AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರ ದೌರ್ಬಲ್ಯವನ್ನು ಶತ್ರುಗಳು ಬಳಸಿಕೊಳ್ಳುವರು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರ ದೌರ್ಬಲ್ಯವನ್ನು ಶತ್ರುಗಳು ಬಳಸಿಕೊಳ್ಳುವರು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 04, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುನರ್ವಸೂ, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:50 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:30 ರಿಂದ 07:56ರ ವರೆಗೆ.

ಸಿಂಹ ರಾಶಿ : ಮಿತಿ ಮೀರಿದ ಕಾರ್ಯದ ಒತ್ತಡದಿಂದ ನಿಮಗೆ ಕಷ್ಟವಾದೀತು. ಸಲ್ಲದ ಅಪವಾದವು ಬರಲಿದ್ದು ಬೆಂಬಲವನ್ನು ನಿರೀಕ್ಷಿಸಬಹುದು. ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ವಿದೇಶದ ಸಂಪರ್ಕವು ವ್ಯಾಪಾರಕ್ಕಾಗಿ ಇರಲಿದೆ. ಅಪಮಾನವನ್ನು ಸಹಿಸಲಾಗದೇ ಎದುರಿಸಲೂ ಆಗದೇ ಹತಾಶೆಗೊಳ್ಳುವಿರಿ. ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು. ನಿಮ್ಮ ದೌರ್ಬಲ್ಯವು ಶತ್ರುಗಳು ಬಳಸಿಕೊಳ್ಳುವರು. ಎಂದೋ ಬಯಸಿದ ವಸ್ತುವುದು ಇಂದು ನಿಮಗೆ ಅನಿರೀಕ್ಷಿತವಾಗಿ ಸಿಗುವುದು. ಸಂಗಾತಿಯ ಆಯ್ಕೆಯಲ್ಲಿ ಗೊಂದಲ ಇರುವುದು. ಸಹೋದರಿಯ ನಡುವೆ ಆಪ್ತತೆಯು ಅಧಿಕವಾಗಬಹುದು.

ಕನ್ಯಾ ರಾಶಿ : ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಳಲು ನೋಡಬಹುದು. ಆಸ್ತಿಯ ದಾಖಲೆಗಳು ಕಾಣದೇ ಆತಂಕ ಉಂಟಾಗಬಹುದು. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾಗುವುದು. ಸತ್ಯವನ್ನು ಮರೆಮಾಚಲು ತಂತ್ರವನ್ನು ಹೆಣೆಯಬಹುದು. ನಿಮ್ಮ ಜಾಣ್ಮೆಯಿಂದ ಆದಾಯವನ್ನು ಅಧಿಕ ಮಾಡಿಕೊಳ್ಳುವಿರಿ. ನಿಮ್ಮ ಅಸಹಾಯಕತೆಯನ್ನು ಮನೆಯವರ ಮುಂದೆ ಹೇಳಿಕೊಳ್ಳುವಿರಿ. ಬಂಧುಗಳ ಜೊತೆ ನಿಮ್ಮ ಬಾಂಧವ್ಯವು ಗಟ್ಟಿಯಾಗಿ ಇರುವುದು. ನಿಮ್ಮ ಆದಾಯಕ್ಕೆ ತಕ್ಕಂತೆ ಜೀವನವಿರಲಿ. ಆಕರ್ಷಕವಾಗಿ‌ ನೀವು ಇಂದು ಕಾಣಲಿದ್ದೀರಿ. ಮನೆಯ ನಿರ್ಮಣಾದ ಕನಸನ್ನು ಕಾಣುವಿರಿ.‌ ಮಕ್ಕಳಿಂದ ಆರ್ಥಿಕ ಸಹಕಾರವು ಸಿಗುವುದು. ಒಂದೇ ದೃಷ್ಟಿಕೋನದಿಂದ‌ ಉದ್ಯಮವನ್ನು ಚಿಂತಿಸುವುದು ಬೇಡ.

ತುಲಾ ರಾಶಿ : ಯಾವುದೇ ಏರಿಳಿತಗಳಿಲ್ಲದೇ ಒಂದೇ ಹದದಲ್ಲಿ ವ್ಯಾಪಾರವು ಇರುವುದು. ಮಕ್ಕಳ‌ ವಿದ್ಯಾಭ್ಯಾಸವು ಪೂರ್ಣ ಸಮಾಧಾನ ಕೊಡದು. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುವಿರಿ. ಮನೋವಿಕಾರವನ್ನು ಕಡಿಮೆ‌ ಮಾಡಿಕೊಳ್ಳಿ. ಕುಟುಂಬದಲ್ಲಿ ನಡೆಯುವ ಕಾರ್ಯಗಳಿಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಮುಂದುವರಿಯುವಿರಿ. ಎಲ್ಲ ಕೆಲಸಕ್ಕೂ ಬೇರೆಯವರನ್ನು ಅವಲಂಬಿಸಿ ಆರ್ಥಿಕ ನಷ್ಟವನ್ನು ಕಾಣಬೇಕಾಗಬಹುದು. ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡುವುದಿಲ್ಲ. ಕುಟುಂಬ ಜೊತೆ ಸಮಯ ಕಳೆಯಲು ಆಗದು.

ವೃಶ್ಚಿಕ ರಾಶಿ : ಹೊಸ ಉದ್ಯಮದ ಬಗ್ಗೆ ನಿಮ್ಮ ತಲೆಯಲ್ಲಿ ಓಡುತ್ತಿರುವ ವಿಚಾರವನ್ನು ಹೇಳಿಕೊಳ್ಳಿ. ನಿಮ್ಮ ಮಾತಿನಿಂದ‌ ಶತ್ರುಗಳು ಹುಟ್ಟಿಕೊಳ್ಳಬಹುದು. ಮೇಲಿಂದ‌ ಮೇಲೆ‌ ಬರುತ್ತಿರುವ ಆರೋಗ್ಯದ ತೊಂದರೆಯು ನಿಮಗೆ ಅಸತಂಕವನ್ನು ಉಂಟುಮಾಡಬಹುದು. ನಿಮ್ಮ ಕಾರ್ಯದಲ್ಲಿ ತಾಳ್ಮೆಯು ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಗೆಲ್ಲುವ ತಂತ್ರ ಬಳಸಿ. ನಿಧಾನವಾಗಿ ವರ್ಧಿಸುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು. ವಿದ್ಯಾರ್ಥಿಗಳು ತಮಗೆ ಬರುವ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಅಮೂಲ್ಯ ವಸ್ತುಗಳು ಕಣ್ಮರೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯು ಆಗಮನದಿಂದ ಸಂತೋಷವು ಇರಲಿದೆ. ಆರೋಗ್ಯವು ಚೆನ್ನಾಗಿದ್ದು ಆಲಸ್ಯವನ್ನು ಬಿಡಬೇಕಾಗುವುದು.

ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ