AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 09) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Nov 09, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವೈಧೃತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:42 ರಿಂದ 03:09 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:32 ರಿಂದ 07:58 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:24 ರಿಂದ 10:50ರ ವರೆಗೆ.

ಸಿಂಹ ರಾಶಿ : ಅನಿರೀಕ್ಷಿತ ಹಣದ ಆಗಮನದಿಂದ‌ ಕೊಡಬೇಕಾದವರಿಗೆ ಕೊಟ್ಟು ಮುಗಿಸುವಿರಿ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಸಂಗಾತಿಯ ಮೌನದಿಂದ ನಿಮಗೆ ಆತಂಕ ಹುಟ್ಟಬಹುದು‌. ಬೇಕಾದಷ್ಟು ಮಾತುಗಳು ಮಾತ್ರ ಆಡಿರಿ. ಪ್ರೇಮವು ಬಿಟ್ಟರೂ ಬಿಡದೀ ಮಾಯೆ ಎನ್ನುವಂತೆ ಆಗುವುದು.

ಕನ್ಯಾ ರಾಶಿ : ದೇಹಾಲಸ್ಯವು ನಿಮ್ಮ ಕಾರ್ಯದಲ್ಲಿ ಹಿನ್ನಡೆಯಾಗಲಿದೆ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ವೈದ್ಯ ವೃತ್ತಿಯಲ್ಲಿ ಒತ್ತಡವು ಅಧಿಕವಾಗಿ ಬರಬಹುದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಸಣ್ಣ ತಪ್ಪಿಗೆ ಸಿಕ್ಕಿಕೊಳ್ಳುವಿರಿ.

ತುಲಾ ರಾಶಿ : ಆಶಕ್ತರಿಗೆ ಸಹಕಾರ ನೀಡುವಿರಿ. ಸಭ್ಯರ ಸಹವಾಸವು ಸಿಗುವುದು. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗುವುದು. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು. ಪಾಲುದಾರಿಕೆಯಿಂದ ಹೊರಬರವುದು ಒಳ್ಳೆಯದು ಎಂದು ಅನ್ನಿಸಬಹುದು. ಎಲ್ಲರ ಜೊತೆ ಸ್ನೇಹಿಭಾವದಿಂದ ಬರೆಯುವಿರಿ.

ವೃಶ್ಚಿಕ ರಾಶಿ : ಸಹೋದ್ಯೋಗಿಗಳ ಬಗ್ಗೆ ನಿಮಗೆ ಅಸಮಾಧಾನ ಇರಲಿದೆ‌. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವ ಇಚ್ಛೆ ಇರಲಿದೆ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಆಪ್ತರ ಜೊತೆ ಮಾಡಿದ‌ ಸಮಾಲೋಚನೆಯಿಂದ ಮನಸ್ಸಿಗೆ ಸಂತೋಷ ಸಿಗುವುದು. ಸ್ಥಳ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು. ಆಕಸ್ಮಿಕವಾದ ವಿಷಯದಿಂದ ನಿಮಗೆ ದುಃಖವಾಗುವುದು. ವಿದ್ಯಾಭ್ಯಾಸದ ಕಾರಣಕ್ಕೆ ಪ್ರಯಾಣ ಮಾಡು ಸನ್ನಿವೇಶವು ಬರಬಹುದು.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!