AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ನಿರಂತರ ಕಾರ್ಯದಿಂದ ಈ ರಾಶಿಯವರಿಗೆ ಫಲ ಲಭ್ಯವಾಗಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ನಿರಂತರ ಕಾರ್ಯದಿಂದ ಈ ರಾಶಿಯವರಿಗೆ ಫಲ ಲಭ್ಯವಾಗಲಿದೆ
ಇಂದಿನ ರಾಶಿಭವಿಷ್ಯImage Credit source: iStock Photo
TV9 Web
| Edited By: Rakesh Nayak Manchi|

Updated on: Aug 08, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಭರಣೀ, ಯೋಗ: ಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:48 ರಿಂದ 05:23ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:03 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ.

ಸಿಂಹ ರಾಶಿ: ನಿಮ್ಮನ್ನು ಸ್ಥಾನದಿಂದ‌ ಕೆಳಗೆ ದೂಡಲು ನೋಡಬಹುದು. ಸಿಟ್ಟಿಗೆ ಕಾರಣವಿಲ್ಲದಿದ್ದರೂ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮಗೆ ಸೌಲಭ್ಯಗಳು ಸಿಗಲಿದೆ. ಚೋರಭೀತಿಯು ನಿಮಗೆ ಕಾಡಬಹುದು. ಭೂಮಿಯ ವ್ಯವಹಾರದಿಂದ ಸಂಬಂಧಗಳು ಹಾಳಾಗಬಹುದು. ನೀವು ಕೆಲವು ಸಮಸ್ಯೆಯನ್ನು ಅನಿರೀಕ್ಷಿತವಾಗಿ ಎದುರಿಸಬೇಕಾಗುವುದು. ನಿಮ್ಮ ದಾಖಲೆಗಳನ್ನು ಸರಿಯಾಗಿ ಇಟ್ಟಕೊಳ್ಳಬೇಕಾಗುವುದು. ನಿಮ್ಮ ಬಗ್ಗೆ ಕುಟುಂಬದಿಂದ ಸಮಾಧಾನವು ಇರಲಿದೆ. ಇಷ್ಟದವರ ಭೇಟಿಯಾಗುವುದು ನಿಮಗೆ ಸಂತೋಷವನ್ನು ಕೊಡಲಿದೆ.

ಕನ್ಯಾ ರಾಶಿ: ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ನಿರಂತರ ಕಾರ್ಯದಿಂದ ನಿಮಗೆ ಫಲವು ಲಭ್ಯವಾಗುವುದು. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ. ದೈವದ ಬಗ್ಗೆ ಭಕ್ತಿಯ ಕೊರತೆ ಇರಲಿದೆ. ಸಂಬಂಧವನ್ನು ಉಳಿಸಿಕೊಳ್ಳಲು ಸಮಯವನ್ನೂ ಕೊಡಬೇಕಾದೀತು. ಸ್ವ ಉದ್ಯೋಗವನ್ನು ನಡೆಸುತ್ತಿದ್ದರೆ, ಕೆಲಸದಿಂದ ಬಿಡುವಿರಿ. ನಿಮಗೆ ಕಾರ್ಯದಿಂದ ಪಾಪಪ್ರಜ್ಞೆಯು ಕಾಡಬಹುದು. ಹಿರಿಯರ ಜೊತೆಗೆ ಹೆಚ್ಚು ಸಮಯವನ್ನು ಕಳೆಯುವಿರಿ. ಮನಸ್ಸನ್ನು ನಿರ್ಲಿಪ್ತಗೊಳಿಸಲು ಪ್ರಯತ್ನಿಸುವಿರಿ. ಬಂಧುಗಳ ವಿಚಾರದಲ್ಲಿ ಅಸಮಾಧಾನವು ಇರುವುದು.

ತುಲಾ ರಾಶಿ: ಮಕ್ಕಳ ಪ್ರಗತಿಯನ್ನು ನೀವು ನಿರೀಕ್ಷಿಸಿದ್ದು ಇಂದು ಸಾಫಲ್ಯದಂತೆ ಇರುವುದು. ಅತಿಯಾದ ವಿಶ್ವಾಸದಿಂದ ನಿಮಗೆ ವಂಚನೆಯಾಗಲಿದೆ. ನಿಮಗೂ ಸರ್ಕಾರದ ನಡುವೆಯೂ ವಿವಾದಗಳು ನಡೆಯಬಹುದು. ವ್ಯಾಯಾಮದ ಮೂಲಕ ನೀವು ನಿಮ್ಮ ದುರ್ಬಲ ದೇಹವನ್ನು ಗಟ್ಟಿ ಮಾಡಿಕೊಳ್ಳುವಿರಿ. ಸಾಲದ ವಿಚಾರವು ನಿಮಗೆ ಇಷ್ಟವಿಲ್ಲದಿದ್ದರೂ ಅದನ್ನೇ ಮಾಡಬೇಕಾದೀತು. ಅದೃಷ್ಟವನ್ನು ನಂಬಿ ನಿಮ್ಮ ಪ್ರಯತ್ನವು ಇಲ್ಲದೆಯೂ ಇರಬಹುದು. ಉದ್ಯೋಗದ ಕಾರಣದಿಂದ ನೀವು ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ದಾಂಪತ್ಯದಲ್ಲಿ ನಡೆಯುತ್ತಿರುವ ಶೀತಲಸಮರವು ಸ್ಫೋಟವಾಗಬಹುದು. ಮಕ್ಕಳಿಗೆ ಬೇಕಾದ ತಿಳಿವಳಿಕೆಯನ್ನು ಕೊಡಲಿದ್ದೀರಿ.

ವೃಶ್ಚಿಕ ರಾಶಿ: ನಿಮಗೆ ಸ್ನೇಹಿತರಿಂದ ಧನಸಹಾಯವು ಸಿಗಲಿದೆ. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲು ಕಷ್ಟವಾದೀತು. ಅದಕ್ಕೆ ಏನಾದರೂ ತೊಂದರೆಯಾದೀತು. ಪ್ರಯಾಣಕ್ಕೆ ಇಂದು ಅನುಕೂಲವಿಲ್ಲ. ಕೆಲಸಗಳನ್ನು ಮಾಡಿಕೊಳ್ಳಲು ನಿಮಗೆ ಹಣವನ್ನು ನೀಡಬೇಕಾದೀತು. ಸ್ತ್ರೀಯರ ಸಹಾಯವನ್ನು ಪಡೆದು ನೀವು ಕಛೇರಿಯ ಕೆಲಸವನ್ನು ಮುಗಿಸುವಿರಿ. ನಿದ್ರೆಯ ವ್ಯತ್ಯಾಸದಿಂದ ನಿಮಗೆ ಕಿರಿಕಿರಿ ಆಗಬಹುದು. ಕಲಾವಿದರು ಹೆಚ್ಚಿನ ಆದಾಯವನ್ನು ಮಾಡಿಕೊಳ್ಳುವರು. ರಾಜಕೀಯಕ್ಕೆ ಹೋಗುವ ಮನಸ್ಸು ನಿಮಗೆ ಇರಲಿದೆ. ಹೊಸ ಜವಾಬ್ದಾರಿಗಳನ್ನು ಪಡೆಯಲು ನೀವು ಬಹಳ ಉತ್ಸುಕರಾಗಿ ಇರುವಿರಿ. ಪುಣ್ಯಕ್ಷೇತ್ರಕ್ಕೆ ನೀವು ಬಂಧುಗಳ ಜೊತೆಗೆ ಹೋಗುವಿರಿ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!