AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ನೂತನ ಕಾರ್ಯದ ಆರಂಭಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ನೂತನ ಕಾರ್ಯದ ಆರಂಭಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ
ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Sep 04, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 4 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:59 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:37 ರ ವರೆಗೆ.

ಸಿಂಹ ರಾಶಿ: ಅಪಮಾನದಿಂದಾಗಿ ಆದ ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ವಿರೋಧಿಗಳ ಪಿತೂರಿಯಿಂದ ಅರ್ಧಕ್ಕೆ ನಿಲ್ಲಬಹುದು. ನಿಮ್ಮ ದೌರ್ಬಲ್ಯವು ಶತ್ರುಗಳಿಗೆ ಅಸ್ತ್ರವಾಗಬಹುದು. ಯಾವಾಗಲೂ ಯೋಚಿಸದ ಸಂಬಂಧಗಳು ನಿಮ್ಮ ಹತ್ತಿರ ಬರಬಹುದು. ಜೀವನ ಸಂಗಾತಿಯ ಜೊತೆ ಯಾವುದಾದರೂ ವಿಚಾರಕ್ಕೆ ಕಲಹವಾಗಬಹುದು. ನೂತನ ಕಾರ್ಯದ ಆರಂಭಕ್ಕೆ ಮೊದಲು ಯಾರಾದರೂ ಹಿರಿಯರ ಸಲಹೆಯನ್ನು ಪಡೆಯಿರಿ.

ಕನ್ಯಾ ರಾಶಿ: ನಿಮ್ಮ ಜಾಣ್ಮೆಯಿಂದ ಇಂದಿನ ಆದಾಯವನ್ನು ಹೆಚ್ಚುಮಾಡಿಕೊಳ್ಳುವಿರಿ. ನಿಮ್ಮ ಅಸಹಾಯಕತೆಯನ್ನು ಮನೆಯವರ ಮೇಲೆ ಹಾಕುವ ಸಾಧ್ಯತೆ ಇದೆ. ಬಂಧುಗಳ ಜೊತೆ ನಿಮ್ಮ ಸಂಬಂಧವು ಗಟ್ಟಿಯಾಗುವುದು. ಆದಾಯಕ್ಕೆ ತಕ್ಕಂತೆ ಜೀವನ ಇಟ್ಟುಕೊಳ್ಳಿ. ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲು ಆಸಕ್ತಿ ಇರುವುದು. ಮನೆಯ ಅಲಂಕಾರದ ವಸ್ತುಗಳ ಮೇಲೆ ಹಣವನ್ನು ಖರ್ಚು ಮಾಡಬಹುದು. ನಿಮ್ಮ ಹೊಸ ವಾಹನ ಖರೀದಿಯ ಕನಸು ನನಸಾಗಬಹುದು.

ತುಲಾ ರಾಶಿ: ಕುಟುಂಬದಲ್ಲಿ ನಡೆಯಬಹುದಾದ ಅನಿರೀಕ್ಷಿತ ಘಟನೆಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಹೂಡಿಕೆಯಲ್ಲಿ ಉತ್ಸಾಹವಿರುವ ನೀವು ವಿವೇಚನೆಯಿಂದ ಹೂಡಿಕೆ ಮಾಡಿ. ಪ್ರತಿ ಕೆಲಸಕ್ಕೂ ಬೇರೆಯವರನ್ನು ಅವಲಂಬಿಸಿ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುವುದು. ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡಬೇಡಿ. ನೀವು ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ. ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಬರುತ್ತವೆ.

ವೃಶ್ಚಿಕ ರಾಶಿ: ಇಂದಿನ ನಿಮ್ಮ ಕಾರ್ಯದಲ್ಲಿ ತಾಳ್ಮೆ ಅಗತ್ಯವಾಗಿ ಬೇಕಾಗುವುದು. ಶತ್ರುವನ್ನು ಉಪಾಯದಿಂದ ಜಯಿಸಿ. ಹೆಚ್ಚಲಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿ ಆಗುವುದು. ವಿದ್ಯಾರ್ಥಿಗಳು ತಮಗೆ ಬರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವರು. ಅಮೂಲ್ಯ ವಸ್ತುಗಳನ್ನು ಕಾಣೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯು ಬರುವುದರಿಂದ ಸಂತೋಷವಾಗಿ ಇರುವಿರಿ. ಆರೋಗ್ಯವು ಚೆನ್ನಾಗಿ ಇರಲಿದ್ದು ಆಲಸ್ಯವನ್ನು ಬಿಡಬೇಕಾದೀತು. ಈ ದಿನ ತಂದೆ ತಾಯಿಯ ಬೆಂಬಲವು ಪೂರ್ಣವಾಗಿ ಇರುವುದು. ಅವರಿಂದ ಆರ್ಥಿಕ ಸಹಾಯವೂ ದೊರೆಯಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು