AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಇಂದು ಧೈರ್ಯದಿಂದ ಕಷ್ಟದ ಕಾರ್ಯಗಳನ್ನು ನಿರ್ವಹಿಸುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಇಂದು ಧೈರ್ಯದಿಂದ ಕಷ್ಟದ ಕಾರ್ಯಗಳನ್ನು ನಿರ್ವಹಿಸುವಿರಿ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 10, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆಗೆ, ರಾಹು ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:35ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:24ರ ವರೆಗೆ.

ಸಿಂಹ ರಾಶಿ : ಈ ಕಾರಣಾಂತರಗಳಿಂದ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ವ್ಯವಹಾರದ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಇಂದು ಫಲಪ್ರದವಾಗದು. ತಾಳ್ಮೆ ಮತ್ತು ಪ್ರತಿಭೆಯಿಂದ ಶತ್ರು ಗೆಲ್ಲುವಲ್ಲಿ ನೀವು ಯಶಸ್ಸನ್ನು ಗಳಿಸುವಿರಿ. ನಿಮ್ಮದಾದ ಚಿಂತನೆ, ಕಾರ್ಯದಿಂದ ಯಶಸ್ಸನ್ನು ಪಡೆಯಲು ನೀವು ಬಹಳ ಸಮಯ ಕಾಯಬೇಕಾಗಬಹುದು. ಸಣ್ಣ ವಿಷಯಕ್ಕೆ ಸ್ನೇಹಿತರ ಜೊತೆಗಿನ ಸಂಬಂಧವು ಹಾಳಾಗಬಹುದು. ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡು ಕೈ ಬಿಡಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಯೋಗ್ಯ ಚಿಕಿತ್ಸೆಯನ್ನು ಕೊಡುವಿರಿ. ವಿವಾಹೇತರ ಸಂಬಂಧದಿಂದ ನಿಮಗೆ ಬೇಸರವಾಗುವುದು. ನಿಮ್ಮ ಮಾತಿನಿಂದ ಯಾವ ಲಾಭವೂ ಆಗದು ಎಂಬುದು ಇಂದು ತಿಳಿಯುವುದು. ಸ್ವಂತ ಉದ್ಯೋಗವನ್ನು ಮಾಡಬೇಕು ಎಂದು ಅನ್ನಿಸುವುದು.

ಕನ್ಯಾ ರಾಶಿ : ನೀವು ಇತರರ ಒಳ್ಳೆಯದನ್ನು ಯೋಚಿಸುವಿರಿ ಹಾಗೂ ಒಳ್ಲೆಯ ಮನಸ್ಸಿನಿಂದ ಸೇವೆ ಮಾಡುತ್ತೀರಿ. ಇಂದು ನಿಮ್ಮ ಗುರುಗಳ ಬಗ್ಗೆ ಭಕ್ತಿ ಮತ್ತು ನಿಷ್ಠೆಯನ್ನು ತೋರಿಸುವಿರಿ. ನೀವು ಹೊಸ ಹೂಡಿಕೆ ಮಾಡಬೇಕಾದರೆ ಅದು ಶುಭವಾಗುತ್ತದೆ. ಕುಟುಂಬದಲ್ಲಿಯೂ ಶಾಂತಿ ಮತ್ತು ಸಂತೋಷ ಇರುತ್ತದೆ. ಬಹಳ ದಿನಗಳಿಂದ ಒತ್ತಡದಲ್ಲಿ ಇದ್ದ ಕಾರಣ ಇಂದು ಎಲ್ಲವನ್ನೂ ಮರೆಯು ದಿನದ ಹೆಚ್ಚಿನ ಸಮಯವನ್ನು ವಿಶ್ರಾಂತಿಯಲ್ಲಿಯೇ ಕಳೆಯುವಿರಿ. ದಾನದಿಂದ ಪುಣ್ಯವನ್ನು ಗಳಿಸುವಿರಿ. ನಿಮ್ಮ ಮಕ್ಕಳ ಮನೋಭಾವವನ್ನು ಅವರಿಗೆ ಇಷ್ಟವಾದುದನ್ನು ಮಾಡುವಿರಿ. ಇಂದಿನ ವ್ಯಾಪಾರದಿಂದ ಆರ್ಥಿಕತೆಯು ಬಲವಾಗುವುದು. ಮಕ್ಕಳು ಆರ್ಥಿಕತೆಯ ದುರ್ಬಲತೆಯಿಂದ ವಿದ್ಯಾಭ್ಹ್ಯಾಸವನ್ನು ನಿಲ್ಲಿಸಬೇಕಾದೀತು. ಸ್ತ್ರೀಯರಿಂದ ಸಹಾಯ ಪಡೆದರೂ ನೋಡುಗರು ಅದನ್ನು ಅಪಾರ್ಥ ಮಾಡಿಕೊಳ್ಳಬಹುದು.

ತುಲಾ ರಾಶಿ : ಇಂದು ಧೈರ್ಯದಿಂದ ಕಷ್ಟದ ಕಾರ್ಯಗಳನ್ನು ನಿರ್ವಹಿಸುವಿರಿ. ದೇಹದ ನೋವಿಗೆ ಸಂಗಾತಿಯ ಉಪಚಾರವು ಸಿಗುವುದು. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ವ್ಯವಹಾರದಲ್ಲಿ ಹಣದ ಲಾಭವಾಗಲಿದೆ. ತಂದೆ ತಾಯಿಯರ ಸೇವೆಯನ್ನು ಮಾಡುವ ಅವಕಾಶ ಸಿಗುವುದು. ಮನೆಯ ಕೆಲಸವು ಆಗಿಲ್ಲವೆಂದು ಕೋಪವು ಇರಲಿದ್ದು ಅದನ್ನು ಪ್ರಕಟಿಸುವಿರಿ. ನಿಮ್ಮ‌ ರಕ್ಷಣೆಯ ಬಗ್ಗೆ ಕಾಳಜಿ ಇರಲಿ. ನಿಮ್ಮ ಪ್ರಾಮಾಣಿಕತೆಯು ಇತರರಿಗೆ ಇಷ್ಟವಾಗುವುದು. ಉದ್ಯೋಗವನ್ನು ಕೊಡಿಸಲು ನಿಮಗೆ ಹಣವನ್ನು ಕೇಳಬಹುದು. ಸತ್ಯವನ್ನು ಹೇಳುವ ಮನಸ್ಸಿದ್ದರೂ ಬೇರೆಯವರ ಒತ್ತಡದಿಂದಾಗಿ ಹೇಳದೇ ಮುಚ್ಚಿಡುವಿರಿ. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಸಿಟ್ಟಾಗಿ ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು.

ವೃಶ್ಚಿಕ ರಾಶಿ : ಮಾನಸಿಕ ತೊಂದರೆ, ಆತಂಕ ಮತ್ತು ನಿರಾಸಕ್ತಿಯಿಂದ ನಿಮ್ಮ ಮೇಲೆ ನಿಮಗೆ ಹಿಡಿತ ಸಾಲದು. ಪೋಷಕರ ಬೆಂಬಲವು ಆತಂಕವನ್ನು ಕಡಿಮೆ ಮಾಡಬಹುದು. ಮಾತಿನಲ್ಲಿ ಮಾಧುರ್ಯ ಇಲ್ಲದಿದ್ದರೆ ಸಂಬಂಧದಲ್ಲಿ ಕಹಿಯಾದೀತು. ವಿವಿಧ ಮೂಲಗಳಿಂದ ನಿಮಗೆ ಆದಾಯವು ಬರಲಿದ್ದು ಹೂಡಿಕೆಯ ಕಡೆ ನಿಮ್ಮ ಗಮನ ಇರುವುದು. ನಿಮ್ಮ ಆಲಸ್ಯವನ್ನು ಹಿತಶತ್ರುಗಳು ಅವಕಾಶವಾಗಿ ತೆಗೆದುಕೊಳ್ಳುವರು. ಭೂಮಿಯಿಂದ ಇಂದು ಸಂಪತ್ತು ಸಿಗಬಹುದು. ಹಿರಿಯರ ಮಾತುಗಳು ಪೂರ್ಣವಾಗಿ ಇಷ್ಟವಾಗದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸುವುದು ಮುಖ್ಯವಾದೀತು. ಯಾವುದನ್ನೇ ಆದರೂ ಚಿಂತಿಸಿ ಮಾತನಾಡಿ. ಹೊಸ ಮನೆಯನ್ನು ಕಟ್ಟುವ ಯೋಚನೆಯನ್ನು ಕಾರಣಾಂತರಗಳಿಂದ ನಿಲ್ಲಿಸುವಿರಿ. ಇಂದು ನಿಮಗೆ ಏಕಾಂತವೇ ಹೆಚ್ಚು ಸುಖವನ್ನು ಕೊಡುವುದು.

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ