರೀಯರು ಅಲಂಕಾರಲ್ಲಿ ಹೆಚ್ಚು ತೊಡಗಿಕೊಳ್ಳುವರು. ಮಾಡಿದ ತಪ್ಪಿನಿಂದ ಪಶ್ಚಾತ್ತಾಪ ಪಡುವಿರಿ. ಎಷ್ಟೇ ಪ್ರಯತ್ನಿಸಿದರೂ ಕೊಟ್ಟ ಹಣವು ನಿಮಗೆ ಸಿಗದು. ಅದರ ಆಸೆಯನ್ನು ಬಿಡುವಿರಿ. ನಿಮ್ಮವರ ಮೇಲೆ ನೀವು ಇಟ್ಟ ನಂಬಿಕೆಯು ಹುಸಿಯಾಗುವುದು. ಮಕ್ಕಳ ವಿವಾಹಕ್ಕೆ ಅತಿಯಾದ ಪ್ರಯತ್ನದಿಂದ‌ ಫಲವನ್ನು ಕಾಣುವಿರಿ. ಸಹೋದರನ‌ ಆರೋಗ್ಯವು ಕೆಡಬಹುದು.

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್