AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 07, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 07 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:03 ರಿಂದ 03:35 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 09:26 ರಿಂದ 10:59ರ ವರೆಗೆ.

ಸಿಂಹ ರಾಶಿ : ನೀವು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾದೀತು. ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದು ಸಾಹಸ‌ ಬೇಡ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ನಿಮ್ಮ ಹಿಂದಿನ ಆಸೆಗಳನ್ನು ಇಂದು ಪೂರೈಸಿಕೊಳ್ಳುವಿರಿ. ಹಣವು ಸಿಗದೇ ನಿಮಗೆ ನಿರಾಸೆಯಾಗುವುದು. ಆರೋಗ್ಯವನ್ನು ಸುಧಾರಿಸಿಕೊಂಡು ಕೆಲಸದಲ್ಲಿ ಪ್ರವೃತ್ತರಾಗುವಿರಿ. ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು. ಹಳೆಯ ಖಾಯಿಲೆಗಳು ಕಾಣಿಸಿಕೊಳ್ಳಬಹುದು. ಏಕಾಂತದಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಹಳೆಯ ನಿಮ್ಮ ಸ್ನೇಹಿತವು ದೂರಾಗುವುದು.‌

ಕನ್ಯಾ ರಾಶಿ : ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವಿರಿ. ವಾಹನ ಓಡಾಡವು ಸುಖಕರವಲ್ಲ. ತಾಯಿಗೆ ಕೊಡುವ ಗೌರವವು ಕಡಿಮೆ ಆದೀತು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡ ಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ. ಇಂದು ನಿಮ್ಮ ಮನೋಬಲವು ದುರ್ಬಲವಾಗಬಹುದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದೇ ಹೋದೀತು. ಇಂದು ವಾಸದ ಮನೆಯನ್ನು ಬದಲಿಸುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ನಿಮ್ಮ ಬಗ್ಗೆ ಸಹೋದ್ಯೋಗಿಗಳು ಆಡುಕೊಳ್ಳುವರು. ಮನಸ್ಸುನ್ನು ಅಚಲವಾಗಿಸಿಕೊಳ್ಳಿ. ಭವಿಷ್ಯವನ್ನು ಕಟ್ಟಿಕೊಳ್ಳುವ ಕುರಿತು ಚಿಂತೆ ಬರಬಹುದು. ನಿಮ್ಮ ಅನಾರೋಗ್ಯದಿಂದ ಉತ್ಸಾಹವು ಕುಗ್ಗಬಹುದು.

ತುಲಾ ರಾಶಿ : ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ಸಂಗಾತಿಯ ಆಯ್ಕೆಯನ್ನು ನಾನಾ ಕಾರಣದಿಂದ ಮುಂದೂಡುವುದು ಸರಿಯಾಗದು. ಮಕ್ಕಳ ಅಧೀನದಲ್ಲಿ ಇರುವುದು ನಿಮಗೆ ಇಷ್ಟವಾಗದು. ಉದ್ಯೋಗದಲ್ಲಿರುವ ಮಹಿಳೆಗೆ ಉನ್ನತ ಸ್ಥಾನ ಪ್ರಾಪ್ತವಾಗಬಹುದು. ನಿಮ್ಮ ಸ್ಥಿರಾಸ್ತಿಯನ್ನು ಮಾರಾಟಮಾಡುವಿರಿ. ಇಂದು ನೀವು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ವೃತ್ತಿಯ ಸ್ಥಳದಲ್ಲಿ ಪ್ರೇಮವು ಅಂಕುರಿಸುವುದು. ನಿಮ್ಮ ಸ್ವಂತ ಕೆಲಸಗಳಿಗೆ ಇನ್ನೊಬ್ಬರ ಸಹಾಯವನ್ನು ನೀವು ಬಯಸುವುದಿಲ್ಲ.

ವೃಶ್ಚಿಕ ರಾಶಿ : ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ಮಿತ್ರರು ನಿಮಗೆ ಬೇಕಾದ ಸಹಾಯ ಮಾಡಲು ಸ್ವಲ್ಪ ಆಲೋಚಿಸುವರು.‌ ಹಣಕಾಸಿನ ವ್ಯವಹಾರದಲ್ಲಿ ಅಪರಿಚಿತರ ಆಗಮನವಾಗಬಹುದು. ನಿಮ್ಮನ್ನು ಕೆಲಸದಿಂದ ತೆಗೆಯುತ್ತಾರೆ ಎಂಬ ಭಯವು ಇರಲಿದೆ. ಸದ್ಯವಷ್ಟೇ ಸಾಲದಿಂದ ಮುಕ್ತರಾಗಿದ್ದರೂ ಅನಾರೋಗ್ಯದ ಕಾರಣಕ್ಕೆ ಪುನಃ ಸಾಲ ಮಾಡಬೇಕಾಗಿ ಬರಬಹುದು. ಸ್ನೇಹಿತ ಭೇಟಿಯನ್ನು ನೀವು ಅಲ್ಲಗಳೆಯುವಿರಿ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..