AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ವ್ಯಾಪಾರದಲ್ಲಿ ಹಿತಶತ್ರುಗಳ ಕಾಟದಿಂದ ನಿಮಗೆ ತೊಂದರೆಗಳು ಆಗಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 06) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ವ್ಯಾಪಾರದಲ್ಲಿ ಹಿತಶತ್ರುಗಳ ಕಾಟದಿಂದ ನಿಮಗೆ ತೊಂದರೆಗಳು ಆಗಬಹುದು
ರಾಶಿ ಭವಿಷ್ಯ
TV9 Web
| Edited By: |

Updated on: Nov 06, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:57 ರಿಂದ 09:23 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:16 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ.

ಸಿಂಹ ರಾಶಿ : ಬಹಳ‌ ದಿನಗಳ‌ ಅನಂತರ ಕುಟುಂಬದವರನ್ನು ಭೇಟಿಯಾಗುತ್ತಿರುವುದು ನಿಮ್ಮ‌ ಮುಖದಲ್ಲಿ ಹರುಷ ಕಾಣುವುದು. ವಿದ್ಯಾರ್ಥಿಗಳು ಅಹಂಕಾರದ ವರ್ತನೆಯನ್ನು ತೋರಿಸಬಹುದು. ತಿಳಿವಳಿಕೆಯನ್ನು ಹೇಳಬೇಕಾದೀತು. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ತೊಂದರೆಯಾಗಿ ಉಳಿಯದು. ಪ್ರಯಾಣದಲ್ಲಿ ಯಾವುದೇ ತೊಂದರೆಯು ಬಾರದಂತೆ ದೈವವನ್ನು ಪ್ರಾರ್ಥಿಸಿ. ದಾಂಪತ್ಯದಲ್ಲಿ ಉಂಟಾದ ಕಲಹವನ್ನು ನೀವೇ ಸರಿ ಮಾಡಿಕೊಳ್ಳಿ. ನಿಮ್ಮನ್ನೇ ನೀವು ವಂಚಿಸಿಕೊಳ್ಳುವಿರಿ. ಕಲಾವಿದರಿಗೆ ಸಿಕ್ಕ ಅವಕಾಶಗಳು ತಪ್ಪಿಹೋಗಬಹುದು. ಆಸ್ತಿಯ ವಿಚಾರದಲ್ಲಿ ದುಡುಕುವುದು ಬೇಡ, ಎಲ್ಲವೂ ಶಾಂತವಾಗುವ ತನಕ ಕಾಯಬೇಕಾಗುವುದು.

ಕನ್ಯಾ ರಾಶಿ : ಅಕಾರಣವಾಗಿ ನಿಮ್ಮ ಮೇಲೆ‌ ಆರೋಪಗಳು ಬರುವುದು. ಸಹನೆಯಿಂದ ಅದನ್ನು ಎದುರಿಸಬೇಕಾಗುವುದು. ದುಡುಕಿ ಏನನ್ನಾದರೂ ಮಾಡಿಕೊಳ್ಳುವುದು ಬೇಡ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು. ಕಛೇರಿಯಲ್ಲಿ ಇಂದು ನಿಮ್ಮಿಂದ ತಪ್ಪಾಗಿದ್ದು ಅದನ್ನು ನೀವು ಒಪ್ಪಿಕೊಳ್ಳಲಾರಿರಿ. ದುರ್ವ್ಯಸನದಿಂದ ಸಂಪತ್ತನ್ನು ನಷ್ಟ ಮಾಡಿಕೊಳ್ಳುವಿರಿ. ನಿಮ್ಮ ತಪ್ಪಿಗೆ ಪಶ್ಚಾತ್ತಾಪವಾದರೂ ಕೊನೆಯ ಹಂತವಾಗಿ ಇರಲಿ. ಕುಟಂಬದವರು ಸೇರಿಸಿಕೊಂಡು ಧಾರ್ಮಿಕ ಕಾರ್ಯಗಳನ್ನು ಮಾಡುವಿರು. ಏಕಾಂಗಿಯಾಗಿ ಇರುವುದು ಹಿತವೆನಿಸಬಹುದು.

ತುಲಾ ರಾಶಿ : ಸತ್ಪಾತ್ರರಿಗೆ ದಾನವನ್ನು ಕೊಟ್ಟಿದ್ದು ನಿಮಗೆ ಖುಷಿಯಾಗಲಿದೆ. ವ್ಯಾಪಾರದಲ್ಲಿ ಹಿತಶತ್ರುಗಳ ಕಾಟದಿಂದ ನಿಮಗೆ ತೊಂದರೆಗಳು ಆಡಬಹುದು. ಇದರಿಂದ ನಿಮ್ಮ ನೆಮ್ಮದಿಯೂ ದೂರವಾದೀತು. ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ನಿಮ್ಮನ್ನು ಬಳಸಿಕೊಳ್ಳಬಹುದು, ಯಾರನ್ನೂ ಅತಿಯಾಗಿ ನಂಬಿ ನೀವು ಮೋಸಹೋಗಬಹುದು.‌ ವಿವಾಹಕ್ಕೆ ಸಂಬಂಧಿಸಿದಂತೆ ತುರ್ತಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದು ಸೂಕ್ತ. ನಿಮ್ಮವರ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯವನ್ನು ಕೊಡಿ. ಭೂಮಿಯ ವ್ಯವಹಾರದಿಂದ ಅಲ್ಪ ಅಭಿವೃದ್ಧಿಯು ಆಗಲಿದೆ. ಆರ್ಥಿಕ ಒತ್ತಡದಿಂದ ಮನೆಯ ನೆಮ್ಮದಿಯು ಕದಡಬಹುದು. ತಜ್ಞರ ಜೊತೆ ಇಂದಿನ ಸಮಯವನ್ನು ಕಳೆಯುವಿರಿ. ತ್ರಿಪುರಸುಂದರಿಯನ್ನು ಆರಾಧಿಸಿರಿ.

ವೃಶ್ಚಿಕ ರಾಶಿ : ನ್ಯಾಯಾಲಯದ ವಿಚಾರವನ್ನು ಯಾರ ಬಳಿಯೂ ಹೇಳಲು ಇಚ್ಛಿಸುವುದಿಲ್ಲ. ಕುಟುಂಬದಲ್ಲಿ ಎಲ್ಲರೂ ಸುಖದಿಂದ ಜೀವಿಸುವ ಕಾರಣ ನಿಮ್ಮಲ್ಲಿಯೂ ನೆಮ್ಮದಿಯು ಕಾಣಿಸುವುದು. ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಇನ್ನೊಬ್ಬರ ಗೊತ್ತಿಲ್ಲದ ವಿಚಾರವನ್ನು ಹೇಳುವುದು ಬೇಡ. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯಲ್ಲಿ ಬೇಸರ ಉಂಟಾಗಿದ್ದು ಹೊರಗೆ ಸುತ್ತಾಡುವ, ವಿರಾಮವನ್ನು ಪಡೆಯುವ ಮನಸ್ಸು ಇರಲಿದೆ. ನಿಮ್ಮ ಮಾತಿಗೆ ಬೆಲೆ ಇಲ್ಲವಾದೀತು. ದೇವಸೇನಾಪತಿಯಾದ ಸುಬ್ರಹ್ಮಣ್ಯನು ನಿಮಗೆ ಮಾನಸಿಕ ಹಾಗೂ ದೈಹಿಕ ಬಲವನ್ನು ಕೊಡುವನು.

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ