AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ನೂತನ ಕಾರ್ಯದ ಆರಂಭಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ನೂತನ ಕಾರ್ಯದ ಆರಂಭಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ
ರಾಶಿಭವಿಷ್ಯImage Credit source: iStock Photo
TV9 Web
| Edited By: Rakesh Nayak Manchi|

Updated on: Sep 04, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 4 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:59 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:37 ರ ವರೆಗೆ.

ಸಿಂಹ ರಾಶಿ: ಅಪಮಾನದಿಂದಾಗಿ ಆದ ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ವಿರೋಧಿಗಳ ಪಿತೂರಿಯಿಂದ ಅರ್ಧಕ್ಕೆ ನಿಲ್ಲಬಹುದು. ನಿಮ್ಮ ದೌರ್ಬಲ್ಯವು ಶತ್ರುಗಳಿಗೆ ಅಸ್ತ್ರವಾಗಬಹುದು. ಯಾವಾಗಲೂ ಯೋಚಿಸದ ಸಂಬಂಧಗಳು ನಿಮ್ಮ ಹತ್ತಿರ ಬರಬಹುದು. ಜೀವನ ಸಂಗಾತಿಯ ಜೊತೆ ಯಾವುದಾದರೂ ವಿಚಾರಕ್ಕೆ ಕಲಹವಾಗಬಹುದು. ನೂತನ ಕಾರ್ಯದ ಆರಂಭಕ್ಕೆ ಮೊದಲು ಯಾರಾದರೂ ಹಿರಿಯರ ಸಲಹೆಯನ್ನು ಪಡೆಯಿರಿ.

ಕನ್ಯಾ ರಾಶಿ: ನಿಮ್ಮ ಜಾಣ್ಮೆಯಿಂದ ಇಂದಿನ ಆದಾಯವನ್ನು ಹೆಚ್ಚುಮಾಡಿಕೊಳ್ಳುವಿರಿ. ನಿಮ್ಮ ಅಸಹಾಯಕತೆಯನ್ನು ಮನೆಯವರ ಮೇಲೆ ಹಾಕುವ ಸಾಧ್ಯತೆ ಇದೆ. ಬಂಧುಗಳ ಜೊತೆ ನಿಮ್ಮ ಸಂಬಂಧವು ಗಟ್ಟಿಯಾಗುವುದು. ಆದಾಯಕ್ಕೆ ತಕ್ಕಂತೆ ಜೀವನ ಇಟ್ಟುಕೊಳ್ಳಿ. ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲು ಆಸಕ್ತಿ ಇರುವುದು. ಮನೆಯ ಅಲಂಕಾರದ ವಸ್ತುಗಳ ಮೇಲೆ ಹಣವನ್ನು ಖರ್ಚು ಮಾಡಬಹುದು. ನಿಮ್ಮ ಹೊಸ ವಾಹನ ಖರೀದಿಯ ಕನಸು ನನಸಾಗಬಹುದು.

ತುಲಾ ರಾಶಿ: ಕುಟುಂಬದಲ್ಲಿ ನಡೆಯಬಹುದಾದ ಅನಿರೀಕ್ಷಿತ ಘಟನೆಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಹೂಡಿಕೆ ಮಾಡಿ. ಪ್ರತಿ ಕೆಲಸಕ್ಕೂ ಬೇರೆಯವರನ್ನು ಅವಲಂಬಿಸಿ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುವುದು. ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡಬೇಡಿ. ನೀವು ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ. ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಬರುತ್ತವೆ.

ವೃಶ್ಚಿಕ ರಾಶಿ: ಇಂದಿನ ನಿಮ್ಮ ಕಾರ್ಯದಲ್ಲಿ ತಾಳ್ಮೆ ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಜಯಿಸಿ. ಹೆಚ್ಚಲಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿ ಆಗುವುದು. ವಿದ್ಯಾರ್ಥಿಗಳು ತಮಗೆ ಬರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವರು. ಅಮೂಲ್ಯ ವಸ್ತುಗಳನ್ನು ಕಾಣೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯು ಬರುವುದರಿಂದ ಸಂತೋಷವಾಗಿ ಇರುವಿರಿ. ಆರೋಗ್ಯವು ಚೆನ್ನಾಗಿ ಇರಲಿದ್ದು ಆಲಸ್ಯವನ್ನು ಬಿಡಬೇಕಾದೀತು. ಈ ದಿನ ತಂದೆ ತಾಯಿಯ ಬೆಂಬಲವು ಪೂರ್ಣವಾಗಿ ಇರುವುದು. ಅವರಿಂದ ಆರ್ಥಿಕ ಸಹಾಯವೂ ದೊರೆಯಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು