AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಸಣ್ಣ ವಿಚಾರಕ್ಕೆ ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಸಣ್ಣ ವಿಚಾರಕ್ಕೆ ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 08, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 08 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:58 ರಿಂದ 12:30 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಸಂಜೆ 07:26 ರಿಂದ 09:26ರ ವರೆಗೆ.

ಧನು ರಾಶಿ : ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಹಿತಶತ್ರುಗಳ ತೊಂದರೆಯ ನಡುವೆಯೂ ನಿಮ್ಮ ಅಭಿವೃದ್ಧಿಯು ಆಗಲಿದೆ. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ಇನ್ನೊಬ್ಬರನ್ನು ನಿಂದಿಸುವ ಮಾತು ವಿವಾದಕ್ಕೆ ಗುರಿಯಾಗಬಹುದು. ಇಂದಿನ ನಿಮ್ಮ ನಿರೀಕ್ಷೆಯು ಪೂರ್ಣವಾಗಿ ಸಾಕಾರಗೊಳ್ಳದು. ವಾಹನ ಖರೀದಿಗೆ ಆಪ್ತರ ಸಲಹೆಯನ್ನು ಪಡೆಯುವಿರಿ.

ಮಕರ ರಾಶಿ : ಸಹೋದ್ಯೋಗಿಗಳಿಂದ ಸವಾಲು ಬರಬಹುದು. ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗ ಓಡಾಟಗಳಾಗಬಹುದು. ಸಾಲದಿಂದ ವಿಮುಕ್ತಿ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವುದು ಅಗತ್ಯವಾಗಬಹುದು. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ. ಅನಂತರ ಪಶ್ಚಾತ್ತಾಪಪಡುವಿರಿ.

ಕುಂಭ ರಾಶಿ : ಹೆಚ್ಚಿನ ಖರ್ಚು ಮಾಡಿ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ವಾಸಸ್ಥಳವನ್ನು ಬದಲಾಯಿಸಲಿದ್ದೀರಿ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ತಾಯಿಯಿಂದ ನಿಮಗೆ ಲಾಭವಾಗಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಬಂದ ಅವಕಾಶವನ್ನು ಬಿಟ್ಟು ಸಂಕಟಪಡುವಿರಿ. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ವಿದ್ಯಾಭ್ಯಾಸವನ್ನು ಮುಗಿಸಿ ಉದ್ಯೋಗವನ್ನು ಪಡೆಯಲು ಇಚ್ಛಿಸುವಿರಿ. ಅಂತರ್ಜಾಲದಲ್ಲಿ ಕಾಣುವ ಉದ್ಯೋಗಕ್ಕೆ ಮಾರುಹೋಗಬಹುದು.

ಮೀನ ರಾಶಿ : ಸ್ತ್ರೀಯರಿಗೆ ಎಲ್ಲ ರೀತಿಯಿಂದ ಅನುಕೂಲಕರವಾಗಲಿದೆ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಸತ್ಯವನ್ನೇ ಹೇಳುವ ಉದ್ದೇಶವಿದ್ದರೂ ಅದನ್ನು ಹೇಳುವ ರೀತಿಯಲ್ಲಿ ನೀವು ಹೇಳಿ.

-ಲೋಹಿತಶರ್ಮಾ 8762924271 (what’s app only)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?